Posted by vidyamaana on 2024-07-03 08:24:56 |
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
ವರ್ಗಾವಣೆಗೊಂಡ ಕೆಎಎಸ್ ಅಧಿಕಾರಿಗಳು
ಡಾ. ಜಗದೀಶ್ ಕೆ. ನಾಯಕ್
ರಘುನಂದನ್ ಎ.ಎನ್
ಪ್ರಸನ್ನ ಕುಮಾರ್ ವಿ.ಕೆ
ಹುಲ್ಲುಮನಿ ತಿಮ್ಮಣ್ಣ
ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳು
ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ
ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ
ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ
ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ
ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ
ಸುಮನ್ ಡಿ. ಪೆನ್ನೇಕರ್ -ಎಸ್ ಪಿ, ಬಿಎಂಟಿಎಫ್
ಸಿ.ಬಿ. ರಿಷ್ಯಂತ್ -ಎಸ್.ಪಿ
ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ
ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ
ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ
ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.
ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್
ಪ್ರದೀಪ್ ಗುಂಡಿ - ಎಸ್ ಪಿ. ಬೀದರ್ ಜಿಲ್ಲೆ
ಯತೀಶ್ ಎನ್. - ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ
ಮಲ್ಲಿಕಾರ್ಜುನ ಬಾಲದಂಡ ಎಸ್ ಪಿ ಮಂಡ್ಯ ಜಿಲ್ಲೆ
ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ
ಬಿ. ನಿಖಿಲ್ ಎಸ್ ಪಿ ಕೋಲಾರ ಜಿಲ್ಲೆ
Posted by Vidyamaana on 2023-06-19 11:25:58 |
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೂಪರ್ ಸ್ಪೆಷಾಲಿಟಿ ರೋಟರಿ ಕಣ್ಣಿನ ಆಸ್ಪತ್ರೆ ಜೂ.21 ಬುಧವಾರ ರೋಟರಿ ಬ್ಲಡ್ಕ ಬ್ಯಾಂಕ್ ಕಟ್ಟಡದ ತಳ ಅಂತಸ್ತಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆಯ ಚೆಯರ್ ಮ್ಯಾನ್ ಡಾ.ಭಾಸ್ಕರ ಎಸ್. ತಿಳಿಸಿದ್ದಾರೆ.
ಜೂ 19 ರಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 2500 ಚದರ ಅಡಿ ವಿಸ್ತೀರ್ಣ ದಲ್ಲಿ ಆಸ್ಪತ್ರೆ ಕಾರ್ಯಾಚರಿಸಲಿದ್ದು, ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಈಗಾಗಲೇ ಉಡುಪಿ ಪ್ರಸಿದ್ಧ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯ ಅವರೊಂದಿಗೆ ಒಪ್ಪಂದ ಮಾಡಲಾಗಿದೆ ಎಂದು ತಿಳಿಸಿದರು.
ರೋಟರಿ ಸಂಸ್ತೆಯೊಂದಿಗೆ ದಿ ರೋಟರಿ ಫೌಂಡೇಶನ್ ಜರ್ಮನಿಯ ಪಾಸ್ ಪೋರ್ಟ್ಕ್ಲಬ್, ಅಮೇರಿಕಾದ ಫ್ಲೋರಿಡಾದ ಟೆಂಪನೋನ್ ಕ್ಲಬ್, ರೋಟರಿ ಜಿಲ್ಲೆ 3180, 3150, ರೋಟರಿ ಕ್ಲಬ್ ಪುತ್ತೂರು ಸಿಟಿ, ಇನ್ನರ್ ವೀಲ್ ಕ್ಲಬ್ ಪಾಲುದಾರರಾಗಿ ಸೇರಿಕೊಂಡಿದ್ದಾರೆ. ಈ ಕಣ್ಣಿನ ಆಸ್ಪತ್ರೆ ಅತ್ಯಾಧುನಿಕ ಮೋಡ್ಯುಲರ್ ಒ.ಟಿ ಯನ್ನು ಹೊಂದಿದ್ದು, ಎಲ್ಲಾ ರೀತಿಯ ಆಧುನಿಕ ಮತ್ತು ಸುಸಜ್ಜಿತ ಸೌಲಭ್ಯಗಳನ್ನು ಹೊಂದಿದ್ದು, ರೋಟರಿ ಕ್ಲಬ್ಗಳು ನಡೆಸುವ ಕಣ್ಣಿನ ಶಿಬಿರದಲ್ಲಿ ಪಾಲ್ಗೊಂಡವರಿಗೆ ಉಚಿತವಾಗಿ ತಪಾಸಣೆ, ಚಿಕಿತ್ಸೆಗಳನ್ನು ನಡೆಸಲಾಗುವುದು. ಅಪೇಕ್ಷೆ ಪಟ್ಟ ರೋಗಿಗಳಿಗೆ ಪಾವತಿ ಆಧಾರಿತ ಸೇವೆಗಳನ್ನೂ ಒದಗಿಸಲಾಗುವುದು. ಮುಂದಿನ ಒಂದೂವರೆ ತಿಂಗಳಲ್ಲಿ ಆಸ್ಪತ್ರೆ ಸೇವೆಗೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.ಆಸ್ಪತ್ರೆಯ ಉದ್ಘಾಟನೆಯನ್ನು ರೋಟರಿ ಅಂತರಾಷ್ಟ್ರೀಯ ನಿರ್ದೇಶಕ ಮಹೇಶ್ ಕೋಟ್ ಬಾಗಿ ನೆರವೇರಿಸಲಿದ್ದು, ಬಳಿಕ ಮಹಾವೀರ ವೆಂಚುರ್ನಲ್ಲಿ ನಡೆಯುವ ಸಮಾರಂಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದೀಪ ಬೆಳಗಿಸಲಿದ್ದಾರೆ. ರೋಟರಿ ಜಿಲ್ಲಾ 3181 ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಮೋಡ್ಯುಲರ್ ಒಟಿಯನ್ನು ಉದ್ಘಾಟಿಸುವರು. ವಿಶ್ವ ರೋಟರಿ ನ್ಯಾಷನಲ್ ರೋಟರ್ಯಾಕ್ಟ್ ಚೆಯರ್ ಮ್ಯಾನ್ ರವಿ ವದೈಮಾಣಿ ಡೇ ಕೇರ್ ಸೆಂಟರನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ರೋಟರಿ ಫೌಂಡೇಶನ್ ಚೆಯರ್ ಮ್ಯಾನ್ ಡಾ.ಕೆ.ಸೂರ್ಯನಾರಾಯಣ, ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಕೆ., ರೋಟರಿ ಜಿಲ್ಲಾ 3181 ವಲಯದ ಎ.ಜಗಜೀವನ್ ದಾಸ್ ರೈ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಚೆಯರ್ ಮ್ಯಾನ್ ಉಮಾನಾಥ್ ಪಿ.ಬಿ., ಕಾರ್ಯದರ್ಶಿ ಡಾ.ಶ್ರೀಪ್ರಕಾಶ್, ಪ್ರಸಾದ್ ನೇತ್ರಾಲಯದ ಡಾ. ವಿಕ್ರಂ ಜೈನ್, ಝೇವಿಯರ್ ಡಿ’ಸೋಜಾ ಉಪಸ್ಥಿತರಿದ್ದರು
Posted by Vidyamaana on 2024-06-19 11:31:50 |
ನವದೆಹಲಿ : ಎಟಿಎಂ ಬಳಸುವ ಗ್ರಾಹಕರಿಗೆ ಎಟಿಎಂ ಇಂಡಸ್ಟ್ರೀ ಒಕ್ಕೂಟ (CATMI) ಬಿಗ್ ಶಾಕ್ ನೀಡಿದ್ದು, ಎಟಿಎಂನಿಂದ ನಗದು ಹಿಂಪಡೆಯುವಿಕೆಗೆ ವಿನಿಮಯ ಶುಲ್ಕವನ್ನು ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ನ್ಯಾಷನಲ್ ಪೇಮೆಂಟ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ (NPCI) ಗೆ ಮನವಿ ಮಾಡಿದೆ.
ಜುಲೈ 1 ರಿಂದ ಎಟಿಎಂನಿಂದ ಹಣವನ್ನು ಹಿಂಪಡೆಯುವುದು ದುಬಾರಿಯಾಗಲಿದೆ. ಭಾರತದಲ್ಲಿ ಹೆಚ್ಚಿನ ಜನರು ಹಣವನ್ನು ವಿತ್ ಡ್ರಾ ಮಾಡಲು ಎಟಿಎಂ ಬಳಸುತ್ತಾರೆ ಆದರೆ ಜುಲೈ 1 ರಿಂದ ಬ್ಯಾಂಕ್ ಶಾಖೆಯಿಂದ ಹಣವನ್ನು ಹಿಂಪಡೆಯುವುದು ದುಬಾರಿಯಾಗಲಿದೆ.
ಏಕೆಂದರೆ ಎಟಿಎಂ ನಿರ್ವಾಹಕರು ಶುಲ್ಕವನ್ನು ಹೆಚ್ಚಿಸಲು ಒತ್ತಾಯಿಸುತ್ತಿದ್ದಾರೆ. ಎಟಿಎಂ ನಿರ್ವಾಹಕರು ಇಂಟರ್ಚೇಂಜ್ ಶುಲ್ಕವನ್ನು ಹೆಚ್ಚಿಸಲು ಒತ್ತಾಯಿಸಿದ್ದಾರೆ. ಇಂಟರ್ಚೇಂಜ್ ಶುಲ್ಕವು ಎಟಿಎಂಗಳಿಂದ ಹಣವನ್ನು ಹಿಂಪಡೆಯುವಾಗ ಗ್ರಾಹಕರು ಪಾವತಿಸುವ ಶುಲ್ಕವಾಗಿದೆ. ಇದರ ಶುಲ್ಕವನ್ನು ಹೆಚ್ಚಿಸಿದರೆ, ಎಟಿಎಂಗಳಿಂದ ಹಣವನ್ನು ಹಿಂಪಡೆಯುವ ಗ್ರಾಹಕರು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Posted by Vidyamaana on 2023-07-25 09:59:16 |
ಮಂಗಳೂರು: ಮಂಗಳೂರು ಹಾಗೂ ಆಸುಪಾಸು ವಾಹನ ಕದಿಯುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ತಂಡ ಯಶಸ್ವಿಯಾಗಿದೆ.
ಆರೋಪಿಯನ್ನು ಮಹಮ್ಮದ್ ಶಫೀಕ್ ಯಾನೆ ಶಫೀಕ್ ಎಂದು ಗುರುತಿಸಲಾಗಿದೆ. ಈತ ಕಳವುಗೈದ ವಾಹನಗಳ ಮೊತ್ತು ಸುಮಾರು 15.50 ಲಕ್ಷ ರೂ. ಮೌಲ್ಯ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಘಟನೆಯ ವಿವರ:
2023ರ ಜುಲೈ 12ರಂದು ರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟಿನ ಕಾರ್ ಮಾರ್ಟ್ `ಎಂಬ ಹೆಸರಿನ ಹಳೆಯ ವಾಹನಗಳ ಖರೀದಿ ಮತ್ತು ಮಾರಾಟದ ಶೋರಂಗ ದ್ವಿ ಚಕ್ರದಲ್ಲಿ ಬಂದ ಕಳ್ಳರು ಶೋರೂಂನ ಕಛೇರಿಯ ಗ್ಲಾಸ್ ನ ಡೋರನ್ನು ಸುತ್ತಿಗೆಯಿಂದ ಜಖಂಗೊಳಿಸಿ ಸಂಪೂರ್ಣ ಪುಡಿ ಮಾಡಿ ಒಳಪ್ರವೇಶಿಸಿ ಕಛೇರಿಯೊಳಗೆ ಟೇಬಲ್ ಮೇಲೆ ಇದ್ದ ಒನ್ ಪ್ಲಾಸ್ ಮೊಬೈಲ್ ಫೋನ್ HP ಕಂಪೆನಿಯ ಲ್ಯಾಪ್ ಟಾಪ್ ಹಾಗೂ HP ಕಂಪಿನಿಯ ಪ್ರಿಂಟರ್ ಹಾಗೂ ಶೋರೂಂನ ಪಾರ್ಕ ನಲ್ಲಿ ನಿಲ್ಲಿಸಿದ ಕ್ರೆಟಾ ಹಾಗೂ ಸ್ವಿಫ್ಟ್ ಕಾರನ್ನು ಕಳವು ಮಾಡಿದ್ದರು. ಈ ಬಗ್ಗೆ ಕಾರ್ ಮಾರ್ಟ್ ಮಾಲಕರಾದ ಅಬೀದ್ ಅಹಮ್ಮದ್ ಸೂರಲ್ಪಾಡಿ ಅವರು ದೂರು ನೀಡಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಯ ಬಂಧನ, ಸೊತ್ತು ವಶ:
ಜುಲೈ 22ರಂದು ಅಪ್ರಾಪ್ತ ಬಾಲಕನಿಂದ ಕಳವಾದ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಆತ ನೀಡಿದ ಮಾಹಿತಿಯಂತೆ ಮಂಗಳೂರು ತಾಲೂಕಿನ ಕಿನ್ನಿಪದವು ನಿವಾಸಿ ಸುಮಾರು 21 ವರ್ಷದ ಮಹಮ್ಮದ್ ಶಫೀಕ್ ಯಾನೆ ಶಫೀಕ್ ಎಂಬಾತನು ದ್ವಿ ಚಕ್ರದಲ್ಲಿ ಬರುವಾಗ ಮರಕಡ ಬಸ್ ನಿಲ್ದಾಣದ ಬಳಿ ಬಂಧಿಸಿ, ಆತನು ತೋರಿಸಿಕೊಟ್ಟಂತ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿಯಲ್ಲಿ ಕ್ರೆಟಾ ಕಾರನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸುತ್ತಿಗೆ, ಕೃತ್ಯದ ಸಮಯ ತಲೆಗೆ ದರಿಸಿ, ಹೆಲೈಟ್ ಮೈ ಮೇಲೆ ಧರಿಸಿದ ರೈನ್ ಕೋಟ್, ಕೈಗೆ ಧರಿಸಿದ ಗೌಸ್, ಮುಖಕ್ಕೆ ಹಾಕಿದ ಮಾಸ್ಕ್ ನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಮಹಮ್ಮದ್ ಶಫೀಕ್ ಯಾನೆ ಶಫೀಕ್ ಒಂದು ವರ್ಷದ ಹಿಂದೆ ಮೂಡಬಿದ್ರಿ ಠಾಣಾ ವ್ಯಾಪ್ತಿಯ ಹೆಸರುಗದ್ದೆ ಎಂಬಲ್ಲಿ ಮನೆಯಿಂದ ಕಳತನ ಮಾಡಿದ ದ್ವಿ ಚಕ್ರ ವಾಹನವನ್ನು ಇದೇ ಸಂದರ್ಭ ಆತನಿಂದ ವಶಪಡಿಸಿಕೊಳ್ಳಲಾಯಿತು ಎಂದು ಹೇಳಲಾಗಿದೆ.
ಪೊಲೀಸ್ ತಂಡ:
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತರಾದ ಅಂಶು ಕುಮಾರ್ ಮತ್ತು ಬಿ.ಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ನಾಯ್ಕ ಅವರ ಮಾರ್ಗದರ್ಶನದಲ್ಲಿ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ತಂಡದಲ್ಲಿ ಪಿಎಸ್ಐಗಳಾದ ರಘು ನಾಯಕ್, ಅರುಣ್ ಕುಮಾರ್, ಎಎಸ್ಐ, ತಾರನಾಥ ಹೆಡ್ ಕಾನ್ಸಟೇಬಲ್ ಗಳಾದ ಅಣ್ಣಪ್ಪ, ಉಮೇಶ್, ಕಾನ್ಸಟೇಬಲ್ ಗಳಾದ ಕಾರ್ತೀಕ್, ಸುನೀಲ್, ಮಂಜುನಾಥ, ನಾಗರಾಜ ಇದ್ದರು.
Posted by Vidyamaana on 2023-07-27 15:43:28 |
ಬೆಂಗಳೂರು : ಸನ್ನಡತೆ ಆಧಾರದ ಮೇಲೆ ವಿವಿಧ ಕಾರಾಗೃಹದಲ್ಲಿರುವ ಸುಮಾರು 67 ಕೈದಿಗಳನ್ನು ಬಿಡುಗಡೆ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.ಬೆಂಗಳೂರು ಕೇಂದ್ರ ಕಾರಾಗೃಹದ 24 ಕೈದಿಗಳು, ಮೈಸೂರಿನ 8, ಬೆಳಗಾವಿ 2, ಕಲಬುರ್ಗಿ 5 ಶಿವಮೊಗ್ಗ 6 ಬಳ್ಳಾರಿ ಜೈಲಿನ 8 ಕೈದಿಗಳು ಹಾಗೂ ಧಾರವಾಡ ಜಿಲ್ಲಾ ಕಾರಾಗ್ರಹದ ಇಬ್ಬರು ಕೈದಿಗಳ ಬಿಡುಗಡೆ ಸಂಪುಟ ಸಭೆ ತೀರ್ಮಾನಿಸಿದೆ.ಅಲ್ಲದೆ ಸಚಿವ ಸಂಪುಟ ಸಭೆಯಲ್ಲಿ 15 ಪ್ರಮುಖ ವಿಷಯಗಳು ಬಗ್ಗೆ ಚರ್ಚೆ ಮಾಡಲಾಗಿದೆ
Posted by Vidyamaana on 2024-05-11 10:16:42 |
ಮೈಸೂರು:ಮೈಸೂರಿನ ಕೆ.ಆರ್.ನಗರದ ವೃದ್ಧೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಪ್ರಕರಣ ದಾಖಲಾಗಿದೆ.
ಮೈಸೂರಿನ ಹುಣಸೂರು ತಾಲೂಕಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಯುವತಿಯ ಅಪಹರಣಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ರೇವಣ್ಣ ಅವರ ತಂದೆ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಈಗಾಗಲೇ ಬಂಧಿಸಲಾಗಿದೆ.
Posted by Vidyamaana on 2024-02-05 07:26:32 |
ಚೆನ್ನೈ : ತಮಿಳುನಾಡಿನ ಕಾಂಚೀಪುರಂನಲ್ಲಿ ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದು, 50 ಮೀಟರ್ ಎಳೆದೊಯ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ ಎಂದು indiatoday.in ವರದಿ ಮಾಡಿದೆ.ಮೃತಪಟ್ಟವರನ್ನು ಬಾಲಕ ಬಾಲಮುರುಗನ್ ಎಂದು ಗುರುತಿಸಲಾಗಿದೆ.ಅವರು ತಮ್ಮ ಸ್ನೇಹಿತ ರಮೇಶ್ ಜೊತೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಯ್ಯಂಗಾರ್ ಕಲಾಂ ಪ್ರದೇಶವನ್ನು ದಾಟುತ್ತಿದ್ದಂತೆ, ಎದುರು ದಿಕ್ಕಿನಿಂದ ಬಂದ ಎಸ್ಯುವಿ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸಿಸಿಟಿವಿ ಕ್ಯಾಮೆರಾದಲ್ಲಿ ಅಪಘಾತದ ವೀಡಿಯೊ ಸೆರೆಯಾಗಿದ್ದು, ಎಸ್ಯುವಿ ಕಾರು ದ್ವಿಚಕ್ರ ವಾಹನವನ್ನು ಸುಮಾರು 50 ಮೀಟರ್ಗಳವರೆಗೆ ಎಳೆದುಕೊಂಡು ಹೋಗಿರುವುದನ್ನು ತೋರಿಸಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಮುರುಗನ್ ಮತ್ತು ರಮೇಶ್ ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿತ್ತು. ಬಾಲಮುರುಗನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.ರಮೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.