ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ - ಯು ಟಿ ಖಾದರ್

Posted by Vidyamaana on 2023-07-19 16:33:48 |

Share: | | | | |


ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದ  ಸಿದ್ದರಾಮಯ್ಯ - ಯು ಟಿ ಖಾದರ್

ಬೆಂಗಳೂರು ;- ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು ಟಿ ಖಾದರ್  ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದರು.ಈ ಹಿನ್ನೆಲೆ ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿ ಆದೇಶಿಸಿದ್ದಾರೆ


ಇನ್ನು ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಸದಸ್ಯರನ್ನು ಮಾರ್ಷಲ್​ಗಳು ಹೊತ್ತೊಯ್ದಿದ್ದಾರೆ. ಮತ್ತೊಂದು ಕಡೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅಸ್ವಸ್ಥಗೊಂಡು ಕುಸಿದು ಬಿದ್ದ ಪ್ರಕರಣವೂ ನಡೆಯಿತು

ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು

Posted by Vidyamaana on 2023-09-20 21:06:47 |

Share: | | | | |


ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು

ವಿಜಯನಗರ: ಬಿಜೆಪಿ ಟಿಕೆಟ್ ಡೀಲ್ ಪ್ರಕರಣದಲ್ಲಿ ಮಹತ್ವದ ತಿರುವು ಲಭಿಸಿದ್ದು ಮೂರನೇ ಆರೋಪಿ ಅಭಿನವ ಹಾಲಶ್ರೀಗೆ ಸಂಬಂಧಿಸಿದ 65 ಲಕ್ಷ ರೂ. ನಗದು ಹಣವಿದ್ದ ಚೀಲ ಪತ್ತೆಯಾಗಿದ್ದು ಸ್ವಾಮೀಜಿ ಕೊಟ್ಟಿದ್ದ ಹಣವೆಂದು ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಹೊರಬಿಟ್ಟಿದ್ದಾನೆ. 


ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಸ್ವಾಮೀಜಿ ಮೈಸೂರು ಕಡೆ ಪ್ರಯಾಣ ಬೆಳೆಸಿದ್ದರು. ಅಲ್ಲದೆ, ಈ ವೇಳೆ 65 ಲಕ್ಷ ಹಣ ಇದ್ದ ಬ್ಯಾಗ್ ಅನ್ನು ಸ್ವಾಮೀಜಿಯ ಕಾರು ಚಾಲಕ ವ್ಯಕ್ತಿಯೊಬ್ಬನಿಗೆ ನೀಡಿದ್ದ. ಈ ನಡುವೆ, ಕಾರು ಚಾಲಕ ಮತ್ತು ಸ್ವಾಮೀಜಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಹಣ ಪಡೆದಿದ್ದ ವ್ಯಕ್ತಿ ವಿಡಿಯೋ ಮಾಡಿದ್ದು 65 ಲಕ್ಷ ಹಣ ಇರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾನೆ. 


ನನಗೆ ಸ್ವಾಮೀಜಿ ಹಣ ಕೊಟ್ಟಿದ್ರು, ಈ ಹಣವನ್ನು ಹಿರೇಹಡಗಲಿಯ ಮಠದಲ್ಲಿರುವ ಅವರ ತಂದೆಯವರಿಗೆ ಒಪ್ಪಿಸಲು ತಿಳಿಸಿದ್ದಾರೆ. ‌ಮಠಕ್ಕೆ ಬಂದು ಪಲ್ಲಕ್ಕಿ ಬಳಿ ಹಣದ ಬ್ಯಾಗ್ ಇಟ್ಟು,  ನಾನು ಬ್ಯಾಗ್ ಇಟ್ಟಿದ್ದೇನೆ ಅಂತ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಇಂದು ಬೆಳಗ್ಗೆ ಮಠಕ್ಕೆ ಬಂದು ಹಣವಿಟ್ಟು ವ್ಯಕ್ತಿ ತೆರಳಿದ್ದ. ಹಣದ ಬ್ಯಾಗ್ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿಸಿಬಿ ಪೊಲೀಸರು ಮಠದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ. ವಿಡಿಯೋದಲ್ಲಿ ಇದರ 65 ಲಕ್ಷದಿಂದ ನಾಲ್ಕು ಲಕ್ಷವನ್ನು ವಕೀಲರಿಗೆಂದು ಕಾರು ಚಾಲಕ ಪಡೆದಿದ್ದಾನೆ. ಉಳಿದ ಹಣ ಇದರಲ್ಲಿ ಇದೆಯೆಂದು ವ್ಯಕ್ತಿ ತಿಳಿಸಿದ್ದ. 


ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿಗೆ ಉದ್ಯಮಿ ಗೋವಿಂದ ಪೂಜಾರಿ ಒಂದೂವರೆ ಕೋಟಿ ಹಣ ನೀಡಿದ್ದಾಗಿ ತಿಳಿಸಿದ್ದು ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ಗುರುತಿಸಿದ್ದಾರೆ.

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ವಿತರಣೆ

Posted by Vidyamaana on 2024-06-03 08:28:45 |

Share: | | | | |


ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್‌ : ರಾಜ್ಯ ಸರ್ಕಾರದಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ವಿತರಣೆ

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮನೆ ಬಾಗಿಲಿಗೆ ಆರೋಗ್ಯ ಸೇವೆ ಪೂರೈಸಲು ಮುಂದಾಗಿದೆ.

ಹೌದು, ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮನೆ ಬಾಗಿಲಿಗೆ ಆರೋಗ್ಯ ಸೇವೆ, ಔಷಧ ಪೂರೈಸಲು ನಮ್ಮ ಸರ್ಕಾರ ಮುಂದಾಗಿದೆ.

ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2023-06-21 04:45:02 |

Share: | | | | |


ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ರಾಜ್ಯದ ಪ್ರತೀ ಮಹಿಳೆಯರಿಗೆ ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ   ಅವರವರು ನಂಬುವ ದೇವರ, ತೀರ್ಥ ಸ್ಥಳಗಳ ಯಾತ್ರೆಗೆ ಉಚಿತ ಬಸ್ ಮೂಲಕ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಿಜವಾದ ಹಿಂದುತ್ವ ಪಕ್ಷವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು

ಅವರು ಹಿರೆಬಂಡಾಡಿಯಲ್ಲಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕರ ಅಸ್ತಿತ್ವಕ್ಕೆ ಬಂದ ಬಳಿಕ ಜನ ನೆಮ್ಮದಿಯಲ್ಲಿದ್ದಾರೆ. ಸರಕಾರದ ಐದು ಗ್ಯಾರಂಟಿ ಜನರನ್ನು ಸಂತೋಷದಿಂದ ಇರುವಂತೆ ಮಾಡಿದೆ. ಉಚಿತ ಸರಕಾರಿ ಬಸ್ ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದು ಇಂದು ರಜ್ಯದ ಪ್ರತೀಯೊಂದು ದೇವಾಲಯ, ಮಸೀದಿ, ಚರ್ಚುಗಳು ಭಕ್ತರಿಂದ ತುಂಬು ತುಳುಕುತ್ತಿದೆ. ಮಹಿಳೆಯರಿಗೆ ದೇವರ ದರ್ಶನದ ಭಾಗ್ಯವನ್ನು ಕರುಣಿಸಿದಂತಾಗಿದೆ ಇದುವೇ ನಿಜವಾದ ಹಿಂದುತ್ವ, ಇನ್ನೊಬ್ಬರಿಗೆ ಅನ್ಯಾಯ ಮಾಡುವುದು, ಗಲಭೆ ಎಬ್ಬಿಸಿ ಜನರ ಮಧ್ಯೆ ವೈರತ್ವವನ್ನು ತರುವುದು ಹಿಂದುತ್ವವಲ್ಲ ಎಂದು ಹೇಳಿದರು.


ನಾವು ಕುಚ್ಚಲಕ್ಕಿ ಕೊಡ್ತೇವೆ

ಪಡಿತರ ಮೂಲಕ ತಲಾ ೫ ಕೆ ಜಿ ಕುಚ್ಚಲಕ್ಕಿಯನ್ನು ನಾವು ಕೊಡುತ್ತೇವೆ. ಕರಾವಳಿ ಭಾಗದಲ್ಲಿ ಕುಚ್ಚಲಕ್ಕಿ ಬೇಡಿಕೆ ಇದ್ದು ಈ ಬಗ್ಗೆ ನಾನು ಸೀಎಂ ಜೊತೆ ಮಾತನಾಡಿದ್ದೇನೆ. ಕೆಲವು ತಿಂಗಳೊಳಗೆ ಈ ವ್ಯವಸ್ಥೆ ಆಗಲಿದೆ. ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷವಾಗಿದೆ, ಬಡವರ ಆಶೋತ್ತರಗಳನ್ನು ನಮ್ಮ ಸರಕಾರ ಖಂಡಿತವಾಗಿಯೂ ಈಡೇರಿಸಲಿದೆ. ಬಡವರ ಉಚಿತ ಭಾಗ್ಯವನ್ನು ವಿರೋಧಿಸುವವರು ವಿರೋಧಿಸುತ್ತಲೇ ಇರಲಿ ಅದರ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದರು.


೨೪ ಗಂಟೆ ಕುಡಿಯುವ ನೀರು

ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಪ್ರತೀ ಮನೆಗೆ ೨೪ ಗಂಟೆ ಕುಡಿಯುವ ನೀರಿನ ಯೋಜನೆಯನ್ನು ಜರಿಗೆ ತರಲಾಗುತ್ತದೆ. ಇದಕ್ಕಾಗಿ ಈಗಾಗಲೇ ಬಹುಕೋಟಿ ಅನುದಾನವನ್ನು ನಿರೀಕ್ಷಿಸಲಾಗಿದ್ದು ಅದು ಖಂಡಿತವಾಗಿಯೂ ಕಾರ್ಯರೂಪಕ್ಕೆ ಬರಲಿದೆ. ಪುತ್ತೂರು ಮತ್ತು ಸುಳ್ಯ ತಾಲೂಕಿನಲ್ಲಿ ಮುಂದಿನ ಎರಡು ವರ್ಷದೊಳಗೆ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕರು ತಿಳಿಸಿದರು.


ಕೈಗಾರಿಕೆಗಳ ಆರಂಭ

ಪುತ್ತೂರಿನ ವಿವಿಧ ಭಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸುವ ಬಗ್ಗೆ ಆಲೋಚನೆಯನ್ನು ಮಾಡಿದ್ದೇನೆ. ಬಹುರಾಷ್ಟ್ರೀಯ ಕಂಪೆನಿಗಳು ಪುತ್ತೂರಿನಲ್ಲಿ ಕೈಗಾರಿಕೆಗಳನ್ನು ಪ್ರಾರಂಭ ಮಾಡಲಿದೆ. ಜನರಿಗೆ ತೊಂದರೆಯಾಗದೆ, ಪರಿಸರಕ್ಕೂ ತೊಂದರೆಯಾಗದ ರೀತಿಯಲ್ಲಿ ಕ್ಷೇತ್ರದಲ್ಲಿ ಕೈಗಾರಿಕಾ ಕೇಂದ್ರಗಳು ಕಾರ್ಯಾಚರಿಸಲಿದೆ. ಕೈಗಾರಿಕೆಗಳು ಆರಂಭವಾದ ಬಳಿಕ ಅದರಲ್ಲಿ ಸ್ಥಳೀಯರಿಗೆ ಉದ್ಯೋಗವನ್ನು ಕಲ್ಪಿಸಲಾಗುವುದು ಎಂದು ಹೇಳಿದರು.


ಹಗೆ ರಾಜಕೀಯ ಇಲ್ಲ

ನಾನಾಗಾಲಿ, ಕಾರ್ಯಕರ್ತರಾಗಲಿ ಹಗೆತನದ ರಾಜಕೀಯ ಮಾಡಬಾರದು. ಅವ ನಮಗೆ ಓಟು ಹಾಕಿಲ್ಲ, ಅವನು ಬಿಜೆಪಿ ಇವನು ಬ್ಯಾಟ್ ಎಂದೆಲ್ಲಾ ಯಾರನ್ನೂ ಕಡೆಗನಿಸಬೇಡಿ. ಪಕ್ಷದ ಯೋಜನೆಗಳನ್ನು ಎಲ್ಲರಿಗೂ ನೀಡಿ. ನಮ್ಮ ಸೇವೆಯನ್ನು ಕಂಡು ಅವರು ನಮ್ಮೊಳಗೆ ಸೇರಿಕೊಳ್ಳುವಂತೆ ಪ್ರತೀಯೊಬ್ಬ ಕಾರ್ಯಕರ್ತನೂ ಕಾರ್ಯಪೃವೃತ್ತರಾಗಬೇಕು. ೯೪ ಸಿ, ಅಕ್ರಮಸಕ್ರಮ ಸೇರಿದಂತೆ ಎಲ್ಲ ಕಡತಗಳನ್ನು ಪಕ್ಷ ನೋಡದೆ ನಾವು ಸ್ವೀಕರಿಸೋಣ, ಕಾಂಗ್ರೆಸ್ ಎಲ್ಲರ ಪಕ್ಷ ಎಂಬುದನ್ನು ಜನರಿಗೆ ತೋರಿಸಿಕೊಡಬೇಕು ಎಂದು ಹೇಳಿದರು. ಯಾರಿಗೂ ಅನ್ಯಾಯ ಮಾಡಬೇಡಿ, ಅನ್ಯಾಯ ಮಾಡಿ ನನ್ನ ಬಳಿ ಬೆಂಬಲ ಕೇಳದಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.


ಹಾಲಿಗೆ ೫೦ ರೂ ಸಿಗುವಂತಾಗಬೇಕು

ಹಾಲಿಗೆ ಲೀಟರ್‍ಗೆ ೫೦ ರೂ ದೊರೆಯುವಂತಾಗಬೇಕು. ದನಗಳನ್ನು ಸಾಕುವುದು ಕಷ್ಟದ ಕೆಲಸವಾಗಿದ್ದು, ಹಾಲಿಗೆ ದರ ಹೆಚ್ಚಾದರೆ ಸಾಕಿದವನಿಗೆ ಏನಾದರು ಲಾಭ ದೊರೆಯಬಹುದಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ನಾನು ಸಂಬಂಧಿಸಿದವರ ಜೊತೆ ಮಾತನಾಡಲಿದ್ದೇನೆ ಎಂದು ಶಾಸಕರು ಹೇಳಿದರು.


೧೦ ಮಂದಿ ಮಹಿಳೆಯರ ತಂಡ

ಪ್ರತೀ ಬೂತ್‌ನಲ್ಲಿ ೧೦ ಮಂದಿ ಮಹಿಳೆಯರ ತಂಡವನ್ನು ಮಾಡಿ ಆ ತಂಡ ಗ್ರಾಮದ ಪ್ರತೀ ಮನೆ ಮನೆಗೆ ತೆರಳಿ ಕಾಂಗ್ರೆಸ್ ಸರಕಾರದ ಸಾಧನೆಗಳನ್ನು ತಿಳಿಸುವುದರ ಜೊತೆಗೆ ಸ್ಥಳೀಯ ದೇವಸ್ಥಾನ, ದೈವಸ್ಥಾನ , ಭಜನಾ ತಂಡದಲ್ಲಿ ನಮ್ಮ ಕಾರ್ಯಕರ್ತರು ಇರುವಂತೆ ನಾವು ವ್ಯವಸ್ಥೆ ಮಾಡಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎಂದು ಹೇಳಿದರು.


ರಾಜ್ಯದಲ್ಲಿ ಸುಭದ್ರ ಸರಕಾರ ಬಂದಿದೆ: ಡಾ. ರಾಜಾರಾಂ ಕೆ ಬಿ

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ ಮಾತನಾಡಿ ರಾಜ್ಯದಲ್ಲಿ ಸುಭದ್ರ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗಲಿದೆ. ಪುತ್ತೂರು ಶಾಸಕರ ಕಾರ್ಯವೈಖರಿ ಚೆನ್ನಾಗಿದೆ. ಜನತೆಗೆ ಉಪಯೋಗವಾಗುವ ರೀತಿಯಲ್ಲಿ ಅವರು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಎಲ್ಲೆಡೆ ಶಾಸಕರ ಕಾರ್ಯಕ್ಕೆ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಪುತ್ತೂರು ಕ್ಷೇತ್ರ ಅಭಿವೃದ್ದಿ ಪಥದತ್ತ ಸಾಗಲಿದೆ ಎಂದು ಹೇಳಿದರು.


ಬಡವರ ಸೇವೆಯಿಂದ ಗೌರವ: ದೇವದಾಸ್

ಡಿಸಿಸಿ ಸದಸ್ಯ ದೇವದಾಸ್ ರೈ ಮಾತನಾಡಿ ೨೨ಸಾವಿರ ಬಡ ಕುಟುಂಬಗಳಿಗೆ ಅಧಿಕಾರದಲ್ಲಿ ಇಲ್ಲದಾಗ ಅಶೋಕ್ ರಐ ನೆರವು ನೀಡಿದ್ದಾರೆ. ಈಗ ಶಾಸಕರಾಗಿದ್ದು ಬಡವರಿಗೆ ಇನ್ನು ಸಂತಸದ ದಿನಗಳು ಬರಲಿದೆ. ಬೂತ್ ಮತ್ತು ವಲಯ ಅಧ್ಯಕ್ಷರುಗಳಿಗೆ ಸ್ಥಾನವನ್ನು ನೀಡುವ ಮೂಲಕ ಶಾಸಕರು ಗ್ರಾಮ ಮಟ್ಟದಲ್ಲಿ ಪಕ್ಷ ಬೆಳೆಯಲು ಕಾರಣರಾಗುತ್ತಿದ್ದಾರೆ ಇದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಉಪ್ಪಿನಂಗಡಿ- ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುರಳೀಧರ ರೈ ಮಟಂತಬೆಟ್ಟು, ಹಿರೆಬಂಡಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವೀಂದ್ರ, ಕೋಡಿಂಬಾಡಿ ಗ್ರಾಪಂ ಸದಸ್ಯರೂ, ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೌಕತ್ ಕೆಮ್ಮಾರ, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ,  ಕೆಪಿಸಿಸಿ ಸಂಯೋಜಕರಾದ ಕೃಷ್ಣ ರಾವ್,  ಕಾಂಗ್ರೆಸ್ ಮುಖಂಡರುಗಳಾದ ಸೇಸಪ್ಪ ನೆಕ್ಕಿಲು, ಉಮನಾಥ ರೈ, ಲೋಕೇಶ್ ಪೆಲತ್ತಡಿ ಮೊದಲಾದವರು ಉಪಸ್ತಿತರಿದ್ದರು.

ಗ್ರಾಪಂ ಸದಸ್ಯೆ ಗೀತಾದಾಸರಮೂಲೆ ಸ್ವಾಗತಿಸಿದರು.ಸೇಸಪ್ಪ ನೆಕ್ಕುಲು ವಂದಿಸಿದರು. ಸತೀಶ್ ಶೆಟ್ಟಿ ಎನ್ನಾಳ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಾಸಕರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

BREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : MLC ಸೂರಜ್ ರೇವಣ್ಣ ಅರೆಸ್ಟ್

Posted by Vidyamaana on 2024-06-23 08:20:55 |

Share: | | | | |


 BREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : MLC ಸೂರಜ್ ರೇವಣ್ಣ ಅರೆಸ್ಟ್

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್‌ ಸಿ ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹಾಸನ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ಸೂರಜ್‌ ರೇವಣ್ಣರನ್ನು ಬಂಧಿಸಲಾಗಿದೆ. 

ನಿನ್ನೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ.

ಧಾರವಾಡ: ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸಾಮೀಜಿ ಘೋಷಿಸಿದ ಆಸ್ತಿ ಎಷ್ಟು?

Posted by Vidyamaana on 2024-04-18 20:45:03 |

Share: | | | | |


ಧಾರವಾಡ: ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸಾಮೀಜಿ ಘೋಷಿಸಿದ ಆಸ್ತಿ ಎಷ್ಟು?

ಧಾರವಾಢ: ಸಂಸದ ಪ್ರಹ್ಲಾದ್ ಜೋಷಿ ವಿರುದ್ಧ ಸಮರ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ-ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ನಾಮಪತ್ರ ಸಲ್ಲಿಸಿದ್ದು, ₹ 9.75 ಕೋಟಿ ಆಸ್ತಿ ಘೋಷಿಸಿದ್ದಾರೆ.

ಧಾರವಾಡ ಕ್ಷೇತ್ರದ ಲೋಕಸಭೆ ಚುನಾವಣೆಗೆ ಇಂದು ಐವರು ಆರು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಶಿರಹಟ್ಟಿಯ ದಿಂಗಾಗಲೇಶ್ವರ ಸ್ವಾಮೀಜಿ ಎರಡು ಪ್ರತಿ ನಾಮಪತ್ರ ಸಲ್ಲಿಸಿದ್ದಾರೆ.



Leave a Comment: