ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ನೈಟಿ ಧರಿಸಿ ಕಳ್ಳತನಕ್ಕೆ ಬಂದ ವಿಚಿತ್ರ ಕಳ್ಳ ಸಿಸಿಟಿವಿಯಲ್ಲಿ ದೃಶ್ಯ ಸೆರೆ

Posted by Vidyamaana on 2024-02-21 16:39:35 |

Share: | | | | |


ನೈಟಿ ಧರಿಸಿ ಕಳ್ಳತನಕ್ಕೆ ಬಂದ ವಿಚಿತ್ರ ಕಳ್ಳ ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ (Bengaluru) ವಿಚಿತ್ರ ಕಳ್ಳನೊಬ್ಬ (Thief) ಪ್ರತ್ಯಕ್ಷವಾಗಿದ್ದಾನೆ. ರಾತ್ರಿ ಹೊತ್ತು ನೈಟಿ ಹಾಕ್ಕೊಂಡು ಅಪಾರ್ಟ್‌ಮೆಂಟ್‌ಗೆ (Apartment) ನುಗ್ಗಿ ಶೂ ಕಳ್ಳತನ ಮಾಡಿ ಪರಾರಿಯಾಗ್ತಿದ್ದಾನೆ

ನೈಟಿ ಧರಿಸಿ ಕಳ್ಳತನಕ್ಕೆ ಬಂದ ವಿಚಿತ್ರ ಕಳ್ಳ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ವಿಚಿತ್ರ ಕಳ್ಳನ ದೃಶ್ಯ ಸಿಸಿಟಿವಿಯಲ್ಲಿ (CCTV Visuals) ಸೆರೆಯಾಗಿದೆ.ಈ ಬಗ್ಗೆ ಅನಿಲ್ ಕುಮಾರ್ ಎಂಬುವವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕಳ್ಳನನ್ನ ಅದಷ್ಟು ಬೇಗ ಹಿಡಿಯಿರಿ ಎಂದು ಒತ್ತಾಯಿಸಿದ್ದಾರೆ.

ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

Posted by Vidyamaana on 2024-01-04 15:38:51 |

Share: | | | | |


ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನಂತರ ಮೃತ ದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನದಲ್ಲಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.


ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.ಕೊಲೆಯಾದ ಗಡೋಲಿಯನ್ನು ತನ್ನ ಮೋಹದ ಬಲೆಗೆ ಬೀಳಿಸಿಕೊಂಡಿದ್ದ ದಿವ್ಯಾ ಪಹುಜಾ ನಕಲಿ ಎನ್‌ಕೌಂಟರ್‌ಗೆ ಸಹಕರಿಸಿದ್ದರು ಎಂದು ಮುಂಬೈ ಪೊಲೀಸರು ತಮ್ಮ ವರದಿಯಲ್ಲಿ ಹೇಳಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅಭಿಜಿತ್, ಯುವತಿ ಮತ್ತು ಇನ್ನೊಬ್ಬ ವ್ಯಕ್ತಿ ಜನವರಿ 2 ರಂದು (ಮಂಗಳವಾರ) ಮುಂಜಾನೆ 4 ಗಂಟೆಗೆ ಹೋಟೆಲ್‌ಗೆ ಆಗಮಿಸಿ ಕೊಠಡಿಯೊಂದಕ್ಕೆ ಹೋಗುತ್ತಿರುವ ದೃಶ್ಯವನ್ನು ತೋರಿಸುತ್ತದೆ. ನಂತರ ರಾತ್ರಿ ಅಭಿಜಿತ್ ಮತ್ತು ಇತರರು ದಿವ್ಯಾಳ ದೇಹವನ್ನು ಎಳೆದುಕೊಂಡು ಹೋಗುವುದು ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರೈಲ್ವೆ ಸಿಬ್ಬಂದಿ ಕೊಲೆ ಮಾಡಿ ಪರಾರಿಯಾದವನ ರೇಖಾಚಿತ್ರ ಬಿಡುಗಡೆ

Posted by Vidyamaana on 2024-05-19 12:02:11 |

Share: | | | | |


ರೈಲ್ವೆ ಸಿಬ್ಬಂದಿ ಕೊಲೆ ಮಾಡಿ ಪರಾರಿಯಾದವನ ರೇಖಾಚಿತ್ರ ಬಿಡುಗಡೆ

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಚಾಕುವಿನಿಂದ ಇರಿದು ಒಬ್ಬ ಸಿಬ್ಬಂದಿಯನ್ನು ಕೊಲೆ ಮಾಡಿ, ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಪರಾರಿಯಾದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆಗೊಳಗಾದ ಸಿಬ್ಬಂದಿ ಆರೋಪಿಯನ್ನು ಗುರುತಿಸಿದ್ದು, ಆತನ ಮುಖದ ರೇಖಾಚಿತ್ರ ಕೂಡ ಸಿದ್ಧಪಡಿಸಲಾಗಿದೆ.

ಪುದುಚೇರಿ- ದಾದರ್ ಎಕ್ಸ್‌ಪ್ರೆಸ್‌ ರೈಲು ಗುರುವಾರ ಸಂಜೆ 4ರ ಸುಮಾರಿಗೆ ಖಾನಾಪುರ ತಾಲ್ಲೂಕಿನ ಲೋಂಡಾ ಬಳಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರೈಲು ಖಾನಾಪುರ ನಿಲ್ದಾಣಕ್ಕೆ ಬಂದಾಗ ಆರೋಪಿ ಪರಾರಿಯಾದ. ಎಸ್‌-8 ಬೋಗಿಯಿಂದ ಇಳಿದುಹೋಗಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಖಾನಾಪುರದಿಂದ ಎಲ್ಲಿಗೆ ಪರಾರಿಯಾಗಿದ್ದಾನೆ ಎಂಬುದರ ತನಿಖೆ ನಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಬಪ್ಪಳಿಗೆ: ಅನ್ಸಾರುಲ್ ಇಸ್ಲಾಂ ಯುವಕ ಸಮಿತಿಯಿಂದ ಯೌವ್ವನ ಒಳಿತಿಗಾಗಿ ಸದಸ್ಯತ್ವ ಅಭಿಯಾನ ಸಮಾರೋಪ

Posted by Vidyamaana on 2023-09-09 15:18:18 |

Share: | | | | |


ಬಪ್ಪಳಿಗೆ: ಅನ್ಸಾರುಲ್ ಇಸ್ಲಾಂ ಯುವಕ ಸಮಿತಿಯಿಂದ ಯೌವ್ವನ ಒಳಿತಿಗಾಗಿ ಸದಸ್ಯತ್ವ ಅಭಿಯಾನ ಸಮಾರೋಪ

ಪುತ್ತೂರು :ಮನುಷ್ಯ ಜೀವನದ ಪ್ರಧಾನ ಹಂತವಾದ ಯೌವನಕ್ಕೆ ಇಸ್ಲಾಂ ಹೆಚ್ಚಿನ ಆದ್ಯತೆ ಮತ್ತು ಪ್ರಾಮುಖ್ಯತೆಯನ್ನು ನೀಡಿದೆ.ಇತಿಹಾಸವನ್ನು ಅರಿತಾಗ ಒಂದು ಸಮುದಾಯದ ಅಭಿವೃದ್ಧಿ ಮತ್ತು ಅವನತಿ ಯುವಜನಾಂಗ ದಿಂದಲೇ ಎಂಬುವುದು ಮನವರಿಕೆಯಾಗುತ್ತದೆ,ಎಂದು ಬಪ್ಪಳಿಗೆ ಮಸೀದಿಯ ಖತೀಬ್  ಸಿರಾಜುದ್ದೀನ್ ಫೈಝಿ ನುಡಿದರು.ಅವರು ಬಪ್ಪಳಿಗೆ ಅನ್ಸಾರುಲ್ ಇಸ್ಲಾಂ ಯುವಕ ಸಮಿತಿಯು "ಯೌವ್ವನ ಒಳಿತಿಗಾಗಿ"ಸದಸ್ಯತ್ವ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಪ್ಪಳಿಗೆ ಮಸೀದಿಯ ಅಧ್ಯಕ್ಷ ಅಬ್ದುಲ್ ಹಮೀದ್ ಲವ್ಲಿ ಯವರು ಯುವಕರು ಒಳಿತನ್ನು ಬಯಸಿಕೊಂಡು ಅಲ್ಲಾಹನ ಮಾರ್ಗದಲ್ಲೇ ಸಾಗಿ, ಸಾಮಾಜಿಕ ಸೇವೆಗಳಿಂದ ಮಾದರೀಯೋಗ್ಯರಾಗಬೇಕೆಂದರು.

   ನಲುವತ್ತೈದು ವರ್ಷಗಳ ಇತಿಹಾಸ ಹೊಂದಿರುವ ಈ ಯುವಕ ಸಮಿತಿಗೆ ಒಂದು ತಿಂಗಳ ಕಾಲ ಹಮ್ಮಿಕೊಂಡ ಸದಸ್ಯತ್ವ ನವೀಕರಣ ಹಾಗೂ ಹೊಸದಾಗಿ ಸದಸ್ಯರನ್ನು ಸೇರ್ಪಡೆಗೊಳಿಸುವ ಕಾರ್ಯ ಚಟುವಟಿಕೆಗಳ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಸಮಿತಿ ಅಧ್ಯಕ್ಷ ಮೋನು ಬಪ್ಪಳಿಗೆ ಕ್ರತಜ್ಞತೆ ಸಲ್ಲಿಸಿದರು.ಸಮಾರಂಭದಲ್ಲಿ ಜಮಾಅತ್ ಕಾರ್ಯದರ್ಶಿ ಇಕ್ಬಾಲ್ ಯು.ಕೆ.,ಇಸ್ಹಾಕ್, ಅಬ್ದುಲ್ ರಝಾಕ್ ಬಿ.ಹೆಚ್. ಹಾಗೂ ಇನ್ನಿತರ ಜಮಾಅತ್ ಸಮಿತಿ ಪದಾಧಿಕಾರಿಗಳು ಯುವಕ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ಪುತ್ತೂರು: ಪ್ರಿಂಟಿಂಗ್ ಪ್ರೆಸ್ ಮಾಲೀಕ ಪದ್ಮಯ್ಯ ಗೌಡ ಆತ್ಮಹತ್ಯೆ

Posted by Vidyamaana on 2023-08-18 03:25:27 |

Share: | | | | |


ಪುತ್ತೂರು: ಪ್ರಿಂಟಿಂಗ್ ಪ್ರೆಸ್ ಮಾಲೀಕ ಪದ್ಮಯ್ಯ ಗೌಡ ಆತ್ಮಹತ್ಯೆ

ಪುತ್ತೂರು: ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ನಡೆಸುತ್ತಿದ್ದ ಪುತ್ತೂರು ತಾಲ್ಲೂಕಿನ ಕಬಕ ಗ್ರಾಮದ ಪೋಳ್ಯ ನಿವಾಸಿ ಪದ್ಮಯ್ಯ ಗೌಡ (50) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಪುತ್ತೂರಿನ ಕೆನರಾ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದ ಪದ್ಮಯ್ಯ ಗೌಡ ಅವರು ಕೆಲ ವರ್ಷದ ಹಿಂದೆ ಅಡ್ಯನಡ್ಕದಲ್ಲಿ ಪ್ರಿಂಟಿಂಗ್ ಪ್ರೆಸ್ ಆರಂಭಿಸಿ, ಅಲ್ಲೇ ಬಾಡಿಗೆ ಮನೆಯೊಂದರಲ್ಲಿ ವಾಸ್ಯವ್ಯವಿದ್ದುಕೊಂಡು ವಾರಕ್ಕೊಮ್ಮೆ ಪೋಳ್ಯದಲ್ಲಿರುವ ಮನೆಗೆ ಹೋಗುತ್ತಿದ್ದರು.ಸೋಮವಾರ ಪದ್ಮಯ್ಯ ಗೌಡ ಅವರ ಸ್ಕೂಟರ್ ಪೋಳ್ಯ ಮನೆಗೆ ಹೋಗುವ ರಸ್ತೆ ಬದಿಯಲ್ಲಿ ಕಂಡು ಬಂದಿತ್ತು. ಅವರ ಮೊಬೈಲಿಗೆ ಕರೆ ಮಾಡಿದಾಗ ಪೋನ್ ರಿಂಗಣಿಸುತ್ತಿತ್ತು. ಇದರ ಜಾಡು ಹಿಡಿದು ಹುಡುಕಾಡಿದಾಗ ಮನೆ ಸಮೀಪದ ತೋಟದ ಬಾವಿಯ ಬಳಿ ಪದ್ಮನಾಭ ಗೌಡ ಅವರ ಬಟ್ಟೆ ಪತ್ತೆಯಾಗಿತ್ತು. ಬಾವಿಯಲ್ಲಿ ಹುಡುಕಾಡಿದಾಗ ಶವ ಪತ್ತೆಯಾಗಿದೆ.


ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ಮಲಗಿದ ಭೂಪ

Posted by Vidyamaana on 2024-01-11 16:52:09 |

Share: | | | | |


ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ಮಲಗಿದ ಭೂಪ

ಕೊಟ್ಟಿಗೆಹಾರ: ಕಂಠಪೂರ್ತಿ ಕುಡಿದು ರಸ್ತೆಯ ಮಧ್ಯೆ ಮಲಗಿ ವಾಹನ ಸವಾರರು ಬೆಚ್ಚಿ ಬಿದ್ದಿರುವ ಘಟನೆ ಮೂಡಿಗೆರೆಯಿಂದ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ಬುಧವಾರ ರಾತ್ರಿ ನಡೆದಿದೆ.ವಾಹನ ಚಾಲಕರು ಎಷ್ಟೇ ಬಾರಿ ಹಾರ್ನ್ ಮಾಡಿದರು ಮೇಲಕ್ಕೆ ಏಳದ ವ್ಯಕ್ತಿ, ಮಧ್ಯ ರಾತ್ರಿ ರಸ್ತೆಯಲ್ಲಿ ಮಲಗಿರುವುದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ಕೆಲ ಹೊತ್ತಿನ ಬಳಿಕ ಎದ್ದ ವ್ಯಕ್ತಿ ಮತ್ತೆ ರಸ್ತೆ ಮಧ್ಯದಲ್ಲೇ ಮಲಗಿದ್ದಾನೆ ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ಎಣ್ಣೆ ಮತ್ತಿನಲ್ಲಿ ವ್ಯಕ್ತಿಯ ಚಲ್ಲಾಟ, ವಾಹನ ಸವಾರರಿಗೆ ಪರದಾಟ ಎಂಬಂತಾಗಿದೆ.



Leave a Comment: