Posted by vidyamaana on 2024-07-03 16:20:08 |
ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು
ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.
ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.
Posted by Vidyamaana on 2024-04-12 16:06:24 |
ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸಲು ಬಂದಿದ್ದರು.
ಸಾವಿರಾರು ಬೆಂಬಲಿಗರೊಂದಿಗೆ ಶಿವಮೊಗ್ಗದ ರಾಮಣ್ಣಶ್ರೇಷ್ಟಿ ಪಾರ್ಕ್ ನಿಂದ ಮೆರವಣಿಗೆ ಮೂಲಕ ಗೋಪಿ ಸರ್ಕಲ್ವರೆಗೂ ತೆರಳಿದ ಬಳಿಕ ನಾಮಪತ್ರ ಸಲ್ಲಿಸಿಸಿದರು. ಈ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಕೆ ಎಸ್ ಈಶ್ವರಪ್ಪ ಪತ್ನಿ ವಿಜಯಲಕ್ಷ್ಮಿ, ಪುತ್ರ ಕಾಂತೇಶ್ ಹಾಗೂ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಮತ್ತು ಆಪ್ತರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು.
Posted by Vidyamaana on 2023-09-28 19:19:10 |
ಮಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ.
ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ
ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
Posted by Vidyamaana on 2022-12-16 13:44:26 |
ಪುತ್ತೂರು: ಲೋಕೋಪಯೋಗಿ ವಿಶೇಷ ಅನುದಾನದಲ್ಲಿ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಚೆಲ್ಯಡ್ಕ ಪುಳಿತ್ತಡಿ ರಸ್ತೆ ಕಾಮಗಾರಿಗೆ 10 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಶಾಸಕ ಸಂಜೀವ ಮಠಂದೂರು ಅವರು ಡಿ. 16ರಂದು ಶಂಕುಸ್ಥಾಪನೆ ನೆರವೇರಿಸಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಜಗನಾಥ್ ರೈ ಕೋರ್ಮಂಡ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬೆಂದ್ರ್ ತೀರ್ಥ ಶಿವಾಜಿ ಫ್ರೆಂಡ್ ಕಾರ್ಯಕರ್ತರು PLD ಬ್ಯಾಂಕ್ ಸದಸ್ಯ ಪ್ರವೀಣ್ ರೈ , ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.
Posted by Vidyamaana on 2023-05-24 08:11:49 |
ಉಡುಪಿ :ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾ ರೇಸ್ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ನಾಲ್ವರು ಚಾಲಕರ ಸಹಿತ ನಾಲ್ಕು ವಾಹನಗಳನ್ನು ಕಾಪು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಉಡುಪಿಯ ಶಾನೂನ್ ಡಿಸೋಜ(25), ಉಡುಪಿ ಕೊಡಂತೂರಿನ ವಿವೇಕ್(23), ಉದ್ಯಾವರ ಗುಡ್ಡೆ ಅಂಗಡಿ ನಿವಾಸಿ ಅಯಾನ್(24) ಹಾಗೂ ಕುಂಜಿಬೆಟ್ಟು ನಿವಾಸಿ ಮಿಶಾಲುದ್ದೀನ್ (23) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಂದ ಮಹೀಂದ್ರಾ ಜೀಪು, ಕ್ರೆಟಾ ಕಾರು, ಫಾರ್ಚುನರ್ ಕಾರು, ಸ್ವಿಫ್ಟ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಬಗ್ಗೆ ಕಾಪು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2023-07-14 08:18:06 |
ಸುಳ್ಯ : ತಮ್ಮಂದಿರು ಸೇರಿ ಅಣ್ಣನನ್ನು ಇರಿದು ಕೊಲೆಗೈದ ಘಟನೆ ಭೀಕರ ಘಟನೆ ಸುಳ್ಯ ಸಂಪಾಜೆಯ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ.
ಆಸ್ತಿ ವಿವಾದ ಹಿನ್ನಲೆಯಲ್ಲಿ ಈ ಹತ್ಯೆ ನಡೆದಿದ್ದು, ಕುದ್ರೆಪಾಯ ನಿವಾಸಿ ಉಸ್ಮಾನ್ ಹತ್ಯೆಯಾದ ದುರ್ದೈವಿ.
ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವಿತ್ತು. ಶುಕ್ರವಾರ ಇವರು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದರು. ಈ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ತೀವ್ರ ಚರ್ಚೆ ನಡೆದು ಕೋಪದ ತೀವ್ರತೆಯಲ್ಲಿ ಸಹೋದರರು ಸೇರಿ ಚೂರಿಯಿಂದ ಇರಿದು ಉಸ್ಮಾನ್ ನನ್ನು ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ.
ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ ಇವರಿಗೆ ಜಾಗವಿದೆ ಎಂದು ತಿಳಿದು ಬಂದಿದೆ. ಸದ್ಯ ಇವರು ಪುತ್ತೂರಿನ ಸಂಪ್ಯದಲ್ಲಿ ನೆಲೆಸಿದ್ದರು ಎನ್ನಲಾಗುತ್ತಿದೆ. ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2023-12-25 18:26:42 |
ನವದೆಹಲಿ: ಪ್ರಯಾಣದಲ್ಲಿ ಕ್ರಾಂತಿ ಮಾಡಲಿದೆ ಎಂದು ಹೇಳಲಾಗಿದ್ದ ಹೈಪರ್ಲೂಪ್ ಯೋಜನೆ ಆರಂಭಕ್ಕೂ ಮುನ್ನವೇ ಅಂತ್ಯಗೊಂಡಿದೆ. ನಂ.1 ಶ್ರೀಮಂತ ಎಲಾನ್ ಮಸ್ಕ್ ಆರಂಭಿಸಿದ್ದ ಹೈಪರ್ಲೂಪ್ ಒನ್ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೈಪರ್ಲೂಪ್ ಯೋಜನೆ ಅಂತ್ಯವಾಗಿರುವ ಕುರಿತಾಗಿ ವರದಿ ಪ್ರಕಟಿಸಿರುವ ಬ್ಲೂಮ್ಬರ್ಗ್, ಹೈಪರ್ಲೂಪ್ ಒನ್ ಯೋಜನೆಯಲ್ಲಿ ಹಣ ತೊಡಗಿಸಿದ್ದ ರಿಚರ್ಡ್ ಬ್ರಾನ್ಸನ್ ತಮ್ಮ ಹಣವನ್ನು ಹಿಂಪಡೆದುಕೊಂಡಿದ್ದಾರೆ.ಅಲ್ಲದೇ ಈ ಕಂಪನಿಯಲ್ಲಿರುವ ಉಳಿದ ನೌಕರರನ್ನು ಮುಂದಿನ ವರ್ಷಾಂತ್ಯದ ವೇಳೆಗೆ ವಜಾ ಮಾಡಲಾಗುತ್ತದೆ ಎಂದು ಹೇಳಿದೆ.
ಬೆಂಗಳೂರಿನಲ್ಲೂ ಆರಂಭಕ್ಕೆ ಚರ್ಚೆ
ಹೈಪರ್ಲೂಪ್ ಯೋಜನೆಯನ್ನು ಬೆಂಗಳೂರು ವಿಮಾನ ನಿಲ್ದಾಣದಿಂದಲೂ ಆರಂಭಿಸಲು ನಿರ್ಧರಿಸಲಾಗಿತ್ತು. ಬೆಂಗಳೂರು ವಿಮಾನ ನಿಲ್ದಾಣದಿಂದ ನಗರ ಕೇಂದ್ರಕ್ಕೆ ಹೈಪರ್ ಲೂಪ್ ಅಳವಡಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಬಳಿಕ ಡೋನ್ ಟ್ಯಾಕ್ಸಿ ಸೇರಿದಂತೆ ಇತರ ಸಂಚಾರ ವ್ಯವಸ್ಥೆ 7 ಬಗ್ಗೆ ಚಿಂತನೆ ಆರಂಭವಾಗಿತ್ತು.
ಏನಿದು ಹೈಪರ್ಲೂಪ್ಯೋಜನೆ:
ಅಯಸ್ಕಾಂತದ ಶಕ್ತಿಯನ್ನು ಬಳಸಿಕೊಂಡು ಪೈಪ್ ಮುಖಾಂತರ ಅತಿ ವೇಗದ ಸಂಚಾರ ಸೌಲಭ್ಯ ಒದಗಿಸುವುದು ಹೈಪರ್ಲೂಪ್ ಯೋಜನೆಯಾಗಿದೆ. ಇದರಲ್ಲಿ ರೈಲುಗಳು ಗಂಟೆಗೆ 1127 ಕಿ.ಮೀ.ವೇಗದಲ್ಲಿ ಚಲಿಸಲಿದೆ. ಅಲ್ಲದೇ ಇದು ಈಗಿರುವ ಎಲ್ಲಾ ಸಾರಿಗೆ ಸೌಲಭ್ಯಗಳಿಗೆ ಹೋಲಿಸಿದರೆ ಇದು ಹೆಚ್ಚು ಪರಿಸರಸ್ನೇಹಿಯಾಗಿರಲಿದೆ ಎನ್ನಲಾಗಿತ್ತು. ಹೀಗಾಗಿ ಎಲಾನ್ ಮಸ್ಕ್ ಈ ಯೋಜನೆ ಜಾರಿಗೊಳಿಸಲು ತೀರ್ಮಾನಿಸಿ ಹೈಪರ್ಲೂಪ್ ಒನ್ ಯೋಜನೆಯನ್ನು ಆರಂಭಿಸಿದ್ದರು. ಇದಕ್ಕಾಗಿ ಅಮೆರಿಕದ ನೆವಾಡ ಮರುಭೂಮಿಯಲ್ಲಿ ಕೆಲವು ಪ್ರತಿಕೃತಿಗಳನ್ನು ರಚನೆ ಮಾಡಲಾಗಿತ್ತು. ಆದರೆ ಇದರ ಎಂಜಿನಿಯರಿಂಗ್ ವ್ಯವಸ್ಥೆಯ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾದ ಹಿನ್ನಲೆಯಲ್ಲಿ ಮತ್ತು ವಿಶ್ವದ ಯಾವುದೇ ದೇಶಗಳಿಂದಲೂ ಯೋಜನೆ ಆರಂಭಕ್ಕೆ ಪ್ರಸ್ತಾವ ಬರದೇ ಇರುವ ಹಿನ್ನೆಲೆಯಲ್ಲಿ ಯೋಜನೆಯನ್ನು ಕೈಬಿಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಲಾಗಿದೆ.2020ರಲ್ಲಿ ಮೊದಲು ಹೈಪರ್ ಲೂಪ್ನ ಪ್ರಾಯೋಗಿಕ ಸಂಚಾರವನ್ನು ನಡೆಸಲಾಗಿತ್ತು. ಈ ವೇಳೆ 170 ಕಿ.ಮೀ. ವೇಗವನ್ನು ಸಾಧಿಸಲಾಗಿತ್ತು. ಇದಾದ ಬಳಿಕ 2022 ಯೋಜನೆಯನ್ನು ಬದಲಾಯಿಸಿರುವುದಾಗಿ ಘೋಷಿಸಿದ ಮಸ್ಕ್, ಜನರ ಬದಲು ಸರಕನ್ನು ಇದರಲ್ಲಿ ಸಾಗಿಸಲು ನಿರ್ಧರಿ ಸಲಾಗಿದೆ ಎಂದು ಹೇಳಿದ್ದರು. ಇದಾದ ಬಳಿಕ ಒಂದಷ್ಟು ಹೂಡಿಕೆದಾರರು ಯೋಜನೆಯಿಂದ ಹಿಂದೆ ಸರಿದಿದ್ದರು. ಹೀಗಾಗಿ ಈ ಯೋಜನೆಯನ್ನು ಇದೀಗ ಕೈಬಿಡಲು ನಿರ್ಧರಿಸಲಾಗಿದೆ ಎಂದು ವರದಿ ತಿಳಿಸಿದೆ.