ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಯತ್ನಾಳ್ ಒಬ್ಬ ದ್ವೇಷದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

Posted by Vidyamaana on 2023-12-07 13:15:26 |

Share: | | | | |


ಯತ್ನಾಳ್ ಒಬ್ಬ ದ್ವೇಷದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಾಳ್ ಒಬ್ಬ ದ್ವೇಷದ ರಾಜಕಾರಣಿ, ಮಹಾನ್ ಸುಳ್ಳುಗಾರ, ಚುನಾವಣೆ ಗೆಲ್ಲಲು ಈ ರೀತಿ ಮಾತಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಸಿಸ್ ನಂಟಿರುವ ಪೀರಾ ಮೌಲಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಬಿಜೆಪಿ ನಾಯಕ ಯತ್ನಾಳ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ಅವರ ಜೊತೆಗೆ ನನಗೆ ಬಹಳ ವರ್ಷಗಳ ಸಂಬಂಧ ಇದೆ. ಆಗೆಲ್ಲ ಯಾಕೆ ಅವರು ಸುಮ್ಮನಿದ್ದರು? ಪೀರಾ ಮೌಲಿ ಅವರು ಆರೋಪ ಸಾಬೀತು ಮಾಡಿ ಎಂದು ಹೇಳಿದ್ದಾರೆ.


ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ. ಈಗ ಆರೋಪ ಮಾಡುತ್ತಿರುವ ಯತ್ನಾಳ್, ಅವರದ್ದೇ ಸರ್ಕಾರ ಇದ್ದಾಗ ಏನು ಮಾಡ್ತಿದ್ರು? ಅವರು ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಪ್ರಯತ್ನ ಮಾಡಿದ್ದರು. ಎರಡೂ ಸಿಗಲಿಲ್ಲ ಅದಕ್ಕೆ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

WATCH VIDEO: ವೃದ್ಧ ತಂದೆಯ ಮುಖಕ್ಕೆ ಹೊಡೆದ ಪಾಪಿ ಮಗ, ನೀಚ ಕೃತ್ಯ ಸಿಸಿಟಿವಿಯಲ್ಲಿ ಸೆರೆ

Posted by Vidyamaana on 2024-04-29 13:35:21 |

Share: | | | | |


WATCH VIDEO: ವೃದ್ಧ ತಂದೆಯ ಮುಖಕ್ಕೆ ಹೊಡೆದ ಪಾಪಿ ಮಗ, ನೀಚ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸೋಷಿಯಲ್ ಮೀಡಿಯಾದಲ್ಲಿ ಬಹಳ ಆತಂಕಕಾರಿ ವೀಡಿಯೊ ವೈರಲ್ ಆಗಿದ್ದು, ಇದನ್ನು ನೋಡಿದ ಯಾರ ರಕ್ತವನ್ನು ಕುದಿಯುವಂತೆ ಮಾಡುತ್ತದೆ ಕೂಡ. ವೈರಲ್‌ ವಿಡಿಯೋದಲ್ಲಿ ಯುವಕನೊಬ್ಬ ತನ್ನ ವಯಸ್ಸಾದ ತಂದೆಯನ್ನು ಕ್ರೂರವಾಗಿ ಹೊಡೆಯುವುದನ್ನು ಕಾಣಬಹುದು. ಮಗ ತನ್ನ ತಂದೆಯ ಮುಖಕ್ಕೆ ಹೊಡೆದ ರೀತಿಯನ್ನು ನೋಡಿದರೆ, ನೀವು ಕೋಪಗೊಳ್ಳವುಉದು ಸಹಜ, ಘಟನೆಯಲ್ಲಿ ವೃದ್ಧರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-11-15 05:58:49 |

Share: | | | | |


ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​-10 ಈ ಬಾರಿ ಒಂದಿಲ್ಲೊಂದು ವಿಚಾರಕ್ಕೆ ಹೆಚ್ಚು ಸದ್ದು ಮಾಡುತ್ತಿದ್ದು, ಇದೀಗ ಬಿಗ್ ಬಾಸ್​ ಮನೆಯ ಸ್ಪರ್ಧಿ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ. ಈ ಹಿಂದೆ ಹುಲಿ ಉಗುರು ಧರಿಸಿದ್ದರೆಂಬ ಕಾರಣಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಅವರನ್ನು ಬಂಧಿಸಲಾಗಿತ್ತು.ಇದೀಗ ಬಿಗ್​ಬಾಸ್​ ಸ್ಪರ್ಧಿ, ನಟಿ ತನಿಷಾ ಕುಪ್ಪಂಡ ಅವಹೇಳನಕಾರಿಯಾಗಿ ಮಾತನಾಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ನಟಿ ತನಿಷಾ ವಿರುದ್ಧ ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


ತನಿಷಾ, ವಡ್ಡ ಎಂಬ ಪದ ಬಳಸೂವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ. ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್​ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು. ಭೋವಿ ಸಮುದಾಯಕ್ಕೆ ಮಾಡಲಾದ ಅಪಮಾನದ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಭೋವಿ ಸಮುದಾಯವು ಪ್ರತಿಭಟನೆ ನಡೆಸಲಿದೆ ಎಂದು ಉಲ್ಲೇಖಿಸಲಾಗಿದೆ. ಇತ್ತೀಚಿನ ಸಂಚಿಕೆಯೊಂದರಲ್ಲಿ ನಟಿ ತನಿಷಾ ಡ್ರೋನ್​ ಪ್ರತಪಾ​ ಅವರೊಂದಿಗೆ ಮಾತನಾಡುವ ವೇಳೆ ಬೋವಿ ಜನಾಂಗದ ಬಗ್ಗೆ ಅವಮಾನಕರ ಪದ ಬಳಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಜಾತಿ ನಿಂದನೆ (Atrocity), ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. 


ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪ ಮಾಡಲಾಗಿದೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

4 ವರ್ಷ ಪ್ರೀತಿಸಿ ಮದುವೆಯಾಗಿದ್ದ ನವದಂಪತಿ, 4 ತಿಂಗಳೂ ಸಂಸಾರ ಸಾಗಿಸದೇ ಆತ್ಮಹತ್ಯೆಗೆ ಶರಣು

Posted by Vidyamaana on 2024-05-15 20:45:39 |

Share: | | | | |


4 ವರ್ಷ ಪ್ರೀತಿಸಿ ಮದುವೆಯಾಗಿದ್ದ ನವದಂಪತಿ, 4 ತಿಂಗಳೂ ಸಂಸಾರ ಸಾಗಿಸದೇ ಆತ್ಮಹತ್ಯೆಗೆ ಶರಣು

ವಿಜಯಪುರ: ‌ನಗರದ ಹೊರವಲಯದಲ್ಲಿರುವ ಶ್ರೀ ಸಿದ್ಧೇಶ್ವರ ಬಡಾವಣೆಯ ಮನೆಯೊಂದರಲ್ಲಿ ಬುಧವಾರ ನವದಂಪತಿ ನೇಣಿಗೆ ಶರಣಾಗಿದ್ದಾರೆ.

ಮನೋಜಕುಮಾರ ಪೋಳ (30) ಮತ್ತು ರಾಖಿ (23) ನೇಣಿಗೆ ಶರಣಾದ ಜೋಡಿ. ನಾಲ್ಕು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮಂಗಳವಾರ ತಡರಾತ್ರಿ ನೇಣಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು

Posted by Vidyamaana on 2023-11-18 20:21:24 |

Share: | | | | |


ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು

ಪುತ್ತೂರು : ಕೆಲ ತಿಂಗಳುಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗೆ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡ ಅಜಿತ್ ರೈ ಹೊಸಮನೆಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.


ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅಜಿತ್ ರೈ ಪರ ವಾದ ಮಂಡಿಸಿದ್ದಾರೆ.

ನೆಲ್ಯಾಡಿ ಅಡಿಕೆ ಗೋದಾಮಿನಲ್ಲಿ ನಡೆದಿದೆನ್ನಲಾದ ಕಳ್ಳತನ ಪ್ರಕರಣ : ಆರೋಪಿಗಳು ದೋಷ ಮುಕ್ತ

Posted by Vidyamaana on 2024-05-01 15:40:39 |

Share: | | | | |


ನೆಲ್ಯಾಡಿ ಅಡಿಕೆ ಗೋದಾಮಿನಲ್ಲಿ ನಡೆದಿದೆನ್ನಲಾದ ಕಳ್ಳತನ ಪ್ರಕರಣ : ಆರೋಪಿಗಳು ದೋಷ ಮುಕ್ತ

ನೆಲ್ಯಾಡಿ : ಸುಮಾರು ಆರು ವರ್ಷಗಳ ಹಿಂದೆ ನೆಲ್ಯಾಡಿ ಜಂಕ್ಷನ್ ನಲ್ಲಿದ್ದ ಕೆ. ಮೊಹಮ್ಮದ್ ಹನೀಫ್ ಎಂಬುವರ ಗೋದಾಮ್ ಕೊಠಡಿಯ ಶಟರ್ ತೆಗೆದು ಅವರು ಖರೀದಿಸಿದ ಸುಮಾರು 250 ಕೆಜಿ ಅಡಿಕೆಯನ್ನು ಯಾರೋ ಆರೋಪಿಗಳು ಕಳ್ಳತನ ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರನ್ನು ನೀಡಿರುತ್ತಾರೆ. ಸದರಿ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಪೊಲೀಸರು ಚಪ್ಪ (ಸರ್ಪರಾಜ್) ಮತ್ತು ಅಬ್ದುಲ್ ಅಸ್ಪರ್ (ಅಸ್ಫಕ್ ) ಎಂಬುವರನ್ನು ಆರೋಪಿಗಳೆಂದು ತನಿಖೆ ನಡೆಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ.

ಸದ್ರಿ ಪ್ರಕರಣವನ್ನು ಕೈಗೆತ್ತಿಕೊಂಡು ನ್ಯಾಯಾಲಯವು ಈ ಪ್ರಕರಣದಲ್ಲಿ ಅಭಿಯೋಜನ ಪರ ಸುಮಾರು 21



Leave a Comment: