Posted by vidyamaana on 2024-06-29 13:06:13 |
ಪುತ್ತೂರು: ಚೆಲ್ಯಡ್ಯ ಮುಳುಗು ಸೇತುವೆ ಮಳೆಗಾಲ ಮುಗಿಯುವವರೆಗೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಸ್ಥಗಿತಗೊಳ್ಳಲಿದೆ.ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಈ ಬಾರಿಯ ಮಳೆಗೂ ಚೆಲ್ಯಡ್ಕ ಮುಳುಗು ಸೇತುವೆ ನೀರಿನಿಂದ ಮುಳುಗಿ, ಸಂಚಾರ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ಸಂಚಾರ ಸೂಚಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪುತ್ತೂರಿನಿಂದ ಪಾಣಾಜೆ - ಬೆಟ್ಟಂಪಾಡಿ ಭಾಗಕ್ಕೆ ತೆರಳುವವರು ಸಂಟ್ಯಾರ್ ರಸ್ತೆಯಾಗಿ ತೆರಳಬಹುದು. ದೇವಸ್ಯ ಕಡೆಯಿಂದ ತೆರಳುವವರು ಚೆಲ್ಯಡ್ಕದವರೆಗೆ ಮಾತ್ರ ತೆರಳಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Posted by Vidyamaana on 2023-09-18 15:36:23 |
ನೆಲ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ 9ನೇ ಶಾಖೆಯು ನೆಲ್ಯಾಡಿ ರಬ್ಬರ್ ಸೊಸೈಟಿ ಬಳಿ ಸೈಂಟ್ ಮೇರೀಸ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.
ಉದನೆ ಸಂತ ಅಂತೋನೀಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ.ಫಾ. ಹನಿ ಜೇಕಬ್ ರವರು ಶಾಖೆಯ ಕಚೇರಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.
ಸಭಾ ಕಾರ್ಯಕ್ರಮವನ್ನು ಬೆಳಾಲು ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಾಲು, ನೆಲ್ಯಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಲಾಂ ಬಿಲಾಲ್, ಸಂಘದ ಅಧ್ಯಕ್ಷರಾದ ಕುಸುಮಾಧರ್ ಎಸ್.ಕೆ., ಸಂಘದ ಉಪಾಧ್ಯಕ್ಷರಾದ ಗಿರಿಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ. ಉಪಸ್ಥಿತರಿದ್ದರು.
ನವ್ಯ ಸ್ವಾಗತಿಸಿದರು. ಚೇತನ್ ಎ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅರ್ಪಣಾ ವಂದಿಸಿದರು. ಡಾ. ರಾಜೇಶ್ ಬೆಜ್ಜಂಗಳ ನಿರೂಪಿಸಿದರು.
Posted by Vidyamaana on 2024-05-28 21:00:33 |
ಬೆಳ್ತಂಗಡಿ : ಪೋಲಿಸರಿಗೆ ಧಮ್ಕಿ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ 40 ಮಂದಿ ವಿರುದ್ಧ ಪೊಲೀಸರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಶಾಸಕ ಹರೀಶ್ ಪೂಂಜಾ (Harish Poonja) ಜತೆ ಪೊಲೀಸ್ ಠಾಣೆಗೆ ಹೋಗಿದ್ದವರ ಹೆಸರನ್ನು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.ಪೊಲೀಸರಿಗೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ.ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಮೇ 22ರಂದು ವಿಚಾರಣೆಗೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಹಾಜರಾಗಿದ್ದರು. ಅದಕ್ಕೂ ಮುನ್ನಾ ಅವರ ಬಂಧನಕ್ಕೆ ಬೆಳ್ತಂಗಡಿ ಪೊಲೀಸರು ಮುಂದಾದ ವೇಳೆ ಬಿಜೆಪಿ ಕಾರ್ಯಕರ್ತರು, ಮುಖಂಡರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ನಂತರ ಶಾಸಕರನ್ನು ಪೊಲೀಸರು ಬಂಧಿಸದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ಅಲ್ಲಿಂದ ತೆರಳಿದ್ದರು.
Posted by Vidyamaana on 2023-09-01 01:50:24 |
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.
ಸುಸ್ತು, ಬಳಲಿಕೆಯಿಂದಾಗಿ ಹೆಚ್ಡಿಕೆ ಮಂಗಳವಾರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇಂದು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಕೂಡ ಸಿಎಂ ಜೊತೆಗಿದ್ದರು.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ. ಐಸಿಯುನಿಂದ ಜನರಲ್ ವಾರ್ಡ್ಗೆ ಶಿಫ್ಟ್ ಆಗಿದ್ದು, ನಾಳೆ ಅಥವಾ ನಾಡಿದ್ದು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ತಂದೆ ಆರೋಗ್ಯ ಸ್ಥಿರವಾಗಿದ್ದು, ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕೆಲ ದಿನಗಳು ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದು, ಯಾರೂ ಕೂಡ ಆತಂಕಕ್ಕೆ ಒಳಗಾಗೋದು ಬೇಡ ಅಂತ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
Posted by Vidyamaana on 2023-06-25 04:25:12 |
ಬೆಳ್ತಂಗಡಿ : ಬಜಿರೆ ಗ್ರಾಮದ ನೀರಪಲ್ಕೆ ಮನೆ ರವಿ ಕುಲಾಲ್ ರವರ ಪುತ್ರಿ ರಶ್ಮಿತಾ ರವರು ಅಸೌಖ್ಯದಿಂದ ಜೂ.24 ರಂದು ನಿಧನರಾದರು.
ವೇಣೂರು ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಶ್ಮಿತಾ ಕಳೆದ 4 ದಿವಸದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಕಳೆದ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.
ಮೃತರು ತಾಯಿ ಸುಶೀಲ, ಬಂಧುಬಳಗವನ್ನು ಅಗಲಿದ್ದಾರೆ.
Posted by Vidyamaana on 2023-09-19 06:49:32 |
ಪುತ್ತೂರು: ಪುತ್ತೂರು ಉರ್ಲಾಂಡಿ ನಿವಾಸಿ ಮಹೇಶ್ ಭಂಡಾರಿ (37.ವ) ಅಲ್ಪಕಾಲದ ಅನಾರೋಗ್ಯದಿಂದ ಸೆ.18ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಸಂಜೆ ನಿಧನರಾದರು.ಮಹೇಶ್ರವರು ಪುತ್ತೂರಿನ ಪ್ರತಿಷ್ಠಿತ ಜವಳಿ ಅಂಗಡಿಯಲ್ಲಿ ಹಲವಾರು ವರ್ಷಗಳಿಂದ ಸೇಲ್ಸ್ ಮೆನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ನಂತರ ಫ್ಯಾನ್ಸಿ ಅಂಗಡಿಯನ್ನು ತೆರೆದಿದ್ದರು. ಮೃತರು ತಾಯಿ ರೇವತಿ, ಸಹೋದರಿಯರಾದ ವಿಜಯ, ಜ್ಯೋತಿರವರನ್ನು ಅಗಲಿದ್ದಾರೆ.