ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಆಶೀರ್ವಾದ್ ಗಿಫ್ಟ್ ಸ್ಕೀಂನ ಡ್ರಾ ಫಲಿತಾಂಶ

Posted by Vidyamaana on 2024-05-28 12:59:39 |

Share: | | | | |


ಆಶೀರ್ವಾದ್ ಗಿಫ್ಟ್ ಸ್ಕೀಂನ ಡ್ರಾ ಫಲಿತಾಂಶ

ಪುತ್ತೂರು: ಇಲ್ಲಿನ ದರ್ಬೆ ಮೊಯಿದ್ದೀನ್ ಬಿಲ್ಡಿಂಗಿನಲ್ಲಿರುವ ಆಶೀರ್ವಾದ್ ಎಂಟರ್ ಪ್ರೈಸಸ್ ಗಿಫ್ಟ್ ಸ್ಕೀಂನ‌ ಡ್ರಾ ಫಲಿತಾಂಶದ ಬಹುಮಾನವನ್ನು ವಿಜೇತ ಗ್ರಾಹಕರಿಗೆ ಹಸ್ತಾಂತರಿಸಲಾಯಿತು.

ಪ್ರತಿ ತಿಂಗಳು 15ನೇ ತಾರೀಕಿನಂದು ಈ ಡ್ರಾ ಮಾಡಲಾಗುತ್ತದೆ. ಪಾರದರ್ಶಕತೆ ಹಾಗೂ ಗ್ರಾಹಕರಿಗೆ ನೇರ ವೀಕ್ಷಣೆಗೆ ಸುಲಭವಾಗುವ ನಿಟ್ಟಿನಲ್ಲಿ ಡ್ರಾದ ನೇರ ಪ್ರಸಾರ ವಿದ್ಯಮಾನದಲ್ಲಿ ನಡೆಯುತ್ತದೆ.

16ರ ಹುಡುಗನೊಂದಿಗೆ 32 ವರ್ಷದ ಮಹಿಳೆಯ ಲವ್.! ಮಗುವಿಗೆ ತಂದೆಯಾದ ಬಾಲಕ

Posted by Vidyamaana on 2024-01-14 16:08:02 |

Share: | | | | |


16ರ ಹುಡುಗನೊಂದಿಗೆ 32 ವರ್ಷದ ಮಹಿಳೆಯ ಲವ್.!   ಮಗುವಿಗೆ ತಂದೆಯಾದ ಬಾಲಕ

ಲಂಡನ್ : ಎರಡು ಮಕ್ಕಳ ತಾಯಿಯೊಂದಿಗೆ 16 ವರ್ಷದ ಪೋರನಿಗೆ ಲವ್ ಆಗಿದ್ದು, ಸದ್ಯ ಆತ 9 ತಿಂಗಳ ಮಗುವಿನ ತಂದೆಯಾಗಿದ್ದಾನೆ. ಇಂಗ್ಲೆಂಡಿನ ಡರ್ಹಾಮ್ ಸಿಟಿಯ 31 ವರ್ಷದ ಕ್ಯಾಥಲಿನ್ ಮಾರ್ಟಿನಾ ಮತ್ತು 16 ವರ್ಷದ ಜ್ಯಾಕ್ ಕುಸಾಯಿಲ್ ಇಬ್ಬರು ಸಹ ವಯಸ್ಸಿನ ಭೇದ ಮರೆತು ಪ್ರೇಮದ ಬಲೆಯಲ್ಲಿ ಸಿಲುಕಿದ ಜೋಡಿಗಳು.ಮಾರ್ಟಿನಾ ತನ್ನ ಪತಿಯಿಂದ ವಿಚ್ಚೇದನ ಪಡೆದಿದ್ದು, ಆ ವೇಳೆ ಆಕೆ 11 ವರ್ಷದ ಹಾಗು 3 ವರ್ಷದ ಎರಡು ಗಂಡು ಮಕ್ಕಳನ್ನು ಹೊಂದಿದ್ದಳು.ಫೇಸ್‍ಬುಕ್‍ನಲ್ಲಿಲವ್: ಪತಿಯ ವಿಚ್ಚೇದನ ಬಳಿಕ ಮಾರ್ಟಿನಾನಗೆ ಫೇಸ್‍ಬುಕ್‍ನಲ್ಲಿ ಜ್ಯಾಕ್‍ನ ಪರಿಚಯವಾಗಿದೆ. ಫೇಸ್‍ಬುಕ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರೂ ಚಾಟಿಂಗ್ ಮಾಡುತ್ತ ಸ್ನೇಹಿತರಾಗಿದ್ದಾರೆ. ಒಂದು ದಿನ ಮಾರ್ಟಿನಾ ತನ್ನ ಮನೆಯ ಗಾರ್ಡನ್ ಕೆಲಸಕ್ಕಾಗಿ ಜ್ಯಾಕ್‍ಗೆ ಸಹಾಯ ಕೇಳಿ ಮನೆಗೆ ಬರುವಂತೆ ಹೇಳಿದ್ಳು. ಅಂದು ಇಬ್ಬರೂ ಮೊದಲ ಭೇಟಿಯಾಗಿದ್ದಾರೆ. ಮುಂದೆ ಮಾರ್ಟಿನಾ ಮತ್ತು ಜ್ಯಾಕ್ ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ಬದಲಾಗಿತ್ತು.


ಮನೆಯಲ್ಲಿವಿರೋಧ: ಇಬ್ಬರ ಪ್ರೀತಿ ಐದು ತಿಂಗಳ ಆದ್ಮೇಲೆ ಜ್ಯಾಕ್ ತಾಯಿ ಇವರಿಬ್ಬರ ಪ್ರೀತಿಗೆ ತೀವ್ರ ವಿರೋಧ ವ್ಯಕ್ತಡಿಸಿದ್ದರು. ಜ್ಯಾಕ್ ತಾಯಿಯ ಪ್ರಕಾರ ತಮ್ಮ ಮಗ ಮಾರ್ಟಿನಾಳ ಅರ್ಧ ವಯಸ್ಸಿನವನಾಗಿದ್ದನು. ಈ ಹಿನ್ನೆಲೆಯಲ್ಲಿ ಜ್ಯಾಕ್‍ರ ತಾಯಿ ಇವರಿಬ್ಬರ ಸಂಬಂಧಕ್ಕೆ ವಿರೋಧಿಸಿದ್ದರು. ಕೊನೆಗೆ ಮಾರ್ಟಿನಾ 5 ತಿಂಗಳ ಗರ್ಭೀಣಿ ಎಂದು ತಿಳಿದಾಗ ಜ್ಯಾಕ್ ತಾಯಿ ಒಪ್ಪಿದ್ದಾರೆ. ಜ್ಯಾಕ್ ಈಗ 18 ವರ್ಷದವನಾಗಿದ್ದು, 9 ತಿಂಗಳು ಮಗನ ತಂದೆಯಾಗಿದ್ದಾನೆ.

ಸ್ನಾನ ಮಾಡುತ್ತಿದ್ದ ಯುವತಿಯರ ವಿಡಿಯೋ ಚಿತ್ರೀಕರಣ: ಕುಂದಾಪುರ ಮೂಲದ ರಘುರಾಮ್ ಬಂಧನ

Posted by Vidyamaana on 2023-05-25 09:34:57 |

Share: | | | | |


ಸ್ನಾನ ಮಾಡುತ್ತಿದ್ದ ಯುವತಿಯರ ವಿಡಿಯೋ ಚಿತ್ರೀಕರಣ: ಕುಂದಾಪುರ ಮೂಲದ ರಘುರಾಮ್ ಬಂಧನ

ಬೆಂಗಳೂರು: ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದುಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಕುಂದಾಪುರ ಮೂಲದ ಆರೋಪಿಯನ್ನು ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.ಪಶ್ಚಿಮ ಬಂಗಾಳ ಮೂಲದ 22 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಕುಂದಾಪುರ ಮೂಲದ ರಘುರಾಮ್‌ ಎಂಬಾತನನ್ನು ಬಂಧಿಸಲಾಗಿದೆ.ನಿಸರ್ಗ ಗಾರ್ಡನ್‌ನಲ್ಲಿ ಕ್ಯಾಟರಿಂಗ್‌ ನಡೆಸುತ್ತಿದ್ದ ರಘುರಾಮ್‌, ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ಬಾಗ್‌ ಮನೆ ಟೆಕ್‌ಪಾರ್ಕ್‌ ಹಾಗೂ ಮತ್ತಿತರ ಕಡೆಗಳಿಗೆ ಕ್ಯಾಟರಿಂಗ್‌ ವ್ಯವಸ್ಥೆ ಕಲ್ಪಿಸುತ್ತಿದ್ದ. ಸಂತ್ರಸ್ತೆ ಕ್ಯಾಟರಿಂಗ್‌ ನ ಕ್ಯಾಷಿಯರ್‌ ಆಗಿದ್ದರೆ, ಆಕೆಯ ಸ್ನೇಹಿತೆ ಕೌಂಟರ್‌ ಮ್ಯಾನೇಜರ್‌ ಆಗಿದ್ದರು. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತೆ ಹಾಗೂ ಆರೋಪಿ ರಘುರಾಮ್‌ ನಿಸರ್ಗ ಗಾರ್ಡನ್‌ನಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಮೇ 12ರಂದು ದೂರುದಾರೆ ಸ್ನಾನ ಮಾಡಲು ಬಾತ್‌ ರೂಮಿಗೆ ಹೋಗಿದ್ದು, ಆಗ ಆರೋಪಿಯು ಬಾತ್‌ ರೂಮಿನ ಗೋಡೆಯ ಮೇಲಿನಿಂದ ಆಕೆ ಸ್ನಾನ ಮಾಡುವ ದೃಶ್ಯವನ್ನು ಚಿತ್ರೀಕರಿಸುತ್ತಿದ್ದ. ಅದನ್ನು ಗಮನಿಸಿದ ಆಕೆಯ ಸ್ನೇಹಿತೆ ಜೋರಾಗಿ ಕೂಗಿಕೊಂಡಿದ್ದಾಳೆ. ನಂತರ ಆರೋಪಿಯ ಮೊಬೈಲ್‌ ಕಸಿದುಕೊಂಡಾಗ ಇಬ್ಬರು ಯುವತಿಯರು ಸ್ನಾನ ಮಾಡುತ್ತಿರುವ ದೃಶ್ಯಗಳನ್ನು ಸೆರೆಹಿಡಿದು ಸಂಗ್ರಹಿಸಿಕೊಂಡಿರುವುದು ಪತ್ತೆಯಾಗಿದೆ.

ಈ ಬಗ್ಗೆ ಪ್ರಶ್ನಿಸಿದಾಗ, ‘ತಾನು ಹೇಳಿದಂತೆ ಕೇಳಬೇಕು, ತನ್ನೊಂದಿಗೆ ಲೈಂಗಿಕವಾಗಿ ಸಹಕರಿಸಬೇಕು. ಇಲ್ಲವಾದಲ್ಲಿ ವಿಡಿಯೋಗಳನ್ನು ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ’ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದರು

ಗಾಂಜಾ ನಶೆಯಲ್ಲಿ ಚೂರಿ ಹಿಡಿದು ರಸ್ತೆ ಮಧ್ಯೆ ಯುವಕನ ಧಾಂದಲೆ ! ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿದ ಕೊಣಾಜೆ ಪೊಲೀಸರು

Posted by Vidyamaana on 2023-08-20 09:45:26 |

Share: | | | | |


ಗಾಂಜಾ ನಶೆಯಲ್ಲಿ ಚೂರಿ ಹಿಡಿದು ರಸ್ತೆ ಮಧ್ಯೆ  ಯುವಕನ ಧಾಂದಲೆ ! ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿದ ಕೊಣಾಜೆ ಪೊಲೀಸರು

ಉಳ್ಳಾಲ: ಅಮಲು ಪದಾರ್ಥ ಸೇವಿಸಿ ನಶೆಯಲ್ಲಿ ತೇಲುತ್ತಿದ್ದ ಯುವಕನೋರ್ವ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನನ್ನ ಸಿನಿಮೀಯ ರೀತಿಯಲ್ಲಿ ಲಾಕ್ ಮಾಡಿ ಜೈಲಿಗಟ್ಟಿದ್ದಾರೆ. 


ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್(24) ಬಂಧಿತ ಯುವಕ. ನಿನ್ನೆ ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಅಮಲು ಪದಾರ್ಥ ಸೇವಿಸಿ ನಶೆಯಲ್ಲಿದ್ದ ಸಿದ್ಧೀಕ್ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಯಾರೋ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕನ್ನ ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕನ್ನ ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನ ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


ಪ್ರಿಯತಮೆ ಕೈ ಕೊಟ್ಟಿದ್ದಕ್ಕೆ ಚುಚ್ಚಿಕೊಂಡು ಸಾವನ್ನಪ್ಪಿದ ಭಗ್ನ ಪ್ರೇಮಿ ಚೇತನ್

Posted by Vidyamaana on 2024-03-09 17:19:42 |

Share: | | | | |


ಪ್ರಿಯತಮೆ ಕೈ ಕೊಟ್ಟಿದ್ದಕ್ಕೆ ಚುಚ್ಚಿಕೊಂಡು ಸಾವನ್ನಪ್ಪಿದ ಭಗ್ನ ಪ್ರೇಮಿ ಚೇತನ್

ಬೆಂಗಳೂರು : ತನ್ನ ಪ್ರಿಯತಮೆ ಕೈ ಕೊಟ್ಟಿದ್ದಾಳೆಂಬ ಕಾರಣಕ್ಕೆ ಪ್ರಿಯಕರನೊಬ್ಬ ಆಯುಧದಿಂದ ಚುಚ್ಚಿಕೊಂಡು ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಇಲ್ಲಿಯ ನಂದಿನ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ಮೂಲದ ಚೇತನ್ (21) ಸಾವನ್ನಪ್ಪಿದ ದುರ್ದೈವಿ. ಯುವತಿ ಹಾಗೂ ಚೇತನ್ ಮಧ್ಯೆ ಕಳೆದ ಲವ್ ಆಗಿತ್ತು.ಆದರೆ, ಈ ವಿಷಯ ಯುವತಿಯ ಕಡೆಯವರಿಗೆ ಗೊತ್ತಾಗಿತ್ತು. ಆದರೆ, ಯುವತಿಯ ಚಿಕ್ಕಪ್ಪ ಚೇತನ್ ಜೊತೆ ಮದುವೆಗೆ ಒಪ್ಪಿರಲಿಲ್ಲ.

ಹೀಗಾಗಿ ಯುವತಿ, ಮನೆಯಲ್ಲಿ ಒಪ್ಪುತ್ತಿಲ್ಲ. ನೀನು ಬೇರೆ ಮದುವೆಯಾಗು ಎಂದು ಹೇಳಿದ್ದಾರೆ. ಇದರಿಂದಾಗಿ ಮನನೊಂದು ಭಗ್ನ ಪ್ರೇಮಿ, ಮನನೊಂದು ಮನೆ ಬಿಟ್ಟಿದ್ದಾನೆ. ನಂತರ ಹುಡುಗಿ ಮನೆ ಬಲಿ ಹೋಗಿ ಹುಡುಗಿ ಸಿಗದಿದ್ದರೆ ಸಾಯುವುದಾಗಿ ಹೇಳಿದ್ದಾನೆ. ಯುವತಿ ಕಡೆಯವರು ಇದನ್ನು ಆತನ ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಬಂದು ಪೋಷಕರು ನೋಡುವಷ್ಟರಲ್ಲಿ ಆತ ಆಟೋದಲ್ಲಿ ಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

Posted by Vidyamaana on 2024-02-07 14:55:35 |

Share: | | | | |


ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪ್ರತಿಭಟನೆ

ದೆಹಲಿ: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಮಲತಾಯಿ ಧೋರಣೆಯನ್ನು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ.



ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಫಲಕಗಳನ್ನು ಶಾಸಕರು ಸಂಸದರು ಪ್ರದರ್ಶಿಸುವ ಮೂಲಕ ಗಮನ ಸೆಳೆದರು.



Leave a Comment: