ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


ಮಂಗಳೂರು: ಮತಗಟ್ಟೆಯೊಳಗೆ ಮೊಬೈಲ್‌ ಪೆನ್‌ ಕೆಮರಾ ನಿಷೇಧ

Posted by Vidyamaana on 2023-05-10 02:11:21 |

Share: | | | | |


ಮಂಗಳೂರು: ಮತಗಟ್ಟೆಯೊಳಗೆ ಮೊಬೈಲ್‌ ಪೆನ್‌ ಕೆಮರಾ ನಿಷೇಧ

ಮಂಗಳೂರು: ಮೊಬೈಲ್‌ ಫೋನ್‌, ಪೆನ್‌ ಕೆಮರಾ, ವಿವಿಧ ಬಗೆಯ ಆಯುಧ, ನೀರಿನ ಬಾಟಲ್‌, ಆಹಾರ ಸಾಮಗ್ರಿಗಳು ಹಾಗೂ ಸ್ಫೋಟಕ ವಸ್ತುಗಳನ್ನು ಮತಗಟ್ಟೆ ಕೇಂದ್ರಕ್ಕೆ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳಾದ  ರವಿ ಕುಮಾರ್‌ ಅವರು ತಿಳಿಸಿದ್ದಾರೆ ಚುನಾವಣೆ ಯಶಸ್ವಿಯಾಗಿ ನಡೆಸಲು ಮತಗಟ್ಟೆ ಅಧಿಕಾರಿಗಳನ್ನು ಹಾಗೂ ವೀಕ್ಷಕರು, ಭದ್ರತಾ ಸಿಬಂದಿ ನೇಮಿಸಲಾಗಿದೆ. ಪ್ರಿಸೈಡಿಂಗ್‌ ಆಫಿಸರ್‌, ಅಸಿಸ್ಟೆಂಟ್‌ ಪ್ರಿಸೈಡಿಂಗ್‌ ಆಫೀಸರ್‌, ಮತಗಟ್ಟೆ ಅಧಿಕಾರಿ ಗಳು ಹಾಗೂ ಡಿ ದರ್ಜೆ ನೌಕರ ರನ್ನು ನೇಮಿಸಲಾಗಿದೆ.ವಿಶೇಷ ಚೇತನ ಮತದಾರರಿ ಗಾಗಿ ಗಾಲಿ ಕುರ್ಚಿ, ಭೂತ ಕನ್ನಡಿ ಬ್ರೈಲ್‌ ಲಿಪಿಯ ಮಾದರಿ ಮತಪತ್ರ, ಆದ್ಯತೆ ಮೇಲೆ ಪ್ರವೇಶ, ರ್‍ಯಾಂಪ್‌, ಕೋರಿಕೆ ಮೇರೆಗೆ ವಾಹನ ವ್ಯವಸ್ಥೆ ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ವಜಾ

Posted by Vidyamaana on 2023-10-24 20:27:34 |

Share: | | | | |


ಚೀನಾದ ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ವಜಾ

ಬೀಜಿಂಗ್: ರಕ್ಷಣಾ ಸಚಿವ ಜನರಲ್ ಲಿ ಶಾಂಗ್ ಫು ಅವರನ್ನು ಚೀನಾ ಸರ್ಕಾರ ತೆಗೆದುಹಾಕಿದೆ. ಇದಕ್ಕೆ ಯಾವುದೇ ವಿವರಣೆಯನ್ನು ನೀಡಲಾಗಿಲ್ಲ. ಚೀನಾ ರಾಜ್ಯ ಪ್ರಸಾರಕ ಸಿಸಿಟಿವಿ ವರದಿ ಮಾಡಿದ್ದು, ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಸಚಿವರನ್ನು ಸರಕಾರ ವಜಾ ಮಾಡಿದೆ ಎಂದಿದೆ.


ಯಾವುದೇ ವಿವರಣೆಯನ್ನು ನೀಡದೆ ಜುಲೈನಲ್ಲಿ ಅಧಿಕಾರದಿಂದ ತೆಗೆದುಹಾಕಲ್ಪಟ್ಟ ಮಾಜಿ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಬಳಿಕ  ಅದೇ ರೀತಿಯ ಕ್ರಮ ಎದುರಿಸಿದ ಎರಡನೇ ವ್ಯಕ್ತಿ ಲಿ ಅವರಾಗಿದ್ದಾರೆ.


ಮಾರ್ಚ್‌ನಲ್ಲಿ ಕ್ಯಾಬಿನೆಟ್ ಪುನರ್ರಚನೆಯ ಸಮಯದಲ್ಲಿ ರಕ್ಷಣಾ ಸಚಿವ ಆದ ಲಿ  ಆಗಸ್ಟ್ 29 ರಂದು ಭಾಷಣವೊಂದನ್ನು ಮಾಡಿದ ನಂತರ ಜನರ ಜೊತೆ ಕಾಣಿಸಿಕೊಂಡಿರಲಿಲ್ಲ. ಆವರು ಕಾಣೆಯಾಗಿರುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದು, ಅವರ ಎಲ್ಲಿದ್ದಾರೆ ಏನ್‌ ಮಾಡ್ತಿದಾರೆ ಅಂತ ತಿಳುದು ಬಂದಿರಲಿಲ್ಲ.ಅಧ್ಯಕ್ಷ ಮತ್ತು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ನಾಯಕ ಕ್ಸಿ ಜಿನ್‌ಪಿಂಗ್ ಅವರ ಅಧಿಕಾರ ಮುಂದುವರಿಯುವ ಬಗ್ಗೆ ಪ್ರಶ್ನೆಗಳನ್ನು ಲಿ ಎತ್ತಿದ್ದರು. ಅಪಾರ ದೇಶ ನಿಷ್ಠೆ ತೋರುತ್ತಿದ್ದ ಆವರು ಸಾರ್ವಜನಿಕ ಮತ್ತು ಖಾಸಗಿ ಭ್ರಷ್ಟಾಚಾರದ ವಿರುದ್ಧ ಪಟ್ಟುಬಿಡದೆ ದನಿ ಎತ್ತುತ್ತಿದ್ದರು.


ಇದು ಜಿನ್‌ಪಿಂಗ್ ಅವರಿಗೆ ಮುಜುಗರ ತರುತ್ತಿತ್ತು. ರಾಜಕೀಯ ಪ್ರತಿಸ್ಪರ್ಧಿಗಳನ್ನು ಮಟ್ಟ ಹಾಕಬೇಕು, ಹದಗೆಡುತ್ತಿರುವ ಆರ್ಥಿಕತೆಯ ನಡುವೆ ಅಮೆರಿಕಾದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ತಮ್ಮ ಮಾತು ಕೇಳುವವರನ್ನು ಆ ಸ್ಥಾನಕ್ಕೆ ತರಬೇಕೆಂಬುದು ಅಧ್ಯಕ್ಷ ಜಿನ್‌ಪಿಂಗ್ ಯೋಚಿಸುತ್ತಿದ್ದರು ಎನ್ನಲಾಗಿದೆ.

ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

Posted by Vidyamaana on 2023-08-02 23:19:34 |

Share: | | | | |


ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್‌ನಲ್ಲಿ ಆ.3ರಂದು ಗುರುವಾರ ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಪ್ರೈವೇಟ್ ಬಸ್ ಸ್ಟಾಂಡ್, ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್, ನೆಲ್ಲಿಕಟ್ಟೆ, ಎಳ್ಳುಡಿ ಮತ್ತು ಕಲ್ಲಾರೆ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸರಕಾರಿ ಬಸ್ ಮತ್ತು ಲಾರಿ ಮುಖಾಮುಖಿ: ಇಬ್ಬರ ದುರ್ಮರಣ

Posted by Vidyamaana on 2024-01-24 18:53:59 |

Share: | | | | |


ಸರಕಾರಿ ಬಸ್ ಮತ್ತು ಲಾರಿ ಮುಖಾಮುಖಿ: ಇಬ್ಬರ ದುರ್ಮರಣ

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊಪ್ಪಳ ರಸ್ತೆಯ ಹಳ್ಳಿಕೇರಿ- ಬನ್ನಿಕೊಪ್ಪ ನಡುವೆ ಜರುಗಿದೆ.


ಕೊಪ್ಪಳದಿಂದ ಗದಗ ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಹಾಗೂ ಗದಗದಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ತಮಿಳುನಾಡು ಮೂಲದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಬಸ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಲಾರಿ ಚಾಲಕ ವಿನೋದಕುಮಾರ್‌ ಹಾಗೂ ಕೊಪ್ಪಳ ಜಿಲ್ಲೆಯ ಭಾಗ್ಯನಗರ ನಿವಾಸಿ ಗೀತಾ ಎನ್ನಲಾಗಿದೆ. ಮೃತ ಮಹಿಳೆ ಸವದತ್ತಿ ತಾಲೂಕಿನ ಯಲ್ಲಮ್ಮನಗುಡ್ಡಕ್ಕೆ ಹೊರಟಿದ್ದರು ಎನ್ನಲಾಗಿದೆ.ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಪ್ರಭುಗೌಡ, ಇನ್ಸ್‌ಪೆಕ್ಟರ್ ಮಂಜುನಾಥ್ ಕುಸಗಲ್ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಪ್ಯ: ಕಾಂಗ್ರೆಸ್ ಚುನಾವಣಾ ಪ್ರಚಾರಸಭೆ

Posted by Vidyamaana on 2023-04-28 13:57:41 |

Share: | | | | |


ಸಂಪ್ಯ: ಕಾಂಗ್ರೆಸ್ ಚುನಾವಣಾ ಪ್ರಚಾರಸಭೆ

ಪುತ್ತೂರು; ಮಕ್ಕಳೇ ನಮ್ಮ ಸಂಪತ್ತು, ಮಕ್ಕಳಿಗಾಗಿ ನಾವು ಎಲ್ಲವನ್ನೂ ಸಹಿಸುತ್ತೇವೆ, ತ್ಯಾಗಗಳನ್ನು ಮಾಡುತ್ತೇವೆ ಆದರೆ ಅದೇ ಮಕ್ಕಳು ನಾಳೆ ದಾರಿ ತಪ್ಪಿದಾಗ ಅಥವಾ ಕಲಿತು ಉದ್ಯೋಗ ಇಲ್ಲವಾದಾಗ ನಾವೇ ಅದರ ನೋವನ್ನು ಅನುಭವಿಸಬೇಕಾಗುತ್ತದೆ , ಮಕ್ಕಳು ದಾರಿತಪ್ಪದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಪೋಷಕರದ್ದು , ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರೆಯುವಂತಾಗಲು ರಾಜ್ಯದಲ್ಲಿ , ದೇಶದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವದಲ್ಲಿರುವಂತೆ ನೋಡಿಕೊಳ್ಳಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ನಮಗೆ ಧರ್ಮಗಳ ನಡುವಿನ ಜಗಳ, ದ್ವೇಷ ಬೇಡ. ನಮ್ಮ ಮಕ್ಕಳೂ ಅದಕ್ಕೆ ಬಲಿಯಾಗುವುದು ಬೇಡ. ಧರ್ಮ ಧರ್ಮಗಳ ನಡುವೆ ದ್ವೇಷದಿಂದ ಸಮಾಜಕ್ಕ ಗಳಿಸಿಕೊಳ್ಲುವಂತದ್ದು ಏನೂ ಇಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಪರಸ್ಪರ ಒಂದಾಗಿ ಬಾಳಬೇಕು. ದೇಶದಲ್ಲಿ ಹಲವು ಧರ್ಮಳು, ಜಾತಿಯವರನ್ನೊಳಗೊಂಡ ಸುಂದರ ಹೂದೋಟ, ಈ ಹೂದೋಠ ಹಾಗೇಯೇ ಉಳಿಯಲಿ. ದೇಶದಲ್ಲಿ ಜಾತ್ಯಾತೀತ ಕಲ್ಪನೆ ಉಳಿದುಕೊಳ್ಳಬೇಕಾದರೆ ಹಿಂದೂ ಮುಸ್ಲಿಂ ಪರಸ್ಪರ ಒಟ್ಟಾಗಿರಬೇಕು. ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರ ಜೊತೆ ನಮ್ಮ ಮಕ್ಕಳು ಸೇರದಂತೆ ನಾವು ಜಾಗೃತರಾಗಬೇಕಿದೆ ಎಂದು ಹೇಳಿದರು.

ಪುತ್ತೂರು ನಗರವನ್ನು ಅಭಿವೃದ್ದಿ ಮಾಡುತ್ತೇವೆ ಎಂದು ಶಾಸಕರು ಪ್ರಾರಂಭದಲ್ಲಿ ಹೇಳಿದ್ದರು ಆದರೆ ಅಭಿವೃದ್ದಿ ಮಾಡಿಲ್ಲ, ಕೇವಲ ಫ್ಲೆಕ್ಸ್ ಹಾಕಿದ್ದು ಮಾತ್ರ, ಬ್ರಹ್ಮ ನಗರದಲ್ಲಿ ೧೦೦ ಮನೆಗಳ ಫ್ಲ್ಯಾಟ್ ನಿರ್ಮಾಣ ಮಾಡುತ್ತೇವೆ ಎಂದವರಿಗೆ ಅಲ್ಲಿಗೆ ಸರಿಯಾದ ಮೂಲಭೂತ ಸೌಕರ್ಯವನ್ನು ಮಾಡಲು ಸಾಧ್ಯವಾಗಲಿಲ್ಲ. ಶಂಕುಸ್ಥಾಪನೆ ಮಾಡಿದ್ದು, ಫ್ಲೆಕ್ಸ್ ಹಾಕಿದ್ದು, ೪೦ ಪರ್ಸೆಂಟ್ ಕಮಿಷನ್ ತಗೊಂಡು ಜಾಲಿ ಮಾಡಿದ್ದು ಬಿಟ್ರೆ ಏನೇನೂ ಅಭಿವೃದ್ದಿ ಕೆಲಸ ಮಾಡಿಲ್ಲ. ಪುತ್ತೂರು ನಗರದಲ್ಲಿ ಇನ್ನೂ ಒಳಚರಂಡಿ ವ್ಯವಸ್ಥೆ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ ಎಂದು ದೂರಿದರು. ಕಾಂಗ್ರೆಸ್ ಬೆಂಬಲಿಸಿ ನಾವು ಅಭಿವೃದ್ದಿ ಮಡಿ ತೋರಿಸುತ್ತೇವೆ ಎಂದು ರೈಗಳು ಸಭೆಗೆ ತಿಳಿಸಿದರು. ಈ ಬಾರಿ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹವಾ ಇದೆ. ಖಂಡಿತವಾಗಿಯೂ ನಿಮ್ಮೆಲ್ಲರ ಸಹಕಾರದಿಂದ ಪುತ್ತೂರಿನಲ್ಲಿ ಕಾಂಗ್ರೆಸ್ ಮತ್ತೆ ಇತಿಹಾಸವನ್ನು ನಿರ್ಮಾಣ ಮಾಡಲಿದೆ ಎಂದು ಭವಿಷ್ಯ ನುಡಿದರು

ದೇಶಕಟ್ಟಿದ್ದು ಕಾಂಗ್ರೆಸ್ ಮಾರಿದ್ದು ಬಿಜೆಪಿ; ಮಹಮ್ಮದ್ ಬಡಗನ್ನೂರು

 ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟದ್ದು ಕಾಂಗ್ರೆಸ್ ಎಂದು ಕಾಂಗ್ರೆಸ್ಸನ್ನು ದೂರುವವನಿಗೂ ಗೊತ್ತಿದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರಿಗೆ ಬದುಕಲು ಸಾಧ್ಯ ಎಂದು ಇಂದಿರಾಗಾಂಧಿಯನ್ನು, ನೆಹರೂ ಅವರನ್ನು ಹಿಯ್ಯಾಳಿಸುವವನಿಗೆ ಗೊತ್ತಿದೆ ಎಲ್ಲವೂ ಗೊತ್ತಿದ್ದು ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುತ್ತಿರುವವರು ದೆಶದ ಇತಿಹಾಸವನ್ನು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ಹೇಳಿದರು.

ಹುಟ್ಟುವಾಗಲೇ ಚಿನ್ನದ ಚಮಚ ಬಾಯಿಗೆ ಇಟ್ಟುಕೊಂಡುಕೊಂಡು ಬಂದ ದೇಶದ ಜನರಿಗೋಸ್ಕರ ಅನೇಕ ವರ್ಷ ಜೈಲು ವಾಸ ಅನುಭವಿಸಿದರು. ಉಳುವವನಿಗೇ ಭೂಮಿಯನ್ನು ಕೊಟ್ಟ ಇಂದಿರಾಗಾಂಧಿಯನ್ನು ಗುಂಡಿಟ್ಟು ಕೊಂದರು, ಭಾರತವನ್ನು ವಿಶ್ವಗುರು ಮಾಡಲು ಹೊರ ರಾಜೀವ ಗಾಂಧಿ ದೇಶಕ್ಕಾಗಿ ರಕ್ತ ಸಾಕ್ಷಿಯಾದರು ಇವರೆಲ್ಲರ ತ್ಯಾಗದ ಫಲವಾಗಿ ಇಂದು ಭಾರತ ಕಂಗೊಳಿಸುತ್ತದೆ ವಿನಾ ಸಾರ್ವರ್ಕರ್ ಸಂತತಿಗಳಿಂದ ದೇಶ ಉದ್ದಾರ ಆಗಿಲ್ಲ. ಕಾಂಗ್ರೆಸ್ ಕಟ್ಟಿದ ಭವ್ಯ ಭಾರತವನ್ನು ಇಂದು ಅಧಿಕಾರದಲ್ಲಿರುವ ಬಿಜೆಪಿ ಒಂದೊಂದಾಗಿ ಮಾರಾಟ ಮಾಡುತ್ತಿದೆ. ದೇಶ ಉಳಿಯಬೇಕಾದರೆ ಬಿಜೆಪಿ ತೊಳಗಬೆಕು. ಬಿಜೆಪಿ ಮುಕ್ತ ಕರ್ನಾಟಕ, ಬಿಜೆಪಿ ಮುಕ್ತ ಭಾರತವಾಗುವಲ್ಲಿ ಪ್ರತೀಯೊಬ್ಬ ಪ್ರಜೆಯೂ ಚಿಂತಿಸಬೇಕಿದೆ. ಕಾಂಗ್ರೆಸ್ ಬೆಂಬಲಿಸುವ ಮೂಲಕ ನಾವು ಹಿರಿಯರ ತ್ಯಾಗಕ್ಕೆ ಗೌರವ ಕೊಡುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ಶಾಸಕರಾದವರಿಗೆ ನೈತಿಕತೆ ಬೇಕು

ಚುನಾವಣೆಗೆ ಎಲ್ಲರಿಗೂ ಸ್ಪರ್ದಿಸಬಹುದು ಆದರೆ ಆತನಿಗೆ ಕನಿಷ್ಟ ನೈತಿಕತೆಯಾದರೂ ಬೇಕಾಗುತ್ತದೆ. ನೈತಿಕತೆಯಲ್ಲಿ ಬಲಹೀನನಾದವನಿಗೆ ಜನರ ಸೇವೆಯನ್ನು ಹೇಗೆ ಮಾಡಲು ಸಾಧ್ಯವಾಗುತ್ತದೆ. ಪುತ್ತೂರಿನಲ್ಲಿ ಇದೇ ಕಾರಣಕ್ಕೆ ಟಿಕೆಟ್ ಕೊಡಲಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಜನಪ್ರತಿನಿಧಿಯಾದವರು ಚುನಾವಣೆ ಸಂದರ್ಬದಲ್ಲಿ ತಮ್ಮ ಬಂಡವಾಳ ಬಯಲು ಆಗದಂತೆ ನ್ಯಾಯಾಲಯದಿಂದ ಸ್ಟೇ ಆರ್ಡರ್ ತರುತ್ತಿರುವುದು ನೈತಿಕತೆ ಕುಸಿದಿರುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ಗೆ ಸೇರ್ಪಡೆ

ಇದೇ ಸಂಧರ್ಭದಲ್ಲಿ ಬಿಜೆಪಿ ಮುಖಂಡ, ಆರ್ಯಾಪು ಗ್ರಾಪಂ ಮಾಜಿ ಸದಸ್ಯ ಜಬ್ಬಾರ್ ಸಂಪ್ಯ ತಮ್ಮ ಅಭಿಮಾನಿಗಳ ಜೊತೆಗೆ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಹೇಮನಾಥ ಶೆಟ್ಟಿ ಕಾವು, ಎಂ ಎಸ್ ಮಹಮ್ಮದ್, ನಗರ ಪ್ರಚಾರ ಸಮಿತಿ ಅಧ್ಯಕ್ಷ ಪ್ರಸನ್ನ ಶೆಟ್ಟಿ ಸಿಝ್ಲರ್, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದಾಲಿ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಬೆಳಗಾವಿ : ಭೀಕರ ಅಪಘಾತದಲ್ಲಿ ಇಬ್ಬರು ಸಾವು; ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ

Posted by Vidyamaana on 2023-06-17 08:05:29 |

Share: | | | | |


ಬೆಳಗಾವಿ : ಭೀಕರ ಅಪಘಾತದಲ್ಲಿ ಇಬ್ಬರು ಸಾವು; ಕಾಡಸಿದ್ದೇಶ್ವರ ಸ್ವಾಮೀಜಿ ಗಂಭೀರ

ಬೆಳಗಾವಿ: ಕಾರು ಮತ್ತು ಕಂಟೇನರ್‌ಗಳ ಮಧ್ಯೆ ಭೀಕರ ಸರಣಿ ಅಪಘಾತದಲ್ಲಿಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗೆ  ಗಂಭೀರ ಗಾಯಗಳಾಗಿವೆ. ಮೃತರಿಬ್ಬರೂ ಸ್ವಾಮೀಜಿಗಳ ಸೇವಕರಾಗಿದ್ದಾರೆ.

ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಮೀಜಿಗಳ ಕಾರು, ಕಂಟೇನರ್‌ ಮತ್ತು ಇತರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಬೆಳಗಾವಿ ತಾಲೂಕಿನ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ತಮ್ಮ ಸಹಾಯಕರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ತೀವ್ರ ಗಾಯಗಳೊಂದಿಗೆ ಪ್ರಾಣ ಕಳೆದುಕೊಂಡರು.

ಕೂಡಲೇ ಸ್ವಾಮೀಜಿ ಅವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಐಸಿಯುದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಕಾಡಸಿದ್ಧೇಶ್ವರ ಸ್ವಾಮೀಜಿ ಅವರನ್ನು ಕರೆದೊಯ್ಯುವ ಕೆಲಸವನ್ನು ತ್ವರಿತಗೊಳಿಸಿದರು.

ಸ್ವಾಮೀಜಿಯವರ ಸೇವಕರಿಬ್ಬರ ಮೃತದೇಹಗಳನ್ನು ಬೀಮ್ಸ್‌ನ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮೃತ ಸೇವಕರ ಹೆಸರು ಇನ್ನೂ ತಿಳಿದುಬಂದಿಲ್ಲ.

ಪ್ರತಿಭಟನೆಯಲ್ಲಿ ಭಾಗವಹಿಸಲು ಹೋಗುತ್ತಿದ್ದರು

ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬೆಳಗಾವಿಯಲ್ಲಿ ಆಯೋಜನೆಗೊಂಡಿದ್ದ ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆಶ್ರಯದಲ್ಲಿ ಪ್ರತಿಭಟನೆ ಆಯೋಜನೆಯಾಗಿದೆ.



Leave a Comment: