ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಸುಳ್ಯದಲ್ಲಿ ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ ಗೊಂದಲಕ್ಕೆ ತೆರೆ

Posted by Vidyamaana on 2024-01-07 22:15:59 |

Share: | | | | |


ಸುಳ್ಯದಲ್ಲಿ ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ  ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ ಗೊಂದಲಕ್ಕೆ ತೆರೆ

ಸುಳ್ಯ , ಜ.7: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಕುರಿತಾಗಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದು, ಮಧ್ಯರಾತ್ರಿ ಮಾನಸಿಕ ಅಸ್ವಸ್ಥ ವ್ಯಕ್ತಿ ಎಸಗಿರುವ ಕೃತ್ಯ ಎಂದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.


ಜ.5ರಂದು ರಾತ್ರಿ ವೇಳೆ ಬ್ಯಾನರನ್ನು ಹರಿದು ಹಾಕಿದ ಬಗ್ಗೆ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಸುಳ್ಯ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದರು. ಶ್ರೀರಾಮ ಮಂದಿರದ ಬ್ಯಾನರ್ ಹರಿದ ಬಗ್ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹ ಮಾಡಿತ್ತು.ಪೊಲೀಸರು ಸುಳ್ಯ ಪೇಟೆಯ ಆಸುಪಾಸಿನಲ್ಲಿ 40 ಕಡೆಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ. ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುವ ವಯಸ್ಸಾದ ವ್ಯಕ್ತಿಯೊಬ್ಬ ಆ ಬ್ಯಾನರನ್ನು ಹರಿದು ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಕಂಡುಬಂದಿದೆ. ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿರುವುದನ್ನು ಸಾರ್ವಜನಿಕರು ನೋಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.


ಹರಿದ ಬ್ಯಾನರ್ ತುಂಡನ್ನು ಪರಿಶೀಲಿಸಿದಾಗ ಶ್ರೀರಾಮನ ಫೋಟೊಗೆ ಯಾವುದೇ ಹಾನಿ ಮಾಡಿರುವುದು ಕಂಡುಬಂದಿಲ್ಲ. ಹರಿದ ಬ್ಯಾನರ್ ತುಂಡನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಯಾರೋ ಕಿಡಿಗೇಡಿಗಳು ಕೋಮು ದ್ವೇಷ ಹರಡಿಸುವುದಕ್ಕಾಗಿ ಇಂತಹ ಕೃತ್ಯ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ತನಿಖೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಎನ್ನುವುದು ತಿಳಿಯುತ್ತಲೇ ವಾತಾವರಣ ತಿಳಿಯಾಗಿದೆ.

ಬೆಂಕಿ ಆರಿಸಲು ಬಂದ ಅಗ್ನಿಶಾಮಕ ವಾಹನದಲ್ಲೇ ನೀರಿಲ್ಲ! ಬಿದ್ದು..ಬಿದ್ದು ನಕ್ಕ ಜನ..!

Posted by Vidyamaana on 2024-05-19 09:34:54 |

Share: | | | | |


ಬೆಂಕಿ ಆರಿಸಲು ಬಂದ ಅಗ್ನಿಶಾಮಕ ವಾಹನದಲ್ಲೇ ನೀರಿಲ್ಲ! ಬಿದ್ದು..ಬಿದ್ದು ನಕ್ಕ ಜನ..!

ಉಡುಪಿ, ಮೇ 18: ಬೆಂಕಿ ಆರಿಸಲು ಬಂದ ಅಗ್ನಿಶಾಮಕ ದಳದ ವಾಹನದಲ್ಲಿ ನೀರಿಲ್ಲದೇ ಕಟ್ಟಡ ಸುಟ್ಟು ಹೋದ ಘಟನೆ ಆದಿ ಉಡುಪಿ ಬಳಿ ನಡೆದಿದೆ. ಈ ವಿಚಾರ ವೈರಲ್‌ ಆಗಿದ್ದು, ಘಟನೆ ಬಗ್ಗೆ ತಿಳಿದ ಕೆಲವರು ಅಗ್ನಿಶಾಮಕ ದಳ ಸಿಬ್ಬಂದಿ ನಿರ್ಲಕ್ಷ್ಯದ ಬಗ್ಗೆ ಆಕ್ರೋಶಗೊಂಡಿದ್ದರೆ, ಇನ್ನೂ ಕೆಲವರು ಬಿದ್ದು ಬಿದ್ದು ನಕ್ಕಿದ್ದಾರೆ.

ಆದಿ ಉಡುಪಿ ಬಳಿ ಬಳಿಯ ಹೋಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಬ್ರಹ್ಮಗಿರಿಯಲ್ಲಿರುವ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದರು. ಅರ್ಧಗಂಟೆಯ ಬಳಿಕ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ವಾಹನ ಮತ್ತು ಸಿಬ್ಬಂದಿ ಕಾರ್ಯಾಚರಣೆಗೆ ತಯಾರಿ ನಡೆಸುವಾಗ ವಾಹನದಲ್ಲಿ ನೀರಿಲ್ಲ ಎನ್ನುವುದು ತಿಳಿದು ಬಂದಿದೆ

ಮುಳಿಯದಲ್ಲಿ ನನ್ನ ಪ್ರಥಮ ವಜ್ರಾಭರಣ ಡೈಮಂಡ್ ಫೆಸ್ಟ್ ಗೆ ಚಾಲನೆ

Posted by Vidyamaana on 2024-03-21 19:48:39 |

Share: | | | | |


ಮುಳಿಯದಲ್ಲಿ ನನ್ನ ಪ್ರಥಮ ವಜ್ರಾಭರಣ ಡೈಮಂಡ್ ಫೆಸ್ಟ್ ಗೆ ಚಾಲನೆ

ಪುತ್ತೂರು: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನವನ್ನು ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಜ್ಯುವೆಲ್ಸ್‌ನಲ್ಲಿ ಈ ವರ್ಷದ ಡೈಮಂಡ್ ಫೆಸ್ಟ್‌ಗೆ ಮಾ.20ರಂದು ಚಾಲನೆ ನೀಡಲಾಯಿತು. ಎಲ್ಲರ ಮನೆಯಲ್ಲೂ ವಜ್ರಾಭರಣ ಇರಬೇಕೆಂಬ ಪರಿಕಲ್ಪಣೆಯೊಂದಿಗೆ ಮುಳಿಯ ಸಂಸ್ಥೆ " ನನ್ನ ಪ್ರಥಮ ವಜ್ರಾಭರಣ” ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.

ಪ್ರತಿಯೊಬ್ಬರಿಗೂ ವಜ್ರಾಭರಣ ನೀಡುವ ಮುಳಿಯದ ಕನಸು ನನಸಾಗಲಿ:ಗೋಪಾಲಕೃಷ್ಣ ಭಟ್

ದ್ವಾರಕ ಕನ್ ಸ್ಟ್ರಕ್ಷನ್ ಮಾಲಕ ಗೋಪಾಲಕೃಷ್ಣ ಭಟ್ ಡೈಮಂಡ್ ಫೆಸ್ಟ್‌ಗೆ ಚಾಲನೆ ನೀಡಿ ಮಾತನಾಡಿ ಸುಮಾರು ದಶಕಗಳ ಆರಂಭದಲ್ಲಿ ಪುತ್ತೂರಿನಲ್ಲಿ ಗ್ರಾಹಕರ ವಿಶ್ವಾಸಾರ್ಹತೆಯೊಂದಿಗಿರುವ ಮುಳಿಯ ಜ್ಯುವೆಲ್ಸ್ ಎಲ್ಲರ ಮನೆಮಾತಾಗಿದೆ. ಸಂಸ್ಥೆಯ ಉದ್ಯಮ ಯಶಸ್ಸು ಇನ್ನು ಮುಂದಕ್ಕೂ ಇನ್ನೂ ಹೆಚ್ಚಾಗಲಿ. ಅವರ ಪ್ರತಿ ಮನೆಯಲ್ಲೂ ವಜ್ರಾಭ ರಣ ಇರಬೇಕೆಂಬ ಉದ್ದೇಶ ಏನಿದೆಯೋ ಅದು ಈಡೇರಿಸುವಂತೆ ಮಹಾಲಿಂಗೇಶ್ವರ ದೇವರ ಅಶೀರ್ವಾದ ಇರಲಿ. ಅದೇ ರೀತಿ ಪುತ್ತೂರಿನ ಪ್ರತಿಯೊಬ್ಬರಿಗೂ ವಜ್ರಾಭರಣ ನೀಡುವ ಅವರ ಕನಸು ನಸಾಗಲಿ ಎಂದರು


ಪುತ್ತೂರು ಸಹಿತ ನಮ್ಮ ಸಂಸ್ಥೆಯ ಶಾಖೆಗಳಲ್ಲಿ ಆ ಭಾಗದ ಪ್ರತಿಯೊಬ್ಬ ಗ್ರಾಹಕರು ವಜ್ರಾಭರಣ ಹೊಂದಿರಬೇಕೆಂಬ ಯೋಚನೆಯಲ್ಲಿ ಮತ್ತು ನನಗೊಂದು ವಜ್ರದ ಆಭರಣ ಮಾಡಬೇಕೆಂಬ ಎಲ್ಲರ ಮನಸಿನ ಇಚ್ಚೆ ಈಡೇರಬೇಕೆಂಬ ನಿಟ್ಟಿನಲ್ಲಿ ಈ ಡೈಮಂಡ್ ಫೆಸ್ಟ್ ಆಯೋಜಿಸಿದ್ದೇವೆ. ಒಂದು ಕಾಲದಲ್ಲಿ ವಜ್ರವನ್ನು ಖರೀದಿಸುವುದು ಕಷ್ಟ ಎಂಬ ಭಾವನೆ ಇತ್ತು. ಇವತ್ತು ನಮ್ಮ ಆದಾಯದ ಮಿತಿ, ಜನರ ಜೀವನ ಶೈಲಿ ಉತ್ತಮವಾದಂತೆ ಇವತ್ತು ವಜ್ರ ಎಲ್ಲರಿಗೂ ಕೈಗೆಟಕುವ ಸೊತ್ತು ಆಗಿದೆ. ಮೈ ಡೈಮಂಡ್ ಫೆಸ್ಟ್‌ನಲ್ಲಿ ಸಂಸ್ಥೆಯಿಂದ ಮನೆಗಳಿಗೆ ವಿಶೇಷ ಕಾರ್ಡ್ ಅನ್ನು ಕೊಡುತ್ತೇವೆ. ಅದರಲ್ಲಿ ವಜ್ರವನ್ನು ಹೊಂದಿರದ ಅಥವಾ ಹೊಂದಿರುವ ಕುರಿತು ಗುರುತು ಮಾಡಿಕೊಂಡಾಗ ಇಲ್ಲದವರು ವಜ್ರವನ್ನು ಖರೀದಿ ಮಾಡುವ ವ್ಯವಸ್ಥೆ ಇದೆ. ಈ ಯೋಜನೆಯಲ್ಲಿ ಶೇ.90 ಕ್ಯಾಶ್ ಬ್ಯಾಕ್ ಮತ್ತು ಶೇ. 95 ಎಕ್ಸೆಂಜ್ ಆಫರ್ ನೀಡಲಾಗಿದೆ. ಮೈ ಫೆಸ್ಟ್ ಡೈಮಂಡ್ ಯೋಜನೆಯಲ್ಲಿ ಯಾರು ಪ್ರಥಮವಾಗಿ ವಜ್ರ ಖರೀದಿ ಮಾಡುತ್ತಾರೋ ಅವರಿಗೆ ವಜ್ರ ಹಿಡಿಯುವುದಿಲ್ಲ ಎಂದಾದರೆ ಎರಡು ತಿಂಗಳೊಳಗೆ ಅವರು ಚಿನ್ನದೊಂದಿಗೆ ಅದನ್ನು ಯಾಥಾ ಸ್ಥಿತಿಯಲ್ಲಿ ಬದಲಾವಣೆಗೆ ಅವಕಾಶ ನೀಡಲಾಗಿದೆ ಎಂದು ಕೇಶವಪ್ರಸಾದ್ ಮುಳಿಯ ಹೇಳಿದರು 


ವಜ್ರಕ್ಕೆ ಹೂಡಿಕೆ ಲಾಭದಾಯಕ:


ಮುಳಿಯ ಜ್ಯುವೆಲ್ಸ್‌ನ ಮುಖ್ಯ ಆಡಳಿತಾಧಿಕಾರಿ ಕೇಶವಪ್ರಸಾದ್ ಮುಳಿಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ವಜ್ರ ಕೈ ಗೆಟಕದು ಎಂಬ ಭಾವನೆ ಗ್ರಾಹಕರಲ್ಲಿದೆ. ಆದರೆ ಪ್ರಸ್ತುತ ಕಾಲದಲ್ಲಿ ಬೆಲೆಬಾಳುವ ಆಂಡ್ರಾಯ್ಡ್ ಮೊಬೈಲ್ ಖರೀದಿಸುವ ಸಂದರ್ಭದ ದರ ಮತ್ತೆ ಮತ್ತೆ ಕಡಿಮೆ ಆಗುತ್ತಾ ಹೋಗುತ್ತದೆ. ಆದರೆ ವಜ್ರವನ್ನು ಇವತ್ತು ಕೊಂಡರೆ ನಾಳೆ ಅದರ ದರ ಜಾಸ್ತಿಯಾಗುತ್ತದೆ ಹೊರತು ಕಡಿಮೆ ಆಗುವುದಿಲ್ಲ. ಇವತ್ತು ವಜ್ರಕ್ಕೆ ಹೂಡಿಕೆ ಮಾಡುವುದು ಲಾಭದಾಯಕ. ಈ ನಿಟ್ಟಿನಲ್ಲಿ ಎಲ್ಲರ ಮನೆಯಲ್ಲೂ ವಜ್ರಾಭರಣ ಇರಬೇಕೆಂಬ ಪರಿಕಲ್ಪನೆಯ ಜೊತೆಗೆ ನನ್ನ ಪ್ರಥಮ ವಜ್ರಾಭರಣ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದೇವೆ. ಗ್ರಾಹಕರು ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು. ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಮಾರುಕಟ್ಟೆ ಮ್ಯಾನೇಜ‌ರ್ ಸಂಜೀವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಂಕ‌ರ್, ರಾಜೇಶ್ ಅತಿಥಿಗಳನ್ನು ಗೌರವಿಸಿದರು. ಪೂಜಿತ ಪ್ರಾರ್ಥಿಸಿದರು. ಪ್ಲೋರ್ ಮೇನೆಜರ್ ಯತೀಶ್ ಸ್ವಾಗತಿಸಿ, ಪ್ಲೋ‌ರ್ ಮೇನೆಜ‌ರ್ ಆನಂದ್ ವಂದಿಸಿದರು. ಉಪಶಾಖಾ ಪ್ರಬಂಧಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ರಮೇಶ್ ಭಟ್, ಇಂಜಿನಿಯರ್ ಸತ್ಯನಾರಾಯಣ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ಬಿಜೆಪಿಯವರು ಮುಸ್ಲಿಂ ಮಕ್ಕಳ ವಿದ್ಯಾಬ್ಯಾಸವನ್ನು ತಡೆಯಲು ಸ್ಕಾಲರ್ ಶಿಪ್ ರದ್ದು ಮಾಡಿದ್ದರು

Posted by Vidyamaana on 2023-09-05 21:37:46 |

Share: | | | | |


ಬಿಜೆಪಿಯವರು ಮುಸ್ಲಿಂ ಮಕ್ಕಳ ವಿದ್ಯಾಬ್ಯಾಸವನ್ನು ತಡೆಯಲು ಸ್ಕಾಲರ್ ಶಿಪ್ ರದ್ದು ಮಾಡಿದ್ದರು

ಪುತ್ತೂರು: ಅಲ್ಪಸಂಖ್ಯಾತ ಮಕ್ಕಳು ವಿದ್ಯೆ ಕಲಿಯಬಾರದು, ಅವರು ವಿದ್ಯೆಯಿಂದ ವಂಚಿತರಾಗಬೇಕು ಎಂಬ ಏಕೈಕ ಉದ್ದೇಶದಿಂದ ಕಳೆದ ಅವಧಿಯ ಬಿಜೆಪಿ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುತ್ತಿದ್ದ ಸ್ಕಾಲರ್ ಶಿಪ್ ರದ್ದು ಮಾಡಿದ್ದರು ಆ ಮೂಲಕ ವಿದ್ಯೆಯ ಹೆಸರಿನಲ್ಲೂ ಕೋಮುವಾದ ಮಾಡಿದ್ದರು ಎಂದು ರಾಜ್ಯ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕಫ್ ಸಚಿವರಾ ಝಮೀರ್ ಅಹ್ಮದ್ ಹೇಳಿದರು.

ಅವರು ಇಡ್ಕಿದು ಗ್ರಾಮದ ಮಿತ್ತೂರು ದಾರುಲ್ ಇರ್ಷಾದ್ ಸಂಸ್ಥೆಯಲ್ಲಿ ಪ್ರಧಾನಮಂತ್ರಿ ಜನವಿಕಾಶ ಯೋಜನೆಯಡಿ ನಿರ್ಮಿಸಲಾದ ಪ್ರೌಢ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.


ಇಲ್ಲಿ ನಿರ್ಮಾಣವಾದ ಶಾಲೆ ಕೇಂದ್ರ ಸರಕಾರದ ಅನುದಾನದಿಂದ ಮಾತ್ರ ನಿರ್ಮಾಣವಾಗಿದ್ದಲ್ಲ ಇದರಲ್ಲಿ ರಾಜ್ಯ ಸರಕಾರದ ಅನುದಾನವೂ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಜನ ನೆಮ್ಮದಿಯಿಂದ ಇದ್ದಾರೆ, ಬಿಜೆಪಿಯ ಕೋಮುವಾದಕ್ಕೆ ನಾವು ಬ್ರೇಕ್ ಹಾಕಿದ್ದೇವೆ ಎಂದು ಹೇಳಿದರು. ನಾವು ನಮ್ಮ ಮಕ್ಕಳಿಗೆ ಮದ್ರಸದಲ್ಲಿ ಸೌಹಾರ್ಧತೆಯ ಪಾಠವನ್ನು ಮಾಡುತ್ತೇವೆ ಹೊರತು ಕೋಮುವಾದವನ್ನು ಕಲಿಸುತ್ತಿಲ್ಲ, ಇಸ್ಲಾಂ ಧರ್ಮದಲ್ಲಿ ಕೋಮುವಾದ , ಜಾತಿ ಪದ್ದತಿಗೆ ಅವಕಾಶವೇ ಇಲ್ಲ ನಮ್ಮದೇನಿದ್ದರೂ ದೇಶಪ್ರೇಮದ ಶಿಕ್ಷಣವಾಗಿದೆ, ದೇಶಪ್ರೇಮದ ಸಿದ್ದಾಂತವಾಗಿದೆ. ನಮ್ಮ ಸೌಹಾರ್ಧತೆಯ ಸಿದ್ದಾಂತವನ್ನು ನಾವು ಮುಂದೆಯೋ ಮುಂದುವರೆಸುತ್ತೇನೆ ಎಂದು ಹೇಳಿದರು. ಸಿದ್ದರಾಮಯ್ಯ ಅವರ ಸರಕಾರದಲ್ಲಿ ಎಲ್ಲರನ್ನೂ ಒಂದೇ ಸಮಾನಾಗಿ ಕಾಣಲಾಗುತ್ತಿದೆ, ಯಾವ ಧರ್ಮದವರಿಗೂ ಅನ್ಯಾಯ ಮಾಡುತ್ತಿಲ್ಲ, ಯಾವ ಜಾತಿಯವರನ್ನು ಕಡೆಗಣಿಸುತ್ತಿಲ್ಲ, ಜನ ಮೆಚ್ಚಿದ ಸರಕಾರವನ್ನು ಕಾಂಗ್ರೆಸ್ ನೀಡುತ್ತಿದೆ ಎಂದು ಹೇಳಿದರು.

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ

ನಾವು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ವಿದ್ಯೆ ಇಲ್ಲದೇ ಇದ್ದರೆ ಮುಂದೆ ಏನೂ ಮಾಡಲು ಸಾಧ್ಯವಿಲ್ಲ. ಶಿಕ್ಷಣಕ್ಕಾಗಿ ನಾವು ಒಗ್ಗೂಡಬೇಕು, ಯಾವುದೇ ಒಂದು ಮಗು ಶಿಕ್ಷಣದಿಂದ ವಂಚಿತರಾಗಬಾರದು ಆ ರೀತಿ ಆಗದಂತೆ ಎಚ್ಚರಿಕೆಯಿಂದ ಇರಬೇಕಾದದ್ದು ಪೋಷಕರ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿದರು. ಮಿತ್ತೂರು ದಾರುಲ್ ಇರ್ಷಾದ್ ಸಂಶ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಿರುವುದು ಅಬಿನಂದನೀಯವಾಗಿದೆ ಈ ಸಂಸ್ಥೆಗೆ ಸರಕಾರದಿಂದ ದೊರೆಯುವ ಎಲ್ಲಾ ಸಹಾಯ ಧನವನ್ನು ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.


ಪುತ್ತೂರು ಶಾಸಕರಾದ ಅಶೋಕ್ ರೈ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.


ವೇದಿಕೆಯಲ್ಲಿ ಕರ್ನಾಟಕ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಜಿಪಂ ಸದಸ್ಯ ಎಂ ಎಸ್ ಮಹಮ್ಮದ್ , ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ. ಜಿಪಂ ಸಿಇಒ ಆನಂದ, ಟಿಎಂ ಶಹೀದ್ ಸುಳ್ಯ, ವಕಫ್ ಬೋರ್ಡು ಮಾಜಿ ಅಧ್ಯಕ್ಷ ಶಾಪಿ ಮುಸ್ಲಿಯಾರ್ ಸಅದಿ, ಮಾಣಿ ಉಸ್ತಾದ್ ಸಹಿತ ಅನೇಕ ಗಣ್ಯರು ವೇದಿಕೆಯಲ್ಲಿ ಉಪಸ್ತಿತರಿದ್ದರು.

ಬಿಜೆಪಿ ಯುವಮೋರ್ಚಾ ವತಿಯಿಂದ ಬೈಕ್ ಜಾಥಾ

Posted by Vidyamaana on 2023-03-27 04:24:25 |

Share: | | | | |


ಬಿಜೆಪಿ ಯುವಮೋರ್ಚಾ   ವತಿಯಿಂದ ಬೈಕ್ ಜಾಥಾ

ಪುತ್ತೂರು : ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಮಂಜೂರು ಮಾಡಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಹಮ್ಮಿಕೊಂಡ ಬೈಕ್ ಜಾಥಾದ ಅಂಗವಾಗಿ ಕಲ್ಲೇಗ ಸಭಾ ವೇದಿಕೆಯಲ್ಲಿ ನಡೆದ ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕ್ರೀಡೆಗೆ ಪೂರಕವಾಗಿ ಪುತ್ತೂರಿನ ತೆಂಕಿದಲ್ಲಿ ಈಗಾಲೇ ಜಾಗ ಖರೀದಿ ಮಾಡಲಾಗಿದೆ ಎಂದ ಅವರು, ಪುತ್ತೂರಿನಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂದೇಶವನ್ನು ಬೈಕ್ ಜಾಥಾ ಮೂಲಕ ಆಯೋಜಿಸಿದ ಯುವ ಮೋರ್ಚಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.ಡಾ.ಎಂ.ಕೆ.ಪ್ರಸಾದ್ ಮಾತನಾಡಿ, ಮುಂದಿನ ಅವಧಿಯಲ್ಲಿ ಶಾಸಕರು ಮತ್ತಷ್ಟು ಅನುದಾನ ತರುವ ಪ್ರಯತ್ನ ಮಾಡಬೇಕು. ಜತೆಗೆ ಮುಂಬರುವ ಚುನಾವಣೆಯಲ್ಲಿ ಡಬಲ್ ಇಂಜಿನ್ ಬದಲು ತ್ರಿಬಲ್ ಇಂಜಿನ್ ಸರಕಾರ ಮಾಡಬೇಕು ಎಂದು ಹೇಳಿದರು.

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು ಮಾತನಾಡಿ, ಮುಂಬರುವ ಚುನಾವಣೆ ಎದುರಿಸಲು ಯುವಕರ ತಂಡ ಸಜ್ಜಾಗಿದೆ ಎಂದರು.

ಬೈಕ್ ಜಾಥಾ ಕುಂಬ್ರದಿಂದ ಹೊರಟು ಬೈಪಾಸ್ ರಸ್ತೆಯಾಗಿ ಕಲ್ಲೇಗದಲ್ಲಿ ಸಮಾಪನಗೊಂಡಿತು.

ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಮತ್ತಿತರರು ಉಪಸ್ಥಿತರಿದ್ದರು

ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮಾಡ್ಯುಲರ್ ಆಪರೇಷನ್ ಥಿಯೇಟರಿನಲ್ಲಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

Posted by Vidyamaana on 2023-02-20 06:19:00 |

Share: | | | | |


ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಮಾಡ್ಯುಲರ್ ಆಪರೇಷನ್ ಥಿಯೇಟರಿನಲ್ಲಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

ಪುತ್ತೂರು: ಬೆಂಗಳೂರು, ಮಂಗಳೂರಿನಲ್ಲಿ ಲಭ್ಯವಿರುವ ಅತ್ಯಾಧುನಿಕ ಶಸ್ತ್ರಚಿಕಿತ್ಸೆಯ ಮಾದರಿಯ ಶಸ್ತ್ರಚಿಕಿತ್ಸೆಯನ್ನು ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ. 25ರ ಮಹಾಶಿವರಾತ್ರಿಯ ಶುಭಗಳಿಗೆಯಲ್ಲಿ ನೆರವೇರಿಸಲಾಯಿತು.

ಉತ್ತಮ, ಅತ್ಯಾಧುನಿಕ ಪರಿಕರಗಳನ್ನು ಒಳಗೊಂಡ ಮಾಡ್ಯುಲರ್ ಆಪರೇಷನ್ ಥಿಯೇಟರ್ ಇತ್ತೀಚೆಗಷ್ಟೇ ಪುತ್ತೂರಿನ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿತ್ತು.ಜಿಲ್ಲಾ ಕೇಂದ್ರದ ಸಿದ್ಧತೆಯಲ್ಲಿರುವ ಪುತ್ತೂರಿಗೆ ಮಾಡ್ಯುಲರ್ ಆಪರೇಷನ್ ಥಿಯೇಟರ್ ಪ್ರಮುಖ ಆದ್ಯತೆಗಳಲ್ಲೊಂದು. ರೋಗಿಗಳ ದೇಹಸೂಕ್ಷ್ಮತೆಗೆ ಅನುಗುಣವಾಗಿ ಆಪರೇಷನ್ ಥಿಯೇಟರ್ ಅನ್ನು ರಚಿಸಲಾಗಿರುತ್ತದೆ. ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಆಪರೇಷನ್ ನಡೆಸುವುದು ಇಲ್ಲಿನ ವಿಶೇಷತೆ



Leave a Comment: