ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಬೆಳ್ತಂಗಡಿ :ಸೋಮಾವತಿ ನದಿ ನೀರಿಗೆ ವಿಷಪ್ರಾಶನ- ಸಾವಿರಾರು ಮೀನುಗಳ ಮಾರಣಹೋಮ

Posted by Vidyamaana on 2023-04-27 03:08:16 |

Share: | | | | |


ಬೆಳ್ತಂಗಡಿ :ಸೋಮಾವತಿ ನದಿ ನೀರಿಗೆ ವಿಷಪ್ರಾಶನ- ಸಾವಿರಾರು ಮೀನುಗಳ ಮಾರಣಹೋಮ

ಬೆಳ್ತಂಗಡಿ: ನಗರಕ್ಕೆ ಕುಡಿಯುವ ನೀರಿನ ಪ್ರಮುಖ ಆಶ್ರಯವಾಗಿದ್ದ ಸೋಮಾವತಿ ನದಿ ನೀರಿಗೆ ಕಿಡಿಕೇಡಿಗಳು ವಿಷ ಪದಾರ್ಥ ಹಾಕಿರುವ ಪರಿಣಾಮ ಸಾವಿರಾರು ಮೀನುಗಳ ಮಾರಹೋಮ ನಡೆದಿದೆ.ಇಂದು ಬೆಳ್ಳಂ ಬೆಳಗ್ಗೆ ಘಟನೆ ವರದಿಯಾಗಿದ್ದು, ನಗರಕ್ಕೆ ನೀರು ಸರಬರಾಜು ಮಾಡುತ್ತಿದ್ದ ನದಿಯಲ್ಲಿದ್ದ ಘಟಕಕ್ಕೆ ವಿಷ ಪ್ರಾಶಾನ ಮಾಡಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಸತ್ತುಬಿದ್ದಿವೆ.ನಗರಕ್ಕೆ ಪ್ರಸಕ್ತ ಪ್ರತಿ ದಿನ 10 ಲಕ್ಷ ಲೀಟರ್ ನೀರಿನ ಅವಶ್ಯಕತೆಯಿದ್ದು ಇದೇ ನೀರನ್ನು ಅವಲಂಬಿಸಲಾಗಿತ್ತು.  ಆದರೆ ವಿಷ ಪ್ರಾಶನವಾಗಿರುವ ಪರಿಣಾಮ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ.

ಕಳೆದ ಮೂರು ವರ್ಷ ಇದೇ ಸ್ಥಳದಲ್ಲಿ ಹಿಂದೊಮ್ಮೆ ಈ ರೀತಿಯ ಕೃತ್ಯ ನಡೆಸಲಾಗಿತ್ತು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪಟ್ಟಣ ಪಂಚಾಯತ್ ಕೃತ್ಯದ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ.

ನದಿಯಲ್ಲಿ ಸಂಪೂರ್ಣ ನೀರು ಬತ್ತಿ ಕುಡಿಯಲು ನೀರಿನ ಹಾಹಾಕಾರವಿರುವ ಸಮಯದಲ್ಲಿ ಕಿಡಿಗೇಡಿಗಳು ಇಂತಹ ಕೃತ್ಯ ನಡೆಸಿದವರ ವಿರುದ್ಧ ಜನರಿಂದ ಬಹಳಷ್ಟು ಆಕ್ರೋಶ ವ್ಯಕ್ತವಾಗಿದ್ದು ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ.

ವಂಚನೆ ಆರೋಪದಲ್ಲಿ ನಿರ್ಮಾಪಕ ರವೀಂದರ್ ಜೈಲುಪಾಲು – ನಟಿ ಮಹಾಲಕ್ಷ್ಮಿ ಸಖತ್ ಗೋಳು

Posted by Vidyamaana on 2023-09-30 22:44:32 |

Share: | | | | |


ವಂಚನೆ ಆರೋಪದಲ್ಲಿ ನಿರ್ಮಾಪಕ ರವೀಂದರ್ ಜೈಲುಪಾಲು – ನಟಿ ಮಹಾಲಕ್ಷ್ಮಿ ಸಖತ್ ಗೋಳು

    ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮತ್ತು ನಟಿ ಮಹಾಲಕ್ಷ್ಮೀ ಶಂಕರ್ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಬ್ಬರಿಗೆ ಇದು ಎರಡನೇ ಮದುವೆಯಾಗಿತ್ತು. ತನಗಿಂತ ಎತ್ತರವಾದ ಮಗನಿದ್ದರೂ ನಟಿ ಮಹಾಲಕ್ಷ್ಮೀ ದಡೂತಿ ದೇಹವನ್ನು ಹೊಂದಿರುವ ನಿರ್ಮಾಪಕ ರವೀಂದರ್ ಅವರನ್ನು ಪ್ರೀತಿಸಿ ಮದುವೆಯಾದರು. ಇವರಿಬ್ಬರ ಮದುವೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.ಇವರಿಬ್ಬರ ಜೋಡಿ ನೋಡಿದವರು ಈಕೆ ಹಣದ ಆಸೆಗೆ ರವೀಂದರ್ ಅವರನ್ನು ಮದುವೆಯಾಗಿರುವುದು. ಹೆಚ್ಚೇನು ಈ ಜೋಡಿ ಒಟ್ಟಿಗೆ ಸಂಸಾರ ಮಾಡಲ್ಲ ಎಂದು ಟ್ರೋಲ್ ಮಾಡಲಾಗಿತ್ತು. ಇದಕ್ಕೆಲ್ಲ ಕ್ಯಾರೇ ಅನ್ನದೆ ಈ ಜೋಡಿ ಒಟ್ಟಿಗೆ ಸುತ್ತಾಡುತ್ತಿರುವ ಹಾಗೂ ರೋಮ್ಯಾಂಟಿಕ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು.ಇದೀಗ ರವೀಂದರ್ ಅವರು ವಂಚನೆ ಪ್ರಕರಣ ಸಂಬಂಧ ಜೈಲು ಸೇರುತ್ತಿದ್ದ ಹಾಗೇ ಮಹಾಲಕ್ಷ್ಮೀ ತಮ್ಮ ವರಸೆ ಬದಲಿಸಿಕೊಂಡಿದ್ದಾರೆ. ನಾನು ರವೀಂದರ್‌ನಿಂದ ಮೋಸ ಹೋದೆ. ಇದೆಲ್ಲ ನನಗೆ ಗೊತ್ತಿರಲಿಲ್ಲ ಎಂದು ತಮ್ಮ ಆಪ್ತ ವಲಯಗಳಲ್ಲಿ ಹೇಳಿಕೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.ಮಹಾಲಕ್ಷ್ಮೀ ಹೇಳಿಕೆ ಹೀಗಿದೆ:

"ಮದುವೆಗೂ ಮುನ್ನವೇ ನನಗೆ ಇದ್ಯಾವುದೂ ಗೊತ್ತಿರಲಿಲ್ಲ. ಈ ವಿಚಾರಗಳನ್ನೂ ರವೀಂದರ್‌ ನನ್ನ ಮುಂದೆ ಹೇಳಿಕೊಂಡಿರಲಿಲ್ಲ. ನನ್ನನ್ನು ಮೋಸ ಮಾಡಿ ಮದುವೆಯಾಗಿದ್ದಾನೆ" ಎಂದು ಮಹಾಲಕ್ಷ್ಮೀ, ಪತಿ ರವೀಂದರ್‌ ಬಗ್ಗೆ ತಮ್ಮ ಆಪ್ತ ವಲಯದ ಮುಂದೆ ಹೇಳಿಕೊಂಡಿದ್ದಾರೆ.

ಏನಿದು ರವೀಂದರ್ ವಂಚನೆ ಪ್ರಕರಣ?

ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹಣ ಹೂಡಿದರೆ ದುಪ್ಪಟ್ಟು ಲಾಭ ಸಿಗುತ್ತದೆ ಎಂದು ಚೆನ್ನೈನ ಬಾಲಾಜಿ ಗಾಬಾ ತಮ್ಮ ಮಾಧವ ಮೀಡಿಯಾ ಪ್ರೈ. ಲಿಮಿಟೆಡ್‌ನ ಬಾಲಾಜಿ ಎಂಬುವವರಿಗೆ ರವೀಂದರ್‌ ನಂಬಿಸಿದ್ದರು. ಅವರಿಂದ 16 ಕೋಟಿ ಹಣವನ್ನು ಹೂಡಿಕೆ ಸಹ ಮಾಡಿಸಿದ್ದರು. ಈ ಯೋಜನೆಯಲ್ಲಿ ಹೂಡಿಕೆ ಮಾಡುವಂತೆ ಹೇಳಿ ನಕಲಿ ದಾಖಲೆಗಳನ್ನು ಬಳಸಿ ವಂಚನೆಯಲ್ಲಿ ತೊಡಗಿದ್ದರು ಎಂದು ಉದ್ಯಮಿ ಬಾಲಾಜಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ರವೀಂದರ್‌ ಅವರನ್ನು ಚೆನ್ನೈ ಪೊಲೀಸರು ಸೆ. 7ರಂದೇ ಬಂಧಿಸಿದ್ದರು.ಪತಿ ರವೀಂದರ್‌ ಜೈಲು ಪಾಲಾಗಿದ್ದರೆ, ಇತ್ತ ಮಹಾಲಕ್ಷ್ಮೀ ಪತಿಗೆ ಜಾಮೀನು ಕೊಡಿಸುವ ಕಾರ್ಯದಲ್ಲಿ ನಿರತರಾಗಿದ್ದರೂ, ಅರ್ಜಿ ತಿರಸ್ಕೃತಗೊಂಡಿದೆ. ಮತ್ತೊಂದೆಡೆ ಪತಿ ಜೈಲು ಸೇರಿದ ಮೇಲಿಂದ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಸಹ ಹಂಚಿಕೊಳ್ಳದ ಮಹಾಲಕ್ಷ್ಮೀ ಕಳೆದ ನಾಲ್ಕೈದು ದಿನಗಳಿಂದ ಎಂದಿನಂತೆ, ನಿತ್ಯ ನಾಲ್ಕೈದು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ಅದಲ್ಲದೆ ಮಾಧ್ಯಮಗಳ ಬಳಿ ತಮ್ಮ ಪತಿ ರವಿಂದರ್‌ ಬಂಧನದ ಬಗ್ಗೆ ಮೌನ ಮುರಿದಿದ್ದಾರೆ

ಶ್ವೇತಾ ನಾಪತ್ತೆ

Posted by Vidyamaana on 2024-05-30 22:29:35 |

Share: | | | | |


ಶ್ವೇತಾ ನಾಪತ್ತೆ

ಮಂಗಳೂರು: ಮನೆಯಿಂದ ಹೊರಗೆ ತೆರಳಿದ್ದ ತಾಯಿ ಮತ್ತು ಮಗು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕಂಪಾಡಿ ಮೀನಕಳಿಯ ನಿವಾಸಿಗಳಾಗಿರುವ ಶ್ವೇತಾ(31) ಮತ್ತು ಇಶಿಕಾ(6) ನಾಪತ್ತೆಯಾದ ತಾಯಿ ಹಾಗೂ ಮಗಳು ಎಂದು ತಿಳಿದು ಬಂದಿದೆ.

ಲೇಡೀಸ್ ಹಾಸ್ಟೆಲ್ ಮುಂದೆ ಏನೇನೋ ಮಾಡ್ತಿದ್ದವ ಕೊನೆಗೂ ಲಾಕ್

Posted by Vidyamaana on 2023-08-23 04:54:08 |

Share: | | | | |


ಲೇಡೀಸ್ ಹಾಸ್ಟೆಲ್ ಮುಂದೆ ಏನೇನೋ ಮಾಡ್ತಿದ್ದವ ಕೊನೆಗೂ ಲಾಕ್

ಮಡಿಕೇರಿ: ಇಲ್ಲಿನ ಮೆಡಿಕಲ್ ಕಾಲೇಜು ಆವರಣದಲ್ಲಿಪುಂಡಾಟದ ವರ್ತನೆ ತೋರಿದ್ದಲ್ಲದೆ, ಅಶ್ಲೀಲ ಪ್ರದರ್ಶನ ಮಾಡಿದ್ದ ಆರೋಪಿಗಳಲ್ಲಿ ಒಬ್ಬನನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.


ಮಧ್ಯರಾತ್ರಿಯ ಹೊತ್ತು ಇಲ್ಲಿನ ಲೇಡಿಸ್‌ ಹಾಸ್ಟೆಲ್‌ ಆವರಣಕ್ಕೆಕೆಲವು ಪುಂಡ ಯುವಕರು ಆಗಮಿಸಿ ಪುಂಡಾಟಿಕೆ ನಡೆಸುವುದಲ್ಲದೆ, ಅಲ್ಲೇ ಮುಕ್ತವಾಗಿ ಹಸ್ತಮೈಥುನ ನಡೆಸುತ್ತಿರುವ ಬಗ್ಗೆ ಈಗಾಗಲೇ ಹಲವು ಬಾರಿ ದೂರು ನೀಡಲಾಗಿತ್ತು. ಆದರೆ, ಯಾರೂ ಇದನ್ನು ಗಂಭೀರವಾಗಿ ತೆಗೆದುಕೊಳ್ಳದೆ ಇದ್ದಾಗ ಸೋಮವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ದುಷ್ಟ ಕೂಟದ ಅಸಭ್ಯ ವರ್ತನೆಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದರೂ ಕ್ರಮ ಕೈಗೊಳ್ಳದ ವಿರುದ್ಧ ಸಿಟ್ಟಿಗೆದ್ದಿದ್ದರು. ಇದರ ಬೆನ್ನಿಗೇ ಒಬ್ಬ ಆರೋಪಿಯ ಅರೆಸ್ಟ್‌ ಆಗಿದೆ.


ಸೋಮವಾರ ನಡೆದ ಪ್ರತಿಭಟನೆ ವೇಳೆ ಮಡಿಕೇರಿಯ ಪೊಲೀಸ್‌ ಅಧಿಕಾರಿಗಳು ಆಗಮಿಸಿ ಆಡಳಿತ ಮಂಡಳಿ, ವಿದ್ಯಾರ್ಥಿನಿಯರಿಗೆ ಎದುರಾಗಿರುವ ಅಸುರಕ್ಷಿತ ಭಾವವನ್ನು ದೂರ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ತಕ್ಷಣದಿಂದಲೇ ಕಾರ್ಯಪ್ರವೃತ್ತರಾದ ಮಡಿಕೇರಿ ಪೊಲೀಸರು ಕತ್ತಲೆಕಾಡು‌ ನಿವಾಸಿ ಸಿಜಿಲ್(22) ಎಂಬಾತನನ್ನು ಬಂಧಿಸಿದ್ದಾರೆ.


ಕಾಲೇಜು ಮತ್ತು ಹಾಸ್ಟೆಲ್‌ ಆವರಣದ ಸಿಸಿ ಟಿವಿ ಕ್ಯಾಮೆರಾಗಳಲ್ಲಿ ಪುಂಡರ ವರ್ತನೆಯ ದೃಶ್ಯಾವಳಿಗಳು ಸೆರೆಯಾಗಿರುವುದನ್ನು ವಿದ್ಯಾರ್ಥಿಗಳು ಉಲ್ಲೇಖಿಸಿದ್ದರು. ಪೊಲೀಸರು ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸಿಜಿಲ್‌ ಬೈಕ್‌ನಲ್ಲಿ ಬಂದು ಹುಡುಗಿಯರಿಗೆ ತೊಂದರೆ ಮಾಡುತ್ತಿದ್ದುದಲ್ಲದೆ, ಮಧ್ಯರಾತ್ರಿಯ ಹೊತ್ತು ಹಾಸ್ಟೆಲ್‌ ಎದುರು ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.


ಪ್ರಸಕ್ತ ಸಿಜಿಲ್‌ನನ್ನು ಬಂಧಿಸಲಾಗಿದೆ. ಆದರೆ, ಈ ದುಷ್ಕೃತ್ಯದಲ್ಲಿ ಇನ್ನೂ ಹಲವು ಯುವಕರು ಭಾಗಿಯಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲಿ ಫೆ.17ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Posted by Vidyamaana on 2024-01-31 14:06:35 |

Share: | | | | |


ಮಂಗಳೂರಿನಲ್ಲಿ ಫೆ.17ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಬೆಂಗಳೂರು: ಮಂಗಳೂರಿನಲ್ಲಿ ಫೆ. 17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಕಳೆದ ತಿಂಗಳಲ್ಲೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ಕಾರಣಾಂತರದಿಂದ ಅದನ್ನು ಮುಂದೂಡಲಾಗಿತ್ತು. ಫೆ.17ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ದೇವರ ಪ್ರತಿಷ್ಠೆ

Posted by Vidyamaana on 2024-04-27 13:07:01 |

Share: | | | | |


ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ದೇವರ ಪ್ರತಿಷ್ಠೆ

ಪುತ್ತೂರು:ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪುನರ್ ಪ್ರತಿಷ್ಠ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.೨೬ರಂದು ಪ್ರಧಾನ ದೇವರಾಗಿರುವ ಶ್ರೀ ಸುಬ್ರಹ್ಮಣ್ಯ, ಪರಿವಾರ ದೇವರುಗಳಾದ ಗಣಪತಿ ಹಾಗೂ ದುರ್ಗಾದೇವಿ ಹಾಗೂ ದೈಗಳ ಪ್ರತಿಷ್ಠೆಯು ನೆರವೇರಿತು

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದಲ್ಲಿ ಪ್ರಾತಃಕಾಲ ಮಹಾಗಣಪತಿ ಹೋಮ, ಮಂಟಪ ಸಂಸ್ಕಾರ, ಕುಂಭೇಶಕರ್ಕರಿಪೂಜೆ,



Leave a Comment: