ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ, ಆದರೆ ಅದಕ್ಕಾಗಿ ಲಾಬಿ ಮಾಡಲ್ಲ: ಎಂ.ಎಸ್. ಮುಹಮ್ಮದ್

ಸುದ್ದಿಗಳು News

Posted by vidyamaana on 2024-06-29 07:41:05 |

Share: | | | | |


ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟರೆ ನಿರ್ವಹಿಸುವೆ, ಆದರೆ ಅದಕ್ಕಾಗಿ ಲಾಬಿ ಮಾಡಲ್ಲ: ಎಂ.ಎಸ್. ಮುಹಮ್ಮದ್

ಮಂಗಳೂರು , ಜೂ.29: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ಆದರೆ ಅದಕ್ಕಾಗಿ ಲಾಬಿ ಮಾಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರ ಪಕ್ಷದ ಜವಾಬ್ದಾರಿ ನಿರ್ವಹಣಾ ಉಸ್ತುವಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಪ್ರತಿಕ್ರಿಯಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರಗೊಂಡಿದ್ದ ವೇಳೆ ತಮ್ಮ ಹೆಸರು ಕೇಳಿ ಬಂದಿತ್ತಲ್ಲ ಎಂಬ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ಎಂಎಲ್‌ಎ, ಎಂಎಲ್ ಸಿ ಆಗಬೇಕು ಎನ್ನುವ ಆಕಾಂಕ್ಷೆ ಪಕ್ಷದಲ್ಲಿ ದುಡಿಯ ಎಲ್ಲರಿಗೂ ಇರುತ್ತದೆ. ಅದಕ್ಕೆ ನಮ್ಮ ಹಣೆಯಲ್ಲೂ ಬರೆದಿರಬೇಕು. ಆದರೆ ನಮಗೆ ಆ ಸ್ಥಾನವನ್ನು ತಪ್ಪಿಸಲು ಈ ಹುದ್ದೆಯನ್ನು ನೀಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಹಿಡಿದು ವಿವಿಧ ಹುದ್ದೆಗಳನ್ನು ನಿರ್ವಹಿಸಿ ಜಿ.ಪಂ.ನ ಸದಸ್ಯನಾಗಿ ಮೂರು ಬಾರಿ ಆಯ್ಕೆಯಾಗಿ, ಜಿ.ಪಂ.ನ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುವ ಅವಕಾಶವೂ ನನಗೆ ದೊರಕಿದೆ. ಎಲ್ಲಾ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದು, ಹೈಕಮಾಂಡ್ ಈ ಕಾರ್ಯವನ್ನು ಗುರುತಿಸಿ ಈಗ ಐದು ಜಿಲ್ಲೆಗಳನ್ನು ಒಳಗೊಂಡ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಿದ್ದು, ಇದನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲಿದ್ದೇನೆ. ಮುಂಬರುವ ಜಿ.ಪಂ. ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು

ಪಕ್ಷದ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಹೇಳಿದರು.


ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕ ಸ್ಥಾನ ನೀಡಿರುವ ಬಗ್ಗೆ ಅಭಿನಂದನೆ ಸಲ್ಲಿಸಿದ ಎಂ.ಎಸ್.ಮುಹಮ್ಮದ್, ಹಲವು ಸಮಸ್ಯೆ, ಸವಾಲುಗಳ ಮೂಲಕ, ಹಲವು ರೀತಿಯ ಅವಮಾನಗಳನ್ನು ಸಮರ್ಥವಾಗಿ ಎದುರಿಸಿದ ರಾಹುಲ್ ಪಕ್ಷವನ್ನು ಮುನ್ನೆಡೆಸುವ ಸಮರ್ಥ ನಾಯಕ. ಪಾರ್ಲಿಮೆಂಟ್ನಿಂದ ಅಮಾನತು ಮಾಡಿ, ಸರಕಾರಿ ಬಂಗಲೆಯಿಂದ ಹೊರ ಹಾಕಿ ಕೌನ್ ಹೇ ರಾಹುಲ್ ಎಂದು ಅವರನ್ನು ಪ್ರಧಾನಿ ಅವಮಾನಿಸಿದ್ದರು. ಆ ಎಲ್ಲಾ ಅವಮಾನ ಸಹಿಸಿಕೊಂಡು ಇದೀಗ ಛಾಯಾ ಪ್ರಧಾನಿಯಾಗಿ ಕ್ಯಾಬಿನೆಟ್ ಸ್ಥಾನಮಾನವನ್ನು ರಾಹುಲ್ ಪಡೆದಿದ್ದು, ಅವರ ಜತೆ ನಾವಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನೀರಜ್ ಪಾಲ್, ನಝೀರ್ ಬಜಾಲ್, ಸುಭಾಶ್ ಶೆಟ್ಟಿ, ಟಿ.ಕೆ. ಸುಧೀರ್ ಉಪಸ್ಥಿತರಿದ್ದರು.

 Share: | | | | |


ಐದನೇ ಐಪಿಎಲ್ ಟ್ರೋಫಿ ಗೆದ್ದ ಸಿಎಸ್‌ಕೆ

Posted by Vidyamaana on 2023-05-29 23:28:24 |

Share: | | | | |


ಐದನೇ ಐಪಿಎಲ್ ಟ್ರೋಫಿ ಗೆದ್ದ ಸಿಎಸ್‌ಕೆ

ಅಹ್ಮದಾಬಾದ್ : ಕೊನೇ ಎಸೆತದವರೆಗೂ ನೋಡುಗರನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದ ರೋಚಕ ಫೈನಲ್ ಪಂದ್ಯದಲ್ಲಿ ಒತ್ತಡ ನಿಭಾಯಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗುಜರಾತ್ ಟೈಟನ್ ಎದುರು 5 ವಿಕೆಟ್‌ಗಳ ಜಯ ದಾಖಲಿಸಿ ದಾಖಲೆಯ 5ನೇ ಟ್ರೋಫಿ ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಅಂತಿಮ 2 ಎಸೆತಗಳಲ್ಲಿ 10 ರನ್‌ಗಳ ಅಗತ್ಯವಿದ್ದಾಗ ಅನುಭವಿ ವೇಗದ ಬೌಲರ್ ಮೋಹಿತ್ ಶರ್ಮಾ ಎದುರು ಸಿಕ್ಸ್ ಮತ್ತು ಫೋರ್ ಬಾರಿಸಿದ ರವೀಂದ್ರ ಜಡೇಜಾ, ಸಿಎಸ್‌ಕೆ ಕೊರಳಿಗೆ ಜಯದ ಮಾಲೆ ತೊಡಿಸಿದರು.

ಸಿಎಸ್‌ಕೆಗೆ 15 ಓವರ್‌ಗಳಲ್ಲಿ 171 ರನ್ ಗುರಿ


ಗೆಲುವಿಗೆ 215 ರನ್‌ಗಳ ಅಸಾಧ್ಯದ ಗುರಿ ಬೆನ್ನತ್ತಿದ ಸಿಎಸ್‌ಕೆ ಬ್ಯಾಟಿಂಗ್ ಆರಂಭಿಸಿ 3 ಎಸೆತಗಳನ್ನು ಎದುರಿಸುತ್ತಿದ್ದಂತೆಯೇ ಧಾರಾಕಾರ ಮಳೆ ಶುರುವಾಗಿ ಆಟಕ್ಕೆ ಅಡಚಣೆ ಎದುರಾಯಿತು. 2 ಗಂಟೆಗಳ ಕಾಲ ಆಟ ಸ್ಥಗಿತಗೊಂಡು 12:10ಕ್ಕೆ ಮರಳಿ ಶುರುವಾದಾಗ ಸಿಎಸ್‌ಕೆಗೆ 15 ಓವರ್‌ಗಳಲ್ಲಿ 171 ರನ್‌ಗಳ ಕಠಿಣ ಗುರಿ ಪಡೆದಿತ್ತು

.ಹೊಡಿಬಡಿ ಆಟವಾಡಿದ ಸಿಎಸ್‌ಕೆ

ಗೆಲ್ಲಲು ಓವರ್‌ಗೆ 12 ರನ್ ಗಳಿಸುವ ಒತ್ತಡಕ್ಕೆ ಸಿಲುಕಿದ್ದ ಸಿಎಸ್‌ಕೆ, ಆರಂಭದಿಂದಲೂ ಹೊಡಿಬಡಿ ಆಟಕ್ಕೆ ಕೈ ಹಾಕಿತ್ತು. ಋತುರಾಜ್ ಗಾಯಕ್ವಾಡ್ (26), ಡೆವೋನ್ (47), ಶಿವಂ ದುಬೇ (32*), ಅಜಿಂಕ್ಯ ರಹಾನೆ (27), ರವೀಂದ್ರ ಜಡೇಜಾ (15*) ಮತ್ತು ಅಂಬಾಟಿ ರಾಯುಡು (19) ಬೌಲರ್‌ಗಳನ್ನು ಬೆಂಡೆತ್ತಿದ ಪರಿಣಾಮ ಸಿಎಸ್‌ಕೆ ಗೆಲುವು ಸಾಧ್ಯವಾಯಿತು. ಟೈಟನ್ಸ್ ಪರ ನೂರ್ ಅಹ್ಮದ್ (17ಕ್ಕೆ 2) ಮತ್ತು ಮೋಹಿತ್ ಶರ್ಮಾ (36ಕ್ಕೆ 3) ವಿಕೆಟ್ ಪಡೆದು ಒತ್ತಡ ಹೇರಿದರೂ, ಅದೃಷ್ಟ ಸಿಎಸ್‌ಕೆ ಕೈಹಿಡಿದಿತ್ತು. ಈ ಜಯದೊಂದಿಗೆ ಸಿಎಸ್‌ಕೆ ಐಪಿಎಲ್‌ನಲ್ಲಿ ಅತಿ ಹೆಚ್ಚು (5) ಟ್ರೋಫಿ ಗೆದ್ದು, ಮುಂಬೈ ಇಂಡಿಯನ್ಸ್ ದಾಖಲೆಯನ್ನು ಸರಿಗಟ್ಟಿದೆ.ಟೈಟನ್ಸ್ ಮೊತ್ತ

ಟಾಸ್ ಸಾತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ಸ್ಪೋಟಕ ಆರಂಭ ಪಡೆಯಿತು. ಆರಂಭದಲ್ಲೇ ಸಿಕ್ಕ ಜೀವದಾನ ಬಳಸಿಕೊಂಡ ಶೂಭಮನ್ ಗಿಲ್, 28 ಎಸೆತಗಳಲ್ಲಿ 37 ರನ್ ಸಿಡಿಸಿದರು. ಮತ್ತೊಂದು ದೊಡ್ಡ ಇನಿಂಗ್ಸ್ ಆಡುವ ಸುಳಿವು ನೀಡಿದ್ದರಾದರೂ, ರವೀಂದ್ರ ಜಡೇಜಾ ಬೌಲಿಂಗ್‌ನಲ್ಲಿ ಎಂಎಸ್ ಧೋನಿ ಅವರ ವಿಕೆಟ್‌ಕೀಪಿಂಗ್ ಕಲೆಗಾರಿಕೆಯ ಎದುರು ಸ್ಟಂಪ್‌ಔಟ್ ಆಗಿ ನಿರಾಶೆ ಅನುಭವಿಸಿದರು. ಮೊದಲ ವಿಕೆಟ್‌ಗೆ 7 ಓವರ್‌ಗಳಲ್ಲಿ 66 ರನ್ ಕಲೆಹಾಕಿತ್ತು. ಮತ್ತೊಬ್ಬ ಓಪನರ್ ವೃದ್ಧಿಮಾನ್ ಸಹಾ (54) ಬಿರುಸಿನ ಅರ್ಧಶತಕ ಬಾರಿಸಿದರು

.ಸಾಯ್ ಸುದರ್ಶನ್ ಅಬ್ಬರ

ಇನಿಂಗ್ಸ್ ಆರಂಭದಲ್ಲಿ ರನ್ ಹೆಕ್ಕಲು ಕಷ್ಟ ಪಟ್ಟಿದ್ದ ಯುವ ಬ್ಯಾಟರ್ ಸಾಯ್ ಸುದರ್ಶನ್ 10 ಎಸೆತಗಳಲ್ಲಿ 8 ರನ್ ಗಳಿಸಿದ್ದರು. ಆದರೆ, ನಿಧಾನವಾಗಿ ರನ್ ಗಳಿಕೆಯ ವೇಗ ಹೆಚ್ಚಿಸಿಕೊಂಡ 47 ಎಸೆತಗಳಲ್ಲಿ 96 ರನ್ ಸಿಡಿಸಿ ಟೈಟನ್ಸ್ ತಂಡ ಬೃಹತ್ ಮೊತ್ತಕ್ಕೆ ಕಾರಣರಾದರು. ಗುಜರಾತ್ ಟೈಟನ್ಸ್ ತನ್ನ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 214 ರನ್‌ಗಳ ಶಿಖರ ನಿರ್ಮಿಸಿತು. ಸ್ಲಾಗ್ ಓವರ್‌ಗಳಲ್ಲಿ ಹಾರ್ದಿಕ್ ಪಾಂಡ್ಯ, 12 ಎಸೆತಗಳಲ್ಲಿ ಅಜೇಯ 21 ರನ್ ಸಿಡಿಸಿದರು.

ಚೇಸಿಂಗ್ ತೆಗೆದುಕೊಂಡ ಚೆನ್ನೈ

ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಎದುರು ಪೈಪೋಟಿ ಕಾದಾಟ ನಡೆಸಲಿದೆ. ಮಳೆ ಕಾರಣ ಭಾನುವಾರ (ಮೇ 28) ಪಂದ್ಯ ಟಾಸ್ ಕೂಡ ಕಾಣಲಿಲ್ಲ. ಹೀಗಾಗಿ ಮುಂದೂಡಲ್ಪಟ್ಟ ಪಂದ್ಯದಲ್ಲಿ ಟ್ರೋಫಿ ರಾರಿಗೆ ಒಲಿಯಲಿದೆ ಎಂಬ ಕುತೂಹಲ ಟಾಸ್ ಗೆದ್ದ ಎಂಎಸ್ ಧೋನಿ, ಚೇಸಿ ಆಯ್ಕೆ ಮಾಡಿಕೊಂಡರು.

ಯಾರ ಪರವಾಗಿ ಹೆಚ್ಚು ಘೋಷಣೆ ಬೀಳುತ್ತೋ ಅವರಿಗೆ ಕಪ್ ಇಲ್ಲ

Posted by Vidyamaana on 2023-05-22 04:03:48 |

Share: | | | | |


ಯಾರ ಪರವಾಗಿ ಹೆಚ್ಚು ಘೋಷಣೆ ಬೀಳುತ್ತೋ ಅವರಿಗೆ ಕಪ್ ಇಲ್ಲ

ಬೆಂಗಳೂರು: ಸದ್ಯಕ್ಕೆ ಕರಾವಳಿ ಮತ್ತು ಕರ್ನಾಟಕ ಭಾಗದಲ್ಲಿ ‘ಟ್ರೋಲ್’ ಅಂದ್ರೆ ನಳಿನ್ – ನಳಿನ್ ಅಂದ್ರೆ ‘ಟ್ರೋಲ್’ ಅನ್ನೋ ಪರಿಸ್ಥಿತಿ ಉಂಟಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ದಯನೀಯ ಸೋಲಿನ ಬಳಿಕವಂತೂ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರ ಚುನಾವಣಾ ಪ್ರಚಾರ ಸಂದರ್ಭದ ಭಾಷಣಗಳು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿವೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಒಂದು ಸಭೆಯಲ್ಲಿ ನಳಿನ್ ಹೇಳಿದ್ದ ‘ನಾನು ರಾಜ್ಯಾಧ್ಯಕ್ಷ..’ ಹೇಳಿಕೆಯಂತೂ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ.

ಕೊರಿಯರ್ ಪಾರ್ಸೆಲ್​ನಲ್ಲಿ ಡ್ರಗ್ಸ್ ಹೆಸರಲ್ಲಿ ಮೋಸ

Posted by Vidyamaana on 2023-12-02 11:17:58 |

Share: | | | | |


ಕೊರಿಯರ್ ಪಾರ್ಸೆಲ್​ನಲ್ಲಿ ಡ್ರಗ್ಸ್ ಹೆಸರಲ್ಲಿ ಮೋಸ

ಬೆಂಗಳೂರು: ವ್ಯಕ್ತಿಯೊಬ್ಬರಿಗೆ ಮುಂಬೈ ಪೊಲೀಸರ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿಗಳು, ನಿಮ್ಮ ಕೊರಿಯರ್ ಪಾರ್ಸೆಲ್​ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ, ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ್ದ 8 ಮಂದಿ ಸೈಬರ್ ವಂಚಕರನ್ನು ಉತ್ತರ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 


ದಾವಣಗೆರೆ ಮೂಲದ ವಾಸಿಂ, ಹಬ್ಬಿಬುಲಾ, ನಿಜಾಮುದ್ದೀನ್, ಮುಷರಫ್ ಖಾನ್, ಬೆಂಗಳೂರಿನ ನೂರುಲ್ಲಾ ಖಾನ್, ಮೊಹಮ್ಮದ್ ಉಮರ್, ಸೈಯದ್ ಅಹ್ಮದ್​ ಹಾಗೂ ಸೈಯ್ಯದ್ ಹುಸೇನ್ ಬಂಧಿತರು. ಮಲ್ಲೇಶ್ವರದ ನಟರಾಜ್ ಬಿ.ಎಸ್.ರಾವ್ ಎಂಬವರು ನೀಡಿದ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ, 13 ಲಕ್ಷ ಹಣ ವಶಪಡಿಸಿಕೊಂಡಿದೆ. ಅಲ್ಲದೆ, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 19 ಲಕ್ಷ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ್ದ 11 ಮೊಬೈಲ್ ಫೋನ್, 148 ಬೇನಾಮಿ ಬ್ಯಾಂಕ್ ಖಾತೆಗಳನ್ನ ಜಪ್ತಿ ಮಾಡಲಾಗಿದೆ. ಜೊತೆಗೆ 4500 ಯುಎಸ್ ಡಾಲರ್ ವಶಕ್ಕೆ ಪಡೆದಿರುವುದಾಗಿ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.ಕಳೆದ ನವೆಂಬರ್ 10ರಂದು ನಟರಾಜ್ ಅವರಿಗೆ ವಾಟ್ಸ್​​ಆ್ಯಪ್ ಕರೆ ಮಾಡಿದ ಆರೋಪಿಗಳು ಮುಂಬೈ ಪೊಲೀಸರು ಎಂದು ತಮ್ಮನ್ನು ಪರಿಚಯಿಸಿ ತಮ್ಮ ಪತ್ನಿ ಹೆಸರಿನಲ್ಲಿ ಮುಂಬೈನಿಂದ ಥಾಯ್ಲೆಂಡ್​​ಗೆ ಕಳುಹಿಸುವ ಫೆಡಕ್ಸ್ ಕೊರಿಯರ್​ ಪಾರ್ಸಲ್​ನಲ್ಲಿ 140 ಗ್ರಾಂ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಅಲ್ಲದೇ ಹಲವು ಬ್ಯಾಂಕ್ ಖಾತೆಗಳನ್ನ ತೆರೆದು ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ತನಿಖೆ ಮುಗಿಯುವ ವರೆಗೂ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣ ಒಪ್ಪಿಸಬೇಕಿದೆ. ತನಿಖೆ ಬಳಿಕ ಹಣ ನಿಮ್ಮ ಖಾತೆಗೆ ಜಮೆ ಮಾಡಲಾಗುವುದು ಎಂದು ನಂಬಿಸಿ ಒಟ್ಟು 1.08 ಕೋಟಿ ವರ್ಗಾಯಿಸಿಕೊಂಡು ವಂಚಿಸಿದ್ದರು.


ದಾವಣಗೆರೆ ಹಾಗೂ ಬೆಂಗಳೂರು ಮೂಲದ ಆರೋಪಿಗಳು ಕಳೆದ ಎರಡು ವರ್ಷಗಳಿಂದ ಸೈಬರ್ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ವ್ಯವಸ್ಥಿತವಾಗಿ ಸಂಚು ರೂಪಿಸಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಕೊರಿಯರ್ ಪಾರ್ಸಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ಅಮಾಯಕರನ್ನು ಯಾಮಾರಿಸುತ್ತಿದ್ದರು. ಇವರು ಅಮಾಯಕರಿಗೆ ಹಣ ನೀಡಿ ಅವರ ಹೆಸರಿನಲ್ಲಿ ಬೇನಾಮಿ ಬ್ಯಾಂಕ್​ ಖಾತೆಗಳನ್ನು ತೆರೆಯುತ್ತಿದ್ದರು. ವರ್ಗಾಯಿಸಿಕೊಂಡಿದ್ದ 1.08 ಕೋಟಿ ಪೈಕಿ ದಾವಣಗೆರೆಯ ಆರ್.ಬಿಎಲ್ ಬ್ಯಾಂಕ್ ನಿಂದ ಆರೋಪಿಗಳು 9.34 ಲಕ್ಷ ರೂಪಾಯಿ ಹಣ ವಿತ್ ಡ್ರಾ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ವಂಚಕರನ್ನ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


72 ಪ್ರಕರಣಗಳು ಪತ್ತೆ 


ವಾಟ್ಸ್​​ಆ್ಯಪ್​ ಆಡಿಯೋ ಕರೆ ಮಾಡಿದ ಆರೋಪಿಗಳು, ಸಾರ್ವಜನಿಕರಿಂದ ವರ್ಗಾಯಿಸಿಕೊಂಡಿದ್ದ 1.08 ಕೋಟಿ ಹಣವನ್ನು ಕೆಲವೇ ಗಂಟೆಗಳಲ್ಲಿ 72 ಬೇನಾಮಿ ಅಕೌಂಟ್​ಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆರು ಗಂಟೆಗಳ ವಾಟ್ಸಾಆ್ಯಪ್ ಕರೆ ಮಾಡಿ ಪ್ರಕರಣದ ದೂರುದಾರರ ನಟರಾಜ್ ನಂಬಿಸಿ ಯಾಮಾರಿಸಿದ್ದರು. ಆರೋಪಿಗಳ ಬಂಧನದಿಂದ ರಾಷ್ಟ್ರೀಯ ಅಪರಾಧ ಸಂಗ್ರಹ ಘಟಕದಲ್ಲಿ (ಎನ್​ಸಿಆರ್​ಬಿ) ದಾಖಲಾಗಿದ್ದ 72 ಸೈಬರ್ ವಂಚನೆ ಪ್ರಕರಣಗಳು ಪತ್ತೆಯಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ನಾಳೆ ಕಾಂಗ್ರೆಸ್ ನಿಂದ ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ - ಏನಿದು ಕೈ ಹೊಸ ಪ್ರಯೋಗ

Posted by Vidyamaana on 2023-05-05 14:23:23 |

Share: | | | | |


ನಾಳೆ ಕಾಂಗ್ರೆಸ್ ನಿಂದ ನನ್ನ ಬೂತ್ ನಾನು ಅಭ್ಯರ್ಥಿ ಅಭಿಯಾನ - ಏನಿದು ಕೈ ಹೊಸ ಪ್ರಯೋಗ

ಪುತ್ತೂರು: ಕಾಂಗ್ರೆಸ್ ಪಕ್ಷದಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿಯೂ ‘ನನ್ನ ಬೂತ್, ನಾನು ಅಭ್ಯರ್ಥಿ’ ಎಂಬ ವಿಭಿನ್ನ ಪ್ರಯೋಗದ ಕಾರ್ಯಕ್ರಮ ಮೇ.6 ರಂದು ಏಕಕಾಲದಲ್ಲಿ ನಡೆಯಲಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ 220 ಬೂತ್ ಗಳಲ್ಲಿಯೂ ಮನೆ ಮನೆಗಳ ಸಂಪರ್ಕ ಕಾರ್ಯಕ್ರಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ನಡೆಯಲಿದೆ.

ಕಾಂಗ್ರೆಸ್ ಸರಕಾರದ ಸಾಧನೆ ಹಾಗೂ ಪ್ರಣಾಳಿಕೆಯ ವಿಷಯಗಳನ್ನು ತಿಳಿಸುವುದರ ಜೊತೆಗೆ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪರ ಮತಯಾಚನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತುಮಕೂರಿನಲ್ಲಿ ತ್ರಿವಳಿ ಕೊಲೆ ಪ್ರಕರಣ: ಬೆಳ್ತಂಗಡಿಯ ಮನೆಗಳಿಗೆ ತಲುಪಿದ ಮೃತದೇಹ

Posted by Vidyamaana on 2024-03-29 11:32:14 |

Share: | | | | |


ತುಮಕೂರಿನಲ್ಲಿ ತ್ರಿವಳಿ ಕೊಲೆ ಪ್ರಕರಣ: ಬೆಳ್ತಂಗಡಿಯ ಮನೆಗಳಿಗೆ ತಲುಪಿದ ಮೃತದೇಹ

ಬೆಳ್ತಂಗಡಿ, ಮಾ.29: ತುಮಕೂರಿನಲ್ಲಿ ಇತ್ತೀಚೆಗೆ ಬೆಳ್ತಂಗಡಿಯ ಮೂವರನ್ನು ಕೊಲೆಗೈದು ಕಾರು ಸಹಿತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣದಲ್ಲಿ ಕೊಲೆಯಾದವರ ಮೃತದೇಹಗಳು ಇಂದು (ಮಾ.29) ಮುಂಜಾನೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದೆ.


ನಡ ಗ್ರಾಮದ ಟಿ.ಬಿ. ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್ ಹಮೀದ್, ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ ಮತ್ತು ಶಿರ್ಲಾಲು ಗ್ರಾಮದ ಸಿದ್ದೀಕ್ ಯಾನೆ ಇಮ್ಮಿಯಾಝ್ ಎಂಬವರ ಮೃತದೇಹಗಳು ಕೊಲೆಗೈದು ಕಾರು ಸಹಿತ ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಾ.22ರಂದು ತುಮಕೂರಿನ ಕುಚ್ಚಂಗಿ ಕೆರೆ ಎಂಬಲ್ಲಿ ಪತ್ತೆಯಾಗಿದ್ದವು.ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಎನ್ ಎ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಬಂದಿರುವ ಕಾರಣ ಇದೀಗ ಮೂವರ ಮೃತದೇಹಗಳನ್ನು ಹಸ್ತಾಂತರಿಸಲಾಗಿದ್ದು, ಕೃತ್ಯ ಬೆಳಕಿಗೆ ಬಂದ ಏಳು ದಿನಗಳ ಬಳಿಕ ಅಂದರೆ ಇಂದು ಬೆಳಗ್ಗೆ ಉಜಿರೆಗೆ ತಲುಪಿವೆ.


.

ಜುಲೈ 29: ಕೆನ್ನೆಡಿಗಳು ಒಂದು ಕಥಾನಕ ಕನ್ನಡ ಅನುವಾದ ಕೃತಿ ಬಿಡುಗಡೆ

Posted by Vidyamaana on 2023-07-28 10:14:00 |

Share: | | | | |


ಜುಲೈ 29: ಕೆನ್ನೆಡಿಗಳು ಒಂದು ಕಥಾನಕ ಕನ್ನಡ ಅನುವಾದ ಕೃತಿ ಬಿಡುಗಡೆ

ಪುತ್ತೂರು: ಆಂಗ್ಲ ಭಾಷೆಯ ಹೆಸರಾಂತ ಅಮೆರಿಕ ಲೇಖಕ ಪೀಟರ್ ಕೊಲ್ಲಿಯರ್ ಹಾಗೂ ಡೇವಿಡ್ ಹೊರೋವಿಟ್ಸ್ ಇವರಿಬ್ಬರು ಜಂಟಿಯಾಗಿ ರಚಿಸಿದ ‘ದಿ ಕೆನ್ನೆಡಿಸ್ ಏನ್ ಅಮೇರಿಕನ್ ಡ್ರಾಮಾ’ ಕೃತಿಯ ಕನ್ನಡ ಅನುವಾದ ‘ಕೆನ್ನೆಡಿಗಳು, ಒಂದು ಕಥಾನಕ’ ಕೃತಿ ಲೋಕಾರ್ಪಣೆ ಜುಲೈ 29 ಶನಿವಾರ ಮಧ್ಯಾಹ್ನ 2:30ಕ್ಕೆ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.

ಹಿರಿಯ ಸಾಹಿತಿ ಡಾ. ತಾಳ್ತಜೆ ವಸಂತ ಕುಮಾರ್ ಕೃತಿ ಲೊಕಾರ್ಪಣೆಗೊಳಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ಸಹಾಯಕ ಆಯುಕ್ತ ಗಿರೀಶ್ ನಂದನ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.‌, ಮಿತ್ರಂಪಾಡಿ ಜಯರಾಮ ರೈ, ಕಸಾಪ ಜಿಲ್ಲಾ ಕೋಶಾಧ್ಯಕ್ಷ ಐತಪ್ಪ ನಾಯ್ಕ್ ಭಾಗವಹಿಸಲಿದ್ದಾರೆ. ಕಸಾಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.


ಕರ್ತೃ ಎಂ. ಶಾಂತರಾಮ್ ರಾವ್:

ಆಂಗ್ಲ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದವರು ಎಂ. ಶಾಂತರಾಮ್ ರಾವ್. ಇವರು ಭಾರತ ಸರಕಾರದ ವಾಣಿಜ್ಯ ಇಲಾಖೆಯ ಅಡಿಯ ಎಕ್ಸ್ಪೋರ್ಟ್ ಕ್ರೆಡಿಟ್ ಗ್ಯಾರೆಂಟ್ ಕಾರ್ಪೋರೇಷನ್ ಇಂಡಿಯಾ ಲಿ. (ಇಸಿಜಿಸಿ)ನ ನಿವೃತ್ತ ಅಧಿಕಾರಿ. ಕನ್ನಡದ ಪ್ರಸಿದ್ಧ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಶಿವರಾಮ ಕಾರಂತರ ಸಹೋದರಿ ಶ್ರೀದೇವಿ ಹಾಗೂ ಪುತ್ತೂರಿನ ಖ್ಯಾತ ವಕೀಲರಾಗಿದ್ದ ದಿ. ಸದಾಶಿವರಾಯರ 4ನೆಯ ಪುತ್ರ ಎಂ. ಶಾಂತರಾಮ್ ರಾವ್. ಪುತ್ತೂರಿನ ಹಿರಿಯ ವಕೀಲ ರಾಮ್ ಮೋಹನ್ ರಾವ್ ಅವರ ಸಹೋದರ.


ಕೃತಿ ಕುರಿತು:

ಅಮೆರಿಕ ದೇಶದಲ್ಲಿ ಅತಿ ಕಿರಿಯ ವಯಸ್ಸಿನಲ್ಲಿಯೇ ಚುನಾಯಿತ ಹಾಗೂ ಪ್ರಥಮ ಕೆಥೋಲಿಕ್ ಪಂಗಡದ ಅಧ್ಯಕ್ಷನೆಂಬ ಹೆಗ್ಗಳಿಕೆ ಹಾಗೂ ಪ್ರಸಿದ್ಧಿ ಪಡೆದ ಮಹಾನ್ ನಾಯಕ ಜಾನ್.ಎಫ್ ಕೆನ್ನಡಿ. ಇವರ ಕುಟುಂಬ ಅಮೆರಿಕಾದಲ್ಲಿ ನೆಲೆಯಾಗಿ ಯಶಸ್ಸನ್ನು ಕಂಡ  ರೋಚಕ ಕಥೆ ಈ ಕೃತಿಯಲ್ಲಿ ಸೊಗಸಾಗಿ ನಿರೂಪಣೆಗೊಂಡಿದೆ. ಅವರ ಕುಟುಂಬ ರಾಜಕೀಯವಾಗಿ ಹಾಗೂ ವ್ಯಾವಹಾರಿಕವಾಗಿ ಯಶಸ್ವಿಯಾದ ವಿವರ, ಅವರ ರಾಜಕೀಯದಲ್ಲಿನ ಏಳು ಬೀಳುಗಳು, ಕುಟುಂಬದಲ್ಲಿ ನಡೆದ ಅಚ್ಚರಿಯ ಘಟನೆಗಳು, ಅವರ ಯಶಸ್ಸು, ಅನುಭವಿಸಿದ ನೋವು - ನಲಿವು, ಅವರೊಳಗಿನ ಸ್ಪರ್ಧೆ, ಪ್ರಣಯ ಪ್ರಸಂಗಗಳು, ಭೂಗತ ಜಗತ್ತಿನೊಂದಿಗಿನ ಸಂಬಂಧಗಳು, ಮಾದಕ ವ್ಯಸನಕ್ಕೆ ದಾಸರಾದ ವಿಚಾರ, ಷೇರು ವ್ಯವಹಾರದಲ್ಲಿ ಜೋ. ಕೆನ್ನೆಡಿಯು (ಜಾನ್. ಎಫ್. ಕೆನ್ನಡಿಯ ತಂದೆ) ನಡೆಸಿದ ಅವ್ಯವಹಾರ, ಅವರ ಪ್ರತಿಷ್ಠೆಗಾಗಿ ಬುದ್ದಿಮಾಂದ್ಯ ಮಗುವನ್ನು  ಪ್ರಪಂಚದಿಂದ ದೂರವಿರಿಸಿದ ಮನಕಲುಕುವ ವಿಚಾರ, ಮುಂದಿನ ಜನಾಂಗವು ಪೇಚಿಗೆ ಸಿಲುಕಿದ ಘಟನೆಗಳ ವಿಸ್ತೃತ ವಿವರಣೆಯೇ ಈ ‘ಕೆನ್ನಡಿಗಳು ಒಂದು ಕಥಾನಕ’ ಕೃತಿಯ ಕಥಾ ವಸ್ತುವಾಗಿದೆ.

ಈ ಕೃತಿಯನ್ನು ಓದುತ್ತ ಹೋದಂತೆ ರೋಚಕತೆ ಹಾಗೂ ಓದುವ ಹಂಬಲ ಹೆಚ್ಚುತ್ತ ಹೋಗುತ್ತದೆ. ಕೆನ್ನಡಿ ಕುಟುಂಬವು ರಾಜಕೀಯವಾಗಿ ಬೆಳೆದು ಬಂದ ಪರಿ ಹೇಗೆ? ಇತ್ಯಾದಿಗಳು ಇದರಲ್ಲಿ ಸುಂದರವಾಗಿ ಬಿಂಬಿತವಾಗಿದೆ.

ಸುಮಾರು 771 ಪುಟ ಇರುವ ಈ ಕೃತಿಗೆ ಮುನ್ನುಡಿಯನ್ನು ಕ.ಸಾ.ಪ – ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರು ಬರೆದಿದ್ದಾರೆ.



Leave a Comment: