Posted by vidyamaana on 2023-06-29 12:19:28 |
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
Posted by Vidyamaana on 2023-07-25 12:33:50 |
ಪುತ್ತೂರು: `` ನಾವು ಚಿಕ್ಕವರಿರುವಾಗ ನಮ್ಮ ಮನೆಯಲ್ಲಿ ಬಡತನವಿತ್ತು. ಕೆಲವೊಮ್ಮೆ ಒಪ್ಪೊತ್ತಿನ ಊಟಕ್ಕೂ ಗತಿಇರಲಿಲ್ಲ. ಕೋಡಿಂಬಾಡಿಯಲ್ಲಿರುವ ಅನಂತ್ ನಾಯಕ್ ಮೈರಾ ಎಂಬವರ ಜಿನಸು ಅಂಗಡಿಯಿಂದ ನಾವು ಮನೆಗೆ ಸಾಮಾನು ತರುತ್ತಿದ್ದೆವು. ಕೆಲವೊಮ್ಮೆ ಹಣ ಕೊಡುವಾಗ ತಡವಾದರೂ ಸಾಮಾನು ಕೊಡುತ್ತಿದ್ದರು, ನಾವು ದುಡ್ಡು ಕೊಡುವಾಗ ತಡವಾದರೂ ಒಂದುದಿನವೂ ನಮ್ಮನ್ನು ಜೋರು ಮಾಡಿಲ್ಲ, ದುಡ್ಡು ಕೊಡದೆ ಸಾಮಾನು ಕೊಡುವುದಿಲ್ಲ ಎಂದು ಅನಂತ್ ನಾಯಕ್ರವರು ಒಮ್ಮೆಯೂ ಹೇಳಿಲ್ಲ. ಅಂಥಹ ವ್ಯಕ್ತಿ ಮೃತಪಟ್ಟಾಗ ನಾನು ಅವರ ಮೃತದೇಹವನ್ನು ನೋಡಲು ಸಾಧ್ಯವಾಗಲಿಲ್ಲ, ಅವರ ಉತ್ತರಕ್ರಿಯೆಗೂ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಶಾಸಕರಾದ ಅಶೋಕ್ ರೈಯವರು ಮೃತ ಅನಂತ್ ನಾಯಕ್ರವರ ಶ್ರದ್ದಾಂಜಲಿ ಸಭೆಯಲ್ಲಿ ಕಣ್ಣೀರು ಹಾಕಿದ ಘಟನೆ ನಡೆಯಿತು.
ನಮ್ಮ ತಂದೆಯವರು ಶಿಕ್ಷಕರಾಗಿದ್ದರೂ ಆ ಕಾಲದಲ್ಲಿ ಕನಿಷ್ಠ ಸಂಬಳ ಸಿಗುತ್ತಿತ್ತು. ನಮ್ಮಲ್ಲಿ ಏನೂ ಇರಲಿಲ್ಲ. ಕಡುಬಡತನದ ಕುಟುಂಬ ನಮ್ಮದಾಗಿತ್ತು. ಶಾಲೆಬಿಟ್ಟು ಮನೆಗೆ ಬರುವಾಗ ಮನೆಯಲ್ಲಿ ತಿನ್ನಲೂ ಏನೂ ಇರಲಿಲ್ಲ. ಸಂಜೆ ಅಂಗಡಿಗೆ ಹೋಗಿ ಅಲ್ಲಿಂದ ಅಕ್ಕಿ ಸಾಮಾನು ತಂದ ಬಳಿಕ ನಮ್ಮ ಮನೆಯಲ್ಲಿ ಊಟ ರೆಡಿಯಾಗುತ್ತಿತ್ತು. ಅಂದಿನ ಆ ಕಷ್ಟದ ದಿನಗಳಲ್ಲಿ ನಮಗೆ ಸಾಲವಾಗಿ ಸಾಮಾನು ಕೊಡುತ್ತಿದ್ದ ಅನಂತ ನಾಯಕ್ರವರ ಉಧಾರತೆಯನ್ನು ಮರೆಯಲು ಎಂದಿಗೂ ಸಾಧ್ಯವಿಲ್ಲ. ಚುನಾವಣೆ ಸಂದರ್ಭದಲ್ಲಿ ನೀವು ಶಾಸಕನಾಗುತ್ತಿಯ ಅಶೋಕ.. ಎಂದು ಆಶೀರ್ವಾದ ಮಾಡಿದ್ದರು. ಆದರೆ ಶಾಸಕನಾದ ಬಳಿಕ ನನಗೆ ಅವರನ್ನು ನೋಡಲು ಅವಕಾಶ ಸಿಕ್ಕಿಲ್ಲ ಮತ್ತು ನನಗೆ ಸಾಧ್ಯವಾಗದೇ ಇರುವುದು ಅತ್ಯಂತ ನೋವಿನ ವಿಚಾರವಾಗಿದೆ. ಅವರು ಈಗ ನಮ್ಮನ್ನು ಅಗಲಿರಬಹುದು ಆದರೆ ಅವರು ಮಾಡಿದ ಸೇವೆಯನ್ನು ಮರೆಯಲು ಸಾಧ್ಯವೇ ಇಲ್ಲ. ಶಾಸಕರು ಮಾತನಾಡುತ್ತಿದ್ದ ವೇಳೆ ಅಳುತ್ತಲೇ ತನ್ನ ಹಳೆಯ ನೆನಪುಗಳನ್ನು ಮೆಲುಕು ಹಾಕುವಾಗ ಸಭೆಯಲ್ಲಿದ್ದವರ ಕಣ್ಣುಗಳೂ ತೇವಗೊಂಡವು.
Posted by Vidyamaana on 2023-10-08 21:23:11 |
ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ.ಶಾಸಕ ಎಸ್ಟಿ ಸೋಮಶೇಖರ್ ಕೂಡ ಬಹಿರಂಗವಾಗಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ
ಇದೀಗ ಈ ಸಾಲಿಗೆ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿವಿ ಸದಾನಂದ ಗೌಡ ಸೇರಿದ್ದು, ಪಕ್ಷದ ರಾಜ್ಯ ನಾಯಕರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆಯೇ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಯಲ್ಲಿನ ಶೇ 75ರಷ್ಟು ಜನರಿಗೆ ಈ ಮೈತ್ರಿ ಇಷ್ಟವಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಪತ್ರಿಕೆಯೊಂದರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಎನ್ಡಿಎ ಮೈತ್ರಿಕೂಟವನ್ನು ಬಲಪಡಿಸಬೇಕು ನಿಜ.
ಆದರೆ, ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚಿಸದೆ, ಏಕಪಕ್ಷೀಯವಾಗಿ ಮೈತ್ರಿ ಮಾಡಿಕೊಂಡರೆ, ಯಾವುದೇ ರೀತಿಯ ಪ್ರಯೋಜನವಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಚುನಾವಣೆ ಮುಗಿದು ನಾಲ್ಕುತಿಂಗಳು ಕಳೆದರೂ ಪರಿಸ್ಥಿತಿ ಬದಲಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿತ್ತು.
ಇದೀಗ ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗುತ್ತದೆ. ಪಕ್ಷದಲ್ಲಿ ಒಕ್ಕಲಿಗ ನಾಯಕರ ಮಾತುಗಳಿಗೂ ಬೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಪಕ್ಷವು ನನಗೆ ಎಲ್ಲವನ್ನೂ ನೀಡಿದೆ. ರಾಜ್ಯದಲ್ಲಿ ಅತ್ಯಂತ ಬಲಿಷ್ಠವಾಗಿದ್ದ ಪಕ್ಷಕ್ಕೆ ಈ ಸ್ಥಿತಿ ಬಂದಿರುವುದರ ಬಗ್ಗೆ ನೋವಿದೆ.
ಅದನ್ನು ಸರಿಪಡಿಸಬೇಕು ಎಂಬುದಷ್ಟೇ ನನ್ನ ಆಗ್ರಹ. ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ವಾಸ್ತವ ವಿಚಾರಗಳನ್ನು ಮಾತನಾಡಲು ನನಗೆ ಯಾವ ರೀತಿಯ ಭಯವೂ ಇಲ್ಲ ಎಂದು ಹೇಳಿದರು.
Posted by Vidyamaana on 2023-12-26 07:25:23 |
ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಇರುವ ಹೋಟೆಲ್, ಮೆಡಿಕಲ್ ಹಾಗೂ ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಬ.ಸಿ.ರೋಡಿನ ಆನಿಯಾ ದರ್ಬಾರ್ ಹೋಟೆಲಿಗೆ ನುಗ್ಗಿದ ಕಳ್ಳರು ಕ್ಯಾಶ್ ಡ್ರಾಯರ್ ನಲ್ಲಿದ್ದ 70 ಸಾವಿರಕ್ಕೂ ಅಧಿಕ ಮೊತ್ತದ ನಗದು ಹಣವನ್ನು ಎಗರಿಸಿದ್ದಾರೆ.
ಮುಸುಕುಧಾರಿಯಾಗಿರುವ ಕಳ್ಳನೋರ್ವ ಹೋಟೆಲಿನ ಗೇಟಿನ ಬೀಗವನ್ನು ಬಲವಂತವಾಗಿ ತೆಗೆಯುವ ದೃಶ್ಯ సిసి ಟಿವಿಯಲ್ಲಿ ದೊರಕಿದ್ದು, ಉಳಿದಂತೆ ಒಳ ಪ್ರವೇಶಿಸುವ ಹಂತದಲ್ಲಿ ಸಿಸಿ ಕ್ಯಾಮರಾಕ್ಕೂ ಕವಚ ಹಾಕಿ ನುಗ್ಗಿದ್ದಾನೆ. ಹೋಟೆಲ್ ನ ಇನ್ನೊಂದು ಪಕ್ಕದಲ್ಲಿರುವ ಅಂಗಡಿ, ಮೇಲಂತಸ್ತಿನಲ್ಲಿರುವ ಮೆಡಿಕಲ್ ಗೂ ನುಗ್ಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2023-05-01 11:09:01 |
.
ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಬೆಳ್ತಂಗಡಿ ತಾಲೂಕಿನ ಲಾಯಿಲ, ಗುರುವಾಯನಕೆರೆ, ಪಡಂಗಡಿ, ಕಲ್ಲೇರಿ, ಕುಪ್ಪೆಟ್ಟಿ, ಸುನ್ನತ್ ಕೆರೆ, ಚಾರ್ಮಾಡಿ, ಕಕ್ಕಿಂಜೆ, ಪುಂಜಾಲಕಟ್ಟೆ, ಕಟ್ಟೆ, ಕಾಜೂರು ಪ್ರದೇಶಗಳಲ್ಲಿ ಪಕ್ಷದ ಹಿರಿಯರು ಹಾಗೂ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
Posted by Vidyamaana on 2024-05-11 22:08:40 |
ಮೈಸೂರು: ಸುಲ್ತಾನ್ ಗೋಲ್ಡ್ ಅಂಡ್ ಡೈಮಂಡ್ ಸಂಸ್ಥೆಯು ತನ್ನ 11ನೇ ಶಾಖೆಯನ್ನು ನಗರದ ಮೀನಾ ಬಜಾರ್ ವೃತ್ತದ ಸಮೀಪ ಸಂತ ಫಿಲೋಮಿನಾ ಚರ್ಚ್ ರಸ್ತೆಯಲ್ಲಿ ತೆರೆಯುತ್ತಿದ್ದು, ಮೇ 12ರಂದು ಬಾಲಿವುಡ್ ನಟಿ ರವೀನಾ ಟಂಡನ್ ಅವರು ಮಳಿಗೆ ಉದ್ಘಾಟಿಸಲಿದ್ದಾರೆ.
ಶಾಸಕರಾದ ತನ್ನೀರ್ ಸೇರ್, ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಸಂತ ಫಿಲೋಮಿನಾ ಚರ್ಚ್ನ ಧರ್ಮದರ್ಶಿ ಸ್ಪ್ಯಾನಿ ಅಡಾ, ಮಿಸ್ ಇಂಡಿಯಾ ಯುನಿವರ್ಸ್ ಖ್ಯಾತಿಯ ಡಾ.ಹೇಮಾಮಾಲಿನಿ ಲಕ್ಷ್ಮಣ್, ವೆಲ್ವಿನ್ ಇಂಡಸ್ಟ್ರೀಸ್ನ ಗೌರ್ ನಾಜ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನೂತನ ಮಳಿಗೆಯ ಉದ್ಘಾಟನೆಯ ಅಂಗವಾಗಿ ಮೇ 31ರವರೆಗೆ ಪ್ರತಿದಿನ
Posted by Vidyamaana on 2024-03-21 18:14:24 |
ಪುತ್ತೂರು :ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಯ್ಕೆಯಾದ ನಂತರ ಮತ್ತು ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಯ ವಿಚಾರವಾಗಿ ಪುತ್ತೂರಿನ ಹಿರಿಯ-ಕಿರಿಯ ಕಾರ್ಯಕರ್ತರಲ್ಲಿ ಚರ್ಚಿಸಲು ದ.ಕನ್ನಡ ಜಿಲ್ಲಾಧ್ಯಕ್ಷರು ಪಾರ್ಟಿ ಕಛೇರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಕಛೇರಿಗೆ ಬೀಗ ಹಾಕಿದ್ದರು ಮತ್ತು ಸಭೆಯಲ್ಲಿ ವಾಗ್ವಾದಗಳು ಜಿಲ್ಲಾಧ್ಯಕ್ಷರ ಎದುರಿಗೆ ಆಗಿವೆ ಎಂದು ವರದಿಯಾಗಿರುವುದು ಸತ್ಯಕ್ಕೆ ದೂರವಾದ ವಿಷಯ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ.
ಪಕ್ಷದ ಆಂತರಿಕ ಸಭೆ ಆದ ಕಾರಣ ಪತ್ರಿಕೆ ಮಾದ್ಯಮದವರಿಗೆ ಅಹ್ವಾನ ಇರಲಿಲ್ಲ ಮತ್ತು ಒಟ್ಟು ಪುತ್ತೂರಿನ ರಾಜಕೀಯ ಸಾಧಕ ಮತ್ತು ಭಾದಕಗಳ ಬಗ್ಗೆ ಆರೋಗ್ಯಪೂರ್ಣ ಚರ್ಚೆಯಾಗಿ ಕೊನೆಗೆ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ರವರು ಸೂಕ್ತವಾದ ಸಲಹೆ ಸೂಚನೆಯನ್ನು ನೀಡಿ ಸಭೆ ಸುಖಾಂತ್ಯವಾಗಿದೆ ಮತ್ತು ಎಲ್ಲರೂ ಒಗ್ಗಟ್ಟಾಗಿ ಪಾರ್ಟಿಯ ಅಭ್ಯರ್ಥಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇವೆ ಎಂದು ನಿರ್ಧರಿಸಲಾಯಿತು ಎಂದು ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ