ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಸುದ್ದಿಗಳು News

Posted by vidyamaana on 2023-09-23 20:22:34 | Last Updated by Vidyamaana on 2023-09-23 20:22:34

Share: | | | | |


ಕಾರು ಡಿಕ್ಕಿ: ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ ಮೃತ್ಯು

ಪುತ್ತೂರು: ಮಧ್ಯಾಹ್ನ ಕೆಯ್ಯೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ,ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತನನ್ನು 5 ವರ್ಷ ಪ್ರಾಯದ ಮುಹಮ್ಮದ್ ಆದಿಲ್ ಎಂದು ಗುರುತಿಸಲಾಗಿದೆ‌. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ.

ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

 Share: | | | | |


ಲೋಕ ಸಮರಕ್ಕೆ ಕಮಲ ನಾಯಕರ ಭರ್ಜರಿ ತಯಾರಿ

Posted by Vidyamaana on 2024-03-30 21:05:11 |

Share: | | | | |


ಲೋಕ ಸಮರಕ್ಕೆ ಕಮಲ ನಾಯಕರ ಭರ್ಜರಿ ತಯಾರಿ

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವು ಏ.2ರಂದು ಮಧ್ಯಾಹ್ನ ಗಂಟೆ 2ಕ್ಕೆ ತೆಂಕಿಲ ಬೈಪಾಸ್‌ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು.

ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

Posted by Vidyamaana on 2024-01-04 15:38:51 |

Share: | | | | |


ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನಂತರ ಮೃತ ದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನದಲ್ಲಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.


ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.ಕೊಲೆಯಾದ ಗಡೋಲಿಯನ್ನು ತನ್ನ ಮೋಹದ ಬಲೆಗೆ ಬೀಳಿಸಿಕೊಂಡಿದ್ದ ದಿವ್ಯಾ ಪಹುಜಾ ನಕಲಿ ಎನ್‌ಕೌಂಟರ್‌ಗೆ ಸಹಕರಿಸಿದ್ದರು ಎಂದು ಮುಂಬೈ ಪೊಲೀಸರು ತಮ್ಮ ವರದಿಯಲ್ಲಿ ಹೇಳಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅಭಿಜಿತ್, ಯುವತಿ ಮತ್ತು ಇನ್ನೊಬ್ಬ ವ್ಯಕ್ತಿ ಜನವರಿ 2 ರಂದು (ಮಂಗಳವಾರ) ಮುಂಜಾನೆ 4 ಗಂಟೆಗೆ ಹೋಟೆಲ್‌ಗೆ ಆಗಮಿಸಿ ಕೊಠಡಿಯೊಂದಕ್ಕೆ ಹೋಗುತ್ತಿರುವ ದೃಶ್ಯವನ್ನು ತೋರಿಸುತ್ತದೆ. ನಂತರ ರಾತ್ರಿ ಅಭಿಜಿತ್ ಮತ್ತು ಇತರರು ದಿವ್ಯಾಳ ದೇಹವನ್ನು ಎಳೆದುಕೊಂಡು ಹೋಗುವುದು ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಆಫರ್

Posted by Vidyamaana on 2024-04-24 04:21:00 |

Share: | | | | |


ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಆಫರ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಮುಂಗಡ ಬುಕ್ಕಿಂಗ್ ಆಫರ್ ಏಪ್ರಿಲ್ 20ರಿಂದ ಮೇ.9ರವರೆಗೆ ಲಭ್ಯವಿದೆ.


ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿಯೂ ಈ ರಿಯಾಯಿತಿ ಆಫರ್ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ. ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು ಆದೃಷ್ಟವನ್ನು ತರುತ್ತದೆ ಎಂಬುದು ನಂಬಿಕೆ ಆದುದರಿಂದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಮುಂಗಡ ಬುಕ್ಕಿಂಗ್ ಆಫರ್, ಮದುವೆ ಆಭರಣಗಳ ಖರೀದಿಗೆ ವಿಶೇಷ ರಿಯಾಯಿತಿ ಹಾಗೂ ಗ್ರಾಹಕರಿಗೆ ಮೆಚ್ಚಿನ ಆಭರಣಗಳನ್ನು ಆಯ್ಕೆ ಮಾಡಿ ಚಿನ್ನದ ನಾಣ್ಯವನ್ನು ಗೆಲ್ಲುವ ಸುವರ್ಣವಕಾಶ ಕಲ್ಪಿಸಿದೆ.

ವರದಕ್ಷಿಣೆ ಕಿರುಕುಳ; ಮಗಳು ಪ್ರಾಣ ಬಿಟ್ಟ ಬೆನ್ನೆಲ್ಲೇ ಅಳಿಯನ ಪ್ರಾಣ ತೆಗೆದರು

Posted by Vidyamaana on 2024-01-14 21:12:12 |

Share: | | | | |


ವರದಕ್ಷಿಣೆ ಕಿರುಕುಳ; ಮಗಳು ಪ್ರಾಣ ಬಿಟ್ಟ ಬೆನ್ನೆಲ್ಲೇ ಅಳಿಯನ ಪ್ರಾಣ ತೆಗೆದರು

ಹೈದರಾಬಾದ್ ​: ಪತಿಯ ಕಿರುಕುಳದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಾಗರ್ ಕರ್ನೂಲ್ ಜಿಲ್ಲೆಯ ಅಚ್ಚಂಪೇಟೆಯಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಇದಕ್ಕೆ ಮೃತಳ ಪತಿಯೇ ಕಾರಣ ಎಂದು ಮೃತಳ ಕುಟುಂಬಸ್ಥರು, ಸಂಬಂಧಿಕರು ಪತಿಯನ್ನು ಹೊಡೆದು ಸಾಯಿಸಿದ್ದಾರೆ.ಪ್ರೀತಿಸಿ ಮದುವೆಯಾಗಿರುವ ಸಿಂಧು ಮತ್ತು ನಾಗಾರ್ಜುನ ನಡುವೆ ಕೆಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಸಿಂಧು ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಿತಿ ಹದಗೆಟ್ಟಿದ್ದರಿಂದ ಕುಟುಂಬಸ್ಥರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾಗರ್ ಕರ್ನೂಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೈದರಾಬಾದ್‌ಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರಿಂದ ಹಾಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಿಂಧು ಮೃತಪಟ್ಟಿದ್ದಾಳೆ ಎನ್ನಲಾಗಿದೆ.


ಸಿಂಧು ಸಾವಿನ ವಿಷಯ ತಿಳಿದ ಕುಟುಂಬಸ್ಥರು ಹಾಗೂ ಸಂಬಂಧಿಕರಿಗೆ ಸಿಂಧು ಪತಿ ನಾಗಾರ್ಜುನನನ್ನು ಸ್ವಲ್ಪ ದೂರ ಹೋದ ನಂತರ ನಾಗಾರ್ಜುನ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ. ಸಿಂಧು ನಿನ್ನಿಂದಲೇ ಸತ್ತಿದ್ದಾಳೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ನಾಗಾರ್ಜುನನನ್ನು ಆಮನಗಲ್‌ನಲ್ಲಿ ಕಬ್ಬಿಣದ ಸರಳು ಮತ್ತು ದೊಣ್ಣೆಗಳಿಂದ ಮಧ್ಯರಾತ್ರಿ ವೇಳೆ ಥಳಿಸಿದ್ದಾರೆ. ನಾಗಾರ್ಜುನ ಮೃತಪಟ್ಟಿದ್ದು, ಆತನ ದೇಹ ಕಲ್ವಕುರ್ತಿ ಆಸ್ಪತ್ರೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.ನಾಗಾರ್ಜುನ್ ವರದಕ್ಷಿಣೆಗಾಗಿ ಪತ್ನಿ ಸಿಂಧುಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಸಿಂಧು ಕುಟುಂಬಸ್ಥರು ಆರೋಪಿಸಿದ್ದಾರೆ. ಮದುವೆಯಾದಾಗಿನಿಂದಲೂ ತನ್ನ ಮಗಳು ಹಲವಾರು ನಿರ್ಬಂಧಗಳು ಮತ್ತು ಚಿತ್ರಹಿಂಸೆಗೆ ಒಳಗಾಗಿದ್ದಳು. ತನ್ನ ಮಗುವಿನ ಸಾವಿಗೆ ಪತಿಯ ಸಂಬಂಧಿಕ ಡಾ. ಕೃಷ್ಣ ಹಾಗೂ ಆತನ ಪತ್ನಿಯೇ ಕಾರಣ ಎಂದು ಸಿಂಧು ತಾಯಿ ಆರೋಪ ಮಾಡಿದ್ದಾರೆ.

2000 ರೂಪಾಯಿ ನೋಟ್‌ ಹಿಂಪಡೆದ ಆರ್‌ಬಿಐ

Posted by Vidyamaana on 2023-05-19 14:41:54 |

Share: | | | | |


2000 ರೂಪಾಯಿ ನೋಟ್‌ ಹಿಂಪಡೆದ ಆರ್‌ಬಿಐ

ನವದೆಹಲಿ : (Rs 2000 Currency Note) ಭಾರತೀಯ ರಿಸರ್ವ್‌ ಬ್ಯಾಂಕ್‌ 2000 ರೂಪಾಯಿ ಮುಖ ಬೆಲೆಯ ನೋಟ್‌ ನ್ನು ಹಿಂಪಡೆದಿದೆ. 2000 ರೂಪಾಯಿ ನೋಟಿನ ಚಲಾವಣೆ ಈ ಕ್ಷಣದಿಂದಲೇ ಸ್ಥಗಿತವಾಗಲಿದೆ. ಆದರೆ 2000 ರೂಪಾಯಿ ನೋಟು ಹೊಂದಿದ್ದವರು ಬ್ಯಾಂಕುಗಳಿಗೆ ತೆರಳಿ ಸೆಪ್ಟೆಂಬರ್ 30 2023ರ ಒಳಗಾಗಿ ನೋಟನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.2000 ರೂಪಾಯಿಯ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ ಕರೆನ್ಸಿ ನೋಟುಗಳ ಚಲಾವಣೆ ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧವಾಗಿ ಮುಂದುವರಿಯುತ್ತದೆ . ಸೆಪ್ಟೆಂಬರ್ 30, 2023 ರವರೆಗೆ 2,000 ರೂ ನೋಟುಗಳಿಗೆ ಠೇವಣಿ ಮತ್ತು/ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುವಂತೆ RBI ಬ್ಯಾಂಕ್‌ಗಳನ್ನು ಕೇಳಿದೆ.ಆದರೆ ಬ್ಯಾಂಕುಗಳು ಯಾವುದೇ ಕಾರಣಕ್ಕೂ ಈ ನೋಟುಗಳನ್ನು ಚಲಾವಣೆ ಮಾಡುವಂತಿಲ್ಲ ಎಂದು ಸ್ಪಷ್ಟವಾಗಿ ಸುತ್ತೋಲೆಯಲ್ಲಿ ತಿಳಿಸಿದ. ಎರಡು ಸಾವಿರ ರೂಪಾಯಿಯ ನೋಟು ಹೊಂದಿದ್ದವರು ಆತಂಕ ಪಡುವ ಅಗತ್ಯವಿಲ್ಲ. ಇನ್ನು ಕಳೆದ ಒಂದು ವರ್ಷಗಳಿಗೂ ಅಧಿಕ ಕಾಲದಿಂದಲೂ ಎರಡು ಸಾವಿರ ರೂಪಾಯಿಯ ನೋಟು ಎಟಿಎಂ, ಬ್ಯಾಂಕ್‌ ಶಾಖೆಗಳಲ್ಲಿಯೂ ಲಭ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿಂದೆಯೇ ಎರಡು ಸಾವಿರ ರೂಪಾಯಿಯ ನೋಟು ಬ್ಯಾನ್‌ ಆಗುತ್ತದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ಕುರಿತು ಯಾವುದೇ ಯೋಚನೆಯೂ ಕೇಂದ್ರ ಸರಕಾರದ ಮುಂದಿಲ್ಲ ಎಂದು ತಿಳಿಸಿದ್ದರು.

ಈ ಹಿಂದೆ ದೇಶದಲ್ಲಿ ನೋಟು ಅಮಾನ್ಯೀಕರಣದ ನಂತರ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಆರ್‌ಬಿಐ ಚಲಾವಣೆಗೆ ತಂದಿತ್ತು. ಸುಮಾರು ಆರು ವರ್ಷಗಳ ತರುವಾಯ ಆರ್‌ಬಿಐ ಎರಡು ಸಾವಿರ ಮುಖ ಬೆಲೆಯ ನೋಟುಗಳ ಚಲಾವಣೆಯನ್ನು ರದ್ದು ಮಾಡಿದೆ. ಸಪ್ಟೆಂಬರ್‌ ವರೆಗೂ ನೋಟುಗಳು ಚಲಾವಣೆಯಲ್ಲಿ ಇರಲಿದ್ದು, ನಂತರದಲ್ಲಿ ಸಂಪೂರ್ಣವಾಗಿ ನೋಟುಗಳ ಚಲಾವಣೆ ರದ್ದಾಗಲಿದೆ.

T20 World Cup 2024 :ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

Posted by Vidyamaana on 2024-06-30 09:17:37 |

Share: | | | | |


T20 World Cup 2024 :ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

 ವೆಸ್ಟ್​ಇಂಡೀಸ್​ನ ಬಾರ್ಬಡೋಸ್​ನಲ್ಲಿ ಜೂನ್ 29 ರಂದು ನಡೆದ ಐಸಿಸಿ ಪುರುಷರ ವಿಶ್ವಕಪ್ 2024 ರ (T20 World Cup 2024) ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಏಡೆನ್ ಮಾರ್ಕ್ರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳಿಂದ ಸೋಲಿಸಿ ಚಾಂಪಿಯನ್ ಆಯಿತು.

ಇದರೊಂದಿಗೆ ಭಾರತವು 13 ವರ್ಷಗಳ ವಿಶ್ವ ಕಪ್ ಹಾಗೂ 17 ವರ್ಷಗಳ ಟಿ20 ವಿಶ್ವ ಕಪ್​ ಕೊರತೆಯನ್ನು ನೀಗಿಸಿತು. ಅಂದ ಹಾಗೆ ಭಾರತ ತಂಡ ಈ ಬಾರಿಯ ಟ್ರೋಫಿಯನ್ನು ಅಜೇಯವಾಗಿ ಗೆದ್ದಿದೆ. ಟೂರ್ನಿಯುದ್ದಕ್ಕೂ ಪಂದ್ಯಾವಳಿಯುದ್ದಕ್ಕೂ ಎಲ್ಲಾ ಪಂದ್ಯಗಳನ್ನು ಗೆದ್ದು ಟ್ರೋಫಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ಬರೆದಿದೆ.ಗುಂಪು ಹಂತದಲ್ಲಿ ಭಾರತ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಉಳಿದಿತ್ತು. ಒಂದು ಪಂದ್ಯ ಮಳೆಯಿಂದಾಗಿ ಕೊಚ್ಚಿಹೋಗಿತ್ತು. ಗಯಾನಾದಲ್ಲಿ ನಡೆದ ಸೆಮಿಫೈನಲ್​​ನಲ್ಲಿ ಗೆಲ್ಲುವ ಮೊದಲು ಭಾರತವು ಸೂಪರ್ ಎಂಟರ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದಿತ್ತು. ಸೆಮಿಯಲ್ಲಿ ಇಂಗ್ಲೆಂಡ್ ಅನ್ನು 68 ರನ್​ಗಳಿಂದ ಸೋಲಿಸಿತ್ತು.



Leave a Comment: