ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಹೃದಯದಲ್ಲಿ ಮಡುಗಟ್ಟಿದ ನೋವು ಮೊಗದಲ್ಲಿ ಮುಗುಳ್ನಗೆ ತನ್ನ ಸಾವಿನ ಸುದ್ದಿಯನ್ನು ತಾನೇ ಘೋಷಿಸಿದ ಮಹಿಳೆ

Posted by Vidyamaana on 2023-11-17 20:00:56 |

Share: | | | | |


ಹೃದಯದಲ್ಲಿ ಮಡುಗಟ್ಟಿದ ನೋವು ಮೊಗದಲ್ಲಿ ಮುಗುಳ್ನಗೆ ತನ್ನ ಸಾವಿನ ಸುದ್ದಿಯನ್ನು ತಾನೇ ಘೋಷಿಸಿದ ಮಹಿಳೆ

ಪ್ರೀತಿಸುವ ಗಂಡ, ಮುದ್ದಾದ ಮಕ್ಕಳು, ಜೀವನವನ್ನು ಸಾಗಿಸಲು ಬೇಕಾದಷ್ಟು ಸಂಪಾದನೆ ಇನ್ನೇನು ಬೇಕು ಹೇಳಿ ಬದುಕಲ್ಲಿ. ಆದರೆ ಅಂತಹ ಸುಂದರ ಬದುಕಲ್ಲಿ ಕ್ಯಾನ್ಸರ್​ ಎನ್ನುವ ಬಿರುಗಾಳಿ ಬೀಸಿದಾಗ ಅದನ್ನು ತಡೆದುಕೊಳ್ಳುವ ಶಕ್ತಿ ಯಾರಿಗೂ ಇರುವುದಿಲ್ಲ. ಆದರೆ ಈ ಮಹಿಳೆ ತನ್ನ ಸಾವಿನ ಸುದ್ದಿಯನ್ನು ತಾನೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದಾರೆ.


ಎಂದೂ ತನಗೆ ಇಂಥಾ ಪರಿಸ್ಥಿತಿ ಬಂದುಬಿಡ್ತಲ್ಲಾ ಎಂದು ದೇವರನ್ನು ಶಪಿಸಿಲ್ಲ, ಇರುವಷ್ಟು ದಿನ ಇದ್ದ ಜೀವನವನ್ನು ಖುಷಿಯಿಂದಲೇ ಕಳೆದಿದ್ದಾರೆ ಈ ಮಹಿಳೆ. ಈ ಮಹಿಳೆ ಹೆಸರು ಕೇಸಿ ಮ್ಯಾಕ್​ಇಂಟೈರ್​ ಆಕೆ ಅಂಡಾಶಯದ ಕ್ಯಾನ್ಸರ್​ನಿಂದ ಭಾನುವಾರ ನಿಧನರಾಗಿದ್ದಾರೆ. ಆಕೆ ಸಾಯುವ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಸಾವನ್ನು ಘೋಷಿಸಿ ಬಳಿಕ ಪ್ರೀತಿಪಾತ್ರರಿಗೆ ಕೊನೆಯ ವಿದಾಯವನ್ನು ಬರೆದಿದ್ದಳು.ನೀವು ಈ ಪೋಸ್ಟ್​ ಅನ್ನು ಓದುತ್ತಿದ್ದರು ನಾನು ಈ ಜಗತ್ತಿನಲ್ಲಿ ಇಲ್ಲ ಎಂದರ್ಥ, ನನಗೆ ಅಂಡಾಶಯ ಕ್ಯಾನ್ಸರ್​ ಇತ್ತು ಅದನ್ನು ನಾಲ್ಕನೇ ಹಂತವನ್ನು ತಲುಪಿತ್ತು. ಚಿಕಿತ್ಸೆ ಪಡೆದ ಬಳಿಕವೂ ಪುನರಾವರ್ತನೆಯಾಗಿದೆ.


ಈ ಐದು ತಿಂಗಳು ವರ್ಜೀನಿಯಾ, ರೋಡ್​ ಐಲೆಂಡ್​ ಹಾಗೂ ನ್ಯಾಯಾರ್ಕ್​ನಲ್ಲಿ ನನ್ನ ಸ್ನೇಹಿತರೊಂದಿಗೆ ಹಾಗೂ ಕುಟುಂಬದ ಜತೆ ಕಳೆಯಲು ಅವಕಾಶ ದೊರೆತಿರುವುದಕ್ಕೆ ನಾನು ಧನ್ಯ.


ಆಸ್ಪತ್ರೆಗೆ ತೆರಳಿ ಯಾರಿಗೂ ತಿಳಿಯದಂತೆ ಬೇರೆಯವರ ವೈದ್ಯಕೀಯ ಸಾಲವನ್ನು ತಾವು ಪಾವತಿಸಲು ಚಾರಿಟಿಯನ್ನು ತೆರೆಯುವುದು ಆಕೆಯ ಕನಸಾಗಿತ್ತು, ಆ ಕನಸನ್ನು ಸಾಕಾರಗೊಳಿಸುತ್ತೇನೆ ಎಂದು ಮಹಿಳೆಯ ಪತಿ ತಿಳಿಸಿದ್ದಾರೆ. ಶುಕ್ರವಾರದವರೆಗೆ 1.09 ಕೋಟಿ ರೂ. ಸಂಗ್ರಹವಾಗಿದೆ.

ಕೇಸಿ ಅವರು ಮಕ್ಕಳು ಹಾಗೂ ವಯಸ್ಕರಿಗೆ ಪುಸ್ತಕಗಳನ್ನು ಪ್ರಕಟಿಸುವ ಪೆಂಗ್ವಿನ್ ರಾಂಡಮ್​ ಹೌಸ್​ನಲ್ಲಿ ಪ್ರಕಾಶಕರಾಗಿದ್ದರು.ಕೇಸಿ ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆ, ನಾವು ನಿಮ್ಮನ್ನು ಕಳೆದುಕೊಂಡುಬಿಟ್ಟೆವು, ನೀನೆಲ್ಲೇ ಇದ್ದರೂ ನಮ್ಮೊಂದಿಗೆ ಇದ್ದೀಯ ಎನ್ನುವ ಭಾವನೆ ನಮ್ಮದು ಎಂದು ಪತಿ ಬರೆದುಕೊಂಡಿದ್ದಾರೆ.

ಉಪ್ಪಳ : ಹಾಡಹಗಲೇ ವಾಹನದ ಗಾಜು ಒಡೆದು ಎಟಿಎಂಗೆ ತುಂಬಲು ತಂದಿದ್ದ ಹಣ ಕಳವು

Posted by Vidyamaana on 2024-03-27 17:16:13 |

Share: | | | | |


ಉಪ್ಪಳ : ಹಾಡಹಗಲೇ ವಾಹನದ ಗಾಜು ಒಡೆದು ಎಟಿಎಂಗೆ ತುಂಬಲು ತಂದಿದ್ದ ಹಣ ಕಳವು

ಕಾಸರಗೋಡು, ಮಾ.27: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆಗೈದ ಘಟನೆ ಉಪ್ಪಳಪೇಟೆಯಲ್ಲಿ ನಡೆದಿದೆ.


ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕ್ ನ ಎ ಟಿ ಎಂ ಮೆಷಿನ್ ಗೆ ಹಣ ತುಂಬಿಸಲು ಬಂದಿದ್ದ ಸಂದರ್ಭ ಈ ಘಟನೆ ನಡೆದಿದೆ.


ವಾಹನದಲ್ಲಿದ್ದ ನೌಕರರು ವಾಹನ ನಿಲ್ಲಿಸಿ ಎಟಿಎಂ ಮೆಷಿನ್ ತೆರೆದು ವಾಹನದಲ್ಲಿದ್ದ ಹಣದ ಬಾಕ್ಸನ್ನು ತೆಗೆದುಕೊಂಡು ಹೋಗಲು ಮರಳಿ ಬಂದಾಗ ವಾಹನದ ಗಾಜು ಹುಡಿಯಾದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ 50 ಲಕ್ಷ ರೂ. ಇದ್ದ ಬಾಕ್ಸ್ ನಾಪತ್ತೆಯಾಗಿತ್ತು. ಖಾಸಗಿ ಏಜೆನ್ಸಿಯ ವಾಹನದಲ್ಲಿ ಹಣವನ್ನು ತಂದು ಎಟಿಎಂ ಗೆ ತುಂಬಿಸಲಾಗುತ್ತಿತ್ತು. ವಾಹನದ ಗಾಜನ್ನು ಒಡೆದು ಕೃತ್ಯ ನಡೆಸಲಾಗಿದೆ.


ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು , ವಾಹನದ ಚಾಲಕ ಮತ್ತು ನೌಕರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸಮೀಪದ ಸಿಸಿಟಿವಿ ಕ್ಯಾಮರಾ ಮೂಲಕ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುತ್ತೂರು : ಬಾವಿಗೆ ಹಾರಿ ಜೀವಾಂತ್ಯ ಮಾಡಿಕೊಂಡ ವಿವಾಹಿತ ಮುಸ್ಲಿಂ ಮಹಿಳೆ

Posted by Vidyamaana on 2023-10-26 12:17:12 |

Share: | | | | |


ಪುತ್ತೂರು : ಬಾವಿಗೆ ಹಾರಿ ಜೀವಾಂತ್ಯ ಮಾಡಿಕೊಂಡ ವಿವಾಹಿತ ಮುಸ್ಲಿಂ ಮಹಿಳೆ

ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹ ತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿ ಕಾವು ಸಮೀಪದ ಅಮ್ಮಿನಡ್ಕದಿಂದ ವರದಿಯಾಗಿದೆ.ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂ ಡಿರುವುದಾಗಿ ತಿಳಿದು ಬಂದಿದೆ.

ಮೃತರನ್ನು ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದೆ


ಆಯಿಷಾರವರನ್ನು ವಳಾಲಿನ ಸಲೀಂ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಸಲೀಂರವರು ಬೆಂಗಳೂರಿನಲ್ಲಿ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾ ಡಿಕೊಂಡಿದ್ದು ಆಯಿಷಾರವರು ಒಂದು ತಿಂಗಳ ಹಿಂದೆ ತ ನ್ನ ತಂದೆಯ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ಸಾವಿಆಯಿಷಾಳ ಗಂಡ ಮಾನಸಿಕ, ದೈಹಿಕ ಕಿರುಕುಳ ಹಿಂಸೆ ನೀಡಿದ್ದೇ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯಿಷಾಳ ತಂದೆ ಜೈನುದ್ದೀನ್‌ರವರು ದೂರಿನಲ್ಲಿ ತಿಳಿಸಿದ್ದಾರೆ.

ಮಣಿಪಾಲದ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ: ಪಯಾಜ್‌ - ಸಚಿನ್‌ ಪರಾರಿ

Posted by Vidyamaana on 2023-06-01 08:12:26 |

Share: | | | | |


ಮಣಿಪಾಲದ ಅಪಾರ್ಟ್‌ಮೆಂಟಿನಲ್ಲಿ ವೇಶ್ಯಾವಾಟಿಕೆ:  ಪಯಾಜ್‌ - ಸಚಿನ್‌ ಪರಾರಿ

ಉಡುಪಿ: ಮಣಿಪಾಲ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹೆರ್ಗದ ಈಶ್ವರ ನಗರದ ಮಹಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟಿನ ಕೊಠಡಿ ಸಂಖ್ಯೆ 302ರಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ದಾಳಿ ನಡೆಸಲಾಗಿದೆ.ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿ ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಆರೋಪಿಗಳಾದ ಪಯಾಜ್‌ ಮತ್ತು ಸಚಿನ್‌ ದಾಳಿಯ ಸಮಯ ಸ್ಥಳದಿಂದ ಪರಾರಿಯಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೋಟರಿಪುರ : ಮನೆ ಮನೆ ಮತ ಚೀಟಿ ವಿತರಣೆಗೆ ತೆರಳಿದ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Posted by Vidyamaana on 2024-04-16 14:15:00 |

Share: | | | | |


ರೋಟರಿಪುರ : ಮನೆ ಮನೆ ಮತ ಚೀಟಿ ವಿತರಣೆಗೆ ತೆರಳಿದ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

ಪುತ್ತೂರು: ಲೋಕಸಭಾ ಚುನಾವಣೆ ಕರ್ತವ್ಯ ನಿರತ ಮನೆ ಮನೆಗೆ ಮತ ಚೀಟಿ ವಿತರಣೆಗೆ ತೆರಳಿದ ರೋಟರಿಪುರ ಅಂಗನವಾಡಿ ಕಾರ್ಯಕರ್ತೆಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆ ಎ.16 ರಂದು ಬೆಳಿಗ್ಗೆ ನಡೆದಿದೆ

ಸ್ವಾತಂತ್ರ್ಯೋತ್ಸವ ಅಂಗವಾಗಿ‌ ಪುತ್ತೂರು ಜಿಎಲ್ ವನ್ ಮಾಲ್ ನಲ್ಲಿ ಫನ್ ಗ್ಯಾಲೆಕ್ಸಿ ಫ್ರೀಡಂ ಫೆಸ್ಟಿವಲ್

Posted by Vidyamaana on 2023-08-07 15:56:45 |

Share: | | | | |


ಸ್ವಾತಂತ್ರ್ಯೋತ್ಸವ ಅಂಗವಾಗಿ‌ ಪುತ್ತೂರು ಜಿಎಲ್ ವನ್ ಮಾಲ್ ನಲ್ಲಿ ಫನ್ ಗ್ಯಾಲೆಕ್ಸಿ ಫ್ರೀಡಂ ಫೆಸ್ಟಿವಲ್

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಎಲ್ ವನ್ ಮಾಲ್ ಹಾಗೂ ಸುರೇಶ್ ಶೆಟ್ಟಿ ಈವೆಂಟ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ನೇತೃತ್ವದಲ್ಲಿ ಆ. 12, 13, 14, 15ರಂದು ಪುತ್ತೂರಿನಲ್ಲಿ ಫನ್ ಗ್ಯಾಲೆಕ್ಸಿ ಫ್ರೀಡಂ ಫೆಸ್ಟಿವಲ್ ಆಯೋಜಿಸಲಾಗಿದೆ.

ಪುತ್ತೂರಿನ ಜಿಎಲ್ ವನ್ ಮಾಲ್ನಲ್ಲಿ ನಡೆಯಲಿರುವ ವಿವಿಧ ಈವೆಂಟ್ಸ್ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿದೆ.

ಸುರೇಶ್ ಶೆಟ್ಟಿ ನೇತೃತ್ವದ ಸುರೇಶ್ ಶೆಟ್ಟಿ ಈವೆಂಟ್ಸ್ ಕಳೆದ 9 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, 2015ರಲ್ಲಿ ಪರ್ಲ್ ಸಿಟಿ ಎನ್ನುವ ಹೆಸರಿನಲ್ಲಿ‌ ಪುತ್ತೂರಿಗೆ ಪರಿಚಯಗೊಂಡಿತ್ತು. 2016ರಲ್ಲಿ ಪರ್ಲ್ ಸಿಟಿ ಅವಾರ್ಡ್ ನಡೆಸಿಕೊಟ್ಟು ಜನಮನ್ನಣೆ ಪಡೆದುಕೊಂಡಿತ್ತು. ಇದರೊಂದಿಗೆ ವೆಡ್ಡಿಂಗ್, ಬರ್ತ್ಡೇ ಸೇರಿದಂತೆ ಹಲವು ಈವೆಂಟ್ಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಇದೀಗ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಫನ್ ಗ್ಯಾಲೆಕ್ಸಿ ಫ್ರೀಡಂ ಫೆಸ್ಟಿವಲ್ ಹಮ್ಮಿಕೊಳ್ಳಲಾಗಿದೆ.


ಪುತ್ತೂರ್ಸ್ ಬೆಸ್ಟ್ ಡ್ಯಾನ್ಸರ್ಸ್:

ವೈಟ್ ಟ್ಯಾಗ್ ಪ್ರಾಯೋಜಕತ್ವದಲ್ಲಿ 12ರಂದು ಸಂಜೆ 6ರಿಂದ ಪುತ್ತೂರ್ಸ್ ಬೆಸ್ಟ್ ಡ್ಯಾನ್ಸರ್ಸ್ ಸ್ಪರ್ಧೆ ನಡೆಯಲಿದೆ. ವಯಸ್ಸಿನ ಮಿತಿ 15ರಿಂದ 30 ವರ್ಷ. ವೆಸ್ಟರ್ನ್, ಬಾಲಿವುಡ್, ಸೆಮಿ-ಕ್ಲಾಸಿಕಲ್, ಹಿಪ್-ಹಾಪ್ ಮತ್ತು ಫ್ರೀಸ್ಟೈಲ್ ನೃತ್ಯ ಶೈಲಿ ಪ್ರದರ್ಶನಕ್ಕೆ ಅವಕಾಶ. ಸಮಯದ ಮಿತಿ 3+1 ನಿಮಿಷ. ಸ್ಪರ್ಧೆಯ ಅರ್ಹತೆಗಾಗಿ ಸ್ಪರ್ಧಿಗಳ ರೀಲ್ಸ್ ಅಥವಾ ಕ್ಲಿಪ್ಸ್ ಅನ್ನು ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ ಸಂಪರ್ಕಸಿ 8861416129.


ಪ್ರಿನ್ಸ್ ಆ್ಯಂಡ್ ಪ್ರಿನ್ಸೆಸ್ ಆಫ್ ಕೋಸ್ಟಲ್ ಕರ್ನಾಟಕ, ರ್ಯಾಂಪ್ ವಾಕ್:

ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪ್ರಾಯೋಜಕತ್ವದಲ್ಲಿ ಪ್ರಿನ್ಸ್ ಆ್ಯಂಡ್ ಪ್ರಿನ್ಸೆಸ್ ಆಫ್ ಕೋಸ್ಟಲ್ ಕರ್ನಾಟಕ ಹಾಗೂ ಲಶ್, ಐಶ್ವರ್ಯ ಬ್ಯೂಟಿ ಪಾರ್ಲರ್, ಮೋಹಿ ಪ್ರಾಯೋಜಕತ್ವದಲ್ಲಿ ಟ್ರೇಡಿಷನಲ್ ರ್ಯಾಂಪ್ ವಾಕ್ ನಡೆಯಲಿದೆ. ವಯಸ್ಸಿನ ಮಿತಿ 15ರಿಂದ 30 ವರ್ಷ. ಆಗಸ್ಟ್ 9ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಸಂಪರ್ಕಸಿ 8861416129.


ಫುಡ್ ಫೆಸ್ಟಿವಲ್:

ಪಾಪ್ಯುಲರ್ ಸೆಲಬ್ರೇಶನ್ ಪ್ರಾಯೋಜಕತ್ವದಲ್ಲಿ ಫುಡ್ ಫೆಸ್ಟಿವಲ್ ನಡೆಯಲಿದೆ. ಆ. 12ರಿಂದ 15ರವರೆಗೆ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ನಡೆಯಲಿದ್ದು, ಸ್ಟಾಲ್ಗಳು ಲಭ್ಯವಿದೆ. ಮಾಹಿತಿಗೆ ಸಂಪರ್ಕಿಸಿ 9686359013, 8861416129.

ಸ್ಟ್ಯಾಂಡ್ ಅಪ್ ಕಾಮಿಡಿಯನ್:

ಎಂ. ಸಂಜೀವ ಶೆಟ್ಟಿ ಹಾಗೂ ಭೂಮಿ ಟೈಮ್ಸ್ ಪ್ರಾಯೋಜಕತ್ವದಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ನಡೆಯಲಿದೆ. ಆ‌. 14ರಂದು ಸಂಜೆ 6 ಗಂಟೆಯಿಂದ ಈವೆಂಟ್ಸ್ ನಡೆಯಲಿದೆ. ಅರ್ಹತೆಗಾಗಿ‌ ಸ್ಪರ್ಧಿಗಳು 30ರಿಂದ 60 ನಿಮಿಷದೊಳಗಿನ ಶಾರ್ಟ್ ವೀಡಿಯೋ ಕಳುಹಿಸಬೇಕು. ಸಮಯದ ಮಿತಿ 5+2 ನಿಮಿಷ. ಕನ್ನಡ, ತುಳು, ಹಿಂದಿ, ಇಂಗ್ಲೀಷ್ ಭಾಷೆ ಬಳಸಬಹುದು. ಮಾಹಿತಿಗೆ 8861416129 ಸಂಪರ್ಕಿಸಿ.

ರೀಲ್ ಇಟ್ ಅಪ್:

ಜಿಎಲ್ ಪ್ರಾಪರ್ಟೀಸ್ ಪ್ರಾಯೋಜಕತ್ವದಲ್ಲಿ ರೀಲ್ ಇಟ್ ಅಪ್ ನಡೆಯಲಿದೆ.

Glimpses of Freedom Festival @ GL One Mall ರೀಲ್ ಇಟ್ ಅಪ್ನ ವಿಷಯ. 30  ಸೆಕುಂಡಿನಿಂದ 1 ನಿಮಿಷದ ಸಮಯದ ಅವಧಿ. ಆಗಸ್ಟ್ 15ರ ಮಧ್ಯಾಹ್ನ 1 ಗಂಟೆಯೊಳಗೆ ರೀಲ್ಸ್ ಅನ್ನು‌ 8861416129 ನಂಬರಿಗೆ ಕಳುಹಿಸಬೇಕು.


ಈ ಎಲ್ಲ ಈವೆಂಟ್ಸ್ ಜೊತೆಗೆ ಕಾರ್ಯಕ್ರಮದ ಪ್ರಾಯೋಜಕರಾಗಿ ದೋಸಾ ಕಾರ್ನರ್, ಫ್ರೈಡ್ ಚಿಕ್, ಟ್ರಾವೆಲ್ ಪಾರ್ಟ್ನರ್ಸ್, ಗ್ರಿಲ್ಡ್, ಜ್ಯೂಸ್ ಆ್ಯಂಡ್ ಶೇಕ್ಸ್, ಜ್ಯಾಕ್ ಫ್ರುಟ್ಸ್, ಅಕ್ಷಯ ಪವರ್ ಸಿಸ್ಟಮ್ಸ್, ಟಿವಿ ಕ್ಲಿನಿಕ್, ಸಚಿನ್ ಬೇಕ್ ಐಸ್ಕ್ರೀಮ್, ಪಶುಪತಿ ಲೈಟ್ಸ್ - ಫ್ಯಾನ್ಸ್ - ಎಲೆಕ್ಟ್ರಿಕಲ್ಸ್, ಕೊಕೋ ಗುರು ಅಡಿಗೆ ಮನೆ ಹಾಗೂ ಫನ್ ಗ್ಯಾಲೆಕ್ಸಿ ಸಹಕರಿಸಲಿದ್ದಾರೆ.ಈ ಎಲ್ಲ ಈವೆಂಟ್ಸ್ ಜೊತೆಗೆ ಕಾರ್ಯಕ್ರಮದ ಪ್ರಾಯೋಜಕರಾಗಿ ದೋಸಾ ಕಾರ್ನರ್, ಫ್ರೈಡ್ ಚಿಕ್, ಟ್ರಾವೆಲ್ ಪಾರ್ಟ್ನರ್ಸ್, ಗ್ರಿಲ್ಡ್, ಜ್ಯೂಸ್ ಆ್ಯಂಡ್ ಶೇಕ್ಸ್, ಜ್ಯಾಕ್ ಫ್ರುಟ್ಸ್, ಅಕ್ಷಯ ಪವರ್ ಸಿಸ್ಟಮ್ಸ್, ಟಿವಿ ಕ್ಲಿನಿಕ್, ಸಚಿನ್ ಬೇಕ್ ಐಸ್ಕ್ರೀಮ್, ಪಶುಪತಿ ಲೈಟ್ಸ್ - ಫ್ಯಾನ್ಸ್ - ಎಲೆಕ್ಟ್ರಿಕಲ್ಸ್, ಕೊಕೋ ಗುರು ಅಡಿಗೆ ಮನೆ ಹಾಗೂ ಫನ್ ಗ್ಯಾಲೆಕ್ಸಿ ಸಹಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



Leave a Comment: