ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


ಬೆಂಬಲ ಬೆಲೆಯನ್ನು ಘೋಷಿಸುವ ಜವಾಬ್ದಾರಿ ಈಗ ಕೇಂದ್ರಕ್ಕೆ ಸೇರಿದ್ದು

Posted by Vidyamaana on 2024-02-27 16:21:42 |

Share: | | | | |


ಬೆಂಬಲ ಬೆಲೆಯನ್ನು ಘೋಷಿಸುವ ಜವಾಬ್ದಾರಿ ಈಗ ಕೇಂದ್ರಕ್ಕೆ ಸೇರಿದ್ದು

ಪುತ್ತೂರು: ಪುತ್ತೂರಿನ ರಾಜಕೀಯದಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸಲು ಮತ್ತು ಪುತ್ತೂರು ಬಿಜೆಪಿಯಲ್ಲಿ ತನ್ಙ ಯಾಜಮಾನ್ಯ ಪುನರ್ ಸ್ಥಾಪಿಸಲು ಹೆಣಗಾಡುವ ಸಂಜೀವ ಮಠಂದೂರು ಅವರ, ಪ್ರಯತ್ನದ ಅಂಗವಾಗಿ ಅಡಿಕೆಯ ಬೆಲೆ ಕುಸಿತವನ್ನು ಬಳಸಿಕೊಂಡು ಕರ್ನಾಟಕ ಸರಕಾರವನ್ನು ರೈತ ವಿರೋಧಿ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಸಿಯುತ್ತಿರುವ ಅಡಿಕೆ ಬೆಲೆಗೆ ಕರ್ನಾಟಕ ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಲ್ಲಿ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಒಂದು ಕಡೆ ಹೇಳುವ ಸಂಜೀವ ಮಠಂದೂರ್ರವರು ಎಪಿಎಂಸಿಯಲ್ಲಿ  ಸಂಗ್ರಹವಾಗುವ ಸೆಸ್ ಹಣ  ರಾಜ್ಯ ಸರ್ಕಾರಕ್ಕೆ ಹೋಗುತ್ತದೆ. ಈ ಹಣದ ಆವರ್ತನ ನಿಧಿಯಿಂದ ರಾಜ್ಯ ಸರ್ಕಾರ ಅಡಿಕೆಗೆ ಬೆಂಬಲ ಬೆಲೆ ನೀಡಬೇಕು ಎಂದು ಹೇಳುತ್ತಾರೆ. ಹೀಗೆ ಸ್ಪಷ್ಟತೆ ಇಲ್ಲದೆ ಮಾತನಾಡಿದ ಸಂಜೀವ ಮಠಂದೂರ್ರವರಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಅಂದರೆ ಏನು ಅನ್ನುವುದೇ ಗೊತ್ತಿಲ್ಲ. ಎಪಿಎಂಸಿಯಲ್ಲಿ ಏನು ಆಗುತ್ತಿದೆ ಅನ್ನುವುದೂ ಗೊತ್ತಿಲ್ಲ ಅನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಕುಟುಕಿದರು.

ರಾಜ್ಯ ಸರ್ಕಾರ ನಿರ್ದಿಷ್ಟ ಬೆಳೆಯ ಮಾರುಕಟ್ಟೆ ದರ ಕುಸಿದಿರುವುದನ್ನು ಉಲ್ಲೇಖಿಸಿ ಕೇಂದ್ರ ಸರಕಾರಕ್ಕೆ ಮಾರುಕಟ್ಟೆ ಮಧ್ಯ ಪ್ರವೇಶಕ್ಕಾಗಿ ಪ್ರಸ್ತಾವನೆಯನ್ನು ಕಳುಹಿಸಬೇಕಾಗುತ್ತದೆ. ಇದಕ್ಕೆ ಕೇಂದ್ರ ಸರಕಾರ ಒಪ್ಪಿಗೆ ನೀಡಿ ಶೇಕಡ 50:50ರ ಅನುಪಾತದ ಪಾಲುಗಾರಿಕೆಯಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಹಿಂದೆ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರಕಾರ ಅಡಿಕೆಗೆ ಬೆಂಬಲ ಬೆಲೆಯನ್ನು ಘೋಷಿಸಿದ್ದು ಇದೇ ವ್ಯವಸ್ಥೆಯಲ್ಲಿ. ಈಗ ಭಾರತದ ಗಡಿಗಳಲ್ಲಿ ವಿದೇಶೀ ಅಡಿಕೆ  ಭಾರತದ ಮಾರುಕಟ್ಟೆಗೆ ಕಳ್ಳಸಾಗಾಟದ ಮುಖಾಂತರ ಬಂದು ಮಾರುಕಟ್ಟೆ ದರ ತೀವ್ರವಾಗಿ ಕುಸಿದ ಈ ಸಂದರ್ಭದಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಲ್ಲಿ ರಾಜ್ಯ ಸರ್ಕಾರ ಅಡಿಕೆಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಸಂಜೀವ ಮಠಂದೂರ್ರವರು ಒತ್ತಾಯಿಸುತ್ತಿರುವುದು ಮತ್ತು ಈಗ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಶಾಸಕರು ಬೆಂಬಲ ಬೆಲೆಗಾಗಿ ಸರಕಾರವನ್ನು ಒತ್ತಾಯಿಸಲಿದ್ದಾರೆ ಎಂದು ಹೇಳಿರುವುದು ನಗೆ ಪಾಟಲಿನ ವಿಚಾರವಾಗಿದೆ ಎಂದರು.

ಸಂಜೀವ ಮಠಂದೂರ್ರವರಿಗೆ ಈ ರಾಜ್ಯದಲ್ಲಿ ಏನು ಆಗುತ್ತಾ ಇದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಯಾವ ರೀತಿಯಲ್ಲಿ ರೈತರ ಪರವಾಗಿ ಕೆಲಸ ಮಾಡುತ್ತಿದೆ ಅನ್ನುವುದರ ಅರಿವೇ ಇಲ್ಲ. ಅವರು ದಯವಿಟ್ಟು ಮೊನ್ನೆ ನಡೆದ ಬಜೆಟ್ ಅಧಿವೇಶನದಲ್ಲಿ ಸಿದ್ದರಾಮಯ್ಯನವರು ಮಾಡಿದ ಬಜೆಟ್ ಭಾಷಣವನ್ನು ಒಮ್ಮೆ ಸರಿಯಾಗಿ ಕೇಳಬೇಕು. ಕೇಳುವುದಕ್ಕೆ ಸಾಧ್ಯವಿಲ್ಲವೆಂದಾದರೆ ಬಜೆಟ್ ಪ್ರತಿಯನ್ನು ಪಡೆದು ಅದನ್ನು ಓದಬೇಕು. ಈ ಬಾರಿಯ  ಕರ್ನಾಟಕ ರಾಜ್ಯ ಸರ್ಕಾರದ ಬಜೆಟಿನಲ್ಲಿ ಇತರ ಕೆಲವು ಬೆಳೆಗಳು ಸೇರಿದಂತೆ ಅಡಿಕೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸುವುದಕ್ಕಾಗಿ ಈಗಾಗಲೇ ಪ್ರಸ್ತಾವನೆಯನ್ನು ಕಳುಹಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಅಧಿಕೃತವಾಗಿ ಮತ್ತು ಸ್ಪಷ್ಟವಾಗಿ ಘೋಷಿಸಿದ್ದಾರೆ.  ಇದರ ಅರಿವಿಲ್ಲದ ಮಾಜಿ ಶಾಸಕರು ಈಗ ಬೆಂಬಲೆ ಬೆಲೆಗಾಗಿ ಬೇಡಿಕೆ ಇಟ್ಟಿದ್ದಾರೆ. 

ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂಬ ಪ್ರಸ್ತಾವನೆಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ಈಗಾಗಲೇ ಕೇಂದ್ರ ಸರಕಾರಕ್ಕೆ ಸಲ್ಲಿಸಿ ಆಗಿದೆ. ಆದ್ದರಿಂದ ಸಂಜೀವಣ್ಣ, ನಿದ್ದೆಯಿಂದ ಬೇಗ ಏಳಬೇಕಿತ್ತು ಎಂದು ಲೇವಡಿ ಮಾಡಿದರು.

ಕರ್ನಾಟಕ ಸರಕಾರದ ಈ ಪ್ರಸ್ತಾವನೆಯನ್ನು ಅಂಗೀಕರಿಸಿ ಬೆಂಬಲ ಬೆಲೆಯನ್ನು ಘೋಷಿಸುವ ಜವಾಬ್ದಾರಿ ಈಗ ಇರುವುದು ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರ್ಕಾರಕ್ಕೆ. ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿದೆಯೇ ಹೊರತು ರಾಜ್ಯ ಸರಕಾರದಿಂದ ಯಾವ ನಿರ್ಲಕ್ಷವೂ ಆಗಿಲ್ಲ. ಸಂಜೀವ ಮಠಂದೂರ್ರವರಿಗೆ ಈ ಹಂತದಲ್ಲಿ ಅಡಿಕೆಗೆ ಬೆಂಬಲ ಬೆಲೆ ಸಿಗಬೇಕೆಂಬ  ಅವರ ಮಾತಿನಲ್ಲಿ ಕಿಂಚಿತ್ತಾದರೂ ಸತ್ಯ ಇರುವುದಾದರೆ, ಅಡಿಕೆ ಬೆಳೆಗಾರರ ಬಗ್ಗೆ ನಿಜವಾಗಿಯೂ ಕಾಳಜಿ ಇರುವುದಾದರೆ ಅವರು ಒತ್ತಾಯ ಮಾಡಬೇಕಾಗಿರುವುದು ಕರ್ನಾಟಕ ಕಾಂಗ್ರೆಸ್ ಸರಕಾರವನ್ನಲ್ಲ,  ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ಮೋದಿ ಅವರ ಆಡಳಿತವನ್ನು. ಕಳ್ಳ ಸಾಗಾಟದ ಮೂಲಕ ದೇಶವನ್ನು ಪ್ರವೇಶಿಸಿ ಇಲ್ಲಿನ ಅಡಿಕೆ ಮಾರುಕಟ್ಟೆಯನ್ನು ಕೆಡಿಸುತ್ತಿರುವ ವಿದೇಶೀ ಅಡಿಕೆಯನ್ನು ದೇಶ ಪ್ರವೇಶಿಸದಂತೆ ತಡೆಯುವುದಕ್ಕೆ ಸಾದ್ಯವಾಗದ ಕೇಂದ್ರ ಸರಕಾರದ ವೈಫಲ್ಯಗಳನ್ನು ಮರೆಮಾಚಿ ಜನರ ಕಣ್ಣಿಗೆ ಮಣ್ಣೆರಚುವ ಉದ್ದೇಶದಿಂದ ಸಂಜೀವ ಮಠಂದೂರು ಈ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದರು.

ಅಕ್ರಮ ಅಡಕೆ ಅಂದರೆ ಕಳ್ಳಸಾಗಾಣಿಕೆಯೇ!!:

ಅಡಿಕೆ ಮಾರುಕಟ್ಟೆ ಪುನಶ್ಚೇತನಕ್ಕೆ ಈಗ ಆಗಬೇಕಾಗಿರುವುದಾದರೂ ಏನು?: ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರಿಂದ ತೊಡಗಿ ಅಡಿಕೆಯ ಕಟ್ಟ ಕಡೆಯ ಕೃಷಿಕರವರೆಗೆ  ಭಾರತಕ್ಕೆ ಕಳ್ಳ ಸಾಗಾಣಿಕೆಯ ಮೂಲಕ ಅವ್ಯಾಹತವಾಗಿ  ಕಳಪೆ ಗುಣಮಟ್ಟದ ಅಡಿಕೆ ಪೂರೈಕೆ ಆಗುತ್ತಿದೆ. ಈ ಕಳಪೆ ಗುಣಮಟ್ಟದ ಅಡಿಕೆಯನ್ನು ನಮ್ಮ ರೈತರು ಬೆಳೆದ ಶ್ರೇಷ್ಠ ಗುಣಮಟ್ಟದ ಅಡಿಕೆಗೆ ಮಿಶ್ರಣ ಮಾಡಿ, ಅಡಿಕೆಯ ಮಾರುಕಟ್ಟೆಯನ್ನು ಹಾಳುಗೆಡಹಿ ಅಡಿಕೆಯ ಬೆಲೆಯ ಕುಸಿತಕ್ಕೆ ಕಾರಣವಾಗಿದೆ ಎಂದು ಸ್ಪಷ್ಟವಾಗಿ ಗೊತ್ತಿದೆ. ಆದ್ದರಿಂದ, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ತಕ್ಷಣ ದೇಶದ ಗಡಿಗಳನ್ನು ಭದ್ರಪಡಿಸಿ, ವಿದೇಶೀ ಅಡಿಕೆಯ ಅಕ್ರಮ ಕಳ್ಳಸಾಗಾಟವನ್ನು ತಡೆದು, ತನ್ಮೂಲಕ ಅಡಿಕೆಯ ಕಲಬೆರಕೆಯನ್ನು ನಿಲ್ಲಿಸಿ ಮಾರುಕಟ್ಟೆ ಚೇತರಿಕೆಗೆ ಕ್ರಮ ಕೈಗೊಳ್ಳುವುದೇ ಅಡಿಕೆ ಮಾರುಕಟ್ಟೆಯ ಪುನಶ್ಚೇತನಕ್ಕೆ ಅಗತ್ಯವಾಗಿ ಆಗಬೇಕಾಗಿರುವುದಾಗಿದೆ. ಇದನ್ನೇ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ಹೇಳಿದ್ದಾರೆ. ಯಾವ ಕ್ಷಣದಲ್ಲಿ ಸಂಜೀವ ಮಠಂದೂರ್ರವರು ಅಡಿಕೆಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿದರೋ ಅದರ ಮರು ದಿವಸವೇ ಕ್ಯಾಂಪ್ಕೋ ಅಧ್ಯಕ್ಷರು ಅಡಿಕೆ ಮಾರುಕಟ್ಟೆಯ ಪುನಶ್ಚೇತನಕ್ಕೆ ಕಳ್ಳ ಸಾಗಾಣಿಕೆಯನ್ನು  ತಡೆಯುವಬೇಕು ಎಂದು ಹೇಳಿಕೆ ನೀಡಿ ಸಂಜೀವ ಮಠಂದೂರ್ರವರ ವಾದವನ್ನು ಸುಳ್ಳು ಎಂದು ನಿರೂಪಿಸಿದ್ದಾರೆ ಎಂದರು.

ಅಡಿಕೆಯ ಕಳ್ಳ ಸಾಗಾಣಿಕೆಯಿಂದಾಗಿ  ಅಡಿಕೆಯ ಮಾರುಕಟ್ಟೆ ಕುಸಿದಿದೆ ಎಂದು ಕ್ಯಾಂಪ್ಕೋದ ಅಧ್ಯಕ್ಷರೇ ಮತ್ತೆ ಮತ್ತೆ ಹೇಳುತ್ತಿದ್ದರೂ  ದಕ್ಷಿಣ ಕನ್ನಡ ಜಿಲ್ಲೆಯ ಸಂಸತ್ ಸದಸ್ಯರಾದ ಮಾನ್ಯ ನಳಿನ್ ಕುಮಾರ್ ಕಟೀಲ್ ಆಗಲಿ ಕೇಂದ್ರದ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆಯವರಾಗಲಿ ಈ ವಿಚಾರದಲ್ಲಿ ಯಾಕೆ ಬಾಯಿಯನ್ನೇ ಬಿಡುತ್ತಿಲ್ಲ?  ಅಡಿಕೆ ಕಳ್ಳ ಸಾಗಾಣಿಕೆಯ ಕಿಂಗ್ ಪಿನ್ನುಗಳು ಇವರ ಬಾಯಿಯನ್ನು ಮುಚ್ಚಿದ್ದಾರೆಯೇ?  ಊರಿಗೆಲ್ಲ ತಿಳಿದಿರುವಂತೆ ಬಿಜೆಪಿಯ ದೊಡ್ಡ ದೊಡ್ಡ ಕುಳಗಳು  ಅಡಿಕೆ ಮಾರುಕಟ್ಟೆಯಲ್ಲಿ ಕೈಯಾಡಿಸುತ್ತಿರುವುದೇ ಇದಕ್ಕೆ ಕಾರಣ. ಬಿಜೆಪಿಯ ಚುನಾವಣಾ ಚಾಣಕ್ಯರ ಸುಪುತ್ರ ನಡೆಸುತ್ತಿರುವ ಅಡಿಕೆ ವ್ಯವಹಾರಕ್ಕೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದಲೇ ಈ ಅಡಿಕೆ ಕಳ್ಳ ಸಾಗಾಣಿಕೆಯನ್ನು ಕೇಂದ್ರ ಸರಕಾರ  ಕಂಡು ಕಾಣದಂತೆ ಕಣ್ಣು ಮುಚ್ಚಿ  ಕುಳಿತಿದೆ.  ಇದೇ ಕಾರಣಕ್ಕಾಗಿಯೇ ಕ್ಯಾಂಪ್ಕೋ ಅಧ್ಯಕ್ಷರಾದಿಯಾಗಿ ಬಿಜೆಪಿಯವರೆಲ್ಲರೂ  ಅಡಿಕೆ ಅಕ್ರಮವಾಗಿ ಆಮದಾಗುತ್ತಿದೆ ಎಂದು ಹೇಳುತ್ತಾರಷ್ಟೇ ಹೊರತು  ಅಂತರಾಷ್ಟ್ರೀಯ ಗಡಿಗಳಲ್ಲಿ ವಿದೇಶಿ ಅಡಿಕೆ ಕಳ್ಳ ಸಾಗಾಣಿಕೆಯಾಗಿ ಭಾರತಕ್ಕೆ  ಬಂದು ನಮ್ಮ ಮಾರುಕಟ್ಟೆಯನ್ನು ಹಾಳುಗೆಡಹುತ್ತಿದೆ ಎಂದು ಹೇಳುತ್ತಿಲ್ಲ . ಅಕ್ರಮ ಆಮದು ಎಂದರೆ ಕಳ್ಳ ಸಾಗಾಣಿಕೆಯಲ್ಲದೆ ಮತ್ತೇನು ? ಎಂದು ಪ್ರಶ್ನಿಸಿದರು.

ಎ.ಪಿ.ಎಂ.ಸಿ. ಸೆಸ್ : 

ಎಪಿಎಂಸಿಯಲ್ಲಿ ಸೆಸ್ ರೂಪದಲ್ಲಿ ಹಣ ಸಂಗ್ರಹವಾಗುತ್ತದೆ,  ಈ ಹಣ ರಾಜ್ಯ ಸರ್ಕಾರಕ್ಕೆ ಹೋಗುತ್ತದೆ,  ಈ ಹಣದಲ್ಲಿ ರಾಜ್ಯ ಸರಕಾರ ಬೆಂಬಲ ಬೆಲೆ ನೀಡಬೇಕು ಎಂದು ಹೇಳುತ್ತಿರುವ ಮಾನ್ಯ ಸಂಜೀವ ಮಠಂದೂರ್ರವರಿಗೆ  ಎಪಿಎಂಸಿಯ ಪರಿಸ್ಥಿತಿಯ ಬಗ್ಗೆ ಯಾವುದೇ ರೀತಿಯ ತಿಳುವಳಿಕೆ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಎಪಿಎಂಸಿಯಲ್ಲಿ ಸೆಸ್ ರೂಪದಲ್ಲಿ  ಸಂಗ್ರಹವಾಗುವ  ಹಣ ಇಂದು ರಾಜ್ಯ ಸರ್ಕಾರಕ್ಕೆ ಹೋಗುತ್ತಿಲ್ಲ.  ಸೆಸ್ ಹಣ ಒಂದಷ್ಟು ರಸ್ತೆಗಳನ್ನು ನಿರ್ಮಿಸುವುದಕ್ಕೆ ಎಪಿಎಂಸಿ ಸದಸ್ಯರಿಗೆ ನೀಡುವ ಅನುದಾನ, ರೈತರು ಅಪಘಾತದಿಂದ ಅಕಾಲಿಕ ಮರಣ ಹೊಂದಿದಾಗ ನೀಡುವ ಪರಿಹಾರ, ಇತ್ಯಾದಿ ಬಳಕೆಗೆ ಎಪಿಎಂಸಿ ಸೆಸ್ ಹಣ ಬಳಕೆಯಾಗುತ್ತದೆಯಷ್ಟೇ ಹೊರತು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆ ಹಣ ಹೋಗುತ್ತಿಲ್ಲ ಎನ್ನುವ  ಪ್ರಾಥಮಿಕ ಜ್ಞಾನವೂ ಮಾಜಿ ಶಾಸಕರಿಗೆ ಇಲ್ಲದಿರುವುದು ದುರ್ದೈವದ ಸಂಗತಿಯಾಗಿದೆ. ಕೇಂದ್ರ ಸರಕಾರ 3 ಕರಾಳ  ಕೃಷಿ ಕಾಯಿದೆಗಳನ್ನು ತಂದು ಎಪಿಎಂಸಿ ಕಾಯ್ದೆಯನ್ನ ತಿದ್ದುಪಡಿ ಮಾಡುವವರೆಗೆ ಎಪಿಎಂಸಿಗೆ ಸೆಸ್ ರೂಪದಲ್ಲಿ ಪ್ರತಿ ವರ್ಷ ಕೋಟ್ಯಂತರ ರೂಪಾಯಿ  ಆದಾಯ ಬರುತ್ತಿತ್ತು.  ಕೇಂದ್ರ ಸರ್ಕಾರವನ್ನು ಅನುಸರಿಸಿ ಕರ್ನಾಟಕ ರಾಜ್ಯವನ್ನು ಆಗ ಆಳುತ್ತಿದ್ದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ  ಕರ್ನಾಟಕ ಎಪಿಎಂಸಿ ಕಾಯ್ದೆಗೂ ತಿದ್ದುಪಡಿ ತಂದಿದ್ದು,   ರೈತರ ಪ್ರತಿಭಟನೆಗಳ ನಂತರ ಕೇಂದ್ರ ಸರ್ಕಾರ ಈ ವಿವಾದಿತ ಎಪಿಎಂಸಿ ಮಸೂದೆಯನ್ನು ಹಿಂತೆಗೆದುಕೊಂಡರೂ ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ತಾನು ತಂದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂತೆಗೆದುಕೊಂಡಿರಲಿಲ್ಲ. ರೈತರು ತಮ್ಮ ಕೃಷಿ ಉತ್ಪನ್ನಗಳನ್ನು  ಎಪಿಎಂಸಿಯಲ್ಲಿಯೇ  ಮಾರಾಟ ಮಾಡಬೇಕೆಂದೇನಿಲ್ಲ , ಎಲ್ಲಿ ಬೇಕಿದ್ದರೂ ಮಾರಬಹುದು ಎಂಬ ಕಾನೂನು ಬಂದ ನಂತರ ನಗರ ಮತ್ತು ಹಳ್ಳಿಗಳ ಅಡಿಕೆ ವ್ಯಾಪಾರಿಗಳ ಮೇಲಿದ್ದ ಎಪಿಎಂಸಿ ಹಿಡಿತ ತಪ್ಪಿ ಹೋಗಿ ಏಪಿಎಂಸಿಗೆ ಬರುತ್ತಿದ್ದ ಆದಾಯ ಕುಸಿದು ಹೋಯಿತು. ಇದರ ಜೊತೆಗೆ 2020ರಲ್ಲಿ  ಬಿಜೆಪಿ ಸರಕಾರವು 1.5℅  ಇದ್ದ ಸೆಸ್ ಧರವನ್ನು 1℅ ಕ್ಕೆ , ತದನಂತರ 0.35ಕ್ಕೆ ಇಳಿಸಿ  ಎಪಿಎಂಸಿ ಆದಾಯವನ್ನು ಕನಿಷ್ಠ ಮಟ್ಟಕ್ಕೆ ತಂದು ಹಾಕಿತು. 2020ನೇ ಇಸವಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಅಂದಿನ ಬಿಜೆಪಿ ಸರಕಾರದ ಕಾನೂನು ಸಚಿವರಾದ ಮಾಧುಸ್ವಾಮಿಯವರು ವ್ಯಾಪಾರಿಗಳ ಒತ್ತಡದಿಂದಾಗಿ ಈ ಸೆಸ್ ದರವನ್ನು ಇಳಿಕೆ ಮಾಡಲಾಗಿದೆ ಮತ್ತು ಇದರಿಂದಾಗಿ ಎಪಿಎಂಸಿಯನ್ನು ನಡೆಸುವುದೇ ನಮಗೆ ಕಷ್ಟವಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದನ್ನು ಗಮನಿಸಬಹುದಾಗಿದೆ. ಹೀಗಿದ್ದರೂ ಸಂಜೀವ ಮಠಂದೂರ್ರವರು ಎಪಿಎಂಸಿ ಸೆಸ್ ಹಣದಲ್ಲಿ ಬೆಂಬಲ ಬೆಲೆ ನೀಡಿ ಎಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ಲೇವಡಿ ಮಾಡಿದರು.

ಅಡಿಕೆ ಬೆಳೆಗಾರರ ಲಾಬಿಯಂತೆ :  

ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರ್ರವರು, ಅಡಿಕೆ ವ್ಯಾಪಾರಿಗಳ ಲಾಬಿ ಇದೆ, ಬೆಳೆಗಾರರ ಲಾಬಿ ಇಲ್ಲ ಎಂಬ ಮಾತನ್ನು ಹೇಳಿದ್ದಾರೆ.  ಈ ಮಾತನ್ನು ಹೇಳಲು ಅವರಿಗೆ ನಾಚಿಕೆ ಆಗಬೇಕು.  ವ್ಯಾಪಾರಿಗಳ ಲಾಭಿಯನ್ನು ವ್ಯಾಪಾರಿಗಳೇ ತಮ್ಮ ಹಣ ಬಲದಿಂದ ಮಾಡುತ್ತಾರೆ.  ಆದರೆ ಅಡಿಕೆ ಬೆಳೆಗಾರರ ಲಾಭಿಯನ್ನು ಮಾಡಬೇಕಾದವರು ಯಾರು?  ಅಡಿಕೆ ಬೆಳೆಗಾರರ ಲಾಬಿಯನ್ನು ಮಾಡಬೇಕಾದವರು ನಮ್ಮ ಜನಪ್ರತಿನಿಧಿಗಳು. ಅಡಿಕೆ ಬೆಳೆಗಾರರಿಗೆ ಸಮಸ್ಯೆ ಬಂದಾಗ, ಅಡಿಕೆ ಮಾರುಕಟ್ಟೆ ಕುಸಿದು ಹೋದಾಗ, ಸರಕಾರಗಳಿಗೆ ಒತ್ತಡವನ್ನು ತಂದು, ಬೆಳಗಾರರ ಹಿತರಕ್ಷಣೆಗೆ ಜನಪ್ರತಿನಿಧಿಗಳೇ ಪ್ರಯತ್ನಿಸಬೇಕು. ಇದೇ ಲಾಬಿ.  ಇಂದು ಅಡಿಕೆ ಬೆಳೆಗಾರರಿಗೆ ಲಾಬಿ ಇಲ್ಲ ಎಂದು ಹೇಳುತ್ತಿರುವ ಮಾನ್ಯ ಸಂಜೀವ ಮಠಂದೂರ್ರವರು  ತಾವು ಶಾಸಕರಾಗಿದ್ದ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಪರವಾಗಿ ಯಾವುದೇ ಲಾಬಿಯನ್ನು ಮಾಡಿದವರಲ್ಲ.  ವಿಧಾನಸಭೆಯಲ್ಲಿ ಅಡಿಕೆ ಬೆಳೆಗಾರರ ಪರವಾಗಿ ಯಾವುದೇ ಒತ್ತಡವನ್ನು ಸರಕಾರದ ಮೇಲೆ ತಂದಿಲ್ಲ.  "ಅಡಿಕೆ ಒಂದು ಜಗಿದು ಉಗಿಯುವ ವಸ್ತು" ಎಂದು ಮತ್ತೆ ಮತ್ತೆ ಹೀಯಾಳಿಸಿದವರು ಮಾನ್ಯ ಸಂಜೀವ ಮಠಂದೂರ್ರವರು.  ಮೊನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲೂ  ಪತ್ರಕರ್ತರ ತೀವ್ರ ಆಕ್ಷೇಪದ ಹೊರತಾಗಿಯೂ ಮಾನ್ಯ ಸಂಜೀವ ಮಠಂದೂರ್ರವರು  "ಅಡಿಕೆ ಒಂದು ಜಗಿದು ಉಗುಳುವ ವಸ್ತು" ಎಂದು ಮತ್ತೆ ಮತ್ತೆ ಪ್ರತಿಪಾದಿಸಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ಅಡಿಕೆಯನ್ನು ಹೀಯಾಳಿಸಿದವರು ಅಡಿಕೆ ಬೆಳೆಗಾರರ ಪರವಾಗಿ ಇರುವುದಕ್ಕೆ ಸಾಧ್ಯವೇ?  ಕಳೆದ ವರ್ಷ ನಡೆದ ಕ್ಯಾಂಪ್ಕೋ  ಮಹಾಸಭೆಯಲ್ಲಿ ಮಾನ್ಯ ಸಂಜೀವ ಮಠಂದೂರ್ರವರು  ಎಲೆ ಚುಕ್ಕಿ ರೋಗ ಮತ್ತು  ಅಡಿಕೆಯ ಹಳದಿ ರೋಗಕ್ಕೆ  ಸಂಶೋಧನೆಗಳನ್ನು ನಡೆಸಬೇಕೆಂದು  ಒತ್ತಾಯಿಸಿದಾಗ ಸಭಾಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಂಪ್ಕೋದ ಅಧ್ಯಕ್ಷರು  ನಾವು 3-4 ಬಾರಿ ಒತ್ತಾಯಿಸಿದರೂ ಅಡಿಕೆಯ ಬಗ್ಗೆ ವಿಧಾನಸಭೆಯಲ್ಲಿ ನೀವೆಷ್ಟು ಮಾತನಾಡಿದ್ದೀರಿ ಎಂದು ಛೇಡಿಸುವ ಮೂಲಕ  ಮಾನ್ಯ ಸಂಜೀವ ಮಠಂದೂರ್ರವರ ನಿಜ ಬಣ್ಣವನ್ನು ಸಾರ್ವಜನಿಕವಾಗಿ ಬಯಲುಗೊಳಿಸಿದ್ದರು. ಅಡಿಕೆಯನ್ನು ಜಗಿದು ಉಗಿಯುವ ವಸ್ತು ಎಂದು ಹೀಯಾಳಿಸಿ ಬೆಳೆಗಾರರ ಮನಸ್ಸನ್ನು ನೋಯಿಸಿದ ಕಾರಣಕ್ಕಾಗಿಯೇ ಅವರನ್ನು ಅವರ ಕಳೆದ ಚುನಾವಣೆಯಲ್ಲಿ ಪಕ್ಷ ಜಗಿದು ಉಗಿದಿದೆ. ಅಡಿಕೆ ಬೆಳೆಗಾರರ ಪರವಾದ ಲಾಭಿ ಮಾಡುವುದೆಂದರೆ  ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಸಮರ್ಥವಾಗಿ ಸರಕಾರಗಳ ಮುಂದೆ ಇಡುವುದು. ವ್ಯಾಪಾರಿಗಳು ಹಣಬಲದಿಂದ ತಮ್ಮ ಲಾಬಿಯನ್ನು ನಡೆಸಿದರೆ ಜನಪ್ರತಿನಿಧಿಗಳು ಜನ ಬಲದಿಂದ ಬೆಳೆಗಾರರ ಲಾಬಿಯನ್ನು ನಡೆಸಬೇಕಾಗಿದೆ. ಈಗ ಅಡಿಕೆ ಬೆಳೆಗಾರರ ಪರವಾದ ಲಾಬಿ ಪುತ್ತೂರಿನಿಂದ  ಆರಂಭವಾಗಿದೆ. ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈಯವರು ಅಡಿಕೆ ಬೆಳೆಗಾರರ ಪರವಾದ ಲಾಬಿಯ ನೇತೃತ್ವವನ್ನು ವಹಿಸಿದ್ದಾರೆ. ತಾವು ಎದುರಿಸಿದ ಮೊದಲನೆಯ ಅಧಿವೇಶನದಲ್ಲಿಯೇ ಅಡಿಕೆ ಹಳದಿ ರೋಗದ ಬಗ್ಗೆ ವಿಧಾನಸಭೆಯಲ್ಲಿ ಧ್ವನಿಯೆತ್ತಿದ ಮಾನ್ಯ ಶಾಸಕರು, ಇತ್ತೀಚೆಗೆ ಅಡಕೆಯ ಕಲಬೆರಕೆಯ ವಿಚಾರದಲ್ಲಿ ಧ್ವನಿ ಎತ್ತಿ ಕೇಂದ್ರ ಸರಕಾರಕ್ಕೆ ಪತ್ರವನ್ನು ಬರೆದು ಅಡಿಕೆಯ ಆಮದು ನಿಲ್ಲಿಸಬೇಕೆಂದು ಕೇಂದ್ರ ಸರಕಾರಕ್ಕೆ ಒತ್ತಡ ಹಾಕಿ ಅಡಿಕೆ ಕಳ್ಳಸಾಗಾಣಿಕೆಯ ವಿರುದ್ಧ ಮಾತನಾಡಿದ ಮೊದಲ ಮತ್ತು ಏಕೈಕ ಶಾಸಕರಾಗಿದ್ದಾರೆ.  ದ.ಕ. ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಅಕ್ರಮ ಸಕ್ರಮ ಯೋಜನೆಯಲ್ಲಿ ತೊಡಕಾಗಿರುವ ಕುಮ್ಕಿ ಭೂಮಿಯ ವಿಚಾರವನ್ನು ವಿಧಾನಸಭೆಯಲ್ಲಿ ಸಮರ್ಥವಾಗಿ ಮಂಡಿಸಿ ಕುಮ್ಕಿ ಭೂಮಿಯನ್ನು ಸಕ್ರಮಗೊಳಿಸಿ ರೈತರಿಗೆ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿದ್ದಾರೆ. ಮೊನ್ನೆ ನಡೆದ ಬಜೆಟ್ ಅಧಿವೇಶಕ್ಕೆ  ಪೂರ್ವಭಾವಿಯಾಗಿ,  ಸರಕಾರದ ಮೇಲೆ ಒತ್ತಡ ತಂದು,  ಬಜೆಟ್ ಭಾಷಣದಲ್ಲಿ ಅಡಿಕೆಯ ಬೆಂಬಲ ಬೆಲೆಯ ವಿಚಾರ ಪ್ರಸ್ತಾಪವಾಗುವುದಕ್ಕೆ, ಅಡಿಕೆಯ ಬೆಂಬಲ ಬೆಲೆಗಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾಪನೆಯನ್ನು ಈಗಾಗಲೇ ಸಲ್ಲಿಸಲಿರುವುದಕ್ಕೆ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಮೂಲ ಕಾರಣಕರ್ತರಾಗಿದ್ದಾರೆ. ಸಂಜೀವ ಮಠಂದೂರ್ರವರು ಅಡಿಕೆ ಬೆಳೆಗಾರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದನ್ನು ತೊರೆದು ಇನ್ನಾದರೂ ಅಡಿಕೆ ಬೆಳೆಗಾರರ ಪರವಾಗಿ ಮಾತನಾಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಿಸಾನ್ ಘಟಕದ ಅಧ್ಯಕ್ಷ ಮುರಳೀಧರ್ ಶೆಟ್ಟಿ, ಎಪಿಎಂಸಿ ಸದಸ್ಯ ಶಕೂರ್ ಹಾಜಿ, ಎಪಿಎಂಸಿ ಮಾಜಿ ಸದಸ್ಯ ಶಶಿಕಿರಣ್ ರೈ ಉಪಸ್ಥಿತರಿದ್ದರು.

ಕದ್ದ ಸ್ಕೂಟಿಯಲ್ಲಿ ತಿರುಗಾಡುತ್ತಲೇ ಹಲವೆಡೆ ಕಳ್ಳತನ – ಚಾಲಾಕಿ ಖದೀಮ ಸುರೇಶ ಅಂದರ್

Posted by Vidyamaana on 2023-08-26 09:01:14 |

Share: | | | | |


ಕದ್ದ ಸ್ಕೂಟಿಯಲ್ಲಿ ತಿರುಗಾಡುತ್ತಲೇ ಹಲವೆಡೆ ಕಳ್ಳತನ – ಚಾಲಾಕಿ ಖದೀಮ ಸುರೇಶ ಅಂದರ್

ಬೆಳ್ತಂಗಡಿ : ಪೊಲೀಸರಿಗೆ ತಲೆನೋವಾಗಿದ್ದ ಸರಣಿ ಅಂತರ್ ರಾಜ್ಯ ಕಳ್ಳನೊಬ್ಬ ಸ್ಕೂಟರ್ ಕದ್ದು ಬೆಳ್ತಂಗಡಿ ತಾಲೂಕಿನ ಹಲವೆಡೆ ಕನ್ನ ಹಾಕಿ ಅದರಲ್ಲಿ ಸಿಕ್ಕಿದ್ದ ಹಣವನ್ನು ಜೂಜಾಟಕ್ಕೆ ಬಳಸುತ್ತಿದ್ದ ಕದಿಮನೊಬ್ಬನನ್ನು ಕಳ್ಳತನ ಮಾಡಿ ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಆಗಸ್ಟ್ 25 ರಂದು ಧರ್ಮಸ್ಥಳ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ‌.


ಆಗಸ್ಟ್  9 ರಂದು ರಾತ್ರಿ 10 ಗಂಟೆಯಿಂದ ಆಗಸ್ಟ್ 10 ರ ಬೆಳಿಗ್ಗೆ 6.30 ಗಂಟೆಯ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಮುಂಡಾಜೆ ಗ್ರಾಮದ ಸೋಮಂತಡ್ಕ ಎಂಬಲ್ಲಿ ಪ್ರಸನ್ನ ಅರಿಗ ಎಂಬವರ ಪದ್ಮಾಂಬ ಪ್ರಾವಿಜನ್ ಸ್ಟೋರ್ ರಾಡ್ ನಿಂದ ಬೀಗ ಮುರಿದು ಒಳಹೋಗಿ ಕ್ಯಾಶ್ ಕೌಂಟರ್ ನಲ್ಲಿದ್ದ ಐದು ಸಾವಿರ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪ್ರಸನ್ನ ಅರಿಗ ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 


 

ಧರ್ಮಸ್ಥಳ ಪೊಲೀಸ್‌ ಸಬ್ ಇನ್ಸ್ಪೆಕ್ಟರ್ ಅನಿಲ್‌ ಕುಮಾರ್ ತಂಡ ಆಗಸ್ಟ್25 ರಂದು ವಾಹನ ತಪಾಸಣೆ ನಡೆಸುತ್ತಿದ್ದಾಗ ಕಳ್ಳತನ ಮಾಡಿಕೊಂಡು ಸ್ಕೂಟರ್ ವಾಹನದಲ್ಲಿ ಕಾರ್ಕಳ ಮನೆಗೆ ಹೋಗುತ್ತಿದ್ದಾಗ ಅಡ್ಡಹಾಕಿ ವಾಹನ ಪರಿಶೀಲನೆ ನಡೆಸಿದಾಗ ದಾಖಲೆಗಳಿಲ್ಲದೆ  ಅನುಮಾನಸ್ಪದವಾಗಿ ವರ್ತಿಸುತ್ತಿದ್ದಾಗ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಕೂಟರ್ ಕಳ್ಳತನ ಮಾಡಿ ಅದರಲ್ಲಿಯೇ ಹಲವು ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ‌‌. ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ,ಅತ್ತೂರು ಗ್ರಾಮದ ದಿ.ಕೊರಗಪ್ಪ ಪೂಜಾರಿ ಮಗನಾದ  ಸುರೇಶ ಕೆ. ಪೂಜಾರಿ(50) ಎಂಬಾತ ಆರೋಪಿಯಾಗಿದ್ದಾನೆ.ಈ ಆರೋಪಿಯು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ KA-21-U-9418 ನಂಬರಿನ ಸ್ಕೂಟಿಯೊಂದನ್ನು ಕಳ್ಳತನ ಮಾಡಿ ಸದ್ರಿ ಸ್ಕೂಟಿಯನ್ನು ಉಪಯೋಗಿಸಿಕೊಂಡು ಸುಮಾರು ಒಂದುವರೆ ತಿಂಗಳಿನಿಂದ ಧರ್ಮಸ್ಥಳ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ನೆರಿಯಾ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ, ವೇಣೂರು ಸೇರಿ ಸುಮಾರು 25 ಕ್ಕೂ ಹೆಚ್ಚು ಕಡೆಗಳಲ್ಲಿ ಸರಣಿ ಕಳವು ಮಾಡಿದ್ದು. ಈತನು ಮಟ್ಕಾ (ಓಸಿ) ಆಡುವ ಚಟವುಳ್ಳವನಾಗಿದ್ದು, ಕಳ್ಳತನ ಮಾಡಿದ ಹಣವನ್ನು ಮಟ್ಕಾ ಆಟಕ್ಕೆ ಕಟ್ಟಿ ಸೊತಿರುವುದಾಗಿ ತನಿಖೆ ವೇಳೆ ತಪ್ಪೊಪ್ಪಿಕೊಂಡಿರುತ್ತಾನೆ. 


ಈತನು ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವ ಠಾಣೆ, ಹಿರಿಯಡಕ ಠಾಣೆ, ಪಡುಬಿದ್ರಿ ಠಾಣೆ, ಮುಲ್ಕಿ ಠಾಣೆ, ಹೆಬ್ರಿ ಠಾಣೆ, ಉಡುಪಿ ನಗರ ಠಾಣೆ, ದಾವಣಗೆರೆ ಗ್ರಾಮಾಂತರ ಠಾಣೆ, ಮತ್ತು ಬೆಳಗಾಂ ಮಾರ್ಕೆಟ್‌ ಪೊಲೀಸ್‌ ಠಾಣೆಗಳು ಸೇರಿ ಒಟ್ಟು 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದು. ಕಳೆದ ಎರಡು ತಿಂಗಳು ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೊರಗೆ ಬಂದು ವಾಪಸ್ ಕಳ್ಳತನ ಕೃತ್ಯ ಮುಂದುವರೆಸಿಕೊಂಡಿದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.ಆರೋಪಿಯಿಂದ 20,220 ರೂಪಾಯಿ ನಗದು ಹಾಗೂ ಕಳ್ಳತನ ಮಾಡಿ ಕೃತ್ಯಕ್ಕೆ ಉಪಯೋಗಿಸಿದ KA-21-U-9418 ನಂಬರಿನ ಸ್ಕೂಟಿ ವಾಹನ ಅಂದಾಜು ಮೌಲ್ಯ 25 ಸಾವಿರ ಅಗಿದ್ದು ಅದನ್ನು ವಶಪಡಿಸಿಕೊಂಡಿದ್ದು ವಶಪಡಿಸಿಕೊಂಡಿರುವ ಸೊತ್ತುಗಳು ಒಟ್ಟು ಅಂದಾಜು ಮೌಲ್ಯ 45 ಸಾವಿರ ಅಗಿದ್ದು. ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಆಗಸ್ಟ್ 26 ರಂದು (ಇಂದು) ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ‌.


ಈ ಪ್ರಕರಣದಲ್ಲಿ ಆರೋಪಿಯ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ಠಾಣಾ ಪಿ.ಎಸ್.ಐ (ಕಾ.ಸು)ಅನಿಲ್ ಕುಮಾರ್ ಡಿ, ಪಿ.ಎಸ್.ಐ (ತನಿಖೆ) ಸಮರ್ಥ ಗಾಣಿಗೇರ್ ಅಲ್ಲದೇ ಈ ಹಿಂದೆ ಪಿಎಸ್ಐ ಆಗಿದ್ದ (ತನಿಖೆ) ಲೋಲಾಕ್ಷ ಪಿ ರವರ ನೇತೃತ್ವದ ಸಿಬ್ಬಂದಿಗಳಾದ ಎ.ಎಸ್.ಐ ಸ್ಯಾಮುವೆಲ್ ತಂಡದ ಸಿಬ್ಬಂದಿಗಳಾದ ರಾಜೇಶ್‌, ಪ್ರಶಾಂತ್, ಶೇಖರ್, ಸತೀಶ ನಾಯ್ಕ ಜಿ, ಶಶಿಧರ, ಮಂಜುನಾಥ,ಧರ್ಮಪಾಲ್, ಅಸ್ಲಾಂ, ಕೃಷ್ಣಪ್ಪ, ಪ್ರಮೋದಿನಿ, ಮಲ್ಲಿಕಾರ್ಜುನ,ಅಭಿಜಿತ್ ಮೆಹಬೂಬ್, ನಾಗರಾಜ ಬುಡ್ರಿ, ದೀಪು, ಮಧು, ಹರೀಶ್, ಜಗದೀಶ್ , ಚಾಲಕ ಲೋಕೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಪುತ್ತೂರು ಜಾತ್ರೆ : ಯುವಶಕ್ತಿ ಸೇವಾಪಥ ನೇತೃತ್ವದಲ್ಲಿ ಏ. 9ರಂದು ಶ್ರಮದಾನ

Posted by Vidyamaana on 2023-04-07 12:50:46 |

Share: | | | | |


ಪುತ್ತೂರು ಜಾತ್ರೆ : ಯುವಶಕ್ತಿ ಸೇವಾಪಥ  ನೇತೃತ್ವದಲ್ಲಿ ಏ. 9ರಂದು ಶ್ರಮದಾನ

ಪುತ್ತೂರು: ಯುವಶಕ್ತಿ ಸೇವಾಪಥ  ನೇತೃತ್ವದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 9ರಂದು ಶ್ರಮದಾನ ಸೇವೆ ನಡೆಯಲಿದೆ.

ಯುವಶಕ್ತಿ ಸೇವಾಪಥ ದ.ಕ. ಇದರ ನೇತೃತ್ವದಲ್ಲಿ ಮಿತ್ರಸಂಸ್ಥೆಗಳ ಒಗ್ಗೂಡುವಿಕೆಯೊಂದಿಗೆ ಶ್ರಮದಾನ ಸೇವೆ ಆಯೋಜಿಸಲಾಗಿದೆ.

ಹತ್ತೂರು ಸಂಭ್ರಮಿಸುವ ಪುತ್ತೂರ ಒಡೆಯನ ಜಾತ್ರೋತ್ಸವದ ಶುಭಸಮಯದಿ ಶ್ರಮಸೇವೆಗೈಯೋಣ ಬನ್ನಿ ಎಂಬ ಧ್ಯೇಯವಾಕ್ಯದೊಂದಿಗೆ ಶ್ರಮದಾನ ನಡೆಯಲಿದೆ. ಈಗಾಗಲೇ ಹಲವಾರು ಜನಪರ ಕಾರ್ಯಕ್ರಮಗಳಲ್ಲಿ ಖ್ಯಾತಿ ಗಳಿಸಿರುವ ಯುವಶಕ್ತಿ  ಸೇವಾಪಥ  ತಂಡ ಏಪ್ರಿಲ್ 9ರಂದು ಜಾತ್ರೋತ್ಸವ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಮುಂದಾಗಿದೆ ಎಂದು ಸಂಘಟಕರು ಮಾಧ್ಯಮ ಪ್ರಕಟಣೆಗೆ ತಿಳಿಸಿದ್ದಾರೆ .

ಉಳ್ಳಾಲದ ವ್ಯಕ್ತಿ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಸಾಲದ ಹೊರೆ ಸಾವಿನ ಹಿಂದೆ ಬೆಟ್ಟಿಂಗ್ ಜಾಲದ ಶಂಕೆ

Posted by Vidyamaana on 2023-09-12 21:00:34 |

Share: | | | | |


ಉಳ್ಳಾಲದ ವ್ಯಕ್ತಿ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ  ಸಾಲದ ಹೊರೆ ಸಾವಿನ ಹಿಂದೆ ಬೆಟ್ಟಿಂಗ್ ಜಾಲದ ಶಂಕೆ

ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ. 


ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ‌ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ‌ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ. 


ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.


ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.

ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ: ಸಾವಿರಾರು ಕಾರ್ಯಕರ್ತರು ಭಾಗಿ

Posted by Vidyamaana on 2024-04-03 15:32:17 |

Share: | | | | |


ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ: ಸಾವಿರಾರು ಕಾರ್ಯಕರ್ತರು ಭಾಗಿ

ಮಂಗಳೂರು : ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.


ನಾಮಪತ್ರ ಸಲ್ಲಿಸುವ ಮುನ್ನ ಬೆಳಗ್ಗೆ 9:30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪದ್ಮರಾಜ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಹೈಫೈ ಎಳನೀರು ಕಳ್ಳ : ಕದಿಯಲು ಕಾರಿನಲ್ಲಿ ಬರುತ್ತಿದ್ದ ಆಸಾಮಿ

Posted by Vidyamaana on 2023-11-22 18:14:59 |

Share: | | | | |


ಹೈಫೈ ಎಳನೀರು ಕಳ್ಳ : ಕದಿಯಲು ಕಾರಿನಲ್ಲಿ ಬರುತ್ತಿದ್ದ ಆಸಾಮಿ

ಬೆಂಗಳೂರು : ಕಳ್ಳರೆಂದರೆ ಯಾವಾಗಲೂ ಶ್ರೀಮಂತರ ಮನೆ, ಶಾಪ್‌ಗಳಿಗೆ ನುಗ್ಗಿ ಬೆಲೆ ಬಾಳುವ ವಸ್ತುಗಳನ್ನು ಕದಿಯುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವಿಚಿತ್ರ ಕಳ್ಳನಿದ್ದಾನೆ. ಇವನು ಯಾರ ಮನೆಗೂ ನುಗ್ಗೋದಿಲ್ಲ. ನಗನಾಣ್ಯ ಕದಿಯೋದಿಲ್ಲ. ಆದರೆ ಇವನ ಕಣ್ಣಿಗೆ ಎಲ್ಲೇ ಎಳೆನೀರು ಕಂಡ್ರೂ ಕ್ಷಣಾರ್ಧದಲ್ಲಿ ಕದಿಯುತ್ತಾನೆ.ಹೌದು, ನಗರದಲ್ಲಿ ಎಳನೀರು ಕದಿಯುತ್ತಿದ್ದ ಮೋಹನ್ ಎಂಬ ವಿಚಿತ್ರ ಆಸಾಮಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಮೂಲತಃ ತಮಿಳುನಾಡಿನವನಾದ ಆರೋಪಿ ಮೋಹನ್, ಮಡಿವಾಳದಲ್ಲಿ ವಾಸವಾಗಿದ್ದ. ಕಳೆದ ಮೂರು ತಿಂಗಳಿಂದ ಎಳನೀರು ಕಳ್ಳತನ ಮಾಡುತ್ತಿದ್ದ.


ಎಳನೀರು ಕದಿಯಲು ಬರುತ್ತಿದ್ದುದ್ದು ಮಾತ್ರ ಕಾರಿನಲ್ಲೇ ರಾತ್ರಿ ವೇಳೆ ಕಾರಿನಲ್ಲಿ ಬಂದು ರಸ್ತೆ ಬದಿಯ ಎಳನೀರು ಅಂಗಡಿಗಳಲ್ಲಿ ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಆರೋಪಿ.ಇತ್ತೀಚೆಗೆ ಗಿರಿನಗರದ ಮಂಕುತಿಮ್ಮನ ಪಾರ್ಕ್ ಬಳಿ ರಾಜಣ್ಣ ಎಂಬುವರ 1150 ಎಳನೀರು ಕದ್ದಿದ್ದ ಆರೋಪಿ. ಈ ಬಗ್ಗೆ ರಾಜಣ್ಣ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ಶಾಕ್ ಆಗಿತ್ತು.


ರಾತ್ರಿವೇಳೆ ಕಾರಿನಲ್ಲಿ ಬಂದು ಎಳನೀರು ಕದಿಯುತ್ತಿದ್ದ ಆಸಾಮಿ ಮೋಹನ್ ಎಂಬುದು ಖಚಿತವಾಗಿ ಆರೋಪಿಯನ್ನು ಬಂಧಿಸಿರುವ ಪೊಲೀಸರು. ಬಂಧಿತನಿಂದ ಎಳನೀರು ಸೇರಿ ಎಂಟು ಲಕ್ಷ ಮೌಲ್ಯದ ಒಂದು ಕಾರು, ರಾಯಲ್ ಎನ್ ಫೀಲ್ಡ್ ಬೈಕ್ ಪೊಲೀಸರ್ ವಶಕ್ಕೆ ಪಡೆದುಕೊಂಡಿದ್ದಾರೆ.ಎಳನೀರು ಕದ್ದ ಪ್ರಕರಣ ಸಂಬಂಧ ಆರೋಪಿ ಮೋಹನ ವಿಚಾರಣೆ ಮಾಡುವ ವೇಳೆ ಎಳನೀರು ಕಳ್ಳನ ಇನ್ನೊಂದು ಪ್ರಕರಣ ಬಯಲಿಗೆ ಬಂದಿದೆ. ಜೂಜಾಟದ ಹುಚ್ಚು ಹತ್ತಿಸಿಕೊಂಡಿದ್ದ ಆರೋಪಿ, ಆನ್‌ಲೈನ್‌ನಲ್ಲಿ ಆನ್‌ಲೈನ್ ನಲ್ಲಿ ರಮ್ಮಿ ಆಡಿ ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದ ಇದರಿಂದ ಸಾಲ ಜಾಸ್ತಿ ಆಗಿದ್ದರಿಂದ ಎಳನೀರು ಕಳ್ಳತನಕ್ಕೆ ಪ್ಲಾನ್ ಮಾಡಿದ್ದ.


ಮೊದಲು ಎಳನೀರು ವ್ಯಾಪಾರಿಯಾಗಿದ್ದ ಆರೋಪಿ


ಪ್ರತಿದಿನ ರಾತ್ರಿ ಕಾರು ಬಾಡಿಗೆಗೆ ಪಡೆದು ಎಳನೀರು ಕಳ್ಳತನಕ್ಕೆ ಬರುತ್ತಿದ್ದ ಅಸಾಮಿ. ಈ ಹಿಂದೆ ಎಳನೀರು ವ್ಯಾಪಾರಿಯಾಗಿದ್ದ ಆರೋಪಿ ಮೋಹನ್‌. ಹೀಗಾಗಿ ಫ್ರೀ ಟೈಂನಲ್ಲಿ ರಮ್ಮಿ ಆಡಿ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದ. ಮೊದಲಿಗೆ ಕಾರು ಬಾಡಿಗೆ ಪಡೆದು ಟ್ಯಾಕ್ಸಿ ಓಡಿಸುತ್ತಿದ್ದ ಆರೋಪಿ ಬಳಿಕ ರಾತ್ರಿ ಆಗ್ತಿದ್ದಂತೆ ಕಾರು ಬಾಡಿಗೆ ಪಡೆದುಕೊಂಡು ಎಳನೀರು ಕದಿಯುವ ಕಾಯಕ ಮಾಡಿಕೊಂಡಿದ್ದೇನೆ.ಕದ್ದ ಎಳನೀರು ಮಾರಲು ಪರ್ಮನೆಂಟ್ ಕಸ್ಟಮರ್ ಇಟ್ಕೊಂಡಿದ್ದಇವನೆಂಥ ಕಾನ್ಫಿಡೆಂಟ್ ಕಳ್ಳನೆಂದರೆ ಕದ್ದ ಎಳನೀರು ಮಾರಾಟಕ್ಕೆ ಪರ್ಮನೆಂಟಾಗಿ ಕಸ್ಟಮರ್‌ಗಳನ್ನ ಇಟ್ಟುಕೊಂಡಿದ್ದ ಎಳನೀರು ವ್ಯಾಪಾರಿಯೊಬ್ಬನಿಗೆ ಮದ್ದೂರು ಎಳನೀರು ಅಂತಾ ಮಾರಾಟ ಮಾಡಿ ಹೋಗುತ್ತಿದ್ದ. ಹೀಗೆ ದಿನಕ್ಕೆ 100-150 ಎಳನೀರು ಕದ್ದು ಮಾರಾಟ ಮಾಡ್ತಿದ್ದ.



Leave a Comment: