Posted by vidyamaana on 2024-07-03 16:20:08 |
ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು
ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.
ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.
Posted by Vidyamaana on 2023-11-01 19:52:31 |
ಬೆಂಗಳೂರು : ರಾಜ್ಯದ ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಲ್ಲಿ ಕೆಲವೊಮ್ಮೆ ಮನವಿ ಮಾಡಿಕೊಳ್ಳುವುದಿರುತ್ತದೆ. ಆದರೆ ಈ ಸಲ ಒಂದು ವಿಶೇಷ ಕಾರಣಕ್ಕಾಗಿ ಪ್ರಧಾನಿ ಮೋದಿಯವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
ಪ್ರಧಾನಿ ಮೋದಿಗೆ ಸಿಎಂ ಸಿದ್ದು ಮಾಡಿದ ಕಳಕಳಿಯ ಮನವಿ ಪತ್ರ
ರಾಜ್ಯದಲ್ಲಿನ 15 ತಿಂಗಳ ಮಗುವೊಂದರ ಚಿಕಿತ್ಸೆಗಾಗಿ ಔಷಧಕ್ಕೆ ಸಂಬಂಧಿಸಿದಂತೆ ಆಮದು ಸುಂಕ ವಿನಾಯಿತಿ ನೀಡುವಂತೆ ಸಿದ್ದರಾಮಯ್ಯ ಅವರು ಪ್ರಧಾನಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆ ಗುಣಪಡಿಸಬಹುದಾದ ಝೋಲ್ಗೆನ್ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ. 17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂಬುದಾಗಿ ಸಿಎಂ ಮನವಿ ಮಾಡಿಕೊಂಡಿದ್ದಾರೆ.
Posted by Vidyamaana on 2024-03-26 07:55:28 |
ಹೈದರಾಬಾದ್, ಮಾ.26: ಲೋಕಸಭೆ ಚುನಾವಣೆಗೂ ಮುನ್ನ ತೆಲಂಗಾಣದಲ್ಲಿ ಪೊಲೀಸ್ ಅಧಿಕಾರಿಗಳ ಫೋನ್ ಕದ್ದಾಲಿಕೆ ಪ್ರಕರಣ ರಾಹಕೀಯ ಬಿರುಗಾಳಿ ಎಬ್ಬಿಸಿದೆ. ಗುಪ್ತಚರ ದಳದ ಮಾಜಿ ಮುಖ್ಯಸ್ಥ ಡಾ. ಟಿ ಪ್ರಭಾಕರ್ ರಾವ್ ಅವರನ್ನು ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮಾಡಿದ್ದು ಇದರ ಬೆನ್ನಲ್ಲೇ ತಲೆಮರೆಸಿಕೊಂಡಿದ್ದಾರೆ.
ಪ್ರಭಾಕರ್ ರಾವ್ ಸದ್ಯ ಅಮೆರಿಕದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರ ಫೋನ್ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡುವ ಮೂಲಕ ದತ್ತಾಂಶಗಳನ್ನು ಸಂಗ್ರಹಿಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಹೈದರಾಬಾದ್ನಲ್ಲಿ ಪ್ರಭಾಕರ್ ರಾವ್ ಅವರ ಮನೆ, ಐ ನ್ಯೂಸ್ ಎಂಬ ತೆಲುಗು ಟಿವಿ ವಾಹಿನಿಯನ್ನು ನಡೆಸುತ್ತಿರುವ ಶ್ರವಣ್ ರಾವ್ ಅವರ ನಿವಾಸ ಸೇರಿದಂತೆ ಸುಮಾರು ಹನ್ನೆರಡು ಇತರ ಸ್ಥಳಗಳನ್ನು ಹುಡುಕಾಟ ನಡೆಸಲಾಗಿದೆ. ಶ್ರವಣ್ ರಾವ್ ಕೂಡ ದೇಶ ತೊರೆದಿದ್ದಾರೆ ಎಂದು ನಂಬಲಾಗಿದ್ದು, ಇಸ್ರೇಲ್ನಿಂದ ಫೋನ್ ಟ್ಯಾಪಿಂಗ್ ಉಪಕರಣಗಳನ್ನು ತರಿಸಿ ಸರ್ವರ್ಗಳನ್ನು ಸ್ಥಾಪಿಸಲು ಇವರು ಸಹಾಯ ಮಾಡಿದ್ದಾರೆ ಎನ್ನಲಾಗಿದೆ.
ಪ್ರಕರಣದಲ್ಲಿ ಈಗಾಗಲೇ ಮೂವರು ಐಪಿಎಸ್ ದರ್ಜೆ ಅಧಿಕಾರಿಗಳನ್ನು ಬಂಧಿಸಲಾಗಿದೆ. ಹೆಚ್ಚುವರಿ ಎಸ್ಪಿಗಳಾದ ಭುಜಂಗ ರಾವ್, ತಿರುಪತಣ್ಣ, ಮತ್ತು ಡಿವೈಎಸ್ಪಿ ಪ್ರಣೀತ್ ರಾವ್ ಅವರನ್ನು ಈಗಾಗಲೇ ಬಂಧಿಸಲಾಗಿದೆ. ಭುಜಂಗ ರಾವ್ ಮತ್ತು ತಿರುಪತಣ್ಣ ಖಾಸಗಿ ವ್ಯಕ್ತಿಗಳ ಮೇಲೆ ಅಕ್ರಮವಾಗಿ ನಿಗಾ ವಹಿಸಿ ಸಾಕ್ಷ್ಯ ನಾಶಪಡಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Posted by Vidyamaana on 2024-06-28 23:59:46 |
ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಹೊಂದುತ್ತಿದ್ದು, ಜಿಲ್ಲೆಯಾದ್ಯಂತ ಹಲವಾರು ಹೋಂಸ್ಟೇಗಳು ಮತ್ತು ರೆಸಾರ್ಟ್ಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಇದೀಗ ಕೊಡಗಿನಲ್ಲಿ ಹೊಸ ಟ್ರೆಂಡ್ ಆಗಿ ಪ್ರವಾಸಿಗರನ್ನು ಸೆಳೆಯಲು ಹಲವು ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗುತ್ತಿದೆ.
ಆದರೆ, ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಗ್ಲಾಸ್ ಬ್ರಿಡ್ಜ್ ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ.
ಕೆ ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ. ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ.
ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಅದು ಈಗ ದುರ್ಬಲ ಸ್ಥಿತಿಯಲ್ಲಿದೆ. ಜೌಗು ಪ್ರದೇಶದಲ್ಲಿರುವ ಈ ಗಾಜಿನ ಸೇತುವೆಯ ಕೆಳಗಿನ ಸಡಿಲವಾದ ಮಣ್ಣು ಕ್ರಮೇಣ ಕೆಳಕ್ಕೆ ಜಾರುತ್ತಿರುವುದರಿಂದ ಅಪಾಯದ ಸ್ಥಿತಿ ಎದುರಾಗಿದೆ.
Posted by Vidyamaana on 2023-05-01 10:40:09 |
ಪುತ್ತೂರು: ಬೆಲೆ ಏರಿಕೆಯ ಮೂಲಕ ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ ಬಿಜೆಪಿ ಸರಕಾರ . ಈ ಪಕ್ಷದ ಕಾರ್ಯಕರ್ತರು ,ಮುಖಂಡರು ಬಡವರ ಮನೆಗೆ ಯಾವ ಮುಖ ಹೊತ್ತು ವೋಟು ಬಡವರ ಮನೆಗೆ ವೋಟು ಕೇಳಲು ಹೋಗುತ್ತಾರೆ ಎಂದು ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ರಾಜಾರಾಂ ಕೆ ಬಿ ಹೇಳಿದರು.
ಬುಳೇರಿಕಟ್ಟೆಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇದೆ. ದೇಶದಲ್ಲಿಅಚ್ಚೇದಿನ್ ಕೊಡುವುದಾಗಿ ಹೇಳಿದವರು ಬಡವರ ಅನ್ನಕ್ಕೂ ಕಲ್ಲು ಹಾಕುವ ಕೆಲಸವನ್ನು ಮಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ,ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಇವೆಲ್ಲವೂ ಜನರನ್ನು ಕಂಗೆಡಿಸಿದೆ. ಬೆಲೆ ಏರಿಕೆಯಿಂದ ನಾಳೆ ಏನಾಗುತ್ತದೋ ಎಂಬ ಭಯ ಜನರಲ್ಲಿ ನಿತ್ಯವೂ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಎಲ್ಲಾಸಮಸ್ಯೆಗಳಿಗೆ ಪರಿಹಾರವಾಗಲಿದೆ. ಬಡವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಜನ ಸ್ನೇಹಿ ಪ್ರಣಾಳಿಕೆಯನ್ನು ಜಾರಿಮಾಡಿದೆ. ಪುತ್ತೂರಿನಲ್ಲಿ ಅಶೋಕ್ ರೈ ಯವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿಮುಂದೆ ಬರುವ ಕಾಂಗ್ರೆಸ್ ಸರಕಾರಕ್ಕೆ ಬಲಕೊಡುವ ಕೆಲಸವನ್ನು ಮಾಡಬೇಕು. ಪ್ರತೀ ಬೂತ್ ನಲ್ಲೂ ಟಾರ್ಗೆಟ್ ವೋಟು ಎಂಬ ಆಲೋಚನೆಯನ್ನು ಇಟ್ಟುಕೊಂಡು ಹೆಚ್ಚಿನಮತಗಳು ಈ ಭಾಗದಿಂದ ಕಾಂಗ್ರೆಸ್ ಗೆ ಬೀಳುವಂತೆ ನಾವು ಕಾರ್ಯಪೃವೃತ್ತರಾಗಬೇಕು ಎಂದುಹೇಳಿದರು.
ಸೈಲೆಂಟ್ ವೋಟು ಕಾಂಗ್ರೆಸ್ ಪಾಲಾಗುವಂತೆ ಪ್ರತೀಯೊಬ್ಬ ಕಾರ್ಯಕರ್ತರು ಒಟ್ಟುಗೂಡಿ ಕೆಲಸ ಮಾಡಬೇಕು. ಬಿಜೆಪಿ ಕಾರ್ಯಕರ್ತರನ್ನು ಪಕ್ಷಕ್ಕೆ ಸೆಳೆಯಬೇಕು ಎಂದು ಅಭ್ಯರ್ಥಿ ಅಶೋಕ್ ರೈ ಹೇಳಿದರು.
ಅಕ್ರನಸಕ್ರಮದಲ್ಲಿ ಪುತ್ತೂರಿನ ಶಾಸಕರು ಭೃಷ್ಟಾಚಾರ ಮಾಡಿದ್ದು ಅದು ಅವರ ದೊಡ್ಡ ಸಾಧನೆಯಾಗಿದೆ. ಯಾರು ಲಕ್ಷಾಂತರ ರೂ ಕೊಟ್ಟಿದ್ದಾರೋ ಅವರಿಗೆಲ್ಲಾ ಅಕ್ರಮ ಸಕ್ರಮ ಮಾಡಿಕೊಡಲಾಗಿದೆ. ನಾನು ಶಾಸಕನಾದರೆ ರಾಜಧರ್ಮ ಪಾಲನೆ ಮಾಡಲಿದ್ದೇನೆ. ಬಿಜೆಪಿಯವರು ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡು ಪಕ್ಷಕ್ಕೆ ಬಲ ಕೊಡುವ ಕೆಲಸವನ್ನು ಮಾಡುವಂತೆ ಮನವಿ ಮಾಡಿದರು. ಯಾವುದೇ ತಾರತಮ್ಯ ಮಾಡದೆ ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸವನ್ನು ಮಾಡಿತೋರಿಸುತ್ತೇನೆ ಎಂದು ಹೇಳಿದರು. ಅಭಿವೃದ್ದಿಯಾಗಬೇಕಾದರೆ ಶಾಂತಿ,ಸೌಹಾರ್ಧತೆ ಮುಖ್ಯ. ಪುತ್ತೂರಿನಲ್ಲಿ ಎಲ್ಲಾ ಧರ್ಮದ ಜನರೂ ಒಂದೇ ತಾಯಿಮಕ್ಕಳಂತೆ ಬದುಕುವ ವಾತಾವರಣ ಸೃಷ್ಟಿಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಪ್ರವೀಣ್ ಚಂದ್ರ ಳ್ವ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
Posted by Vidyamaana on 2023-07-30 07:59:14 |
ಕುಂದಾಪುರ: ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.
ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು 23 ವರ್ಷದ ಶರತ್ ಕುಮಾರ್ ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.
ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಜುಲೈ 30ರಂದು ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್ಡಿಆರ್ಎಫ್), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸಿದ್ದರು. ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತುಶರತ್ ಪತ್ತೆಗಾಗಿ ಜಲಪಾತ ಹರಿದು ಬರುವ ಬೇರೆ ಬೇರೆ ಕಡೆಗಳಲ್ಲಿ ಸಾಗರ ಬಾರಕೂರು ಅವರ ನೇತೃತ್ವದಲ್ಲಿ ಡ್ರೋನ್ ಕೆಮರಾದ ಮೂಲಕ ಹುಡುಕುವ ಪ್ರಯತ್ನ ಮಾಡಲಾಗಿತ್ತು
Posted by Vidyamaana on 2023-05-31 15:50:19 |
ನವದೆಹಲಿ :ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್ ಅನುಸರಿಸುತ್ತಿರುವ ಗ್ಯಾರಂಟಿ ಸೂತ್ರ ದೇಶವನ್ನು ದಿವಾಳಿ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಒಂಬತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಸ್ಥಾನದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೇ ತಿಂಗಳ ಆರಂಭದಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ವಿಚಾರ ಉಲ್ಲೇಖಿಸಿದರು.ಕಾಂಗ್ರೆಸ್ ಹೊಸ ಗ್ಯಾರಂಟಿ ಸೂತ್ರವನ್ನು ಅನುಸರಿಸುತ್ತಿದೆ. ಆದರೆ, ಅವರು (ಕಾಂಗ್ರೆಸ್ಸಿಗರು) ಕೊಟ್ಟ ಭರವಸೆಗಳನ್ನು ಪೂರೈಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಐವತ್ತು ವರ್ಷಗಳ ಹಿಂದೆ ದೇಶದಲ್ಲಿ ಬಡತನ ನಿರ್ಮೂಲನೆ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಆದರೆ, ಇದು ಬಡವರಿಗೆ ಕಾಂಗ್ರೆಸ್ಸಿಗರು ಮಾಡಿದ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ.
ಬಡವರನ್ನು ದಾರಿ ತಪ್ಪಿಸುವುದು, ಅವರನ್ನು ವಂಚಿತರನ್ನಾಗಿ ಮಾಡುವುದು ಕಾಂಗ್ರೆಸ್ನ ನೀತಿಯಾಗಿದೆ. ಇದರಿಂದ ರಾಜಸ್ಥಾನದ ಜನರು ಸಹ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜಸ್ಥಾನಕ್ಕೆ ಏನು ಸಿಕ್ಕಿದೆ? ಮುಖ್ಯಮಂತ್ರಿ, ಸಚಿವರು, ಶಾಸಕರು ತಮ್ಮ ತಮ್ಮಲ್ಲೇ ಜಗಳವಾಡುತ್ತಾರೆ ಎಂದು ಗುಡುಗಿದ್ದಾರೆದೇಶದಲ್ಲಿ 2014ಕ್ಕೂ ಮೊದಲು ಭ್ರಷ್ಟಾಚಾರದ ವಿರುದ್ಧ ಜನರು ಬೀದಿಗಿಳಿದಿದ್ದರು. ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿಗಳು ನಡೆದಿದ್ದವು. ಆದರೆ, ಕಾಂಗ್ರೆಸ್ ರಿಮೋಟ್ ಕಂಟ್ರೋಲ್ ಮೂಲಕ ಸರ್ಕಾರವನ್ನು ನಡೆಸುತ್ತಿತ್ತು ಎಂದು ಮೋದಿ ದೂರಿದ್ದಾರೆ.
ಕಳೆದ ಒಂಬತ್ತು ವರ್ಷಗಳಲ್ಲಿ ತಮ್ಮ ಸರ್ಕಾರವು ಜನರ ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ ಎಂದು ಅವರು ಹೇಳಿದ್ದಾರೆ.
ರಾಜಸ್ಥಾನ ವಿಧಾನಸಭೆಗೆ ಮುಂದಿನ ಐದು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಈ ವರ್ಷ ಪ್ರಧಾನಿ ಮೋದಿ ಐದು ಭಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.