ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಸುದ್ದಿಗಳು News

Posted by vidyamaana on 2024-07-01 12:44:53 |

Share: | | | | |


ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.‌

ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ.‌ ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 Share: | | | | |


ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಿಜೆಪಿ ಪಕ್ಷದಿಂದ ಉಚ್ಚಾಟನೆ

Posted by Vidyamaana on 2023-03-07 15:06:59 |

Share: | | | | |


ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಿಜೆಪಿ ಪಕ್ಷದಿಂದ ಉಚ್ಚಾಟನೆ

ಬೆಂಗಳೂರು: ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಲೋಕಾಯುಕ್ತ ದಾಳಿಗೆ ಒಳಗಾಗಿ ನಾಪತ್ತೆಯಾಗಿದ್ದ ಶಾಸಕ ವಿರೂಪಾಕ್ಷಪ್ಪ ಜಾಮೀನು ದೊರೆತ ಹಿನ್ನೆಲೆಯಲ್ಲಿ ಇಂದು ಸಾರ್ವಜನಿಕವಾಗಿ ಕಾಣಿಸಿಕೊಂಡ್ರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿ.ಗೆ (ಕೆಎಸ್‌ಡಿಎಲ್) ರಾಸಾಯನಿಕ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧ ಬಿಜೆಪಿಗೆ ಭಾರೀ ಮುಜುಗರ ತಂದಿದ್ದು ಹೈಕಮಾಂಡ್ ಈ ನಿರ್ಧಾರ ತೆಗೆದುಕೊಂಡಿದೆ.

ಮಹಿಳೆಯಿಂದ 3೦ ಸಾವಿರ ಲಂಚ ಪಡೆದ ಉಗ್ರಾಣಿ

Posted by Vidyamaana on 2023-09-06 18:39:08 |

Share: | | | | |


ಮಹಿಳೆಯಿಂದ 3೦ ಸಾವಿರ ಲಂಚ ಪಡೆದ ಉಗ್ರಾಣಿ

ಪುತ್ತೂರು: ಅಕ್ರಮಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಗ್ರಾಮವೊಂದರ ಉಗ್ರಾಣಿಗೆಗೆ ಸೂಚನೆಯನ್ನು ನೀಡಿದ್ದಾರೆ.

ಕುಂಡಡ್ಕ ದಲ್ಲಿ ಶ್ರೀ ಕೃಷ್ಣಾಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ ಮಹಿಳೆ ನಾನು ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದ್ದೆ. ನನ್ನ ಮನೆ ಸರಕಾರಿ ಜಾಗದಲ್ಲಿದೆ. ನನ್ನ ಮನೆ ಇರುವ ಜಾಗವನ್ನು ಸಕ್ರಮ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ . ನಾನು ಅರ್ಜಿ ಕೊಟ್ಟಾಗ ನನ್ನಿಂದ ನನ್ನ ಗ್ರಾಮದ ಉಗ್ರಾಣಿ ಒಟ್ಟು ೩೦ ಸಾವಿರ ಹಣವನ್ನು ಲಂಚವಾಗಿ ಪಡೆದುಕೊಂಡಿದ್ದಾರೆ. ಏಳು ವರ್ಷ ಕಳೆದರೂ ನನಗೆ ಅಕ್ರಮ ಸಕ್ರಮದಲ್ಲಿ ಜಾಗ ರೆಕಾರ್ಡ್ ಆಗಲಿಲ್ಲ, ನಾನು ಬಡವೆ, ನನ್ನಲ್ಲಿ ಏನೂ ಇಲ್ಲ, ನಾನು ಬೀಡಿಕಟ್ಟಿ ಜೀವನ ಮಾಡುವುದು,  ಆದರೂ ನನ್ನಿಂದ ಹಣಪಡೆದುಕೊಂಡಿದ್ದಾರೆ. ಹಣ ಕೊಟ್ಟರೂ ಕೆಲಸ ಮಾಡಿಲ್ಲ ನನಗೆ ನ್ಯಾಯ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಹಣ ಪಡೆದುಕೊಂಡ ಉಗ್ರಾಣಿಗೆ ಕರೆ ಮಾಡಿದ ಶಾಸಕರು ಬಡ ಮಹಿಳೆಯಿಂದ ಲಂಚವಾಗಿ ಪಡೆದುಕೊಂಡ ೩೦ ಸಾವಿರ ಹಣವನ್ನು ವಾರದೊಳಗೆ ಮಹಿಳೆಗೆ ಪಾವತಿಸಿಬೇಕು ಇಲ್ಲವಾದರೆ ಕೆಲಸದಿಂದ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಿಳೆಗೆ ಸಾಂತ್ವನ ಹೇಳಿದ ಶಾಸಕರು ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚನೆ ಕೊಡುತ್ತೇನೆ. ಅಕ್ರಮ ಸಕ್ರಮ ಸಮಿತಿಯಾದ ತಕ್ಷಣವೇ ನಿಮ್ಮ ಜಾಗ ನಿಮಗೆ ರೆಕಾರ್ಡ್ ಆಗಲಿದೆ ಎಂದು ಹೇಳಿದಾಗ ಮಹಿಳೆ ಶಾಸಕರಿಗೆ ನಮಸ್ಕರಿಸಿದರು.

ಕಡಬ: ಟ್ಯೂಶನ್ ಗೆ ತೆರಳಿದ ಬಾಲಕ ನಾಪತ್ತೆ ಪ್ರಕರಣ ಕುಮಾರಧಾರ ನದಿಯಲ್ಲಿ ಅದ್ವೈತ್ ಮೃತದೇಹ ಪತ್ತೆ

Posted by Vidyamaana on 2023-03-30 07:51:57 |

Share: | | | | |


ಕಡಬ: ಟ್ಯೂಶನ್ ಗೆ ತೆರಳಿದ ಬಾಲಕ ನಾಪತ್ತೆ ಪ್ರಕರಣ  ಕುಮಾರಧಾರ ನದಿಯಲ್ಲಿ ಅದ್ವೈತ್ ಮೃತದೇಹ ಪತ್ತೆ

ಕಡಬ: ಟ್ಯೂಷನ್ ಗೆಂದು, ಮನೆಯಿಂದ ತೆರಳಿದ್ದ ಹತ್ತನೇ ತರಗತಿಯ ಬಾಲಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕುಮಾರಧಾರ ನದಿಯ ನಾಕೂರು ಗಯದಲ್ಲಿ ಪತ್ತೆಯಾಗಿದ್ದು ಅಗ್ನಿ ಶಾಮಕ ದಳದವರು ಶವ ಮೇಲಕ್ಕೆತ್ತಿದ್ದಾರೆ.ಕಡಬದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಅದ್ವೈತ್ ಎಂಬಾತ ಮಾ.29ರಂದು ಟ್ಯೂಷನ್ ಗೆಂದು ತೆರಳಿದ್ದು ಬಳಿಕ ಮನೆಗೆಬಾರದೆ ನಾಪತ್ತೆಯಾಗಿದ್ದ.

ಮನೆಯವರು ಹಾಗೂ ಊರವರು ಸೇರಿಕೊಂಡು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ನಾಕೂರು ಗಯ ಎಂಬಲ್ಲಿಪತ್ತೆಯಾಗಿದ್ದು ಅನುಮಾನಕ್ಕೆಕಾರಣವಾಗಿತ್ತು.

ಹೈದರಾಬಾದ್ ಮೂಲದ ಮಹಿಳೆಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ

Posted by Vidyamaana on 2024-03-11 09:37:04 |

Share: | | | | |


ಹೈದರಾಬಾದ್ ಮೂಲದ ಮಹಿಳೆಯ ಶವ ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆ

ಹೈದರಾಬಾದ್: ಹೈದರಾಬಾದ್ ಮೂಲದ ಮಹಿಳೆಯೊಬ್ಬರ ಶವವೊಂದು ಆಸ್ಟ್ರೇಲಿಯಾದ ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.


ಮೃತ ಮಹಿಳೆಯನ್ನು ಹೈದರಾಬಾದ್ ಮೂಲದ ಚೈತನ್ಯ ಮದಗಣಿ (೩೬) ಎನ್ನಲಾಗಿದ್ದು ಈಕೆಯ ಶವ ಶನಿವಾರ ಆಸ್ಟ್ರೇಲಿಯಾದ ಬಕ್ಲಿಯ ರಸ್ತೆಯ ಬದಿಯಲ್ಲಿ ಕಸದ ತೊಟ್ಟಿಯಲ್ಲಿ ಪತ್ತೆಯಾಗಿದೆ.

ಚೈತನ್ಯ ಅವರು ಅವರು ಹಲವು ವರ್ಷಗಳಿಂದ ತನ್ನ ಪತಿ ಅಶೋಕ್ ಅವರೊಂದಿಗೆ ಆಸ್ಟ್ರೇಲಿಯಾದ ಪಾಯಿಂಟ್​ ಕುಕ್ಕ್​ ಎಂಬಲ್ಲಿ ವಾಸವಾಗಿದ್ದರು ಇವರಿಗೆ ಒಂದು ಗಂಡು ಮಗು ಇದೆ.

ಕಳೆದ ಶನಿವಾರ ಆಸ್ಟ್ರೇಲಿಯಾದ ಪೊಲೀಸರು ಮಹಿಳೆಯ ಶವವನ್ನು ಪತ್ತೆಹಚ್ಚಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ ಆದರೆ ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ ಪತಿಯೇ ಮಹಿಳೆಯ ಕತ್ಯೆಗೈದು ಬಳಿಕ ಕಸದ ತೊಟ್ಟಿಗೆ ಎಸೆದು ಭಾರತಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.ಅಶೋಕ್ ಮೇಲೆ ಅನುಮಾನ ವ್ಯಕ್ತಪಡಿಸಿದ ಕುಟುಂಬ:

ಚೈತನ್ಯ ಸಾವಿನ ಸುದ್ದಿ ಗೊತ್ತಾಗುತ್ತಿದ್ದಂತೆ ಚೈತನ್ಯ ಪೋಷಕರು ಅಳಿಯನ ವಿರುದ್ಧವೇ ಅನುಮಾನ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ, ಅಲ್ಲದೆ ಪತ್ನಿ ಸಾವಿನ ಬಳಿಕ ಪತಿ ಭಾರತಕ್ಕೆ ಓಡಿ ಬಂದಿರುವ ವಿಚಾರದಲ್ಲಿ ಪತಿಯೇ ಈ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎಂದು ಆರೋಪ ಮಾಡಲಾಗಿದೆ.

ಘಟನೆ ಸಂಬಂಧ ಉಪ್ಪಳ ಶಾಸಕ ಬಂಡಾರಿ ಲಕ್ಷ್ಮ ರೆಡ್ಡಿ ಮಾತನಾಡಿ, ಮಹಿಳೆ ತನ್ನ ಕ್ಷೇತ್ರದವಳಾದ ಕಾರಣ, ವಿಷಯ ತಿಳಿದ ನಂತರ ಇಂದು ಆಕೆಯ ಪೋಷಕರನ್ನು ಭೇಟಿ ಮಾಡಿದ್ದೇನೆ ಮಹಿಳೆಯ ಪೋಷಕರ ಕೋರಿಕೆಯ ಮೇರೆಗೆ ಮಹಿಳೆಯ ಮೃತದೇಹವನ್ನು ಹೈದರಾಬಾದ್‌ಗೆ ತರಲು ವಿದೇಶಾಂಗ ಕಚೇರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರ ಕಚೇರಿಗೂ ತಿಳಿಸಿರುವುದಾಗಿ ಶಾಸಕರು ಹೇಳಿದ್ದಾರೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಯಾರನ್ನೂ ಬಂಧಿಸಿಲ್ಲ, ತನಿಖೆ ನಡೆಯುತ್ತಿದೆ.

ಎಚ್‌3ಎನ್‌2 ಜತೆಗೆ ಕಾಡುತ್ತಿದೆ ಅಡೆನೋವೈರಸ್ ಭೀತಿ: ಮಕ್ಕಳೇ ಟಾರ್ಗೆಟ್

Posted by Vidyamaana on 2023-03-10 08:14:03 |

Share: | | | | |


ಎಚ್‌3ಎನ್‌2 ಜತೆಗೆ ಕಾಡುತ್ತಿದೆ ಅಡೆನೋವೈರಸ್ ಭೀತಿ: ಮಕ್ಕಳೇ ಟಾರ್ಗೆಟ್

ಪಶ್ಚಿಮ ಬಂಗಾಳ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಅಡೆನೋವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಮುಖ್ಯವಾಗಿ ಮಕ್ಕಳನ್ನು ಕಾಡುವ ಈ ಸೋಂಕು, ಪ್ಲೂ ಪ್ರಕರಣಗಳ ಜತೆಗೆ ಆರೋಗ್ಯ ಕ್ಷೇತ್ರದಲ್ಲಿನ ಆತಂಕವನ್ನು ಹೆಚ್ಚಿಸಿದೆ.

ಭಾರತದ ಅನೇಕ ಭಾಗಗಳಲ್ಲಿ ಎಚ್‌3ಎನ್‌2 ಫ್ಲೂ ಹಾವಳಿ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಮಾರಕ ಅಡೆನೋವೈರಸ್ ಪ್ರಕರಣಗಳಲ್ಲಿಯೂ ಗಂಭೀರ ಏರಿಕೆ ಉಂಟಾಗುತ್ತಿದೆ. ಮಕ್ಕಳು ಈ ವೈರಸ್‌ಗೆ ತುತ್ತಾಗುತ್ತಿದ್ದು, ವೈದ್ಯರು ಅಪಾಯದ ಗಂಟೆ ಮೊಳಗಿಸಿದ್ದಾರೆ.

ಮುಖ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಅಡೆನೋವೈರಸ್ ಭೀತಿ ಹೆಚ್ಚಾಗಿದೆ. ತೀವ್ರ ಉಸಿರಾಟ ಸೋಂಕಿನಿಂದಾಗಿ (ಎಆರ್‌ಐ) ಮಂಗಳವಾರ ಮತ್ತು ಬುಧವಾರದ ನಡುವೆ ಕೋಲ್ಕತಾದ ಮೂರು ಸರ್ಕಾರಿ ಆಸ್ಪತ್ರೆಗಳಲ್ಲಿ ನಾಲ್ಕು ಮಕ್ಕಳು ಕೊನೆಯುಸಿರೆಳೆದಿದ್ದಾರೆ. ಅವರಲ್ಲಿ ಎರಡು ಮಕ್ಕಳಲ್ಲಿ ಅಡೆನೋವೈರಸ್ ಪಾಸಿಟಿವ್ ದೃಢಪಟ್ಟಿದೆ.

ಪಶ್ಚಿಮ ಬಂಗಾಳದಲ್ಲಿ ಕಳೆದ 9 ದಿನಗಳಲ್ಲಿ 36ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ. ಆದರೆ ಎರಡು ಮಕ್ಕಳ ಸಾವು ಮಾತ್ರ ಅಡೆನೋವೈರಸ್‌ಗೆ ಸಂಬಂಧಿಸಿದ್ದು ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಕೂಡ ಅಡೆನೋವೈರಸ್ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಆದರೆ ಸೋಂಕು ಸ್ವಯಂ ಸೀಮಿತತೆ ಹೊಂದಿರುವುದರಿಂದ ಹೆಚ್ಚು ಕಳವಳ ಪಡುವ ಅಗತ್ಯವಿಲ್ಲ ಎಂದು ತಜ್ಞರು ಹೇಳಿದ್ದಾರೆ.

"ಕಳೆದ ಮೂರು ವಾರಗಳಲ್ಲಿ ಅಡೆನೋವೈರಸ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಹಿಂದಿನ ಎರಡು ತಿಂಗಳಲ್ಲಿ 21 ಖಚಿತ ಪಾಸಿಟಿವ್ ಪ್ರಕರಣಗಳಿದ್ದವು. ಈಗ ಅಂತಹ ಸೋಂಕು ಹೊಂದಿರಬಹುದಾದ ಸುಮಾರು 30 ಮಕ್ಕಳು ಪ್ರತಿದಿನವೂ ಒಪಿಡಿ ಮತ್ತು ಇಆರ್‌ಗಳಿಗೆ ಬರುತ್ತಿದ್ದಾರೆ. ಫ್ಲೂ ಅಥವಾ ಅಡೆನೋವೈರಸ್ ಲಕ್ಷಣಗಳೊಂದಿಗೆ ದಾಖಲಾದ ಮಕ್ಕಳ ಗಂಟಲಿನ ದ್ರವಗಳನ್ನು ಪರೀಕ್ಷೆ ಮಾಡಲಾಗುತ್ತಿದೆ. ಪ್ರತಿದಿನವೂ ಅಂತಹ 3-4 ಮಕ್ಕಳನ್ನು ದಾಖಲು ಮಾಡಿಕೊಳ್ಳುತ್ತಿದ್ದೇವೆ" ಎಂದು ಬೆಂಗಳೂರಿನ ಸಕ್ರಾ ವರ್ಲ್ಡ್ ಆಸ್ಪತ್ರೆಯ ಶಿಶುವೈದ್ಯ ವಿಭಾಗದ ಹಿರಿಯ ಕನ್ಸಲ್ಟೆಂಟ್ ಡಾ. ರಜತ್ ಅತ್ರೇಯಾ ತಿಳಿಸಿದ್ದಾರೆ.

ರಾಷ್ಟ್ರೀಯ ವೈರಾಣು ಸಂಸ್ಥೆಯ ಪ್ರಕಾರ, ನಗರದಲ್ಲಿ ಈ ವರ್ಷ ಇದುವರೆಗೂ ಕೇವಲ 13 ಅಡೆನೋವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ. ಕರ್ನಾಟಕದ ಒಟ್ಟು ಸೋಂಕಿತರ ಸಂಖ್ಯೆ 37 ಇದೆ. ಖಾಸಗಿ ಆಸ್ಪತ್ರೆಗಳು ಅಡೆನೋವೈರಸ್ ಪ್ರಕರಣಗಳ ಬಗ್ಗೆ ನೀಡುವ ಮಾಹಿತಿ ಸುಧಾರಿಸಬೇಕಿದೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಫ್ಲೂ ಮತ್ತು ಅಡೆನೋವೈರಸ್ ಲಕ್ಷಣಗಳೇನು?

ಅಡೆನೋವೈರಸ್, ಅಧಿಕ ಅಪಾಯಕಾರಿ ವೈರಸ್ ಆಗಿದೆ. ಅದು ಸಾಮಾನ್ಯವಾದ ಶೀತ, ಶ್ವಾಸನಾಳಗಳ ಒಳ ಪದರ ಉರಿತ ಮತ್ತು ನ್ಯುಮೋನಿಯಾ ಸೇರಿದಂತೆ ವಿವಿಧ ಬಗೆಯ ಅನಾರೋಗ್ಯಗಳನ್ನು ಉಂಟುಮಾಡುತ್ತದೆ. ಅಡೆನೋವೈರಸ್ ಸೋಂಕು ಹೆಚ್ಚಾಗಿ ಜ್ವರ, ಕೆಮ್ಮು, ನೆಗಡಿ ಹಾಗೂ ಪಿಂಕ್ ಐ ಸಮಸ್ಯೆಗಳಂತಹ ಲಕ್ಷಣಗಳನ್ನು ಉಂಟುಮಾಡುತ್ತದೆ. ಆದರೆ ಅದು ಮುಖ್ಯವಾಗಿ, ದುರ್ಬಲ ಪ್ರತಿರಕ್ಷಣಾ ವ್ಯವಸ್ಥೆ ಹೊಂದಿರುವವರಲ್ಲಿ ಬಹಳ ಗಂಭೀರ ಕಾಯಿಲೆಯನ್ನೂ ಉಂಟುಮಾಡಬಹುದು.

ಎಚ್‌3ಎನ್‌2 ಅಥವಾ ಫ್ಲೂ ಎನ್ನುವುದು ಇನ್‌ಫ್ಲೂಯೆಂಜಾ ವೈರಸ್‌ಗಳಿಂದ ಸೃಷ್ಟಿಯಾಗುವ ಉಸಿರಾಟದ ಸಮಸ್ಯೆಯಾಗಿದೆ. ಫ್ಲೂ ಕೂಡ ತೀವ್ರ ಅಪಾಯಕಾರಿ ಮತ್ತು ಸೋಂಕು ತಗುಲಿದ ವ್ಯಕ್ತಿಗಳ ಜತೆಗಿನ ನಿಕಟ ಸಂಪರ್ಕ, ಕಲುಷಿತ ಮೇಲ್ಮೈಗಳು ಅಥವಾ ಗಾಳಿಯಿಂದ ಹರಡುವ ದ್ರವಗಳಿಂದ ಕೂಡ ಹರಡಬಲ್ಲದು. ಜ್ವರ, ಕೆಮ್ಮು, ಗಂಟಲು ನೋವು, ಸ್ನಾಯು ನೋವು ಮತ್ತು ಅಸ್ವಸ್ಥತೆ- ಇವು ಫ್ಲೂ ಲಕ್ಷಣಗಳು. ಇದು ಕೂಡ ನ್ಯುಮೋನಿಯಾ, ಶ್ವಾಸನಾಳಗಳ ಉರಿತ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು.

ಎರಡರ ನಡುವಿನ ವ್ಯತ್ಯಾಸವೇನು?

ಅಡೆನೋವೈರಸ್ ಮತ್ತು ಇನ್‌ಫ್ಲೂಯೆಂಜಾಗಳು ಉಸಿರಾಟ ಸಂಬಂಧಿ ಕಾಯಿಲೆಗೆ ಕಾರಣವಾಗುವ ಎರಡು ಸಾಮಾನ್ಯ ವೈರಸ್‌ಗಳಾದರೂ, ಇವರೆಡರ ನಡುವೆ ವ್ಯತ್ಯಾಸಗಳಿವೆ. ಇವೆರಡೂ ಉಂಟುಮಾಡಬಹುದಾದ ಅನಾರೋಗ್ಯದ ತೀವ್ರತೆಯೇ ಮುಖ್ಯ ವ್ಯತ್ಯಾಸ. ಎರಡೂ ಸಂಕೀರ್ಣ ಸಮಸ್ಯೆಗಳಿಗೆ ಕಾರಣವಾಗಬಹುದು. ಆದರೆ ಫ್ಲೂ ಸಾಮಾನ್ಯವಾಗಿ ಗಂಭೀರ ಕಾಯಿಲೆ ಮತ್ತು ಆಸ್ಪತ್ರೆ ದಾಖಲಾಗುವಿಕೆಗೆ ಎಡೆಮಾಡಿಕೊಡುತ್ತದೆ. ಚಿಕ್ಕ ಮಕ್ಕಳು, ವೃದ್ಧರು, ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಅಪಾಯ ಅಧಿಕ. ಅಡೆನೋವೈರಸ್ ಸಾಧಾರಣದಿಂದ ಮಧ್ಯಮ ಪ್ರಮಾಣದ ಲಕ್ಷಣಗಳನ್ನು ಉಂಟುಮಾಡುತ್ತದೆ.

ಫ್ಲೂಗೆ ಪ್ರಸ್ತುತ ಲಸಿಕೆ ಲಭ್ಯವಿದೆ. ಆದರೆ ಅಡೆನೋವೈರಸ್‌ಗೆ ಲಸಿಕೆ ಇಲ್ಲ. ಫ್ಲೂ ಬರುವ ಸಾಧ್ಯತೆಗಳನ್ನು ತಡೆಗಟ್ಟಲು ಆರು ತಿಂಗಳು ದಾಟಿದ ಮಕ್ಕಳಿಂದ ಎಲ್ಲ ದೊಡ್ಡವರೂ ಪ್ರತಿ ವರ್ಷ ಕೂಡ ಈ ಲಸಿಕೆ ಹಾಕಿಸಿಕೊಳ್ಳಬೇಕು. ಇದರಿಂದ ಫ್ಲೂ ಬಂದರೂ ಅದರ ತೀವ್ರತೆ ಕಡಿಮೆ ಇರುತ್ತದೆ ಎಂದು ಸಲಹೆ ನೀಡಲಾಗಿದೆ. ಅಡೆನೋವೈರಸ್‌ಗೆ ಲಸಿಕೆ ಇಲ್ಲದಿರುವುದರಿಂದ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವುದು, ಸೋಂಕಿತರೊಂದಿಗೆ ಸಮೀಪದ ಸಂಪರ್ಕ ಸಾಧಿಸುವುದರಿಂದ ದೂರ ಇರುವುದು ಮುಂತಾದ ಉತ್ತಮ ಅಭ್ಯಾಸಗಳನ್ನು ಕಾಪಾಡಿಕೊಳ್ಳುವುದೇ ಪರಿಹಾರ.

ಮ್ಯಾನ್ಮಾರ್ ಜೊತೆಗಿನ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಿದ ಭಾರತ

Posted by Vidyamaana on 2024-02-08 16:24:36 |

Share: | | | | |


ಮ್ಯಾನ್ಮಾರ್ ಜೊತೆಗಿನ ಮುಕ್ತ ಸಂಚಾರ ವ್ಯವಸ್ಥೆಯನ್ನು ರದ್ದುಗೊಳಿಸಿದ ಭಾರತ

ನವದೆಹಲಿ: ಭಾರತದ ಗಡಿಗಳನ್ನು ಭದ್ರಪಡಿಸುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪದ ನಂತರ ಮ್ಯಾನ್ಮಾರ್ ನೊಂದಿಗಿನ ಮುಕ್ತ ಸಂಚಾರ ಆಡಳಿತವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವಾಲಯ ಗುರುವಾರ ಪ್ರಕಟಿಸಿದೆ.ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನಸಂಖ್ಯಾ ರಚನೆಯನ್ನು ಕಾಪಾಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ನಲ್ಲಿ ಪೋಸ್ಟ್ ಮಾಡಿದ್ದಾರೆ.

Recent News


Leave a Comment: