ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

ಸುದ್ದಿಗಳು News

Posted by vidyamaana on 2024-07-26 08:10:52 |

Share: | | | | |


ಜ 27 : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮ

ಪುತ್ತೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ) ಪುತ್ತೂರು ತಾಲೂಕು ವತಿಯಿಂದ ವಿವೇಕಾನಂದ ಕಾಲೇಜು(ಸ್ವಾಯತ್ತ) ಪುತ್ತೂರು ಹಾಗೂ ಪತ್ರಿಕೋದ್ಯಮ ವಿಭಾಗ ಇದರ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ, ಉಪನ್ಯಾಸ - ಸನ್ಮಾನ ಕಾರ್ಯಕ್ರಮವು ಜ 27 ಶನಿವಾರ ಅಪರಾಹ್ನ ಗಂಟೆ 2:00ರಿಂದ ಪುತ್ತೂರು ನೆಹರೂ ನಗರ ವಿವೇಕಾನಂದ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ನಡೆಸಲಿದ್ದಾರೆ. ರಾಮದಾಸ್‌ ಶೆಟ್ಟಿ ವಿಟ್ಲ ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್(ರಿ.) ಪುತ್ತೂರು ತಾಲೂಕು ಇವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದಲ್ಲಿ ಡಾ. ಆಶಾಲತಾ. ಪಿ. ಸಹಾಯಕ ಪ್ರಾಧ್ಯಾಪಕರು, ರಾಜ್ಯಶಾಸ್ತ್ರ ವಿಭಾಗ, ಗೋವಿಂದದಾಸ ಕಾಲೇಜು ಸುರತ್ಕಲ್ ಇವರು ಉಪನ್ಯಾಸ ನೀಡಲಿದ್ದಾರೆ

ವೇದಿಕೆಯಲ್ಲಿ ಪ್ರೊ.ವಿ.ಬಿ.ಅರ್ತಿಕಜೆ ಗೌರವ ಸಲಹೆಗಾರರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಮತ್ತು ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತರು ಇವರನ್ನು ಡಾ ಯು.ಪಿ. ಶಿವಾನಂದ ಆಡಳಿತ ನಿರ್ದೇಶಕರು ಸುದ್ದಿ ಸಮೂಹ ಸಂಸ್ಥೆ ಪುತ್ತೂರು ಇವರು ಸನ್ಮಾನಿಸಲಿದ್ದಾರೆ.

Additional Image

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜುಬಿನ್ ಮೊಹಪಾತ್ರ ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ, ತಾರನಾಥ ಗಟ್ಟಿ ಕಾಪಿಕಾಡು ಅಧ್ಯಕ್ಷರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಧ್ಯಕ್ಷರು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ ಕ,ಮುರಳೀಕೃಷ್ಣ ಕೆ.ಎನ್ ಸಂಚಾಲಕರು, ವಿವೇಕಾನಂದ ಮಹಾವಿದ್ಯಾಲಯ ನೆಹರೂನಗರ ಪುತ್ತೂರು. ಶ್ಯಾಮ ಸುದರ್ಶನ್ ಭಟ್ ಹೊಸಮೂಲೆ ಮುಖ್ಯಸ್ಥರು, ಕಹಳೆ ನ್ಯೂಸ್ ಚಾನೆಲ್ ಪುತ್ತೂರು ಇವರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 Share: | | | | |


ಗಾರ್ಡನ್ ಮಾಡುವುದಾಗಿ ಹೇಳಿ ಸ್ಮಶಾನ ಮಾಡಿದ್ದಾರೆ: ಮುಂಡೂರು ಗ್ರಾಮಸ್ಥರಿಂದ ಶಾಸಕರಿಗೆ ದೂರು

Posted by Vidyamaana on 2023-10-16 09:04:25 |

Share: | | | | |


ಗಾರ್ಡನ್ ಮಾಡುವುದಾಗಿ ಹೇಳಿ ಸ್ಮಶಾನ ಮಾಡಿದ್ದಾರೆ: ಮುಂಡೂರು ಗ್ರಾಮಸ್ಥರಿಂದ ಶಾಸಕರಿಗೆ ದೂರು

ಪುತ್ತೂರು: ಮುಂಡೂರು ಗ್ರಾಮದ ಮುಂಡೂರು ಪೇಟೆಯ ಬಳಿ ಜನವಸತಿ ಪ್ರದೇಶದಲ್ಲಿ ಸ್ಮಶಾನವನ್ನು ನಿರ್ಮಾಣ ಮಾಡಿದ್ದು ಅದನ್ನು ತೆರವು ಮಾಡುವಂತೆ ಮುಂಡೂರು ಗ್ರಾಮಸ್ಥರು ಶಾಸಕರನ್ನು ಆಗ್ರಹಿಸಿದ್ದಾರೆ.


ಈ ಬಗ್ಗೆ ಆರೋಪ ಮಾಡಿದ ಗ್ರಾಮಸ್ಥರು ಇಲ್ಲಿ ತುಂಬಾ ಮನೆಗಳಿವೆ, ಮನೆಗಳ ಮಧ್ಯೆ ಸ್ಮಶಾನ ನಿರ್ಮಾಣ ಮಾಡಿದ್ದಾರೆ. ನಾವು ಇಲ್ಲಿ ಗಾರ್ಡನ್ ನಿರ್ಮಾಣ ಮಾಡುತ್ತಿದ್ದೇವೆ ಎಂದು ಗ್ರಾಪಂ ನವರು ತಿಳಿಸಿದ್ದರು, ನಾವು ಅದನ್ನು ಸತ್ಯ ಎಂದು ನಂಬಿದ್ದೆವು ಆದರೆ ಕೊನೇ ಗಳಿಗೆಯಲ್ಲಿ ಅದು ಸ್ಮಶಾನ ಎಂದು ಗೊತ್ತಾದಾಗ ನಾವು ಪ್ರತಿಭಟಿಸಿದ್ದೆವು ಆದರೆ ಏನೂ ಪ್ರಯೋಜನವಾಗಲಿಲ್ಲ, ಜನವಸತಿ ಪ್ರದೇಶದಿಂದ ಸ್ಮಶಾನವನ್ನು ತೆರವು ಮಾಡುವಂತೆ ಸ್ಥಳೀಯರು ಆಗ್ರಹಿಸಿದರು.


ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು ಈಗಾಗಲೇ ಸ್ಮಶಾನದ ಎಲ್ಲಾ ಕಾಮಗಾರಿಗಳೂ ಮುಗಿದಿದೆ ಇನ್ನು ಸ್ಥಳಾಂತರ ಮಾಡುವುದು ಹೇಗೆ? ಇಲ್ಲಿ ಸ್ಮಶಾನ ನಿರ್ಮಾಣ ಮಾಡುತ್ತಿದ್ದಾರೆ ಎಂಬ ವಿಚಾರ ನಿಮ್ಮ ಸ್ಥಳೀಯ ಗ್ರಾಪಂ ಸದಸ್ಯರಿಗೆ ಗೊತ್ತಿರಲೇಬೇಕಿತ್ತು. ಯಾಕೆ ನಿಮ್ಮ ಬಳಿ ಗಾರ್ಡನ್ ಮಾಡುತ್ತಿದ್ದೇವೆ ಎಂದು ಸುಳ್ಳು ಹೇಳಿದ್ದರೋ ಗೊತ್ತಿಲ್ಲ. ಗ್ರಾಪಂ ಗೆ ಎಲ್ಲಾ ವಿಚಾರವೂ ಗೊತ್ತಿದ್ದೇ ಇಲ್ಲಿ ಸ್ಮಶಾನ ಮಾಡಲಾಗಿದೆ ಇನ್ನೇನು ಮಾಡಲು ಸಾಧ್ಯ ಎಂದು ಹೇಳಿದರು. ನಮ್ಮ ಮಕ್ಕಳಿಗೆ ಇಲ್ಲಿನ ಸ್ಮಶಾನದಿಂದ ಭಯದ ವಾತಾವರಣವಿದೆ ದಯವಿಟ್ಟು ಏನಾದರೂ ಮಾಡಿ ಎಂದು ಮಹಿಳೆಯರು ಶಾಸಕರಲ್ಲಿ ವಿನಂತಿಯನ್ನು ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ, ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಬಸ್ ಸ್ಟ್ಯಾಂಡಿನಲ್ಲಿದ್ದ ಚನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಕಾಮುಕ ಅಂದರ್

Posted by Vidyamaana on 2023-11-29 20:27:55 |

Share: | | | | |


ಬಸ್ ಸ್ಟ್ಯಾಂಡಿನಲ್ಲಿದ್ದ ಚನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಕಾಮುಕ ಅಂದರ್

ಪುತ್ತೂರು : ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಮಹಿಳೆಯೊಬ್ಬರಿಗೆ ಮದ್ಯ ಕುಡಿಸಿ ಅತ್ಯಾಚಾರ ಮಾಡಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.


ಮೂಲತಃ ಆರ್ಯಾಪು ನಿವಾಸಿ, ಪ್ರಸ್ತುತ ಬನ್ನೂರಿನಲ್ಲಿ ವಾಸವಿರುವ ಸಂಶುದ್ದೀನ್ ಆಸ್ಗರ್ ಆಲಿ (23) ಬಂಧಿತ ಆರೋಪಿ.


ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಮಹಿಳೆ ನ.24 ರಂದು ರಾತ್ರಿ ವೇಳೆ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಸದರಿ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದು, ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 114/2023 ಕಲಂ 376 ಐ.ಪಿ.ಸಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.


ನ.28 ರಂದು ಸಂಜೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ವರದಿಯಾಗಿದೆ.

ಕೊಡಗು: ಕರ್ನಾಟಕದ 32 ಮೀ. ಉದ್ದದ ಗಾಜಿನ ಸೇತುವೆ ಉದ್ಘಾಟನೆ: ದ.ಭಾರತದ 2ನೇ ಸ್ಕಯ್ ವಾಕ್ ಬ್ರಿಡ್ಜ್

Posted by Vidyamaana on 2023-06-13 02:18:12 |

Share: | | | | |


ಕೊಡಗು: ಕರ್ನಾಟಕದ 32 ಮೀ. ಉದ್ದದ ಗಾಜಿನ ಸೇತುವೆ ಉದ್ಘಾಟನೆ: ದ.ಭಾರತದ 2ನೇ ಸ್ಕಯ್ ವಾಕ್ ಬ್ರಿಡ್ಜ್

ಮಡಿಕೇರಿ ಜೂ.12 : ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್‌ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಸುಮಾರು 5 ಟನ್ ಬಾರ ಹೊರುವ ಸಾಮರ್ಥ್ಯದ ಈ ಸೇತುವೆಯಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು. ಇದು ಕರ್ನಾಟಕದ ಮೊದಲ ಉದ್ದದ ಗ್ಲಾಸ್ ಸೇತುವೆಯಾಗಿದ್ದು, ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.

ನಂತರ ಮಾತನಾಡಿದ ಪೊನ್ನಣ್ಣ, ಕೊಡಗು ಪ್ರಕೃತಿ ದತ್ತವಾದ ನಿಸರ್ಗಕ್ಕೆ ಧಕ್ಕೆಯಾಗದ ವಿಚಾರವನ್ನು ಹೊರತುಪಡಿಸಿ ಅಭಿವೃದ್ಧಿ ಪಡಿಸಬೇಕು ಎಂದರು.

ಈ ಅಪರೂಪದ ಯೋಜನೆಯಿಂದ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ. ಜೊತೆಗೆ ಅವಲಂಬಿತರಿಗೆ ಉದ್ಯೋಗವಕಾಶ ದೊರೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮ ನಿರೂಪಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ಭಾರತದ ಸ್ಟ್ರಾಟ್ ಲ್ಯಾಂಡ್ ದಕ್ಷಿಣದ ಕಾಶ್ಮೀರ ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇಂತಹ ಒಂದು ಅದ್ಭುತ ಯೋಜನೆ ಸ್ಥಾಪಿತವಾಗಿರುವುದು ಪ್ರವಾಸೋದ್ಯಮಕ್ಕೆ ಅಶೋದಯಕ ಬೆಳವಣಿಗೆ ಎಂದು ತಿಳಿಸಿದರು.ಟಿಕೆಟ್ ಕೌಂಟರನ್ನು ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ಪ್ಲೆಂಟೇಷನ್‌ನ ವಾಕ್ ಪಾಟ್‌ಅನ್ನು ಕೇಕಡ ಗಣಪತಿ ಹಾಗೂ ದೇವಯ್ಯ ಉದ್ಘಾಟಿಸಿದರು. ಫೋಟೋ ಪಾಯಿಂಟನ್ನು ಉದ್ಯಾಮಿ ಗ್ರೀನ್ ಲ್ಯಾಂಡ್ ಶರಿನ್ ಉದ್ಘಾಟಿಸಿದರು.

ಈ ಸಂದರ್ಭ ಓಂಕಾರೇಶ್ವರ ದೇವಾಲಯದ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ತುಳುವೆರ ಒಕ್ಕೂಟದ ಜಿಲ್ಲಾ ಖಜಾಂಚಿ ಪ್ರಭುರೈ, ಬೆಟ್ಟಗೇರಿ ಗ್ರಾ.ಪಂ ಸದಸ್ಯ ಗೋಪಾಲ, ಪ್ರಮುಖರಾದ ಮುಂಜಂದಿರ ಚಿಕ್ಕು ಕಾರ್ಯಪ್ಪ, ಅಜ್ಜಿಕುಟೀರ ನರೇನ್ ಕಾರ್ಯಪ್ಪ, ಮಿದೇರಿರ ನವೀನ್ ಹಾಜರಿದ್ದರು.

BREAKING: ಹೆಲಿಕಾಪ್ಟ‌ರ್ ಪತನ, ಇರಾನ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ದುರ್ಮರಣ!

Posted by Vidyamaana on 2024-05-20 09:24:27 |

Share: | | | | |


BREAKING: ಹೆಲಿಕಾಪ್ಟ‌ರ್ ಪತನ, ಇರಾನ್ ಅಧ್ಯಕ್ಷರು ಸೇರಿದಂತೆ ಎಲ್ಲರೂ ದುರ್ಮರಣ!

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಪತ್ತೆಯಾಗಿದೆ ಆದರೆ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಇರಾನ್ನ ರೆಡ್ ಕ್ರೆಸೆಂಟ್ ಮುಖ್ಯಸ್ಥರು ಹೇಳಿದ್ದಾರೆ.ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವ ಹುಸೇನ್ ಅಮಿರಾಬ್ಡೊಲ್ಲಿಯನ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತದ ಸ್ಥಳದಲ್ಲಿ ಬದುಕುಳಿದವರು ಕಂಡುಬಂದಿಲ್ಲ ಎಂದು ಇರಾನಿನ ಸರ್ಕಾರಿ ಮಾಧ್ಯಮ ಸೋಮವಾರ ತಿಳಿಸಿದೆ.

ಕಣ್ತೆರೆಯುವ ಮೊದಲೇ ನವಜಾತ ಶಿಶುವಿಗೆ ಆವರಿಸಿದ ಹೃದಯದ ನೋವು

Posted by Vidyamaana on 2024-05-07 16:36:13 |

Share: | | | | |


ಕಣ್ತೆರೆಯುವ ಮೊದಲೇ ನವಜಾತ ಶಿಶುವಿಗೆ ಆವರಿಸಿದ ಹೃದಯದ ನೋವು

ಕಾಸರಗೋಡು: ನವಜಾತ ಶಿಶು ಮೊಹಮ್ಮದ್ ಶೀಸ್ . ಹುಟ್ಟಿ ಇನ್ನು ನಾಲ್ಕು ದಿನ ಆಗಿರಲಿಲ್ಲ. ಅಷ್ಟರಲ್ಲೇ ಹೃದಯದ ನೋವು ಬಾಧಿಸಿದೆ.

ಆ ನೋವಿನ ತೀವ್ರತೆಗೆ ಮಗು ಮಾತ್ರವಲ್ಲ ಮಗುವಿನ  ಮನೆಯವರು ಹೈರಾಣಾಗಿ ಹೋದರು.ಮಗುವಿನ ತಂದೆ ಮೊಹಮ್ಮದ್ ಜಾಯೀದ್ ಅವರು ತಕ್ಷಣ ಕಾಸರಗೋಡಿನ ಚೈತ್ರಾ ಆಸ್ಪತ್ರೆಗೆ ದಾಖಲಿಸಿದರು.

ನಮ್ಮೂರಿನ ನಮ್ಮ ಅಭ್ಯರ್ಥಿ -ಇಂದು ಸಂಜೆ ತವರೂರಲ್ಲಿ ಅಶೋಕ್ ರೈ ಭರ್ಜರಿ ಪ್ರಚಾರಕ್ಕೆ ಸಿದ್ಧತೆ

Posted by Vidyamaana on 2023-05-04 10:01:41 |

Share: | | | | |


ನಮ್ಮೂರಿನ ನಮ್ಮ ಅಭ್ಯರ್ಥಿ -ಇಂದು ಸಂಜೆ ತವರೂರಲ್ಲಿ ಅಶೋಕ್ ರೈ ಭರ್ಜರಿ ಪ್ರಚಾರಕ್ಕೆ ಸಿದ್ಧತೆ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಶೋಕ್ ಕುಮಾರ್ ರೈ ಅವರ ತವರೂರು ಕೋಡಿಂಬಾಡಿ, ಬೆಳ್ಳಾಪ್ಪಾಡಿಯಲ್ಲಿ ಭರ್ಜರಿ ಪ್ರಚಾರಕ್ಕೆ ಸಿದ್ಧತೆ ನಡೆಯುತ್ತಿದೆ.

ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಶೋಕ್ ಕುಮಾರ್ ರೈ ಅವರ ಹಿತೈಷಿಗಳು ಈ ಕಾರ್ಯಕ್ರಮ ಆಯೋಜಿಸಿದ್ದಾರೆ.

ಕೋಡಿಂಬಾಡಿ ಹೋಟೆಲ್ ತುಳುನಾಡ್ ಹತ್ತಿರ ಮೇ ೪ರಂದು ಸಂಜೆ ೬ರಿಂದ ಪ್ರಚಾರ ಸಭೆ ನಡೆಯಲಿದೆ. ಅಶೋಕ್ ಕುಮಾರ್ ರೈ ಅವರ ಮನೆಯಿರುವ ಕೋಡಿಂಬಾಡಿ ಪ್ರದೇಶದಲ್ಲಿ ಈ ಸಭೆ ಆಯೋಜನೆಯಾಗಿರುವುದರಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

Recent News


Leave a Comment: