ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಸುದ್ದಿಗಳು News

Posted by vidyamaana on 2024-06-26 19:19:30 | Last Updated by Vidyamaana on 2024-06-26 19:19:30

Share: | | | | |


ಭಾರೀ ಮಳೆ ಹಿನ್ನಲೆ : ನಾಳೆ (ಜೂ. 27) ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಮಂಗಳೂರು: ಜೂನ್ 27ರಂದು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇದರ ಪ್ರಕಟನೆ ಹೀಗಿದೆ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ - ಪ್ರೌಢಶಾಲೆಗಳಿಗೆ 27-06-2024 ರಂದು ರಜೆಯನ್ನು ಘೋಷಿಸಲಾಗಿದೆ.

ಸಂಭಾವ್ಯ ಪ್ರದಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕಾಗಿದೆ.

ಮೀನುಗಾರರು ನಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಸಮೀಪ ಹೋಗದಂತೆ ಎಚ್ಚರಿಕೆವಹಿಸುವುದು.

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

177 & 0824-2442590

 Share: | | | | |


BREAKING : ರಾಮ್ ಲಲ್ಲಾ ಪ್ರತಿಷ್ಠಾಪನೆ ನೆರವೇರಿಸಿದ್ದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ನಿಧನ

Posted by Vidyamaana on 2024-06-22 12:38:12 |

Share: | | | | |


BREAKING : ರಾಮ್ ಲಲ್ಲಾ ಪ್ರತಿಷ್ಠಾಪನೆ ನೆರವೇರಿಸಿದ್ದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ನಿಧನ

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದಲ್ಲಿ ರಾಮ್ ಲಲ್ಲಾ ಪ್ರತಿಮೆ ಪ್ರತಿಷ್ಠಾಪನೆ ನೆರವೇರಿಸಿದ್ದ ಪಂಡಿತ್ ಲಕ್ಷ್ಮೀಕಾಂತ್ ದೀಕ್ಷಿತ್ ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ದೀರ್ಘಕಾಲದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.

ಲಕ್ಷ್ಮೀಕಾಂತ್ ದೀಕ್ಷಿತ್ ಅವರು ವಾರಣಾಸಿಯ ಮೀರ್ ಘಾಟ್ ನ ಸಾಂಗ್ವೇದ್ ಕಾಲೇಜಿನಲ್ಲಿ ಹಿರಿಯ ಪ್ರಾಧ್ಯಾಪಕರಾಗಿದ್ದರು.


ಈ ವಿಶ್ವವಿದ್ಯಾಲಯವನ್ನು ಕಾಶಿ ನರೇಶ್ ಅವರ ಸಹಾಯದಿಂದ ಸ್ಥಾಪಿಸಲಾಯಿತು. ಆಚಾರ್ಯ ಲಕ್ಷ್ಮೀಕಾಂತ್ ಅವರನ್ನು ಕಾಶಿಯ ಯಜುರ್ವೇದದ ಶ್ರೇಷ್ಠ ವಿದ್ವಾಂಸರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.

ವ್ಯಂಗ್ಯ ಚಿತ್ರ ರಚಿಸಿ ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ

Posted by Vidyamaana on 2023-05-30 11:58:10 |

Share: | | | | |


ವ್ಯಂಗ್ಯ ಚಿತ್ರ ರಚಿಸಿ ಮುಸ್ಲಿಂ ಧಾರ್ಮಿಕ ಭಾವನೆಗೆ ಧಕ್ಕೆ

ಪುತ್ತೂರು : ಮುಸಲ್ಮಾನರ ಭಾವನೆಗೆ ಚ್ಯುತಿ ತಂದಿರುವ ಸುದೀಪ್ ಪನಿಯನ್ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಸ್ಲಿಂ ಯುವ ಜನ ಪರಿಷತ್ ನ ಅಧ್ಯಕ್ಷ ಅಶ್ರಫ್ ಕಲ್ಲೇಗ ಪುತ್ತೂರು ಉಪವಿಭಾಗದ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.ಅರುಣ್ ಪುತ್ತಿಲ ಬ್ರಿಗ್ರೇಡ್ ಪಾಣಾಜೆ’ ಎಂಬ ವಾಟ್ಸಪ್ ಗ್ರೂಪಿನಲ್ಲಿ ಕಾರ್ಟೂನ್ ಅನ್ನು ರಚಿಸಿ ಆ ಕಾರ್ಟೂನ್ ನಲ್ಲಿ ಮುಸ್ಲಿಂ ಮಹಿಳೆಯು ಮುಸಲ್ಮಾನರ ಪವಿತ್ರ ನಮಾಜ್ ಪ್ರಾರ್ಥನೆ ನೇತೃತ್ವ ವಹಿಸಿ ಅವರ ಹಿಂದೆ ಮೂರು ಮುಸಲ್ಮಾನ ಪುರುಷರು ಪ್ರಾರ್ಥನೆ ಮಾಡುತ್ತಾ ಇರುವಂತೆ ಅಶ್ಲೀಲ ಭಂಗಿಯಲ್ಲಿ ಚಿತ್ರವನ್ನು ರಚಿಸಿ ವಾಟ್ಸಾಪ್ ಗ್ರೂಪ್ ನಲ್ಲಿ ಹರಿಯ ಬಿಟ್ಟು ಮುಸಲ್ಮಾನರ ಭಾವನೆಗೆ ಚ್ಯುತಿ ಹಾಗೂ ಭಂಗ ತಂದಿರುತ್ತಾರೆ.ಈ ವಿಚಾರದಿಂದ ಇಸ್ಲಾಂ ವಿಶ್ವಾಸಿಯಾದ ನನಗೆ ತೀವ್ರ ನೋವುಂಟಾಗಿರುತ್ತದೆ ಮಾತ್ರವಲ್ಲ ಇದು ಸಮಾಜದಲ್ಲಿ ಕೋಮು ಭಾವನೆ ಕೆರಳಿಸಲು ಪ್ರಯತ್ನಿಸಿ ಸಮಾಜದಲ್ಲಿ ಅಶಾಂತಿ ಉಂಟಾಗುವಂತೆ ಮಾಡಿದ ಕೃತ್ಯವಾಗಿರುತ್ತದೆ ಆದ್ದರಿಂದ ಆಪಾದಿತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಶ್ರಫ್ ಕಲ್ಲೇಗ ದೂರಿನಲ್ಲಿ ತಿಳಿಸಿದ್ದಾರೆ.

ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಯತ್ನಾಳ್ ವಿಪಕ್ಷ ನಾಯಕ: ಎಚ್.ಡಿ.ದೇವೇಗೌಡ ಅಚ್ಚರಿಯ ಹೇಳಿಕೆ

Posted by Vidyamaana on 2023-07-25 10:44:56 |

Share: | | | | |


ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ ಯತ್ನಾಳ್ ವಿಪಕ್ಷ ನಾಯಕ: ಎಚ್.ಡಿ.ದೇವೇಗೌಡ ಅಚ್ಚರಿಯ ಹೇಳಿಕೆ

ಬೆಂಗಳೂರು, ಜುಲೈ 25: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಹಾಗೂ ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ವಿಳಂಬ ಮಧ್ಯೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.


ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಚಿಕ್ಕಮಗಳೂರಿನ ಸಿ.ಟಿ.ರವಿ ಬಿಜೆಪಿ ರಾಜ್ಯ ಅಧ್ಯಕ್ಷರಾಗಲಿದ್ದಾರೆ. ಇನ್ನು ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಆಗಲಿದ್ದಾರೆ. ಈ ಬಗ್ಗೆ ಒಂದು ಹಂತದ ಚರ್ಚೆ ಆಗಿದೆ. ಅದೆಲ್ಲ ಅವರ ಪಕ್ಷದ ಆಂತರಿಕ ವಿಚಾರ, ಆ ಬಗ್ಗೆ ನಾನು ಗಮನ ಹೆರಿಸಲ್ಲ" ಎಂದು ಹೇಳಿದರು.ಲೋಕಸಭಾ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ"


ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಇದರಲ್ಲಿ ಯಾವ ಅನುಮಾನ ಬೇಡ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.


"ನಾವು ಯಾವ ಪಕ್ಷದ ಜತೆಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಷ್ಟು ಸ್ಥಾನಗಳಲ್ಲಾದರೂ ನಾವು ಗೆಲ್ಲಲಿ, ಅದರ ಬಗ್ಗೆ ಚಿಂತಿಸುವುದಿಲ್ಲ. ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ" ಎಂದು ತಿಳಿಸಿದರು

ಲುಲು ಗ್ರೂಪ್ ಇಂಟರ್‌ನ್ಯಾಶನಲ್‌ನ ಅಧ್ಯಕ್ಷ ಖ್ಯಾತ ಅನಿವಾಸಿ ಉದ್ಯಮಿ ಯೂಸುಫ್ ಅಲಿಗೆ ED ಸಮನ್ಸ್

Posted by Vidyamaana on 2023-03-14 08:29:22 |

Share: | | | | |


ಲುಲು ಗ್ರೂಪ್ ಇಂಟರ್‌ನ್ಯಾಶನಲ್‌ನ ಅಧ್ಯಕ್ಷ ಖ್ಯಾತ ಅನಿವಾಸಿ ಉದ್ಯಮಿ ಯೂಸುಫ್ ಅಲಿಗೆ ED ಸಮನ್ಸ್

ನವದೆಹಲಿ: ಲುಲು ಮಾಲ್ ಗುಂಪುಗಳ ಒಡೆಯ, ಯುಎಇ ನೆಲೆಯ ಉದ್ಯಮಿ ಎಂ. ಎ. ಯೂಸುಫ್ ಅಲಿ ಅವರಿಗೆ ಜಾರಿ ನಿರ್ದೇಶನಾಲಯ-ಇಡಿ ಅಕ್ರಮ ಹಣ ವರ್ಗಾವಣೆ ಸಂಬಂಧ ಸಮನ್ಸ್ ಜಾರಿ ಮಾಡಿದೆ.

ರೂ. 300 ಕೋಟಿಗಳಷ್ಟು ಹಣ ವರ್ಗಾವಣೆ ಮಾಡಿರುವುದಾಗಿ ಇ.ಡಿ. ಆರೋಪಿಸಿದೆ. ಯುನೈಟೆಡ್ ಅರಬ್’ನಲ್ಲಿದ್ದುಕೊಂಡು ಖಾಸಗಿ ಸಂಸ್ಥೆಗಳ ಮೂಲಕ ಕೇರಳ ಸರಕಾರದೊಂದಿಗೆ ಜಂಟಿ ಯೋಜನೆಯಾಗಿ ಲೈಫ್ ಮಿಶನ್ ಎಂಬ ಜನ ಮನೆ ನಿರ್ಮಾಣದಲ್ಲಿ ಅಲಿ ಅಕ್ರಮ ಎಸಗಿದ್ದಾರೆ ಎಂದು ಇ.ಡಿ.ಹೇಳಿದೆ.

ಮಾರ್ಚ್ 1ರಂದು ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಕೊಚ್ಚಿ ಕಚೇರಿಯು ಯೂಸುಫ್ ಅಲಿಯವರಿಗೆ ಹಿಂದೆ ನೋಟಿಸ್ ನೀಡಿತ್ತು. ಯುಎಇಯಲ್ಲಿರುವ ಅಲಿಯವರಿಗೆ ಬರಲಾಗಿಲ್ಲ. ಮಾರ್ಚ್ 16ರಂದು ಕೊಚ್ಚಿ ಇಡಿ ಕಚೇರಿಗೆ ವಿಚಾರಣೆಗೆ ಬರುವಂತೆ ಅಕ್ರಮ ಹಣ ವರ್ಗಾವಣೆ ತಡೆ ಏಜೆನ್ಸಿಯು ಆಲಿಯವರಿಗೆ ಸಮನ್ಸ್ ನೀಡಿದೆ. ಚಿನ್ನದ ಅಕ್ರಮ ಸಾಗಣೆ ಸಂಬಂಧ ಬಂಧಿಸಲಾಗಿರುವ ತಿರುವನಂತಪುರದ ಯುಎಇ ರಾಯಭಾರಿ ಕಚೇರಿಯ ಹಿಂದಿನ ಉದ್ಯೋಗಿ ಸ್ವಪ್ನ ಸುರೇಶ್ ಪ್ರಕರಣದಲ್ಲಿ ಇತ್ತೀಚೆಗೆ ಅಲಿ ಹೆಸರು ಕೇಳಿ ಬಂದಿತ್ತು. ಹಿಂದೆ ಈಗಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮುಖ್ಯ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಶಿವಶಂಕರನ್ ಕೂಡ ಈ ಚಿನ್ನದ ಕಳ್ಳ ಸಾಗಣೆ ವ್ಯವಹಾರದಲ್ಲಿ ಹುದ್ದೆ ದುರುಪಯೋಗಿಸಿಕೊಂಡುದಕ್ಕಾಗಿ ಬಂಧಿಸಲ್ಪಟ್ಟಿದ್ದಾರೆ.

ಶಿವಶಂಕರನ್ ಅವರು ಮನೆ ನಿರ್ಮಾಣದ ಕೇರಳದ ಲೈಫ್ ಮಿಶನ್ ಕಾರ್ಯಕ್ರಮದಲ್ಲಿ ಅಕ್ರಮ ಎಸಗಿರುವುದು ಸಹ ತಿಳಿದು ಬಂದಿದೆ. ಈ ವಿವಾದದ ಮನೆ ಯೋಜನೆಯನ್ನು ಖಾಸಗಿಯವರ ಪಾಲುದಾರಿಕೆಯಲ್ಲಿ ಮಾಡಲಾಗಿದೆ. ಈ ಖಾಸಗಿ ಪಾಲುದಾರ ಕಂಪೆನಿಗಳು ಯುಎಇ ಮೂಲದವಾಗಿದ್ದು, ಅವುಗಳಲ್ಲಿ ಕೆಲವು ಯೂಸುಫ್ ಅಲಿ ಒಡೆತನದವು ಎಂದು ಹೇಳಲಾಗಿದೆ. ಈ ಲೈಫ್ ಮಿಶನ್ ಯೋಜನೆಯಡಿ ಯೂಸುಫ್ ಅಲಿ 300 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎನ್ನುವುದು ಇಡಿ ಆರೋಪ.

ಕಳೆದ 30 ವರ್ಷಗಳಿಂದ ಯುಎಇಯಲ್ಲಿ ಉದ್ಯಮಿಯಾಗಿರುವ ಕೇರಳ ಮೂಲದ ಯೂಸುಫ್ ಅಲಿಯವರು ಲುಲು ಮಾಲ್’ಗಳ ಸರಣಿಗಳನ್ನು ಸಾಕಷ್ಟು ಹೊಂದಿದ್ದಾರೆ. ಕೇರಳದ ಕಾಂಗ್ರೆಸ್ ಮತ್ತು ಸಿಪಿಎಂ ನಾಯಕರೊಂದಿಗೆ ಅಲಿಯವರಿಗೆ ಉತ್ತಮ ಸಂಬಂಧವಿದೆ. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಲಿಯವರು ಕಾಂಗ್ರೆಸ್, ಎಡ ಪಕ್ಷಗಳ ಜೊತೆಗಿರುವಂತೆಯೇ ಬಿಜೆಪಿ ನಾಯಕರ ಸಂಗಡವೂ ಸಂಬಂಧ ಕುದುರಿಸಿಕೊಂಡಿದ್ದಾರೆ.

ಯೂಸುಫ್ ಅಲಿಯವರ ಕಂಪೆನಿಗಳು 94% ಷೇರುಗಳು ಕೇಮನ್ ದ್ವೀಪದ ಸಂಸ್ಥೆಗಳೊಡನೆ ಸಂಬಂಧ ಹೊಂದಿದೆ. ಉಳಿಕೆ 6% ಷೇರುಗಳು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಕಿರಿಯ ಮಗ ವಿವೇಕ್ ದೋವಲ್ ಹೆಸರಿನಲ್ಲಿವೆ. 2018ರಲ್ಲಿ ಯೂಸುಫ್ ಅಲಿಯವರು ತನ್ನ ಯುಎಇ ಮನೆಯಲ್ಲಿ ರಾಹುಲ್ ಗಾಂಧಿಯವರಿಗೆ ಆತಿಥ್ಯ ನೀಡಿದ್ದರು.

ಬೆಳ್ತಂಗಡಿ: ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಕೌಶಲ್ಯ ವಿಷ ಸೇವಿಸಿ ಆತ್ಮಹತ್ಯೆ.

Posted by Vidyamaana on 2023-04-23 09:29:21 |

Share: | | | | |


ಬೆಳ್ತಂಗಡಿ: ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಕೌಶಲ್ಯ  ವಿಷ ಸೇವಿಸಿ ಆತ್ಮಹತ್ಯೆ.

ಬೆಳ್ತಂಗಡಿ: ನವ ವಿವಾಹಿತೆ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ,

ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿಸದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿ: ಪ್ರವಾಸದಲ್ಲಿದ್ದ 45 ಮಕ್ಕಳಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

Posted by Vidyamaana on 2023-12-26 13:31:59 |

Share: | | | | |


ಹಾವೇರಿಯಲ್ಲಿ ಸರ್ಕಾರಿ ಬಸ್ ಪಲ್ಟಿ: ಪ್ರವಾಸದಲ್ಲಿದ್ದ 45 ಮಕ್ಕಳಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಹಾವೇರಿ:ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿಯಾಗಿ ನಾಲ್ಕು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. 45 ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ.ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ಬಸ್ ಪಲ್ಟಿಯಾಗಿದ್ದು ಅದರಲ್ಲಿ ಇದ್ದ 45 ಮಕ್ಕಳು‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಸಣ್ಣಪುಟ್ಟ ಗಾಯಗೊಂಡ ಮಕ್ಕಳಿಗೆ ಸವಣೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸರ್ಕಾರಿ ಬಸ್ ನಲ್ಲಿ ಮಕ್ಕಳು ಪ್ರವಾಸ ಹೋಗುತ್ತಿದ್ದರು.


ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸ ಹಿನ್ನೆಲೆಯಲ್ಲಿ ರಾಕಗಾರ್ಡ್​ನ್​ಗೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.ಘಟನೆಯ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Recent News


Leave a Comment: