ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಸುದ್ದಿಗಳು News

Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23

Share: | | | | |


ನೆಟ್ಟೇ ಕಮ್ಮಿ ಆಪುಂಡು ನನ ಬರೋಡ್ಚಿ.. ಎಂದು ಹೇಳಿ ಮದ್ದು ಕೊಡ್ತಿದ್ದ ನರಸಿಂಹ ಭಟ್ ರಿಟೈರ್ಡ್

ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”

ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.

ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.

ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.

ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!

ಡಾ. ಶಿವರಾಮ ಭಟ್ ಗುರು:

ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ‌. ಶಿವರಾಮ ಭಟ್ ಎಂದು ನಂಬಿದ್ದರು.

ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!

ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.

 Share: | | | | |


ಸುಳ್ಯ : ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿ ಬೆಳ್ಳಾರೆ ಮೂಲದ ಲೀಲಾವತಿ ಮೃತ್ಯು

Posted by Vidyamaana on 2023-10-03 15:58:48 |

Share: | | | | |


ಸುಳ್ಯ : ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿ ಬೆಳ್ಳಾರೆ ಮೂಲದ ಲೀಲಾವತಿ ಮೃತ್ಯು

ಸುಳ್ಯ: ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಪರಿಣಾಮ ಮಹಿಳೆಯೋರ್ವಳು ಮೃತಪಟ್ಟ ಘಟನೆ ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ನಡೆದಿದೆ.

ಲೀಲಾವತಿ (35) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!

ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು , ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಲೀಲಾವತಿ ಹಾಗೂ ಅವರ ತಂದೆ ಸೇವನೆ ಮಾಡಿದ್ದರು.



ಇದರ ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಅವರಲ್ಲಿ ಲೀಲಾವತಿಯವರಿಗೆ ವಾಂತಿ, ಭೇದಿ ಆರ೦ಭವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಸೌಖ್ಯ ತೀವ್ರಗೊ೦ಡು ಅ. 2ರ೦ದು ಹೆಚ್ಚಿನ ಚಿಕಿತ್ಸೆಗಾಗಿ ಮ೦ಗಳೂರಿಗೆ ಕೊ೦ಡೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ

ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ

Posted by Vidyamaana on 2024-05-29 05:52:26 |

Share: | | | | |


ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ

ಉಡುಪಿ, ಮೇ 28: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಪಟ್ಟು ಸಡಿಲಿಸದೇ ಸುಪ್ರೀಂ ಕೋರ್ಟ್ ವರೆಗೂ ಹೋಗಿದ್ದ ಉಡುಪಿಯ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ, ಟ್ವಿಟರ್ ನಲ್ಲಿ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಪ್ರಶ್ನೆ ಮಾಡಿ ಅಣಕಿಸಿದ್ದಾರೆ.‌ 

ಟ್ವಿಟ್ಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಆಲಿಯಾ ಅಸ್ಸಾದಿ, ಅಂದು ಹಿಜಾಬ್‌ ಕಾರಣಕ್ಕಾಗಿ ನನ್ನನ್ನು ಕಾಲೇಜಿನಿಂದ ಹೊರದಬ್ಬಿದ್ರಿ. ಆ ಕಾರಣಕ್ಕಾಗಿ ನೀವು ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದ್ದೀರಿ. ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವುದನ್ನು ನೋಡುತ್ತಿದ್ದೇನೆ. ಅಂದು ನಾನು ಉಚ್ಚಾಟಿತ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ ಎಂದು ಮಾಜಿ ಶಾಸಕ ರಘುಪತಿ ಭಟ್ ಅವರ ಕಾಲೆಳೆಯುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

ಸ್ನಾನಕ್ಕೆ ಹೋದಾಗ ಗ್ಯಾಸ್‌ ಗೀಸರ್‌ ಲೀಕ್‌; ಗರ್ಭಿಣಿ ಸಾವು, ಮಗು ಗಂಭೀರ

Posted by Vidyamaana on 2023-12-23 19:33:10 |

Share: | | | | |


ಸ್ನಾನಕ್ಕೆ ಹೋದಾಗ ಗ್ಯಾಸ್‌ ಗೀಸರ್‌ ಲೀಕ್‌; ಗರ್ಭಿಣಿ ಸಾವು, ಮಗು ಗಂಭೀರ

ಬೆಂಗಳೂರು: ಮಗು ಜತೆಗೆ ಸ್ನಾನಕ್ಕೆ ಹೋದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲೇ ಗರ್ಭಿಣಿಯೊಬ್ಬರು (Bangalore News) ಮೃತಪಟ್ಟಿದ್ದಾರೆ. ರಮ್ಯ (23) ಮೃತ ದುರ್ದೈವಿ.


ಬೆಂಗಳೂರಿನ ಅಶ್ವತ್ ನಗರದಲ್ಲಿ ಈ ದುರ್ಘಟನೆ ನಡೆದಿದೆ.ರಮ್ಯ ತಮ್ಮ ನಾಲ್ಕು ವರ್ಷದ ಮಗುವಿನೊಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಈ ವೇಳೆ ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿದೆ. ಆದರೆ ಇದು ತಿಳಿಯದೆ ಸ್ನಾನ ಮಾಡಲು ಬಾತ್‌ ರೂಮ್‌ಗೆ ಹೋಗಿದ್ದಾರೆ. ಗೀಸರ್‌ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.ಕೂಡಲೇ ಕುಟುಂಬಸ್ಥರು ರಮ್ಯಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗರ್ಭಿಣಿಯಾಗಿದ್ದ ರಮ್ಯರ ಮಗುವೂ ಪ್ರಪಂಚ ನೋಡುವ ಮುನ್ನವೇ ಗರ್ಭದಲ್ಲೇ ಮೃತಪಟ್ಟಿದೆ. ಇತ್ತ ರಮ್ಯರ ನಾಲ್ಕು ವರ್ಷದ ಮಗುವಿಗೂ ಚಿಕಿತ್ಸೆ ಮುಂದುವರಿದಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದೆ.


ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


ಸ್ನಾನಕ್ಕೆ ಜೋಡಿಯಾಗಿ ಹೋಗಿದ್ದ ಯುವಕ- ಯುವತಿ ಬಾತ್‌ರೂಮ್‌ನಲ್ಲಿ ಸಾವು


ಕಳೆದ ಜೂನ್‌ನಲ್ಲೂ ಇದೇ ರೀತಿ ಗ್ಯಾಸ್‌ ಗೀಸರ್‌ ಲೀಕ್‌ ಇಬ್ಬರು ಮೃತಪಟ್ಟಿದ್ದರು. ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣ ಅಂತ್ಯ ಕಂಡಿತ್ತು. ಸ್ನಾನಕ್ಕೆ ಜೋಡಿಯಾಗಿ ಹೋದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲಿ ಮೃತ್ಯು (Bangalore News) ಆಗಿದ್ದರು. ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್, ಗೋಕಾಕ್ ತಾಲೂಕಿನ ಸುಧಾರಾಣಿ ಮೃತ ದುರ್ದೈವಿಗಳು.


ಬೆಂಗಳೂರು: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿಯೊಂದು ದಾರುಣ ಅಂತ್ಯ ಕಂಡಿದೆ. ಸ್ನಾನಕ್ಕೆ ಜೋಡಿಯಾಗಿ ಹೋಗಿದ್ದಾಗ ಗೀಸರ್‌ ಲೀಕ್‌ ಆಗಿ (gas geyser leaks) ಪ್ರಜ್ಞೆ ತಪ್ಪಿ ಬಾತ್‌ರೂಮ್‌ನಲ್ಲಿ ಮೃತ್ಯು (Bangalore News) ಆಗಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್, ಗೋಕಾಕ್ ತಾಲೂಕಿನ ಸುಧಾರಾಣಿ ಮೃತ ದುರ್ದೈವಿಗಳು.ಗ್ಯಾಸ್‌ ಗೀಸರ್‌ ಸೋರಿಕೆ

ಕಳೆದ ಜೂನ್‌ 10ರಂದು ಚಿಕ್ಕಜಾಲದ ತರಬನಹಳ್ಳಿ ಬಳಿ ಈ ದುರ್ಘಟನೆ ನಡೆದಿತ್ತು. ಈ ಜೋಡಿ ರಾತ್ರಿ 9 ಗಂಟೆ ಸುಮಾರಿಗೆ ಸ್ನಾನಕ್ಕೆಂದು ಗ್ಯಾಸ್ ಗೀಸರ್‌ ಆನ್ ಮಾಡಿತ್ತು. ಈ ವೇಳೆ ಗ್ಯಾಸ್ ಗೀಸರ್‌ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿತ್ತು. ಆದರೆ ಇದ್ಯಾವುದರ ಅರಿವು ಇವರೇ ಒಟ್ಟಿಗೆ ಸ್ನಾನ ಮಾಡಲು ಬಾತ್‌ ರೂಮ್‌ಗೆ ಹೋಗಿದ್ದರು. ಗೀಸರ್‌ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಇಬ್ಬರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದರು.


ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕರು ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿತ್ತು. ಬಳಿಕ ಪೊಲೀಸರಿಗೆ ವಿಷಯ ತಿಳಿಸಿದ್ದು, ಬಾಗಿಲು ಮುರಿದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದರು.

ಪುತ್ತೂರಿನ ಗಡಿಗ್ರಾಮಗಳಲ್ಲಿ ಬೇಟೆಗಾರನಿಗೆ ಬಲಿಯಾಗುತ್ತಿರುವ ಕಾಟಿಗಳು

Posted by Vidyamaana on 2023-09-29 12:00:28 |

Share: | | | | |


ಪುತ್ತೂರಿನ ಗಡಿಗ್ರಾಮಗಳಲ್ಲಿ ಬೇಟೆಗಾರನಿಗೆ ಬಲಿಯಾಗುತ್ತಿರುವ ಕಾಟಿಗಳು

ಪುತ್ತೂರು: ಕಾಡು ನಾಶವಾಗುತ್ತಿದ್ದಂತೆಯೇ ಆಹಾರ ಹರಿಸಿ ಕಾಡುಪ್ರಾಣಿಗಳು ನಾಡಿಗೆ ಬರುವುದು ಮತ್ತು ನಾಡಿಗೆ ಬಂದು ಕೃಷಿಗಳನ್ನು ನಾಶ ಮಾಡುವುದು ಪುತ್ತೂರು ತಾಲೂಕಿನ ಗಡಿಗ್ರಾಮಗಳಲ್ಲಿ ನಿತ್ಯದ ಪರಿಪಾಠವಾಗಿದೆ. ಕಾಡಿನಲ್ಲಿ ಆಹಾರದ ಕೊರತೆಯುಂಟಾದಾಗ ಮಾತ್ರ ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡುತ್ತವೆ, ಆಹಾರ ಕೊರತೆಯಾಗಲು ಕಾಡುಗಳ ನಾಶವೂ ಕಾರಣವಾಗಿದೆ. ಕಾಡುಗಳ ರಕ್ಷಣೆಗೆ ಮತ್ತು ಕಾಡುಪ್ರಾಣಿಗಳ ರಕ್ಷಣೆಗೆ ಅರಣ್ಯ ಇಲಾಖೆ ಅದೆಷ್ಟೋ ಅಧಿಕಾರಿಗಳನ್ನು ಇರಿಸಿಕೊಂಡಿದೆ, ಆದರೆ ಕಾಡು ನಾಶವಾಗುತ್ತಲೇ ಇದೆ ಕಾಡುಪ್ರಾಣಿಗಳು ನಾಡಿಗೆ ಬರುತ್ತಲೇ ಇದೆ. ಇಲ್ಲಿ ವಿಶೇಷವೇನೆಂದರೆ ನಾಡಿಗೆ ಬಂದ ಕಾಡುಪ್ರಾಣಿಗಳು ಮರಳಿ ಕಾಡು ಸೇರುವುದೇ ಇಲ್ಲ ಅವು ಮಾನವ ಹೊಟ್ಟೆ ಪಾಲಾಗುತ್ತಿದೆ ಎಂಬ ಆತಂಕದ ವಿಚಾರ ಬೆಳಕಿಗೆ ಬಂದಿದೆ.

ಪುತ್ತೂರು ತಾಲೂಕಿನ ಕೇರಳ ಗಡಿಗ್ರಾಮಗಳಲ್ಲಿ ಇಂಥಹದೊಂದು ಅಮಾನವೀಯ ಕೃತ್ಯಗಳು ನಿತ್ಯವೂ ನಡೆಯುತ್ತಿದೆ. ನೆಟ್ಟಣಿಗೆ ಮುಡ್ನೂರು, ಪಾಣಾಜೆ, ಜಾಲ್ಸೂರು ಗಡಿಗ್ರಾಮಗಳಲ್ಲಿ ಕಾಡಾಣೆಗಳ ಹಾವಳಿ ಇಲ್ಲ. ಈ ಭಾಗದಲ್ಲಿ ಕಾಡುಕೋಣಗಳ ಹಾವಳಿ ಇದೆ. ಕಾಡುಕೋಣಗಳು ಗುಂಪುಗುಂಪಾಗಿ ರಾತ್ರಿ ವೇಳೆ ಕೆಲವೊಮ್ಮೆ ಹಗಲು ವೇಳೆಯೇ ನಾಡಿಗೆ ಬಂದು ಕೃಷಿಗಳನ್ನು ತಿಂದು ಹಾಕುತ್ತಿದೆ. ಈ ವಿಚಾರವನ್ನು ಗ್ರಾಮಸಭೆಗಳಲ್ಲಿ ಗ್ರಾಮಸ್ಥರು ಹೇಳುತ್ತಲೇ ಇದ್ದಾರೆ. ಮೇಲಧಿಕಾರಿಗಳ ಗಮನಕ್ಕೆ ತಂದರೆ ವ್ಯವಸ್ಥೆ ಮಾಡುವ ಎಂದು ತಲೆ ಆಡಿಸುತ್ತಲೇ ಕಾಲ ಕಳೆಯುತ್ತಿದ್ದಾರೆ. ಕಾಡು ಕೋಣಗಳು ನಾಡಿಗೆ ಬರದಂತೆ ತಡೆಗಟ್ಟುವುದು ಬಿಡಿ ಆ ಗ್ರಾಮಗಳಿಗೆ ತೆರಳಿ ಪರಿಶೀಲನೆ ಮಾಡಲು ಅರಣ್ಯ ಇಲಾಖೆಯ ಮೇಲಧಿಕಾರಿಗಳಿಗೆ ಸಮಯ ಕೂಡಿ ಬರುತ್ತಿಲ್ಲ ಎಂಬ ಆರೋಪ ಗ್ರಾಮಸ್ಥರದ್ದು.


ಕಾಡುಕೋಣ ಕೊಂದು ತಿನ್ನುತ್ತಾರೆ

ರಾತ್ರಿ ವೇಳೆ ಕೆಲವೊಂದು ಆಯಕಟ್ಟಿನ ಸ್ಥಳಗಳಿಂದಲೇ ಕಾಡುಕೋಣಗಳು ಬರುತ್ತದೆ ಎಂಬ ಮಾಹಿತಿ ತಿಳಿದುಕೊಳ್ಳುವ ಬೇಟೆಗಾರರು ರಾತ್ರಿ ವೇಳೆ ಅವುಗಳನ್ನು ಗುಂಡು ಹೊಡೆದು ಸಾಯಿಸುತ್ತಾರೆ. ಕಾಡು ಕೋಣಗಳ ಬರುತ್ತವೆ , ದಾಳಿ ಮಾಡುತ್ತದೆ ಎಂಬ ಕಾರಣಕ್ಕೆ ಸಂಜೆಯಾಗುತ್ತಲೇ ಗ್ರಾಮಸ್ಥರು ಮನೆ ಸೇರುವ ಕಾರಣ ಬೇಟೆಗಾರರಿಗೆ ಅವುಗಳನ್ನು ಹಿಡಿದು ಕೊಲ್ಲಲು ಸುಲಭವಾಗುತ್ತಿದೆ. ಯಾರ ಕಣ್ಣಿಗೂ ಬೀಳದ ರೀತಿಯಲ್ಲಿ ಅವುಗಳನ್ನು ಕೊಲ್ಲುವ ಮತ್ತು ಆ ಬಳಿಕ ಮಾಂಸ ಮಾಡಿ ಕೇರಳಕ್ಕೆ ಸಾಗಿಸುವ ದಂಧೆ ನಿರಂತರವಾಗಿ ನಡೆಯುತ್ತಲೇ ಇದೆ. ಈಗಾಗಲೇ ನೂರಾರು ಕಾಡುಕೋಣಗಳನ್ನು ಭೇಟೆಗಾರರು ಕೊಂದು ಮುಗಿಸಿದ್ದಾರೆ ಎಂಬ ಆತಂಕದ ಮಾಹಿತಿಯನ್ನು ಗ್ರಾಮಸ್ಥರು ಹೊರ ಹಾಕಿದ್ದಾರೆ. ಕಾಡುಪ್ರಾಣಿಗಳನ್ನು ಸಂರಕ್ಷಣೆ ಮಾಡಬೇಕಾದ ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದೇ ಈ ಅನಾಹುತಕ್ಕೆ ಕಾರಣವಾಗಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಬೇಟೆಗಾರರ ಜೊತೆ ಕೆಲವೊಂದು ಮೇಲಧಿಕಾರಿಗಳಿಗೆ ನಿಟಕ ಕೃಪಾಕಟಾಕ್ಷ ಇರುವುದರಿಂದ ಇದೊಂದು ವ್ಯವಹಾರಿಕ ದಂಧೆಯಾಗಿ ಪರಿಣಮಿಸಿದ್ದು, ಮುಂದಿನ ಕೆಲವೇ ತಿಂಗಳಲ್ಲಿ ಕಾಡುಕೋಣಗಳೇ ನಾಶವಾದರೂ ಅಚ್ಚರಿಯಿಲ್ಲ. ಈ ಪರಿಸ್ಥಿತಿ ತಲೆದೋರುವ ಮುನ್ನ ಜಿಲ್ಲಾಮಟ್ಟದ ಅರಣ್ಯಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಾಗಿದೆ ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ತುರ್ತು ಕ್ರಮ: ಡಿಸಿಎಫ್

ಈ ವಿಚಾರದಲ್ಲಿ ಯಾರೂ ನನ್ನ ಗಮನಕ್ಕೆ ತಂದಿಲ್ಲ. ಕಾಡುಕೋಣಗಳು ಸೇರಿದಂತೆ ಕಾಡುಪ್ರಾಣಿಗಳನ್ನು ಭೇಟೆಯಾಡುವುದು ಅಕ್ಷಮ್ಯ ಅಪರಾಧವಾಗಿದೆ. ಪಾಣಭಾಜೆ, ಜಾಲ್ಸೂರು ಹಾಗೂ ಕರ್ನೂರು ಗಡಿಗ್ರಾಮದಲ್ಲಿ ವಿಶೇಷ ತಪಾಸಣೆ ಮಾಡುವಂತೆ ಕ್ರಮಕೈಗೊಳ್ಳುತ್ತೇನೆ. ಸಾರ್ವಜನಿಕರು ಇಂಥಹ ಕೃತ್ಯಗಳು ಕಂಡು ಬಂದಲ್ಲ ನೇರವಾಗಿ ನನಗೆ ಕರೆ ಮಾಡಿ ತಿಳಿಸಬಹುದು.


ಆಂಟ್ಯನಿ ಮರಯಪ್ಪನ್, ಡಿಸಿಎಫ್ ಮಂಗಳೂರು

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಸಾವಿಗೆ ಶರಣು

Posted by Vidyamaana on 2023-08-17 05:46:19 |

Share: | | | | |


ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಸಾವಿಗೆ ಶರಣು

ಮಂಗಳೂರು: ಮಗನ ಸಾವಿನಿಂದ ಮನನೊಂದು ಸಮುದ್ರಕ್ಕೆ ಹಾರಿ ಮೃತಪಟ್ಟ ಕಾಸರಗೋಡು ಜಿಲ್ಲೆಯ ಕುಂಬಳೆ ಬಂಬ್ರಾಣ ನಿವಾಸಿಯ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇವರ ಸಾವಿಗೆ ಪತ್ನಿಯ ಅನೈತಿಕ ಸಂಬಂಧ ಪ್ರಕರಣವೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಈ ಬಗ್ಗೆ ಮೃತ ಲೋಕೇಶ್ ಕಾಸರಗೋಡು ಎಸ್ಪಿ ಕಚೇರಿಗೆ ದೂರು ನೀಡಿರುವುದು ಮತ್ತು ಇವರ ಅಣ್ಣ ಸುಧಾಕರ ಉಳ್ಳಾಲ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.  


ಕುಂಬಳೆಯ ಬಂಬ್ರಾಣ ನಿವಾಸಿಯಾಗಿದ್ದ ಲೋಕೇಶ್ ತನ್ನ ಪತ್ನಿ ಪ್ರಭಾವತಿ ಮತ್ತು ಆಕೆಯ ಪ್ರಿಯಕರ ಎನ್ನಲಾದ ಸಂದೀಪ್ ಆರಿಕ್ಕಾಡಿ ಎಂಬಾತನ ವಿರುದ್ಧ ಕಾಸರಗೋಡು ಎಸ್ಪಿ ಕಚೇರಿಗೆ ಆಗಸ್ಟ್ 11ರಂದು ದೂರು ನೀಡಿದ್ದಾರೆ. ತನ್ನ ಮಗ ರಾಜೇಶ್ ಸಾವಿಗೆ ಇವರ ಅಕ್ರಮ ಸಂಬಂಧ ಮತ್ತು ಅದರ ವಿಚಾರದಲ್ಲಿ ನಡೆದಿದ್ದ ಗಲಾಟೆಯೇ ಕಾರಣ. ತಾಯಿ ಜೊತೆಗೆ ಸಂದೀಪ್ ಅಕ್ರಮ ಸಂಬಂಧ ಹೊಂದಿರುವುದನ್ನು ರಾಜೇಶ್ ಆಕ್ಷೇಪಿಸಿದ್ದು, ಅದಕ್ಕೆ ಪ್ರತಿಯಾಗಿ ಸಂದೀಪ್ ಬೆದರಿಕೆ ಹಾಕಿದ್ದ. ಇದರಿಂದ ನೊಂದು ರಾಜೇಶ್ ಉಳ್ಳಾಲಕ್ಕೆ ಬಂದು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೈದಿದ್ದ. ಈ ಬಗ್ಗೆ ಪ್ರಭಾವತಿ ಮತ್ತು ಆಕೆಯ ತಂಗಿ ಬೇಬಿ ಹಾಗೂ ಪ್ರಿಯಕರ ಸಂದೀಪ್ ಆರಿಕ್ಕಾಡಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಲೋಕೇಶ್ ಕಾಸರಗೋಡು ಎಸ್ಪಿ ಕಚೇರಿಗೆ ನೀಡಿದ್ದ ದೂರಿನಲ್ಲಿ ಒತ್ತಾಯಿಸಿದ್ದರು.


ಜುಲೈ 10ರಂದು ಲೋಕೇಶ್(51) ಅವರ ಮಗ ರಾಜೇಶ್(26) ಉಳ್ಳಾಲ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಶವದ ಮರಣೋತ್ತರ ಪರೀಕ್ಷೆ, ಅಂತ್ಯಕ್ರಿಯೆ ಬಳಿಕ ಪ್ರಭಾವತಿ ಗಂಡನ ಮನೆ ತೊರೆದು ತನ್ನ ತಂಗಿಯ ಮನೆಯಲ್ಲಿ ಸೇರಿದ್ದರೆ, ಇತ್ತ ಲೋಕೇಶ್ ತನ್ನ ಸೋದರ ಸುಧಾಕರ್ ಅವರ ತೊಕ್ಕೊಟ್ಟಿನ ಮನೆಯಲ್ಲಿ ವಾಸ ಮಾಡಲಾರಂಭಿಸಿದ್ದರು. ತನ್ನ ಮಗನ ಸಾವಿನಿಂದ ತೀವ್ರ ನೊಂದುಕೊಂಡಿದ್ದ ಲೋಕೇಶ್, ತನ್ನ ಗೆಳೆಯರಿಗೆ ಪತ್ನಿಯ ಕಿರುಕುಳ, ಕೆಟ್ಟ ನಡತೆಯ ಬಗ್ಗೆ ಹೇಳಿಕೊಂಡಿದ್ದರು. ಮೊನ್ನೆ ಆಗಸ್ಟ್ 14ರಂದು ಇಷ್ಟೆಲ್ಲ ಆದಮೇಲೆ ಅಂತಹ ಪತ್ನಿಯೊಂದಿಗೆ ವಾಸ ಮಾಡಲು ಸಾಧ್ಯವಾಗದು. ಆಕೆಯ ಮುಖವನ್ನೂ ನೋಡುವುದಿಲ್ಲ. ನನ್ನ ಮೃತದೇಹ ಸೋಮೇಶ್ವರ ಸಮುದ್ರದಲ್ಲಿ ಸಿಗಬಹುದು ಎಂದು ತನ್ನ ಗೆಳೆಯರಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದು ಫೋನನ್ನು ಸೋದರನ ತೊಕ್ಕೊಟ್ಟಿನ ಮನೆಯಲ್ಲಿಟ್ಟು ತೆರಳಿದ್ದರು. ವಾಯ್ಸ್ ಕೇಳಿದ ಗೆಳೆಯರು ಕೂಡಲೇ ಫೋನ್ ಮಾಡಿದ್ದು, ಫೋನನ್ನು ಮನೆಯಲ್ಲಿ ಬಿಟ್ಟು ಲೋಕೇಶ್ ತೆರಳಿರುವುದು ಗೊತ್ತಾಗಿತ್ತು.


ಇತ್ತ ಗೆಳೆಯರು ಮತ್ತು ಸೋದರ ಉಳ್ಳಾಲದಲ್ಲಿ ಹುಡುಕಾಡುತ್ತಿದ್ದಂತೆ, ಅದೇ ದಿನವೇ ಲೋಕೇಶ್ ಮೃತದೇಹ ಉಳ್ಳಾಲ ಸಮುದ್ರದಲ್ಲಿ ಪತ್ತೆಯಾಗಿತ್ತು. ಮೃತರ ಸೋದರ ಸುಧಾಕರ ಮತ್ತು ಲೋಕೇಶ್ ಅವರ ಇನ್ನೊಬ್ಬ ಮಗ ಶುಭಂ ತಂದೆಯದ್ದೇ ಶವ ಎಂದು ಗುರುತಿಸಿದ್ದಾರೆ. ಸುಧಾಕರ ಅವರು ಉಳ್ಳಾಲ ಠಾಣೆಗೆ ನೀಡಿರುವ ದೂರಿನಲ್ಲಿ ಪ್ರಭಾವತಿ, ಸಂದೀಪ್ ಆರಿಕ್ಕಾಡಿ, ಶುಭಂ, ಬೇಬಿ ಎಂಬವರ ಹೆಸರನ್ನು ಉಲ್ಲೇಖಿಸಿದ್ದು ಇವರ ಚಿತಾವಣೆಯಿಂದಲೇ ನನ್ನ ತಮ್ಮ ಲೋಕೇಶ್ ಸಾವಿಗೆ ಶರಣಾಗಿದ್ದಾರೆಂದು ತಿಳಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದೆ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಉದ್ಯಮಿಗೆ ನಂಬಿಸಲು ಸಾಲುಮರದ ತಿಮ್ಮಕ್ಕನ ಸರ್ಕಾರಿ ಕಾರು ದುರ್ಬಳಕೆ

Posted by Vidyamaana on 2023-09-17 16:45:52 |

Share: | | | | |


ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಉದ್ಯಮಿಗೆ ನಂಬಿಸಲು ಸಾಲುಮರದ ತಿಮ್ಮಕ್ಕನ ಸರ್ಕಾರಿ ಕಾರು ದುರ್ಬಳಕೆ

ಬೆಂಗಳೂರು, (ಸೆಪ್ಟೆಂಬರ್ 17): ಚೈತ್ರಾ ಕುಂದಾಪುರ(Chaitra Kundapura) ಹಿಂದೂ ಫೈರ್ ಬ್ರ್ಯಾಂಡ್. ರಾಜ್ಯದ ಉದ್ದಗಲಕ್ಕೂ ಪ್ರಚೋದನಾಕಾರಿ ಭಾಷಣ ಬಿಗಿಯುತ್ತಿದ್ದಾ ಚೈತ್ರಾ ಕುಂದಾಪುರ ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸುತ್ತೇನೆ ಎಂದು ಗೋವಿಂದ್‌ ಬಾಬು ಎನ್ನುವರಿಗೆ ಕೋಟ್ಯಂತರ ರೂಪಾಯಿ ನಾಮ ಹಾಕಿದ್ದು, ಇದೇ ವಂಚನೆ ಕೇಸ್​ನಲ್ಲಿ ಈಗ ಕಂಬಿ ಹಿಂದೆ ಬಿದ್ದಿದ್ದಾಳೆ. ಸದ್ಯ ಸಿಸಿಬಿ ವಶದಲ್ಲಿರುವ ಚೈತ್ರಾ, ಗೋವಿಂದ್‌ ಬಾಬು ಅವರ ಹಣ ದೋಚಲು ಆರ್​ಎಸ್​ಎಸ್​, ಬಿಜೆಪಿ ಚುನಾವಣಾ ಮುಖ್ಯಸ್ಥರ ವೇಷ ಹಾಕಿಸಿ ಯಾಮಾರಿಸಿದ್ದಾರೆ. ಇದೀಗ ಇದೇ ಪ್ರಕರಣದಲ್ಲಿ ಚೈತ್ರಾ, ಗಗನ್ ಗ್ಯಾಂಗ್​ ಸಾಲುಮರದ ತಿಮ್ಮಕ್ಕಗೆ ನೀಡಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಸ್ಫೋಟಕ ಅಂಶ ಬಯಲಿಗೆ ಬಂದಿದೆ.ಹೌದು… ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಾಲುಮರದ ತಿಮ್ಮಕ್ಕಗೆ ಸರ್ಕಾರ ನೀಡಿರುವ ಸರ್ಕಾರಿ ಕಾರು, ಸರ್ಕಾರಿ ಸೌಲಭ್ಯಗಳನ್ನು ಚೈತ್ರಾ, ಗಗನ್ ಗ್ಯಾಂಗ್ ದುರ್ಬಳಕೆ ಮಾಡಿಕೊಂಡಿದೆ ಎನ್ನಲಾಗಿದೆ. ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ಬಳಸಿದ್ದ ಸರ್ಕಾರಿ ಕಾರು ಸಾಲುಮರದ ತಿಮ್ಮಕ್ಕನಿಗೆ ನೀಡಿದ್ದ ಸರ್ಕಾರಿ ಕಾರು ಎಂದು ತಿಳಿದುಬಂದಿದೆ.ಕುಮಾರ ಕೃಪ ಗೆಸ್ಟ್ ಹೌಸ್ ನಲ್ಲಿ ರೂಮ್ , ವಿಧಾನಸೌಧಕ್ಕೆ ಪ್ರವೇಶಿಸಲು ನಕಲಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಚನ್ನಾನಾಯ್ಕ್ ತಿಮ್ಮಕ್ಕ ಅವರಿಗೆ ನೀಡಿದ್ದ ಸರ್ಕಾರಿ ಕಾರು ಎನ್ನುವುದು ಗೊತ್ತಾಗಿದೆ. ಗೋವಿಂದ ಬಾಬು ಪೂಜಾರಿಯನ್ನ ನಂಬಿಸಲು ಸರ್ಕಾರಿ ಕಾರು ಬಳಕೆ ಮಾಡಿದ್ದಾರೆ ಎಂದು ಎನ್ನಲಾಗಿದೆ.


ಆರೋಪಿ ಗಗನ್ ಕಡೂರು, ಸಾಲುಮರದ ತಿಮ್ಮಕ್ಕನ ಪುತ್ರ ಉಮೇಶ್ ಜೊತೆ ಆತ್ಮೀಯ. ಉಮೇಶ್, ಸಾಲುಮರದ ತಿಮ್ಮಕ್ಕನ ಜೊತೆ ಗಗನ್ ಕಡೂರು ಮದುವೆಗೆ ಬಂದಿದ್ದ. ಅಷ್ಟೊಂದು ಇಬ್ಬರ ಮಧ್ಯೆ ಆತ್ಮಯತೆ ಇದೆ. ಹೀಗಾಗಿ ಉಮೇಶ್ ಸ್ನೇಹ ಬಳಸಿ ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಸಂಪೂರ್ಣ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿರುವ ಶಂಕಿಸಲಾಗಿದೆ.


ವಿಧಾನಸೌಧದ ಸಾಲುಮರದ ತಿಮ್ಮಕ್ಕನಿಗೆ ನೀಡಿರುವ ಕೊಠಡಿಯ ನವೀಕರಣದ ಸಂಪೂರ್ಣ ಜವಾಬ್ದಾರಿಯನ್ನು ಗಗನ್ ಕಡೂರು ಹೊತ್ತುಕೊಂಡಿದ್ದಅಲ್ಲದೇ ಸಾಲುಮರದ ತಿಮ್ಮಕ್ಕ ಪುತ್ರ ಉಮೇಶ್​, ಗೃಹ ಸಚಿವ ಜಿ.ಪರಮೇಶ್ವರ್​ಗೆ ಆಪ್ತರಾಗಿದ್ದು, ಕಳೆದ ಚುನಾವಣೆಯಲ್ಲಿ ಅವರ ಪ್ರಚಾರ ಮಾಡಿದ್ದರು. ಗಗನ್ ಸಹ ಪರಮೇಶ್ವರ್ ಪರ ಚುನಾವಣಾ ಪ್ರಚಾರಕ್ಕೂ ಉಮೇಶ್ ಜೊತೆ ತೆರಳಿದ್ದ ಎನ್ನುವುದು ಗೊತ್ತಾಗಿದೆ



Leave a Comment: