Posted by vidyamaana on 2024-06-26 13:03:34 |
ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 1230 ಪ್ರಕರಣಗಳು ವರದಿಯಾಗಿರೋ ಬಗ್ಗೆ ಮಾಹಿತಿ ನೀಡಿದರು.
ರಾಜ್ಯದಲ್ಲಿ ಡೆಂಘೀ ನಿಯಂತ್ರಣಕ್ಕೆ ಆಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಗತ್ಯ ಚಿಕಿತ್ಸೆ, ಚುಚ್ವು ಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹ, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಲೂ ಸೂಚಿಸಿದರು.
ಹುಬ್ಬಳ್ಳಿ-ಧಾರವಾಡದಲ್ಲೂ ಡೆಂಘಿ ಹಾವಳಿ ಜೋರಾಗಿದೆ. ಧಾರವಾಡ ನಗರದಲ್ಲಿ 64 ಜನರಲ್ಲಿ ಸೋಂಕು ಪತ್ತೆಯಾದ್ರೆ, ಹುಬ್ಬಳ್ಳಿಯಲ್ಲಿ 11 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳ ಆಗ್ತಿದ್ಯಂತೆ. ಈ ಬಗ್ಗೆ ಮಾಹಿತಿ ನೀಡಿದ ಪಾಲಿಕೆ ಆಯುಕ್ತರು, ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಶಾಲಾ, ಕಾಲೇಜು, ವಿವಿಧ ಬಡಾವಣೆಗಳಲ್ಲಿ ಜಾಗೃತಿ ಮೂಡಿಸ್ತಿದೇವೆ ಎಂದರು.
Posted by Vidyamaana on 2023-10-06 16:02:33 |
ಪುತ್ತೂರು: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಬೆಥನಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಹನೀನ್ ಆಯ್ಕೆಯಾಗಿದ್ದಾರೆ.
ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹನೀನ್ ಅವರು, ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ ಪಡೆದುಕೊಂಡಿದ್ದರು.
ಇವರು ಇರ್ಶಾದ್ ಮತ್ತು ಸಾಜಿದ ದಂಪತಿ ಪುತ್ರ.
Posted by Vidyamaana on 2023-09-27 18:09:27 |
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಯ ಬಿಡುವುದನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಬುಧವಾರ ವಿಧಾನ ಸೌಧದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಜಂಟಿ ಪ್ರತಿಭಟನೆ ನಡೆಸಲಾಯಿತು.
ಕಾವೇರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಸಮರ್ಥವಾಗಿದೆ ಎಂದು ಉಭಯ ಪಕ್ಷಗಳ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿ ಮಾಜಿ ಸಚಿವರು, ಸಂಸದರು, ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಜನಹಿತವನ್ನು ಸಂಪೂರ್ಣ ಮರೆತು ಸಿದ್ದರಾಮಯ್ಯರವರು ಮತ್ತು ಡಿ.ಕೆ. ಶಿವಕುಮಾರ್ರವರು ತಮಿಳುನಾಡಿನ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ, ಇದನ್ನು ಖಂಡಿಸಿ ಪ್ರತಿಭಟಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಒಂದಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ. ರಾಜಕೀಯ ದೊಂಬರಾಟಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಕಿಡಿ ಕಾರಿದ್ದಾರೆ.
Posted by Vidyamaana on 2023-08-27 10:30:32 |
ಮಂಗಳೂರು: ತಾಯಿ ಜೊತೆ ಬ್ಯಾಂಕಿಗೆ ಬಂದಿದ್ದ ಮಗುವೊಂದು ಹೊರಗಡೆ ಆವರಣದಲ್ಲಿ ಆಟವಾಡುತ್ತಾ ಗ್ರಿಲ್ ಮೇಲೇರಿ ಅಲ್ಲಿಂದ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಎಂಬಲ್ಲಿ ನಡೆದಿದೆ.
ಆ.25ರಂದು ಮಗು ತನ್ನ ತಾಯಿ ಜೊತೆಗೆ ಇಲ್ಲಿರುವ ಬ್ಯಾಂಕಿಗೆ ಬಂದಿದ್ದ ಸಂದರ್ಭದಲ್ಲಿ ತಾಯಿ ಒಳಗಿರುವಂತೆ ಮಗು ಪ್ರಥಮ ಮಹಡಿಯ ಆವರಣದಲ್ಲಿ ಆಟವಾಡುತ್ತಿತ್ತು.
ಬಳಿಕ ಅಲ್ಲೇ ಇದ್ದ ಗ್ರಿಲ್ ಮೇಲೆರಿ ಮುಂದಕ್ಕೆ ಬಾಗಿದ ಸಂದರ್ಭ ಮಗು ತಲೆಕೆಳಗಾಗಿ ಬಿದ್ದಿದೆ.
ಈ ಸಂದರ್ಭದಲ್ಲಿ ಮಗುವನ್ನು ಹುಡುಕುತ್ತಾ ಹೊರಗಡೆ ಬಂದ ಮಗುವಿನ ತಾಯಿ ಕೆಳಗೆ ನೋಡಿ ಮಗು ಬಿದ್ದಿರುವುದನ್ನು ಕಂಡು ಬೊಬ್ಬೆ ಹಾಕಿದಾಗ ಬ್ಯಾಂಕ್ ಒಳಗಿದ್ದವರು ಮತ್ತು ಅಕ್ಕಪಕ್ಕದವರು ಬಂದು ಕೆಳಗೆ ಬಿದ್ದಿದ್ದ ಮಗುವನ್ನು ರಕ್ಷಿಸಿದ್ದಾರೆ.
ಅದೃಷ್ಟವಶಾತ್ ಈ ಮಗು ಪ್ರಾಣಾಪಾಯದಿಂದ ಪಾರಾಗಿದ್ದು,ಕೆಳಗೆ ಬಿದ್ದ ರಭಸಕ್ಕೆ ಮಗುವಿನ ತಲೆ ಮತ್ತು ಕೈಗೆ ಗಾಯಗಳಾಗಿವೆ.
ಮಗುವನ್ನು ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದುಅಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಗು ಆಟವಡುತ್ತಾ ಗ್ರಿಲ್ ಮೇಲೆ ಹತ್ತಿ ಕೆಳಗೆ ಬೀಳುತ್ತಿರುವ ದೃಶ್ಯ ಇಲ್ಲಿ ಅಳವಡಿಸಲಾಗಿದ್ದ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.
Posted by Vidyamaana on 2023-10-08 15:25:14 |
ಶಿವಮೊಗ್ಗ: ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದು, ಓರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ತೀರ್ಥಹಳ್ಳಿಯ ಅರಳಸುರಳಿ ಗ್ರಾಮದ ಬಳಿ ನಡೆದಿದೆ.ಹೊಸನಗರ ರಸ್ತೆಯ ಗಣಪತಿ ಕಟ್ಟೆ ರೈಸ್ಮಿಲ್ ಹತ್ತಿರದ ಮನೆಯೊಂದರಲ್ಲಿ ದುರಂತ ನಡೆದಿದೆ .
ರಾಘವೇಂದ್ರ (63), ಪತ್ನಿ ನಾಗರತ್ನ (55) ಹಾಗೂ ಪುತ್ರ ಶ್ರೀರಾಮ್ (34) ಮೃತರು. ಇನ್ನೊಬ್ಬ ಪುತ್ರ ಭರತ್ (30) ಗಂಭೀರವಾಗಿ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಗಿದೆ. ಮನೆ ಭಾಗಶಃ ಸುಟ್ಟು ಹೋಗಿದೆ. ತೀರ್ಥಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಅಸಿಡಿಟಿಯ ಎದೆ ಉರಿಯನ್ನು ಮತ್ತು ಎದೆ ನೋವಿನ ಉರಿಯನ್ನು ಐಡೆಂಟಿಫೈ ಮಾಡೋದು ತುಂಬಾ ಸುಲಭ: ಡಾ. ಜೆ ಸಿ ಅಡಿಗ
ಆತ್ಮಹತ್ಯೆ ಶಂಕೆ: ರಾಘವೇಂದ್ರಗ್ರಾಮದಲ್ಲಿ ಅರ್ಚಕ ವೃತ್ತಿ ಮಾಡುತ್ತಿದ್ದರು. ಮನೆಯ ಹಾಲ್ನಲ್ಲಿಯೇ ಕಟ್ಟಿಗೆ ಜೋಡಿಸಿಟ್ಟು ಬೆಂಕಿ ಹಚ್ಚಿಕೊಂಡಿರುವ ಕುರುಹುಗಳು ಪತ್ತೆಯಾಗಿವೆ. ಗ್ರಾಮಸ್ಥರು ಹೊಗೆ ಗಮನಿಸಿ ಮನೆಯಲ್ಲಿದ್ದವರನ್ನು ರಕ್ಷಿಸಲು ಯತ್ನಿಸಿದ್ದಾರೆ. ಓರ್ವನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀರ್ಥಹಳ್ಳಿಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.
ಆರಗ ಜ್ಞಾನೇಂದ್ರ ಪ್ರತಿಕ್ರಿಯೆ: "ಘಟನೆ ತೀವ್ರ ನೋವುಂಟು ಮಾಡಿದೆ" ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅರಳಸುರಳಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, "ಕೆಕೋಡು ರಾಘವೇಂದ್ರ ಅವರ ಕುಟುಂಬ ನನಗೆ ತುಂಬ ಹತ್ತಿರವಾದ ಕುಟುಂಬ. ಮೂವರು ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪುತ್ರ ಭರತ್ ಗಾಯಗೊಂಡಿದ್ದಾನೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ" ಎಂದರು.
"ಇವರ ಕುಟುಂಬದ ಬ.ರಾ.ಕೃಷ್ಣಮೂರ್ತಿ ಎಂಬವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ ದೆಹಲಿಯಲ್ಲಿದ್ದರು. ಈಗ ಬೆಂಗಳೂರಿಗೆ ಬಂದಿದ್ದಾರೆ. ನನಗೆ ಕಳೆದ 40 ವರ್ಷಗಳಿಂದ ಪರಿಚಯ. ಆರ್ಥಿಕವಾಗಿಅನುಕೂಲಸ್ಥರು. ಇವರಿಗೆ 10 ಎಕರೆ ಅಡಿಕೆ ತೋಟವಿದೆ. ಸಹೋದರರ ಪೈಕಿ ಒಬ್ಬ ವೈದ್ಯ, ಒಬ್ಬರು ಟೆಲಿಪೋನ್ ಇಲಾಖೆಯಲ್ಲಿದ್ದಾರೆ. ರಾಘವೇಂದ್ರರ ಮಗ ಭರತ್ ಅಡಿಕೆ ವ್ಯಾಪಾರ ಮಾಡಿಕೊಂಡು ಇದ್ದಾರೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಲಿದ್ದು, ಎಫ್ಎಸ್ಎಲ್ ತಂಡ ಆಗಮಿಸಲಿದೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ" ಎಂದು ಹೇಳಿದರು.
Posted by Vidyamaana on 2023-09-22 16:37:14 |
ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು.
ತುಳುನಾಡಿನ ಜನಪದ ಕಲೆಯಾದ ಕಂಬಳವು ಈಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದ್ದು ಬೆಂಗಳೂರು ಜನತೆ ಸೇರಿದಂತೆ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಜನತೆ , ವಿದೇಶಿಯರು ಈ ಬಾರಿ ಕಂಬಳವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಂಬಳ ಉಳಿವಿಗಾಗಿ ಸುಪ್ರಿಂಕೋರ್ಟು ಮೆಟ್ಟಿಲೇರಿ ಯಸಶ್ವಿಯಾದ ಅಶೋಕ್ ರೈಗಳು ಈ ಬಾರಿ ರಾಜ್ಯದ ರಾಜಧಾನಿಯಲ್ಲೇ ಕಂಬಳವನ್ನು ಆಯೋಜನೆ ಮಾಡುವ ಮೂಲಕ ತುಳುನಾಡಿನ ಜನಪದ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಮುಂದಾಗಿದ್ದಾರೆ.
ಕಂಬಳದ ಕರೆ ನಿರ್ಮಾಣಕ್ಕಾಗಿ ಸ್ಥಳವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದ್ದು ಮುಂದಿನ ವಾರ ಕರೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ್ ರೈ ಮಠಂತಬೆಟ್ಟು, ರಾಜ್ಕುಮಾರ್ ರೈ, ರಾಕೇಶ್ ರೈ ಕುದ್ರೈಾಡಿ, ಪ್ರಶಾಂತ್ ರೈ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್ , ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಅಶ್ವಿನ್ ಪೂಜಾರಿ , ದೀಕ್ಷಿತ್ ರ ಮೊದಲಾದವರು ಉಪಸ್ಥಿತರಿದ್ದರು.
Posted by Vidyamaana on 2023-08-20 12:48:35 |
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಘಾತ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೃದಯಾಘಾತಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಒಂದು ಪ್ಲಾನ್ ಮಾಡಿದೆ.ಹೃದಯಘಾತ ತಡೆಗೆ ಆರೋಗ್ಯ ಇಲಾಖೆ ಪುನೀತ್ ರಾಜಕುಮಾರ್ ಅಪ್ಪು ಹೃದಯ ಕವಚ ಯೋಜನೆ ಜಾರಿಗೆ ಮುಂದಾಗಿದೆ .ದಿಡೀರ್ ಸಾವು ಹೃದಯಘಾತದ ಸಂಖ್ಯೆ ಏರಿಕೆ ತಡೆಗೆ ಹೃದಯಾಘಾತ ತಪ್ಪಿಸಲು ಮುಂದಾದ ಆರೋಗ್ಯ ಇಲಾಖೆ,ಅಪ್ಪು ಯೋಜನೆ ಜಾರಿಗೆ ಬಂದ ಆರೋಗ್ಯ ಇಲಾಖೆ ಬಜೆಟ್ ಅಲ್ಲಿ ಈ ಕುರಿತು ಹಿಂದೆ ಘೋಷಣೆ ಮಾಡಲಾಗಿತ್ತು ಆ ಯೋಜನೆಯನ್ನು ಇದೀಗ ಅನುಷ್ಠಾನಕ್ಕೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.ಹೃದಯಾಘಾತವನ್ನು ತಡೆಗಟ್ಟಲು ಹಾಗೂ ಹೃದಯಘಾತ ಮುಂಚೆ ಯಾವ ರೀತಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳಬೇಕು ಎಂಬುದರ ಕುರಿತು ಅರಿವು ಮೂಡಿಸುವುದು ಈ ಯೋಜನೆಯಲ್ಲಿದೆ.
ಅಪ್ಪು ಹೃದಯ ಕವಚ ಯೋಜನೆ ಜಾರಿ ಮಾಡಲಾಗಿದ್ದು ಈ ಕುರಿತು ಜಯದೇವ ಆಸ್ಪತ್ರೆಯ ಅಡಿಯಲ್ಲಿ 45 ತಾಲೂಕು ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ. ಸಂಬಂಧಿಸಿದ ಕಂಡುಬಂದರೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಜ್ಞವೈದ್ಯರಿಂದ ಸಲಹೆ ನೀಡಲಾಗುತ್ತದೆ.ವಿಡಿಯೋ ಅಥವಾ ಆಡಿಯೋ ಮೂಲಕ ತಜ್ಞ ವೈದ್ಯರಿಂದ ಸಲಹೆ ನೀಡಲಾಗುತ್ತಿದ್ದು ವೈದ್ಯರ ತಂಡವು ಕೇಸ್ ಆಪರೇಟ್ ಮಾಡಲಿದ್ದಾರೆಎಂದು ಆರೋಗ್ಯ ಇಲಾಖೆಯ ಆಯುಕ್ತ ರಣದೀಪ ತಿಳಿಸಿದರು.
ಪುನೀತ್ ರಾಜಕುಮಾರ್ ಹೆಸರಲ್ಲಿ ಎಇಡಿ(ಆಟೋಮೆಟಿಕ್ ಎಕ್ಸ್ಟರ್ನಲ್ ಡೆಫಿಲೆಟರ್ಸ್) ಅಳವಡಿಕೆ
ಹೃದಯಾಘಾತ ತಡೆಗಟ್ಟಲು ಪುನೀತ್ ಹೆಸರಲ್ಲಿ ಎಇಡೀ ಅಳವಡಿಸುತ್ತಿದ್ದೂ, ಸುಮಾರು ಮೂರು ಕೋಟಿ ವೆಚ್ಚದಲ್ಲಿ ಆಸ್ಪತ್ರೆಗಳಲ್ಲಿ ಅಳವಡಿಕೆ ಮಾಡಲಾಗಿದೆ. ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹೆಸರಲ್ಲಿ ಅಳವಡಿಕೆ ಮಾಡಿದ್ದು, ಆರಂಭಿಕಾ ಹಂಥದಲ್ಲಿ 45 ಆಸ್ಪತ್ರೆಯಲ್ಲಿ ಎ ಈಡಿ ಮಾಡೆಲ್ ಅಳವಡಿಕೆ ಈ ಬಗ್ಗೆ ಬಜೆಟ್ ನಲ್ಲಿ ಸಿದ್ದರಾಮಯ್ಯನವರು ಘೋಷಿಸಿದ್ದರು. ಆಸ್ಪತ್ರೆಗಳಲ್ಲಿ ಸರ್ಕಾರ ಎಇಡಿ ಅಳವಡಿಕೆಗೆ ಟೆಂಡರ್ ಕರೆದಿದೆ.
ಏನಿದು ಎಇಡಿ?
ಎಲೆಕ್ಟ್ರಿಕ್ ಶಾಕ್ ಮೂಲಕ ಹೃದಯ ಬಡಿತವನ್ನು ಸಾಮಾನ್ಯ ಸ್ಥಿತಿಗೆ ಬರುವಂತೆ ಮಾಡುತ್ತದೆ . ತುರ್ತು ಪ್ರಾಥಮಿಕ ಚಿಕಿತ್ಸೆ ಬಳಿಕ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಬಹುದಾಗಿದೆ.ಹೃದಯ ನಾರ್ಮಲ್ ಆಗಿ ಒಂದು ನಿಮಿಷಕ್ಕೆ 75 ರಿಂದ 80 ವರೆಗೆ ಬಡಿದುಕೊಳ್ಳುತ್ತದೆ. ಅದು ತಕ್ಷಣವಾಗಿ 300 ರಿಂದ 400ಕ್ಕೆ ಹೆಚ್ಚದರೆ ಅಲ್ಲಿ ಹೃದಯದ ಬಡಿತ ವೈಬ್ರೇಶನ್ ಉಂಟಾಗುತ್ತದೆ. ಆ ಸಂದರ್ಭದಲ್ಲಿ ಅಂತಹ ವ್ಯಕ್ತಿ ಎಲ್ಲ ಬೆವರುತ್ತಿರುತ್ತಾರೆ. ಅವರ ಕೈ ಹಾಗೂ ದೇಹ ತನ್ನಗಗಿರುತ್ತೆ. ಎಇಡಿ ವ್ಯಕ್ತಿಯ ಎದೆಯ ಮೇಲೆ ಇಟ್ಟರೆ ತಕ್ಷಣ 300 ರಿಂದ 400 ಇದ್ದ ಹೃದಯ ಬಡಿತ ಸಹಜ ಸ್ಥಿತಿಗೆ ಬರುತ್ತದೆ ಎಂದು ಜಯದೇವ ಆಸ್ಪತ್ರೆಯ ಹೃದಯ ತಜ್ಞ ಡಾ. ಅರುಣ್ ಮಾಹಿತಿ ನೀಡಿದರು.