ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಸುದ್ದಿಗಳು News

Posted by vidyamaana on 2024-07-06 04:30:03 |

Share: | | | | |


ಇಂದು (ಜು.O6) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ

ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

 Share: | | | | |


ರಾತ್ರೋ ರಾತ್ರಿ ದೇವೇಗೌಡ್ರನ್ನು ಭೇಟಿಯಾದ ಸಿಪಿ ಯೋಗೀಶ್ವರ್..

Posted by Vidyamaana on 2024-02-13 07:22:18 |

Share: | | | | |


ರಾತ್ರೋ ರಾತ್ರಿ ದೇವೇಗೌಡ್ರನ್ನು ಭೇಟಿಯಾದ ಸಿಪಿ ಯೋಗೀಶ್ವರ್..

ಬೆಂಗಳೂರು : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ, ಜೆಡಿಎಸ್ ನಾಯಕರು ಆಕ್ಟೀವ್ ಆಗಿದ್ದಾರೆ. ಅದರಲ್ಲೂ ಮಾಜಿ ಸಿಎಂ ಕುಮಾರಸ್ವಾಮಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಬಿಜೆಪಿ ಹಿರಿಯರೆಲ್ಲಾ ದೇವೇಗೌಡರ ಮನೆ ಹಾಗೂ ಕುಮಾರಸ್ವಾಮಿ ಅವರ ತೋಟದ ಮನೆಗೆ ದಾಂಗುಡಿ ಇಡುತ್ತಿದ್ದಾರೆ.ಇದೀಗ ಸಿಪಿ ಯೋಗೀಶ್ವರ್ ದಿಢೀರನೆ ದೇವೇಗೌಡರ ಮನೆಗೆ ಭೇಟಿ ನೀಡಿ, ಚರ್ಚೆ ನಡೆಸಿ ಬಂದಿದ್ದಾರೆ.


ರಾಮನಗರದಲ್ಲಿ ಜೆಡಿಎಸ್ ಗೆ ಪ್ರಬಲ ಪೈಪೋಟಿ ನೀಡಿದ್ದೇ, ಸಿಪಿ ಯೋಗೀಶ್ವರ್ ಅವರು. ಸಿಕ್ಕ ಸಿಕ್ಕ ಸಮಯದಲ್ಲೆಲ್ಲಾ ಯೋಗೀಶ್ವರ್ ಅವರು, ಕುಮಾರಸ್ವಾಮಿ ಅವರನ್ನು, ಕುಮಾರಸ್ವಾಮಿ ಅವರು ಯೋಗೀಶ್ವರ್ ಅವರನ್ನು ಏಕವಚನದಲ್ಲಿಯೇ ದಾಳಿ ನಡೆಸಿದ್ದರು. ಈಗ ಮೈತ್ರಿಯಾದ ಮೇಲೆ ಎಲ್ಲವೂ ಉಲ್ಟಾ ಆಗಿದೆ. ಸಮಾಧಾನ ಹೆಚ್ಚಾಗಿದೆ. ಜೊತೆಗೂಡಿ ಕೆಲಸ ಮಾಡುವ ಮನಸ್ಥಿತಿ ನಿರ್ಮಾಣವಾಗಿದೆ. ಈ ಬೆನ್ನಲ್ಲೇ ಸಿಪಿ ಯೋಗೀಶ್ವರ್ ದೊಡ್ಡಗೌಡರ ಮನೆಗೆ ಬಂದಿದ್ದಾರೆ.ಪದ್ಮನಾಭನಗರದ ದೊಡ್ಡಗೌಡರ ನಿವಾಸಕ್ಕೆ ಭೇಟಿ ನೀಡಿದ ಯೋಗೀಶ್ವರ್, ಸುಮಾರು ಗಂಟೆಗಳ ಕಾಲ ದೇವೇಗೌಡರ ಬಳಿ ಚರ್ಚೆ ನಡೆಸಿದ್ದಾರೆ. ದೊಡ್ಡಗೌಡರು ಕೂಡ, ನಿನ್ನ ಜೊತೆಗೆ ನಾವಿದ್ದೀವಿ ಎಂದು ಹೇಳಿ ಕಳುಹಿಸಿದ್ದಾರಂತೆ. ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸಿಪಿ ಯೋಗೀಶ್ವರ್, ‘ಕರುನಾಡಿನ ಹೆಮ್ಮೆ, ಗೌರವಾನ್ವಿತ ಮಾಜಿ ಪ್ರಧಾನಿ ಶ್ರೀ ಹೆಚ್‌.ಡಿ. ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಮಾಡಿ ಆಶೀರ್ವಾದ ಪಡೆಯಲಾಯಿತು. ನಾಡಿನ ರೈತರು, ಕೃಷಿ ಕಾರ್ಮಿಕರ ಬಗ್ಗೆ ಈ ಇಳಿ ವಯಸ್ಸಿನಲ್ಲೂ ದೇವೇಗೌಡರಿಗೆ ಇರುವ ಕಳಕಳಿ ಅನುಕರಣೀಯ. 6 ದಶಕಗಳ ಸುದೀರ್ಘ ಸಾರ್ವಜನಿಕ ಜೀವನ ಪೂರೈಸಿರುವ ಶ್ರೀ ದೇವೇಗೌಡರ ಜ್ಞಾನ, ಅನುಭವ ನಮ್ಮೆಲ್ಲರಿಗೂ ಪ್ರೇರಣಾದಾಯಿ’ ಎಂದು ಬರೆದುಕೊಂಡಿದ್ದಾರೆ.

ಫಿಲೋಮಿನಾ ಹೈಸ್ಕೂಲ್ TO ಪುತ್ತೂರು ಕ್ಲಬ್ ವರೆಗೆ ನಿಧಿ ಇದೆ!

Posted by Vidyamaana on 2023-10-07 14:55:12 |

Share: | | | | |


ಫಿಲೋಮಿನಾ ಹೈಸ್ಕೂಲ್ TO ಪುತ್ತೂರು ಕ್ಲಬ್ ವರೆಗೆ ನಿಧಿ ಇದೆ!


ಪುತ್ತೂರು:  ಮನೋರಂಜನೆಗಳು ವಿಭಿನ್ನ ರೀತಿಯವು. ರೋಟರಿ ಯುವ ಕ್ಲಬ್ ನಿಂದ ಇದೀಗ ಮೂರನೆ ಬಾರಿ ಟ್ರೆಷರ್ ಹಂಟ್ ಕಾರ್ಯಕ್ರಮ ಹಮ್ಮಿಕೊಂಡಿದೆ ಅಕ್ಟೋಬರ್ 8 ರವಿವಾರದಂದು ನಡೆಯುವ ಈ ಸ್ಫರ್ಧೆ ಸಂತ ಫಿಲೋಮಿನಾ ಹೈಸ್ಕೂಲ್ ಬಳಿ ಆರಂಭಗೊಂಡು ಪುತ್ತೂರು ಕ್ಲಬ್ ನಲ್ಲಿ ಕೊನೆಗೊಳ್ಳಲಿದೆ


ಕುಟುಂಬದ ಸದಸ್ಯರು ಜೊತೆಗೂಡಿ ಭಾಗವಹಿಸಬಹುದಾದ ಆಟದಲ್ಲಿ ಎರಡು ಅಥವಾ ಮೂರು ಸ್ಪರ್ಧಿಗಳು ತಮ್ಮ ಕಾರಿನಲ್ಲಿ ಪ್ರಯಾಣ ಮಾಡುತ್ತಾ ರಸ್ತೆ ನಿಯಮಗಳನ್ನು ಪಾಲಿಸುತ್ತಾ, ಪ್ರಶ್ನೆಗಳಿಗೆ ಉತ್ತರಿಸುತ್ತಾ ಆಡುವ ಆಟವೇ “ಟ್ರೆಷರ್ ಹಂಟ್”. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ಕೂಡ ದೊರೆಯಲಿದೆ. ಭಾಗವಹಿಸಿದ ಎಲ್ಲ ಸ್ಪರ್ಧಾಳುಗಳಿಗೆ ರೋಟರಿಯಿಂದ ಪ್ರಮಾಣಪತ್ರ ಸಹ ನೀಡಲಾಗುವುದು.

ಪ್ರತಿಯೊಂದು ತಂಡಕ್ಕೂ ವಿಭಿನ್ನ ರೀತಿಯ ಪ್ರಶ್ನೆ ಪತ್ರಿಕೆಯನ್ನು ನೀಡಿ ಅದರಲ್ಲಿ ನೀಡಿರುವ ಕ್ಲೂ(ಸುಳಿವು)ಗಳನ್ನು ಗಮನಿಸಿ, ಟ್ವಿಸ್ಟ್ ಪ್ರಶ್ನೆಗಳಿಗೆ ಉತ್ತರಿಸುವುದು.ಪ್ರಾಯೋಜಕತ್ವ ನೀಡಿರುವ ಪುತ್ತೂರಿನ ವ್ಯಾಪಾರ ಮಳಿಗೆಗಳಲ್ಲಿ ಟ್ರೆಷರ್ ಅನ್ನು ಸಂಗ್ರಹಿಸುವುದು.ನೀಡಿರುವ ಗಿಫ್ಟ್ ಗಳನ್ನು ಪಡೆದುಕೊಂಡು ಕೊನೆಗೆ ಪುತ್ತೂರು ಕ್ಲಬ್ ನ್ನು ತಲುಪುವುದು. ಸ್ಪರ್ಧೆಯ ಕೊನೆಯಲ್ಲಿ ತೀರ್ಪುಗಾರರು ಪ್ರಶ್ನೆಗಳ ಸರಿ ಉತ್ತರಗಳನ್ನು ಮೌಲ್ಯಮಾಪನ ಮಾಡಿ, ಗರಿಷ್ಟ ಅಂಕಗಳನ್ನು ಪಡೆದವರಿಗೆ ಬಹುಮಾನ ಘೋಷಣೆ ಮಾಡಲಾಗುವುದು. ಈ ವಿಭಿನ್ನ ರೀತಿಯ ಮನೋರಂಜನೆಯ ಆಟದಲ್ಲಿ  ಭಾಗವಹಿಸಲಿಚ್ಛಿಸುವವರು  ವಿನೀತ್ ಶೆಣೈ 9448125671, ನರಸಿಂಹ ಪೈ 9743703147, ಪಶುಪತಿ ಶರ್ಮ 9845522020 ಇವರಲ್ಲಿ ನೋಂದಾಯಿಸಿ ಭಾಗವಹಿಸಬಹುದು

ಚಹಾ ಮೇಕರ್.. ಕ್ಲೀನರ್.. ಶೆಫ್..ನಿಂದ ಇಂದು ಯಶಸ್ವೀ ಉದ್ಯಮಿ

Posted by Vidyamaana on 2023-09-14 21:00:29 |

Share: | | | | |


ಚಹಾ ಮೇಕರ್.. ಕ್ಲೀನರ್.. ಶೆಫ್..ನಿಂದ ಇಂದು ಯಶಸ್ವೀ ಉದ್ಯಮಿ

ಉಡುಪಿ: ಪುಡಿಗಾಸು ಇಲ್ಲದೆ ಮುಂಬೈ ಮಹಾನಗರ ಹೋಗಿದ್ದ ಗೋವಿಂದ ಬಾಬು ಪೂಜಾರಿ (Govinda Babu Poojary) ಸತತ ಪರಿಶ್ರಮದಿಂದ ನೂರಾರು ಕೋಟಿಯ ವ್ಯವಹಾರ ನಡೆಸುವ ಉದ್ಯಮಿಯಾಗಿ ಬೆಳೆದು ನಿಂತಿದ್ದಾರೆ. ಸದ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆಯಲು ಹೋಗಿ ಚೈತ್ರಾ ಕುಂದಾಪುರ ಅವರಿಗೆ ಹಣ ಕೊಟ್ಟು ಇತ್ತ ಟಿಕೆಟ್ ಸಿಗದೆ ಅತ್ತ ಕೊಟ್ಟ ಹಣವೂ ವಾಪಸ್ ಸಿಗದೆ ವಂಚನೆಗೆ ಸಿಲುಕಿದ್ದಾರೆ. ಈ ಬಗ್ಗೆ ಗೋವಿಂದ ಅವರು ದೂರು ನೀಡಿದ್ದು, ಚೈತ್ರಾ ಕುಂದಾಪುರ (Chaitra Kundapur) ಮತ್ತಿತರರು ಬಂಧಿತರಾಗಿದ್ದಾರೆ. ಹಾಗಿದ್ದರೆ, ಗೋವಿಂದ ಬಾಬು ಪೂಜಾರಿ ಯಾರು? ಅವರ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ.ಕುಂದಾಪುರದ ಬಿಜೂರಿನ ಕೃಷಿ ಕುಟುಂಬವೊಂದರಲ್ಲಿ 1977 ರಲ್ಲಿ ಜನಿಸಿದ ಗೋವಿಂದ ಬಾಬು ಪೂಜಾರಿ, ಬಾಲ್ಯದಿಂದಲೇ ಏಳು ಬೀಳುಗಳನ್ನು ಕಂಡವರು. ತನ್ನ 13ನೇ ವಯಸ್ಸಿನಲ್ಲಿಯೇ ಮುಂಬೈಯಲ್ಲಿ ಕೆಲಸಕ್ಕೆ ಸೇರಿದ ಅವರು, ಹೋಟೆಲ್ ಒಂದರಲ್ಲಿ ಚಹಾ ಮಾಡುವ ಮೂಲಕ ವೃತ್ತಿ ಬದುಕು ಆರಂಭಸಿದರು.


ನಂತರದ ವರ್ಷಗಳಲ್ಲಿ ಬಿಎಸ್‌ಟಿ ಕ್ಯಾಂಟೀನ್‌ನಲ್ಲಿ ಅಡುಗೆ ಸಹಾಯಕನಾಗಿ ಸೇರಿಕೊಂಡರು. ನಂತರ ಇರ್ಲಾದ ಸನ್ನಿ ಬಾರ್​ನಲ್ಲಿ ಬಾಣಸಿಗನಾಗಿ ಮುಂದೆ ಸ್ವ ಉದ್ಯೋಗದ ಕನಸಿನೊಂದಿಗೆ ಜನರಲ್ ಸ್ಟೋರ್ ಒಂದನ್ನು ತೆರೆದರು. ಆದರೆ ಇದು ಕೈ ಹಿಡಿಯಲಿಲ್ಲ. ಇದರಿಂದ ಸಾಕಷ್ಟು ನಷ್ಟ ಅನುಭವಿಸಿದರು.ಮತ್ತೆ ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಕ್ಲೀನಿಂಗ್ ವಿಭಾಗದಲ್ಲಿ ಕೆಲಸಕ್ಕೆ ಸೇರಿಕೊಂಡ ಗೋವಿಂದ ಅವರು 2007 ರಲ್ಲಿ ಏಳು ಮಂದಿ ನೌಕರರೊಂದಿಗೆ ಷೆಫ್ ಟಾಕ್ ಕೇಟರಿಂಗ್ ಸರ್ವಿಸಸ್ ಸಂಸ್ಥೆಯನ್ನು ಕಟ್ಟಿದರು. ಮುಂದೆ ಇದು ಷೆಫ್ ಟಾಕ್ ಫುಡ್ ಆಯಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಆಗಿ ಬದಲಾಯಿತು.


ಪ್ರಸ್ತುತ ಪೂಜಾರಿ ಅವರು ತಮ್ಮ ಸಂಸ್ಥೆಯ ಮೂಲಕ 5,000 ಜನರಿಗೆ ಉದ್ಯೋಗ ನೀಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ಜಾರ್ಖಂಡ್, ಗುಜರಾತ್‌ನಲ್ಲಿ ಸಂಸ್ಥೆ, ಅತ್ಯಾಧುನಿಕ ಕಿಚನ್‌ಗಳನ್ನು ಹೊಂದಿದ್ದು, ವಿವಿಧ ಕಾರ್ಪೊರೇಟ್ ಕಂಪನಿಗಳಿಗೆ ಕೇಟರಿಂಗ್ ಸೇವೆ ಒದಗಿಸುತ್ತಿದ್ದಾರೆ.


ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮವು ಮತ್ಸ್ಯಬಂಧನ ಕಂಪನಿಯ ಸಹಯೋಗದಲ್ಲಿ ರಾಣಿ ಮೀನು ಮತ್ತು ಬೂತಾಯಿ ಮೀನುಗಳಿಂದ ಚಿಪ್​ಗಳನ್ನು ತಯಾರಿಸುವ ಕಂಪನಿಯನ್ನು ಆರಂಭಿಸಿದರು. ಇದರೊಂದಿಗೆ ಪ್ರಗ್ನ್ಯಾ ಸಾಗರ್ ಹೋಟೆಲ್ ಮತ್ತುರೆಸಾರ್ಟ್, ಶೆಫ್ ಟಾಕ್ ನ್ಯೂಟ್ರಿಫುಡ್ ಸಂಸ್ಥಗೆಳನ್ನು ಸ್ಥಾಪಿಸಿ ಇದರಿಂದ ವರ್ಷಕ್ಕೆ ನೂರಾರು ಕೋಟಿ ವಹಿವಾಟು ನಡೆಸುವ ಉದ್ಯಮಿಯಾಗಿ ಬೆಳೆದು ನಿಂತಿದ್ದಾರೆ. ಸದ್ಯ ಶ್ರೀವರಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಮೂಲಕ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.


ರಾಜಕೀಯ ರಂಗಕ್ಕೂ ಲಗ್ಗೆ ಇಡಲು ಮುಂದಾದ ಗೋವಿಂದ ಅವರಿಗೆ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಅವರು ಹಂತಹಂತವಾಗಿ ಒಟ್ಟು ಐದೂವರೆ ಕೋಟಿ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ.


ವಂಚನೆ ಬಗ್ಗೆ ಅನುಮಾನ ಉಂಟಾದ ಹಿನ್ನೆಲೆ ಹಣವನ್ನು ವಾಪಸ್ ಕೇಳಿದಾಗ ತಾನು ಮೋಸ ಹೋಗಿರುವುದು ತಿಳಿದುಬಂದಿದೆ. ತಿಂಗಳಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆಗುತ್ತಿದ್ದರೂ, ಗೋವಿಂದ ಬಾಬು ಪೂಜಾರಿದೂರು ನೀಡಿರಲಿಲ್ಲ. ಈ ನಡುವೆ ಕೋಟಿ ಕೋಟಿ ನುಂಗಿದ್ದು ಹೇಗೆ ಎಂಬ ಸವಿವರವಾದ ಕಥೆಯನ್ನೊಳಗೊಂಡ ಅನಾಮಿಕ ಪತ್ರವೊಂದು ವಾಟ್ಸಾಪ್, ಫೇಸ್ ಬುಕ್​ನಲ್ಲಿ ಹರಿದಾಡುತ್ತಿತ್ತು. ಎಲ್ಲಾ ದಾಖಲೆಗಳನ್ನು ಸಂಗ್ರಹ ಮಾಡುತ್ತಿದ್ದ ಗೋವಿಂದ ಬಾಬು ಪೂಜಾರಿ ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಿದ್ದಾರೆ.


ಕರಣ ದಾಖಲಾಗುತ್ತಿದ್ದಂತೆ ಚೈತ್ರ ಅವರ ಇಡೀ ಗ್ಯಾಂಗ್ ರಾಜ್ಯದ ಅಲ್ಲಲ್ಲಿ ತಲೆಮರಿಸಿಕೊಂಡಿತ್ತು. ಅದಾಗ್ಯೂ, ಸಿಸಿಬಿ ಪೊಲೀಸರು ಚೈತ್ರಾರ ಆಪ್ತನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಉಡುಪಿಯ ಡಯಾನ ಸಮೀಪ ಅಪಾರ್ಟ್ಮೆಂಟ್ ಒಂದರಲ್ಲಿ ಅವಿತು ಕುಳಿತಿರುವ ತಿಳಿದುಬಂದಿದೆ. ಉಡುಪಿ ಕೃಷ್ಣಮಠಕ್ಕೆ ಕರೆಸಿದ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದಾರೆ.

ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ! ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು: ಅಣ್ಣಾಮಲೈ

Posted by Vidyamaana on 2024-06-06 09:34:00 |

Share: | | | | |


ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ! ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು: ಅಣ್ಣಾಮಲೈ

ಚೆನ್ನೈ: ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಚುನಾವಣೆ ಎದುರಿಸಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಪಕ್ಷದ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ. ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಕುಟುಂಬ ರಾಜಕಾರಣವನ್ನು ಟೀಕಿಸಿದರು.

ಆಡಳಿತಾರೂಢ ಡಿಎಂಕೆ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದರು.


ನಮ್ಮ ಅಪ್ಪ ಕುಪ್ಪಾಸ್ವಾಮಿ, ನಾನು ಒಬ್ಬ ರೈತನ ಮಗನಾಗಿದ್ದೇನೆ. ಏನು ಮಾಡೋದು ನಮ್ಮ ಅಪ್ಪ ಕರುಣಾನಿಧಿಯಲ್ಲ, ದೊಡ್ಡ ರಾಜಕೀಯ ನಾಯಕನೂ ಅಲ್ಲ. ನಾನು ಕರುಣಾನಿಧಿ ಮಗನಾಗಿದ್ದರೆ ಚುನಾವಣೆಯಲ್ಲಿ ಗೆದ್ದು ಬಿಡುತ್ತಿದ್ದೆ. ಹಾಗಾಗಿ ನಾನು ಗೆಲ್ಲಲು ಸಮಯ ಹಿಡಿಯುತ್ತೆ. ನನ್ನಂತವರು ಒಂದೊಂದೇ ಮೆಟ್ಟಿಲು ಹತ್ತಿ ಗೆಲುವನ್ನು ಕಾಣಬೇಕಾಗುತ್ತದೆ. ನನ್ನ ತಂದೆ ಕುಪ್ಪಾಸ್ವಾಮಿ ನನಗೆ ಅದನ್ನೇ ಹೇಳಿಕೊಟ್ಟಿದ್ದಾರೆ. ನಿಧಾನಕ್ಕೆ ಹೋಗು, ಒಂದೊಂದೇ ಮೆಟ್ಟಿಲು ಹತ್ತು, ನ್ಯಾಯವಾದ ದಾರಿಯಲ್ಲಿ ನಡಿ ಎಂದು ಹೇಳಿಕೊಟ್ಟಿದ್ದಾರೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸುಳ್ಯಕ್ಕೆ ಕಾಲಿಟ್ಟ ವಿದ್ಯಾಮಾತಾ ಅಕಾಡೆಮಿ – ನಾಳೆ (ಸೆ.28) ಶುಭಾರಂಭ

Posted by Vidyamaana on 2023-09-27 15:21:10 |

Share: | | | | |


ಸುಳ್ಯಕ್ಕೆ ಕಾಲಿಟ್ಟ ವಿದ್ಯಾಮಾತಾ ಅಕಾಡೆಮಿ – ನಾಳೆ (ಸೆ.28) ಶುಭಾರಂಭ

ಸುಳ್ಯ : ಭಾರತ ಸರಕಾರದ ಮಾನ್ಯತೆ ಪಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆಯಾಗಿರುವ, ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ "ವಿದ್ಯಾಮಾತಾ ಅಕಾಡೆಮಿ"ಯ ಶಾಖಾ ಕಛೇರಿ ಇದೇ ಬರುವ ದಿನಾಂಕ 28 ಸೆಪ್ಟೆಂಬರ್ 2023 ಗುರುವಾರದಂದು ಬೆಳಿಗ್ಗೆ 10:00ಕ್ಕೆ ಸರಿಯಾಗಿ ಸುಳ್ಯದಲ್ಲಿ ಶುಭಾರಂಭಗೊಳ್ಳಲಿದೆ

ವಿದ್ಯಾಮಾತಾ ಅಕಾಡೆಮಿಯ ಮಾತೃ ಸಂಸ್ಥೆಯಾಗಿರುವ ವಿದ್ಯಾಮಾತಾ ಫೌಂಡೇಶನ್ ಈಗಾಗಲೇ ಮೂರು ರಾಜ್ಯಮಟ್ಟದ ಉದ್ಯೋಗ ಮೇಳಗಳು, ಸುಮಾರು 500ಕ್ಕೂ ಹೆಚ್ಚು ನೇರ ಉದ್ಯೋಗ ಸಂದರ್ಶನಗಳ ಮೂಲಕ 5000ಕ್ಕೂ ಮಿಕ್ಕಿದ ವಿದ್ಯಾರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಕೊಡಿಸಿರುವ ಹೆಮ್ಮೆ ಇದೆ. ಹಾಗೆಯೇ ಕರಾವಳಿ ಜಿಲ್ಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮತ್ತು ತರಬೇತಿ ನೀಡಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ಇಲಾಖೆಗಳಲ್ಲಿ ಆಯ್ಕೆಯಾಗುವಂತೆ ಮಾಡಿರುವ ಹೆಮ್ಮೆ ವಿದ್ಯಾಮಾತಾ ಅಕಾಡೆಮಿಯದ್ದಾಗಿದೆ.

ಸಂಸ್ಥೆಯ ವೈಶಿಷ್ಟ್ಯತೆಗಳು :

* ಇಪ್ಪತ್ತಕ್ಕೂ ಹೆಚ್ಚಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆರು ತಿಂಗಳ ಅವಧಿಯಲ್ಲಿ ಏಕಕಾಲದಲ್ಲಿ ತರಬೇತಿ ಪಡೆಯುವ ಅವಕಾಶ

* ಸದ್ಯ ಓದುತ್ತಿರುವ ವಿದ್ಯಾರ್ಥಿಗಳಿಗೆ / ಸದ್ಯ ಉದ್ಯೋಗದಲ್ಲಿರುವವರಿಗೆ ಅನುಕೂಲವಾಗುವಂತೆ ದಿನನಿತ್ಯ ರಾತ್ರಿ 8:00 ರಿಂದ 9:00 ರವರೆಗೆ (ಒಂದು ಗಂಟೆ) ಆನ್ಲೈನ್ ಮುಖಾಂತರ ತರಬೇತಿ ಪಡೆಯುವ ಅವಕಾಶ

* ನೇರ ತರಗತಿಗಳಲ್ಲಿ ಪಾಲ್ಗೊಳ್ಳುವವರಿಗೆ ವಾರದ 5 ದಿನ ಬೆಳಿಗ್ಗೆ 9:30ರಿಂದ ಮಧ್ಯಾಹ್ನ 1:00ರವರೆಗೆ ಆರು ತಿಂಗಳ ತರಬೇತಿ

* ತರಬೇತಿ ಮುಗಿದರೂ ಎರಡು ವರ್ಷಗಳು ನಿರಂತರವಾಗಿ ಅರ್ಜಿ ಸಲ್ಲಿಕೆ, ಪ್ರವೇಶ ಪತ್ರ , ವಿಶೇಷ ತರಗತಿಗಳನ್ನು ಉಚಿತವಾಗಿ ನೀಡುವ ಮುಖಾಂತರ ಸರಕಾರಿ ಹುದ್ದೆಗೆ ಆಯ್ಕೆಯಾಗಲು ಸಂಪೂರ್ಣವಾಗಿ ವಿದ್ಯಾಮಾತಾ ಅಕಾಡೆಮಿಯು ಬೆಂಬಲವಾಗಿ ನಿಲ್ಲುತ್ತದೆ

* ತರಬೇತಿ ಪಡೆಯುವ ಪ್ರತಿ ಅಭ್ಯರ್ಥಿಗೂ ಉಚಿತ ಕಂಪ್ಯೂಟರ್, ಸ್ಪೋಕನ್ ಇಂಗ್ಲೀಷ್, ದೈಹಿಕ ಸದೃಢತೆಯ ಮೈದಾನ ತರಬೇತಿ ನೀಡಲಾಗುವುದು

* ಅಧಿಕಾರಿಗಳು, ನಿವೃತ್ತರು, ದೇಶದ ಬೇರೆ ಬೇರೆ ಭಾಗಗಳ ವಿಶೇಷ ಸಂಪನ್ಮೂಲ ವ್ಯಕ್ತಿಗಳ ಮೂಲಕ ನಿರಂತರ ತರಬೇತಿ ಕಾರ್ಯಾಗಾರಗಳನ್ನು ನಡೆಸಲಾಗುವುದು

* ಪ್ರತಿವಾರ ಅಣಕು  ಪರೀಕ್ಷೆಗಳು, ಹಳೆಯ ಪ್ರಶ್ನೆ ಪತ್ರಿಕೆಗಳ ಪುನರ್ ವಿಮರ್ಶೆಯ ಮೂಲಕ ತರಬೇತಿಗೊಳಿಸಲಾಗುತ್ತದೆ

* ದೇಶ - ವಿದೇಶಗಳಲ್ಲಿ ಉತ್ತಮ  ಕಂಪನಿಗಳ ಉದ್ಯೋಗಕ್ಕಾಗಿ ಪ್ರಯತ್ನಿಸುವವರಿಗೆ ಡಿಪ್ಲೋಮಾ ಇನ್ ಪ್ರಾಕ್ಟಿಕಲ್ ಅಕೌಂಟಿಂಗ್ ಆಂಡ್ ಟ್ಯಾಕ್ಸೇಶನ್ ಕೋರ್ಸ್ ಗಳನ್ನು ನೀಡಲಾಗುತ್ತದೆ

ಇದೆಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿಯಲ್ಲಿ ಪಡೆಯುವ ಅವಕಾಶ . ಸುಳ್ಯ ಕೊಡಗು ಮಡಿಕೇರಿ ಹಾಗೂ ವಿವಿಧ ತಾಲೂಕು ಹಾಗು ಜಿಲ್ಲೆಗಳ ಕರಾವಳಿ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಹಾಗೂ ಸರಕಾರಿ ಸ್ವಾಮ್ಯದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಲಭಿಸುವಂತಾಗಲು ಪ್ರತೀ ವಿದ್ಯಾರ್ಥಿಯನ್ನು ತಯಾರಿ ಮಾಡುವುದು ಹಾಗೂ ಸರಕಾರಿ ಹುದ್ದೆಗೆ ಆಯ್ಕೆಯಾಗದೆ ಇರುವ ವಿದ್ಯಾರ್ಥಿಗಳನ್ನು ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರತಿ ವಿದ್ಯಾರ್ಥಿಯನ್ನು ತಯಾರಿ ಮಾಡುವುದು  ವಿದ್ಯಾಮಾತಾ ಅಕಾಡೆಮಿಯ ಉದ್ದೇಶವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ 9620468869 / 9448527606 ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಆಡಳಿತ ಕಛೇರಿ ಪುತ್ತೂರು  : ಹಿಂದೂಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಎ.ಪಿ.ಯಂ.ಸಿ ರಸ್ತೆ ಪುತ್ತೂರು

ಸುಳ್ಯ ಶಾಖೆ : TAPCMS ಬಿಲ್ಡಿಂಗ್, ಕಾರ್ ಸ್ಟ್ರೀಟ್, ಸುಳ್ಯ, ದ.ಕ 574239

ಸ್ನೇಹಿತನ ಎಟಿಎಂನಲ್ಲಿ ಹಣ ನೋಡಿ ಕೊಲೆ; ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಲ್ಲಿ ಹತ್ಯೆ ರಹಸ್ಯ ಬಯಲು, ಆರೋಪಿ ಸುಮನ್ ದಾಸ್ ಅರೆಸ್ಟ್

Posted by Vidyamaana on 2024-04-12 07:36:36 |

Share: | | | | |


ಸ್ನೇಹಿತನ ಎಟಿಎಂನಲ್ಲಿ ಹಣ ನೋಡಿ ಕೊಲೆ; ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಲ್ಲಿ ಹತ್ಯೆ ರಹಸ್ಯ ಬಯಲು, ಆರೋಪಿ ಸುಮನ್ ದಾಸ್ ಅರೆಸ್ಟ್

ಬೆಂಗಳೂರು, ಏ.11: ಕಳೆದ ಪೆಬ್ರವರಿ 22 ರಂದು ತರಬನಹಳ್ಳಿ ಬಳಿಯ ರಸ್ತೆ ಬದಿಯೊಂದರ ಬಳಿ ಉತ್ತರಕಾಂಡ ಮೂಲದ ರಾಜು ರಾವತ್ (49) ಎಂಬುವವರ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿತ್ತು. ​ಸ್ಥಳಕ್ಕೆ ಭೇಟಿ ನೀಡಿದ್ದ ಚಿಕ್ಕಜಾಲ ಪೊಲೀಸರು (Chikkajala Police)ಪರಿಶೀಲನೆ ನಡೆಸಿದ್ದರು. ಈ ವೇಳೆ ಮೃತ ರಾಜು ರಾವತ್ ತಲೆಗೆ ಪೆಟ್ಟಾಗಿ ಗಾಯಗಳಾಗಿದ್ದು, ಅನುಮಾನಾಸ್ಪದವಾಗಿ ಬಿದ್ದಿದ್ದ ಶವವನ್ನ ನೋಡಿದ್ದ ಜನ, ಕುಡಿದು ಬಿದ್ದು ತಲೆಗೆ ಪೆಟ್ಟಾಗಿ ಸಾವನ್ನಪ್ಪಿರಬಹುದು ಅಂದುಕೊಂಡಿದ್ದರು. ಇನ್ನು ಪೊಲೀಸರು ಸಹ ಇದೇ ಗುಮಾನಿ ಮೇಲೆ ಮೃತ ರಾಜು ರಾವತ್​ನ ಮೃತದೇಹವನ್ನ ಶವಪರೀಕ್ಷೆಗೆ ಕಳುಹಿಸಿಕೊಟ್ಟಿದ್ದು, ಯುಡಿಆರ್ ಕೇಸ್ ದಾಖಲು ಮಾಡಿಕೊಂಡಿದ್ದರು. ಜೊತೆಗೆ ಪೋಸ್ಟ್ ಮಾರ್ಟಮ್ ವರದಿಗೆ ಕಾಯುತ್ತಿದ್ದ ಚಿಕ್ಕಜಾಲ ಪೊಲೀಸರು ರಿಪೋರ್ಟ್ ಬರುತ್ತಿದ್ದಂತೆ ಶಾಕ್ ಆಗಿದ್ದರು. ರಾಜು ರಾವತ್ ಮೇಲೆ ಬಲವಾಗಿ ಹಲ್ಲೆ ಮಾಡಿ ಕೊಲೆ ಮಾಡಿರುವುದು ತಿಳಿದಿತ್ತು. ವರದಿ ಬಳಿಕ ಕೊಲೆ ಕೇಸ್ ದಾಖಲಿಸಿಕೊಂಡ ಚಿಕ್ಕಜಾಲ ಪೊಲೀಸರು, ಇದೀಗತನಿಖೆ ನಡೆಸಿ ಎಸ್ಕೇಪ್ ಅಗಿದ್ದ ಆರೋಪಿಯನ್ನ ಬಂಧಿಸಿದ್ದಾರೆ.

ಹಣಕ್ಕಾಗಿ ಜೊತೆಯಲ್ಲಿದ್ದು ಸ್ನೇಹಿತನಿಗೆ ಕೊಳ್ಳಿಯಿಟ್ಟ ಭೂಪ



Leave a Comment: