Posted by vidyamaana on 2024-07-03 10:25:40 |
ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.
ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.
Posted by Vidyamaana on 2023-02-04 04:20:01 |
ಉಪ್ಪಳ: ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಸುಮಾರು 8 ಪವನ್ ಚಿನ್ನಾಭರಣ ಮತ್ತು 45 ಸಾವಿರ ರೂ. ನಗದು ಕಳವು ಮಾಡಿರುವ ಘಟನೆ ಉಪ್ಪಳದಲ್ಲಿ ನಡೆದಿದೆ.
ಹಿದಾಯತ್ ಬಜಾರ್ ನ ಮುಹಮ್ಮದ್ ಸಲೀಂ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.ಸಲೀಂ ಗಲ್ಸ್ನಲ್ಲಿದ್ದು, ತಾಯಿ ಸಫಿಯಾ ಮನೆಗೆ ಬೀಗ ಹಾಕಿ ಸಾಲೆತ್ತೂರಿನ ಸಂಬಂಧಿಕರ ಮನೆಗೆ ತೆರಳಿದ್ದರು. ಗಲ್ಫ್ನಲ್ಲಿರುವ ಸಲೀಂ ಮೊಬೈಲ್ ಫೋನ್ ಮೂಲಕ ಮನೆಯಲ್ಲಿರುವ ಸಿಸಿ ಟಿವಿ ದೃಶ್ಯಗಳನ್ನು ಗಮನಿಸಿದಾಗ ತಡರಾತ್ರಿ ಮನೆಯೊಳಗೆ ಓರ್ವ ಮುಸುಕುಧಾರಿಯಾಗಿ ತೆರಳುತ್ತಿರುವುದು ಗಮನಕ್ಕೆ ಬಂದಿದೆ.ಇನ್ನು ತಕ್ಷಣ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಮನೆಗೆ ಬಂದು ಗಮನಿಸಿದಾಗ ಮುಂಭಾಗದ ಬಾಗಿಲು ಮುರಿದಿರುವುದು ಕಂಡು ಬಂದಿದೆ. ಮೇಲಂತಸ್ತಿನಲ್ಲಿದ್ದ ಒಂದು ಮತ್ತು ಕೆಳಗಡೆ ಇದ್ದ ಮೂರು ಕಪಾಟುಗಳನ್ನು ಒಡೆದು ವಸ್ತ್ರಗಳನ್ನು ಎಸೆದಿರುವುದು ಕಂಡು ಬಂದಿದೆ.
Posted by Vidyamaana on 2023-10-15 10:39:08 |
ಬೆಂಗಳೂರು : ರಾಜ್ಯ ಸರ್ಕಾರವು ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಕುರಿತು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಬಿ ಮತ್ತು ಸಿ ವರ್ಗದ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಅರ್ಚಕರು ಮತ್ತು ಸಿಬ್ಬಂದಿಯ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ 5,000 ರೂ., ಐಟಿಐ/ ಜೆಒಸಿ/ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 5,000 ರೂ., ಪದವಿಗೆ 7,000 ರೂ., ಸ್ನಾತಕೋತ್ತರರಿಗೆ 15,000 ರೂ., ಆಯುರ್ವೇದ 25,000 ರೂ. ವಾರ್ಷಿಕ ಆರ್ಥಿಕ ನೆರವು ನೀಡಲಿದೆ. ಹೋಮಿಯೋಪತಿ ಕೋರ್ಸ್ಗಳು, ತಾಂತ್ರಿಕ ಶಿಕ್ಷಣಕ್ಕೆ (ಎಂಜಿನಿಯರಿಂಗ್) 25,000 ರೂ., ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳಿಗೆ 50,000 ರೂ. ಮತ್ತು ವಿದೇಶದಲ್ಲಿ ಅಧ್ಯಯನಕ್ಕೆ 1 ಲಕ್ಷ ರೂ. ನೆರವು ಸಿಗಲಿದೆ ಎಂದು ಹೇಳಿದ್ದಾರೆ.
ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರ ಪೈಕಿ ವರ್ಷಕ್ಕೆ 1,200 ಮಂದಿಯನ್ನು ಕಾಶಿ, ಗಯಾ ಯಾತ್ರೆಗೆ ಉಚಿತವಾಗಿ ಕಳುಹಿಸಲಾಗುವುದು. ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ನೌಕರರು ಮೃತರಾದರೆ ಅವರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
Posted by Vidyamaana on 2023-08-08 15:56:46 |
ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಗಳ ನಿರ್ಲಕ್ಷ್ಯಕ್ಕೆ ಒಂದುವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಸಾವನ್ನಪ್ಪಿದ ತಂದೆಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿಲು ಸಲಹೆ ನೀಡಿದ್ದಾರೆ.
ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಗಳ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಸಾವನ್ನಪ್ಪಿದ ಮಗು.
ನೆರಿಯ ಅಕ್ಕ ಲೀಲಾವತಿ ಮನೆಯಲ್ಲಿದ್ದಕೊಂಡು ಮಗುವನ್ನು ಆರೈಕೆ ಮಾಡಿಕೊಂಡಿದ್ದ ಸವಿತಾ. ಆಗಸ್ಟ್ 8 ರಂದು(ಇಂದು) ಕಫ ಅಗಿತ್ತು ಎಂದು ಮಧ್ಯಾಹ್ನ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದರು. ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡದ ಬಳಿಕ ಮಗು ಸಾವನ್ನಪ್ಪಿದೆ ಎಂದು ಮನೆಮಂದಿ ಆರೋಪ ಮಾಡುತ್ತಿದ್ದಾರೆ.
Posted by Vidyamaana on 2024-04-08 20:33:06 |
ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಲೇ ಇರುತ್ತದೆ. ಈ ಜಗಳದಿಂದಾಗಿ ಸಂಬಂಧದಲ್ಲಿ ಮಾಧುರ್ಯ ಉಳಿಯುತ್ತದೆ. ಜಗಳಗಳ ನಂತರ ದಂಪತಿಗಳ ನಡುವೆ ಸಮನ್ವಯವಾದಾಗ, ಪ್ರೀತಿಯು ಮೊದಲಿಗಿಂತ ಹೆಚ್ಚು ಹೆಚ್ಚಾಗುತ್ತದೆ. ಆದರೆ ಅನೇಕ ಬಾರಿ ಈ ಕದನಗಳು ಅದ್ಯಾವ ಅತಿರೇಕಕ್ಕೆ ತಲುಪುತ್ತವೆ ಎಂದರೆ, ಅದರ ಫಲಿತಾಂಶವು ಊಹಿಸಲೂ ಸಾಧ್ಯವಿಲ್ಲ.ರಾಜಸ್ಥಾನದ ಅಲ್ವಾರ್ನಲ್ಲಿ ಕೌಟುಂಬಿಕ ಕಲಹದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆ ವ್ಯಕ್ತಿ ಅಳುತ್ತಾ ಹೆಂಡತಿಯನ್ನು ಬಿಟ್ಟು ಹೋಗಿದ್ದ.
ರೈನಿ ಪೊಲೀಸ್ ಠಾಣೆ ವ್ಯಾಪ್ತಿಯ ನಂಗಲ್ ಬಸ್ ಗ್ರಾಮದಲ್ಲಿ ವಾಸಿಸುತ್ತಿದ್ದ ಸಿದ್ಧಾರ್ಥ್ ವೃತ್ತಿಯಲ್ಲಿ ಸರ್ಕಾರಿ ನೌಕರನಾಗಿದ್ದ. ಆತನ ಪತ್ನಿ ಮಾಯಾ ಅವರು ರೀಲ್ಗಳನ್ನು ಮಾಡುವುದನ್ನು ಇಷ್ಟಪಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪತ್ನಿಯ ಈ ಹವ್ಯಾಸದಿಂದ ಸಿದ್ಧಾರ್ಥ್ ತುಂಬಾ ನೊಂದುಕೊಂಡಿದ್ದ. ರೀಲ್ಗಳನ್ನು ಮಾಡದಂತೆ ಅವನು ತನ್ನ ಹೆಂಡತಿಯನ್ನು ಅನೇಕ ಬಾರಿ ಕೇಳಿಕೊಂಡಿದ್ದ. ಆದರೆ ಪ್ರತಿದಿನ ಪತ್ನಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕುತ್ತಲೇ ಇದ್ದರು. ಈ ಕಾರಣಕ್ಕೆ ಇಬ್ಬರ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಕೊನೆಗೆ ಇದೆಲ್ಲದರಿಂದ ಬೇಸತ್ತು ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Posted by Vidyamaana on 2024-02-29 21:43:42 |
ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ ೩ ಲಕ್ಷದಿಂದ ೫ ಲಕ್ಷಕ್ಕೆ ಏರಿಸಿತ್ತು, ಶೇ. ೩ ಬಡ್ಡಿದರದಲ್ಲಿ ಕೃಷಿಕರಿಗೆ ದೊರೆಯುತ್ತಿದ್ದ ಸಾಲದ ಮೊತ್ತವನ್ನು ೧೦ ರಿಂದ ೧೫ ಲಕ್ಷಕ್ಕೆ ಏರಿಕೆ ಮಾಡಿದೆ ಆದರೆ ಈ ಎರಡೂ ಯೋಜನೆಗಳು ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಅನುಷ್ಠಾನವಾಗಿಲ್ಲ ಇದುವರೆಗೂ ಯಾವುದೇ ಕೃಷಿಕರಿಗೆ ಯೋಜನೆಯ ತಲುಪಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದರು.
ಅಧಿವೇಶನದಲ್ಲಿ ಮಾತನಾಡಿದ ಶಾಸಕರು ಸರಕಾರ ಕೃಷಿಕರ ಅಥವಾ ರೈತರಿಗೆ ನೆರವಾಗಲು ಈ ಯೋಜನೆಯನ್ನು ಜಾರಿಗೆ ತಂದಿದೆ. ಯಾವುದೇ ಸರಕಾರ ನೀಡಿದ ಸೌಲಭ್ಯವನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ. ಆದರೆ ಈ ಯೋಜನೆಯಿಂದ ಕರಾವಳಿ ಜಿಲ್ಲೆಯ ಕೃಷಿಕರು ವಂಚಿತರಾಗಿದ್ದಾರೆ. ಉಭಯ ಜಿಲ್ಲೆಗಳ ಯಾವುದೇ ಸಹಕಾರಿ ಸಂಘಗಳಲ್ಲಿ ಈ ಸಾಲವನ್ನು ಕೃಷುಕರಿಗೆ ನೀಡುತ್ತಿಲ್ಲ ಎಂದು ಸರಕಾರದ ಗಮನಕ್ಕೆ ತಂದರು. ಈಗಾಗಲೇ ೬೭೧೫ ಅರ್ಜಿಗಳು ಬಂದಿದ್ದು ಈ ಪೈಕಿ ೬೩೫೪ ಅರ್ಜಿದಾರರಿಗೆ ಸಾಲವನ್ನು ನೀಡಲಾಗಿದೆ. ದಕ ಮತ್ತು ಉಡುಪಿ ಜಿಲ್ಲೆಯ ಕೃಷಿಕರು ಮಾತ್ರ ಈ ಸಾಲದಿಂದ ವಂಚಿತರಾಗಿದ್ದಾರೆ. ಯಾವ ಕಾರಣಕ್ಕೆ ಸಹಕಾರಿ ಸಂಘಗಳಲ್ಲಿ ಸಾಲವನ್ನು ನೀಡುತ್ತಿಲ್ಲ ಎಂದು ಅಧಿವೇಶನದಲ್ಲಿ ಪ್ರಶ್ನಿಸಿದ ಶಾಸಕರು ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ದ ಕ ಮತ್ತು ಉಡುಪಿ ಜಿಲ್ಲೆಯ ಕೃಷಿಕರಿಗೆ ಸರಕಾರದ ಕೃಷಿ ಸಾಲ ದೊರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಶಾಸಕರ ಮನವಿಗೆ ಸ್ಪೀಕರ್ ಯು ಟಿ ಖಾದರ್ ದ್ವನಿಗೂಡಿಸಿದರು.
ಲೋಪವಾಗಿದ್ದಲ್ಲಿ ಸರಿಪಡಿಸಲಾಗುವುದು: ಸಚಿವರ ಸ್ಪಷ್ಟನೆ
ಸರಕಾರ ಜಾರಿಗೆ ತಂದಿರುವ ಶೂನ್ಯ ಬಡ್ಡಿದರದಲ್ಲಿ ದೊರೆಯುವ ಅಲ್ಪಾವಧಿ ಸಾಲ ಮತ್ತು ಶೇ. ೩ ಬಡ್ಡಿದರದಲ್ಲಿ ದೊರೆಯುತ್ತಿದ್ದ ಸಾಲದ ಮೊತ್ತವನ್ನು ೧೦ ರಿಂದ ೧೫ ಲಕ್ಷಕ್ಕೆ ಏರಿಕೆ ಮಾಡಿತ್ತು. ಅರ್ಹ ಕೃಷಿಕರಿಗೆ ಈ ಸಾಲವನ್ನು ನೀಡಲಾಗಿದೆ. ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ವಿಳಂಬವಾಗಿರುವ ಬಗ್ಗೆ ಶಾಸಕರು ಗಮನ ಸೆಳೆದಿದ್ದಾರೆ. ಯಾವ ಕಾರಣಕ್ಕೆ ಹೀಗಾಯ್ತು ಎಂಬುದನ್ನು ಪರಿಶೀಲಿಸುತ್ತೇನೆ. ಅರ್ಹ ಫಲಾನುಭವಿಗಳನ್ನು ಹುಡುಕಿ ಅಂಥವರಿಗೆ ಸಾಲವನ್ನು ಕೊಡುವ ಕೆಲಸವನ್ನು ಮಾಡುವುದಾಗಿ ಸಚಿವ ಪ್ರಿಯಾಂಗ ಖರ್ಗೆ ಸ್ಪಷ್ಟಪಡಿಸಿದರು.
Posted by Vidyamaana on 2024-05-01 17:00:31 |
ಪುತ್ತೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆಯ ಪ್ರಕ್ರಿಯೆ ಮುಕ್ತಾಯಗೊಂಡಿದ್ದರೂ ಕೆಲವೊಂದು ಕಾರ್ಯಕ್ರಮಗಳಲ್ಲಿ ನೀತಿ ಸಂಹಿತೆ ಸಡಿಲಗೊಳಿಸಲಾಗಿದೆ. ರಾಜಕೀಯ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿಗಳಾದ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಜುಬಿನ್ ಮೊಹಾಪಾತ್ರ ತಿಳಿಸಿದ್ದಾರೆ.
ಅವರು ಮಂಗಳವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿದ ಸಹಾಯಕ ಕಮೀಷನರ್ ಕೋರ್ಟು ಸಭಾಂಗಣದಲ್ಲಿ ಮಧ್ಯಮಗಳಿಗೆ ಮಾಹಿತಿ ನೀಡಿದರು.
ಪುತ್ತೂರು ಉಪವಿಭಾಗದಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಶಿಸ್ತುಬದ್ಧವಾಗಿ ಚುನಾವಣೆ ನಡೆದಿದೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಜು.೬ರ ತನಕ ನೀತಿ ಸಂಹಿತೆ ಎಲ್ಲೆಡೆ ಜಾರಿಯಲ್ಲಿರುತ್ತದೆ.