Posted by vidyamaana on 2024-07-01 12:44:53 |
ಹಾಸನ: ಪೊಲೀಸ್ ಕಾನ್ಸ್ಟೇಬಲ್ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್ಸ್ಟೇಬಲ್, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.
ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.
ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ. ಆರೋಪಿ ಪತಿ ಲೋಕನಾಥ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Posted by Vidyamaana on 2023-10-19 12:53:03 |
ಜಾಹಿರಾತು :
ಬ್ರೈಟ್ ಭಾರತ್ ಆರಂಭಿಸಿದ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆ ಇದಾಗಿದ್ದು,
ಇದರ ಪೂರ್ಣ ವಿವರ ಕೆಳಗಿದೆ.
ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್ನ ಈ ಯೋಜನೆ ನನಸು ಮಾಡಲಿದೆ.
ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?
ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8867340630/9606590729 /8867340630
ಈ ನಂಬರ್ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ
ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ನಾಲ್ಕು ಮನೆ ಸೇರಿದಂತೆ, ಆರು ಆಕ್ವೀವಾ, ಎರಡು ಬೈಕ್, ಚಿನ್ನ, ಡೈಮಂಡ್, ನಗದು ಸೇರಿದಂತೆ, ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದು.
ಯಾರಿಗೆಲ್ಲ ಸೇರಬಹುದು
ಬ್ರೈಟ್ ಭಾರತ್ ನಲ್ಲಿ ಪ್ರತಿಯೊಬ್ಬರಿಗೂ ಸದಸ್ಯರಾಗಲು ಮುಕ್ತ ಅವಕಾಶವಿದೆ, ಈಗಾಗಲೇ ಕರ್ನಾಟಕ ಕೇರಳದ ಜೊತೆಗೆ ಅನಿವಾಸಿ ಭಾರತೀಯರು ಕೂಡ ಸದಸ್ಯರಾಗಿದ್ದಾರೆ. ಈಗಾಗಲೇ ಸಾವಿರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.
ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಅನ್ನುವುದು ಬ್ರೈಟ್ ಭಾರತ್ನ ಪಾಲುದಾರರ ಮಾತು.
ಬ್ರೈಟ್ ಭಾರತ್ನ ಮೊದಲ ಡ್ರಾ ನವೆಂಬರ್ ತಿಂಗಳಲ್ಲಿ ನಡೆಯಲಿದ್ದು, ಮೊದಲ ತಿಂಗಳಲ್ಲೇ ಮೂರು ಅದೃಷ್ಟಶಾಲಿಗಳಿಗೆ ಆಕ್ಟೀವಾ ಗೆಲ್ಲುವ ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಬೈಕು, ಆಕ್ಟೀವಾ, ಚಿನ್ನ, ಡೈಮಂಡ್, ನಗದು ಬಹುಮಾನವಿದ್ದು, ಹದಿನಾರನೇ ತಿಂಗಳಿನಲ್ಲಿ ಕಾರು ಗೆಲ್ಲುವ ಅವಕಾಶವಿದೆ. ಜೊತೆಗೆ 17-18-19-20 ಈ ನಾಲ್ಕು ತಿಂಗಳಿನಲ್ಲಿ ನಾಲ್ಕು ಸುಸಜ್ಜಿತ ಮನೆ ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್ರೂಮಿನ ಹೊಸ ಮನೆಯನ್ನು ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.
ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿ ಸಧ್ಯದಲ್ಲೇ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ಶುಭಾರಂಭಗೊಳ್ಳಲಿದ್ದು, ಪ್ರತಿಯೊಬ್ಬರಿಗೂ ಬ್ರೈಟ್ ಭಾರತ್ ಸದಸ್ಯರಾಗಲು ಮುಕ್ತ ಅವಕಾಶವಿದೆ.
ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ್ನ ನಂಬರನ್ನು ಸಂಪರ್ಕಿಸಬಹುದು.
8867340630 / 9606590729/8867340630
Posted by Vidyamaana on 2024-06-11 17:13:19 |
ಮಂಗಳೂರು : ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನದಂದು ಮಂಗಳೂರಿನ ಬೋಳಿಯಾರು ನಲ್ಲಿ ವಿಜಯೋತ್ಸವ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಹೇಳಿಕೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ 20 ಜನರನ್ನು ವಶಕ್ಕೆ ಪಡೆದಿದ್ದವು. ಚಾಕು ಇರಿತ ಪ್ರಕರಣ ಸಂಬಂಧ ಒಟ್ಟು ಆರು ಮಂದಿಯನ್ನು ಬಂಧಿಸಿದ್ದೇವೆ. ಇನ್ನುಳಿದವರ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಮೂರು ತಂಡಗಳ ಮೂಲಕ ತನಿಖೆ ನಡೆಯುತ್ತಿದೆ ಎಂದರು.
Posted by Vidyamaana on 2024-04-04 11:36:21 |
ಚಿಕ್ಕಮಗಳೂರು :ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು. ಇಂದು ಮತ್ತೆ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ 12 ಚಕ್ರದ ಲಾರಿ ಲಾಕ್ ಆಗಿದೆ. ರಸ್ತೆಯ ತಿರುವಿನಲ್ಲಿ ಲಾರಿ ಟರ್ನ್ ಆಗದೆ ನಿಂತಲ್ಲಿ ನಿಂತಿದೆ. ಬೆಳಗ್ಗೆಯಿಂದಲೂ ಕೂಡ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ನಿಂತಲ್ಲೇ ನಿಂತು ಮುಂದೆ ಹೋಗಲಾಗದೆ ಹಿಂದೆಯೂ ಬರಲಾಗದೆ ಪರದಾಡುವಂತೆ ಆಗಿದೆ.
Posted by Vidyamaana on 2023-06-04 23:14:37 |
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 5ರಂದು ಬೆಳಿಗ್ಗೆ 9.30ಕ್ಕೆ ಉಪ್ಪಿನಂಗಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಳಾಭಿಷೇಕ ನೆರವೇರಿಸಲಿದ್ದಾರೆ.
ನಂತರ 10.30ಕ್ಕೆ ಪುತ್ತೂರು ಬಾಲವನದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗಿಯಾಗುವರು.
ಬೆಳಿಗ್ಗೆ 11.15ಕ್ಕೆ ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿಯಲ್ಲಿ ಶಾಸಕರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
Posted by Vidyamaana on 2024-05-19 12:02:11 |
ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಚಾಕುವಿನಿಂದ ಇರಿದು ಒಬ್ಬ ಸಿಬ್ಬಂದಿಯನ್ನು ಕೊಲೆ ಮಾಡಿ, ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಪರಾರಿಯಾದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆಗೊಳಗಾದ ಸಿಬ್ಬಂದಿ ಆರೋಪಿಯನ್ನು ಗುರುತಿಸಿದ್ದು, ಆತನ ಮುಖದ ರೇಖಾಚಿತ್ರ ಕೂಡ ಸಿದ್ಧಪಡಿಸಲಾಗಿದೆ.
ಪುದುಚೇರಿ- ದಾದರ್ ಎಕ್ಸ್ಪ್ರೆಸ್ ರೈಲು ಗುರುವಾರ ಸಂಜೆ 4ರ ಸುಮಾರಿಗೆ ಖಾನಾಪುರ ತಾಲ್ಲೂಕಿನ ಲೋಂಡಾ ಬಳಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರೈಲು ಖಾನಾಪುರ ನಿಲ್ದಾಣಕ್ಕೆ ಬಂದಾಗ ಆರೋಪಿ ಪರಾರಿಯಾದ. ಎಸ್-8 ಬೋಗಿಯಿಂದ ಇಳಿದುಹೋಗಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಖಾನಾಪುರದಿಂದ ಎಲ್ಲಿಗೆ ಪರಾರಿಯಾಗಿದ್ದಾನೆ ಎಂಬುದರ ತನಿಖೆ ನಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
Posted by Vidyamaana on 2024-03-31 20:24:30 |
ಬೆಂಗಳೂರು : ನಜ್ಮಾ ನಜೀರ್ ಚಿಕ್ಕನೇರಳೆ ಅವರು ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.ಈ ನಡುವೆ ನಜ್ಮಾ ನಜೀರ್ ಚಿಕ್ಕನೇರಳೆ ಸೇರ್ಪಡೆಗೆ ಸಾಮಾಜಿಕ ಜಾಲತಾಣದಲ್ಲಿ ಖುದ್ದು ಕಾಂಗ್ರೆಸ್ನ ಹಲವು ಮಂದಿ ವ್ಯಂಗ್ಯವಾಡುತ್ತಿದ್ದಾರೆ.ಈ ಹಿಂದೆ ನಜ್ಮಾ ನಜೀರ್ ಚಿಕ್ಕನೇರಳೆ ಅವರು ಜೆಡಿಎಸ್ ವಕ್ತರಾಗಿದ್ದ ವೇಳೇಯಲ್ಲಿ ನಜ್ಮಾ ಅವರು ಕೈ ಅನ್ನು ಹಿಗ್ಗಾಮುಗ್ಗ ಜಾಡಿಸಿದ್ದು ಅತಿ ಹೆಚ್ಚು, ಈಗ ಅವರೇ ಕಾಂಗ್ರೆಸ್ಗೆ ಸೇರುತ್ತಿರುವುದು ಅವಕಾಶವಾದಿ ರಾಜಕಾರಣ ಎನ್ನುತ್ತಿದ್ದಾರೆ.