Posted by vidyamaana on 2024-07-03 19:23:39 |
ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್ನಲ್ಲಿ ಸದಸ್ಯರಾಗಿರುತ್ತಾರೆ.
ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.
Posted by Vidyamaana on 2023-10-12 15:13:36 |
ಮಂಗಳೂರು: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ ಮುಲ್ಕಿ ನಿವಾಸಿ ಆಪತ್ಥಾಂಧವ ಎಂದೇ ಗುರುತಿಸಲ್ಪಟ್ಟಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆಸ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು ಎನ್ನಲಾಗಿದೆ. ಈ ಸಂದರ್ಭ ಸೆಕ್ಯುರಿಟಿ ಗಾರ್ಡ್ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದಾಗ ತಾನು ರೋಗಿಗಳನ್ನು ಅಡ್ಮಿಷನ್ ಮಾಡಿಸುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ. ಆದರೆ ಕೆಲವು ಹೊತ್ತಿನ ಬಳಿಕವೂ ಆ್ಯಂಬುಲೆನ್ಸ್ ತೆರವು ಮಾಡದಿದ್ದಾಗ ಮಹಿಳಾ ಸಿಬ್ಬಂದಿ ಆಕ್ಷೇಪಿಸಿದರು. ಈ ಸಂದರ್ಭ ಆಸಿಫ್ ಮತ್ತು ಮಹಿಳಾ ಸಿಬ್ಬಂದಿಯ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ತನ್ನನ್ನು ದೂಡಿ ಹಾಕಿ ಆಸಿಫ್ ಹಲ್ಲೆ ಮಾಡಿದ್ದಾರೆ ಎಂದು ಮಹಿಳಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪೊಲೀಸರು ಆಸಿಫ್ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Posted by Vidyamaana on 2024-02-29 16:48:05 |
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಖಚಿತವಾದ ಬೆನ್ನಲ್ಲೇ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತಿಲ ಪರಿವಾರ ಎಂಬುದು ಒಂದು ಸ್ವತಂತ್ರ ಸಂಸ್ಥೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ ಎಂದು ಕಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ್ ಕುಮಾರ್ ಪುತ್ತಿಲ ಅವರನ್ನು ಮನವೊಲಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಭಾರತೀಯ ಜನತಾ ಪಕ್ಷವು ಬಹಳ ವರ್ಷಗಳ ಹೋರಾಟದಿಂದ ಈ ಮಟ್ಟಕ್ಕೆ ಬೆಳೆದಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಅನ್ನು ಎದುರಿಸಿ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಪಕ್ಷಕ್ಕೆ ಎದುರಾಳಿ ಎಂಬ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ರಾಮಮಂದಿರ ನಿರ್ಮಾಣವಾದ ಬಳಿಕ ಬಿಜೆಪಿ ಪರವಾದ ವಾತಾವರಣ ಅದ್ಭುತವಾಗಿದೆ. ಹಿಂದುತ್ವ,ರಾಷ್ಟ್ರವಾದ,ಅಭಿವೃದ್ಧಿ ವಿಚಾರವಾಗಿ ಜನ ಒಗ್ಗಟಾಗುತ್ತಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಆಗಿನ ಸಮಸ್ಯೆ ಬೇರೆ, ಈಗಿನ ವಿಚಾರ ಬೇರೆ. ಈ ಬಾರಿಯ ಚುನಾವಣೆಯಲ್ಲೂ ಭಾರೀ ಗೆಲುವು ಸಾಧಿಸುತ್ತೇನೆ. ಟಿಕೆಟ್ ಕೊಡುವುದು ಅಥವಾ ಬಿಡುವುದು ರಾಷ್ಟ್ರೀಯ ನಾಯಕರ ತೀರ್ಮಾನ ಎಂದರು.
Posted by Vidyamaana on 2024-01-29 21:24:41 |
ಲಕ್ನೋ: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ ಪಡಿಸಿದ್ದಕ್ಕೆ ಸಿಟ್ಟಿನಲ್ಲಿ ಪತ್ನಿಯೇ ಪತಿಯ ಶಿಶ್ನವನ್ನು ಕಚ್ಚಿ ಗಾಯಗೊಳಿಸಿದ ಘಟನೆ ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ನಡೆದಿದೆ.
ತೀವ್ರ ಗಾಯಗೊಂಡಿದ್ದ ರಾಮು ನಿಶಾದ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜ.28ರಂದು ಘಟನೆ ನಡೆದಿದ್ದು ರಾಮು ನಿಶಾದ್ ತನ್ನ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ. ಇದಕ್ಕೆ ಪತ್ನಿ ಒಪ್ಪದೇ ಇದ್ದು ಇಬ್ಬರ ನಡುವೆ ಜಗಳ ಆಗಿತ್ತು. ಸಿಟ್ಟಿನಲ್ಲಿದ್ದ ಪತ್ನಿ ಪತಿಯ ಖಾಸಗಿ ಅಂಗವನ್ನು ಹಲ್ಲಿನಿಂದ ಕಚ್ಚಿದ್ದಾಳೆ. ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಪತಿ ಬೇಡಿಕೆ ಇಟ್ಟಿದ್ದಕ್ಕೆ ಬೇಸರಗೊಂಡು ಹೀಗೆ ಮಾಡಿರುವುದಾಗಿ ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ. ಮಹಿಳೆ ವಿರುದ್ಧ ಸೆಕ್ಷನ್ 326 ರ ಅಡಿಯಲ್ಲಿ ಉದ್ದೇಶಪೂರ್ವಕ ತೀವ್ರ ಗಾಯವನ್ನು ಉಂಟುಮಾಡಿದ ಮತ್ತು ಸೆಕ್ಷನ್ 506 ರ ಅಡಿಯಲ್ಲಿ ಜೀವಕ್ಕೆ ಅಪಾಯ ಉಂಟು ಮಾಡಬಲ್ಲ ರೀತಿ ವರ್ತಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
Posted by Vidyamaana on 2023-09-26 09:59:36 |
ನವದೆಹಲಿ: ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನಲ್ಲಿ ವಾಕ್ ಶ್ರವಣ ದೋಷವುಳ್ಳ ಮೂಕ ವಕೀಲೆಯೊಬ್ಬರು ಸಂಕೇತ ಭಾಷೆಯನ್ನು ಬಳಸುವ ಮೂಲಕ ವಾದ ಮಂಡಿಸಿದ್ದಾರೆ. ಈ ಮೂಲಕ ಹೊಸ ಇತಿಹಾಸವನ್ನು ದಾಖಲು ಮಾಡಲಾಗಿದೆ.ಹೌದು ಭಾರತದ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಅವರಿದ್ದ ನ್ಯಾಯಪೀಠವು ವರ್ಚುವಲ್ ಆಗಿ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ವೇಳೆ ಸಾರಾ ಸನ್ನಿ ಎಂಬ ಮೂಕ ವಕೀಲೆ ತಮ್ಮ ವ್ಯಾಖ್ಯಾನಕಾರ ಸೌರಭ್ ರಾಯ್ ಚೌಧರಿ ಮೂಲಕ ವಾದವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮುಂದೆ ಮಂಡಿಸಿದ್ದಾರೆ.ಸಾರಾ ಅವರ ಸಂಕೇತ ಭಾಷೆಯನ್ನು ಸೌರಭ್ ಅವರು ಬಾಯಿ ಮಾತಿನಲ್ಲಿ ಹೇಳುವ ಮೂಲಕ ಸುಪ್ರೀಂ ಕೋರ್ಟ್ ನ್ಯಾಯಪೀಠಕ್ಕೆ ತಿಳಿಸಿಕೊಟ್ಟಿದ್ದಾರೆ. ಈ ಪ್ರಯತ್ನವನ್ನು ಅನೇಕ ಗಣ್ಯರು, ಹಿರಿಯ ವಕೀಲರು ಶ್ಲಾಘಿಸಿದ್ದಾರೆ.
ನಡೆದಿದ್ದೇನು.?
ಅರ್ಜಿಯೊಂದರ ವಿಚಾರಣೆಯ ಆರಂಭದ ವೇಳೆ ವರ್ಚುವಲ್ ವಿಚಾರಣೆಯ ತಾಂತ್ರಿಕ ತಂಡವು ಸಾರಾಗೆ ಸ್ಕ್ರೀನ್ ಮೇಲೆ ಬರಲು ಅನುತಿ ನೀಡದೇ ಕೇವಲ ವ್ಯಾಖ್ಯಾನಕಾರ ಸೌರಭ್ ಗೆ ಅನುಮತಿ ನೀಡಿತು. ಹೀಗಾಗಿ ಮೊದಲಿಗೆ ಸ್ಕ್ರೀನ್ ನಲ್ಲಿ ಸೌರಭ್ ಮಾತ್ರ ಕಾಣಿಸಿಕೊಂಡು ಸಾರಾ ತರೆಯ ಹಿಂದೆ ಸಂಜ್ಞೆಯ ಮೂಲಕ ಹೇಳುತ್ತಿದ್ದ ವಿವರವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಯಿ ಮಾತಿನ ಮೂಲಕ ತಿಳಿಸಿದರು.ಆಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಅವರು, ವಕೀಲೆ ಸಾರಾ ಅವರಿಗೂ ಸ್ಕ್ರೀನ್ ಮೇಲೆ ಅವಕಾಶ ನೀಡಿ ಅಂತ ಆದೇಶಿಸಿದರು. ಆಗ ಸಾರಾ ಅವರು ಒಂದು ಸ್ಕ್ರೀನ್ ನಲ್ಲಿ ತಮ್ಮ ಸಂಜ್ಞೆ ವಾದವನ್ನು ಮಂಡಿಸಿದರು. ಅವರ ವ್ಯಾಖ್ಯಾನಕಾರ ಸೌರಭ್, ಅವರ ಸಂಜ್ಞೆಗಳನ್ನು ಬಾಯಿ ಮಾತಿನಲ್ಲಿ ನ್ಯಾಯಪೀಠದ ಗಮಕ್ಕೆ ತಿಳಿಸಿದರು.
ನ್ಯಾಯಮೂರ್ತಿ ಚಂದ್ರ ಚೂಡ ಅವರು ಮೊದಲಿನಿಂದಲೂ ನ್ಯಾಯಕ್ಕೆ ಸಮಾನ ನ್ಯಾಯದಾನ ಪ್ರತೀಕರಾಗಿದ್ದಾರೆ. ಇಬ್ಬರು ಅಂಗವಿಕಲ ಬಾಲಕಿಯರ ದತ್ತು ತಂದೆಯೂ ಹೌದು. ವರ್ಷಾರಂಭದಲ್ಲಿ ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳ್ನು ತಮ್ಮ ಕಚೇರಿಗೆ ಪ್ರವಾಸಕ್ಕೆಂದು ಕರೆತಂದು ಎಲ್ಲರನ್ನು ಚಕಿತಗೊಳಿಸಿದ್ದರು.
ನ್ಯಾಯಾಲಯವು ಹೇಗೆ ಕೆಲಸ ಮಾಡುತ್ತದೆ. ಅಲ್ಲಿ ತಮ್ಮ ಕೆಲಸ ಏನು ಎಂಬುದನ್ನು ಅವರು ತಮ್ಮ ಹೆಣ್ಣುಮಕ್ಕಳಿಗೆ ವಿವರಿಸಿದ್ದರು. ಇಂತಹ ಅವರು ದೇಶದ ಇತಿಹಾಸದಲ್ಲಿಇದೇ ಮೊದಲು ಎನ್ನುವಂತೆ ಮೂಕ ವಕೀಲೆಯೊಬ್ಬರಿಗೆ ವಾದ ಮಂಡಿಸೋದಕ್ಕೆ ಅವಕಾಶ ಮಾಡಿಕೊಟ್ಟು, ಹೊಸ ಇತಿಹಾಸವನ್ನು ಇದೀಗ ಬರೆದಿದ್ದಾರೆ.
Posted by Vidyamaana on 2024-05-09 11:21:42 |
ಬೆಂಗಳೂರು : ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಮಾತನಾಡಿ 2023-24 ನೇ ಸಾಲಿನಲ್ಲಿ ಶೇ 76.91ರ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಅಂತ ತಿಳಿಸಿದರು.ಇನ್ನೂ ಈ ಬಾರಿ ಮೂರು ಬಾರಿ ಎಕ್ಸಾಂ ಬರೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಅಂತಿಮವಾಗಿ ಹೆಚ್ಚಿನ ಅಂಕ ತೆಗೆದುಕೊಂಡದನ್ನು ಅಂತಿಮವಾಗಿ ಗಣನೆಗೆ ತೆಗೆದುಕೊಳ್ಳಲಾಗುವುದು ಅಂತ ಹೇಳಿದರು.