ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ಸುದ್ದಿಗಳು News

Posted by vidyamaana on 2024-07-24 23:15:54 |

Share: | | | | |


ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅಪ್ಪ-ಅಮ್ಮ ಆಟ ಆಡಲು ಬಂದ ಜೋಡಿ ಜನ ನೋಡಿ ಪರಾರಿ!

ವಿಟ್ಲ : ಕಳೆಂಜಿಮಲೆ ರಕ್ಷಿತಾರಣ್ಯಕ್ಕೆ ಯುವತಿಯೋರ್ವಳನ್ನು ಯುವಕನೋರ್ವ ಬೈಕ್ ನಲ್ಲಿ ಕಾಡಿಗೆ ಕರೆದುಕೊಂಡು ಬಂದಿದ್ದು, ಈ ಬಗ್ಗೆ ತಿಳಿಯುತ್ತಲೇ ಹಲವಾರು ಮಂದಿ ಕಾಡಿನಲ್ಲಿ ಹುಡುಕಾಡಿದ್ದಾರೆನ್ನಲಾಗಿದೆ.

ಜನ ಸೇರುತ್ತಿದ್ದಂತೆ ಅರೆ ನಗ್ನ ಸ್ಥಿತಿಯಲ್ಲಿ ಬೈಕ್, ಬಟ್ಟೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಯುವಕ-ಯುವತಿ ಪರಾರಿಯಾಗಿದ್ದಾರೆನ್ನಲಾಗಿದೆ.

ಸಾರ್ವಜನಿಕರ ಮಾಹಿತಿ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆಗಳು, ಕಾಂಡೋಮ್, ಚಪ್ಪಲಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

 Share: | | | | |


ಆರ್ಯಾಪು: ಅಮೃತ ಉದ್ಯಾನವನ ಬಿಕೋನ್ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

Posted by Vidyamaana on 2023-10-18 17:11:54 |

Share: | | | | |


ಆರ್ಯಾಪು: ಅಮೃತ ಉದ್ಯಾನವನ ಬಿಕೋನ್ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಪುತ್ತೂರು: ಆರ್ಯಾಪು ಪಂಚಾಯತ್

ಕಚೇರಿ ಮಾದರಿ ಪಂಚಾಯತ್ ಆಗಿದೆ. ಒಳ್ಳೆಯ ಪಂಚಾಯತ್ ನೋಡುವ ಅವಕಾಶ ಆಗಿದೆ. ಸರಕಾರಿ ಕಚೇರಿ ಅದರಲ್ಲಿಯೂ ಪಂಚಾಯತ್ ಕಚೇರಿಯೊಂದು ಈ ರೀತಿಯ ಅಚ್ಚುಕಟ್ಟಿನ ವ್ಯವಸ್ಥೆಯಲ್ಲಿರುವುದನ್ನು ನೋಡಿ ಅತೀವ ಸಂತೋಷವಾಯಿತು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಆರ್ಯಾಪು ಗ್ರಾ.ಪಂ. ಅಮೃತ ಉದ್ಯಾನವನ ಹಾಗೂ ತಾಲೂಕಿನ ಏಕೈಕ ಬೀಕೊನ್ ಡಿಜಿಟಲ್ ಗ್ರಂಥಾಲಯವನ್ನು ಅ. 17ರಂದು ಉದ್ಘಾಟಿಸಿ ಅವರು ಮಾತನಾಡಿದರು.


ಕಾನೂನಿನ ಹಿಂದೆ ನಾವು ಹೋಗುವುದಲ್ಲ. ಜನಪ್ರತಿನಿಧಿಗಳಾದ ನಾವು ಕಾನೂನು ತೊಡಕು ಪರಿಹರಿಸಿಕೊಂಡು ಜನರ ಕೆಲಸ ಮಾಡಿಕೊಡಬೇಕು. ಬಡವರಿಗೆ ಮಾಹಿತಿ ಕೊರತೆಯಿರುತ್ತದೆ. ಅವರಿಗೆ ಸರಿಯಾದ ಮತ್ತು ಪ್ರಾಮಾಣಿಕ ಸೇವೆಯನ್ನು ಜನಪ್ರತಿನಿಧಿಗಳು ಮತ್ತು ಪಂಚಾಯತ್‌ ಸಿಬ್ಬಂದಿಗಳು ಮಾಡಬೇಕು? ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ಹೋರಾಟದ ರೂವಾರಿಯಾಗಲಿದ್ದೇನೆ: ಪ್ರತೀ ಹಳ್ಳಿಯ ಜನರೂ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ವಿದ್ಯುತ್‌ನಿಂದ ವಂಚಿತರಾಗಬಾರದು. ಇದಕ್ಕಾಗಿ ನಾನು ಹೋರಾಟ ಮಾಡಲೂ ಸಿದ್ಧನಿದ್ದೇನೆ. ಈ ಹೋರಾಟಗಳಿಗೆ ನಾನೇ ರೂವಾರಿಯಾಗಲಿದ್ದೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಒಂದೂವರೆ ವರ್ಷದಲ್ಲಿ ಬಹುಗ್ರಾಮ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಈಗಾಗಲೇ 230 ಕೋಟಿ ರೂ. ಟೆಂಡ‌ರ್ ಆಗಿ ಕಾಮಗಾರಿ ಪ್ರಕ್ರಿಯೆ ಆರಂಭಗೊಂಡಿದೆ. ಇದರಿಂದ ಪುತ್ತೂರು ಹಾಗೂ ಸುಳ್ಯ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಶುದ್ದೀಕರಿಸಿದ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಶಾಸಕರು ಹೇಳಿದರು.


ಅಭಿವೃದ್ಧಿಯಲ್ಲಿ ರಾಜಕೀಯವಿಲ್ಲ : 5 ವರ್ಷದಲ್ಲಿ ಏನಾದರೂ ಜನರ


ಸೇವೆ ಮಾಡಿ ಸಾಧನೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯವಿಲ್ಲ. ಬಡವರು ಯಾರೂ ಬೇಕಾದರೂ ಸಹಾಯ, ಸರಕಾರದ ಸವಲತ್ತು ಪಡೆಯುವಲ್ಲಿ ಮುಚ್ಚುಮರೆಯಲ್ಲಿದೇ ನನ್ನ ಬಳಿ ಬನ್ನಿ ಎಂದು ಶಾಸಕರು ಹೇಳಿದರು.


ಸಾರ್ವಜನಿಕ ಮಾಹಿತಿ ಯಂತ್ರ ಜಿಲ್ಲೆಯಲ್ಲೇ ಪ್ರಥಮ ಬಿಕೋನ್ ಡಿಜಿಟಲ್ ಗ್ರಂಥಾಲಯ ವು ವಿಶೇಷ ಚೇತನರಿಗಾಗಿ ಇರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಪುತ್ತೂರು ತಾಲೂಕಿನ ಪ್ರಥಮ ಗ್ರಂಥಾಲಯವಾಗಿದೆ. ಅಲ್ಲದೇ ಈ ಗ್ರಂಥಾಲಯದೊಳಗೆ ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಮಾಹಿತಿ ಒದಗಿಸಬಲ್ಲ ಸಾರ್ವಜನಿಕ ಮಾಹಿತಿ ಪರದೆ ಡಿಜಿಟಲ್ ಇನ್‌ಫಾರ್ಮೆಶನ್ ಡಿಸ್‌ಪ್ಲೇ ಯಂತ್ರವನ್ನೂ ಅಳವಡಿಸಲಾಗಿದೆ. ಇದು ಜಿಲ್ಲೆಯಲ್ಲೇ ಪ್ರಥಮ ఎనిసిండిదే.


ಅಮೃತ ಉದ್ಯಾನವನ ಉದ್ಘಾಟನೆ

ಕಾನೂನು ತೊಡಕು ನಿವಾರಿಸಿ ಜನರ ಸೇವೆ ಮಾಡಬೇಕು ನಿರ್ವಹಣೆ ಮುಖ್ಯ

 ಸದಸ್ಯರೆಲ್ಲರೂ ಸೇರಿ ಉದ್ಯಾನವನ ನಿರ್ವಹಣೆ ಮಾಡಬೇಕು. ನಿರ್ವಹಣೆ ಮಾಡದಿದ್ದಲ್ಲಿ ಅದರ ಪ್ರಯೋಜನವಿಲ್ಲ. ಪರಿಸರಕ್ಕೆ ಪ್ರಯೋಜನ ಕೊಡುವ ಕೆಲಸವಾಗಬೇಕು. ಪ್ರಾಣಿ ಪಕ್ಷಿಗಳಿಗೆ ತಿನ್ನುವುದಕ್ಕಾದರೂ ಜಾಗ ಸಿಕ್ಕಲ್ಲಿ ಒಂದಷ್ಟು ಹಣ್ಣಿನ ಗಿಡಗಳನ್ನು ನೆಡಬೇಕು. ಆ ವಿಶೆಯಲ್ಲಿ ಆರ್ಯಾವು ಪಂಚಾಯತ್ ಒಂದು ಹೆಜ್ಜೆ ಮುಂದಿದೆ ಎಂದು ಶಾಸಕರು ಪ್ರಶಂಸೆ ವ್ಯಕ್ತಪಡಿಸಿದರು.


ಪುಸ್ತಕ ಓದಿ ಆರೋಗ್ಯ ಹೆಚ್ಚಿಸಿಕೊಳ್ಳಿ: ಜನಸಮೂಹವನ್ನು ಜ್ಞಾನದ ರೂಪಕ್ಕೆ ಪರಿವರ್ತಿಸಬೇಕಾದರೆ ಜ್ಞಾನ ಭಂಡಾರ ಅಗತ್ಯ. ಲೈಬ್ರರಿ ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ. ಸಾರ್ವಜನಿಕರು ಈ ವ್ಯವಸ್ಥೆಯ ಪ್ರಯೋಜನ ಪಡೆಯಿರಿ, ಪುಸ್ತಕ ಓದಿ. ಜ್ಞಾನದ ಜೊತೆಗೆ ಆರೋಗ್ಯ ಸುಧಾರಿಸಿಕೊಳ್ಳಲು ಇದು ಅನುಕೂಲವಾಗುತ್ತದೆ ಎಂದು ಅಶೋಕ್ ರೈಯವರು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.


ಸಭಾಧ್ಯಕ್ಷತೆ ವಹಿಸಿದ್ದ ಪಂಚಾಯತ್ ಅಧ್ಯಕ್ಷೆ ಗೀತಾರವರು ಮಾತನಾಡಿ ಮೂಲಸೌಕರ್ಯಕ್ಕಾಗಿ ಹೆಚ್ಚಿನ ಅನುದಾನ ಒದಗಿಸಲು, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೇರಿದಂತೆ ಹಲವು ರೀತಿಯ ಅನುದಾನಕ್ಕಾಗಿ ಶಾಸಕರಿಗೆ ಮನವಿ ಸಲ್ಲಿಸಿದರು.


ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯಾರವರು ಮಾತನಾಡಿ ಗ್ರಂಥಾಲಯ ನಾಮಕೇವಾಸ್ತೆಯಾಗಿ ಉಳಿಯಬಾರದು. ಬಳಕೆ, ನಿರ್ವಹಣೆ, ಸ್ವಚ್ಛತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸಿಕೊಳ್ಳಬೇಕಾದದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.


ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಅಶೋಕ್ ಕುಮಾರ್ ಉಪಸ್ಥಿತರಿದ್ದರು.


ಅಭಿನಂದನೆ: ಆರ್ಯಾಪು ಕುರಿಯ ಗ್ರಾಮಸ್ಥರ ಪರವಾಗಿ ಶಾಸಕ ಅಶೋಕ್ ಕುಮಾರ್ ರೈ ಯವರನ್ನು ಇದೇ ವೇಳೆ ಸನ್ಮಾನಿಸಿ ಅಭಿನಂದಿಸಲಾಯಿತು.


ಪಿಡಿಒ ನಾಗೇಶ್ ರವರು ಪ್ರಸ್ತಾವನೆಗೈದು ಸ್ವಾಗತಿಸಿ, ಸ್ವಾತಂತ್ರೋತ್ಸವದ 75 ವರ್ಷಗಳ ನೆನಪಿಗಾಗಿ ಅಮೃತ ಗ್ರಾಮ ಪಂಚಾಯತ್ ಗೆ ಆಯ್ಕೆಯಾಗಿರುವ ರಾಜ್ಯದ 750 ಗ್ರಾ.ಪಂ. ಗಳಲ್ಲಿ ಆರ್ಯಾಪು ಕೂಡಾ ಒಂದಾಗಿದೆ. ಇದರ ಅಂಗವಾಗಿ ಡಿಜಿಟಲ್ ಬಿಕೊನ್ ಗ್ರಂಥಾಲಯ ನಿರ್ಮಾಣಗೊಂಡಿದೆ ಎಂದರು. ಮಹಾತ್ಮ ಗಾಂಧಿಯವರ ಕನಸಿನಂತೆ ಹಳ್ಳಿಯ ವಿಧಾನಸಭೆ ಅಭಿವೃದ್ಧಿಯಾಗಬೇಕು. ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಹಂತ ಹಂತಗಳ ಯೋಜನೆಗಳಿಗೆ ಬೆಂಬಲವಾಗಿ ನಿಂತದ್ದು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಾಗಿದೆ. ಗ್ರಾಮೀಣ ಭಾಗದ ಜನರಿಗೆ ವಿಹಾರ ಕಲ್ಪಿಸಿಕೊಡುವ ನಿಟ್ಟಿನಲ್ಲಿ ರೂ. 5 ಲಕ್ಷ ಉದ್ಯೋಗ ಖಾತ್ರಿ ಮತ್ತು ರೂ. 1.5 ಲಕ್ಷ ಅಮೃತ ಗ್ರಾಮ ಪಂಚಾಯತ್ ಯೋಜನೆಯಲ್ಲಿ ಸಂಟ್ಯಾರ್ ಬಳಿ ಆಮೃತ ಉದ್ಯಾನವನ ನಿರ್ಮಿಸಲಾಗಿದೆ. ರೂ. 4 ಲಕ್ಷ ಅಮೃತ ಗ್ರಾಮ ಪಂಚಾಯತ್ ಯೋಜನೆ, ರೂ. 1 ಲಕ್ಷ ಗ್ರಾ.ಪಂ. ಗ್ರಂಥಾಲಯ ಉಪಕರಣ ಹಾಗೂ ರೂ. 1 ಲಕ್ಷ 15ನೇ ಹಣಕಾಸು ಯೋಜನೆಯಲ್ಲಿ ತಾಲೂಕಿನ ಏಕೈಕ ಬಿಕೋನ್ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗಿದೆ ಎಂದು ನಾಗೇಶ್ ಹೇಳಿದರು.


ಮೊದಲ ಡಿಜಿಟಲ್ ಇನ್‌ಫಾರ್ಮೇಶನ್ ಡಿಸ್‌ಪ್ಲೇ ಮೆಷಿನ್: ಉದ್ಯಮಿ


ಅಶ್ರಫ್ ಕಮ್ಮಾಡಿಯವರ ಕೊಡುಗೆಯ ರೂ. 1.20 ಲಕ್ಷ ವೆಚ್ಚದ ಡಿಜಿಟಲ್ ಇನ್ಸಾರ್ಮೇಶನ್ ಡಿಸ್‌ಪ್ಲೇ ಯಂತ್ರವನ್ನು ಗ್ರಂಥಾಲಯದಲ್ಲಿ ಅಳವಡಿಸಲಾಗಿದೆ. ಸರಕಾರದ ಎಲ್ಲಾ ಇಲಾಖೆಗಳ ಮಾಹಿತಿಯನ್ನು ಸಾರ್ವಜನಿಕರು ನೇರವಾಗಿ ಇದರಲ್ಲಿ ಪಡೆಯಬಹುದಾಗಿದೆ.


ಇದು ಜಿಲ್ಲೆಯಲ್ಲೇ ಪ್ರಥಮವಾಗಿದೆ. ಈ ವೇಳೆ ಕೊಡುಗೈ ದಾನಿ ಆಶ್ರಫ್ ಕಮ್ಮಾಡಿಯವರಿಗೆ

ಕೃತಜ್ಞತೆ ಸಲ್ಲಿಸಲಾಯಿತು.


ಗೌರವಾರ್ಪಣೆ: ಗ್ರಂಥಾಲಯದ ಕಾಮಗಾರಿ ವಹಿಸಿಕೊಂಡ ಗುತ್ತಿಗೆದಾರ ಸುರೇಂದ್ರ ರೈ ಬಳ್ಳಮಜಲು, ಮನರೇಗಾ ಸಾಮಾಗ್ರಿ ಪೂರೈಕೆ ಮಾಡಿದ ಪವನ್ ಶೆಟ್ಟಿ, ನರೇಗಾ ಇಂಜಿನಿಯರ್ ಪ್ರಶಾಂತಿ ಹಾಗೂ ಶ್ರೀಲಕ್ಷ್ಮಿಯವರಿಗೆ ಗೌರವ ಸ್ಮರಣಿಕೆ ನೀಡಲಾಯಿತು.


ಬಹುಮಾನ ವಿತರಣೆ: ಗ್ರಂಥಪಾಲಕರ ದಿನಾಚರಣೆಯ ಅಂಗವಾಗಿ ನಡೆದ ಮಕ್ಕಳ ಪ್ರಬಂಧ ಸ್ಪರ್ಧಾ ವಿಜೇತರಾದ ಪೂಜಾ ಶ್ರೀ, ದೀಕ್ಷಾ ಎಂ., ಧನ್ಯ ಶ್ರೀ ಯವರಿಗೆ ಬಹುಮಾನ ವಿತರಿಸಲಾಯಿತು. ಸದಸ್ಯೆ ಪವಿತ್ರ ಎನ್. ವಂದಿಸಿದರು. ಸದಸ್ಯ ನೇಮಾಕ್ಷ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಅತಿಥಿಗಳನ್ನು ತಾಂಬೂಲ, ಶಾಲು ನೀಡಿ ಪಂಚಾಯತ್ ಸದಸ್ಯರಾದ ಬೂಡಿಯಾರ್ ಪುರುಷೋತ್ತಮ ರೈ ಮಾಜಿ ಅಧ್ಯಕ್ಷೆ ಸರಸ್ವತಿ, ಮಾಜಿ ಉಪಾಧ್ಯಕ್ಷೆ ಪೂರ್ಣಿಮಾ ರೈ, ಸದಸ್ಯರಾದ ವಸಂತ ಶ್ರೀದುರ್ಗಾ, ಯಾಕೂಬ್ ಯಾನೆ ಸುಲೈಮಾನ್ ಗೌರವಿಸಿದರು. ಪಂಚಾಯತ್ ಸದಸ್ಯರು, ಉದ್ಯೋಗ ಖಾತ್ರಿ ಇಂಜಿನಿಯರ್ ಗಳು, ಆರೋಗ್ಯ ಕಾರ್ಯಕರ್ತೆಯರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮಧ್ಯಾಹ್ನ ಪಂಚಾಯತ್ ವತಿಯಿಂದ ಭೋಜನ ವ್ಯವಸ್ಥೆ ಮಾಡಲಾಗಿತ್ತು.


ಉದ್ಘಾಟನೆ: ಸಭಾ ಕಾರ್ಯಕ್ರಮಕ್ಕೂ ಮೊದಲು ಸಂಟ್ಯಾರ್ ಬಳಿ ನಿರ್ಮಾಣಗೊಂಡಿರುವ ಅಮೃತ ಉದ್ಯಾನವನವನ್ನು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದ ಶಾಸಕರು ಬಳಿಕ ಉದ್ಯಾನವನದೊಳಗೆ ಗಿಡಗಳಿಗೆ ನೀರೆರೆದರು. ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿಗಳ ಜೊತೆಗೆ ಗಾರ್ಡನ್‌ ನಲ್ಲಿ ಫೋಟೋ ತೆಗೆಸಿಕೊಂಡರು. ಬಳಿಕ ಪಂಚಾಯತ್ ಕಚೇರಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಬಿಕೋನ್ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿದರು. ಇರ್ದೆ ಶ್ರೀ ವಿಷ್ಣು ಚೆಂಡೆ ಮೇಳದವರಿಂದ ಚೆಂಡೆ ಮೇಳ ಆಕರ್ಷಣೆಯಾಗಿತ್ತು.

ಸಂಜೀವ ಮಠಂದೂರಿಗೆ ಪುತ್ತೂರು ಮಂಡಲ ಅಧ್ಯಕ್ಷ ಪಟ್ಟ

Posted by Vidyamaana on 2024-02-05 13:20:13 |

Share: | | | | |


ಸಂಜೀವ ಮಠಂದೂರಿಗೆ ಪುತ್ತೂರು ಮಂಡಲ ಅಧ್ಯಕ್ಷ ಪಟ್ಟ

ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಸಂಜೀವ


ಮಠಂದೂರು ಅವರನ್ನು ಪುತ್ತೂರು ಮಂಡಲದ ಅಧ್ಯಕ್ಷರನ್ನಾಗಿ ನೇಮಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದು ಹರಿದಾಡುತ್ತಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಅವರ ಸಹಿ ಇರುವ ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಲೆಟರ್‌ಹೆಡ್‌ನ ಈ ಪಟ್ಟಿಯಲ್ಲಿ ಸಂಜೀವ ಮಠಂದೂರು ಅವರನ್ನು ಪುತ್ತೂರು ಮಂಡಲ ಅಧ್ಯಕ್ಷರಾಗಿ ನೇಮಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ ಇದು ನಕಲಿ ಪತ್ರ ಎಂದು ಹೇಳಲಾಗಿದೆ. ಈ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ರವರು ಪತ್ರ ಮತ್ತು ಪಟ್ಟಿಯ ಬಗ್ಗೆ ಸ್ಪಷ್ಟನೆ ನೀಡಿದ್ದು ಇದೊಂದು ನಕಲಿ ಪಟ್ಟಿ ಎಂದು ಸ್ಪಷ್ಟಪಡಿಸಿದ್ದಾರೆ.

ಪುತ್ತೂರು : ಮದುವೆಗೂ ಮುಂಚೆ ಮತ ಚಲಾಯಿಸಿದ ಮದುಮಗಳು

Posted by Vidyamaana on 2024-04-26 18:30:10 |

Share: | | | | |


ಪುತ್ತೂರು : ಮದುವೆಗೂ ಮುಂಚೆ ಮತ ಚಲಾಯಿಸಿದ ಮದುಮಗಳು

ಪುತ್ತೂರು : ಇಂದು (ಏ.26) ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಮದುಮಗಳು ಮದುವೆಗೂ ಮುಂಚೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು.

ಚಂದ್ರಯಾನ 3: ಮೊಬೈಲ್​​ನಲ್ಲೇ ಚಂದ್ರಯಾನ 3 ವೀಕ್ಷಿಸಲು ಇಲ್ಲಿದೆ ನೇರ ಲಿಂಕ್​

Posted by Vidyamaana on 2023-07-14 09:08:26 |

Share: | | | | |


ಚಂದ್ರಯಾನ 3: ಮೊಬೈಲ್​​ನಲ್ಲೇ ಚಂದ್ರಯಾನ 3 ವೀಕ್ಷಿಸಲು ಇಲ್ಲಿದೆ ನೇರ ಲಿಂಕ್​

Chandrayaan 3: ದೇಶದ ಜನತೆ ಕಾತುರದಿಂದ ಕಾಯುವ ಕ್ಷಣ ಇನ್ನಷ್ಟು ಸಮೀಪಿಸುತ್ತಿದೆ. ಚಂದ್ರನ ಅಂಗಳಲದಲ್ಲಿ ಅಧ್ಯಯನ ನಡೆಸುವ ಸಲುವಾಗಿ ಭಾರತವು ಮೂರನೇ ಬಾರಿಗೆ ಉಪಗ್ರಹಗಳನ್ನು ಕಳುಹಿಸಿಕೊಡ್ತಿದೆ. ಹೀಗಾಗಿ ಇಡೀ ವಿಶ್ವದ ಚಿತ್ತ ಆಂಧ್ರದ ಶ್ರೀಹರಿಕೋಟದ ಮೇಲೆ ನೆಟ್ಟಿದೆ.ಚಂದ್ರನ ಅಂಗಳಕ್ಕೆ ರಾಕೆಟ್​ ಉಡಾವಣೆ ಮಾಡುವ ಇಸ್ರೋದ ಪ್ರಯತ್ನ ವಿಫಲವಾಗಿತ್ತು. ಅಂದು ಇಸ್ರೋ ಮುಖ್ಯಸ್ಥ ಶಿವನ್​ ಜೊತೆಯಲ್ಲಿ ಇಡಿ ದೇಶವೇ ಭಾವುಕವಾಗಿತ್ತು. ಆದರೆ ಇಂದು ಚಂದ್ರಯಾನ 3 ಖಂಡಿತವಾಗಿಯೂ ಯಶಸ್ವಿಯಾಗುತ್ತೆ ಎಂಬ ನಂಬಿಕೆಯಲ್ಲಿ ಇಸ್ರೋ ಇದೆ.



ಇನ್ನು ಚಂದ್ರಯಾನ 3ರ ಉಡಾವಣೆಯನ್ನು ನೀವು ಮೊಬೈಲ್​ನಲ್ಲಿಯೇ ವೀಕ್ಷಿಸಬಹುದಾಗಿದೆ. The launch can be http://isro.gov.in ಹಾಗೂ https://facebook.com/ISRO ಮತ್ತು https://youtube.com/watch?v=q2ueCg9bvvQ ನಲ್ಲಿ ನೇರವಾಗಿ ಚಂದ್ರಯಾನವನ್ನು ವೀಕ್ಷಣೆ ಮಾಡಬಹುದಾಗಿದೆ .ಸರಿಯಾಗಿ 2:35ಕ್ಕೆ ಶ್ರೀಹರಿಕೋಟದಿಂದ ರಾಕೆಟ್ ಉಡಾವಣೆಯಾಗಲಿದೆ.

ಪಕ್ಷಕ್ಕಿಂತ ದೊಡ್ಡ ಮಿತ್ರನಿಲ್ಲ- ಪಕ್ಷ ಬಿಟ್ಟು ಹೋದವರು ಮಿತ್ರನೂ ಅಲ್ಲ- ಪಾಲುದಾರನೂ ಅಲ್ಲ

Posted by Vidyamaana on 2023-05-02 10:12:45 |

Share: | | | | |


ಪಕ್ಷಕ್ಕಿಂತ ದೊಡ್ಡ ಮಿತ್ರನಿಲ್ಲ- ಪಕ್ಷ ಬಿಟ್ಟು ಹೋದವರು ಮಿತ್ರನೂ ಅಲ್ಲ- ಪಾಲುದಾರನೂ ಅಲ್ಲ

ಪುತ್ತೂರು: ಪಕ್ಷಕ್ಕೆ ತನಗೆ ಎಲ್ಲಾ ಹುದ್ದೆಗಳನ್ನು ನೀಡಿದೆ. ಪಕ್ಷಕ್ಕೆ ತಾನು ಬದ್ಧನಾಗಿರದೇ ಇದ್ದರೆ, ತಾನು ಪ್ರಾಣಿಯಂತೆ. ಆದ್ದರಿಂದ ಪಕ್ಷದಿಂದ ಹೊರಹೋದವರು ತನ್ನ ಮಿತ್ರನೂ ಅಲ್ಲ, ಪಾಲದಾರನೂ ಅಲ್ಲ ಎಂದು ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಪುತ್ತೂರಿನ ಬಿಜೆಪಿ‌‌ ಚುನಾವಣಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಸಂದರ್ಭ, ನಿಮ್ಮ ಆಪ್ತಮಿತ್ರ ಅಶೋಕ್ ರೈ ಅವರು ಕಾಂಗ್ರೆಸಿಗೆ ಸೇರಿದ್ದಾರೆ ಎಂದಾಗ, ತಾನು ಆಪ್ತಮಿತ್ರನಲ್ಲ. ಆಪ್ತಮಿತ್ರ ವಿಷ್ಣುವರ್ಧನ್ ಎಂದಾಗ ಎಲ್ಲರೂ ನಗೆಗಡಲಲ್ಲಿ ತೆಲಿದರು.

ನಾನು ಈಗ್ಲೂ ಹೇಳ್ತೇನೆ, ಬಿಜೆಪಿಯಲ್ಲಿ ಇರುವವರಿಗೆ ನಾನು ಆಪ್ತ ಮಿತ್ರ, ಪಕ್ಷದವರಿಗೆ ನಾನು ಪಾಲುದಾರ. ಪಕ್ಷ ಬಿಟ್ಟು ಹೋದವರಿಗೆ ನಾನು ಆಪ್ತ ಮಿತ್ರನೂ ಅಲ್ಲ, ಪಾಲುದಾರನೂ ಅಲ್ಲ. ಅಶೋಕ್ ರೈಗೆ ನಾನು ಸಹಕಾರ ಮಾಡಿದ್ದೇನೆ ಎನ್ನುವುದನ್ನು ರುಜುವಾತು ಪಡಿಸಿದರೆ, ನೀವು ಹೇಳಿದಂತೆ ನಾನು ಕೇಳ್ತೆನೆ ಎಂದು ಡಿ.ವಿ ಸದಾನಂದ ಗೌಡ ಸವಾಲು ಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಂಜೀವ ಮಠಂದೂರು, ಅಭ್ಯರ್ಥಿ ಆಶಾ ತಿಮ್ಮಪ್ಪ, ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪಿ‌.ಜಿ. ಜಗನ್ನಿವಾಸ್ ರಾವ್, ಗೋಪಾಲಕೃಷ್ಣ ಹೇರಳೆ ಮೊದಲಾದವರು ಉಪಸ್ಥಿತರಿದ್ದರು.

ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ:ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ

Posted by Vidyamaana on 2023-11-03 12:27:34 |

Share: | | | | |


ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ:ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ

ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.


ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.


*ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?*

ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.


*ಏನಿದು ಬ್ರೈಟ್ ಭಾರತ್!?*

ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ನಾಲ್ಕು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಬ್ರೈಟ್ ಭಾರತ್.


*ಈ ಯೋಜನೆಯ ಪೂರ್ಣ ಮಾಹಿತಿ*

ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಪ್ರೋತ್ಸಾಹಕ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.


*ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು!?*

ಈ ಸ್ಕೀಮ್ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ.


*ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದವರಿಗೆ ಏನಿದೆ!?*

ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ, ಸಂಸ್ಥೆಯ ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು.


*ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!?*

ಬ್ರೈಟ್ ಭಾರತ್ ಈ ಸ್ಕೀಮ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು +91 8310880814 ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.


*ಸರ್ಫ್ರೈಸ್ ಗಿಫ್ಟ್ ಏನು!? ಮತ್ತು ಅದಕ್ಕೆ ಯಾರೆಲ್ಲ ಅರ್ಹರಾಗುತ್ತಾರೆ!?*

ಈ ಸ್ಕೀಮ್ ಯೋಜನೆಯಲ್ಲಿ, ಪ್ರತಿ ತಿಂಗಳು ಕೂಡ ಹತ್ತು ಸರ್ಫ್ರೈಸ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಒಂಬತ್ತನೇ ತಾರೀಕಿನಂದು ನಡೆಯುವ ಡ್ರಾದ ಹಣವನ್ನು, ಎರಡನೇ ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್ಫ್ರೈಸ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಈ ಸರ್ಫ್ರೈಸ್ ಗಿಫ್ಟ್ ಗೆ ಅರ್ಹರಾದ ಸದಸ್ಯರಲ್ಲಿ, ಹತ್ತು ಮಂದಿ ವಿಜೇತ ಸದಸ್ಯರು, ಬೋನಸ್ ಸರ್ಪ್ರೈಸ್ ಗಿಫ್ಟನ್ನು ಪಡೆದುಕೊಳ್ಳಲಿದ್ದಾರೆ. ಇದೀಗ ಬ್ರೈಟ್ ಭಾರತ್ ಕಂಪೆನಿಯೂ, ಪ್ರಥಮ ತಿಂಗಳ ಸರ್ಫ್ರೈಸ್ ಗಿಫ್ಟನ್ನು ಘೋಷಿಸಿದ್ದು, ಅದ್ರಷ್ಟ ಹತ್ತು ಮಂದಿ ಚಿನ್ನದ ಉಂಗುರವನ್ನು, ಬೋನಸ್ ರೂಪದಲ್ಲಿ ಪಡೆದುಕೊಳ್ಳಲಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು ಎಂದು ಬ್ರೈಟ್ ಭಾರತ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.


Call&Whatsapp: +91 8310880814


ಅಥವಾ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು.

https://chat.whatsapp.com/LfruZyWP0DK7QaDk67bvjd



Leave a Comment: