ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಸುದ್ದಿಗಳು News

Posted by vidyamaana on 2023-11-07 04:42:13 |

Share: | | | | |


ಪುತ್ತೂರಿನ ಪ್ರತಿಷ್ಠಿತ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ತಡರಾತ್ರಿ ಬರ್ಬರ ಹತ್ಯೆ

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.


ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 Share: | | | | |


ಕಬ್ಬಡಿ ಸ್ಪರ್ಧಿಗಳ ನಡುವೆ ಮಾರಾಮಾರಿ: ಬೆಚ್ಚಿಬೀಳಿಸುವ ವಿಡಿಯೋ ವೈರಲ್!

Posted by Vidyamaana on 2023-10-09 12:10:54 |

Share: | | | | |


ಕಬ್ಬಡಿ ಸ್ಪರ್ಧಿಗಳ ನಡುವೆ ಮಾರಾಮಾರಿ: ಬೆಚ್ಚಿಬೀಳಿಸುವ ವಿಡಿಯೋ ವೈರಲ್!

ಲಕ್ನೋ ಅಕ್ಟೋಬರ್ 9: ಕಾನ್ಪುರದಲ್ಲಿ ಕಬ್ಬಡಿ ಆಡುವ ಸ್ಪರ್ಧಿಗಳ ನಡುವೆ ಭಯಾನಕವಾಗಿ ಘರ್ಷಣೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೋಡುಗರನ್ನು ಬೆಚ್ಚಿ ಬೀಳಿಸಿದೆ.ಕಾನ್ಪುರದಲ್ಲಿ ನಡೆದ ಕಬಡ್ಡಿ ಪಂದ್ಯವು ತೀವ್ರ ಹಿಂಸಾಚಾರಕ್ಕೆ ತಿರುಗಿದ್ದು ಕಂಡು ಬಂದಿದೆ.ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ವಿದ್ಯಾರ್ಥಿಗಳು ಕುರ್ಚಿಗಳನ್ನು ಎಸೆಯುವ ಮೂಲಕ ಪರಸ್ಪರ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ.


ವಿಡಿಯೋ ನೋಡಲು ಕ್ಲಿಕ್ ಮಾಡಿ

ಬೆಚ್ಚಿಬೀಳಿಸುವ ವಿಡಿಯೋ ವೈರಲ್!


ಈ ವಿಡಿಯೋ ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸೆರೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ.ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಘರ್ಷಣೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಹಿಂಸಾಚಾರದಿಂದಾಗಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹೋರಾಟವನ್ನು ನಿಲ್ಲಿಸಲು ಯಾವುದೇ ಭದ್ರತೆಯಿಲ್ಲದೆ, ಅದು ಅನಿಯಂತ್ರಿತವಾಗಿ ಬೆಳೆದಿದೆ.


ಕೆಂಪು ಆಟದ ಉಡುಪು ಧರಿಸಿದ ಸ್ಪರ್ಧಿಗಳು ಪರಸ್ಪರ ಖುರ್ಚಿಗಳಿಂದ ಬಲವಾಗಿ ದಾಳಿ ಮಾಡಿದ್ದಾರೆ. ಕೆಲ ಸ್ಪರ್ಧಿಗಳು ಆತಂಕದಲ್ಲಿ ಸ್ಥಳದಿಂದ ಓಡಿಹೋಗುತ್ತಿರುವುದು ದೃಶ್ಯದಲ್ಲಿ ಕಂಡು ಬಂದಿದೆ. ಸ್ಥಳಿಯರು ವಿಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Posted by Vidyamaana on 2024-04-28 08:30:33 |

Share: | | | | |


ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

ತೆಕ್ಕಟ್ಟೆ :ಇಲ್ಲಿನ ಗುಡ್ಡೆಅಂಗಡಿ ರಾ.ಹೆ. ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಸಾವಿಗೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಎ. 27ರಂದು ಮಧ್ಯಾಹ್ನ 2.30ರ ಸುಮಾರಿಗೆ ಸಂಭವಿಸಿದೆ.ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಪರಿಣಾಮ ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಇನ್ನೋವಾ ಕಾರಿನಲ್ಲಿ ಬೆಂಗಳೂರು ಮೂಲದ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅ.6 ಮತ್ತು 7 ರಂದು ಮೂಡಬಿದ್ತೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ

Posted by Vidyamaana on 2023-10-05 21:55:47 |

Share: | | | | |


ಅ.6 ಮತ್ತು 7 ರಂದು ಮೂಡಬಿದ್ತೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ


ಪುತ್ತೂರು: ಅ.7 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ವಿದ್ಯಾವಂತ ಯುವಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ 204 ಕ್ಕೂ ಮಿಕ್ಕಿ ವಿವಿಧ ಕಂಪೆನಿಗಳು ಭಾಗವಹಿಸುತ್ತಿದ್ದು ಮೇಳದಲ್ಲಿ ಭಾಗವಹಿಸುವ ಸಾವಿರಾರು‌ಮಂದಿಗೆ ಉದ್ಯೋಗ ದೊರೆಯಲಿದೆ. ಗ್ರಾಮೀಣ ಭಾಗದ ನಿರುದ್ಯೋಗಿ ವಿದ್ಯಾವಂತ ಯುವಕರು ಇದರಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿಗ್ರಿ ಕಾಲೇಜು, ಐಟಿಐ ತರಬೇತಿ ಕೇಂದ್ರಗಳು, ಡಿಪ್ಲೋಮಾ ಕೋರ್ಸು‌ಮಾಡಿದವರು,ಬಿ ಎ ,ಬಿಕಾಂ, ಬಿಎಸ್ಸಿ ಹಾಗೂ ಇನ್ನಿತರ ಪಧವೀದರರು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಸಣ್ಣ ಉದ್ಯೋಗದಿಂದ ಆರಂಭಗೊಂಡು ದೊಡ್ಡ ಹುದ್ದೆಯವರೆಗೂ ಮೇಳದಲ್ಲಿ ಆಯ್ಕೆಗಳು ನಡೆಯುತ್ತದೆ ಎಂದು ಹೇಳಿದರು.


ದ ಕ ಜಿಲ್ಲೆಯವರು ಹಿಂದೇಟು ಹಾಕುತ್ತಿದ್ದಾರೆ: ವಿವೇಕ ಆಳ್ವ

ಸಭೆಯಲ್ಲಿ‌ಮಾತನಾಡಿದ‌ ಉದ್ಯೋಗ‌ಮೇಳದ ರುವಾರಿ ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರಾದ ವಿವೇಕ ಆಳ್ವರವರು ಮಾತನಾಡಿ ದ ಕ ಮತ್ತು ಉಡುಪಿ ಜಿಲ್ಲೆಯವರು ಉದ್ಯೋಗ ಮೇಳಕ್ಕೆ ಬರುವುದು ಅಪರೂಪ ಎಂಬಂತಾಗಿದೆ. ಸಾವಿರಾರು ಮಂದಿ ಭಾಗವಹಿಸುವ ಮೇಳದಲ್ಲಿ‌ಬೆರಳೆಣಿಕೆಯ‌ ಮಂದಿ ಮಾತ್ರ ನಮ್ಮ‌ಜಿಲ್ಲೆಯವರು ಭಾಗವಹಿಸುತ್ತಾರೆ. ಸಾವಿರಾರು ಮಂದಿ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆಯುತ್ತಿದ್ದಾರೆ. ಪ್ರತಿಷ್ಟಿತ ಕಂಪೆನಿಗಳು ಭಾಗವಹಿಸುವ ಕಾರಣ ಒಳ್ಳೆಯ ಉದ್ಯೋಗ ಸಿಗುತ್ತದೆ ಎಂದು ಹೇಳಿದರು. ವಿದ್ಯಾವಂತ ಉದ್ಯೋಗ ಆಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಿ ಎಂದು‌ಮನವಿ ಮಾಡಿದರು. ಕೆಲಸ ಇಲ್ಲ ಎಂಬುದು ಸುಳ್ಳು ನಮಗೆ ಕೆಲಸ ಮಾಡಲು ಇಚ್ಚಾಶಕ್ತಿ ಇದ್ದರೆ ಸಾಕಷ್ಟು ಕೆಲಸಗಳು ಇದೆ. ವರ್ಷದ 365 ದಿನವೂ ಆಳ್ವಾಸ್ ಸಂಸ್ಥೆಯಲ್ಲಿ ಉದ್ಯೋಗ ನೋಂದಣಿ ನಡೆಯುತ್ತಿರುತ್ತದೆ ಎಂದು ಹೇಳಿದರು.


ಮೆಕ್ಯಾನಿಕ್ ,ಇಲೆಕ್ಟ್ರಿಕ್,ಐಟಿಐ, ಡಿಪ್ಲೊಮಾ ; ,2000 ಹುದ್ದೆಗಳು ಇದೆ.  ಈ ಕೋರ್ಸುಗಳನ್ನು‌ಮಾಡಿದವರಿಗೆ ಸೇರಿದಂತೆ ಇತರ ಡಿಗ್ರಿ, ಮಾಸ್ಟರ್ ಡಿಗ್ರಿಯಾದವರಿಗೂ ಸಾವಿರಾರು ಉದ್ಯೋಗ ಇದ್ದು, ವಿದೇಶಿ ಕಂಪೆನಿಗಳು‌ಮೇಳದಲ್ಲಿ ಭಾಗವಹಿಸುತ್ತಿದೆ ಎಂದು ವಿವೇಕ್ ಆಳ್ವ ತಿಳಿಸಿದರು.



ಕರೆಂಟ್ ಕಂಬ ಹತ್ತುವ ತರಬೇತಿ



ಪುತ್ತೂರು ಸೇರಿದಂತೆ ಜಿಲ್ಲೆಯಾಧ್ಯಂತ ಮೆಸ್ಕಾಂ ನಲ್ಲಿ ಕಾರ್ಮಿಕರ ಕೊರತೆ ಇದೆ. ಇದಕ್ಕಾಗಿ ಆಸಕ್ತಿ ಇರುವ ಮಂದಿಗೆ ಕರೆಂಟ್ ಕಂಬ ಹತ್ತುವ ತರಬೇತಿಯನ್ನು ನೀಡಿ ಅವರಿಗೆ ಉದ್ಯೋಗ ಕಲ್ಪಿಸಲಾಗುವುದು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಪೊಲೀಸ್ ಹುದ್ದೆಗೆ ಕೆಲವೇ ತಿಂಗಳಲ್ಲಿ ನೇಮಕಾತಿ ನಡೆಯಲಿದ್ದು ಪೊಲೀಸ್ ಹುದ್ದೆಗೂ ತರಬೇತಿ ನೀಡುವ ಕೆಲಸ ನಮ್ಮ ಟ್ರಸ್ಟ್ ವತಿಯಿಂದ ನಡೆಯಲಿದೆ ಎಂದು ಶಾಸಕರು ಹೇಳಿದರು.



ಉಚಿತ ಬಸ್ ವ್ಯವಸ್ಥೆ


ಆಳ್ವಾಸ್ ನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಅ.6 ರಂದು ಬೆಳಿಗ್ಗೆ 7 ಗಂಟೆಗೆ ಪುತ್ತೂರು ಶಾಸಕರ ಕಚೇರಿಯಿಂದ ಬಸ್ ಹೊರಡಲಿದೆ. ಆಕಾಂಕ್ಷಿಗಳು ಶಾಸಕರ ಕಚೇರಿಯನ್ನು ಭೇಟಿಯಾಗಿ ಹೆಸರು‌ನೋಂದಾವಣೆ ಮಾಡಿಕೊಳ್ಳಬಹುದು ಎಂದು‌ಶಾಸಕರು ತಿಳಿಸಿದರು.


ಕಾರ್ಯಕ್ರಮದಲ್ಲಿ ಮೇಳದ ಸಂಘಟಕರಾದ ಶ್ರೀನಿವಾಸ್, ಪುತ್ತೂರು ಐಟಿಐ ಪ್ರಚಾರ್ಯರಾದ ಪ್ರಕಾಶ್ ಪೈ, ಅಕ್ಷಯ ಕಾಲೇಜಿನ ಸಂಪತ್,ಫಿಲೋಮಿನಾ ಕಾಲೇಜಿನ ಭಾರತಿ ಎಸ್ ರೈ, ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಅಪ್ಪು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಶ್ರೀಕಾಂತ್,ವಿಟ್ಲ ಸರಕಾರಿ ಪ್ರಥಮ ಕಾಲೇಜಿನ ಪದ್ಮನಾಭ, ಬೆಟ್ಡಂಪಾಡಿ ಕಾಲೇಜಿನಡಾ. ಕಾಂತೇಶ್,ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಗೋಪಾಲಕೃ್ಷ್ಣ ಉಪಸ್ಥಿತರಿದ್ದರು.

ರೈ ಎಜುಕೇಶನಲ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ, ಸದಸ್ಯರುಗಳಾದ ರಿತೇಶ್ ಶೆಟ್ಟಿ,  ಜಯಪ್ರಕಾಶ್ ಬದಿನಾರ್, ಯೋಗೀಸ್ ಸಾಮಾನಿ, ರಾಕೇಶ್ ರೈ ಕುದ್ಕಾಡಿ ಉಪಸ್ಥಿತರಿದ್ದರು. ಟ್ರಸ್ಟ್ ನ ಮುಖ್ಯಸ್ಥರಾದ ನಿಹಾಲ್ ಶೆಟ್ಟಿ ಸ್ವಾಗತಿಸಿದರು.‌ಮಹಮ್ಮದ್ ಬಡಗನ್ನೂರು ವಂದಿಸಿದರು.

ಪಾಕ್‌ನಿಂದ ಹಾರಿಬಂತು ಮತ್ತೊಂದು ಪ್ರೇಮಪಕ್ಷಿ!

Posted by Vidyamaana on 2023-12-07 08:34:38 |

Share: | | | | |


ಪಾಕ್‌ನಿಂದ ಹಾರಿಬಂತು ಮತ್ತೊಂದು ಪ್ರೇಮಪಕ್ಷಿ!

ಭಾರತದಲ್ಲಿರೋ ತನ್ನ ಪ್ರಿಯಕರನೊಂದಿಗೆ ಮದುವೆಯಾಗೋಕೆ ಪಾಕಿಸ್ತಾನದ ಯುವತಿಯೊಬ್ರು ಬಾರ್ಡರ್‌ ದಾಟಿರೋ ಮತ್ತೊಂದು ಪ್ರೇಮಕಥೆ ವರದಿಯಾಗಿದೆ. ಆದ್ರೆ ಈ ಬಾರಿ ಬಂದಿರೋ ಯುವತಿ ಲೀಗಲ್ಲಾಗಿ 45 ದಿನಗಳ ವೀಸಾ ಪಡೆದು ಭಾರತಕ್ಕೆ ಬಂದಿದ್ದಾರೆ. ಕರಾಚಿ ಮೂಲದ ಜಾವೆರಿಯಾ ಕನ್ನುಂ ಅನ್ನೋ ಈ ಯುವತಿ ಕೊಲ್ಕತ್ತಾ ಮೂಲದ ಸಮೀರ್‌ ಖಾನ್‌ರನ್ನ ವರಿಸೋಕೆ ವಾಗಾ-ಅಟ್ಟಾರಿ ಬಾರ್ಡರ್‌ ದಾಟಿ ಬಂದಿದ್ದಾರೆ.ಸಮೀರ್‌ ಕುಟುಂಬ ಇವರನ್ನ ವಾದ್ಯಘೋಷ್ಠಿ ಜೊತೆ ಸ್ವಾಗತ ಮಾಡಿದೆ. ಬರುವ ಜನವರಿಯಲ್ಲಿ ಮದುವೆಯಾಗೋಕೆ ಈ ಜೋಡಿ ಪ್ಲಾನ್‌ ಮಾಡಿದೆ ಎನ್ನಲಾಗ್ತಿದೆ. ಭಾರತಕ್ಕೆ ಬಂದ ಕೂಡ್ಲೆ ಹರ್ಷ ವ್ಯಕ್ತಪಡಿಸಿದ ಕನ್ನುಂ ʻಸತತ 5 ವರ್ಷಗಳ ಪ್ರಯತ್ನದ ನಂತರ ವೀಸಾ ಸಿಕ್ತು. ಇದೊಂತರ ಹ್ಯಾಪಿ ಎಂಡಿಂಗ್‌ ಹಾಗೂ ಹ್ಯಾಪಿ ಬಿಗಿನಿಂಗ್.‌ ನಮ್ಮ ಕುಟುಂಬದ ಒಪ್ಪಿಗೆಯೊಂದಿಗೆ ಮದುವೆ ಆಗ್ತಿದ್ದೇನೆ" ಅಂದಿದ್ದಾರೆ. 2018ರಲ್ಲಿ ತಮ್ಮ ತಾಯಿಯ ಮೊಬೈಲ್‌ನಲ್ಲಿ ಕನ್ನುಂರ ಫೋಟೋ ನೋಡಿದ್ದ ಸಮಿರ್‌ ಖಾನ್‌, ಅವ್ರನ್ನ ಮದುವೆಯಾಗೋ ಇಂಟ್ರಸ್ಟ್‌ ತೋರಿದ್ದಾಗಿ ಹೇಳಿಕೊಂಡಿದ್ದಾರೆ.

ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

Posted by Vidyamaana on 2024-03-19 16:51:09 |

Share: | | | | |


ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ(DV S

non

ananda Gowda) ಅವರು ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ

Posted by Vidyamaana on 2023-12-04 16:58:53 |

Share: | | | | |


ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆ

ಚಾಮರಾಜನಗರ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.


ಇಂದು ಬೆಳಗ್ಗೆ ಅವರ ಕಾರು ಪತ್ತೆಯಾಗಿದ್ದು, ಅದರಲ್ಲಿ ರಕ್ತದ ಕಲೆಗಳು ಇರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹದೇವಯ್ಯ ಅವರು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಇದೀಗ ಚಾಮರಾಜನಗರದ ರಾಮಾಪುರದ ನಿರ್ಜನ ಪ್ರದೇಶವೊಂದರಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಡಿಸೆಂಬರ್ 1ರ ರಾತ್ರಿ ಮಹದೇವಯ್ಯ ಅವರು ಚನ್ನಪಟ್ಟಣ ತೋಟದ ಮನೆಯಲ್ಲಿದ್ದರು. ಮಧ್ಯರಾತ್ರಿ 12 ಗಂಟೆಗೆ ತೋಟದ ಮನೆಗೆ ನುಗ್ಗಿದ ಮೂವರು ಅಪರಿಚಿತರು, ಬಳಿಕ ಮನೆಯಲ್ಲಿ ಲಾಕರ್ ಓಪನ್ ಮಾಡಿಸಿ ಪತ್ರ ದುಡ್ಡು ಕೊಂಡೊಯ್ದಿರುವ ಶಂಕೆ ವ್ಯಕ್ತವಾಗಿತ್ತು.



Leave a Comment: