Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2023-10-07 04:49:46 |
ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?
ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.
ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.
ಹಾರ್ಟ್ ಅಟ್ಯಾಕ್ - ಹಾರ್ಟ್ ಫೈಲ್ಯೂರ್ - ಕಾರ್ಡಿಯಾಕ್ ಅರೆಸ್ಟ್: ಏನಿದೆ ವ್ಯತ್ಯಾಸ?
ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.
Posted by Vidyamaana on 2023-07-27 02:03:40 |
ಮಂಗಳೂರು : ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯ ಮೊಹರು, ಸಹಿ ಹೊಂದಿದ ನಕಲಿ ಆದೇಶ ಪತ್ರವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯ ಬಿಟ್ಟ ಪ್ರಸಂಗ ಇಂದು ರಾತ್ರಿ ನಡೆದಿದೆ
ಈ ಸಂಬಂಧ ಎಚ್ಚರಿಕೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಇಂತಹ ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Posted by Vidyamaana on 2023-03-03 15:31:01 |
ರಮಾನಾಥ ರೈ ಸಾರಥ್ಯದಲ್ಲಿ 12ನೇ ವರ್ಷದ ಬಯಲು ಕಂಬಳ
ಬಂಟ್ವಾಳ: ಇಲ್ಲಿನ ಮೂಡೂರು – ಪಡೂರು ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ 12ನೇ ವರ್ಷದ ಹೊನಲು ಬೆಳಕಿನ ಮೂಡೂರು – ಪಡೂರು ಜೋಡುಕರೆ ಬಯಲು ಕಂಬಳ ಮಾರ್ಚ್ 4ರಂದು ಬೆಳಿಗ್ಗೆ 8.45ಕ್ಕೆ ನಾವೂರು ಗ್ರಾಮದ ಕೋಡಿಬೈಲಿನಲ್ಲಿ ಉದ್ಘಾಟನೆಗೊಳ್ಳಲಿದೆ.
ಸೋಲೂರು ಕರ್ನಾಟಕ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ಧರ್ಮಗುರು ವಂ. ಫೆಡ್ರಿಕ್ ಮೊಂತೆರೊ, ಕಾವಳಕಟ್ಟೆ ಹಝ್ರತ್ ಡಾ. ಮುಹಮ್ಮದ್ ಫಾಝಿಲ್ ರಿಝ್ಜಿ ಕಂಬಳವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸುವರು.
ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ಯು.ಟಿ. ಖಾದರ್, ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಮೊದಲಾದವರು ಅತಿಥಿಗಳಾಗಿರುವರು ಎಂದು ಪ್ರಕಟಣೆ ತಿಳಿಸಿದೆ.
Posted by Vidyamaana on 2023-06-16 08:23:17 |
ಕಾಸರಗೋಡು; ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದಡಿ ಉಪ್ಪಿನಂಗಡಿ ಮೂಲದ ಮದ್ರಸಾ ಶಿಕ್ಷಕನನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಬಂಧಿತ ಆರೋಪಿ, ಕಾಸರಗೋಡಿನ ಮದ್ರಸಾದಲ್ಲಿ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂದು
ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Posted by Vidyamaana on 2023-02-18 14:08:58 |
ಪುತ್ತೂರು : ಬೇಡಿಕೆ ಈಡೇರದ ಹಿನ್ನಲೆಯಲ್ಲಿ ಪುತ್ತೂರು ನಗರಸಭೆಯ ಹೊರಗುತ್ತಿಗೆ ಕಾರ್ಮಿಕರಿಂದ ಸಾಂಕೇತಿಕ ಪ್ರತಿಭಟನೆ ಶನಿವಾರ ನಗರಸಭೆ ಎದುರು ನಡೆಸಯಿತು.
ಇತ್ತೀಚೆಗೆ ಕಾರ್ಮಿಕರ ಪ್ರತಿಭಟನೆ ಹಿನ್ನಲೆಯಲ್ಲಿ ನೇರಪಾವತಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೊಷಣೆ ಮಾಡಿಲ್ಲ ಎಂಬ ಕಾರಣಕ್ಕೆ ಹೊರಗುತ್ತಿಗೆ ಕಾರ್ಮಿಕರು ಸಹಿತ ಚಾಲಕರು ಸಾಂಕೇತಿಕ ಪ್ರತಿಭಟನೆ ಮಾಡಿದರು.
ಪ್ರತಿಭಟನೆಯನ್ನುದ್ದೇಶಿಸಿ ಹೊರಗುತ್ತಿಗೆ ನೌಕರರ ಕರಾವಳಿ ವಿಭಾಗದ ಸಂಚಾಲಕ ಅಣ್ಣಪ್ಪ ಕಾರೆಕ್ಕಾಡು ಮಾತನಾಡಿ, ಇತ್ತೀಚೆಗೆ ಬೇಡಿಕೆ ಈಡೇರಿಕೆಗಾಗಿ ಸಂಘದ ವತಿಯಿಂದ ನಡೆಸಿದ ಪ್ರತಿಭಟನೆ ಫಲವಾಗಿ ಚಾಲಕರು, ವಾಟರ್ ಮೆನ್, ಡಾಟಾ ಅಪರೇಟರ್ ಗಳು ಸಹಿತ ಹೊರಗುತ್ತಿಗೆ ನೌಕರರಾಗಿರುವ ಎಲ್ಲಾ ಕಾರ್ಮಿಕರನ್ನು ನೇರ ಪಾವತಿಗೊಳಪಡಿಸುವ ಕುರಿತು ಬಜೆಟ್ ನಲ್ಲಿ ಘೊಷಣೆ ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಈ ಭರವಸೆ ಈಡೇರಲಿಲ್ಲ. ಈ ಕುರಿತು ಉತ್ತರ ಕರ್ನಾಟಕದ ಎಲ್ಲಾ ಹೊರಗುತ್ತಿಗೆದಾರರು ದಿಕ್ಕಾರ ಕೂಗಿದ್ದಾರೆ. ಆದರೆ ನಾವು ದಿಕ್ಕಾರ ಕೂಗುವುದಿಲ್ಲ. ಮಂದಿನ ತಿಂಗಳೊಳಗೆ ಮುಖ್ಯಮಂತ್ರಿಗಳು ನಮಗೆ ನೇರಪಾವತಿ ಮಾಡಿ ಕೊಡುವ ನಂಬಿಕೆ ಇದೆ. ಈ ನಿಟ್ಟಿನಲ್ಲಿ ನಮ್ಮ ಪ್ರತಿಭಟನೆ ಸಾಂಕೇತಿಕ. ಮುಂದಿನ ತಿಂಗಳು ನಮ್ಮ ಬೇಡಿಕೆ ಈಡೇರಿಸದೇ ಹೋದರೆ ಪ್ರತಿಭಟನೆಯ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
Posted by Vidyamaana on 2024-03-20 22:52:34 |
ಪುತ್ತೂರು : ಲೋಕಸಭಾ ಚುನಾವಣೆ ಹಿನ್ನೆಲೆ ಇವಿಎಮ್ ಮೆಷಿನ್ ಮಾ.20ರಂದು ರಾತ್ರಿ ಪುತ್ತೂರಿಗೆ ಆಗಮಿಸಿದ್ದು, ಕಂಟೈನರ್ ಮೂಲಕ ಇವಿಎಮ್ ಮೆಷಿನ್ ಅನ್ನು ತರಲಾಗಿದೆ.ತೆಂಕಿಲದಲ್ಲಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇವಿಎಮ್ ಮೆಷಿನ್ ಗಳನ್ನು ಸ್ಟ್ರಾಂಗ್ ರೂಂ ನಲ್ಲಿ ಭದ್ರವಾಗಿಡಲಾಗಿದೆ, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಸಹಾಯಕ ಆಯುಕ್ತರು, ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಹಾಗೂ ನಗರ ಸಭೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.