Posted by vidyamaana on 2024-07-25 19:32:58 | Last Updated by Vidyamaana on 2024-07-25 19:32:58
ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ
ಬಾತಿಷಾ( 22) ಮೃತಪಟ್ಟವರು.ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ.
Posted by Vidyamaana on 2023-04-25 16:13:28 |
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಪುತ್ತೂರಿನ ಕೃಷ್ಣನಗರದಲ್ಲಿರುವ ಗೇರು ಸಂಸ್ಕರಣಾ ಘಟಕಕ್ಕೆ ಮಂಗಳವಾರ ಭೇಟಿ ನೀಡಿದರು.
ಭೇಟಿ ನೀಡಿದ ಅವರು ಸಭೆ ನಡೆಸಿ ಅಲ್ಲಿನ ಸಿಬ್ಬಂದಿಗಳೊಂದಿಗೆ ಮಾತನಾಡಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Posted by Vidyamaana on 2023-12-21 16:32:08 |
ಚಾಮರಾಜನಗರ: ಶೌಚಾಲಯಕ್ಕೆ ಹೋಗಬೇಕೆಂದು ಹೇಳಿವೃದ್ಧೆಗೆ ಮಗು ಕೊಟ್ಟು ಮಹಿಳೆ ಪರಾರಿಯಾಗಿರುವ ಘಟನೆ ಗುಂಡ್ಲುಪೇಟೆ ಬಸ್ ನಿಲ್ದಾಣದಲ್ಲಿ ಇಂದು ನಡೆದಿದೆ. ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ಕಲಿಗೌಡನಹಳ್ಳಿ ಗ್ರಾಮದ ಮಹಾದೇವಮ್ಮ ಎಂಬವರ ಬಳಿ ಬಂದ ಅಪರಿಚಿತ ಮಹಿಳೆ ತಾನು ಶೌಚಾಲಯಕ್ಕೆ ಹೋಗಿ ಬರುತ್ತೇನೆ, ಮಗು ನೋಡಿಕೊಳ್ಳಿ ಎಂದು ತಿಳಿಸಿ ಮಗು ಕೊಟ್ಟು ವಾಪಸ್ ಬರದೇ ಪರಾರಿಯಾಗಿದ್ದಾಳೆ.ಹೆಣ್ಣು ಮಗುವಾಗಿದ್ದು ಅಂದಾಜು 10 ತಿಂಗಳಿನಿಂದ ಒಂದೂವರೆ ವರ್ಷಗಳಾಗಿದೆ ಎಂದು ತಿಳಿದುಬಂದಿದೆ. ಗುಂಡ್ಲುಪೇಟೆ ಠಾಣೆ ಪೊಲೀಸರು ಮಗುವನ್ನು ಸಿಡಬ್ಲೂಸಿ ಸುಪರ್ದಿಗೆ ವಹಿಸಿದ್ದು, ಪರಾರಿಯಾದ ಮಹಿಳೆ ಪತ್ತೆಗೆ ಮುಂದಾಗಿದ್ದಾರೆ.
Posted by Vidyamaana on 2024-09-07 12:22:29 |
ಮಧ್ಯಪ್ರದೇಶ: ಬೈಕ್ನಲ್ಲಿ ಬಂದ ಮೂವರು ಮುಸುಕುಧಾರಿ ವ್ಯಕ್ತಿಗಳು ವ್ಯಾಪಾರಿ ಸ್ಕೂಟರ್ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ನಗದು ಹೊಂದಿದ್ದ ಬ್ಯಾಗ್ನೊಂದಿಗೆ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾದ ಪರಾಗ್ ಆಯಿಲ್ ಮಿಲ್ ಬಳಿ ನಿನ್ನೆ(ಸೆ.07) ನಡೆದಿದೆ. ಘಟನೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಾಹಿತಿ ಪ್ರಕಾರ, ಸಂತ್ರಸ್ತ ರಾಜೇಂದ್ರ ಪ್ರಸಾದ್ ಗುಪ್ತಾ ತಂಬಾಕು ವ್ಯಾಪಾರಿಯಾಗಿದ್ದು, ಸಂಗ್ರಹಿಸಿದ ಹಣವನ್ನು ಬ್ಯಾಂಕ್ಗೆ ಜಮಾ ಮಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಮೂವರು ದರೋಡೆಕೋರರು ಆತನ ವಾಹನಕ್ಕೆ ಡಿಕ್ಕಿ ಹೊಡೆದು ಆತನ್ನನ್ನು ಚರಂಡಿಗೆ ಬೀಳಿಸಿದ್ದಾರೆ. ನಂತರ ನಗದು ತುಂಬಿದ್ದ ಬ್ಯಾಗನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.
Posted by Vidyamaana on 2024-09-02 06:48:28 |
ಪುತ್ತೂರು: ಹಿಂದೂ ಮುಖಂಡ, ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಪೈ ವಿಸ್ಟಾ ಹೋಟೆಲ್ ಗೆ ಆತ್ಮಹತ್ಯೆ ಮಾಡುವುದಾಗಿ ಬೆದರಿಸಿ 2023ರ ಜೂನ್ ತಿಂಗಳಲ್ಲಿ ಮಹಿಳೆಯೊಬ್ಬರನ್ನು ಕರೆಸಿಕೊಂಡು ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದೂ ಅಲ್ಲದೆ, ನಂಬಿಕೆ ದ್ರೋಹ, ಮಾನಹಾನಿ, ಬ್ಲಾಕ್ ಮೇಲಿಂಗ್, ಶಾರೀರಿಕ ಮತ್ತು ಮಾನಸಿಕ ಪೀಡನೆ, ಕೊಲೆ ಬೆದರಿಕೆಯನ್ನು ಹಾಕುತ್ತಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
೨೦೨೩ರ ಜೂನ್ ತಿಂಗಳಲ್ಲಿ ಬೆಂಗಳೂರಿನ ಹೋಟೆಲ್ ಒಂದಕ್ಕೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದರು. ಆ ಬಳಿಕ ಬ್ಲಾಕ್ ಮೇಲ್ ಮಾಡಿಕೊಂಡು ಅವರಿರುವ ಪ್ರದೇಶಕ್ಕೆ ಕರೆಸಿಕೊಳ್ಳುತ್ತಿದ್ದರು. ಅಭಲೆಯಾದ ತನ್ನ ಪುತ್ರಿಗೆ ಜೀವನ ಪೂರ್ತಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದಾಗಿ ನಂಬಿಸಿ ನನ್ನನ್ನು ದೈಹಿಕ ಹಾಗೂ ಮಾನಸಿಕವಾಗಿ ಬಳಸಿಕೊಳ್ಳುತ್ತಿದ್ದರು. ಅವರೊಂದಿಗೆ ಇದ್ದ ಕ್ಷಣಗಳ ಛಾಯಾ ಚಿತ್ರ. ಸೆಲ್ಸಿ. ಆಡಿಯೋ, ವಿಡಿಯೋ ಗಳು ಇದೆಯೆಂದು ಹೇಳಿಕೊಂಡು ಬೆದರಿಸಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದರು
Posted by Vidyamaana on 2023-12-07 13:15:26 |
ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯತ್ನಾಳ್ ಒಬ್ಬ ದ್ವೇಷದ ರಾಜಕಾರಣಿ, ಮಹಾನ್ ಸುಳ್ಳುಗಾರ, ಚುನಾವಣೆ ಗೆಲ್ಲಲು ಈ ರೀತಿ ಮಾತಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಸಿಸ್ ನಂಟಿರುವ ಪೀರಾ ಮೌಲಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಬಿಜೆಪಿ ನಾಯಕ ಯತ್ನಾಳ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ಅವರ ಜೊತೆಗೆ ನನಗೆ ಬಹಳ ವರ್ಷಗಳ ಸಂಬಂಧ ಇದೆ. ಆಗೆಲ್ಲ ಯಾಕೆ ಅವರು ಸುಮ್ಮನಿದ್ದರು? ಪೀರಾ ಮೌಲಿ ಅವರು ಆರೋಪ ಸಾಬೀತು ಮಾಡಿ ಎಂದು ಹೇಳಿದ್ದಾರೆ.
ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ. ಈಗ ಆರೋಪ ಮಾಡುತ್ತಿರುವ ಯತ್ನಾಳ್, ಅವರದ್ದೇ ಸರ್ಕಾರ ಇದ್ದಾಗ ಏನು ಮಾಡ್ತಿದ್ರು? ಅವರು ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಪ್ರಯತ್ನ ಮಾಡಿದ್ದರು. ಎರಡೂ ಸಿಗಲಿಲ್ಲ ಅದಕ್ಕೆ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
Posted by Vidyamaana on 2024-05-07 14:37:00 |
ಕಾಸರಗೋಡು, ಮೇ 7: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ.