ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಸುದ್ದಿಗಳು News

Posted by vidyamaana on 2024-07-03 07:52:29 |

Share: | | | | |


ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಆರೋಪಿ ಮುಳಬಾಗಿಲಿನ ಅನಿಲ್ ಬಂಧನ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜುವೊಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕಿಯೊಬ್ಬಳು (17) ಅದೇ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ.ಮುಳಬಾಗಿಲಿನ ಅನಿಲ್‌ ಕುಮಾರ್‌ (21) ಬಂಧಿತ ಯುವಕ.ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಶ್ರೀನಿವಾಸಪುರ ತಾಲ್ಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು. ಸೋಮವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆ ಶೌಚಾಲಯಕ್ಕೆ ಹೋಗಿದ್ದಾಳೆ. ಈ ಸಮಯದಲ್ಲಿ ಮಗು ಜನನವಾಗಿದೆ. ಮಗುವಿನ ಅಳು ಸದ್ದು ಕೇಳಿ ಕಕ್ಕಾಬಿಕ್ಕಿಯಾದ ಕಾಲೇಜಿನ ಉಪನ್ಯಾಸಕಿಯರು, ಸಿಬ್ಬಂದಿ ಸ್ಥಳಕ್ಕೆ ಓಡಿ ಹೋಗಿದ್ದಾರೆ. ತಕ್ಷಣವೇ ಸಮೀಪದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ತಾಯಿ ಹಾಗೂ ಮಗುವನ್ನು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಉಪನ್ಯಾಸಕರು ಬಾಲಕಿಯ ಪೋಷಕರಿಗೆ ವಿಚಾರ ಮುಟ್ಟಿಸಿದ್ದು, ಅವರೂ ಆಸ್ಪತ್ರೆಗೆ ಬಂದಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 Share: | | | | |


ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಿದ್ರೆ ಹೀಗೆ ಮಾಡಿ!?? ವೈರಲ್ ಮೆಸೇಜ್

Posted by Vidyamaana on 2024-06-05 16:31:52 |

Share: | | | | |


ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಿದ್ರೆ ಹೀಗೆ ಮಾಡಿ!?? ವೈರಲ್ ಮೆಸೇಜ್

ಬೆಂಗಳೂರು :- ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬೇಕಾ? ಡಿಎಂ ಮಾಡಿ. ಡಿಎಂ ಮಾಡುವುದರ ಜೊತೆಗೆ ಪೇಜ್ ಲೈಕ್ ಮಾಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಲೈಕ್​ಗಳಿಗಾಗಿ ಕಿಡಿಗೇಡಿಗಳು ದಂಧೆಗಿಳಿದಿದ್ದಾರೆ.

ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲವು ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಇಡೀ ಹಾಸನದೆಲ್ಲೆಡೆ ಹರಿದಾಡಿತ್ತು. ಕಿಡಿಗೇಡಿಗಳು ಪ್ರಜ್ವಲ್ ರೇವಣ್ಣ ಹೆಸರು ಹಾಳು ಮಾಡುವ ಉದ್ದೇಶದಿಂದ ಹಾಸನದ ಬಸ್ ನಿಲ್ದಾಣ ಸೇರಿದಂತೆ ಎಲ್ಲಾ ಕಡೆ ಪೆನ್ ಡ್ರೈವ್​ಗಳನ್ನು ಇಟ್ಟಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ವಿಡಿಯೋ ಹರಿಬಿಟ್ಟಿದ್ದರು. ಮಹಿಳೆಯ ಮುಖ ಕೂಡ ಬ್ಲರ್ ಮಾಡಿರಲಿಲ್ಲ. ವಿಡಿಯೋ ವೈರಲ್ ಆದ ಬಳಿಕ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಅದೆಷ್ಟೋ ಮಹಿಳೆಯರು ಸಾಯಲು ಯತ್ನಿಸಿದ್ದಾರೆ. ಕುಟುಂಬದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಮಾನನಷ್ಟ ಅನುಭವಿಸಿದ್ದಾರೆ. ಇದೆಲ್ಲ ಒಂದು ಕಡೆ ಆದ್ರೆ ಮತ್ತೊಂದೆಡೆ ಕೆಲ ಕಿಡಿಗೇಡಿಗಳು ಇದೇ ವಿಡಿಯೋಗಳನ್ನು ಇಟ್ಟುಕೊಂಡು ದಂಧೆಗೆ ಇಳಿದಿದ್ದಾರೆ.

ಉಳ್ಳಾಲ : ಮೊಬೈಲ್ ನೋಡಿಕೊಂಡೇ ಬಸ್ ಚಲಾಯಿಸಿದ ಚಾಲಕ-ವೀಡಿಯೋ ವೈರಲ್

Posted by Vidyamaana on 2023-07-23 16:38:04 |

Share: | | | | |


ಉಳ್ಳಾಲ : ಮೊಬೈಲ್ ನೋಡಿಕೊಂಡೇ ಬಸ್ ಚಲಾಯಿಸಿದ ಚಾಲಕ-ವೀಡಿಯೋ ವೈರಲ್

ಉಳ್ಳಾಲ : ಸ್ಟೇಟ್ ಬ್ಯಾಂಕ್ -ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ವೈರಲ್ ಆಗಿದೆ. ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.42 ನಂಬರಿನ ಸೈಂಟ್ ಆಂಟನಿ ಬಸ್ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟು ವರೆಗೂ , ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಬೇಜವಾಬ್ದಾರಿಯುತ ವಾಗಿ ಬಸ್ಸನ್ನು ಚಲಾಯಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.


ಬಸ್ಸಲ್ಲಿ ಅಧಿಕ ಪ್ರಯಾಣಿಕರೂ ಇದ್ದರು ಎಂಬುದನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಗಿಂತ ಹೆಚ್ಚಾಗಿ ಮೊಬೈಲನ್ನೇ ಚಾಲಕ ವೀಕ್ಷಿಸುತ್ತಿರುವುದು ಅನಾಹುತ ಆಹ್ವಾನಿಸುತ್ತಿದೆ.


ಸಾರಿಗೆ ಅಧಿಕಾರಿಗಳು ಬಸ್ ಪರ್ಮಿಟ್ ರದ್ದುಗೊಳಿಸಬೇಕು ಹಾಗೂ ಸಂಚಾರಿ ಪೊಲೀಸರು ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.117 (ಐಎಂವಿ) ಮೋಟಾರ್ ಆಕ್ಟ್ ನಡಿ ಸಿಟಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಪ್ರಸ್ತುತ ಕಾಯಿದೆಯಡಿ ಲೈಸನ್ಸ್ ರದ್ದುಗೊಳಿಸುವುದು ಹಾಗೂ ದಂಡ ವಿಧಿಸಲಾಗುವುದು. ಸಾರ್ವಜನಿಕವಾಗಿ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಇಲಾಖೆ ಪ್ರಕರಣ ದಾಖಲಿಸಲಾಗುವುದು’ ಎಂದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ರಮೇಶ್ ಹಾನಾಪುರ ತಿಳಿಸಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್

Posted by Vidyamaana on 2024-03-23 06:09:56 |

Share: | | | | |


ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಬಲಿ ಪಡೆದ ಕೇಬಲ್ ವೈರ್

ತುಮಕೂರು, ಮಾ.22: ಸಾವು ಯಾವ ರೂಪದಲ್ಲಿ ಬರುತ್ತದೆಯೋ ಹೇಳಲು ಅಸಾಧ್ಯ. ಅದರಂತೆ ತುಮಕೂರು(Tumakuru) ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ಯಮನ ರೂಪದಲ್ಲಿ ಬಂದ ಕೇಬಲ್ ವೈರ್ , ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಚಿಂಚಲಕಟ್ಟೆ ಮೂಲದ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್​ವೊಬ್ಬರನ್ನ ಬಲಿ ಪಡೆದಿದೆ. ಲಕ್ಷ್ಮೀ ಬಾಯಿ ಜಾದವ್ (36), ಮೃತ ದುರ್ದೈವಿ.ಘಟನೆ ವಿವರ

ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಇಂದು ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ‌ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಲಕ್ಷ್ಮೀ ಬಾಯಿ ಅವರ ಮೃತದೇಹವನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Viral Video:ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳ ಉತ್ತರ ಹೇಗಿತ್ತು ನೋಡಿ

Posted by Vidyamaana on 2024-03-06 04:53:57 |

Share: | | | | |


Viral Video:ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳ ಉತ್ತರ ಹೇಗಿತ್ತು ನೋಡಿ

      ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಮ್ಮನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸುತ್ತವೆ. ಸದ್ಯ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ನರೇಂದ್ರ ಮೋದಿ ಯಾರು ಎಂದು ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳು ಕೊಟ್ಟಂತಹ ಉತ್ತರ ಹೇಗಿತ್ತು ಎಂಬುದನ್ನು ನೀವು ಒಮ್ಮೆ ನೋಡಿ


ವೈರಲ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ :ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳ ಉತ್ತರ ಹೇಗಿತ್ತು ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ವಿವಿಧ ರೀತಿಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ಭಾವನಾತ್ಮಕವಾಗಿದ್ದರೆ, ಕೆಲವು ವಿಡಿಯೋಗಳು ನಮಗೆಲ್ಲರಿಗೂ ಜೀವನ ಪಾಠವನ್ನು ಕಲಿಸುವಂತಿರುತ್ತದೆ. ಇನ್ನೂ ಹಲವು ಹಾಸ್ಯಮಯ ವಿಡಿಯೋಗಳು ಹರಿದಾಡುತ್ತಿರುತ್ತವೆ.


ಇಂತಹ ದೃಶ್ಯಗಳಂತೂ ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ಪ್ರಧಾನಿ ಮೋದಿ ಯಾರು ಎಂದು ಪತ್ರಕರ್ತೆ ಕೇಳಿದ ಪ್ರಶ್ನೆಗೆ ವಿದ್ಯಾರ್ಥಿಗಳು ಕೊಟ್ಟಂತಹ ಉತ್ತರವನ್ನು ನೋಡಿ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಖಾಸಗಿ ನ್ಯೂಸ್ ಚಾನೆಲ್ ಒಂದರ ರಿಪೋರ್ಟರ್ ಒಬ್ಬರು ಶಾಲಾ ವಿದ್ಯಾರ್ಥಿಗಳ ಬಳಿ ಜನರಲ್ ನಾಲೆಜ್ ಪ್ರಶ್ನೆಗಳನ್ನು ಕೇಳುತ್ತಿರುವ ದೃಶ್ಯವನ್ನು ಕಾಣಬಹುದು. ವೈರಲ್ ಆಗುತ್ತಿರುವ ಈ ವಿಡಿಯೋವನ್ನು @psyco_rider_143 ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ.


ವೈರಲ್ ವಿಡಿಯೋದಲ್ಲಿ ಪತ್ರಕರ್ತೆಯೊಬ್ಬರು ಶಾಲಾ ವಿದ್ಯಾರ್ಥಿಗಳ ಬಳಿ ಕೆಲವೊಂದು ಪ್ರಶ್ನೆಗಳನ್ನು ಕೇಳುತ್ತಿರುವ ದೃಶ್ಯವನ್ನು ನೋಡಬಹುದು. ಮೊದಲಿಗೆ ಆ ಪತ್ರಕರ್ತೆ ವಿದ್ಯಾರ್ಥಿಯೊರ್ವನ ಬಳಿ ಲಾಲು ಪ್ರಸಾದ್ ಯಾದವ್ ಯಾರು ಗೊತ್ತಾ? ಎಂಬ ಪ್ರಶ್ನೆಯನ್ನು ಕೇಳುತ್ತಾರೆ, ಅದಕ್ಕೆ ಆ ಬಾಲಕ ಹಾ.. ಗೊತ್ತಿದೆ ಅನ್ನೋ ಉತ್ತರವನ್ನು ನೀಡುತ್ತಾನೆ. ಬಳಿಕ ಪತ್ರಕರ್ತೆ ಹಾಗಾದ್ರೆ ಅವರು ಯಾರು ಎಂದು ಹೇಳಬಹುದೇ ಎಂದು ಪ್ರಶ್ನೆ ಕೇಳುತ್ತಾರೆ. ಈ ಪ್ರಶ್ನೆಗೆ ಹೇಗೆ ಉತ್ತರಿಸುವುದು ಎಂದು ತಿಳಿಯದ ಆ ವಿದ್ಯಾರ್ಥಿ ನಗುತ್ತಾ, ನಾಚಿಕೆಯಿಂದ ಅಲ್ಲಿಂದ ಹೋಗಿಯೇ ಬಿಡುತ್ತಾನೆ.


ನಂತರ ರಿಪೋರ್ಟರ್ ವಿದ್ಯಾರ್ಥಿನಿಯೊಬ್ಬಳ ಬಳಿ ನರೇಂದ್ರ ಮೋದಿ ಯಾರು ಎಂಬ ಪ್ರಶ್ನೆಯನ್ನು ಕೇಳುತ್ತಾರೆ, ಅದಕ್ಕೆ ಆ ವಿದ್ಯಾರ್ಥಿನಿ ಬಹಳ ಆತ್ಮವಿಶ್ವಾಸದಿಂದ ಬಿಹಾರದ ಪ್ರಧಾನ ಮಂತ್ರಿ ಎಂದು ಥಟ್ಟನೆ ಉತ್ತರಿಸುತ್ತಾಳೆ. ತಾನು ತಪ್ಪು ಉತ್ತರ ನೀಡಿದ್ದೇನೆ ಎಂದು ಅರಿತ ಆ ಬಾಲಕಿ ತಕ್ಷಣವೇ ಅವರು ಭಾರತದ ಪ್ರಧಾನ ಮಂತ್ರಿ ಎಂಬ ಉತ್ತರವನ್ನು ನೀಡುತ್ತಾಳೆ. ವಿದ್ಯಾರ್ಥಿನಿಯ ಉತ್ತರವನ್ನು ಕಂಡು ನೋಡುಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.


ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 70 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ʼಒಬ್ಬ ಬಳಕೆದಾರರು ಪಾಪ ಆ ಹುಡುಗಿ ಸ್ವಲ್ಪ ನರ್ವಸ್ ಆಗಿ ಮೊದಲಿಗೆ ತಪ್ಪು ಉತ್ತರವನ್ನು ನೀಡಿದ್ದಾಳೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಬಿಹಾರದ ಶಿಕ್ಷಣ ಉತ್ತಮ ಗುಣಮಟ್ಟದ್ದಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ವಿದ್ಯಾರ್ಥಿಗಳ ಉತ್ತರವನ್ನು ಕೇಳಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ

ಕಾಸರಗೋಡು:ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಕೆಮರಾ ನಿಗಾ ಆರಂಭ- ಮೊದಲ ದಿನ 1,040 ನಿಯಮ ಉಲ್ಲಂಘನೆ

Posted by Vidyamaana on 2023-06-07 03:58:50 |

Share: | | | | |


ಕಾಸರಗೋಡು:ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌  ಕೆಮರಾ ನಿಗಾ ಆರಂಭ- ಮೊದಲ ದಿನ 1,040 ನಿಯಮ ಉಲ್ಲಂಘನೆ

ಕಾಸರಗೋಡು: ರಸ್ತೆಗಳಲ್ಲಿ ಸಾರಿಗೆ ಕಾನೂನು ಉಲ್ಲಂಘನೆ ನಡೆಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲು ರಸ್ತೆ ಬದಿಯಲ್ಲಿ ಸ್ಥಾಪಿಸಲಾದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಎಐ) ಕೆಮರಾಗಳು ಕಾರ್ಯಾಚರಣೆ ಆರಂಭಿಸಿದ್ದು, ಮೊದಲ ದಿನ ಜೂ. 5ರಂದು ಬೆಳಗ್ಗೆ 8ರಿಂದ ರಾತ್ರಿ 8 ಗಂಟೆಯ ವರೆಗಿನ ಅವಧಿಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ 1,040 ಸಾರಿಗೆ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿವೆ.ಕೇರಳ ರಾಜ್ಯದಲ್ಲಿ ಒಟ್ಟು 38,520 ಸಾರಿಗೆ ಕಾನೂನು ಉಲ್ಲಂಘನೆ ಪತ್ತೆಯಾಗಿವೆ. 250ರಿಂದ 3 ಸಾವಿರ ರೂ. ತನಕ ದಂಡ ವಸೂಲು ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ. ಸಾರಿಗೆ ನಿಯಮ ಉಲ್ಲಂ ಸಿದವರಿಗೆ ಶೀಘ್ರದಲ್ಲೇ ನೋಟಿಸ್‌ ಬರಲಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಜನರನ್ನು ಹಿಂಡುವ ಯೋಜನೆ: ಕಾಂಗ್ರೆಸ್‌

ಹದಗೆಟ್ಟ ರಸ್ತೆಗಳು ಮತ್ತು ಸುರಕ್ಷಿತ ಚಾಲನೆಗೆ ಪೂರಕ ಸೌಲಭ್ಯಗಳನ್ನು ಒದಗಿಸದೇ ಇರುವುದು ಸಂಚಾರ ಉಲ್ಲಂಘನೆಗೆ ಕಾರಣ. ರಾಜ್ಯದ ಪಿಣರಾಯಿ ಸರಕಾರವು ರಸ್ತೆಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸುವ ಬದಲು ಎಐ ಕೆಮರಾದ ಮೂಲಕ ಜನರನ್ನು ಹಿಂಡಿ ಬೊಕ್ಕಸ ತುಂಬಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್‌ ಇದೇವೇಳೆ ಆರೋಪಿಸಿದ್ದಾರೆ.ರಾಜ್ಯದಲ್ಲಿ ಮೊದಲ ದಿನವೇ 38,520 ಸಂಚಾರ ನಿಯಮ ಉಲ್ಲಂಘನೆಗಳನ್ನು ಪತ್ತೆಹಚ್ಚುವ ಮೂಲಕ ಸರಾಸರಿ 1,000 ರೂ.ಗಳಂತೆ ಜನರಿಂದ ಸುಮಾರು 4 ಕೋಟಿ ಸಂಗ್ರಹಿಸಲಾಗಿದೆ. ಮಾಸಿಕ 115 ಕೋಟಿ ರೂ.ಗಳನ್ನು ಸಂಗ್ರಹಿಸುವ ನಿರೀಕ್ಷೆಯನ್ನು ಸರಕಾರ ಹೊಂದಿದೆ. ಇದು ಮದ್ಯದ ಅನಂತರದ ಎರಡನೇ ಅತಿ ಹೆಚ್ಚು ಆದಾಯವಾಗಿದೆ ಮತ್ತು ಲಾಟರಿ ಆದಾಯಕ್ಕಿಂತಲೂ ಹೆಚ್ಚು. ಎಐ ಕೆಮರಾ ಯೋಜನೆಯಲ್ಲಿನ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ ಹೋರಾಟವನ್ನು ಮುಂದುವರಿಸಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ರೈತರನ್ನು ಕಡೆಗಸುತ್ತಿದೆ

Posted by Vidyamaana on 2023-10-11 16:09:52 |

Share: | | | | |


ರಾಜ್ಯ ಸರ್ಕಾರ ರೈತರನ್ನು ಕಡೆಗಸುತ್ತಿದೆ

ಪುತ್ತೂರು : ಕರ್ನಾಟಕದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರ ಅಸ್ತಿತ್ವಕ್ಕೆ ಬಂದು 6 ತಿಂಗಳಾಯಿತು ಕರ್ನಾಟಕದ ಜನತೆ ಬಹುಮತದ ಸರಕಾರ ಚುನಾಯಿಸಿ ಕಳುಹಿಸಿ ಜನಹಿತವನ್ನು ಕಾಪಾಡಬಹುದು ಎಂದು ನಂಬಿದ್ದರು. ಆದರೇ ಕಳೆದ 6 ತಿಂಗಳಿನಿಂದ ದೇಶದ ಬೆನ್ನೆಲುಬು ಎನ್ನುವ ರೈತರನ್ನು ಸಂಪೂರ್ಣ ಕಡೆಗಣಿಸುವ ಕೆಲಸ ಆಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.


ರೈತರಿಗೆ ಪ್ರಣಾಳಿಕೆ ಹಾಗೂ ಸರಕಾರದ ಆದೇಶಗಳು ಮರಿಚಿಕೆಗಳಾಗಿದೆ. ರೈತರಿಗೆ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಹಾಗೂ ಶೇ 3 ರ ಬಡ್ಡಿ ದರದಲ್ಲಿ, 10 ರಿಂದ 15 ಲಕ್ಷಕ್ಕೆ ಏರಿಕೆ ಮಾಡಿರುವ ಆದೇಶ ಬಂದು 2 ತಿಂಗಳು ಕಳೆದರೂ ಜಾರಿಯಾಗಿಲ್ಲ, ಹಾಲು ಉತ್ಪಾದಕರಿಗೆ ಪ್ರತೀ ಲೀಟರ್ ಗೆ 5 ರೂಪಾಯಿಂದ 7 ರೂಪಾಯಿಗೆ ಹೆಚ್ಚಳ., ಜಾನುವಾರು ಖರೀದಿಗೆ 3 ಲಕ್ಷದ ಶೂನ್ಯ ಬಡ್ಡಿದರದ ಸಾಲ, ಮೀನುಗಾರ ಮಹಿಳೆಯರಿಗೆ 3 ಲಕ್ಷ ಬಡ್ಡಿ ರಹಿತ ಸಾಲ ಘೋಷಣೆಯಾಗಿಯೇ ಉಳಿದಿದೆ.



ದ.ಕ ಜಿಲ್ಲೆಯಲ್ಲಿ 1,50,000 ರೈತರಿಗೆ ಕೇಂದ್ರ ಸರಕಾರ 6,000 ಕಿಸಾನ್ ಸಮ್ಮಾನ್ ನಿಧಿ ನೀಡುತ್ತಿದ್ದು, ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರಕಾರ 4,000 ನೀಡುತ್ತಿತ್ತು, ಇದನ್ನು ಈಗಿನ ಸರಕಾರ ನಿಲ್ಲಿಸಿರುತ್ತದೆ. ಬಿಜೆಪಿ ಸರಕಾರ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ದ.ಕ ಜಿಲ್ಲೆಯಲ್ಲಿ ಸುಮಾರು 24,000 ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ರೈತ ವಿದ್ಯಾನಿಧಿ 4,000 ದಿಂದ 11,000 ತನಕ ಈ ಶೈಕ್ಷಣಿಕ ವರ್ಷದಲ್ಲಿ ಯಾವೊಬ್ಬ ರೈತರ ಮಕ್ಕಳಿಗೂ ಪಾವತಿಯಾಗಿಲ್ಲ.


ಕಳೆದ ವರ್ಷ ರೈತರ ನೀರಾವರಿ ಪಂಪ್ ಸೆಡ್‌ಗಳಿಗೆ ನಿರಂತರ ವಿದ್ಯುತ್ ನೀಡುತ್ತಿದ್ದರೆ., ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಸರಕಾರ ದಿನದ 7 ಗಂಟೆ ವಿದ್ಯುತ್ ಕೊಡುತ್ತೇನೆ ಎಂದು ಭರವಸೆ ನೀಡಿ ಹಗಲು 3 ಗಂಟೆ ರಾತ್ರಿ 4 ಗಂಟೆ ಭರವಸೆಯೇ ಹೊರತು ರೈತ ಇಂದು ಕತ್ತಲೆಯಲ್ಲಿದ್ದಾನೆ ಎಂದರು.


ಕಾಂಗ್ರೆಸ್ ಸರಕಾರ ರೈತರಿಗೆ ಚಳ್ಳೆ ಹಣ್ಣು ತಿನ್ನಿಸಿ ರೈತರನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ. ಇವತ್ತು ಕರ್ನಾಟಕದಲ್ಲಿ ರೈತ ವಿರೋಧಿ ಸರಕಾರ ಆಡಳಿತ ಮಾಡುತ್ತಿದ್ದು, ಹಣದುಬ್ಬರ, ಬೆಲೆ ಏರಿಕೆ, ಬರ ಇದರಿಂದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ.


ರೈತರಿಗೆ ಘೋಷಣೆ ಮಾಡಿದ ಭರವಸೆಯನ್ನು ಈಡೇರಿಸದೇ ಹೋದರೆ ಮುಂದಿನ ದಿನಗಳಲ್ಲಿ ರೈತರು ಬೀದಿಗಿಳಿದು ಹೋರಾಡುವ ಅನಿವಾರ್ಯತೆ ಬರಬಹುದು ಎಂದು ರಾಜ್ಯಕ್ಕೆ ಎಚ್ಚರಿಕೆಯನ್ನು ನೀಡಿದರು.


ಪತ್ರಿಕಾಗೋಷ್ಠಿಯಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು, ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು, ಪ್ರಸಾದ್ ಕೆ.ವಿ., ಉಪಸ್ಥಿತರಿದ್ದರು.



Leave a Comment: