ಕರವೇಲು ಮಸೀದಿಯಲ್ಲಿ ಮರ್ಹೂಂ ಮುಸ್ತಫಾ ಹಾಜಿ ಕೆಂಪಿ ವಾರ್ಷಿಕ ಸ್ಮರಣೆ

ಸುದ್ದಿಗಳು News

Posted by vidyamaana on 2024-06-28 19:50:37 |

Share: | | | | |


ಕರವೇಲು ಮಸೀದಿಯಲ್ಲಿ ಮರ್ಹೂಂ ಮುಸ್ತಫಾ ಹಾಜಿ ಕೆಂಪಿ ವಾರ್ಷಿಕ ಸ್ಮರಣೆ

ಉಪ್ಪಿನಂಗಡಿ;ಇಲ್ಲಿಗೆ ಸಮೀಪದ ಕರುವೇಲು ಜುಮಾ ಮಸೀದಿಯಲ್ಲಿ  ಮರ್ಹೂಂ ಕೆಂಪಿ ಮುಸ್ತಫಾ ಹಾಜಿಯವರ ವಾರ್ಷಿಕ ಸಂಸ್ಮರಣಾ ಕಾರ್ಯಕ್ರಮವು ಇಂದು ಜುಮಾ ನಮಾಜಿನ  ನಂತರ ನಡೆಯಿತು.

ಕುರ್ಅನ್ ಪಾರಾಯಣ ,ತಹ್ಲೀಲ್ ಸಮರ್ಪಣೆಯ ನಂತರ ಸ್ಥಳೀಯ ಖತೀಬ್ ಸಯ್ಯಿದ್ ಅನಸ್ ತಂಙಳ್ ದುಹಾಶಿರ್ವಚನ ಮಾಡಿ ಮುಸ್ತಪಾ ಹಾಜಿಯವರ ಗುಣಗಾನ ಮಾಡುತ್ತಾ ಸಮುದಾಯಕ್ಕಾಗಿ ತನ್ನ ಜೀವನ ಮುಡಿಪಾಗಿಟ್ಟಿದ್ದ ಹಾಜಿಯವರಲ್ಲಿ ಸಾಮಾಜಿಕ ಚಿಂತನೆ ಮೇಳೈಸಿತ್ತು.ಅವರು ನಿತ್ಯ ಸ್ಮರಣೀಯರು.ಕರವೇಲು ಮಸೀದಿಯ ಗೌರವದ್ಯಕ್ಷರಾಗಿ ನಮ್ಮ ಜಮಾತ್ ಗೆ ಅವರು ನೀಡಿದ ಕೊಡುಗೆ ಅಪಾರ ಎಂದರು.

ಮುಖ್ಯ ಭಾಷಣಗಾರರಾಗಿ ಆಗಮಿಸಿದ ಜನಾಬ್ ಎಸ್ ಬಿ ಮುಹಮ್ಮದ್ ದಾರಿಮಿ ಉಪ್ಪಿನಂಗಡಿ ಮಾತನಾಡಿ ಅವರ ಜೊತೆಗಿನ ದೀರ್ಘ ಒಡನಾಟದ  ಅನುಭವವನ್ನು ಮೆಲುಕು ಹಾಕಿದರು.

ಇಂದಿನ ಯುವ ಪೀಳಿಗೆಗೆ ಕೆಂಪಿಯವರ ಆಡಳಿತ ವೈಖರಿ ಮಾದರಿಯಾಗಿದೆ.ಜಮಾತನ್ನು ಸುಧಾರಣೆಯ ಹಾದಿಯಲ್ಲಿ ಮುನ್ನಡೆಸುವಾಗ ಧರ್ಮ ಗುರುಗಳ ಜೊತೆ ಸಮಾಲೋಚನೆ ನಡೆಸುತ್ತಿದ್ದರು.ಹಿರಿಯರಿಗೆ ಗೌರವ,ಕಿರಿಯರ ಜೊತೆ ಪ್ರೀತಿ ತೋರಿದ್ದರಿಂದಲೇ ಮುಸ್ತಫಾ ಹಾಜಿ ಇಷ್ಟು ಎತ್ತರಕ್ಕೆ ಬೆಳೆದು ನಿಂತರು.

ಬಡವ ಬಲ್ಲಿದ ಎಂಬ ವ್ಯತ್ಯಾಸ ಇಲ್ಲದೆ ನ್ಯಾಯದ ಪರ ನಿಲ್ಲುವ ಧೈರ್ಯ ಅವರಿಗಿತ್ತು.

ಗಾಳಿ ಸುದ್ದಿ,ಪರಧೂಷಣೆಗೆ ನಿಂತು ಕೊಡದ ಹಾಜಿಯವರು ಎಲ್ಲವನ್ನೂ ಕೂಲಂಕುಷವಾಗಿ ಪರಾಂಬರಿಸಿ ನೋಡುತ್ತಿದ್ದರು.ತಂಟೆ ತಕರಾರು ಇದ್ದ ಉಪ್ಪಿನಂಗಡಿಯ ಅಸುಪಾಸಿನ ಬಹಳಷ್ಟು ಮೊಹಲ್ಲಾಗಳನ್ನು ಸರಿದಾರಿಗೆ ತರಲು ಹಾಜಿಯವರ ಕುಶಾಗ್ರತೆ ಬಹಳಷ್ಟು ಕೆಲಸ ಮಾಡಿತ್ತು.

ಆಯಾ ಊರಿನಲ್ಲಿ ನಾಯಕತ್ವ ಗುಣ ಇರುವವರಿಗೆ ಆಡಳಿತದ ಚುಕ್ಕಾಣಿ ವಹಿಸಿ ಕೊಡುವಲ್ಲಿ ಅವರು ನಿಪುಣರಾಗಿದ್ದರು.

ಎಂತಹ ಜಟಿಲ ಸಮಸ್ಯೆಗಳನ್ನು ಕೂಡಾ  ನಿಭಾಯಿಸುವಲ್ಲಿ ಅವರದ್ದು ಎತ್ತಿದ ಕೈಯಾಗಿತ್ತು ಎನ್ನುತ್ತಾ ಹಾಜಿಯವರನ್ನು ಸ್ಮರಿಸಿದರಲ್ಲದೇ 

ಉಪ್ಪಿನಂಗಡಿ ಅಸುಪಾಸಿನಲ್ಲಿ ಆ ಕಾಲದ ಹಿರಿಯರಾಗಿದ್ದ ಅಬ್ಬು ಹಾಜಿ ಮಠ,ಎಂಬಿ ಮೋನಾಕ,ಯೂಸಪಾಕ ಮಠ, ಕೆನರಾ ರಝಾಕ್ ಹಾಜಿ,ಪಳ್ಳಿಕುಞ ಹಾಜಿ,ಡಬ್ಬಲ್ ಫೋರ್ ಅಬ್ದುಲ್ ಖಾದಿರ್ ಹಾಜಿ,ಕೆಮ್ಮಾರ ಯೂಸುಪ್ ಹಾಜಿ,ಅಗ್ನಾಡಿ ಅಬೂಬಕರ್ ಹಾಜಿ,ಪೆದ್ಮಲೆ ಯೂಸುಪ್ ಹಾಜಿ,ಮೇದರಬೆಟ್ಟು ಕುಞಮೋನು ಹಾಜಿ,ಶುಕ್ರಿಯಾ ಅಬ್ಬಾಸ್ ಹಾಜಿ,ಕಡವಿನ ಬಾಗಿಲು ಅಬ್ಬು ಹಾಜಿ,ಮೋನು ಹಾಜಿ,ಐ ಹಸೈನಾರ್ ಹಾಜಿ,ಯುಟಿ ಇದ್ದಿಯಬ್ಬ ಹಾಜಿ,ಕರುವೇಲು ಮಮ್ಮಿ ಹಾಜಿ,ಮೈನಾ ಹಸನಬ್ಬ ಹಾಜಿ,ಅಬ್ದುಲ್ ರಹ್ಮಾನ್ ಬಾಬುಲ್ ಸಾಹೇಬ್ ಹಾಜಿ,ಕುದ್ಲೂರು ಹಮೀದ್ ಹಾಜಿ,ಕೆಂಪಿ ಅಬೂಬಕರ್ ,ಕೆಮ್ಮಾರ ಅಬ್ಬಾಸ್ ಹಾಜಿ,ರೈಟರ್ ಅಬೂಬಕರ್ ಹಾಜಿ,ಕರಾಯ ದೇಂತಾರು ಆದಂ ಹಾಜಿ,ಕೋಲ್ಪೆ ಅಬ್ದುಲ್ಲ ಕೋಯ ತಂಙಲ್,ಬಂಡಾಡಿ ರಝಾಕ್ ಮಾಸ್ಟರ್ ಮೊದಲಾದ ಹಲವಾರು ಅಗಲಿದ ಉಪ್ಪಿನಂಡಿ ಅಸುಪಾಸಿನ ಗೌರವಯುತ ನಾಯಕರ ಗರಡಿಯಲ್ಲಿ ಪಳಗಿದ ಮುಸ್ತಫಾ ಹಾಜಿ ಹಳೇ ಬೇರು ಹೊಸ ಚಿಗುರು ಎಂಬಂತೆ ಕಾಲದ ನಾಯಕನಾಗಿ ಹೊರಹೊಮ್ಮಿ ಬದುಕನ್ನು ದೀರ್ಘವಾಗಿ  ಆಸ್ವಾದಿಸುವ ಮುನ್ನವೇ ನಮ್ಮಿಂದ ಅಗಲಿದ್ದು ಇಡೀ ಸಮಾಜಕ್ಕೆ ನಷ್ಟವಾಯಿತು ಎಂದರು.

ದೀರ್ಘ ಇಪ್ಪತ್ತು ವರ್ಷಗಳ ನನ್ನ ಸೇವಾವಧಿಯ ಅರ್ಧ ಭಾಗ ಅವರ ಅಧಿಕಾರವಧಿಯಲ್ಲಿ ಸೇವೆ ಗಯ್ಯುವ ವೇಳೆ ನನ್ನೊಂದಿಗೆ ಬಹಳ ವಿನಯ ಗೌರವದೊಂದಿಗೆ ವರ್ತಿಸುತ್ತಿದ್ದ ಮುಸ್ತಫಾ ಹಾಜಿ ಮಸೀದಿಯಿಂದ ವಿರಮಿಸಿದ ನಂತರವೂ ಪ್ರತೀ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದ್ದರಲ್ಲದೇ ಪ್ರತೀ ರಮದಾನಿನಲ್ಲಿ ಪ್ರತ್ಯೇಕ ಆಹ್ವಾನ  ನೀಡಿ ಪ್ರೀತಿ ತೋರುತ್ತಿದ್ದರು.

ಇಂತಹ ಸದ್ಗುಣಗಳನ್ನು ಅಳವಡಿಸಿಕೊಳ್ಳಲು ಅದಕ್ಕೆ ಅಲ್ಲಾಹುವಿನ ವಿಶೇಷ ಭಾಗ್ಯ ಇರಬೇಕು ಎಂದ ದಾರಿಮಿಯವರು 

ಇಂದಿನ ಕೆಲವು ಮಸೀದಿ ಸಮಿತಿಯ ಯುವಕರು ಮಸೀದಿಯ ಗುರುಗಳನ್ನು ನಡೆಸಿಕೊಳ್ಳುವ ರೀತಿಯಿಂದಾಗಿ ಮಸೀದಿ ಕೆಲಸದಿಂದ ಉಸ್ತಾದರು ದೂರ ಸರಿಯುವಂತಹ ದುಸ್ಥಿತಿ ಉಂಟಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

ಕರುವೇಳು ಮಸೀದಿಯ ಅಧ್ಯಕ್ಷ ತೋಜಾ ಉಮ್ಮರ್ ಹಾಗೂ ಬೆಂಗಳೂರಿನ ಉದ್ಯಮಿ ಇಕ್ಬಾಲ್ ಕರುವೇಲು ರವರ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಮಂದಿಗೆ ಅನ್ನದಾನ ಮಾಡಲಾಯಿತು.

 Share: | | | | |


ಬ್ರೇಕಿಂಗ್ ನ್ಯೂಸ್ ಕೊಡೋಕೆ ನಾನು ಉಡುಪಿಗೆ ಬಂದಿಲ್ಲ ಖುಷ್ಬು ಸುಂದರ್

Posted by Vidyamaana on 2023-07-27 14:52:14 |

Share: | | | | |


ಬ್ರೇಕಿಂಗ್ ನ್ಯೂಸ್ ಕೊಡೋಕೆ ನಾನು ಉಡುಪಿಗೆ ಬಂದಿಲ್ಲ ಖುಷ್ಬು ಸುಂದರ್

ಉಡುಪಿ: ನಾನು ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸಂಬಂಧಪಟ್ಟ ವಿಚಾರ. ಏನು ಹೇಳೋದಕ್ಕೂ ಸ್ವಲ್ಪ ಟೈಮ್ ಬೇಕಾಗತ್ತೆ. ಟು ಮಿನಿಟ್ಸ್ ನೂಡಲ್ಸ್ ಥರ ಅಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್, ತನ್ನನ್ನು ಪದೇ ಪದೇ ಪ್ರಶ್ನೆ ಮಾಡಿದ ಟಿವಿ ಪತ್ರಕರ್ತರ ಬಗ್ಗೆ ಗರಂ ಆಗಿದ್ದಾರೆ.


ವಿಡಿಯೋ ಪ್ರಕರಣ ಸಂಬಂಧಿಸಿ ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಚರ್ಚಿಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ಈಗಷ್ಟೇ ನಾನು ತನಿಖೆಯನ್ನು ಆರಂಭಿಸಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. 


ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಬಂದಿಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರವಾಗಿದ್ದು ಸಾಕ್ಷ್ಯಗಳಿಗಾಗಿ ಕಾಯಬೇಕು. ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ. ನಾವೆಲ್ಲ ಇಂತಹದ್ದೇ ಶಿಕ್ಷಣ ಕೇಂದ್ರದಲ್ಲಿದ್ದು ಬಂದವರು. ಟಾಯ್ಲೆಟಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಎಂದರು. 


ನೀವು ಮಹಿಳಾ ಆಯೋಗದಿಂದ ದೂರು ದಾಖಲು ಮಾಡಿಕೊಳ್ತೀರಾ ಎಂಬ ಪ್ರಶ್ನೆಗೆ, ನಾನು ಈಗಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಮೊಬೈಲಿನಲ್ಲಿ ವಿಡಿಯೋ ರಿಕವರಿ ಆಗಬೇಕು. ಎಫ್ಎಸ್ಎಲ್ ರಿಪೋರ್ಟ್ ಬಂದ ಬಳಿಕವಷ್ಟೆ ಈ ಬಗ್ಗೆ ನಿರ್ಣಯ ಮಾಡಬೇಕಾಗತ್ತೆ. ಈಗ ಯಾವುದೇ ಮಾಹಿತಿ ಹಂಚಿಕೊಳ್ಳಲು ಆಗೋದಿಲ್ಲ. ಜನರು ಜಾಲತಾಣದಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಅಂತಹ ಯಾವುದೇ ಅಸಲಿ ವಿಡಿಯೋ ಸಿಕ್ಕಿಲ್ಲ. ಜನರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಸಲಹೆ ಮಾಡಿದ್ದಾರೆ.

ಪುತ್ತೂರು: ಪೈಂಟರ್ ಬಾಲಕೃಷ್ಣ ಆತ್ಮಹತ್ಯೆ

Posted by Vidyamaana on 2024-03-01 14:05:03 |

Share: | | | | |


ಪುತ್ತೂರು: ಪೈಂಟರ್ ಬಾಲಕೃಷ್ಣ ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಸಾಮೆತ್ತಡ್ಕ ನಿವಾಸಿ ಬಾಲಕೃಷ್ಣ (48) ಮೃತರು ಬಾಲಕೃಷ್ಣ ಅವರು ಪೈಂಟರ್ ಕೆಲಸ ನಿರ್ವಹಿಸುತ್ತಿದ್ದು, ಸಾಮೆತ್ತಡ್ಕದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್

Posted by Vidyamaana on 2023-08-18 04:36:27 |

Share: | | | | |


ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್

ಮಂಗಳೂರು : ಉದ್ಯೋಗಕ್ಕೆ ತೆರಳಿದ ವೇಳೆ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಿನಾ ಕಾರಣ ವಂಚನೆ ಆರೋಪಕ್ಕೆ ಒಳಗಾಗಿ ದ.ಕ. ಮೂಲದ ವ್ಯಕ್ತಿಯೊಬ್ಬರು ವಿದೇಶದಲ್ಲಿ ಬಂಧಿಯಾಗಿದ್ದಾರೆ.ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌(Chandrashekhar) ಎಂಬವರೇ ತನ್ನದಲ್ಲದ ತಪ್ಪಿಗೆ ರಿಯಾದ್‌ನಲ್ಲಿ ಕಂಬಿ ಎಣಿಸುತ್ತಿದ್ದಾರೆ.ಇವರ ಬಿಡುಗಡೆಗಾಗಿ ಕುಟುಂಬಸ್ಥರು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆಯ ಕದತಟ್ಟುತ್ತಿದ್ದಾರೆ. ಈ ಬಗ್ಗೆ ಚಂದ್ರಶೇಖರ್‌ ಕುಟುಂಬದ ಪರವಾಗಿ ನಿಕಟವರ್ತಿಗಳಾದ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ(Sridhara Gowda, President of Anti-Endo Struggle Committee) ಹಾಗೂ ಮಂಗಳೂರಿನ ಎನ್‌ಇಸಿಎಫ್‌ ಕಾರ್ಯದರ್ಶಿ ಶಶಿಧರ ಶೆಟ್ಟಿ(NECF Secretary Shasidhara Shetty)ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.


ವಿದೇಶದಲ್ಲಿ ಉದ್ಯೋಗ ಪಡೆದು ಕುಟುಂಬ ಪೋಷಣೆಗಾಗಿ ಚಂದ್ರಶೇಖರ್‌ ಅವರು 2022ರಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅಲ್ಪಾನರ್‌ ಸೆರಾಮಿಕ್ಸ್‌ (Alpanor Ceramics company)ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿ ಸೇರಿದ್ದರು. ಅದೇ ನವೆಂಬರ್‌ನಲ್ಲಿ ಯಾವುದೇ ಹ್ಯಾಕರ್‌ಗಳ ಸಂಚಿಗೆ ಸಿಲುಕಿ ಅಲ್ಲಿನ ಜೈಲಿನಲ್ಲಿ ಬಂಧಿತರಾಗಿದ್ದಾರೆ.ರಿಯಾದ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದರು. ಆಗ ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು ಸಹಿ ನೀಡಿದ್ದರು. ವಾರದ ಬಳಿಕ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶವೊಂದು ಬಂದಿತ್ತು. ಅದನ್ನು ಕ್ಲಿಕ್‌ ಮಾಡಿ ನೋಡಿದ್ದರು. ಎರಡು ದಿನ ಬಳಿಕ ದೂರವಾಣಿ ಕರೆಯೊಂದು ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಿತ್ತು. ಅಲ್ಲದೆ ಒಟಿಪಿ ಸಂಖ್ಯೆ ತಿಳಿಸುವಂತೆ ಸೂಚಿಸಿತ್ತು. ಅದರಂತೆ ಚಂದ್ರಶೇಖರ್‌ ಅವರು ಒಟಿಪಿ ಸಂಖ್ಯೆ ತಿಳಿಸಿದ್ದರು. ಜನವರಿಯಲ್ಲಿ ಊರಿನಲ್ಲಿ ನಿಗದಿಯಾಗಿದ್ದ ನಿಶ್ಚಿತಾರ್ಥ, ವಿವಾಹ ಕೆಲಸಗಳಿಗೆ ತಯಾರಿಯಲ್ಲಿ ಮಗ್ನರಾಗಿದ್ದರು. ಒಂದು ವಾರ ಬಳಿಕ ಯಾವುದೇ ಮಾಹಿತಿ ನೀಡದೇ ಅಲ್ಲಿನ ಪೊಲೀಸರು ಬಂದು ಇವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.ರಿಯಾದ್‌ನಲ್ಲಿದ್ದ ಅವರ ಸ್ನೇಹಿತರು ವಿಚಾರಿಸಿದಾಗ ಚಂದ್ರಶೇಖರ್‌ಗೆ ತಿಳಿಯದಂತೆ ಅಲ್ಲಿನ ಬ್ಯಾಂಕ್‌ವೊಂದರಲ್ಲಿ ಅವರದೇ ಹೆಸರಿನಲ್ಲಿ ಖಾತೆ ತೆರೆಯಲಾಗಿತ್ತು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆ ಚಂದ್ರಶೇಖರ್‌ ಅವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರ ನೀಡಿದ್ದರು. ಹೀಗಾಗಿ ಚಂದ್ರಶೇಖರ್‌ ಅವರನ್ನು ಏಕಾಏಕಿ ಬಂದು ಪೊಲೀಸರು ಜೈಲಿಗೆ ತಳ್ಳಿದ್ದರು. ಚಂದ್ರಶೇಖರ್‌ನ ಸ್ನೇಹಿತರು ಈ ಮಾಹಿತಿಯನ್ನು ಕುಟುಂಬಕ್ಕೆ ತಿಳಿಸಿದ್ದರು. ಹ್ಯಾಕರ್‌ಗಳ ಕಿರುಕುಳದಿಂದ ಚಂದ್ರಶೇಖರ್‌ಗೆ ಅನ್ಯಾಯವಾಗಿದ್ದು, ಇದನ್ನು ತಿಳಿದ ಕುಟುಂಬಕ್ಕೆ ದಿಕ್ಕೇ ತೋಚದಂತಾಗಿದೆ.ಕಳೆದ ಎಂಟು ತಿಂಗಳಿಂದ ಅವರ ಕುಟುಂಬ ನ್ಯಾಯಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದೆ. ಮಗನನ್ನು ಕ್ಷೇಮವಾಗಿ ಸ್ವದೇಶಕ್ಕೆ ಕರೆತರಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ರಿಯಾದ್‌ ಸರ್ಕಾರ ಚಂದ್ರಶೇಖರ್‌ನ್ನು ಬಂಧಿಸಿದ್ದೇ ಹೊರತು ಸಮಗ್ರ ತನಿಖೆ ನಡೆಸಿಲ್ಲ. ಆತನ ಖಾತೆಗೆ ಹಣ ಎಲ್ಲಿಂದ ಬಂತು ಎಂಬ ಬಗ್ಗೆ, ಅಲ್ಲಿಂದ ಎಲ್ಲಿಗೆ ವರ್ಗಾವಣೆಯಾಗಿದೆ ಎಂಬ ಕುರಿತು ತನಿಖೆ ನಡೆಸದೆ ಕೇವಲ ಮಹಿಳೆಗೆ ವಂಚನೆಯಾಗಿದೆ ಎಂದಷ್ಟೆಕೇಸು ದಾಖಲಿಸಿ ಬಂಧಿಸಿದ್ದಾರೆ.ಚಂದ್ರೇಖರ್‌ ಕೆಲಸ ಮಾಡುವ ಅಲ್ಪಾನರ್‌ ಸೆರಾಮಿಕ್ಸ್‌ ಸಂಸ್ಥೆ ಅವರಿಗೆ ಸೂಕ್ತ ಭದ್ರತೆ ಮತ್ತು ಕಾನೂನು ನೆರವು ನೀಡಬೇಕಿತ್ತು. ಈ ಘಟನೆ ಕುರಿತು ಮನೆಯವರಿಗೂ ಸಂಸ್ಥೆ ಮಾಹಿತಿ ನೀಡಿಲ್ಲ. ಹೀಗಾಗಿ ಸಂಸ್ಥೆಯ ವಿರುದ್ಧ ಕೂಡ ಕಾನೂನು ಸಮರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ಮತ್ತೆ ಚಂಡಮಾರುತ

Posted by Vidyamaana on 2023-10-16 18:03:52 |

Share: | | | | |


ಅರಬ್ಬೀ ಸಮುದ್ರದಲ್ಲಿ ಮತ್ತೆ ಚಂಡಮಾರುತ

ಮಂಗಳೂರು, ಅ.16: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.


ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ ಚಲಿಸಲಿದೆ ಎಂದು ಮಂಗಳೂರಿನ ಬಂದರು ಪ್ರಾಧಿಕಾರ(ಎನ್ಎಂಪಿಎ) ಕೇಂದ್ರ ಹವಾಮಾನ ಇಲಾಖೆಯ ಮಾಹಿತಿ ಆಧರಿಸಿ ಹೇಳಿಕೆ ಬಿಡುಗಡೆ ಮಾಡಿದೆ.


ಹೀಗಾಗಿ ಎನ್ಎಂಪಿಎ ಬಂದರಿಗೆ ಆಗಮಿಸುವ ಹಡಗು, ಇನ್ನಿತರ ಎಲ್ಲ ರೀತಿಯ ಕಾರ್ಗೋ ಹಡಗುಗಳು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ, ಕರಾವಳಿಯಲ್ಲಿ ಮೀನುಗಾರಿಕೆ ನಡೆಸದಂತೆ ಮುಂಜಾಗ್ರತೆ ವಹಿಸಬೇಕು. ಎನ್ಎಂಪಿಎಂ ಬಂದರಿನಲ್ಲಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.


ಕೇಂದ್ರ ಹವಾಮಾನ ಇಲಾಖೆಯ ಸೂಚನೆಯಲ್ಲಿ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬೀ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ತಿಳಿಸಲಾಗಿದೆ.

ಬೆಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳ ಮತದಾರರ ಸ್ನೇಹ ಸಮ್ಮಿಲನ

Posted by Vidyamaana on 2024-04-07 13:53:08 |

Share: | | | | |


ಬೆಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳ ಮತದಾರರ ಸ್ನೇಹ ಸಮ್ಮಿಲನ

ಬೆಂಗಳೂರು:ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ವತಿಯಿಂದ ಬೆಂಗಳೂರಿನಲ್ಲಿ ನೆಲೆಸಿರುವ ಉಡುಪಿ- ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.


ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಪುಕ್ಕಟೆ ಕಾರ್ಯಕ್ರಮಗಳನ್ನು ಘೋಷಿಸಿ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಬಹುಶಃ ಇದನ್ನು ಸುಧಾರಿಸಲು ನಮಗೆ 10 ವರ್ಷ ಬೇಕಾಗಬಹುದು ಮತ, ಇರುವವರು ಹಿಂದಿನ ದಿನವೇ ಬಂದು ಮತ ಚಲಾಯಿಸಿ ಎಂದು ವಿನಂತಿಸಿದರು.

ರಶ್ಯನ್ ತೈಲ ಖರೀದಿಯಲ್ಲಿ ಹೆಚ್ಚುಳ

Posted by Vidyamaana on 2023-01-19 09:02:36 |

Share: | | | | |


ರಶ್ಯನ್ ತೈಲ ಖರೀದಿಯಲ್ಲಿ ಹೆಚ್ಚುಳ

   ಭಾರತ ಕಳೆದ ವರ್ಷಕ್ಕಿಂತ 33 ಪಟ್ಟು ಹೆಚ್ಚು ರಶ್ಯನ್ ತೈಲವನ್ನು ಖರೀದಿಸುತ್ತಿದೆ. ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಆಮದುದಾರ ದೇಶವಾಗಿ ಭಾರತ ಕಳೆದ ಡಿಸೆಂಬರ್ನಲ್ಲಿ ರಶ್ಯದಿಂದ ದಿನಕ್ಕೆ ಸರಾಸರಿ 12 ಲಕ್ಷ ಬ್ಯಾರೆಲ್ಗಳನ್ನು ಖರೀದಿಸಿದೆ ಎನ್ನುತ್ತಿವೆ ವರದಿಗಳು. ಇದು ದಾಖಲೆ ಪ್ರಮಾಣದ ತೈಲ ಖರೀದಿಯಾಗಿದೆ. ಹಿಂದಿನ ವರ್ಷಕ್ಕಿಂತ ಭಾರೀ ದೊಡ್ಡ ಮೊತ್ತದ ಆಮದು ಇದಾಗಿದೆ. ಈ ಪ್ರಮಾಣ ನವೆಂಬರ್ನಲ್ಲಿ ಖರೀದಿಸಿದ್ದಕ್ಕಿಂತ ಶೇ.29ರಷ್ಟು ಜಾಸ್ತಿ.

ಹಲವು ತಿಂಗಳುಗಳ ಹಿಂದೆ ಇರಾಕ್ ಮತ್ತು ಸೌದಿ ಅರೇಬಿಯವನ್ನು ಹಿಂದಿಕ್ಕಿದ ನಂತರ ರಶ್ಯವು ಈಗ ಸುಲಭವಾಗಿ ಭಾರತದ ಅತಿದೊಡ್ಡ ತೈಲ ಮೂಲವಾಗಿದೆ. ಉಕ್ರೇನ್ ಆಕ್ರಮಣದಿಂದ ಅನೇಕ ಖರೀದಿದಾರರು ರಶ್ಯದಿಂದ ತೈಲ ಖರೀದಿಸುವುದಕ್ಕೆ ಹಿಂದೇಟು ಹಾಕಿರುವ ಹೊತ್ತಲ್ಲಿ ಭಾರತೀಯ ಸಂಸ್ಕರಣಾಗಾರಗಳು ಅಗ್ಗದ ರಶ್ಯದ ಕಚ್ಚಾ ತೈಲವನ್ನು ದೊಡ್ಡ ಮಟ್ಟದಲ್ಲಿ ಆಮದು ಮಾಡಿಕೊಳ್ಳುತ್ತಿವೆ. ರಶ್ಯ ತನ್ನ ಕಚ್ಚಾ ತೈಲವನ್ನು ಭಾರತೀಯ ಸಂಸ್ಕರಣಾಗಾರಗಳಿಗೆ ಆಕರ್ಷಕ ರಿಯಾಯಿತಿಯಲ್ಲಿ ನೀಡಿದೆ. ಇದರ ಪರಿಣಾಮವಾಗಿ ರಶ್ಯದ ಕಚ್ಚಾ ತೈಲದ ಅತಿದೊಡ್ಡ ಆಮದುದಾರ ದೇಶವಾಗಿ ಭಾರತ ಚೀನಾವನ್ನು ಮೀರಿಸಿದೆ.

ಭಾರತವು ತನ್ನ ತೈಲ ಬೇಡಿಕೆಯ ಶೇ. 85ಕ್ಕಿಂತ ಹೆಚ್ಚಿನ ಪ್ರಮಾಣದ ಆಮದು ಮಾಡಿಕೊಳ್ಳುತ್ತಿದೆ. ಮೇ ತಿಂಗಳಿನಿಂದ ಡೀಸೆಲ್ ಮತ್ತು ಗ್ಯಾಸೋಲಿನ್ನ ಪಂಪ್ ಬೆಲೆಗಳನ್ನು ಹೆಚ್ಚಿಸದಂತೆ ಸರಕಾರದಿಂದ ತಡೆಯಲ್ಪಟ್ಟ ಸರಕಾರಿ ಸ್ವಾಮ್ಯದ ಸಂಸ್ಕರಣಾಗಾರಗಳು ಅಗ್ಗದ ರಶ್ಯದ ಆಮದುಗಳಿಗೆ ಹೆಚ್ಚು ಒಲವು ತೋರಿವೆ.

ಭಾರತಕ್ಕೆ ತೈಲ ಪೂರೈಸುವ ಇತರ ಎರಡು ಪ್ರಮುಖ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಪ್ರಮಾಣ ಕೂಡ ಕಳೆದ ತಿಂಗಳು ಹೆಚ್ಚಾಗಿದೆ. ಇರಾಕ್ನಿಂದ ದಿನಕ್ಕೆ 8,86,000 ಬ್ಯಾರೆಲ್ಗಳು ಅಂದರೆ ಶೇ. 7ರಷ್ಟು ಏರಿಕೆಯಾಗಿದ್ದರೆ, ಸೌದಿ ಅರೇಬಿಯದಿಂದ ದಿನಕ್ಕೆ 7,48,000 ಬ್ಯಾರೆಲ್ಗಳು ಅಂದರೆ ಶೇ. 12ರಷ್ಟು ಹೆಚ್ಚಿದೆ ಎಂದು ವರದಿಗಳು ಹೇಳುತ್ತಿವೆ.

ಉಕ್ರೇನ್ ಮೇಲೆ ರಶ್ಯ ಯುದ್ಧ ಆರಂಭಿಸಿದಾಗಿನಿಂದ ರಶ್ಯ ಮತ್ತು ಭಾರತದ ಮಧ್ಯೆ ತೈಲ ವ್ಯವಹಾರ ಸಾಕಷ್ಟು ಹೆಚ್ಚಿದೆ. ಎಪ್ರಿಲ್ ತಿಂಗಳಿನಿಂದೀಚೆ ರಶ್ಯದಿಂದ ಭಾರತ ಆಮದು ಮಾಡಿಕೊಂಡ ಕಚ್ಚಾ ತೈಲದ ಪ್ರಮಾಣ ಐವತ್ತು ಪಟ್ಟು ಹೆಚ್ಚಾಗಿದೆ. ಉಕ್ರೇನ್ ಯುದ್ಧಕ್ಕೆ ಮುನ್ನ ರಶ್ಯದಿಂದ ಭಾರತ ಆಮದು ಮಾಡಿಕೊಳ್ಳುತ್ತಿದ್ದ ತೈಲದ ಪ್ರಮಾಣ ಶೇ. 0.2 ಮಾತ್ರ. ಈಗ ವಿದೇಶಗಳಿಂದ ಭಾರತ ಆಮದು ಮಾಡಿಕೊಳ್ಳುವ ತೈಲದಲ್ಲಿ ರಶ್ಯದ ಪಾಲು ಶೇ. 10ಕ್ಕೆ ಹೆಚ್ಚಿದೆ.

ಮೇ ತಿಂಗಳಲ್ಲಿ ಭಾರತೀಯ ಕಂಪೆನಿಗಳು ರಶ್ಯನ್ ತೈಲ ಕಂಪೆನಿಗಳಿಂದ 25 ಮಿಲಿಯನ್ ಬ್ಯಾರಲ್ ಕಚ್ಚಾ ತೈಲವನ್ನು ಖರೀದಿ ಮಾಡಿದ್ದವು. ಇದರೊಂದಿಗೆ ಭಾರತಕ್ಕೆ ತೈಲ ಸರಬರಾಜು ಮಾಡುವ ದೇಶಗಳ ಪೈಕಿ ರಶ್ಯ ಸೌದಿ ಅರೇಬಿಯವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿತ್ತು. ಇರಾಕ್ ಭಾರತಕ್ಕೆ ಈಗಲೂ ಅತಿದೊಡ್ಡ ತೈಲ ಸರಬರಾಜುದಾರ ದೇಶವಾಗಿ ಮುಂದುವರಿದಿದೆ.

ಎಲ್ಲವೂ ಉಕ್ರೇನ್ ಯುದ್ಧದ ಪರಿಣಾಮ. ಉಕ್ರೇನ್ ಯುದ್ಧ ಶುರುವಾದಾಗಿನಿಂದ ರಶ್ಯ ಮೇಲೆ ವಿವಿಧ ರೀತಿಯ ಅಂತರ್ರಾಷ್ಟ್ರೀಯ ನಿಷೇಧಗಳನ್ನು ಹೇರಲಾಗಿದೆ. ತತ್ಪರಿಣಾಮವಾಗಿ ರಶ್ಯದಿಂದ ಅತಿ ಕಡಿಮೆ ಬೆಲೆಗೆ ತೈಲ ಬಿಕರಿಯಾಗುತ್ತಿದೆ. ಭಾರತ ಈ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಿದ್ದು, ಭಾರತೀಯ ತೈಲ ಸಂಸ್ಕರಣ ಸಂಸ್ಥೆಗಳು ಕಡಿಮೆ ಬೆಲೆಗೆ ರಶ್ಯ ತೈಲವನ್ನು ಖರೀದಿ ಮಾಡುತ್ತಿವೆ. ಹೀಗಾಗಿಯೇ ಎಪ್ರಿಲ್ ನಂತರದ ಅವಧಿಯಲ್ಲಿ ರಶ್ಯದಿಂದ ಭಾರತ ಆಮದು ಮಾಡಿಕೊಳ್ಳುವ ತೈಲ ಪ್ರಮಾಣ ಹೆಚ್ಚುತ್ತಿರುವುದು.

ಉಕ್ರೇನ್ ಮೇಲೆ ಯುದ್ಧ ಮಾಡುತ್ತಿರುವ ರಶ್ಯ ಮೇಲೆ ಅಮೆರಿಕ ಹಾಗೂ ಅನೇಕ ಯುರೋಪಿಯನ್ ದೇಶಗಳು ನಿರ್ಬಂಧಗಳನ್ನು ಹೇರಿವೆ. ರಶ್ಯ ಜೊತೆ ಯಾವುದೇ ವ್ಯವಹಾರ ಮಾಡದಂತೆ ಇತರ ಹಲವು ದೇಶಗಳಿಗೆ ತಾಕೀತು ಮಾಡುತ್ತಿವೆ. ಹೀಗಿದ್ದರೂ ಭಾರತ ರಶ್ಯ ಜೊತೆ ಮಿಲಿಟರಿ ಶಸ್ತ್ರಾಸ್ತ್ರ ಖರೀದಿ ಮುಂದುವರಿಸುತ್ತಿದೆ, ಈಗ ತೈಲ ಖರೀದಿ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸುತ್ತಿದೆ. ರಶ್ಯದೊಂದಿಗಿನ ತಾನು ಹೊಂದಿರುವ ವ್ಯವಹಾರವನ್ನು ಭಾರತ ಸಮರ್ಥಿಸಿಕೊಳ್ಳುತ್ತಿದೆ. ತನ್ನ ಹಿತಾಸಕ್ತಿಗೆ ತಕ್ಕಂತೆ ನಡೆ ಇಡುವುದಾಗಿ ಭಾರತ ಸ್ಪಷ್ಟಪಡಿಸಿದೆ.

ಈಗ ಅತಿ ಹೆಚ್ಚು ತೈಲ ಆಮದು ಮಾಡಿಕೊಳ್ಳುವ ಮತ್ತು ಬಳಕೆ ಮಾಡುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು ಚೀನಾ ಬಿಟ್ಟರೆ ಭಾರತವೇ ಅತಿಹೆಚ್ಚು ತೈಲ ಆಮದು ಮಾಡಿಕೊಳ್ಳುವುದು. ಭಾರತದಲ್ಲಿ ಬಳಕೆಯಾಗುವ ತೈಲದಲ್ಲಿ ಶೇ. 85ರಷ್ಟು ಪ್ರಮಾಣವು ಬೇರೆ ದೇಶಗಳಿಂದ ಆಮದಾಗಿರುವಂಥವೇ. ಇರಾಕ್ ಮತ್ತು ಸೌದಿ ಅರೇಬಿಯ ಸಾಂಪ್ರದಾಯಿಕವಾಗಿ ಭಾರತಕ್ಕೆ ಅತಿ ಹೆಚ್ಚು ತೈಲ ಸರಬರಾಜು ಮಾಡುತ್ತಿದ್ದ ದೇಶಗಳು. ಈಗ ರಶ್ಯ ಪ್ರವೇಶವಾಗಿದೆ.

ಉಕ್ರೇನ್ ಮತ್ತು ರಶ್ಯ ಯುದ್ಧದ ಪರಿಣಾಮ ಬೇರೆ ತೈಲ ಮಾರುಕಟ್ಟೆಗಳಲ್ಲಿ ಬೆಲೆ ಸಿಕ್ಕಾಪಟ್ಟೆ ಹೆಚ್ಚುತ್ತಿದೆ. ಅಮೆರಿಕ ಮತ್ತಿತರ ದೇಶಗಳ ಒತ್ತಡದಿಂದಾಗಿ ರಶ್ಯದಿಂದ ತೈಲ ಖರೀದಿಸಲು ಹಲವು ದೇಶಗಳು ಹಿಂದೇಟು ಹಾಕಿವೆ. ಹೀಗಾಗಿ, ರಶ್ಯದ ಉರಲ್ನಲ್ಲಿರುವ ಕಚ್ಚಾ ತೈಲವನ್ನು ಖರೀದಿಸಲು ಮುಂದಾಗಿರುವ ದೇಶಗಳು ಕಡಿಮೆಯೇ. ಹೀಗಾಗಿ, ರಶ್ಯದ ತೈಲ ಕಡಿಮೆ ಬೆಲೆಗೆ ಸಿಗುತ್ತಿದೆ. ಭಾರತದ ತೈಲ ಸಂಸ್ಕರಣ ಕಂಪೆನಿಗಳು ರಶ್ಯದಿಂದ ಒಂದು ಬ್ಯಾರಲ್ಗೆ 30 ಡಾಲರ್ ರಿಯಾ ಯಿತಿ ದರದಲ್ಲಿ ಕಚ್ಚಾ ತೈಲ ಖರೀದಿ ಮಾಡುತ್ತಿವೆ.

ರಶ್ಯ ತೈಲ ಖರೀದಿ ಸಮರ್ಥಿಸಿದ ಭಾರತ

ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳು, ಪರಸ್ಪರರ ಹಿತಾಸಕ್ತಿ ಹಾಗೂ ದ್ವಿಪಕ್ಷೀಯ ಸಹಕಾರ ಬಲಪಡಿಸುವ ಸಂಬಂಧ ಭಾರತ ಮತ್ತು ರಷ್ಯಾ ಮಂಗಳವಾರ ಮಾಸ್ಕೊದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದವು.

ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಷ್ಯಾ ವಿದೇಶಾಂಗ ಸಚಿವ ಸೆರ್ಗಿ ಲಾವ್ರೊವ್ ಅವರು ಮಾತುಕತೆಯಲ್ಲಿ ಭಾಗಿಯಾಗಿದ್ದರು.

ಫೆಬ್ರುವರಿಯಲ್ಲಿ ರಷ್ಯಾ ಮತ್ತು ಉಕ್ರೇನ್ ಸಂಘರ್ಷ ಶುರುವಾದ ನಂತರ ಉಭಯ ಸಚಿವರು ಈಗಾಗಲೇ ನಾಲ್ಕು ಬಾರಿ ಪರಸ್ಪರ ಭೇಟಿಯಾಗಿ ಪರಸ್ಪರ ಮಾತುಕತೆ ನಡೆಸಿದ್ದರು.

ಭಾರತ ಮತ್ತು ರಷ್ಯಾ ನಡುವಿನ ಹಿತಾಸಕ್ತಿಗಳ ಬಗ್ಗೆ ಸಹಜ ಚರ್ಚೆ ನಡೆಸಿದ್ದೇವೆ. ಅಸ್ಥಿರತೆಯ ಈ ಕಾಲದಲ್ಲಿ, ನಾವು ನಿಜವಾಗಿಯೂ ಜಾಗತಿಕ ಆರ್ಥಿಕತೆಯ ಸ್ಥಿರತೆಗೆ ನೆರವಾಗುವ ಒಳ್ಳೆಯ ಕೆಲಸ ಮಾಡುತ್ತಿದ್ದೇವೆ. ತೈಲ ಮತ್ತು ಅನಿಲ ಖರೀದಿಯಲ್ಲಿ ಮೂರನೇ ಅತಿದೊಡ್ಡ ಗ್ರಾಹಕ ಎನಿಸಿರುವ ನಮ್ಮ ದೇಶದ ಆದಾಯವು ಹೆಚ್ಚಿಲ್ಲದ ಕಾರಣ, ನಾವು ಕೈಗೆಟಕುವ ದರದಲ್ಲಿ ಇಂಧನ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ಜತೆಗಿನ ಸಂಬಂಧ ಭಾರತಕ್ಕೆ ಪ್ರಯೋಜನಕಾರಿಯಾಗಿದೆ. ರಷ್ಯಾ ಜತೆಗೆ ನಮ್ಮ ಬಾಂಧವ್ಯವನ್ನು ಮುಂದುವರಿಸುತ್ತೇವೆ’ ಎಂದು ಜೈಶಂಕರ್, ರಷ್ಯಾದಿಂದ ತೈಲ ಖರೀದಿ ಸಮರ್ಥಿಸಿಕೊಂಡರು.

ಇದು ಯುದ್ಧ ಕಾಲವಲ್ಲ’ವೆಂದು ಪುಟಿನ್ ಅವರಿಗೆ ಮೋದಿ ಹೇಳಿದ್ದ ಕಿವಿ ಮಾತನ್ನು ನೆನಪಿಸಿದ ಅವರು, ಉಕ್ರೇನ್ ಮೇಲೆ ಆಗುತ್ತಿರುವ ಪರಿಣಾಮಗಳನ್ನು ಗಮನಿಸಿಯೇ ಉಭಯ ರಾಷ್ಟ್ರಗಳಿಗೂ ಮಾತುಕತೆಗೆ ಮರಳುವಂತೆ ಭಾರತ ಬಲವಾಗಿ ಒತ್ತಾಯಿಸುತ್ತಲೇ ಇದೆ’ ಎಂದು ಎಸ್. ಜೈಶಂಕರ್ ಹೇಳಿರುವುದಾಗಿ ‘ಎನ್ಡಿಟಿವಿ’ ವರದಿ ಮಾಡಿದೆ.

ಉಕ್ರೇನ್ ಮೇಲಿನ ರಷ್ಯಾ ಆಕ್ರಮಣವನ್ನು ಭಾರತ ಈವರೆಗೆ ಖಂಡಿಸಿಲ್ಲ. ರಾಜತಾಂತ್ರಿಕತೆ ಮತ್ತು ಮಾತುಕತೆ ಮೂಲಕವೇ ಬಿಕ್ಕಟ್ಟು ಶಮನಕ್ಕೆ ಭಾರತ ಉಭಯತ್ರರನ್ನು ಒತ್ತಾಯಿಸುತ್ತಲೇ ಇದೆ.  


ಪುಟಿನ್ ಜತೆ ಮಾತುಕತೆಗೆ ಝೆಲೆನ್ಸ್ಕಿ ಒಲವು

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲು ನಿರಾಕರಿಸಿದ್ದ ಉಕ್ರೇನ್ ನಿಲುವಿನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಶಾಂತಿ ಮಾತುಕತೆ ಸಾಧ್ಯತೆಯತ್ತ ಸಾಗುವ ಸುಳಿವು ನೀಡಿದೆ. 

       ಅಮೆರಿಕದಲ್ಲಿ ನಡೆಯಲಿರುವ ಪ್ರಮುಖ ಚುನಾವಣೆಯ ಹಿನ್ನೆಲೆಯಲ್ಲಿ ಉಕ್ರೇನ್ ನಿಲುವು ಬದಲಿಸಿಕೊಂಡಿದ್ದು, ಪುಟಿನ್ ಜತೆಗೆ ಶಾಂತಿ ಮಾತುಕತೆ ನಡೆಸುವ ಸಾಧ್ಯತೆಯ ಬಗ್ಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸುಳಿವು ನೀಡಿದ್ದಾರೆ.

       ಸೋಮವಾರ ತಡವಾಗಿ ವಿಶ್ವ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ ಅವರು ‘ರಷ್ಯಾವನ್ನು ನಿಜವಾದ ಶಾಂತಿ ಮಾತುಕತೆಗಳಿಗೆ ಮರಳುವಂತೆ ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.

        ಉಕ್ರೇನ್ನ ಎಲ್ಲ ಆಕ್ರಮಿತ ಭೂಮಿಯನ್ನು ಹಿಂದಿರುಗಿಸಬೇಕು, ಯುದ್ಧದಿಂದ ಉಂಟಾದ ಹಾನಿ ಮತ್ತು ಯುದ್ಧ ಅಪರಾಧಗಳ ವಿಚಾರಣೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಝೆಲೆನ್ಸ್ಕಿ ಅವರು ಪುಟಿನ್ ಜತೆಗಿನ ಶಾಂತಿ ಮಾತುಕತೆಗೆ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ರಿಪಬ್ಲಿಕನ್ ಪಕ್ಷದ ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬಂದರೆ ಬೈಡನ್ ಸರ್ಕಾರ ಉಕ್ರೇನ್ಗೆ ಮಿಲಿಟರಿ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಮುಂದುವರಿಸುವುದು ಕಷ್ಟವಾಗಬಹುದು ಎನ್ನುವ ಕಾರಣಕ್ಕೆ ಝೆಲೆನ್ಸ್ಕಿ ಅವರು, ಪುಟಿನ್ ಜತೆಗೆ ಮಾತುಕತೆ ಅಸಾಧ್ಯವೆಂದಿದ್ದ ರಾಗವನ್ನು ಈಗ ಬದಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

      ರಷ್ಯಾದ ವಿದೇಶಾಂಗ ಉಪ ಸಚಿವ ಆಂಡ್ರೀ ರುದೆನ್ಕೊ ಅವರು, ಮಾತುಕತೆಗೆ ಪುನಾ ಮರಳಲು ರಷ್ಯಾ ಯಾವುದೇ ಷರತ್ತುಗಳನ್ನು ಮುಂದಿಟ್ಟಿಲ್ಲ. ಆದರೆ, ಮಾತುಕತೆ ನಡೆಸಲು ಉಕ್ರೇನ್ಗೆ ಇಚ್ಛಾಶಕ್ತಿಯ ಕೊರತೆ ಇದೆ ಎಂದು ಆರೋಪಿಸಿದರು.



Leave a Comment: