ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸುದ್ದಿಗಳು News

Posted by vidyamaana on 2024-07-25 16:43:22 |

Share: | | | | |


ಅಟಲ್ ಸೇತು ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ ಇಂಜಿನಿಯರ್: ಕೃತ್ಯ ಸಿಸಿಟಿವಿಯಲ್ಲಿ ಸೆರೆ

 ಮುಂಬೈ: ಇಂಜಿನಿಯರ್ ಒಬ್ಬರು ತಮ್ಮ ಕಾರನ್ನು ಅಟಲ್ ಸೇತುವಿನಲ್ಲಿ ನಿಲ್ಲಿಸಿ ಸೇತುವೆಯಿಂದ ಕೆಳಗೆ ಹಾರಿದ್ದಾರೆ. ಈ ದೃಶ್ಯ ಅಲ್ಲಿ ಇದ್ದ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದೆ.

ಸೇತುವೆಯಿಂದ ಕೆಳಗೆ ಹಾರಿದವರನ್ನು ಡೊಂಬಿವಿಲಿಯ ಪಲ್ಲವ ನಗರದ ನಿವಾಸಿ ಕರ್ತುರಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಪತ್ನಿ ಹಾಗೂ ಮಗಳೊಂದಿಗೆ ವಾಸ ಮಾಡುತ್ತಿದ್ದರು.

ಮಧ್ಯಾಹ್ನ 12.35ರ ಸುಮಾರಿಗೆ ಇವರು ತಮ್ಮ ಕಾರಿನಲ್ಲಿ ಆಟಲ್ ಸೇತು ಬ್ರಿಡ್ಜ್ ಮೇಲೆ ಬಂದಿದ್ದು, ಸೇತುವೆ ಮೇಲೆ ಕಾರು ನಿಲ್ಲಿಸಿ ಸಮುದ್ರಕ್ಕೆ ಹಾರಿದ್ದಾರೆ. ಇದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಟೋಲ್ ಕಂಟ್ರೋಲ್‌ ರೂಮ್‌ನವರ ಗಮನಕ್ಕೆ ಬಂದಿದೆ. ಕೂಡಲೇ ಅವರು ನವಶೇವ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ.

ಕೂಡಲೇ ಎಂಟಿಹೆಚ್‌ಎಲ್‌ನಿಂದ ರಕ್ಷಣಾ ತಂಡ ಹಾಗೂ ಕರಾವಳಿ ಭದ್ರತಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಹಣಕಾಸಿನ ತೊಂದರೆಯಿಂದಲೇ ಶ್ರೀನಿವಾಸ್ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಾರಿನಲ್ಲಿ ಕೇವಲ ತನ್ನ ಪರ್ಸ್ ಮಾತ್ರ ಬಿಟ್ಟು ಶ್ರೀನಿವಾಸ್ ಸಮುದ್ರಕ್ಕೆ ಹಾರಿದ್ದಾರೆ. ಈ ಪರ್ಸ್‌ನಲ್ಲಿ ಆಧಾರ್ ಕಾರ್ಡ್‌, ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಯ ಐಡಿ ಕಾರ್ಡ್ ಇತ್ತು. ಡೆತ್‌ನೋಟ್ ಆಗಲಿ, ಫೋನ್ ಆಗಲಿ ಕಾರಿನಲ್ಲಿ ಪತ್ತೆಯಾಗಿಲ್ಲ ಎಂದ ಪೊಲೀಸ್ ಇನ್ಸ್‌ಪೆಕ್ಟರ್ ಅಂಜುಮನ್ ಬಾಗ್ವಾನ್ ಹೇಳಿದ್ದಾರೆ.

ಬಿಟೆಕ್ ಮಾಡಿದ್ದ ಶ್ರೀನಿವಾಸ್ ಮುಂಬೈನ ಲೋಧಾದಲ್ಲಿ 2023ರಲ್ಲಿ ಕೆಲ ಕಾಲ ಕೆಲಸ ಮಾಡಿದ್ದರು. ಇದಕ್ಕೂ ಮೊದಲು ಅರಬ್ ರಾಷ್ಟ್ರ ಕುವೈತ್‌ನಲ್ಲಿ ಕೆಲಸ ಮಾಡಿದ್ದರು. 2023ರಲ್ಲಿ ಮುಂಬೈಗೆ ವಾಪಸಾದ ಅವರು ಲೋಧಾ ಗ್ರೂಪ್‌ಗೆ ಕೆಲಸಕ್ಕೆ ಸೇರಿದ್ದರು. ಇದಾದ ನಂತರ ಇವರು ತಮ್ಮ ಪಾಲುದಾರರ ಜೊತೆಗೂಡಿ ಇಲೆಕ್ಟ್ರಿಕ್ ಕಂಟ್ರಾಕ್ಟ್ ಕೆಲಸ ಶುರು ಮಾಡಿದ್ದರು. ಶ್ರೀನಿವಾಸ್ ಪತ್ನಿಯಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ಶ್ರೀನಿವಾಸ್ ಈ ಹಿಂದೆಯೂ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಜೀವ ಕಳೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಸಮಯಕ್ಕೆ ಸರಿಯಾಗಿ ಯಾರೋ ಪಾರು ಮಾಡಿದ್ದರಿಂದ ಅವರ ಜೀವ ಉಳಿದಿತ್ತು ಎಂದು ಪತ್ನಿ ಹೇಳಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶ್ರೀನಿವಾಸ್ ಕಡೆಯದಾಗಿ ಸಂಬಂಧಿಕರೊಬ್ಬರ ಜೊತೆ ಮಾತನಾಡಿದ್ದು, ಈ ವೇಳೆ ಅವರು ಸಹಜವಾಗಿ ಮಾತನಾಡಿದ್ದರು ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದುವರೆಗೂ ನೀರಿಗೆ ಹಾರಿದ ಶ್ರೀನಿವಾಸ್ ಅವರನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಇದು ಮೊದಲ ಪ್ರಕರಣ ಅಲ್ಲ ಈ ಹಿಂದೆ ಮಹಿಳಾ ವೈದ್ಯರೊಬ್ಬರು ಅಟಲ್ ಸೇತುವಿನಿಂದ ಕೆಳಗೆ ಹಾರಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದರು.

 Share: | | | | |


ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಗೆ ಗಾಯ

Posted by Vidyamaana on 2024-01-14 18:51:34 |

Share: | | | | |


ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರಿಗೆ ಗಾಯ

ಮಂಗಳೂರು: ಇಲ್ಲಿನ ತೆಂಕ ಯಡಪದವು ಗೋಪಾಲಕೃಷ್ಣ ದೇವಸ್ಥಾನದ ಬಳಿ ರಸ್ತೆ ದಾಟುತ್ತಿದ್ದ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರಿಗೆ ಕಾರು ಢಿಕ್ಕಿ ಹೊಡೆದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.


ಮಧ್ಯಾಹ್ನ 1.30ರ ಸುಮಾರಿಗೆ ರಾಜೇಶ್ ನಾಯ್ಕ್ ಅವರು ತೆಂಕ ಯಡಪದವು ಗೋಪಾಲ ಕೃಷ್ಣ ದೇವಸ್ಥಾನದ ಬಳಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಕಾಲ್ನಡಿಗೆಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಸಕ ರಾಜೇಶ್ ನಾಯ್ಕ್ ಅವರ ಎರಡು ಮೊಣಕಾಲುಗಳಿಗೆ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಶಾಸಕರಿಗೆ ಢಿಕ್ಕಿ ಹೊಡೆದ ಬಳಿಕ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದು, ಕಾರ್ಯಪ್ರವೃತ್ತರಾದ 112 ಹೊಯ್ಸಳ ಪೊಲೀಸ್ ತಂಡ ಗುರುಪುರ ಜಂಕ್ಷನ್‌ನಲ್ಲಿ ಕಾರನ್ನು ತಡೆದು ಠಾಣೆಗೆ ತಂದಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರ ದೂರಿನ ಆಧಾರದ ಮೇಲೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಕಲಂ 279, 337 ಐಪಿಸಿ, 134(ಎ)(ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಶಕ್ತಿ ಯೋಜನೆಯ ಲಾಭ ಪಡೆಯಲು ಬುರ್ಖಾ ಧರಿಸಿ ಬಂದು ಸಿಕ್ಕಿ ಬಿದ್ದ ವೀರಭದ್ರಯ್ಯ

Posted by Vidyamaana on 2023-07-07 04:08:07 |

Share: | | | | |


ಶಕ್ತಿ ಯೋಜನೆಯ ಲಾಭ ಪಡೆಯಲು ಬುರ್ಖಾ ಧರಿಸಿ ಬಂದು ಸಿಕ್ಕಿ ಬಿದ್ದ ವೀರಭದ್ರಯ್ಯ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಲಾಭ ಪಡೆಯಲು ವ್ಯಕ್ತಿಯೋರ್ವ ಬುರ್ಖಾ ಧರಿಸಿದ ಅನುಮಾನ ವ್ಯಕ್ತವಾಗಿದೆ.


ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬುರ್ಖಾ ಹಾಕಿದ ವ್ಯಕ್ತಿ ಪತ್ತೆಯಾಗಿದ್ದು, ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿಯಾಗಿರುವ ವೀರಭದ್ರಯ್ಯ ಎಂದು ಗುರುತಿಸಲಾಗಿದೆ.


ವೀರಭದ್ರಯ್ಯ ಬಳಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಹೀಗಾಗಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿರುವ ಅನುಮಾನ ವ್ಯಕ್ತವಾಗಿದೆ. ಆದರೆ ಭಿಕ್ಷಾಟನೆ ಮಾಡುವ ಉದ್ದೇಶದಿಂದಾಗಿ ತಾನು ಬುರ್ಖಾ ಧರಿಸಿದ್ದಾಗಿ ವೀರಭದ್ರಯ್ಯ ಹೇಳಿದ್ದಾನೆ.

ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಅನುಮಾನ ಬಂದು ವಿಚಾರಣೆ ಮಾಡಿದಾಗ ಭಿಕ್ಷಾಟನೆಗೆ ಬುರ್ಖಾ ಹಾಕಿರುವುದಾಗಿ ವೀರಭದ್ರಯ್ಯ ಹೇಳಿದ್ದಾನೆ

ಶಾಸಕ ಅಶೋಕ್ ರೈಗೆ ಬೆಂಗಳೂರಿನಲ್ಲಿ ಗುಣ ಭರಿತ ಸ್ವಾಗತ

Posted by Vidyamaana on 2023-09-15 14:16:59 |

Share: | | | | |


ಶಾಸಕ ಅಶೋಕ್ ರೈಗೆ ಬೆಂಗಳೂರಿನಲ್ಲಿ ಗುಣ ಭರಿತ ಸ್ವಾಗತ

ಬೆಂಗಳೂರು: ಮೆಟ್ರೋ ನಗರಿಯಲ್ಲಿ ತುಳುನಾಡಿನ ಜಾನಪದ ಕ್ರೀಡೆಯಾಗಿರುವ ಕಂಬಳವನ್ನು ಅದ್ದೂರಿಯಾಗಿ ಆಯೋಜನೆ ಮಾಡಲು ಯೋಜಿಸಿ ಅದಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಇಂದು (ಸೆ.15) ತಮ್ಮೂರಿನವರೇ ಆದ ಯಶಸ್ವಿ ಉದ್ಯಮಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರ ಕಚೇರಿಗೆ ತೆರಳಿ ಅವರೊಂದಿಗೆ ಚರ್ಚೆ ನಡೆಸಿದರು.


ಇಲ್ಲಿನ ಎಂ.ಜಿ. ರಸ್ತೆಯ ಬಾರ್ಟನ್ ಸೆಂಟರ್ ನಲ್ಲಿರುವ ಗುಣರಂಜನ್ ಶೆಟ್ಟಿ ಅವರ ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದ ಸಂದರ್ಭ ಅವರನ್ನು ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆತ್ಮೀಯವಾಗಿ ಸ್ವಾಗತಿಸಿದರು.


ತಮ್ಮ ಕಚೇರಿಗೆ ಆಗಮಿಸಿದ ಶಾಸಕರನ್ನು ಬಿ. ಗುಣರಂಜನ್ ಶೆಟ್ಟಿ ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಗೌರವಿಸಿದರು.

ಬಳಿಕ ಶಾಸಕರು ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿರುವ ಕಂಬಳ ಕೂಟದ ಕುರಿತಾಗಿ ಗುಣರಂಜನ್ ಶೆಟ್ಟಿ ಅವರ ಬಳಿ ಸುದೀರ್ಘವಾಗಿ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.


ಈ ಸಂದರ್ಭದಲ್ಲಿ ತುಳುಕೂಟ ಬೆಂಗಳೂರು ಅಧ್ಯಕ್ಷರಾದ ಸುಂದರ್ ರಾಜ್,   ತುಳುಕೂಟ ಬೆಂಗಳೂರು ನಿರ್ದೇಶಕ ಅಕ್ಷಯ್ ರೈ ದಂಬೆಕಾನ, ಮುರಳೀಧರ ರೈ ಮಠಂತಬೆಟ್ಟು, ನವೀನ್ ಕಲ್ಲಡ್ಕ ಉಪಸ್ಥಿತರಿದ್ದರು.

ಜೂನ್ 22ರ ಕರ್ನಾಟಕ ಬಂದ್ ಗೊಂದಲ

Posted by Vidyamaana on 2023-06-21 01:33:22 |

Share: | | | | |


ಜೂನ್ 22ರ ಕರ್ನಾಟಕ ಬಂದ್ ಗೊಂದಲ

ಪುತ್ತೂರು: ವಿದ್ಯುತ್ ದರ ಏರಿಕೆ ಸಂಬಂಧ ನಡೆಯಲಿದೆ ಎಂದು ಸುದ್ದಿಯಾಗಿದ್ದ ಬಂದ್ ಇದೀಗ ಗೊಂದಲಕ್ಕೆ ಎಡೆ ನೀಡಿದೆ.

ಜೂನ್ 22ರಂದು ಬಂದ್ ನಡೆಯಲಿದ್ದು, ಎಫ್.ಕೆ.ಸಿ.ಸಿ.ಐ. ಕರೆ ನೀಡಿದೆ ಎಂದು ಮೊದಲಿಗೆ ಸುದ್ದಿಯಾಗಿತ್ತು. ಈ ಬಂದ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ನೈತಿಕ ಬೆಂಬಲವನ್ನು ಸೂಚಿಸಿದ್ದರು. ನಂತರದ ಬೆಳವಣಿಗೆಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ, ಈ ಬಂದ್ಗೆ ತಮ್ಮ ಬೆಂಬಲವಿಲ್ಲ ಎಂದು ಘೋಷಿಸಿದರು. ಈ ಎಲ್ಲಾ ಗೊಂದಲಗಳ ನಡುವೆ ಎಚ್ಚೆತ್ತುಕೊಂಡ ಎಫ್.ಕೆ.ಸಿ.ಸಿ.ಐ. ರಾಜ್ಯಾಧ್ಯಕ್ಷರು ಬಿ.ವಿ. ಗೋಪಾಲ್ ರೆಡ್ಡಿ ಅವರು ತಾವು ಬಂದ್ಗೆ ಕರೆಯನ್ನೇ ಕೊಟ್ಟಿಲ್ಲ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.

ಹಾಗಾದರೆ ಬಂದ್ಗೆ ಕರೆ ನೀಡಿದವರು ಯಾರು? ಈ ಗೊಂದಲ ಸಾರ್ವಜನಿಕ ವಲಯದಲ್ಲಿ‌ ಹರಿದಾಡುತ್ತಿದೆ.


ಬಿಜೆಪಿ ರಾಜ್ಯಾಧ್ಯಕ್ಷರು ಏನಂದರು?

ವಿದ್ಯುತ್ ದರ ಎರಿಕೆ ಖಂಡಿಸಿ ಎಫ್​ಕೆಸಿಸಿಐ ಕರೆ ನೀಡಿರುವ ರಾಜ್ಯ ಬಂದ್​​ಗೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ. ರಾಜ್ಯ ಸರ್ಕಾರದ ಹಠಮಾರಿ ಧೋರಣೆ ಕೈಬಿಡಬೇಕು, ಉದ್ಯಮಶೀಲರಿಗೆ ಅವಕಾಶ ಕೊಡಬೇಕು. ವಿದ್ಯುತ್ ದರದ ಬಗ್ಗೆ ಉದ್ಯಮಿಗಳ ಸಮಸ್ಯೆ ಆಲಿಸಿ, ನ್ಯಾಯ ಕೊಡಿಸುವ ಹಾಗೂ ಉದ್ಯಮಶೀಲತೆಗೆ ಅವಕಾಶ ಮಾಡಿಕೊಡುವ ಕಾರ್ಯ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರುಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ತಿಳಿಸಿದರು.


ವರ್ತಕ ಸಂಘ 

ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಜೂ. 22ರಂದು ಕರೆ ನೀಡಿದ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲ. ವಿದ್ಯುತ್ ದರ ಏರಿಕೆಯಾಗಿರುವುದಕ್ಕೆ ನಮ್ಮ ವಿರೋಧವಿದೆ. ಒಂದೆಡೆ ಉಚಿತ ಇನ್ನೊಂದೆಡೆ ದರ ಏರಿಕೆ ಮಾಡಿರುವುದು ಸರಿಯಲ್ಲ. ಆದರೆ ಬಂದ್ ಮಾಡುವುದರಿಂದ ಕೈಗಾರಿಕೋದ್ಯಮಿಗಳಿಗೆ ಹಾಗೂ ವರ್ತಕರಿಗೇ ನಷ್ಟ. ಈ ನಿಟ್ಟಿನಲ್ಲಿ ಮಂಗಳೂರು ಛೇಂಬರ್ಸ್ ಆಫ್ ಕಾಮರ್ಸ್‍ & ಇಂಸ್ಟ್ರೀಸ್ ಸಲಹೆಯಂತೆ ಬಂದ್ ಗೆ ನಾವು ಬೆಂಬಲ ನೀಡುವುದಿಲ್ಲ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಜಾನ್ ಕುಟಿನ್ಹಾ, ಉಪಾಧ್ಯಕ್ಷ ಪಿ. ವಾಮನ್ ಪೈ, ನಿರ್ದೆಶಕ ಶ್ರೀಕಾಂತ್ ಕೊಳತ್ತಾಯ, ಪ್ರ.ಕಾರ್ಯದರ್ಶಿ ಉಲ್ಲಾಸ್ ಪೈ, ಮಾಜಿ ಅಧ್ಯಕ್ಷ ಕೇಶವ ಪೈ ತಿಳಿಸಿದ್ದಾರೆ.


ಎಫ್.ಕೆ.ಸಿ.ಸಿ.ಐ. ಸ್ಪಷ್ಟನೆ ಏನು?

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ ಎಂದು ತಿಳಿಸಿರುವ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್ ಕೆಸಿಸಿಐ) ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ. ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ. 9ರಿಂದ ಶೇ.3ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದ ಹೆಸರು ಬದಲಾಯಿಸುವ ನಿರ್ಣಯ ಅಂಗೀಕಾರ: ಇನ್ನು ಮುಂದೆ ಕೇರಳ ಎಂದು ಕರೆಯುವಂತಿಲ್ಲ

Posted by Vidyamaana on 2023-08-10 03:18:17 |

Share: | | | | |


ರಾಜ್ಯದ ಹೆಸರು ಬದಲಾಯಿಸುವ ನಿರ್ಣಯ ಅಂಗೀಕಾರ: ಇನ್ನು ಮುಂದೆ ಕೇರಳ ಎಂದು ಕರೆಯುವಂತಿಲ್ಲ

ತಿರುವನಂತಪುರಂ: ಕೇರಳ ರಾಜ್ಯದ ಅಧಿಕೃತ ಹೆಸರನ್ನು ಕೇರಳದಿಂದ ಕೇರಳಂ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯ ಕೇರಳ ವಿಧಾನಸಭೆ ನಿನ್ನೆ ಅಂಗೀಕರಿಸಿದೆ.ತಿದ್ದುಪಡಿ ತಂದು ಕೇರಳಂ ಮಾಡುವಂತೆ ಸದನವು ಕೇಂದ್ರ ಸರಕಾರ ಕೋರಿದ್ದು, ಮುಖ್ಯಮಂತ್ರಿ ಮಂಡಿಸಿದ ನಿರ್ಣಯ ಅಂಗೀಕಾರವಾದ ನಂತರ ಸರ್ಕಾರಿ ದಾಖಲೆಗಳಲ್ಲಿ ಕೇರಳಂ ಹೆಸರು ಬಳಕೆಯಾಗುತ್ತಿದ್ದು, ಈ ಬದಲಾವಣೆಯು ಸಂವಿಧಾನದಲ್ಲಿ ಪ್ರತಿಫಲಿಸುತ್ತದೆ ಮತ್ತು ಅಧಿಕೃತವಾಗಿ ಮಲಯಾಳಂ ಮತ್ತು ಇಂಗ್ಲಿಷ್‌ನಲ್ಲಿಯೂ ಬರೆಯಲಾಗುತ್ತದೆ.ನಿರ್ಣಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಅವರು ಕೇರಳದ ವಿಧಾನಭೆಯಲ್ಲಿ ಪ್ರಸ್ತುತಪಡಿಸಿ, ಈ ನಿರ್ಣಯ ಸರ್ವ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿ ಭಾರತೀಯ ಸಂವಿಧಾನದ ಎಂಟನೇ ಶೆಡ್ಯೂಲ್ ಮತ್ತು ಎಲ್ಲ ಅಧಿಕೃತ ದಾಖಲೆಗಳಲ್ಲಿ ಹೆಸರು ಬದಲಿಸಲು ಕೇರಳ ಸರ್ಕಾರ ಕೋರಿದೆ.ಭಾರತ ಸಂವಿಧಾನದಲ್ಲಿ ರಾಜ್ಯದ ಹೆಸರನ್ನು ಕೇರಳ ಎಂದು ಬರೆಯಲಾಗಿದೆ.


ರಾಜ್ಯದ ಹೆಸರು ಮಲಯಾಳಂನಲ್ಲಿ ಕೇರಳಂ ಎಂದೇ ಕರೆಯಲಾಗುತ್ತಿದ್ದು, 1956ರ ನವೆಂಬರ್ 1ರಂದು ಭಾಷಾವಾರು ಆಧಾರದ ಮೇಲೆ ರಾಜ್ಯ ರಚಿಸಲಾಯಿತು. ಮಲಯಾಳಂ ಮಾತನಾಡುವ ಎಲ್ಲ ಜನರಿಗೆ ಅಖಂಡ ಕೇರಳ ರಾಜ್ಯ ರಚನೆಯಾಗಿದ್ದು, ಸಂವಿಧಾನದ ಮೊದಲ ಶೆಡ್ಯೂಲ್​ನಲ್ಲಿ ರಾಜ್ಯದ ಹೆಸರನ್ನು ಕೇರಳ ಎಂದು ನಮೂದಿಸಲಾಗಿದೆರಾಜ್ಯದ ಅಧಿಕೃತ ಹೆಸರನ್ನು ಎಲ್ಲ ಅಧಿಕೃತ ಭಾಷೆಗಳಲ್ಲಿ ಕೇರಳಂ ಎಂದು ಬದಲಾಯಿಸಲು ಸಂವಿಧಾನದ ಎಂಟನೇ ಶೆಡ್ಯೂಲ್ ಅಡಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡುವಂತೆ ವಿಧಾನಸಭೆಯು ಕೇಂದ್ರ ಸರ್ಕಾರ ಸರ್ವಾನುಮತದಿಂದ ವಿನಂತಿಸುತ್ತದೆ ಎಂದು ನಿರ್ಣಯ ಮಂಡಿಸುವಾಗ ಸಿಎಂ ಪಿಣರಾಯಿ ವಿಜಯನ್​ ವಿವರಿಸಿದರು.

ಪೂನಂ ಪುಣ ಆತಿಜಲಿಗೆ.. ಸತ್ತಳೆಂದು ನಂಬಿದ್ದ ಪೂನಂ ಪಾಂಡೆ ಕೊಟ್ರು ಶಾಕಿಂಗ್ ನ್ಯೂಸ್

Posted by Vidyamaana on 2024-02-03 13:35:15 |

Share: | | | | |


ಪೂನಂ ಪುಣ ಆತಿಜಲಿಗೆ.. ಸತ್ತಳೆಂದು ನಂಬಿದ್ದ ಪೂನಂ ಪಾಂಡೆ ಕೊಟ್ರು ಶಾಕಿಂಗ್ ನ್ಯೂಸ್

ಮುಂಬೈ : ಬಾಲಿವುಡ್​ ನಟಿ, ಮಾದಕ ಚೆಲುವೆ ಪೂನಂ ಪಾಂಡೆ ಸತ್ತಿಲ್ಲ ಬದುಕಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ರಿವೀಲ್​ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿರುವ ನಟಿ ಪೂನಂ ಪಾಂಡೆ ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾರೆ.ನಿಮ್ಮೆಲ್ಲರೊಂದಿಗೆ ಮಹತ್ವದ ವಿಷಯವನ್ನು ಹಂಚಿಕೊಳ್ಳಲು ಬಯಸಿದ್ದು, ನಾನು ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್​ನಿಂದ ನಾನು ಬಳಲುತ್ತಿಲ್ಲ. ಆದರೆ, ದುರಂತವೆಂದರೆ ಈ ರೋಗವನ್ನು ಹೇಗೆ ಎದುರಿಸಬೇಕೆಂಬುದರ ಬಗ್ಗೆ ಜ್ಞಾನದ ಕೊರತೆಯಿಂದ ಸಾವಿರಾರು ಮಹಿಳೆಯರ ಜೀವವನ್ನು ಈ ರೋಗ ಬಲಿ ಪಡೆದುಕೊಂಡಿದೆ.


ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಭಿನ್ನವಾಗಿ, ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಗಟ್ಟಬಲ್ಲದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳು ಪ್ರಮುಖವಾಗಿದ್ದು, ಈ ಕಾಯಿಲೆಯಿಂದ ಯಾರೂ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳಲು ನಾವು ಎಚ್ಚರದಿಂದಿರಬೇಕು. ವಿಮರ್ಶಾತ್ಮಕ ಅರಿವಿನೊಂದಿಗೆ ಒಬ್ಬರಿಗೊಬ್ಬರು ಜಾಗೃತಿ ಮೂಡಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮಹಿಳೆಯರಿಗೆ ತಿಳಿಸೋಣ ಏನು ಮಾಡಬಹುದೆಂಬುದನ್ನು ಒಟ್ಟಾಗಿ, ರೋಗದ ವಿನಾಶಕಾರಿ ಪರಿಣಾಮವನ್ನು ಕೊನೆಗೊಳಿಸಲು ಶ್ರಮಿಸೋಣ ಎಂದು ಹೇಳಿದ್ದಾರೆ.

Recent News


Leave a Comment: