ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ಸೌಜನ್ಯ ಪ್ರಕರಣ:ತಿಮರೋಡಿ ನೇತೃತ್ವದಲ್ಲಿಂದು ಪ್ರತಿಭಟನೆ ಹಿನ್ನಲೆ

Posted by Vidyamaana on 2023-09-03 01:23:01 |

Share: | | | | |


ಸೌಜನ್ಯ ಪ್ರಕರಣ:ತಿಮರೋಡಿ ನೇತೃತ್ವದಲ್ಲಿಂದು ಪ್ರತಿಭಟನೆ ಹಿನ್ನಲೆ

ಬೆಳ್ತಂಗಡಿ :ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಬೆಳ್ತಂಗಡಿಯ ತಾಲೂಕು ಆಡಳಿತ ಸೌಧದ ಎದುರು ಸೆ.3ರಂದು ಬೆಳಗ್ಗಿನಿಂದ ಮಧ್ಯಾಹ್ನ ತನಕ ನಡೆಯುವ ಬೃಹತ್‌ ಪ್ರತಿಭಟನೆಯಲ್ಲಿ ಅತ್ಯಧಿಕ ಜನಸ೦ದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೇಟೆಯಲ್ಲಿ ಸೆ.3ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ತನಕ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿ ಅಪರ ಜಿಲ್ಲಾಧಿಕಾರಿ


ಆದೇಶ ಹೊರಡಿಸಿದ್ದಾರೆ. ಉದ್ದೇಶಿತ ಪ್ರತಿಭಟನೆ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಬದಲಾವಣೆ ಕೋರಿ ಬೆಳ್ತ೦ಗಡಿ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು.ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ -13 ಮಾರ್ಗದಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಡಾ|ಜಿ.ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.ಸೆ.3ರಂದು ನಡೆಯುವ ಪ್ರತಿಭಟನಾ ಸಭೆಗೆ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ಸಮಯದಲ್ಲಿ ಬೆಳ್ತಂಗಡಿ ಪೇಟೆಯನ್ನು ಹಾದು ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಬೆಳಿಗ್ಗೆ ಗಂಟೆ 9ರಿಂದ ಸಂಜೆ 5 ಗಂಟೆವರೆಗೆ ಕೊಳ್ಳೂರು ಕ್ರಾಸ್ ರಸ್ತೆ ಮೂಲಕ ಅದ್ರುಪರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು, ಮಂಗಳೂರುನಿಂದ ಉಜಿರೆ ಕಡೆಗೆ ಬರುವ ಎಲ್ಲಾ ವಾಹನಗಳನ್ನು ಗುರುವಾಯನಕೆರೆಯಲ್ಲಿ, ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಅದ್ರುಪೆರಾಲ್ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್ ಕ್ರಾಸ್‌ನಿಂದ ಕನ್ನಾಜೆ ಪಡ್ಲಾಡಿ ಲಾಯಿಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಿ ಆದೇಶಿಸಲಾಗಿದೆ.


ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ನ್ಯಾಯಾಂಗದ ಸುಪರ್ದಿಯಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಸೆ.3ರಂದು ಬೆಳಿಗ್ಗೆ 9ರಿಂದ ಸಂಜೆ 3ರ ತನಕ ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನಾ ಸಭೆಯನ್ನು ಬೆಳ್ತ೦ಗಡಿ ತಾಲೂಕು ಆಡಳಿತ ಸೌಧದ ಎದುರು ನಡೆಸಲು ಉದ್ದೇಶಿಸಿರುತ್ತಾರೆ.ಸದ್ರಿ ಸಭೆಗೆ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್, ಗಿರೀಶ್ ಮಟ್ಟಣ್ಣವರ, ಸಾಮಾಜಿಕ ಹೋರಾಟಗಾರರು, ಶ್ರೀಮತಿ ಪ್ರಸನ್ನ ರವಿ, ಸಾಮಾಜಿಕ ಹೋರಾಟಗಾರ್ತಿ, ಶ್ರೀಮತಿ ಗೀತಾ, ಮಾನವ ಹಕ್ಕು ಆಯೋಗದ ಕಾರ್ಯದರ್ಶಿ ಹಾಗೂ ಒಡನಾಡಿ ಸಂಸ್ಥೆಯ ಮುಖ್ಯಸ್ಥರು, ರಾಜ್ಯ ಒಕ್ಕಲಿಗ ಸಂಘದ ಮುಖ್ಯಸ್ಥರು ಮುಂತಾದವರು ಭಾಗವಹಿಸಲಿದ್ದು, ಅತ್ಯಧಿಕ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರದಲ್ಲಿ ಬದಲಾವಣೆ ಕೋರಿ ಬೆಳ್ತಂಗಡಿ ತಹಸಿಲ್ದಾರ್ ಜಿಲ್ಲಾಧಿಕಾರಿಯವರಿಗೆ - ಪ್ರಸ್ತಾವನೆ ಸಲ್ಲಿಸಿದ್ದರು.

ಅರಂತೋಡು : ತಡರಾತ್ರಿ ಭೀಕರ ಕಾರು ಅಪಘಾತ - ಓರ್ವನಿಗೆ ಗಂಭೀರ ಗಾಯ

Posted by Vidyamaana on 2024-06-23 11:03:07 |

Share: | | | | |


ಅರಂತೋಡು : ತಡರಾತ್ರಿ ಭೀಕರ ಕಾರು ಅಪಘಾತ - ಓರ್ವನಿಗೆ ಗಂಭೀರ ಗಾಯ

ಅರಂತೋಡು: ಭೀಕರ ಕಾರು ಅಪಘಾತ ಸಂಭವಿಸಿ, ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸಂಪಾಜೆಯ ಬಳಿ ಕಳೆದ ತಡರಾತ್ರಿ ನಡೆದಿದೆ ಎಂದು ಮಾಹಿತಿ ಲಭಿಸಿದೆ.

ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರಕ್ಕೆ ಹೋಗಿ ತಮ್ಮ ಕೆಲಸ ಮುಗಿಸಿ ವಾಪಸ್‌ ಮಂಡ್ಯಕ್ಕೆ ಹೊರಟಿದ್ದರು.

ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ನೆನಪಿಸಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2024-01-20 08:41:58 |

Share: | | | | |


ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಬಗ್ಗೆ ನೆನಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೋಯಿಂಗ್ ನೂತನ ಕ್ಯಾಂಪಸ್ ಉದ್ಘಾಟನೆಗೆ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಬರ ವಿಚಾರ ನೆನಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.ರಾಜ್ಯದಲ್ಲಿ ಈ ವರ್ಷ ತೀವ್ರ ಬರ ಪರಿಸ್ಥಿತಿ ಇದ್ದು, ರೈತರಿಗೆ ಪರಿಹಾರ ನೀಡಲು ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.ಆದಷ್ಟು ಬೇಗನೆ ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ವೇದಿಕೆ ಕಾರ್ಯಕ್ರಮದ ವೇಳೆ ಸಿಎಂ ಮನವಿ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ ಅವರು, ಮನವಿ ನೀಡಿರುವುದು ನನ್ನ ಗಮನದಲ್ಲಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಗ್ಯಾರಂಟಿ ಅನುಷ್ಠಾನಕ್ಕೆ ಪ್ರಗತಿ ಮೊಬೈಲ್ ಅಪ್ಲಿಕೇಶನ್ ಬಿಡುಗಡೆಗೊಳಿಸಿದ ಸಿಎಂ

Posted by Vidyamaana on 2024-02-01 09:36:03 |

Share: | | | | |


ಗ್ಯಾರಂಟಿ ಅನುಷ್ಠಾನಕ್ಕೆ ಪ್ರಗತಿ ಮೊಬೈಲ್ ಅಪ್ಲಿಕೇಶನ್ ಬಿಡುಗಡೆಗೊಳಿಸಿದ ಸಿಎಂ

ಬೆಂಗಳೂರು :ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಇದೇ ಸಮಯ ಸ್ಪಷ್ಟ ಪಡಿಸಿದ್ದಾರೆ.


ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ‌ ಮಾಡಲಿದೆ. ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡಲಿದೆ.


ಬಡವರ ಪರವಾದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ ಎಂದು ಸಿಎಂ ಇದೇ ಸಮಯ ಹೇಳಿದ್ದಾರೆ.

ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಉಚಿತ ವೈದ್ಯಕೀಯ ಶಿಬಿರ

Posted by Vidyamaana on 2024-04-13 07:49:36 |

Share: | | | | |


ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಉಚಿತ ವೈದ್ಯಕೀಯ ಶಿಬಿರ

ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿಯ ನೇತೃತ್ವದಲ್ಲಿ ನಡೆಯುವ ಉಚಿತ ವೈದ್ಯಕೀಯ ಶಿಬಿರ ೨೫ನೇ ಶಿಬಿರವು ಎ.೭ರಂದು ದೇವಸ್ಥಾನದಲ್ಲಿ ನಡೆಯಿತು.

ಶಿಬಿರವನ್ನು ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದ ಪುತ್ತೂರಾಯ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಆರೋಗ್ಯ ರಕ್ಷಾ ಸಮಿತಿ ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ವೈದ್ಯಕೀಯ ಶಿಬಿರವನ್ನು ಅಧಿಕಾರಕ್ಕಾಗಿ ಮಾಡಿಲ್ಲ.

ಮಣಿಪುರ -ಜೈಪುರ ಸಹಿತ ಹಲವೆಡೆ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ

Posted by Vidyamaana on 2023-07-21 03:52:22 |

Share: | | | | |


ಮಣಿಪುರ -ಜೈಪುರ  ಸಹಿತ ಹಲವೆಡೆ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ

ಜೈಪುರ: ಶುಕ್ರವಾರ ಮುಂಜಾನೆ ರಾಜಸ್ಥಾನದ ಜೈಪುರದ ಮೂರು ಭಾಗಗಳಲ್ಲಿ ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಮೂರು ಕಂಪನಗಳು ಕೇವಲ 30 ನಿಮಿಷಗಳ ಅವಧಿಯಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ.

ಶುಕ್ರವಾರ ನಸುಕಿನ ಜಾವಾ 4 ಗಂಟೆಯಿಂದ 4;30 ನಿಮಿಷಗಳ ಅವಧಿಯಲ್ಲಿ ಮೂರು ಕಂಪನಗಳು ಸಂಭವಿಸಿದೆ ಎಂದು ಹೇಳಲಾಗಿದೆ ಅದರಲ್ಲಿ 4.09ರ ಸುಮಾರಿಗೆ 4.4ರ ತೀವ್ರತೆ ಹೊಂದಿದ್ದರೆ, 4.22ರ ಸುಮಾರಿಗೆ 3.1 ರ ತೀವ್ರತೆ ಹಾಗೂ 4.25 ರ ಸುಮಾರಿಗೆ 3.4ರ ತೀವ್ರತೆಯ ಭೂಕಂಪನದ ಅನುಭವಾಗಿದೆ ಎಂದು ಹೇಳಲಾಗಿದೆ.


ಕಂಪನದ ಅನುಭವವಾಗುತ್ತಿದ್ದಂತೆ ಜನ ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗಿದೆ, ಭೂಕಂಪನದಿಂದ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.


ಮಣಿಪುರದಲ್ಲೂ 3.5 ತೀವ್ರತೆಯ ಕಂಪನ:

ಶುಕ್ರವಾರ ಮುಂಜಾನೆ ಸುಮಾರು 5.01ಕ್ಕೆ ಮಣಿಪುರದ ಉಖ್ರುಲ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪವು 20 ಕಿಲೋಮೀಟರ್ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



Leave a Comment: