Posted by vidyamaana on 2024-06-30 19:51:42 |
ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.
Posted by Vidyamaana on 2024-02-23 04:49:06 |
ಪುತ್ತೂರು : ಜೀವನದ ಜಂಜಾಟಗಳನ್ನು ಮರೆತು ಎರಡೂವರೆ ಗಂಟೆ ಸಂಪೂರ್ಣ ಮನರಂಜನೆ, ಹೊಟ್ಟೆ ತುಂಬಾ ನಗು ಬೇಕಾಂತಿದ್ದರೇ ಕನ್ನಡದಲ್ಲೊಂದು ಸದಬಿರುಚಿಯ ಸಿನಿಮಾ ಬಂದಿದೆ. ಆ ದಿನಗಳು ಖ್ಯಾತಿಯ ಕೆ ಎಂ ಚೈತನ್ಯ ನಿರ್ದೆಶಿಸಿರುವ ಅಬ್ಬಬ್ಬ ಸಿನಿಮಾ (Abbabba Film) ಸಿಲ್ವರ್ ಸ್ಟೀನ್ ಗೆ ಅಪ್ಪಳಿಸಿ ವಾರ ಕಳೆದಿದ್ದು ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.ಹುಡುಗರ ಹಾಸ್ಟೇಲ್ ನಲ್ಲಿ ನಡೆಯುವ ಘಟನೆಗಳೇ ಈ ಸಿನಿಮಾದ ಕಥಾ ಹಂದರ. ಇದಕ್ಕೆ ನವಿರಾದ ಹಾಸ್ಯ ಬೆರೆಸಿ ನಿರೂಪಿಸಲಾಗಿದೆ. ಈ ಹಾಸ್ಟೇಲ್ ಗೆ ಹುಡುಗಿಯೊಬ್ಬಳ ಪ್ರವೇಶದೊಂದಿಗೆ ಕಥೆ ಟ್ವಿಸ್ಟ್ ಕಾಣಿಸುತ್ತದೆ. ಇಡಿ ಚಿತ್ರ ನಗೆ ಬುಗ್ಗೆ ಇವರೆಲ್ಲರ ಜತೆಗೆ ಪುತ್ತೂರಿನ ಸೆನ್ಸೆಷನಲ್ ಯೂಟ್ಯೂಬರ್,ಕಾಮಿಡಿ ಜತೆಗೆ ಸಂದೇಶ ನೀಡುವುದನ್ನು ಕರಗತ ಮಾಡಿಕೊಂಡಿರುವ ಧನರಾಜ್ ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ನಕ್ಕು ನಗಿಸುತ್ತಾರೆ.
ಹೊಸಬರ ಈ ಪ್ರಯತ್ನ ವೃತ್ತಿಪರ ಕಲಾವಿದರಿಗೆ ಸಾಟಿ ಹೊಡೆಯುವಂತಿದೆ. ಹೀಗಾಗಿ ಸಿನಿಮಾ ನೋಡಲು ಬಂದ ಪ್ರೇಕ್ಷಕರ ಹಣಕ್ಕೆ ಮೋಸ ಆಗುವುದಿಲ್ಲ.ಇದರ ಜತೆಗೆ ಶುಕ್ರವಾರ ಅಬ್ಬಬ್ಬ ವೀಕ್ಷಿಸುವ ಪ್ರೇಕ್ಷಕರಿಗೆ ವಿಶೇಷ ರಿಯಾಯಿತಿಯಿದೆ. ಪುತ್ತೂರು ಜಿ ಎಲ್ ವನ್ ಮಾಲ್ ನಲ್ಲಿ ಪ್ರದರ್ಶನಗೊಳ್ಳುತ್ತಿರುವ ಬೆಳಗ್ಗಿನ (ಫೆ.23) ಶೋ ಟಿಕೆಟ್ ದರ ಕೇವಲ ರೂ.99 ಇರಲಿದೆ.ನೂರು ವರ್ಷ ತುಂಬಿರುವ ಈ ಹಾಸ್ಟೆಲ್ಗೆ ಮೋಹಿನಿ ಕಾಟ ಬೇರೆ ಇದೆ. ಆದರೆ, ಇದನ್ನು ಹಾಸ್ಟೆಲ್ನ ಫಾದರ್ ಮಾತ್ರ ನಂಬಲ್ಲ. ಕಾಣದ ಮೋಹಿನಿ, ಕಾಣುವ ಮೋಹನಾಂಗಿ ಇಬ್ಬರ ಆಟ ಹಾಸ್ಟೆಲ್ನ ಗೇಟು ದಾಟುವುದರೊಂದಿಗೆ ಸಿನಿಮಾ ಮುಗಿಯುತ್ತದೆ. ಈ ಮೋಹಿನಿ ಯಾರು, ಹುಡುಗರ ಹಾಸ್ಟೆಲ್ನಿಂದ ಹುಡುಗಿ ತಪ್ಪಿಕೊಂಡ್ರಾ ಎನ್ನುವ ಪ್ರಶ್ನೆಗಳು ನಿಮ್ಮಲ್ಲಿ ಹುಟ್ಟಿಕೊಂಡರೆ ನೀವು ಸೀದಾ ಹೋಗಿ ಸಿನಿಮಾ ನೋಡಿ.ಧನರಾಜ್, ಅವಿನಾಶ್, ಅಜಯ್ ರಾಜ್, ಅಮೃತಾ, ವಿಜಯ್ ಚೆಂಡೂರ್ ಹೀಗೆ ಎಲ್ಲರು ನಗಿಸುವ ಕೆಲಸ ಮಾಡುತ್ತಾರೆ. ಫಾದರ್ ಪಾತ್ರಧಾರಿ ಶರತ್ ಲೋಹಿತಾಶ್ವ ಅವರದ್ದು ಮಾತ್ರ ಘನ ಗಂಭೀರ ಪಾತ್ರ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ತಮ್ಮನಂತೆ ಅಬ್ಬಬ್ಬ ಚಿತ್ರದ ಹಾಸ್ಟೆಲ್ ಕತೆ..!
Posted by Vidyamaana on 2023-03-07 11:20:12 |
ಬಂಟ್ವಾಳ: ಜಿಲ್ಲೆಯ ಕೇಂದ್ರ ಮಂಗಳೂರಿನ ಸನಿಹದಲ್ಲೇ ಇರುವ, ಅಭಿವೃದ್ಧಿಗೆ ಎಲ್ಲಾ ರೀತಿಯಲ್ಲೂ ತೆರೆದುಕೊಂಡಿರುವ ತಾಲೂಕು ಬಂಟ್ವಾಳ. ಆದರೆ ಇಡೀ ರಾಜ್ಯದಲ್ಲೇ ಇರುವ ಸಂಚಾರಿ ಕಾನೂನುಗಳು ಇಲ್ಲಿಗೆ ಅನ್ವಯ ಆಗುವುದಿಲ್ವಂತೆ!
ಹೌದು! ಇದು ವಿಚಿತ್ರವಾದರೂ ಸತ್ಯ. ಬಂಟ್ವಾಳದ ನಾಗರಿಕರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರೆ ಸಹಸವಾರ ಬಿಡಿ ಸವಾರರೇ ಹೆಲ್ಮೆಟ್ ಧರಿಸುವುದಿಲ್ಲ. ಸಾಮಾನ್ಯವಾಗಿ ಎಲ್ಲಾ ಕಡೆ ಇಬ್ಬರು ಬೈಕಿನಲ್ಲಿ ಹೋಗುತ್ತಾರೆ. ಆದರೆ ಇಲ್ಲೇಲ್ಲ ಮೂರು-ಮೂರು ಮಂದಿ ಒಂದೇ ಬೈಕಿನಲ್ಲಿ ಸಂಚರಿಸುತ್ತಾರೆ. ಕಾರಿನಲ್ಲಿ ಹೋಗುವವರಾದರೆ ಸೀಟು ಬೆಲ್ಟ್ ಹಾಕಬೇಕೆಂದೇ ಇಲ್ವಂತೆ! ರಿಕ್ಷಾದಲ್ಲಂತೂ ಕೇಳುವುದೇ ಬೇಡ. ಚಾಲಕನ ಅಕ್ಕ-ಪಕ್ಕ ಮೂವರನ್ನು ಅಂದರೆ ಚಾಲಕ ಸೇರಿ ನಾಲ್ಕು ಮಂದಿ ತೆರಳುವುದೂ ಇದೆ. ಇನ್ನು ಚಾಲನೆ ಸಂದರ್ಭ ಮೊಬೈಲ್ ಫೋನ್ ಬಳಕೆಗೆ ಯಾವುದೇ ನಿರ್ಬಂಧವಿಲ್ಲ.
ಹೀಗೆ ಸಾಗುತ್ತದೆ ಬಂಟ್ವಾಳದ ಸಂಚಾರಿ ಕಾನೂನು ಉಲ್ಲಂಘನೆಯ ಪಟ್ಟಿ. ಇದೇನು ಉಲ್ಲಂಘನೆಯೋ, ಅಥವಾ ರಾಜ್ಯದಲ್ಲೆಡೆ ಇರುವ ಕಾನೂನು ಇಲ್ಲಿ ಮಾತ್ರ ಇಲ್ಲವೇ? ಏನೊಂದು ತಿಳಿಯುತ್ತಿಲ್ಲ.
ಬಿ.ಸಿ.ರೋಡನ್ನು ಸೀಳಿ ಸಾಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲೇ ಇಂತಹ ಸಂಚಾರಿ ಕಾನೂನು ಉಲ್ಲಂಘನೆಯ ಘಟನೆಗಳು ನಮ್ಮ ಕಣ್ಣೆದುರಿಗೆ ರಾಚುತ್ತವೆ. ಪೇಟೆ ಬಿಟ್ಟು ಗ್ರಾಮೀಣ ಭಾಗಕ್ಕೆ ಹೋದರಂತೂ, ಕಾನೂನಿನ ಅಂಕುಶವೇ ಇಲ್ಲ ಎಂಬಂತೆ ಭಾಸವಾಗುತ್ತಿದೆ. ಅಷ್ಟರಮಟ್ಟಿಗೆ ಸಂಚಾರಿ ಕಾನೂನುಗಳು ಉಲ್ಲಂಘನೆ ಆಗುತ್ತಿವೆ.
ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಹಳ ಶಿಸ್ತಿನಿಂದ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ರಾತ್ರಿ ಗಸ್ತನ್ನು ಕೂಡ ಗಟ್ಟಿಗೊಳಿಸಿದ್ದು, ಜಿಲ್ಲೆಯೆಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ. ಆದರೆ ಬಂಟ್ವಾಳವನ್ನು ಮಾತ್ರ ಯಾಕೆ ಗಮನಿಸುತ್ತಿಲ್ಲ ಎನ್ನುವುದೇ ಯಕ್ಷ ಪ್ರಶ್ನೆ.
ಸಂಚಾರಿ ಕಾನೂನು ಬಿಗಿಗೊಳಿಸುವುದು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ತುಂಬಾ ಅನುಕೂಲ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮನಸು ಮಾಡಿದರೆ, ಇದೇನು ದೊಡ್ಡ ವಿಷಯವೇ ಅಲ್ಲ. ಒಂದೇ ದಿನದಲ್ಲಿ ಕಾನೂನು ಜಾರಿ ಮಾಡಬಹುದು.
ಟ್ರಾಫಿಕ್ ಠಾಣೆಯೂ ಇದೆ!
ಜಿಲ್ಲೆಯಲ್ಲಿ ಮಂಗಳೂರು ಬಿಟ್ಟರೆ ಅತೀ ಹೆಚ್ಚು ವಾಹನ ದಟ್ಟಣೆ ಹೊಂದಿರುವ ತಾಲೂಕು ಬಂಟ್ವಾಳ. ಮಾತ್ರವಲ್ಲ ರಾಷ್ಟ್ರೀಯ ಹೆದ್ದಾರಿ ಈ ತಾಲೂಕನ್ನು ಸೀಳಿಕೊಂಡೇ ಮುಂದೆ ಹೋಗಿರುವುದರಿಂದ, ಜನಜಂಗುಳಿ ಜಾಸ್ತಿ. ಈ ಎಲ್ಲಾ ಕಾರಣದಿಂದಾಗಿ ಬಂಟ್ವಾಳಕ್ಕೆ ಸಂಚಾರಿ ಪೊಲೀಸ್ ಠಾಣೆಯನ್ನು ಮಂಜೂರು ಮಾಡಿದ್ದು, ಕಾರ್ಯಚರಣೆ ನಡೆಸುತ್ತಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಇದ್ದಾರೆ. ಹೀಗಿದ್ದರೂ, ಇಷ್ಟೊಂದು ಸಂಚಾರಿ ಕಾನೂನು ಉಲ್ಲಂಘನೆಗಳೇಕೆ? ತಿಳಿಯುತ್ತಿಲ್ಲ. ಅಪಘಾತದಂತಹ ಪ್ರಕರಣಗಳು ಘಟಿಸಿ, ಬಳಿಕ ಬಡಿದಾಡಿಕೊಳ್ಳುವ ಬದಲು ಈಗಲೇ ಎಚ್ಚೆತ್ತುಕೊಳ್ಳುವುದು ಸೂಕ್ತವಲ್ಲವೇ?
Posted by Vidyamaana on 2024-05-25 09:44:52 |
ಮಂಗಳೂರು, ಮೇ 24: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರ ಹಿರಿಯ ಸೋದರನ ಮಗಳ ಮದುವೆಯ ಅದ್ದೂರಿ ರಿಸೆಪ್ಶನ್ ಸಮಾರಂಭವನ್ನು ಮಂಗಳೂರಿನ ಟಿಎಂಎ ಪೈ ಹಾಲ್ ನಲ್ಲಿ ಮೇ 25 ಮತ್ತು 26ರಂದು ಆಯೋಜಿಸಲಾಗಿದ್ದು ವಿವಿಧ ರಾಜ್ಯಗಳ ರಾಜ್ಯಪಾಲರು, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಕೇರಳ ಸರ್ಕಾರದ ಸಚಿವರು ಆಗಮಿಸಲಿದ್ದಾರೆ.
ಪ್ರಮುಖ ವಿವಿಐಪಿಗಳು ಮಂಗಳೂರು ನಗರಕ್ಕೆ ಆಗಮಿಸಿ, ನಗರದ PVS ಹಾಗೂ ಲಾಲ್ಬಾಗ್ ಜಂಕ್ಷನ್ಗಳ ನಡುವೆ ಇರುವ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುತ್ತಾರೆ. ಈ ಹಿನ್ನೆಲೆಯಲ್ಲಿ ಸದ್ರಿ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ನವಭಾರತ ಸರ್ಕಲ್ನಿಂದ ಪಿವಿಎಸ್ ಮೂಲಕ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ ರಸ್ತೆಯಲ್ಲಿನ ಎಲ್ಲಾ ಸಂಪರ್ಕಗಳನ್ನು ಮುಚ್ಚಬೇಕಾಗುತ್ತದೆ. ಬೆಸೆಂಟ್ ಜಂಕ್ಷನ್, ಕೋಡಿಯಾಲ್ಗುತ್ತು ಕ್ರಾಸ್, ಬಲ್ಲಾಳ್ಬಾಗ್ ಜಂಕ್ಷನ್, ನೆಹರೂ ಅವೆನ್ಯೂ ಜಂಕ್ಷನ್ ಸಂಪರ್ಕವೂ ಬಂದ್ ಆಗಲಿದೆ. ಸದ್ರಿ ರಸ್ತೆಯನ್ನು ಬಳಸುವ ಎಲ್ಲ ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಪೊಲೀಸರು ಸೂಚಿಸಿದ್ದಾರೆ.
ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿರುವ ಸ್ಥಳಗಳು
ಕೊಟ್ಟಾರ ಚೌಕಿ, ಕುಂಟಿಕಾನ, ಕೆ.ಪಿ.ಟಿ, ನಂತೂರು, ಕೆ.ಎಸ್.ಆರ್.ಟಿ.ಸಿ., ಬಂಟ್ಸ್ ಹಾಸ್ಟೆಲ್, ಡಾ. ಅಂಬೇಡ್ಕರ್ ಸರ್ಕಲ್, ಹಾರ್ಟಿಕಲ್ಚರ್ ಜಂಕ್ಷನ್, ಬಲ್ಮಠ, ಹಂಪನಕಟ್ಟೆ, ಕರಾವಳಿ ಸರ್ಕಲ್, ಕಂಕನಾಡಿ, ಪಂಪ್ವೆಲ್, ತೊಕ್ಕೊಟ್ಟು.
Posted by Vidyamaana on 2023-11-06 07:11:18 |
ಸುಳ್ಯ: ಅಟೋ ರಿಕ್ಷಾಕ್ಕೆ ಓಮ್ಮಿ ಢಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ.
ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು
ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಲೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರುಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸಹ ಪ್ರಯಾಣಿಕ ಗಾಯಗೊಂಡಿದ್ದು,ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
Posted by Vidyamaana on 2023-12-12 20:25:26 |
ಪುತ್ತೂರು : ಆತ್ರೇಯ ಮಲ್ಟಿಸ್ಟೆಷಾಲಿಟಿ ಕ್ಲಿನಿಕ್ ಹಾಗೂ ನಂದಿಕೇಶ್ವರ ಭಜನಾ ಮಂದಿರ ವತಿಯಿಂದ ಉಚಿತ ಆರೋಗ್ಯ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಡಿ. 10ರಂದು ಶ್ರೀ ನಂದಿಕೇಶ್ವರ ಭಜನಾ ಮಂದಿರದಲ್ಲಿ ನಡೆಯಿತು.ಬ್ರಹ್ಮಶ್ರೀ ಕೇಮ್ಮಿಂಜೆ ಲಕ್ಷೀಶ ತಂತ್ರಿಗಳು ದೀಪ ಬೆಳಗಿಸಿ ಕಾರ್ಯಕ್ರಮದ ಉದ್ಘಾಟನೆ ಮಾಡಿದರು ಅರುಣ್ ಜೈನ ಅವರು ಸಭಾಧ್ಯಕ್ಷತೆ ವಹಿಸಿದರು ವೇದಿಕೆಯಲ್ಲಿ ಬ್ರಹ್ಮಶ್ರೀ ಉದಯ ತಂತ್ರಿಗಳು ಉಪಸ್ಥಿತರಿದ್ದರು ಹಾಗೂ ಶಿಬಿರದ ಸದುಪಯೋಗವನ್ನು ಭಜನಾ ಮಂದಿರದ ಭಕ್ತರು ಹಾಗೂ ಸಾರ್ವಜನಿಕರು ಪಡೆದುಕೊಳ್ಳಬೇಕು ಹಾಗೂ ಆರೋಗ್ಯದ ವಿಚಾರದಲ್ಲಿ ಯಾರೂ ಕಡೆಗಣಿಸದೆ ಇಂತಹ ಶಿಬಿರದ ಮುಖಾಂತರ ಈಸಿಜಿ, ರಕ್ತದ ಒತ್ತಡ, ಮಧುಮೇಹ ತಪಾಸಣೆ ಮಾಡಬೇಕು ಎಂದು ಹಿತ ನುಡಿಗಳನ್ನಡಿದರು. ವೇದಿಕೆಯಲ್ಲಿ ಶ್ರೀ ಸುಧೀಂದ್ರ ತಂತ್ರಿ, ಕೆಮ್ಮಿಂಜೆ ಮತ್ತು ಶ್ರೀ ಚಂದ್ರ ಕೂಡಮಾರಾ ಉಪಸ್ಥಿತರಿದ್ದರು.ಇದೇ ವೇಳೆ ಬೇಸಿಕ್ ಹೆಲ್ತ್ ಚೆಕಪ್ ಪ್ಯಾಕೇಜನ್ನು ಅನಾವರಣ ಗೊಳಿಸಲಾಯಿತು. ಕೇವಲ ರೂ 1200ಕ್ಕೆ ಕಿಡ್ನಿ ಲಿವರ್ ಹಾರ್ಟ್ ಮಧುಮೇಹ ಕೆ ಸಂಬಂಧಿಸಿದ ವಿವಿಧ ರಕ್ತ ಮತ್ತು ಮೂತ್ರ ಪರೀಕ್ಷೆ ಹಾಗೂ ಈ ಸೀ ಜಿ ಒಳಪ್ಪಟ್ಟಿರುತ್ತದೆ. 70ಕೂ ಅಧಿಕ ಜನ ಸದುಪಯೋಗ ಪಡಿಸಿಕೊಂಡರು ಎಂದು ಡಾ ಸುಜಯ್ ತಂತ್ರಿ ಕೆಮ್ಮಿಂಜೆ ತಿಳಿಸಿದ್ದಾರೆ
Posted by Vidyamaana on 2024-04-23 21:54:22 |
ಚಿತ್ರದುರ್ಗ, ಏ.23: ಫೋಕ್ಸೋ (POCSO) ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(Murugha Mutt Swamiji) ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ಸುಪ್ರೀಂ ಆದೇಶಿಸಿದೆ. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದು.
ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಎಸ್ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಹಾಗೇ ಜಾಮೀನಿನ ಮೇಲೆ ಹೊರ ಬಂದ ಅವರು, ಮುರುಘಾ ಶ್ರೀ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು.