Posted by vidyamaana on 2024-07-03 08:00:29 |
ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ.
ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಸುಮಾರು 1,48,000 ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000 ರೂ. ಸೇರಿ ಒಟ್ಟು 1,78,000 ರೂ. ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ್ದು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಸೊತ್ತುಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿದೆ.
ಸದ್ರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್ ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಎಂ ಕೆ.ಎಸ್.ಪಿ.ಎಸ್ ಮತ್ತು ರಾಜೇಂದ್ರ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತದೆ.
ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮತ್ತು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಯನ್ನು ವ್ಯಕ್ತವಾಗಿದೆ.
Posted by Vidyamaana on 2024-05-22 07:33:00 |
ಬೆಳ್ತಂಗಡಿ , ಮೇ.21: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ(Harish Poonja) ವಿರುದ್ದ ಮತ್ತೊಂದು ಎಫ್ಐಆರ್(FIR) ದಾಖಲಾಗಿದೆ. ಮೇ.20ರಂದು ಬೆಳ್ತಂಗಡಿ(Belthang
non
y) ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ. ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಕೆ ಹಾಕಿದ್ದರು.ಜೊತೆಗೆ ಬೆಳ್ತಂಗಡಿ ಠಾಣಾ ಪೊಲೀಸ್ ನಿರೀಕ್ಷಕರಿಗೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದರು. ಇದೀಗ ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ
Posted by Vidyamaana on 2023-01-13 02:20:08 |
ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಹಳೇ ಸೇತುವೆಯಲ್ಲಿ ಬುಧವಾರ ಮಧ್ಯರಾತ್ರಿ ವೇಳೆಗೆ ದ್ವಿಚಕ್ರ ವಾಹನ ಸೇತುವೆಯ ಗೇಡರಿಗೆ ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ಕಂಡು ಬಂದ ಬಳಿಕ ನೇತ್ರಾವತಿ ನೀರಿನಲ್ಲಿ ಮೃತದೇಹ ಪತ್ತೆಯಾದ ಘಟನೆ ಸಂಭವಿಸಿದ್ದು, ಮರಣದ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತನ ಕುಟುಂಬಸ್ಥರು ಗುರುವಾರ ಬೆಳಿಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.
Posted by Vidyamaana on 2023-06-09 01:54:14 |
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಗುರುವಾರ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಜೊತೆಗೆ, ಮುಜರಾಯಿ ಇಲಾಖೆಯ ಹಾಗೂ ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕ್ಷೇತ್ರದ ಅಗತ್ಯ ಕಾಮಗಾರಿಗಳ ಬಗ್ಗೆ ಮನವಿ ನೀಡಿದರು.
ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಶೋಕ್ ರೈ ಅವರು, ಈಗಾಗಲೇ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಪುತ್ತೂರು ಜಿಲ್ಲಾ ಕೇಂದ್ರ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಶಾಸಕರು ಚರ್ಚೆ ನಡೆಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಗಬೇಕಾದ ಅಭಿವೃದ್ದಿ ಕಾರ್ಯಗಳು ಮತ್ತು ಜನರ ಬೇಡಿಕೆ ಇರುವ ಯೋಜನೆಗಳ ಬಗ್ಗೆಯೂ ಸಿಎಂ ಜೊತೆ ಶಾಸಕರು ಚರ್ಚೆ ನಡೆಸಿದ್ದಾರೆ. ಪುತ್ತೂರಿಗೆ ಮೆಡಿಕಲ್ ಕಾಲೇಜು ಆಗಬೇಕೆಂಬ ಇಲ್ಲಿನ ಮಂದಿಯ ಬಹುಕಾಲದ ಕನಸು ಈ ಬಾರಿ ನನಸಾಗಬೇಕಿದೆ. ಇದಕ್ಕಾಗಿ ಹೆಚ್ಚಿನ ಮುತುವರ್ಜಿ ವಹಿಸುವಂತೆಯೂ ಸಿಎಂ ಬಳಿ ಶಾಸಕರು ಮನವಿ ಮಾಡಿಕೊಂಡರು.
ಮುಖ್ಯಮಂತ್ರಿಗಳು ಶಾಸಕರ ಅಭಿವೃದ್ದಿ ಮುತುವರ್ಜಿಯನ್ನು ಕಂಡು ಸಂತೋಷ ವ್ಯಕ್ತಪಡಿಸಿದರು. ಮುಂದಿನ ಐದು ವರ್ಷಗಳಲ್ಲಿ ಪುತ್ತೂರು ವಿಧಾನಸಬಾ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ಮತ್ತು ಬೇಡಿಕೆಯನ್ನು ಈಡೇರಿಸುವ ಬಗ್ಗೆ ಭರವಸೆಯನ್ನು ನೀಡಿದರು.
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳಕ್ಕೆ ಜಮೀನು ಖರೀದಿಗೆ ಮನವಿ
ಉಪ್ಪಿನಂಗಡಿಯ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ ದೇವಳದ ಉಪಯೋಗಕ್ಕೆ ಖಾಸಗಿ ಜಮೀನು ಖರೀದಿಸಲು ಮುಜರಾಯಿ ಇಲಾಖೆಯಿಂದ ಮಂಜೂರಾತಿ ನೀಡುವಂತೆ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ ನೀಡಿದರು.
ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಊರು ಹಾಗೂ ಪರವೂರುಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು ಅವರಿಗೆ ತಂಗಲು ವಸತಿ, ಮೂಲಸೌಕರ್ಯಗಳು, ಸೇರಿದಂತೆ ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಜಾಗದ ಕೊರತೆಯಿದೆ. ಈ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಪ್ರಭಾತ್ ಪೈ ಎಂಬವರಿಗೆ ಸೇರಿದ ಸರ್ವೆ ನಂಬ 1-20 0.39 ಎಕ್ರೆ ಜಾಗವಿದೆ. ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಜಾಗದ ದಾಖಲೆ, ದರಪಟ್ಟಿ ಕುರಿತ ಸಂಪೂರ್ಣ ಮಾಹಿತಿಯನ್ನು ಸೂಕ್ತ ವರದಿಯೊಂದಿಗೆ ಇಲಾಖಾ ಅನುಮತಿಗಾಗಿ ಸಲ್ಲಿಸಿದ್ದಾರೆ ಎಂದು ಶಾಸಕರು ಮನವಿಯಲ್ಲಿ ತಿಳಿಸಿದ್ದು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರುಭಾಗದ ಈಶಾನ್ಯ ದಿಕ್ಕಿನಲ್ಲಿರುವ ಜಾಗವನ್ನು ಖರೀದಿಸಲು ಇಲಾಖೆ ಅನುವು ಮಾಡಿಕೊಡಬೇಕೆಂದು ಶಾಸಕರು ಸಚಿವರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ.
ಹೆಚ್ಚುವರಿ ಬಸ್, ಚಾಲನಾ ಸಿಬಂದಿ ಮತ್ತು ತಾಂತ್ರಿಕ ಸಿಬಂದಿ ನೇಮಕ ಮಾಡಲು ಮನವಿ
Ksrtc ಪುತ್ತೂರು ಡಿಪೋಗೆ ಹೆಚ್ಚುವರಿ ಬಸ್ಸು, ಚಾಲನೆ ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.
ಈ ಹಿಂದೆ ಪುತ್ತೂರು ಘಟಕ ವ್ಯಾಪ್ತಿಯಲ್ಲಿ ಸರಕಾರಿ ಬಸ್ಸುಗಳ ಕೊರತೆ ಇರಲಿಲ್ಲ. ಇದರಿಂದ ಗ್ರಾಮೀಣ ಭಾಗದ ಜನರಿಗೆ, ವಿದ್ಯಾರ್ಥಿಗಳಿಗೆ ಮತ್ತು ಕಾರ್ಮಿಕರಿಗೆ ತುಂಬಾ ಪ್ರಯೋಜನವಾಗುತ್ತಿತ್ತು ಆದರೆ ಕೋವಿಡ್ ಲಾಕ್ಡೌನ್ ನಂತರ ಬಸ್ಸುಗಳ ಓಡಾಟವನ್ನು ಕಡಿತಗೊಳಿಸಿರುವ ಕಾರಣ ಗ್ರಾಮೀಣ ಭಾಗದಲ್ಲಿ ಬಸ್ಸುಗಳ ಕೊರತೆ ಇದೆ. ಪುತ್ತೂರು ವಿಧಾನಸಭಾ ವ್ಯಾಪ್ತಿಯ ಬಹುತೇಕ ಗ್ರಾಮೀಣ ಭಾಗಗಳಲ್ಲಿ ಬಸ್ಸುಗಳ ಕೊರತೆಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಬಸ್ಸುಗಳಲ್ಲಿ ಚಾಲನಾ ಸಿಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗಳ ಕೊರತೆಯೂ ಇದ್ದು . ಹೆಚ್ಚಿನ ಚಾಲಕರು ಮತ್ತು ಸಿಬಂದಿಗಳು ವರ್ಗಾವಣೆಯಾಗಿ ಬೇರೆಡೆಗೆ ತೆರಳಿದ್ದು ಇದರಿಂದಾಗಿ ಪುತ್ತೂರು ಡಿಪೋದಲ್ಲಿ ತೀವ್ರತರದ ಆಡಳಿತಾತ್ಮಕ ಸಮಸ್ಯೆಗಳು ಉಂಟಾಗಿದ್ದು . ಪುತ್ತೂರು ಡಿಪೋಗೆ ಸಲ್ಲಿಸಲಾಗಿದ್ದ ಬೇಡಿಕೆಯನ್ನು ಪರಿಗಣಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ಸಚಿವರಿಗೆ ಶಾಸಕರು ಮನವಿ ಮಾಡಿದ್ದಾರೆ.
ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ ಶಾಸಕರು ಮನವಿ ಸಲ್ಲಿಸಿದ್ದಾರೆ.
Posted by Vidyamaana on 2024-01-05 21:23:18 |
ಪುತ್ತೂರು: ಅಕ್ರಮ ಮಧ್ಯ ಮಾರಾಟ ಮಾಡಿದ್ದಾರೇ ಎನ್ನಲಾದ ಪ್ರಕರಣದ ಆರೋಪಿ ಆಶೋಕ್ ಸುವರ್ಣ ರವರನ್ನು ಮಾನ್ಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಸದ್ರಿ ಪ್ರಕರಣದಿಂದ ಖುಲಾಸೆ ಮಾಡಿರುತ್ತದೆ.
ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ನ್ಯೂ ಜನತಾ ಕಾಲೋನಿಯಲ್ಲಿರುವ ಆಶೋಕ್ ಸುವರ್ಣ ಎಂಬವರಿಗೆ ಸೇರಿದ ಮನೆಯ ಒಳಗಡೆ ಅಡಿಗೆ ಕೋಣೆಯಲ್ಲಿ 2 ಗುಂಡಿಗಳನ್ನು ತೆಗೆದು ಅದರ ಒಳಗೆ ಅಕ್ರಮವಾಗಿ ಮಧ್ಯದ ಬಾಟಲಿಗಳನ್ನು ಇಟ್ಟು ಟೈಲ್ಸ್ ಮುಚ್ಚಿರುವುದನ್ನು ಹಾಗೂ ನೈಲಾನ್ ಚೀಲದಲ್ಲಿ ಮಧ್ಯದ ಬಾಟಲಿಗಳನ್ನು ಇಟ್ಟಿರುವುದನ್ನು ಪತ್ತೆ ಹಚ್ಚಿದ್ದು, ಸೊತ್ತುಗಳನ್ನು ವಶಕ್ಕೆ ತೆಗೆದೆಕೊಂಡು ಈ ನಿಟ್ಟಿನಲ್ಲಿ ದೂರು ದಾಖಲಿಸಿಕೊ0ಡ ಅಬಕಾರಿ ಪೊಲೀಸರು ಆಶೋಕ್ ಸುವರ್ಣರವರನ್ನು ಬ0ಧಿಸಿದ್ದರು ಹಾಗೂ ಅವರ ಮೇಲೆ ಕೇಸು ದಾಖಲಿಸಿದ್ದರು ಹಾಗೂ ನ್ಯಾಯಾಲಯಕ್ಕೆ ಅ0ತಿಮ ವರದಿಯನ್ನು ಸಲ್ಲಿಸಿದ್ದರು.
ಹೀಗಿರುವಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ಹ0ತ ಹ0ತವಾಗಿ ತನಿಖೆಗೆ ಕೈಗೆತ್ತಿಕೊ0ಡು ಹಾಗೂ ಪ್ರೋಸಿಕ್ಯೂಷನ್ ಸುಮಾರು 7 ಸಾಕ್ಷಿಗಳನ್ನು ತನಿಖೆ ನಡೆಸಿ ಮತ್ತು 8 ದಾಖಲೆಗಳನ್ನು ಹಾಗೂ ಸುಮಾರು 27 ಮುದ್ದೆ ಮಾಲುಗಳನ್ನು ಪರಿಶೀಲಿಸಿ, ಪ್ರೋಸಿಕ್ಯೂಷನ್ ಈ ಪ್ರಕರಣವನ್ನು ಸ0ಶಯಾತೀತವಾಗಿ ಸಾಭೀತುಪಡಿಸಲು ವಿಫಲವಾಗಿದೆ ಎ0ದೂ ತೀರ್ಮಾನಿಸಿ, ಆರೋಪಿಯನ್ನು ನಿರಪರಾದಿಯೆಂದು ಬಿಡೂಗಡೆಗೊಳಿಸಲು ಮಾನ್ಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧಿಶರಾದ ಶ್ರೀಯುತ ಶಿವಣ್ಣ ಹೆಚ್ ಆರ್ ರವರು ಆದೇಶಿಸಿರುತ್ತಾರೆ.
ಆರೋಪಿಯ ಪರವಾಗಿ ಹಿರಿಯ ವಕೀಲರಾದ ಕಜೆ ಲಾ ಚೇಂಬರ್ಸ್ನ ಶ್ರೀ.ಮಹೇಶ್ ಕಜೆಯವರು ವಾದಿಸಿದ್ದರು.
Posted by Vidyamaana on 2023-05-13 08:01:56 |
ಪುತ್ತೂರು: ರಾಜ್ಯದ ಗಮನ ಸೆಳೆದಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಶೋಕ್ ಕುಮಾರ್ ರೈ 3351ಮತಗಳಿಂದ ಜಯಭೇರಿ ಭಾರಿಸಿದ್ದಾರೆ.
ಜನಮತಗಣನೆಯಲ್ಲಿ ಮುನ್ನಡೆ ಸಾಧಿಸಿರುವ ಅಶೋಕ್ ಕುಮಾರ್ ರೈ ಅವರು, ಶಾಸಕರಾಗಿ ಆಯ್ಕೆಯಾಗಿದ್ದಾರೆ. ನಿರೀಕ್ಷೆಯಂತೆ, ಪುತ್ತೂರಿನಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ.
ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ನಡುವಿನ ಪೈಪೋಟಿಯ ಲಾಭವನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡಿದೆ. ಬಿಜೆಪಿಯ ಮತಗಳು ವಿಭಜನೆಗೊಂಡಿದ್ದು ಹಾಗೂ ಕಾಂಗ್ರೆಸ್ ಒಗ್ಗಟ್ಟಿನಿಂದ ಮುನ್ನುಗ್ಗಿದ್ದರಿಂದ ಗೆಲುವಿನ ಪತಾಕೆ ಹಾರಿಸಲು ಸಾಧ್ಯವಾಯಿತು. ಅಶೋಕ್ ಕುಮಾರ್ ರೈ ಅವರ ಮುಂದಾಳುತ್ವ ಕಾಂಗ್ರೆಸಿಗೆ ವರದಾನವಾಗಿದೆ.
Posted by Vidyamaana on 2024-05-03 22:21:22 |
ಮಡಿಕೇರಿ: ಅತ್ತೆಯನ್ನು ಸೊಸೆಯೇ ಹತ್ಯೆ ಮಾಡಿದ ನಿಗೂಢ ರಹಸ್ಯಕಾರಿ ಸಿನಿಮಾ ಮಾದರಿ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಸಹಜ ಸಾವು ಎಂದು ನಂಬಲಾಗಿದ್ದ ಪ್ರಕರಣ ತಿರುವು ಪಡೆದುಕೊಂಡು ಕೊಲೆ ಎಂಬುದು ಬಯಲಾಗಿ ಆರೋಪಿತೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಪೂವಮ್ಮ (73) ಎಂಬವರನ್ನು ಹತ್ಯೆ ಮಾಡಲಾಗಿದ್ದು, ಕೊಲೆ ಆರೋಪದಲ್ಲಿ ಸೊಸೆ ಬಿಂದು (26) ಎಂಬಾಕೆಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಳಕಿಗೆ ಬಂದಿದ್ದು ಹೇಗೆ?
ಪೂವಮ್ಮ ಅವರ ಪುತ್ರ ಶಿಕ್ಷಕರಾಗಿರುವ ಪ್ರಸನ್ನ, ಪತ್ನಿ ಬಿಂದು ಮತ್ತು ಒಂದು ವರ್ಷದ ಪುತ್ರಿಯೊಂದಿಗೆ ವಾಸವಾಗಿದ್ದರು. ಅತ್ತೆ ಮತ್ತು ಸೊಸೆ ನಡುವೆ ತೀವ್ರ ಮನಸ್ತಾಪ ಇತ್ತು ಎಂದು ತಿಳಿದು ಬಂದಿದೆ.