Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2023-12-25 12:55:35 |
ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ.ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ನಿತ್ಯಾ (19) ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಯುವತಿ. ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಗೊರೂರು ಅರಳಿಕಟ್ಟೆ ನಿವಾಸಿ ಗಿರೀಶ್ ಎಂಬುವವರ ಪುತ್ರಿ ನಿತ್ಯಾ, ಹನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದರು. ತಮ್ಮ ಸಂಬಂಧಿಕರೊಂದಿಗೆ ಅರಳಿಕಟ್ಟೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದರು.ಪೂಜೆ ಸಲ್ಲಿಸಿ, ಪ್ರಸಾದ ಸೇವಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ನಿತ್ಯಾ ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲೇ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕದಳ ಭೇಟಿ ನೀಡಿದ್ದು,ನಿತ್ಯಾ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2024-02-15 07:24:48 |
ಜಿರಳೆಗಳು ಎಂದರೆ ಎಂತಹ ಧೈರ್ಯವಂತರಿಗೂ ಭಯ. ಮನೆಯಲ್ಲಿ ಜಿರಳೆಗಳು ಹೆಚ್ಚಾದರೆ ಕಾಯಿಲೆ ಕೂಡ ಹೆಚ್ಚಾದಂತೆ ಎಂದು ಹೇಳುತ್ತಾರೆ. ಮನೆಯಲ್ಲಿ ಮಕ್ಕಳು ಮತ್ತು ವಯಸ್ಸಾದವರು ಇದ್ದರೆ ಅವರ ಬಗ್ಗೆ ಎಚ್ಚರಿಕೆ ವಹಿಸಬೇಕು. ಜಿರಳೆಗಳು ಅಡ್ಡಾಡಿದ ಆಹಾರ ಸೇವನೆ ಮಾಡಬಾರದು, ಏಕೆಂದರೆ ಅದರಿಂದ ಹತ್ತಾರು ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ.ಹೀಗಾಗಿ ಜಿರಳೆಗಳ ನಿವಾರಣೆ ಮಾಡುವುದು ಅತ್ಯಗತ್ಯವಾಗಿದೆ.
ಬೋರಿಕ್ ಆಸಿಡ್
ಜಿರಳೆಗಳನ್ನು ಕೆರಳಿಸಲು ಅತ್ಯುತ್ತಮ ಪರಿಹಾರಗಳಲ್ಲಿ ಒಂದಾಗಿದೆ. ಬೋರಿಕ್ ಆಸಿಡ್ ಅನ್ನು ಹೆಚ್ಚಿನ ದೈನಂದಿನ ಅಗತ್ಯ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ಜಿರಳೆ ಸಂಪರ್ಕಕ್ಕೆ ಬರುವ ಮೂಲೆ ಮತ್ತು ಮೂಲೆಯಲ್ಲಿ ಸ್ವಲ್ಪ ಬೋರಿಕ್ ಆಮ್ಲದ ಪುಡಿಯನ್ನು ಹಾಕಿದರೆ ಸಾಕು.
ಬೇಕಿಂಗ್ ಸೋಡಾ
ಕೂಡ ಜಿರಳೆಯನ್ನು ದೂರ ಮಾಡಲು ಸಹಾಯ ಮಾಡುತ್ತದೆ. ಸಕ್ಕರೆ ಮತ್ತು ಬೇಕಿಂಗ್ ಸೋಡಾಗಳ ಸಂಯೋಜನೆಯು ಜಿರಳೆಗಳ ಸಂತಾನೋತ್ಪತ್ತಿಯನ್ನುತಡೆಗಟ್ಟುವ ಅತ್ಯುತ್ತಮ ಮಾರ್ಗಗಳಲ್ಲಿ ಒಂದಾಗಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ಈ ಜಿರಳೆಗಳು ನಿಮ್ಮ ಮನೆಯಲ್ಲಿ ಹಾದು ಹೋಗುವ ಸ್ಥಳವನ್ನು ಕಂಡುಕೊಂಡು ಆ ಜಾಗದಲ್ಲಿ ಇದನ್ನು ಸಿಂಪಡಿಸಿ.
ಬೇವು
ಭಾರತದಲ್ಲಿ ವಿವಿಧ ಪ್ರದೇಶಗಳಿಗೆ ಬಳಸುವ ಅತ್ಯುತ್ತಮ ಪರಿಹಾರಗಳಲ್ಲಿ ಒಂದಾಗಿದೆ. ಬೇವು, ಪುಡಿಯಾಗಿ ಮತ್ತು ಎಣ್ಣೆಯಾಗಿ ದೊರೆಯುತ್ತದೆ. ಇವು ಜಿರಳೆಗಳನ್ನು ಕೊಲ್ಲಲು ಸಹಾಯ ಸಹಾಯ ಮಾಡುತ್ತದೆ. ಸಣ್ಣ ಪ್ರಮಾಣದ ಬೇವಿನ ಎಣ್ಣೆ ಮತ್ತು ನೀರನ್ನು ಮಿಶ್ರಣ ಮಾಡಬೇಕು ಮತ್ತು ಅದನ್ನು ಸ್ಪ್ರೇ ಬಾಟಲಿಯಲ್ಲಿ ಸಂಗ್ರಹಿಸಬೇಕು, ಜಿರಳೆಗಳು ಓಡಾಡುವ ಜಾಗದಲ್ಲಿ ಸಿಂಪಡಿಸಬೇಕು.
ಪೆಪ್ಪರ್ ಮಿಂಟ್
ಎಣ್ಣೆಯನ್ನು ಮನೆಯಲ್ಲಿ ಜಿರಳೆಗಳನ್ನು ಕೆರಳಿಸಲು ಬಳಸಬಹುದು. ಸಮಪ್ರಮಾಣದ ಪುದೀನಾ ಎಣ್ಣೆ ಮತ್ತು ನೀರನ್ನು ಸ್ವಲ್ಪ ಉಪ್ಪಿನೊಂದಿಗೆ ಬೆರೆಸಿ ಸ್ಪ್ರೇ ಬಾಟಲಿಯಲ್ಲಿ ಸಂಗ್ರಹಿಸಿ ಮತ್ತು ಜಿರಳೆಗಳ ಮೇಲೆ ಸಿಂಪಡಿಸಿದರೆ ಜಿರಳೆ ಕೂಡಲೇ ಓಡಿ ಹೋಗುತ್ತದೆ.
ಬೇ ಎಲೆಗಳು
ಅಂದರೆ ಪಲಾವ್ ಎಲೆಗಳು ಪ್ರತಿಯೊಂದು ಮನೆಯಲ್ಲೂ ಕಂಡುಬರುವ ಸಾಮಾನ್ಯ ಪದಾರ್ಥಗಳಲ್ಲಿ ಒಂದಾಗಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ಬೇ ಎಲೆಗಳನ್ನು ಪುಡಿಮಾಡುವುದು ಮತ್ತು ಕಪಾಟಿನ ಮೂಲೆಗಳಲ್ಲಿ ಇಡುವುದು, ಇದು ಜಿರಳೆಗಳನ್ನು ನಿವಾರಿಸುತ್ತದೆ.
ಸೀಮೆ ಎಣ್ಣೆ
ಸಹ ಜಿರಳೆಗಳನ್ನು ದೂರ ಮಾಡಲು ಸಹಾಯ ಮಾಡುತ್ತದೆ. ಅದಕ್ಕಾಗಿ ನೀವು ಜೆರಳೆಗಳು ಹೆಚ್ಚಾಗಿ ಓಡಾಡುವ ಜಾಗದಲ್ಲಿ ಸೀಮೆ ಎಣ್ಣೆಯನ್ನು ಸಿಂಪಡಿಸಿದರೆ ಸಾಕು, ಸೀಮೆಎಣ್ಣೆಯ ಗಾಢ ಪರಿಮಳಕ್ಕೆ ಜಿರಳೆಗಳು ಅಲ್ಲಿಂದ ದೂರ ಓಡುತ್ತವೆ. ಅಲ್ಲದೆ ಜಿರಳೆ ಸಾಯುವ ಸಾಧ್ಯತೆ ಕೂಡ ಹೆಚ್ಚಾಗಿದೆ.
ಲವಂಗಗಳ ಬಳಕೆ
ಲವಂಗವನ್ನು ಕಿಚನ್ ಡ್ರಾಯರ್ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.
Posted by Vidyamaana on 2024-04-11 07:34:41 |
ಮುಂಬೈ ಕುರ್ಲಾ ದಲ್ಲಿರುವ ಬಂಟರ ಸಂಘದ ಕೇಂದ್ರ ಕಚೇರಿಗೆ ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿದರು.
ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬಿ ಶೆಟ್ಟಿ ಅವರು ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೌರವಿಸಿ, ಹಾರೈಸಿದರು.
Posted by Vidyamaana on 2023-10-07 12:45:59 |
ಹಾವೇರಿ, ಅಕ್ಟೋಬರ್ 4: ಮೂರು ಮಕ್ಕಳ ತಾಯಿಯೊಬ್ಬರು (Mother) ಲಿಂಗ ಪರಿವರ್ತನೆಗೆ ಮುಂದಾಗಿದ್ದಾರೆ. ಮಂಗಳಮುಖಿಯ (Transgender) ಸ್ನೇಹದಿಂದಾಗಿ ಸದರಿ ಮಹಿಳೆಯು ಈ ಪರಿವರ್ತನೆ ಬಯಸಿದ್ದಾರೆ. ಇದು ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಮಹಿಳೆಯೊಬ್ಬರ ಕಥೆ. ಈ ಮಧ್ಯೆ, ಇದೇ ವಿಷಯವಾಗಿ ರಾಣೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದರಿ ಮಹಿಳೆಯು ಮೂಲತಃ ವಿಜಯಪುರ ಜಿಲ್ಲೆಯವರು. ಸುಮಾರು 40 ವರ್ಷಗಳಿಂದ ರಾಣೇಬೆನ್ನೂರಿನಲ್ಲಿ (Ranebennur, Haveri district) ವಾಸವಿದ್ದಾರೆ. ಮಂಗಳಮುಖಿಯ ಜೊತೆಗೆ ಸ್ನೇಹದಿಂದಾಗಿ ಗಂಡನಿಗೆ ವಿಚ್ಚೇದನ ನೀಡಿ, ಲಿಂಗ ಪರಿವರ್ತನೆಗೆ ಮುಂದಾಗಿದ್ದಾರೆ. ಈ ಮಧ್ಯೆ, ಮಂಗಳಮುಖಿ ಜೊತೆಗಿನ ಸಹವಾಸದಿಂದಾಗಿ ಮಹಿಳೆಗೆ ಡ್ರಗ್ಸ್ ಚಟ ಹತ್ತಿದೆ.ಈ ಬೆಳವಣಿಗಳಿಂದಾಗಿ ಆ ಮಹಿಳೆಯು ಮಂಗಳಮುಖಿಯ ಜೊತೆಗೆ ಜೀವನ ನಡೆಸುವ ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಆದರೆ ಮಹಿಳೆ ಲಿಂಗ ಪರಿವರ್ತನೆ ಬಯಸಿದ್ದರಾದರೂ, ತಾಂತ್ರಿಕ ದೋಷದಿಂದ ಅದು ಸಾಧ್ಯವಾಗಿಲ್ಲ.
ಹಾವೇರಿ ಇಡಾರಿ ಸಂಸ್ಥೆಯ ಮೂಲಕ ಸಮಾಲೋಚನೆ ನಡೆಸಿ ಲಿಂಗ ಪರಿವರ್ತನೆಗೆ ಸದ್ಯ ತಡೆಯೊಡ್ಡಲಾಗಿದೆ. ಸದರಿ ಮಹಿಳೆಯು ತನ್ನ ಜೊತೆಗೆ ತನ್ನ ಎರಡು ಮಕ್ಕಳಿಗೂ ಲಿಂಗ ಪರಿವರ್ತನೆ ಮಾಡಿಸಲು ಮುಂದಾಗಿದ್ದರು ಎಂಬ ಆತಂಕಕಾರಿ ಮಾಹಿತಿ ದೊರೆತಿದೆ.
Posted by Vidyamaana on 2024-04-20 19:47:08 |
ಬೆಳ್ತಂಗಡಿ : ತಲಪಾಡಿ ಕೆ.ಸಿ ರೋಡ್ ನಿವಾಸಿ ಡಾ! ಆದಂ ಉಸ್ಮಾನ್(65) ಅಲ್ಪಕಾಲದ ಅಸೌಖ್ಯದಿಂದ ಎ.20 ರಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.
ಪುತ್ತೂರು,ಕಡಬ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳ ಕಾಲ ಸರಕಾರಿ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದರು.
Posted by Vidyamaana on 2023-12-17 07:30:09 |
ಪುತ್ತೂರು: ಇಲ್ಲಿನ ಧರ್ಮಸ್ಥಳ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ(ಸಮೂಹ), ಜಾನಪದ ನೃತ್ಯ (ಸಮೂಹ), ಮಾನ್ಯಾಧಾರಿತ ಹಾಸ್ಯ ಪ್ರಧಾನ ನಾಟಕ (ಸಮೂಹ), ದೇಶಭಕ್ತಿ ನೃತ್ಯ ರೂಪಕ (ಸಮೂಹ) ಕಾರ್ಯಕ್ರಮ ಡಿ.17 ರಂದು ಜೈನಭವನದಲ್ಲಿ ಬೆಳಗ್ಗೆ 10 ಗಂಟೆಯಿಂದ 8 ರವರೆಗೆ ನಡೆಯಲಿದೆ. ಕಾಠ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಇವರು ನೆರವೇರಿಸಲಿದ್ದಾರೆ.
ನಂತರ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಸ್ಪರ್ಧೆಗಳು ನಡೆಯಲಿದೆ. ಸಭಾಕಾಯಕ್ರಮ ಸಂಜೆ 4 ಗಂಟೆಗೆ ನಡೆಯಲಿದೆ. ಕಾಠ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಿಕೊಳ್ಳಲಿದ್ದಾರೆ. ಕಾಠ್ಯಕ್ರಮದ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.. ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು. ಪಿ. ಶಿವಾನಂದ, ತಾಲೂಕು ಕ.ಸಾ.ಪ. ಅಧ್ಯಕ್ಷ ಉಮೇಶ್ ನಾಯಕ್, ಶಿಕ್ಷಣ ತಜ್ಞೆ ವಚನ ಜಯರಾಮ್, ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಅಪ್ಪಯ್ಯ ಪಿ.ಟಿ ಹಾಗೂ ಸರಿತ ಯಶೋಧ ಬೆಂಗಳೂರು, ವಿದ್ಯಾರ್ಥಿ ಪೋಷಕರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಶೆಟ್ಟಿ ನುಳಿಯಾಲು, ಸುಷ್ಮಾ ಡೆಪ್ಯೂಟಿ ಮ್ಯಾನೇಜರ್, ಐ.ಸಿ.ಐ.ಸಿ.ಐ ಬ್ಯಾಂಕ್ ಬೆಂಗಳೂರು ಹಾಗೂ ಹಿರಿಯ ವಿದ್ಯಾರ್ಥಿನಿ ಪ್ರಗತಿ ಸ್ಟಡಿ ಸೆಂಟರ್, ವಿನಿತಾ ಸಹಾಯಕ ಪ್ರಾಧ್ಯಾಪಕರು, ಕೆ.ಎಲ್.ಇ ಸೊಸೈಟಿ ನಿಜಲಿಂಗಪ್ಪ ಕಾಲೇಜು, ರಾಜಾಜಿ ನಗರ ಬೆಂಗಳೂರು ಹಾಗೂ ಹಿರಿಯ ವಿದ್ಯಾರ್ಥಿನಿ ಪ್ರಗತಿ ಸ್ಟಡಿ ಸೆಂಟರ್ ಹಾಗೂ ಧರ್ಮದೈವ ಚಿತ್ರ ತಂಡದ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕೃತೆ ಗುರುಪ್ರಿಯ ನಾಯಕ್ ಇವರ ತಂಡದವರಿಂದ ಗಾನನೃತ್ಯ ವೈಭವ ಕಾರ್ಯಕ್ರಮವು ಜರುಗಲಿದೆ. ನಂತರ ಪ್ರಗತಿ ಸ್ಟಡಿ ಸೆಂಟರ್ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮಗಳು ಜರುಗಲಿದೆ ಎಂದು ಪ್ರಾಶುಪಾಲರಾದ ಕೆ ಹೇಮಲತಾ ಗೋಕುಲ್ ನಾಥ್ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.