Posted by vidyamaana on 2024-07-03 19:44:44 |
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.
ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕುಎಂಬುದು ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸುಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.
ಕಾಲೇಜುನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.
ಹೆಚ್ಚುಅನುದಾನ ಕೊಡಿ
ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನುನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರುಮನವಿ ಸಲ್ಲಿಸಿದರು.
Posted by Vidyamaana on 2024-03-28 14:00:58 |
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಏ.4 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಈವರೆಗೆ ಯಾವ ಪಕ್ಷದಿಂದಲೂ ನಾಮಪತ್ರ ಸಲ್ಲಿಕೆಯಾಗಿಲ್ಲ.
ನಾಮಪತ್ರಗಳನ್ನು ಸಲ್ಲಿಸಲು ಗುರುವಾರ (ಏಪ್ರಿಲ್ 4) ಕೊನೆಯ ದಿನವಾಗಿದೆ.
ಶುಕ್ರವಾರ (ಏಪ್ರಿಲ್ 5) ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು.
ನಾಮಪತ್ರಗಳನ್ನು ಹಿಂಪಡೆಯಲು ಸೋಮವಾರ (ಏಪ್ರಿಲ್ 8) ಕೊನೆಯ ದಿನವಾಗಿದೆ.
ದಕ್ಷಿಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.
ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ
ಮತಗಳ ಎಣಿಕೆ ಮತ್ತು ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದೆ.
Posted by Vidyamaana on 2024-06-08 17:32:36 |
ಲಕ್ನೋ: ಮುಸ್ಲಿಮರ ವಿರುದ್ಧ ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮರ ವೇಷ ಹಾಕಿ ಅಯೋಧ್ಯೆಯ ಹಿಂದೂಗಳನ್ನು ಟೀಕಿಸಿದ ಧೀರೇಂದ್ರ ರಾಘವ್ ಎಂಬಾತನನ್ನು ಬಂಧಿಸಲಾಗಿದೆ.
ಸ್ಕಲ್ಕ್ಯಾಪ್ ಧರಿಸಿದ ವ್ಯಕ್ತಿಯೊಬ್ಬ ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೊ ವೈರಲ್ ಆಗಿತ್ತು.
Posted by Vidyamaana on 2024-04-20 20:38:39 |
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟನಲ್ಲಿ ಘಟನೆ ನಡೆದಿದೆ.ಕೊಲೆಯಾದ ಮಹಿಳೆಯನ್ನು ಶೋಭಾ ಎಂದು ಗುರುತಿಸಲಾಗಿದೆ.
ಶೋಭಾ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿ ಕೊಟ್ಟಿದದ್ದ ಶೋಭಾ,ಭದ್ರಪ್ಪ ಲೇಔಟ್ ಮನೆಯಲ್ಲಿ ಕುಟುಂಬ ಸಮೇತ ವಾಸವಿದ್ದರು. ಮನೆಯಲ್ಲಿ ಆಗಾಗ್ಗೆ ಒಬ್ಬರೇ ಇರುತ್ತಿದ್ದರು
Posted by Vidyamaana on 2023-11-06 16:37:45 |
ಹೊಸದಿಲ್ಲಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್ಫೇಕ್ ವಿಡಿಯೋ (Deepfake video) ಕುರಿತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Union Minister Rajeev Chandrasekhar) ಪ್ರತಿಕ್ರಿಯಿಸಿದ್ದಾರೆ.ʼಇಂಥ ಅಪಾಯಕಾರಿ ಮತ್ತು ಹಾನಿಕಾರಕ ತಪ್ಪು ಮಾಹಿತಿಗಳನ್ನು ಈ ವೇದಿಕೆಗಳ ಮೂಲಕ ಎದುರಿಸಬೇಕಾಗಿದೆʼ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಕ್ಲಿಕ್ ಮಾಡಿ
ʼಎಕ್ಸ್ʼನಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಇಂಟರ್ನೆಟ್ ಬಳಸುವ ಎಲ್ಲಾ ಡಿಜಿಟಲ್ ನಾಗರಿಕರ ಸುರಕ್ಷತೆ ಮತ್ತು ವಿಶ್ವಾಸವನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದಿದ್ದಾರೆ.
2023ರ ಏಪ್ರಿಲ್ನಲ್ಲಿ ಸೂಚಿಸಲಾದ ಐಟಿ ನಿಯಮಗಳನ್ನು ತಿಳಿಸುತ್ತಾ ಅವರು, ಆನ್ಲೈನ್ ಪ್ಲಾಟ್ಫಾರ್ಮ್ಗಳಿಗೆ ಕಾನೂನು ಬಾಧ್ಯತೆಯಿದೆ. ಯಾವುದೇ ಬಳಕೆದಾರರು ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡದಂತೆ ಖಚಿತಪಡಿಸಿಕೊಳ್ಳಬೇಕು. ಮತ್ತು ಯಾವುದೇ ಬಳಕೆದಾರರು ಅಥವಾ ಸರ್ಕಾರ ಈ ಬಗ್ಗೆ ವರದಿ ಮಾಡಿದಾಗ 36 ಗಂಟೆಗಳಲ್ಲಿ ತಪ್ಪು ಮಾಹಿತಿಯನ್ನು ತೆಗೆದುಹಾಕಬೇಕು. ಪ್ಲಾಟ್ಫಾರ್ಮ್ಗಳು ಇದನ್ನು ಅನುಸರಿಸದಿದ್ದರೆ ನಿಯಮ 7ರ ಪ್ರಕಾರ ಮತ್ತು IPCಯ ನಿಬಂಧನೆಗಳ ಅಡಿಯಲ್ಲಿ ಬಾಧಿತ ವ್ಯಕ್ತಿಯು ಆನ್ಲೈನ್ ವೇದಿಕೆಗಳನ್ನು ನ್ಯಾಯಾಲಯಕ್ಕೆ ಎಳೆಯಬಹುದು. ಡೀಪ್ಫೇಕ್ಗಳು ಇತ್ತೀಚಿನ ಹೆಚ್ಚು ಅಪಾಯಕಾರಿ ಮತ್ತು ಹಾನಿಕರವಾದ ತಪ್ಪು ಮಾಹಿತಿ ಮೂಲಗಳಾಗಿವೆ ಎಂದಿದ್ದಾರೆ.
ನಟಿ ರಶ್ಮಿ ಮಂದಣ್ಣ ಅವರಂತೆ ತೋರುವ ವೀಡಿಯೊವನ್ನು ಶೇರ್ ಮಾಡಿದ ಅಭಿಷೇಕ್ ಕುಮಾರ್ ಎಂಬ ಪತ್ರಕರ್ತರಿಗೆ ಕೇಂದ್ರ ಸಚಿವರು ಪ್ರತ್ಯುತ್ತರವಾಗಿ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಡೀಪ್ಫೇಕ್ ಘಟನೆಗಳನ್ನು ಎದುರಿಸಲು ಕಾನೂನು ಮತ್ತು ನಿಯಂತ್ರಕ ಚೌಕಟ್ಟಿನ ತುರ್ತು ಅವಶ್ಯಕತೆ ಇದೆʼʼ ಎಂದಿರುವ ಕುಮಾರ್ ಅವರು ಮೂಲ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದು ನಟಿ ಝರಾ ಪಟೇಲ್ ಅವರ ವೀಡಿಯೊ ಆಗಿದ್ದು, ಅಕ್ಟೋಬರ್ 9ರಂದು ಅಪ್ಲೋಡ್ ಮಾಡಲಾಗಿತ್ತು. ಅದಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಜೋಡಿಸಿ ವ್ಯತ್ಯಾಸವೇ ಕಾಣದಂತೆ ವಿಡಿಯೋ ಮಾಡಿ ಪೋಸ್ಟ್ ಮಾಡಲಾಗಿದೆ. ಝರಾ ಪಟೇಲ್ ಬ್ರಿಟಿಷ್ ಇಂಡಿಯನ್ ಪ್ರಜೆಯಾಗಿದ್ದು, Instagramನಲ್ಲಿ 4.15 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.ಗುಡ್ ಬೈ ಚಿತ್ರದಲ್ಲಿ ಮಂದಣ್ಣನ ತಂದೆಯ ಪಾತ್ರದಲ್ಲಿ ನಟಿಸಿದ್ದ ಸೂಪರ್ಸ್ಟಾರ್ ಅಮಿತಾಭ್ ಬಚ್ಚನ್ ಕೂಡ ನಟಿಯ ಬೆಂಬಲಕ್ಕೆ ಬಂದಿದ್ದು, ಈ ಬಗ್ಗೆ ಕಾನೂನು ಕ್ರಮಕ್ಕೆ ಕರೆ ನೀಡಿದ್ದಾರೆ.
ಡೀಪ್ಫೇಕ್ ಅಂದರೇನು?
ಡೀಪ್ಫೇಕ್ ಕೃತಕ ಬುದ್ಧಿಮತ್ತೆಯ ಸಹಾಯದಿಂದ ಮಾಡಿದ ವೀಡಿಯೊಗಳು. ಇವು ನೈಜವಾಗಿಯೇ ಕಾಣಿಸುತ್ತವೆ. ಡೀಪ್ಫೇಕ್ ವೀಡಿಯೊದಲ್ಲಿ ಸಾಮಾನ್ಯವಾಗಿ ಬೇರೆ ಬೇರೆ ವ್ಯಕ್ತಿಗಳ ದೇಹ ಮತ್ತು ಮುಖವನ್ನು ಡಿಜಿಟಲ್ ಮ್ಯಾನಿಪುಲೇಟ್ ಮಾಡಿ ಜೋಡಿಸಿ ಒರಿಜಿನಲ್ ಆಗಿ ಕಾಣುವಂತೆ ಮಾಡಲಾಗುತ್ತದೆ.
Posted by Vidyamaana on 2023-09-10 18:01:49 |
ನವದೆಹಲಿ: ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಜಿ 20 ಶೃಂಗಸಭೆ ನಡೆದಿರುವ ಪ್ರದೇಶದ ಭಾರತ್ ಮಂಟಪ ಜಲಾವೃತಗೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಕಾಂಗ್ರೆಸ್ ಟೀಕಾಸ್ತ್ರ ಮೊಳಗಿಸಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜನ ಖರ್ಗೆ ಅವರಿಗೆ ಶೃಂಗಸಭೆ ಔತಣಕೂಟಕ್ಕೆ ಆಹ್ವಾನ ನೀಡಿದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಇದು ಮತ್ತೊಂದು ಅಸ್ತ್ರ ನೀಡಿದಂತಾಗಿದೆ. ಭಾರತ ಮಂಟಪ ಜಲಾವೃತ್ತದ ದೃಶ್ಯವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವ ಮೂಲಕ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ವಾಕ್ ಪ್ರಹಾರ ನಡೆಸಿದ್ದಾರೆ.
ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು ಪ್ರಗತಿಯ ಪೊಳ್ಳು ಭರವಸೆಗಳು ಸ್ಪಷ್ಟವಾಗಿ ಕಾಣಿಸುತ್ತಿವೆ. 2,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದ ವೇದಿಕೆ ಕೇವಲ ಒಂದು ದಿನದ ಮಳೆಗೆ ಜಲಾವೃತ್ತವಾಗಿದೆ ಎಂದು ಟೀಕಿಸಿದ್ದಾರೆ. ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಬಿವಿ, ಕೇಂದ್ರದ ಭರವಸೆಗಳನ್ನು ಉಲ್ಲೇಖಿಸಿ ಅಭಿವೃದ್ಧಿ ಈಜುತ್ತಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
Posted by Vidyamaana on 2024-05-18 15:10:08 |
ಕಾರವಾರ: ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ ನೀಡಿದ್ದಾರೆ. ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಕಂಡು ಬಂದಿದೆ. ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು.ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದ್ದು ಇದು ಆರೋಗ್ಯದ ಮೇಲೆ ಪರಿಣಾಮ ಬೀರಲಿರುವ ಹಿನ್ನಲೆಯಲ್ಲಿ ಇದರ ಬಳಕೆಯನ್ನು ಕೂಡಲೇ ನಿಲ್ಲಿಸುವಂತೆ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಮನವಿ ಮಾಡಿದ್ದಾರೆ.