Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2023-08-23 04:24:23 |
ವಿಜಯನಗರ; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.
ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.
Posted by Vidyamaana on 2023-08-07 01:47:24 |
ಬೆಂಗಳೂರು : ರಾಜ್ಯದಲ್ಲಿ ಹಲವು ಪ್ರಾದೇಶಿಕ ಸೊಗಡುಗಳನ್ನು ಹೊಂದಿದ ಕರಾವಳಿ ತೀರದ ಯಕ್ಷಗಾನ ಬೆಂಗಳೂರಿಗೆ ಕಾಲಿಟ್ಟು ದಶಕಗಳೇ ಕಳೆದಿವೆ. ಈಗ ಕಾಂತಾರ ಸಿನಿಮಾದ ಮೂಲಕ ಜಗತ್ತಿಗೆ ಅತಿಹೆಚ್ಚು ಚಿರಪರಿಚಿತವಾದ ಕೆಸರಿನ ಗದ್ದೆಯಲ್ಲಿ ಶರವೇಗದಲ್ಲಿ ಓಡುವ ಕೋಣಗಳ ಕಂಬಳವನ್ನು ಈಗ ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗುತ್ತಿದೆ.ಇದಕ್ಕೆ ದಿನಗಣನೆ ಆರಂಭವಾಗಿದ್ದು, ತುಳು ಕೂಟದಿಂದ ಭರ್ಜರಿಯಾಗಿ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.
ಇನ್ನು ರಾಜ್ಯದಲ್ಲಿ ನಮಗೆ ಕಂಬಳ ಎಂದಾಕ್ಷಣ ಕರಾವಳಿಯ ಪ್ರದೇಶಗಳು ನೆನಪಿಗೆ ಬರುತ್ತವೆ. ಅದರಲ್ಲೂ ಜಾಗತಿಕವಾಗಿ ಭರ್ಜರಿ ಯಶಸ್ಸು ಕಂಡ "ಕಾಂತಾರ" ಸಿನಿಮಾ ಬಂದ ಮೇಲಂತೂ ಕಂಬಳ ಪ್ರಸಿದ್ಧಿಯೂ ಮತ್ತಷ್ಟು ಹೆಚ್ಚಾಗಿತ್ತು. ಇನ್ನು ಕಂಬಳ ಎಂದಾಕ್ಷಣ ಕಾಂತಾರ ಸಿನಿಮಾದ ನೆನಪು ಬರುವಷ್ಟರ ಮಟ್ಟಿಗೆ ಜನಜನಿತವಾಯಿತು. ಕರಾವಳಿಯಲ್ಲಷ್ಟೇ ನಡೆಯುವ ಹಾಗೂ ಅಲ್ಲಿ ಮಾತ್ರ ನಡೆಸಬಹುದಾದ ಕಂಬಳ ಕ್ರೀಡೆಯನ್ನು ಅಥವಾ ಪ್ರಾದೇಶಿಕ ಸೊಗಡನನ್ನು ರಾಜಧಾನಿ ಬೆಂಗಳೂರಿನಲ್ಲಿ ನಡೆಸಲು ಮುಂದಾಗಿದ್ದಾರೆಅದಕ್ಕೆ ಭರದ ಸಿದ್ಧತೆಯೀ ನಡೆಸಲಾಗಿದೆ
ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಬೆಂಗಳೂರು ತುಳು ಕೂಟದ 50ನೇ ವರ್ಷಾಚರಣೆ: ಕರಾವಳಿಗೆ ಸೀಮಿತವಾಗಿರುವ ಕಂಬಳ ಬೆಂಗಳೂರಿನಲ್ಲಿ ನಡೆದರೆ ಹೇಗೆ? ಎಂಬ ಯೋಚನೆ ಕಳೆದ ಕೆಲವು ವರ್ಷದಿಂದ ಕರಾವಳಿಗರ ಅನೇಕರ ಮನಸ್ಸಲ್ಲಿದೆ. ಇದೀಗ ಅದಕ್ಕೂ ಕಾಲ ಕೂಡಿ ಬಂದಿದೆ. ಬೆಂಗಳೂರಿನಲ್ಲೇ ಕಂಬಳವನ್ನು ನಡೆಸಲು ಒಂದು ತಂಡವೇ ಸಿದ್ಧವಾಗಿದೆ. ಇದಕ್ಕಾಗಿ ಸೂಕ್ತ ಸ್ಥಳವನ್ನು ಸ್ಥಳವನ್ನು ಪರಿಶೀಲನೆ ಕೂಡ ನಡೆಸಲಾಗಿದೆ. ಅದನ್ನು ಆಯೋಜನೆ ಮಾಡುವುದಕ್ಕೂ ಈಗ ಸೂಕ್ತ ಮತ್ತು ಸಕಾಲವೂ ಒದಗಿಬಂದಿದೆ. ಅದೇನೆಂದರೆಮ ಬೆಂಗಳೂರಿನ ತುಳು ಕೂಟದ 50ನೇ ವರ್ಷದ ಸಂಭ್ರಮಾಚರಣೆ ಸಲುವಾಗಿ ಬೆಂಗಳೂರಿನಲ್ಲೇ ಕಂಬಳ ನಡೆಸಲು ನಿರ್ಧರಿಸಲಾಗಿದೆ. ಅದರಲ್ಲೂ ಬೆಂಗಳೂರಿನ ಅರಮನೆ ಮೈದಾನದಲ್ಲೇ ಈ ಕಂಬಳ ನಡೆಯಲಿದೆ ಎನ್ನುವುದು ಅತ್ಯಂತ ಸಂತಸದಾಯಕ ವಿಚಾರವಾಗಿದೆ.
ಕಂಬಳ ನಡೆಸಲು ಸ್ಥಳ ಪರಿಶೀಲನೆಯೂ ಮುಕ್ತಾಯ:
ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡುವ ಕುರಿತು ಪುತ್ತೂರು ಶಾಸಕ ಹಾಗೂ ಉಪ್ಪಿನಂಗಡಿ ವಿಜಯವಿಕ್ರಮ ಜೋಡುಕೆರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಕಂಬಳಕ್ಕಾಗಿ ಅರಮನೆ ಮೈದಾನದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆದರೆ ಕಂಬಳ ಯಾವತ್ತು ನಡೆಯಲಿದೆ ಎನ್ನುವ ಕುರಿತು ಇನ್ನೂ ದಿನಾಂಕವನ್ನು ಮಾತ್ರ ನಿಗದಿ ಮಾಡಿಲ್ಲ. ಜೊತೆಗೆ, ಯಾವ ಕೋಣಗಳನ್ನು ಇಲ್ಲಿನ ಕಂಬಳಕ್ಕೆ ಆಯ್ಕೆ ಮಾಡಬೇಕು, ಅವುಗಳನ್ನು ಊರಿನಿಂದ ಬೆಂಗಳೂರಿಗೆ ಹೇಗೆ ತರಬೇಕು ಎಂಬ ನಿಟ್ಟಿನಲ್ಲಿಯೂ ಚರ್ಚೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಶಾಸಕ ಅಶೋಕ್ ಕುಮಾರ್ ರೈ ಅವರೊಂದಿಗೆ ತುಳು ಕೂಟದ ಅಧ್ಯಕ್ಷ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ ಕೆ., ತುಳುಕೂಟದ ಗೌರವಾಧ್ಯಕ್ಷ ಹಾಗೂ ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ಕೆ.ವಿ., ಮಾಜಿ ಅಧ್ಯಕ್ಷ ದಿನೇಶ್ ಹೆಗ್ಡೆ ಬಿ., ಜಯರಾಮ್ ಸೂಡ, ಚಂದ್ರಹಾಸ ರೈ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಸಂಪತ್ ಕುಮಾರ್, ಅಕ್ಷಯ್ ರೈ ದಂಬೆಕಾನ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಕೂಡ ಕಂಬಳ ನಡೆಯುವ ಅರಮನೆ ಮೈದಾನದ ಸ್ಥಳವನ್ನು ಪರಿಶೀಲನೆ ಮಾಡಿದ್ದಾರೆ.
Posted by Vidyamaana on 2023-12-12 04:48:39 |
ಪುತ್ತೂರು: ಮಾಣಿ ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಹಾಗೂ 110/33/11ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.12 ರಂದು ಮಂಗಳವಾರ ಪೂರ್ವಾಹ್ನ 10:00 ರಿಂದ ಸಾಯಂಕಾಲ 5:00 ವರೆಗೆ ಮಾಡಾವು-ಕಾವು-ಸುಳ್ಯ, 33ಕೆವಿ ಮಾಡಾವು-ಬೆಳ್ಳಾರೆ ಮತ್ತು 33 ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು ವಿದ್ಯುತ್ ಮಾರ್ಗ ಹಾಗೂ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದ 11ಕೆವಿ ದೇರ್ಲ, 11ಕೆವಿ ಮಾದ್ದ ಮತ್ತು 11ಕೆವಿ ಸುಳ್ಯಪದವು ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದ್ದರಿಂದ 110/33/11ಕೆವಿ ಮಾಡಾವು. 33/11ಕೆವಿ ಸುಳ್ಯ, ಬೆಳ್ಳಾರೆ, ಗುತ್ತಿಗಾರು ಮತ್ತು ಕಾವು ವಿದ್ಯುತ್ “ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡಗರ್ಳು ಮತ್ತು 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದ 11ಕೆವಿ ದೇರ್ಲ, 11ಕೆವಿ ಮಾದ್ದ ಮತ್ತು 11ಕೆವಿ ಸುಳ್ಯಪದವು ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ
Posted by Vidyamaana on 2023-05-19 14:41:54 |
ನವದೆಹಲಿ : (Rs 2000 Currency Note) ಭಾರತೀಯ ರಿಸರ್ವ್ ಬ್ಯಾಂಕ್ 2000 ರೂಪಾಯಿ ಮುಖ ಬೆಲೆಯ ನೋಟ್ ನ್ನು ಹಿಂಪಡೆದಿದೆ. 2000 ರೂಪಾಯಿ ನೋಟಿನ ಚಲಾವಣೆ ಈ ಕ್ಷಣದಿಂದಲೇ ಸ್ಥಗಿತವಾಗಲಿದೆ. ಆದರೆ 2000 ರೂಪಾಯಿ ನೋಟು ಹೊಂದಿದ್ದವರು ಬ್ಯಾಂಕುಗಳಿಗೆ ತೆರಳಿ ಸೆಪ್ಟೆಂಬರ್ 30 2023ರ ಒಳಗಾಗಿ ನೋಟನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಆರ್ಬಿಐ ತಿಳಿಸಿದೆ.2000 ರೂಪಾಯಿಯ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ ಕರೆನ್ಸಿ ನೋಟುಗಳ ಚಲಾವಣೆ ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧವಾಗಿ ಮುಂದುವರಿಯುತ್ತದೆ . ಸೆಪ್ಟೆಂಬರ್ 30, 2023 ರವರೆಗೆ 2,000 ರೂ ನೋಟುಗಳಿಗೆ ಠೇವಣಿ ಮತ್ತು/ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುವಂತೆ RBI ಬ್ಯಾಂಕ್ಗಳನ್ನು ಕೇಳಿದೆ.ಆದರೆ ಬ್ಯಾಂಕುಗಳು ಯಾವುದೇ ಕಾರಣಕ್ಕೂ ಈ ನೋಟುಗಳನ್ನು ಚಲಾವಣೆ ಮಾಡುವಂತಿಲ್ಲ ಎಂದು ಸ್ಪಷ್ಟವಾಗಿ ಸುತ್ತೋಲೆಯಲ್ಲಿ ತಿಳಿಸಿದ. ಎರಡು ಸಾವಿರ ರೂಪಾಯಿಯ ನೋಟು ಹೊಂದಿದ್ದವರು ಆತಂಕ ಪಡುವ ಅಗತ್ಯವಿಲ್ಲ. ಇನ್ನು ಕಳೆದ ಒಂದು ವರ್ಷಗಳಿಗೂ ಅಧಿಕ ಕಾಲದಿಂದಲೂ ಎರಡು ಸಾವಿರ ರೂಪಾಯಿಯ ನೋಟು ಎಟಿಎಂ, ಬ್ಯಾಂಕ್ ಶಾಖೆಗಳಲ್ಲಿಯೂ ಲಭ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿಂದೆಯೇ ಎರಡು ಸಾವಿರ ರೂಪಾಯಿಯ ನೋಟು ಬ್ಯಾನ್ ಆಗುತ್ತದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಕುರಿತು ಯಾವುದೇ ಯೋಚನೆಯೂ ಕೇಂದ್ರ ಸರಕಾರದ ಮುಂದಿಲ್ಲ ಎಂದು ತಿಳಿಸಿದ್ದರು.
ಈ ಹಿಂದೆ ದೇಶದಲ್ಲಿ ನೋಟು ಅಮಾನ್ಯೀಕರಣದ ನಂತರ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಆರ್ಬಿಐ ಚಲಾವಣೆಗೆ ತಂದಿತ್ತು. ಸುಮಾರು ಆರು ವರ್ಷಗಳ ತರುವಾಯ ಆರ್ಬಿಐ ಎರಡು ಸಾವಿರ ಮುಖ ಬೆಲೆಯ ನೋಟುಗಳ ಚಲಾವಣೆಯನ್ನು ರದ್ದು ಮಾಡಿದೆ. ಸಪ್ಟೆಂಬರ್ ವರೆಗೂ ನೋಟುಗಳು ಚಲಾವಣೆಯಲ್ಲಿ ಇರಲಿದ್ದು, ನಂತರದಲ್ಲಿ ಸಂಪೂರ್ಣವಾಗಿ ನೋಟುಗಳ ಚಲಾವಣೆ ರದ್ದಾಗಲಿದೆ.
Posted by Vidyamaana on 2023-05-07 16:29:54 |
ಉಪ್ಪಿನಂಗಡಿ: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಹಿಂದುತ್ವದ ಹೆಸರಿನಲ್ಲಿ ಕ್ಷೇತ್ರಾದ್ಯಂತ ಮಿಂಚಿನ ಸಂಚಾರ ಕೈಗೊಂಡಿರುವ ಅರುಣ್ ಕುಮಾರ್ ಪುತ್ತಿಲ ಅವರು ಇಂದು ದಕ್ಷಿಣ ಗಯಾಪದ ಕ್ಷೇತ್ರವೆಂದೇ ಹೆಸರಾಗಿರುವ ಕುಮಾರಧಾರಾ-ನೇತ್ರಾವತಿ ಸಂಗಮ ಸ್ಥಾನವಾಗಿರುವ ಸಹಸ್ರಲಿಂಗೇಶ್ವರ-ಮಹಾಕಾಳಿ ಕ್ಷೇತ್ರದಲ್ಲಿ ಇಂದು ‘ಅಖಂಡ ಭಾರತ ಸಮಾವೇಶ’ ಹೆಸರಿನಲ್ಲಿ ಕೇಸರಿ ಮಹಾಸಂಗಮ ಮಹಾಜಾಥಾ ಮೂಲಕ ಕಾರ್ಯಕರ್ತರೊಂದಿಗೆ ರೋಡ್ ಶೋ ಮತ್ತು ಮತಯಾಚನೆ ನಡೆಸಿದರು.
ಮತಯಾಚನೆಯ ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಉಪ್ಪಿನಂಗಡಿ ಪೇಟೆಯ ಬೀದಿಬೀದಿಗಳಲ್ಲಿ ಕೇಸರಿ ಪ್ರವಾಹವೇ ಹರಿದುಬಂತು. ಈ ಸಂದರ್ಭದಲ್ಲಿ ಬೀದಿಯ ಇಕ್ಕೆಲಗಳಲ್ಲಿ ನಿಂತ ಜನರತ್ತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಕೈಮುಗಿದು, ಕೈಬೀಸುತ್ತಾ ಸಾಗಿಬಂದಿದ್ದು ವಿಶೇಷವಾಗಿತ್ತು.