ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಅರ್ಜುನನ ಅಂತ್ಯಸಂಸ್ಕಾರ: ನನ್ನ ಆನೆಯನ್ನು ಬದುಕಿಸಿಕೊಡಿ ಕಣ್ಣೀರಿಟ್ಟು ಗೋಳಾಡಿದ ಮಾವುತ

Posted by Vidyamaana on 2023-12-05 13:54:01 |

Share: | | | | |


ಅರ್ಜುನನ ಅಂತ್ಯಸಂಸ್ಕಾರ: ನನ್ನ ಆನೆಯನ್ನು ಬದುಕಿಸಿಕೊಡಿ ಕಣ್ಣೀರಿಟ್ಟು ಗೋಳಾಡಿದ ಮಾವುತ

ಮೈಸೂರು: ಕಾಡಾನೆ ಕಾರ್ಯಾಚರಣೆ ವೇಳೆ ಕಾದಾಟದಲ್ಲಿ ಮೃತಪಟ್ಟ ಅರ್ಜುನ ಆನೆಯನ್ನು ನೆನೆದು ಮಾವುತ ವಿನು ಕಣ್ಣೀರಿಟ್ಟಿದ್ದಾರೆ.


ಅಂತಿಮ ದರ್ಶನದ ವೇಳೆ ಮಾವುತ ವಿನು ಅರ್ಜುನ ಆನೆಯನ್ನ ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದು, ನನ್ನ ಆನೆಯನ್ನ ಬದುಕಿಸಿಕೊಡಿ. ನನ್ನನ್ನೂ ಅರ್ಜುನನ ಜೊತೆ ಮಣ್ಣು ಮಾಡಿ. ನನ್ನ ಆನೆಯನ್ನ ಮೈಸೂರಿಗೆ ಕಳುಹಿಸಿಕೊಡಿ ಅರ್ಜುನ ಸತ್ತಿಲ್ಲ ಎಂದು ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ ಎಂದು ಕಣ್ಣೀರಿಟ್ಟರು. ಸೋಮವಾರ ಕಾಡಾನೆ ಜೊತೆಗಿನ ಕಾಳಗದಲ್ಲಿ ಮೃತಪಟ್ಟ ಆನೆಯ ಅಂತ್ಯಸಂಸ್ಕಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಜನರು ತಂಡೋಪತಂಡವಾಗಿ ಬಂದು ದರ್ಶನ ಪಡೆಯುತ್ತಿದ್ದಾರೆ.


ಉಕ್ಕಿ ಬರುತ್ತಿದ್ದ ದುಃಖವನ್ನು ತಡೆದುಕೊಳ್ಳಲು ಪ್ರಯತ್ನಿಸಿದರೂ ವಿನುವಿಗೆ ಅಳು ತಡೆಯಲು ಆಗುತ್ತಿಲ್ಲ. ಪದೇ ಪದೇ ಅರ್ಜುನ ಬಳಿ ಹೋಗಿ, ನನ್ನೊಂದಿಗೆ ಬಂದು ಬಿಡು ಎಂದು ಕೇಳಿಕೊಳ್ಳುತ್ತಿರುವುದು ಮನಕಲುಕುವಂತಿತ್ತು.


ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದಲೇ ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿದ್ದ ಅರ್ಜುನ ಮೃತಪಟ್ಟಿದ್ದಾನೆ. ಅರಣ್ಯ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು. ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ತುರ್ತು ಚರ್ಚೆ ಮಾಡಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ 3.0 : ದೇವರ ಹೆಸರಲ್ಲಿ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ

Posted by Vidyamaana on 2024-06-09 21:35:34 |

Share: | | | | |


ಮೋದಿ 3.0 : ದೇವರ ಹೆಸರಲ್ಲಿ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ

ನವದೆಹಲಿ : ಈ ಬಾರಿ ಚಿಕ್ಕಮಂಗಳೂರು ಉಡುಪಿ ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಿಜೆಪಿಯ ಶೋಭಾ ಕರಂದ್ಲಾಜೆ ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಶೋಭಾ ಕರಂದ್ಲಾಜೆ ಅವರು 2004ರಲ್ಲಿ ಬಿಜೆಪಿ ಎಂಎಲ್ಸಿಯಾಗಿ ಆಯ್ಕೆಯಾಗಿದ್ದಾರೆ. 2014ರಲ್ಲಿ ಉಡುಪಿ ಚಿಕ್ಕಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. 2019 ರಲ್ಲಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿದ್ದು, ಶಾಸಕಿ,ಎಂಎಲ್ಸಿ ಹಾಗೂ ಸಂಸದರಾಗಿ ಆಯ್ಕೆಯಾಗಿದ್ದಾರೆ. 2018 ರಲ್ಲಿ ಬೆಂಗಳೂರಿನ ಯಶವಂತಪುರದ ಶಾಸಕಿಯಾಗಿದ್ದಾರೆ.

ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಫೊಕ್ಸೋ ಪ್ರಕರಣ ದಾಖಲಿಸಿದ್ದ ದೂರುದಾರೆ ಸಾವು!

Posted by Vidyamaana on 2024-05-27 14:28:13 |

Share: | | | | |


ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧ ಫೊಕ್ಸೋ ಪ್ರಕರಣ ದಾಖಲಿಸಿದ್ದ ದೂರುದಾರೆ ಸಾವು!

ಬೆಂಗಳೂರು : ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ (BS Yediyurappa) ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ (Sexual Assault) ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದ ದೂರುದಾರೆ ಇಂದು ಸಾವನ್ನಪ್ಪಿದ್ದಾರೆ.ಕೆಲ ತಿಂಗಳ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.

34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ, ಅಹವಾಲು ಸ್ವೀಕಾರ

Posted by Vidyamaana on 2024-01-09 08:56:30 |

Share: | | | | |


34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ, ಅಹವಾಲು ಸ್ವೀಕಾರ

ಪುತ್ತೂರು: ಪುತ್ತೂರಿನಲ್ಲಿ ಬೃಹತ್ ಕೈಗರಿಕಾ ವಲಯವನ್ನು ಸ್ಥಾಪನೆ ಮಾಡಲಾಗುತ್ತದೆ, ಇದಕ್ಕಾಗಿ ೧೦೦ ಎಕ್ರೆ ಭೂಮಿಯನ್ನು ಕಾಯ್ದಿರಿಸಲಾಗಿದೆ, ವಿವಿಧ ಕೈಗಾರಿಕೆಗಳು ಒಂದೇ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿದೆ, ಇದರಿಂದ ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗವೂ ಲಭಿಸಲಿದೆ ಎಂದು ಮಾಜಿ ಶಾಸಕರು ಹೇಳಿದ್ದು ಪತ್ರಿಕೆಗಳಲ್ಲಿ ದೊಡ್ಡದಾಗಿ ಬಂದಿತ್ತು , ನಾನು ಓದಿ ಸಂತೋಷಪಟ್ಟಿದ್ದೆ ಆದರೆ ಹೇಳಿದವರ ಅವಧಿ ಕಳೇದರೂ ಇನ್ನೂ ೧೦೦ ಎಕ್ರೆ ಭೂಮಿ ಬಂದಿಲ್ಲ ಎಲ್ಲಿ ಹೋಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಪರೋಕ್ಷವಾಗಿ ಶಾಸಕ ಅಶೋಕ್ ರೈ ಕಾಲೆಳೆದಿದ್ದಾರೆ.


೩೪ ನೆಕ್ಕಿಲಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕರು ಸುಳ್ಳು ಹೇಳಿಯೇ ಐದು ವರ್ಷ ಕಳೆದುಹೋಗಿದೆ, ಜನತೆಯನ್ನು ಭರವಸೆ ಕೊಟ್ಟೇ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು. ಕರಾವಳಿಯಲ್ಲಿ ಏಳು ಮಂದಿ ಬಿಜೆಪಿ ಶಾಸಕರಿದ್ದರು, ಸಂಸದರಿದ್ದರು, ಮಂತ್ರಗಳಿದ್ದರು ಆದರೆ ಕೊಯಿಲದಲ್ಲಿರುವ ಪಶುವೈದ್ಯಕೀಯ ಕಾಲೇಜು ಇವರ ಯಾರ ಕಣ್ಣಿಗೂ ಕಾಣಲಿಲ್ಲ, ಜಾನುವಾರು ಕೇಂದ್ರಕ್ಕೆ ನಯಾಪೈಸೆ ಅನುದಾನ ನೀಡಿಲ್ಲ, ಕೋಟಿಗಟ್ಟಲೆ ಅನುದಾನದಲ್ಲಿ ಕಟ್ಟಿದ ಎಕ್ರೆಗಟ್ಟಲೆ ಜಾಗ ಕಣ್ಣೆದುರೇ ಕೊಳೆಯುತ್ತಿದ್ದರೂ ಬಿಜೆಪಿಗರಿಗೆ ಅದನ್ನು ಅಭಿವೃದ್ದಿ ಮಾಡಬೇಕೆಂಬ ಚಿಂತೆಯೇ ಹೊಳೆಯಲಿಲ್ಲ ಯಾಕೆ? ಕೆಎಂಎಫ್‌ನವರು ೧೦ ಎಕ್ರೆ ಜಾಗ ಕೇಳಿದರೂ ಮಾಜಿ ಶಾಸಕರಿಗೆ ಕೊಡ್ಲಿಕ್ಕೆ ಆಗಲಿಲ್ಲ ೧೦೦ ಎಕ್ರೆ ಜಾಗದ ಮಾತು ಎಲ್ಲಿ ಎಂದು ಶಾಸಕರು ಕುಟುಕಿದರು.

ಯುವಕರ ಕೈಗೆ ಉದ್ಯೋಗ ಕೊಡಿ


ಯುವಕರನ್ನು ತಮ್ಮ ಪಕ್ಷದ ಪ್ರಚಾರಕ್ಕಗಿ ಬಳಸುವ ಬಿಜೆಪಿಯವರು ಅವರಿಗೆ ಉದ್ಯೋಗ ಕೊಡಿಸುವ ಆಲೋಚನೆಯೇ ಇಲ್ಲ. ಧರ್ಮದ ಬಗ್ಗೆ ಸುಳ್ಳು ವಿಚಾರಗಳನ್ನು ತಲೆಗೆ ತುಂಬಿಸಿ ಯುವ ಸಮೂಹವನ್ನು ದಾರಿತಪ್ಪಿಸುತ್ತಿರುವ ಬಿಜೆಪಿಯವರು ಇಷ್ಟು ವರ್ಷದಲ್ಲಿ ಎಷ್ಟು ಮಂದಿ ಯುವಕರಿಗೆ ಉದ್ಯೋಗ ಕೊಡಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕು. ಯುವಕರನ್ನು ಬಳಸಿಕೊಂಡು ತಾವು ಅಧಿಕಾರಕ್ಕೇರುವ ಕನಸು ಕಾಣುತ್ತಿರುವ ಬಿಜೆಪಿಯವರ ನಕಲಿ ರಂಪಾಟವನ್ನು ಯುವ ಸಮೂಹ ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಸಂಸದರು, ಶಾಸಕರುಗಳು ನಿಮ್ಮ ಕ್ಷೇತ್ರದ ಯುವPರಿಗೆ ಉದ್ಯೋಗ ಕೊಡಿಸಿ ಪುಣ್ಯಕಟ್ಟಿಕೊಳ್ಳಬೇಕು. ಯಾರದೋ ಅಪ್ಪ ಅಮ್ಮನ ಮಕ್ಕಳನ್ನು ಪಕ್ಷಕ್ಕಾಗಿ ಬಳಸಿಕೊಂಡು ಅವರನ್ನು ದಾರಿತಪ್ಪಿಸಬೇಡಿ ಒಳ್ಳೆಯದಾಗುವುದಿಲ್ಲ . ಯುವ ಸಮೂಹ ಬಿಜೆಪಿಯವರ ನಕಲಿತ್ವವನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.


ಕೆಎಂಎಫ್‌ನಿಂದ ಸಾವಿರಾರು ಮಂದಿಗೆ ಉದ್ಯೋಗ ಕೊಡುತ್ತೇನೆ


ನಾನು ಕೆಎಂಎಫ್‌ನ್ನು ಪುತ್ತೂರಿಗೆ ಸ್ಥಳಾಂತರ ಮಾಡುತ್ತಿದ್ದೇನೆ, ಇದರಲ್ಲಿ ಸಾವಿರಾರು ಮಂದಿ ಯುವಕ, ಯುವತಿಯರಿಗೆ ಕೆಲಸವನ್ನು ಕೊಡಿಸುತ್ತೇನೆ. ಯುವಕರ ಕೈಗೆ ಉದ್ಯೋಗ ಕೊಡುವ ಮೂಲಕ ಅವರ ಕುಟುಂಬಕ್ಕೆ ನೆರವಾಗುವ ರೀತಿಯಲ್ಲಿ ಯುವ ಸಮೂಹವನ್ನು ಸಮಾಜಕ್ಕೆ ಅರ್ಪಿಸುವ ಕೆಲಸವನ್ನು ಮಾಡುತ್ತೇನೆ. ಯಾವ ಕಾರಣಕ್ಕೆ ಯುವಕಸಮೂಹವನ್ನು ನಾನು ಬಳಕೆ ಮಾಡಿ ಎಸೆಯುವ ಜಾಯಾಮಾನ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಶಾಸಕರು ಹೇಳಿದರು. ಉಪ್ಪಿನಂಗಡಿ ಸಹಸ್ರ ಲಿಂಗೇಶ್ವರ ದೇವಸ್ಥಾನ ವಠಾರವನ್ನು ಟೂರಿಸಂ ಕ್ಷೇತ್ರ ಮಾಡುತ್ತೇನೆ, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ತೆರಳುವ ಯಾತ್ರಾರ್ಥಿಗಳು ಪುತ್ತೂರು ಮತ್ತು ಉಪ್ಪಿನಂಗಡಿಗೆ ಬಂದು ಹೋಗುವಷ್ಟರ ಮಟ್ಟಿಗೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರವನ್ನೂ ಟೂರಿಸಂ ಕೇಂದ್ರವಾಗಿ ಮಾಡುತ್ತೇನೆ. ಉಪ್ಪಿನಂಗಡಿಯಲ್ಲಿ ಹೊಸ ಡ್ಯಾಂ ನಿರ್ಮಾಣ ಮಾಡಿ ಸುಮಾರು ೬ ಕಿ ಮೀ ವ್ಯಾಪ್ತಿಗೆ ವರ್ಷಪೂರ್ತಿ ನೀರು ಸಂಗ್ರಹ ಮಾಡುವ ಕೆಲಸವನ್ನು ಮಾಡುತ್ತೇನೆ. ಟೂರಿಸಂ ಕೇಂದ್ರವಾಗಿ ಮಾರ್ಪಟ್ಟರೆ ಇಲ್ಲಿರುವ ಎಲ್ಲರಿಗೂ ವ್ಯವಹಾರವಾಗಲಿದೆ ಎಲ್ಲರಿಗೂ ಒಳ್ಳೆಯದಾಗಲಿದೆ ಎಂದು ಹೇಳಿದರು.

ಭೃಷ್ಟಾಚಾರ ರಹಿತ ಕೆಲಸ

ಯಾವುದೇ ಇಲಾಖೆಯಲ್ಲೂ ಭೃಷ್ಟಾಚಾರ ನಡೆಸಿದರೆ ತಕ್ಷಣ ನನ್ನ ಗಮನಕ್ಕೆ ತನ್ನಿ. ಅಕ್ರಮ ಸಕ್ರಮ, ೯೪ ಸಿ, ೯೪ ಸಿಸಿ ಸೇರಿದಂಥೆ ಇಲಾಖೆಯ ಯಾವುದೇ ಕೆಲಸ ಕಾರ್ಯಗಳಿಗೆ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ನನಗೆ ತಿಳಿಸಿ ತಕ್ಷಣ ನಾನು ಕಾನೂನುಕ್ರಮಗಳನ್ನು ಕೈಗೊಳ್ಳುತ್ತೇನೆ. ಚುನಾವಣೆಯ ಪೂರ್ವದಲ್ಲೂ ಆ ಬಳಿಕವೂ ನಾನು ಯಾರಿದಂಲೂ ನಯಾ ಪೈಸೆ ತೆಗೆದುಕೊಂಡಿಲ್ಲ, ಮುಂದಕ್ಕೂ ನಾನು ಭೃಷ್ಟಾಚಾರರಹಿತವಾಗಿಯೇ ಕೆಲಸವನ್ನು ಮಾಡಲಿದ್ದೇನೆ, ಮಾಡಿಸುತ್ತೇನೆ ಎಂದು ಅಧಿಕಾರಿಗಳಿಗೆ ಬಿಸಿಮುಟ್ಟಿಸಿದರು.


ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆ


ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರಾದ ಅಶೋಕ್ ನಾಯಕ್ ಇಂದಾಜೆ, ಗಣೇಶ್ ನಾಯ್ಕ್ ಇಂದಾಜೆ, ಅರುಣ್, ಅಣ್ಣು, ಅಪ್ಪಿ, ಉಷಾ, ಪೊನ್ನಕ್ಕ ಮತ್ತು ಭವಾನಿ ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯದರು. ಸಸಕರು ಪಕ್ಷದ ದ್ವಜ ನೀಡಿ ಬರಮಾಡಿಕೊಂಡರು.


ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ನಡೆಯಿತು. ವೇದಿಕೆಯಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆಬಿ , ಮಾಜಿ ಅಧ್ಯಕ್ಷರಾದ ಮುರಳೀಧರ್ ರೈ ಮಟಂತಬೆಟ್ಟು, ನಗರಸಭಾ ಸದಸ್ಯರಾದದಿನೇಶ್ ಶೇವಿರೆ, ಗುತ್ತಿಗೆದಾರ ರಾಧಾಕೃಷ್ಣ ನಾಯ್ಕ್, ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರಭಟ್ ಪಂಜಿಗುಡ್ಡೆ, ಕೆಪಿಸಿಸಿ ಸಂಯೋಜಕರಾದ ಚಂಧ್ರಹಾಸ ರೈ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ಕೋಡಿಂಬಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್,  ಮಾಜಿ ವಲಯಾಧ್ಯಕ್ಷರಾದ ಶೇಖಬ್ಬ ಹಾಜಿ, ವಲಯ ಕಾರ್ಯದರ್ಶಿ ಕಲಂದರ್ ಶಾಫಿ, ಬೂತ್ ಅಧ್ಯಕ್ಷರಾದ ಅಬ್ದುಲ್ ಹಮೀದ್, ಇಸಾಕ್ ನೆಕ್ಕಿಲಾಡಿ ಶಾಲೆ, ನವಾಝ್ ಕರ್ವೆಲ್, ಅಬ್ದುಲ್ ಖಾದರ್ ಆದರ್ಶನಗರ, ಜಯಶೀಲಾ, ಜಾನ್ ಕೆನ್ಯುಟ್, ಹನೀಫ್ ಕೆನರಾ, ಫಯಾಝ್ ನೆಕ್ಕಿಲಾಡಿ, ಶರೀಫ್ ನೆಕ್ಕಿಲಾಡಿ, ಕಮರು ಬಾನು, ಕಮಲಾಕ್ಷಿ, ತಾಹಿರಾ, ಪೊನ್ನಕ್ಕ, ಅಣ್ಣಿ, ಅಪ್ಪಿ, ಗಣೇಶ್ ನಾಯಕ್, ಮಜೀದ್, ಬಶೀರ್ ಬೊಳಂತಿಲ, ಯಹ್ಯಾ, ಮೊದಲಾದವರು ಉಪಸ್ಥಿತರಿದ್ದರು.


ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿಮಿನೆಜಸ್ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಅಬ್ದುಲ್‌ರಹಿಮಾನ್ ಯುನಿಕ್ ಕಾರ್ಯಕ್ರಮ ನಿರೂಪಿಸಿದರು.

ಸ್ವಂತ ಮನೆಯೂ ಇಲ್ಲ ಕಾರೂ ಇಲ್ಲ ಇಲ್ಲಿದೆ ಸೋನಿಯಾ ಗಾಂಧಿ ಆಸ್ತಿ ವಿವರ

Posted by Vidyamaana on 2024-02-17 13:31:37 |

Share: | | | | |


ಸ್ವಂತ ಮನೆಯೂ ಇಲ್ಲ  ಕಾರೂ ಇಲ್ಲ  ಇಲ್ಲಿದೆ ಸೋನಿಯಾ ಗಾಂಧಿ ಆಸ್ತಿ ವಿವರ

ಜೈಪುರ; ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆ ಬಯಸಿ ಬುಧವಾರ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ, ಈ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಆಸ್ತಿ ವಿವರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ತಾವು ಭಾರತದಲ್ಲಿ ಯಾವುದೇ ಮನೆ ಹೊಂದಿಲ್ಲ, ತಮ್ಮ ಬಳಿ ಯಾವುದೇ ವಾಹನ ಕೂಡಾ ಇಲ್ಲ.

ಆದರೆ ಇಟಲಿಯಲ್ಲಿ ಪೂರ್ವಜರಿಂದ ಬಂದ ಒಂದು ಮನೆಯಿದೆ. ತಮ್ಮ ಒಟ್ಟು ಆಸ್ತಿ 12.53 ಕೋಟಿ ರು.ನಷ್ಟಿದೆ ಎಂದು ಘೋಷಿಸಿಕೊಂಡಿದ್ದಾರೆ.

ಏನೇನು ಆಸ್ತಿ?: ಇಟಲಿಯಲ್ಲಿ ನನ್ನ ತಂದೆಯಿಂದ ಬಂದ 27 ಲಕ್ಷ ರೂ. ಮೌಲ್ಯದ ಮನೆ ಇದೆ. ಅದನ್ನು ಹೊರತುಪಡಿಸಿದರೆ ಭಾರತದಲ್ಲಿ ಯಾವುದೇ ಮನೆ, ವಾಹನ ಇಲ್ಲ. 1.07 ಕೋಟಿ ರು. ಮೌಲ್ಯದ 88 ಕೆ.ಜಿ ಬೆಳ್ಳಿ, 49.95 ಲಕ್ಷ ರು. ಮೌಲ್ಯದ 1.267 ಕೆ.ಜಿ. ಚಿನ್ನ, ನವದೆಹಲಿಯ ದೇರಾಮಂಡಿ ಗ್ರಾಮದಲ್ಲಿ 2529.28 ಚದರ ಮೀಟರ್ ವಿಸ್ತೀರ್ಣದ 5.88 ಕೋಟಿ ರು. ಬೆಲೆಬಾಳುವ ಭೂಮಿ ಇದೆ ಎಂದು ಹೇಳಿಕೊಂಡಿದ್ದಾರೆ.

72 ಲಕ್ಷ ರು. ಏರಿಕೆ: 2019ರ ಲೋಕಸಭಾ ಚುನಾವಣೆ ಸಮಯಕ್ಕೆ ಹೋಲಿಸಿದೆ 2024ರಲ್ಲಿ ಸೋನಿಯಾ ಆಸ್ತಿಯಲ್ಲಿ 72 ಲಕ್ಷ ರು. ಏರಿಕೆ ಕಂಡುಬಂದಿದೆ. ಆಗ ಸೋನಿಯಾ ತಮ್ಮ ಬಳಿ 11.82 ಕೋಟಿ ರು. ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು. ಇನ್ನು 2014ರಲ್ಲಿ ಸೋನಿಯಾ 9.29 ಕೋಟಿ ರು. ಆಸ್ತಿ ಘೋಷಿಸಿಕೊಂಡಿದ್ದರು.

ಡಾ.ಮೋಹನ ಆಳ್ವರಿಗೆ ಪಿತೃವಿಯೋಗ

Posted by Vidyamaana on 2023-10-31 16:03:17 |

Share: | | | | |


ಡಾ.ಮೋಹನ ಆಳ್ವರಿಗೆ ಪಿತೃವಿಯೋಗ

ಮಂಗಳೂರು, ಅ.31: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವಾ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ನಿಧನರಾಗಿದ್ದಾರೆ. 


ಇಳಿ ವಯಸ್ಸು ಮೀರಿದ್ದರೂ ಮಿಜಾರಿನ ತಮ್ಮ ಮನೆಯಲ್ಲಿ ಆರೋಗ್ಯದಲ್ಲೇ ಇದ್ದ ಆನಂದ ಆಳ್ವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾನಕ್ಕಾಗಿ ಬಂಗಬೆಟ್ಟು ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದರು. ಇಡೀ ರಾಜ್ಯದಲ್ಲಿಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಅತಿ ಹಿರಿಯ ವ್ಯಕ್ತಿ ಎನ್ನುವ ಹೆಗ್ಗಳಿಕೆ ಕೇಳಿಬಂದಿತ್ತು. 


1918ರಲ್ಲಿ ಜನಿಸಿದ್ದ ಆನಂದ ಆಳ್ವರು ಸಣ್ಣಂದಿನಲ್ಲಿ ಕಿನ್ನಿಕಂಬಳದ ಸರಕಾರಿ ಶಾಲೆಯಲ್ಲಿ ಐದನೇ ಕ್ಲಾಸು ಓದಿದ್ದರಂತೆ. ಮಿಜಾರಿನಲ್ಲಿದ್ದುಕೊಂಡೇ ಕೃಷಿಕನಾಗಿದ್ದ ಆನಂದ ಆಳ್ವರು ಒಂದು ಬಾರಿ ಬೀಡಿ ವ್ಯವಹಾರವನ್ನೂ ಮಾಡಿಕೊಂಡಿದ್ದರು. ಆನಂತರ ಅಬಕಾರಿ ಗುತ್ತಿಗೆಯನ್ನೂ ಮಾಡಿದ್ದರು. ಕಂಬಳ, ದೈವಾರಾಧನೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಸ್ವತಃ ಕಂಬಳದ ಕೋಣಗಳನ್ನು ಸಾಕಿ ಕಂಬಳದ ಸ್ಪರ್ಧೆಗಳಿಗೆ ತೆರಳುತ್ತಿದ್ದರು. 2022ರ ಆಗಸ್ಟ್ ತಿಂಗಳಲ್ಲಿ ಆಳ್ವಾಸ್ ಸಂಸ್ಥೆಯ ಆವರಣದಲ್ಲಿ ಆನಂದ ಆಳ್ವರ 105 ವರ್ಷದ ಸಂಭ್ರಮಪೂರ್ಣ ಕಾರ್ಯಕ್ರಮ ನಡೆದಿತ್ತು.



Leave a Comment: