ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್

Posted by Vidyamaana on 2023-10-23 10:49:15 |

Share: | | | | |


ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್

ಬೆಂಗಳೂರು: ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ.


ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ.


ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ.

ಪುತ್ತೂರು : ಆಯುರ್ವೇದ ವೈದ್ಯಕೀಯ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ಡಾ.ಖದೀಜತ್ ದಿಲ್ಶಾನ

Posted by Vidyamaana on 2024-02-10 22:11:11 |

Share: | | | | |


ಪುತ್ತೂರು : ಆಯುರ್ವೇದ ವೈದ್ಯಕೀಯ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ  ಡಾ.ಖದೀಜತ್ ದಿಲ್ಶಾನ

ಪುತ್ತೂರು: ಪ್ರತಿಷ್ಠಿತ ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಆಯುರ್ವೇದ ವೈದ್ಯಕೀಯ (ಬಿ.ಎ.ಎಂ.ಎಸ್) ಪದವಿ ಪರೀಕ್ಷೆಯಲ್ಲಿ ಕೆಯ್ಯೂರಿನ ಮಾಡಾವು ನಿವಾಸಿ ಡಾ.ಖದೀಜತ್ ದಿಲ್ಶಾನ ರ್ಯಾಂಕ್ ಗಳಿಸಿದ್ದಾರೆ.


ಆಯುರ್ವೇದ ವಿಭಾಗದ ಚರಕ ಸಂಹಿತಾ ಪೂರ್ವಾರ್ಧದಲ್ಲಿ ಒಂದನೇ ರ್ಯಾಂಕ್, 

ಮೌಲಿಕ ಸಿದ್ಧಾಂತದಲ್ಲಿ ಎರಡನೇ ರ್ಯಾಂಕ್, ರಿಸರ್ಚ್ ಮೆಥಾಡಾಲಜಿ ವಿಷಯದಲ್ಲಿ ಮೂರನೇ ರ್ಯಾಂಕ್ ಪಡೆದಿದ್ದಾರೆ.


ಡಾ.ಖದೀಜತ್ ದಿಲ್ಶಾನ ಅವರು ಪ್ರಸ್ತುತ ಸರಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಎಂ.ಯಸ್. ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮೊಹಮ್ಮದ್ ಕುಂಙಿ ಮತ್ತು ನೆಬಿಸಾ ದಂಪತಿ ಸುಪುತ್ರಿ.

ಕುರಿಯ : ಸಿಡಿಲು ಬಡಿದು ಮನೆಗೆ ಹಾನಿ

Posted by Vidyamaana on 2023-11-04 09:06:48 |

Share: | | | | |


ಕುರಿಯ : ಸಿಡಿಲು ಬಡಿದು ಮನೆಗೆ ಹಾನಿ

ಪುತ್ತೂರು : ಪುತ್ತೂರು ಸುತ್ತಮುತ್ತಲ ಗ್ರಾಮ ಗಳಲ್ಲಿ ನ 3 ರಂದು ರಾತ್ರಿ  ಗುಡುಗು, ಮಿಂಚು ಸಹಿತ ಮಳೆ ಸುರಿದಿದ್ದು,ಆರ್ಯಾಪು ಗ್ರಾಮದ ಕುರಿಯ ಅಜಲಾಡಿ ನಿವಾಸಿ ರುಖ್ಯ  ಅವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದೆ.


ಸಿಡಿಲ ಆಘಾತಕ್ಕೆ ಮನೆಯ ವಯರಿಂಗ್‌ ಸಂಪೂರ್ಣ ಕೆಟ್ಟುಹೋಗಿದೆ.ವಿದ್ಯುತ್‌ ಉಪಕರಣಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ.

ಸ್ಥಳಕ್ಕೆ ಆರ್ಯಾಪು ಗ್ರಾ.ಪಂ. ಸದಸ್ಯ ಯಾಕುಬ್ ಸಾಹೇಬ್ ಭೇಟಿ ನೀಡಿದರು

ಸೌದಿಯಿಂದ ಮಂಗಳೂರಿಗೆ ತೈಲ ಹೊತ್ತು ತರುತ್ತಿದ್ದ ಹಡಗಿಗೆ ಗುಜರಾತ್ ಬಳಿ ಡ್ರೋಣ್ ದಾಳಿ

Posted by Vidyamaana on 2023-12-23 20:43:52 |

Share: | | | | |


ಸೌದಿಯಿಂದ ಮಂಗಳೂರಿಗೆ ತೈಲ ಹೊತ್ತು ತರುತ್ತಿದ್ದ ಹಡಗಿಗೆ ಗುಜರಾತ್ ಬಳಿ ಡ್ರೋಣ್ ದಾಳಿ

ನವದೆಹಲಿ, ಡಿ.23: ಸೌದಿ ಅರೇಬಿಯಾದಿಂದ ಕರ್ನಾಟಕದ ಮಂಗಳೂರಿಗೆ ಕಚ್ಚಾ ತೈಲವನ್ನು ಹೊತ್ತುಕೊಂಡು ಬರುತ್ತಿದ್ದ ಹಡಗಿಗೆ ಗುಜರಾತ್ ಬಳಿಯ ಸಮುದ್ರ ಮಧ್ಯೆ ಡ್ರೋಣ್ ದಾಳಿಯಾಗಿದೆ. ಡ್ರೋಣ್ ದಾಳಿಯಿಂದ ಬೆಂಕಿ ಹತ್ತಿಕೊಂಡಿದ್ದು, ಹಡಗಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿದೆ. ಹಡಗನ್ನು ಸಮುದ್ರ ಮಧ್ಯದಲ್ಲೇ ನಿಲ್ಲಿಸಲಾಗಿದ್ದು ಅದರಲ್ಲಿ 20 ಮಂದಿ ಭಾರತೀಯ ಸಿಬಂದಿಯಿದ್ದಾರೆ ಎಂದು ನೌಕಾ ಸೇನೆಯ ಮೂಲಗಳು ತಿಳಿಸಿವೆ.  


ಗುಜರಾತಿನ ಪೋರ್ ಬಂದರಿನಿಂದ 217 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯದಲ್ಲಿ ಘಟನೆ ನಡೆದಿದೆ. ಇಸ್ರೇಲ್ ದೇಶಕ್ಕೆ ಸೇರಿದ ಎಂವಿ ಚೆಮ್ ಪ್ಲುಟೋ ಹೆಸರಿನ ಕಾರ್ಗೋ ಹಡಗಿನಲ್ಲಿ ಸೌದಿ ಅರೇಬಿಯಾದಿಂದ ಮಂಗಳೂರಿನ ಬಂದರಿಗೆ ಕಚ್ಚಾ ತೈಲವನ್ನು ಹೊತ್ತುಕೊಂಡು ಬರುತ್ತಿದ್ದಾಗ ಡ್ರೋಣ್ ದಾಳಿಯಾಗಿದೆ. ದಾಳಿಯಿಂದ ಹಡಗಿನಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದನ್ನು ಬಳಿಕ ನಂದಿಸಲಾಗಿದೆ. ಆದರೆ ಡ್ರೋಣ್ ದಾಳಿಯಿಂದಾಗಿ ಹಡಗಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿದ್ದು ಸಮುದ್ರ ಮಧ್ಯದಲ್ಲೇ ಹಡಗನ್ನು ನಿಲುಗಡೆ ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.  


ಭಾರತದ ಸಮುದ್ರ ಆರ್ಥಿಕ ವಲಯದ ಗಡಿಯಲ್ಲೇ ಪೆಟ್ರೋಲಿಂಗ್ ಮಾಡುತ್ತಿದ್ದ ಕೋಸ್ಟ್ ಗಾರ್ಡ್ ಪಡೆಯ ಐಸಿಜಿಎಸ್ ವಿಕ್ರಮ್ ನೌಕೆಯನ್ನು ಕೂಡಲೇ ಸ್ಥಳಕ್ಕೆ ಕಳಿಸಲಾಗಿದ್ದು ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದೆ. ಇದಲ್ಲದೆ, ಕೋಸ್ಟ್ ಗಾರ್ಡ್ ಮತ್ತು ನೌಕಾ ಸೇನೆಯ ಹಡಗುಗಳನ್ನು ಕರಾವಳಿಯಲ್ಲಿ ಅಲರ್ಟ್ ಆಗಿರಲು ಸೂಚನೆ ನೀಡಲಾಗಿದೆ. ಹಡಗಿನಲ್ಲಿದ್ದ ಭಾರತೀಯ ಸಿಬಂದಿ ಸೇಫ್ ಆಗಿದ್ದಾರೆಂದು ಭಾರತೀಯ ನೌಕಾ ಪಡೆಯ ವಕ್ತಾರರು ಟ್ವೀಟ್ ಮಾಡಿದ್ದಾರೆ. ಆದರೆ ಈ ಕುರಿತು ಖಚಿತ ಮಾಹಿತಿಗಳು ಲಭ್ಯವಾಗಿಲ್ಲ. ಹಡಗಿನಲ್ಲಿ ಬೆಂಕಿ ಹತ್ತಿಕೊಂಡು ನೀರು ಒಳನುಗ್ಗಿದೆ, ಇದರಿಂದ ತಾಂತ್ರಿಕ ತೊಂದರೆ ಆಗಿದೆ ಎನ್ನುವ ವರದಿಗಳನ್ನು ರಾಷ್ಟ್ರೀಯ ಮಾಧ್ಯಮಗಳು ಹೇಳಿವೆ.


ಉಗ್ರರ ದಾಳಿ ಆಗಿರುವ ಶಂಕೆ


ಕಳೆದ ವಾರ ಸುಯೆಜ್ ಸಮುದ್ರದಲ್ಲಿ ಮಂಗಳೂರಿನಿಂದ ಜೆಟ್ ಇಂಧನ ಸಾಗಿಸುತ್ತಿದ್ದ ತೈಲ ಹಡಗಿನ ಮೇಲೆ ಹೌತಿ ಬಂಡುಕೋರರು ದಾಳಿ ನಡೆಸಿದ್ದರು. ಇದರ ನಡುವೆ, ಮೊನ್ನೆ ಗುರುವಾರ ಲಕ್ಷದ್ವೀಪ ಸಮುದ್ರದ ಬಳಿ ಮಾಲ್ಟಾ ದ್ಪೀಪ ಸಮೂಹಕ್ಕೆ ಸೇರಿದ ಹಡಗಿನ ಮೇಲೆ ದಾಳಿ ನಡೆದಿತ್ತು. ಅದರಿಂದ ರಕ್ಷಣೆಗೆ ಕರೆ ಬಂದ ಹಿನ್ನೆಲೆಯಲ್ಲಿ ಭಾರತದ ನೌಕಾಪಡೆಯು ಸ್ಪಂದಿಸಿದ್ದಲ್ಲದೆ, ತನ್ನ ಏರ್ ಕ್ರಾಫ್ಟ್ ಮತ್ತು ಯುದ್ಧ ಹಡಗನ್ನು ಕಳಿಸಿಕೊಟ್ಟಿತ್ತು. ಅದರಲ್ಲಿ 18 ಸಿಬಂದಿಯಿದ್ದು, ಆರು ಮಂದಿಯಿದ್ದ ಬಂಡುಕೋರರು ಮಾಲ್ಟಾ ಹಡಗನ್ನು ತಮ್ಮ ವಶಕ್ಕೆ ಪಡೆದಿದ್ದರು. ಸೋಮಾಲಿಯದತ್ತ ಚಲಿಸುತ್ತಿದ್ದ ಹಡಗಿಗೆ ಭಾರತೀಯ ನೌಕಾಪಡೆ ರಕ್ಷಣೆ ಕೊಟ್ಟಿತ್ತು. ಇದಕ್ಕೆ ಪ್ರತಿಯಾಗಿ ಈಗ ಡ್ರೋಣ್ ದಾಳಿ ಆಗಿದೆಯೇ ಎನ್ನುವುದು ಗೊತ್ತಾಗಿಲ್ಲ. ಅದಾಗಿ ಎರಡು ದಿನಗಳ ಬಳಿಕ ಶನಿವಾರ ಭಾರತದತ್ತ ಬರುತ್ತಿದ್ದ ಹಡಗಿನ ಮೇಲೆ ಡ್ರೋಣ್ ದಾಳಿ ನಡೆದಿದ್ದು, ಇದನ್ನು ಯಾರು ಮಾಡಿದ್ದಾರೆಂದು ಹೊಣೆ ಹೊತ್ತುಕೊಂಡಿಲ್ಲ. ಇಸ್ರೇಲ್ ಮೂಲದ ಹಡಗು ಅನ್ನುವ ಕಾರಣಕ್ಕೆ ಉಗ್ರ ಸಂಘಟನೆಗಳು ಈ ಕೆಲಸ ಮಾಡಿವೆಯೇ ಎನ್ನುವ ಶಂಕೆಯೂ ಇದೆ.

ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

Posted by Vidyamaana on 2023-06-12 10:26:23 |

Share: | | | | |


ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೇವೆ ನಮಗೊಂದು ಮೂರು ಸೆಂಟ್ಸ್ ಜಾಗ ಕೊಡಿ ಎಂದು ಅನೇಕ ಅರ್ಜಿಗಳು ಗ್ರಾಮೀಣ ಭಾಗದಿಂದ ಬಂದಿದ್ದು ಪ್ರತೀ ಗ್ರಾಮದಲ್ಲಿ ಎರಡರಿಂದ ಮೂರು ಎಕ್ರೆ ಜಾಗ ಗುರುತಿಸಿ ಅದನ್ನು ಮನೆ ಇಲ್ಲದ ಬಡವರಿಗೆ ಹಂಚಿಕೆ ಮಾಡುವಲ್ಲಿ ಕ್ರಮಕೈಗೊಳ್ಳಲಿದ್ದೇನೆ ಈ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದು ಈಗಾಗಲೇ ಜಾಗ ಹುಡಕುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

ಕೆಯ್ಯೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಎ ಕೆ ಜಯರಾಮ ರೈ ಅವರ ನಿವಾಸದಲ್ಲಿ ಜೂ. ೧೨ ರಂದು ನಡೆದ ಕೆಯ್ಯೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬೂತ್ ಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ. ಅಭಿವೃದ್ದಿ ಕೆಲಸ ನಾನು ಮಾಡುತ್ತೇನೆ ಅದನ್ನು ಪ್ರಚಾರ ಮಾಡುವ ಮತ್ತು ಇದು ಕಾಂಗ್ರೆಸ್ ಸರಕಾರ ಮಾಡಿದ ಕೆಲಸ ಎಂಬುದನ್ನು ಗ್ರಾಮದ ಮನೆಮನೆಗೂ ತಲುಪಿಸುವ ಕೆಲಸವನ್ನು ಎಲ್ಲಾ ಕಾರ್ಯಕರ್ತರು ಮಾಡಬೇಕು. ಬಾಕಿ ಇರುವ ೯೪ ಸಿ, ಅಕ್ರಮಸಕ್ರಮ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಲಿದ್ದು ಗ್ರಾಮಗಳಲ್ಲಿ ಅರ್ಜಿಗಳು ಬಾಕಿ ಇರುವ ಫಲಾನುಭವಿಗಳು ಸ್ಥಳೀಯ ವಲಯ ಮತ್ತು ಬೂತ್ ಅಧ್ಯಕ್ಷರನ್ನು ಸಂಪರ್ಕಿಸಿ ಅವರಲ್ಲಿ ಮಾಹಿತಿ ನೀಡಬೇಕು. ಪಕ್ಷ ಬೇದವಿಲ್ಲದೆ ಎಲ್ಲರ ಅರ್ಜಿಗಳನ್ನು ನಯಾ ಪೈಸೆ ಲಂಚವಿಲ್ಲದೆ ಮಾಡಿಕೊಡುತ್ತೇನೆ ಎಂದು ಹೇಳಿದ ಅವರು ವಲಯ ಮತ್ತು ಬೂತ್ ಅಧ್ಯಕ್ಷರ ಮೂಲಕವೇ ಫಲಾನುಭವಿಗಳು ಕಡತಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚನೆಯನ್ನು ನೀಡಿದರು.

ಮುಂದಿನ ದಿನಗಳಲ್ಲಿ ಪ್ರತೀ ಬೂತ್ , ವಲಯ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಅಭಿವೃದ್ದಿ ಕೆಲಸಗಳು ಏನಾಗಬೇಕು ಎಂಬುದರ ಬಗ್ಗೆ ಮಾಹಿತಿ ನೀಡುವ ಕೆಲಸವನ್ನು ವಲಯಾಧ್ಯಕ್ಷರುಗಳು ಮಾಡಬೇಕು.ಕಟ್ಟಕಡೇಯ ಕಾರ್ಯಕರ್ತನಿಗೂ ಸರಕಾರದ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಜನರ ಶಾಸಕ. ಬೇರೆ ಪಕ್ಷದ ಕಾರ್ಯಕರ್ತರು ಅರ್ಜಿಯನ್ನು ನೀಡಿದರೂ ಅದನ್ನು ಸ್ವೀಕರಿಸಬೇಕು ಅಭಿವೃದ್ದಿಯಲ್ಲಿ ರಾಜಕೀಯ ಮಾಡಬಾರದು. ಅಭಿವೃದ್ದಿ ಮತ್ತು ಜನರ ಸೇವೆ ಮಾಡುವ ಮೂಲಕ ನಾವು ಪಕ್ಷವನ್ನು ಗಟ್ಟಿಗೊಳಿಸಬೇಕು. ಮುಂದಿನ ೨೫ ವರ್ಷಗಳ ಕಾಲ ಪುತ್ತೂರಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರೇ ಇರುವಲ್ಲಿ ನಾವು ಈಗಲೇ ತಯಾರಿ ಮಾಡಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಿದರು.

ಬೂತ್ , ವಲಯ ಅಧ್ಯಕ್ಷರಿಗೆ ಶಕ್ತಿ ಬಂದಿದೆ: ಹೇಮನಾಥ ಶೆಟ್ಟಿ

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾದ ಮೇಲೆ ಇಲಾಖೆಗಳಲ್ಲಿ ಅಭೂತಪೂರ್ವ ಬದಲಾವಣೆ ಆರಂಭವಾಗಿದೆ. ಲಂಚವಿಲ್ಲದೆ ಅಧಿಕಾರಿಗಳು ಕೆಲಸ ಮಾಡಲು ಆರಂಭಿಸಿದ್ದಾರೆ ಇದು ಒಳ್ಳೆಯ ಬೆಳವಣಿಗೆಯಾಗಿದೆ. ಬೂತ್ ಮತ್ತು ವಲಯ ಅಧ್ಯಕ್ಷರಿಗೆ ಶಾಸಕರು ಶಕ್ತಿ ತುಂಬುವ ಕೆಲಸವನ್ನು ಶಾಸಕರು ಮಾಡುತ್ತಿದ್ದು ಇದರಿಂದ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ಬಂದಿದೆ. ಇದೇ ಕಾರ್ಯ ಎಂದೆಂದೂ ಮುಂದುವರೆಯಬೇಕಿದೆ ಎಂದು ಹೇಳಿದರು. ಅಭಿವೃದ್ದಿ ವಿಚಾರದಲ್ಲಿ ಒಲವು ಮತ್ತು ಪಕ್ಷಾತೀತವಾಗಿ ಎಲ್ಲರನ್ನೂ ಒಗ್ಗೂಡಿಸಿ ಕೊಂಡೊಯ್ಯುವ ಶಕ್ತಿ ಶಾಸಕರಲ್ಲಿದೆ ಎಂದು ಹೇಳಿದರು.

ಏನೂ ಇರಲಿಲ್ಲ ಈಗ ಶಕ್ತಿ ಬಂದಿದೆ: ಎಂ ಬಿ

ಮೊನ್ನೆಯ ತನಕ ನಮಗೆ ಯಾವುದೇ ಶಕ್ತಿ ಇರಲಿಲ್ಲ, ಅಶೋಕ್ ರೈ ಕಾಂಗ್ರೆಸ್ ಶಾಸಕರಾಗಿ ಅಯ್ಕೆಯಾದ ಬಳಿಕ ನಮಗೆ ಶಕ್ತಿ ಬಂದಿದೆ. ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಎಲ್ಲೆಲ್ಲೂ ಗೌರವ ಸಿಗುತ್ತಿದೆ. ನಮ್ಮದೇ ಸರಕಾರ ರಾಜ್ಯದಲ್ಲಿದೆ. ಕಾರ್ಯಕರ್ತರು ಧೈರ್ಯವಾಗಿ ಇಂದು ಮಾತನಾಡುವ ವಾತಾವರಣ ನಿರ್ಮಾಣವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಹೇಳಿದರು. ಮುಂದಿನ ದಿನಗಳಲ್ಲಿ ಅಭಿವೃದ್ದಿಯ ಜೊತೆಗೆ ಪಕ್ಷವನ್ನು ಕಟ್ಟುವ ಕೆಲಸವನ್ನು ಎಲ್ಲರೂ ಜೊತೆಯಾಗಿ ಮಾಡಬೇಕಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಅಮಲರಾಮಚಂದ್ರ, ಫಾರೂಕ್ ಬಾಯಬ್ಬೆ, ದಾಮೋದರ ಪೂಜರಿ,  ಕಾಂಗ್ರೆಸ್ ಮುಖಂಡರುಗಳಾದ ಸಂತೋಷ್ ರೈ ಇಳಂತಜೆ, ಮೌರಿಶ್ ಮಸ್ಕರೇನಸ್, ಬಟ್ಯಪ್ಪ ರೈ ದೇರ್ಲ, ಗ್ರಾಪಂ ಸದಸ್ಯ ಹನೀಫ್ ಕೆ ಎಂ, ಅಬ್ದುಲ್ ಖಾದರ್ ಮೇರ್ಲ, ವಿಶ್ವನಾಥ ಪೂಜಾರಿ, ಜಗನ್ನಾಥ ಶೆಟ್ಟಿ ನೆಲ್ಲಿಕಟ್ಟೆ, ಗ್ರಾಪಂ ಸದಸ್ಯರಿಗಳಾದ ಜಯಂತ ಪುಜಾರಿ, ಸೇಸಪ್ಪ, ಅಮಿತಾ, ಸೇದು ನಾಯರ್, ಬೋಳೋಡಿ ಚಂದ್ರಹಾಸ ರೈ, ಶೀನಪ್ಪ ರೈ, ಆದರ್ಶ ರೈ ಕೆಯ್ಯೂರು, ಪುರಂದರ್ ರೈ ನಿಶ್ಮಿತಾ, ಮೆಲ್ವಿನ್ ಮೊಂತೆರೋ ಕುಂಬ್ರ, ಲ್ಯಾನ್ಸಿ ಮಸ್ಕರೇನಸ್ ಪುತ್ತೂರು ಮೊದಲಾದವರು ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಅಧ್ಯಕ್ಷ ಎಕೆ ಜಯರಾಮ ರೈ ಸ್ವಾಗತಿಸಿ ವಂದಿಸಿದರು.  ದಾಮೋದರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

ಪುತ್ತೂರಿಗೆ ಬಂತುMost Expected ಹ್ಯುಂಡೈ ಎಕ್ಸ್ ಟರ್

Posted by Vidyamaana on 2023-07-14 06:18:39 |

Share: | | | | |


ಪುತ್ತೂರಿಗೆ ಬಂತುMost Expected  ಹ್ಯುಂಡೈ ಎಕ್ಸ್ ಟರ್

ಪುತ್ತೂರು: ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) ತನ್ನ ಬಹುನಿರೀಕ್ಷಿತ ಹ್ಯುಂಡೈ ಎಕ್ಸ್‌ಟರ್ (Hyundai Exter) ಮೈಕ್ರೋ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಕಾರನ್ನು ಪುತ್ತೂರಿನ ಜನರಿಗೆ ಪರಿಚಯಿಸುವ ಹಿನ್ನೆಲೆಯಲ್ಲಿ ಜುಲೈ 14 ಶುಕ್ರವಾರ ಸಂಜೆ  4 ಗಂಟೆಗೆ ದರ್ಬೆಯಲ್ಲಿರುವ ಕಾಂಚನ‌ ಹುಂಡೈ ಶೋರೂಂನಲ್ಲಿ ಖ್ಯಾತ ಯೂಟ್ಯೂಬರ್ ಧನ್ರಾಜ್ ಆಚಾರ್ ಬಿಡುಗಡೆಗೊಳಿಸಲಿದ್ದಾರೆ.

ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.5,99,900 ಆಗಿದೆ. ಈ ಹೊಸ ಹ್ಯುಂಡೈ ಎಕ್ಸ್‌ಟರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಪಂಚ್, ಸಿಟ್ರನ್ ಸಿ3 ಮತ್ತು ಮಾರುತಿ ಇಗ್ನಿಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಇತ್ತೀಚೆಗೆ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಹ್ಯುಂಡೈನ ಘಟಕದಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಲಾಗಿದೆ. ಹೊಸದಾಗಿ ಬಿಡುಗಡೆಯಾದ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿ ಕುರಿತು ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು ಇಲ್ಲಿದೆ.


ಬೆಲೆ ರೂಪಾಂತರಗಳು: ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ-ಎಸ್‌ಯುವಿಯು EX , EX(O) , S , S (O) , SX , SX(O), ಮತ್ತು SX(O) Connect ಎಂಬ 7  ಟ್ರಿಮ್ ಹಂತಗಳಲ್ಲಿ ಹೊಸ ಹ್ಯುಂಡೈ ಎಕ್ಸ್‌ಟರ್ ಮೈಕ್ರೋ ಎಸ್‌ಯುವಿಯ ಆರಂಭಿಕ ಬೆಲೆಯು ರೂ.5,99,900 ಆದರೆ, ಇದರ ಟಾಪ್ ಸ್ಪೆಕ್ ಮಾದರಿಗೆ ರೂ.9.31,990 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.ಎಂಜಿನ್: ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನಲ್ಲಿ 1.2-ಲೀಟರ್, 4-ಸಿಲಿಂಡರ್ ಎಂಜಿನ್‌ನೊಂದಿಗೆ ಬಂದಿದೆ. ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯನಿರ್ವಹಿಸುತ್ತದೆ. ಪೆಟ್ರೋಲ್ ರೂಪದಲ್ಲಿ, ಹುಂಡೈ ಎಕ್ಸ್‌ಟರ್‌ನ ಎಂಜಿನ್ 83 bhp ಪವರ್ ಮತ್ತು 114 Nm ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.ಎಕ್ಸ್‌ಟರ್ ಕಾರಿನ CNG ಆವೃತ್ತಿಯು 69bhp ಪವರ್ ಮತ್ತು 95 Nm ನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಕ್ಸ್‌ಟರ್ ಪೆಟ್ರೋಲ್ ಅನ್ನು 5-ಸ್ಪೀಡ್ ಮ್ಯಾನುವಲ್ ಅಥವಾ ಎಎಮ್‌ಟಿ ಗೇರ್‌ಬಾಕ್ಸ್‌ನೊಂದಿಗೆ ನೀಡಲಾಗುತ್ತದೆ. ಆದರೆ ಸಿಎನ್‌ಜಿ ಆವೃತ್ತಿಯಲ್ಲಿ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್‌ನೊಂದಿಗೆ ಮಾತ್ರ ನೀಡಲಾಗಿದೆ. ಎಕ್ಸ್‌ಟರ್ ಪೆಟ್ರೋಲ್ ಮಾದರಿಯು 19.4 ಕಿ.ಮೀ ಮೈಲೇಜ್ ನೀಡಿದರೆ, AMT ಮಾದರಿ 19.2 ಕಿ.ಮೀ ಮೈಲೇಜ್ ನೀಡುತ್ತದೆ.ಇನ್ನು CNG ಆವೃತ್ತಿಯು 27.1 ಕಿ.ಮೀ ಮೈಲೇಜ್ ನೀಡುತ್ತದೆ.


ವಿನ್ಯಾಸ:ಈ ಹೊಸ ಹ್ಯುಂಡೈ ಎಕ್ಸ್‌ಟರ್ ಕಾರಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕಾರಿನ ಮುಂಭಾಗ ಪ್ಯಾರಾಮೆಟ್ರಿಕ್ ಫ್ರಂಟ್ ಗ್ರಿಲ್, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಕ್ಲಾಮ್‌ಶೆಲ್ ಬಾನೆಟ್ ಮತ್ತು ಎಚ್ ಆಕಾರದ ಎಲ್‌ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿವೆ. ಇನ್ನು ಈ ಮೈಕ್ರೋ ಎಸ್‍ಯುವಿಗೆ ಸುಲಭವಾಗಿ ಪ್ರವೇಶಿಸಲು ಮತ್ತು ಹೊರಬರಲು ಡೋರುಗಳು ವಿಶಾಲವಾಗಿ ತೆರೆದುಕೊಳ್ಳುತ್ತವೆ.ಬಣ್ಣಗಳ ಆಯ್ಕೆ: ಹ್ಯುಂಡೈ ಎಕ್ಸ್‌ಟರ್ ಕಾರ 6 ಮೊನೊಟೋನ್ ಮತ್ತು 3 ಡ್ಯುಯಲ್-ಟೋನ್ ಬಾಹ್ಯ ಬಣ್ಣ ಆಯ್ಕೆಗಳಲ್ಲಿ ನೀಡುತ್ತಿದೆ. ಈ ಬಣ್ಣದ ಆಯ್ಕೆಗಳಲ್ಲಿ, ರೇಂಜ್ ಕಾಫಿ ಮತ್ತು ಕಾಸ್ಮಿಕ್ ಬ್ಲೂ ಬಣ್ಣದ ಆಯ್ಕೆಗಳು ಹೊಸದಾಗಿ ಪರಿಚಯಿಸಲಾಗಿವೆ. ಗ್ರಾಹಕರು ತಮ್ಮ ಮೆಚ್ಚಿನ ಬಣ್ಣದ ಮಾದರಿಯನ್ನು ಆಯ್ಕೆ ಮಾಡಿಕೊಳ್ಳಬಹುದು.


ಫಿಚರ್ಸ್: ಈ ಎಕ್ಸ್‌ಟರ್ ಕಾರಿನಲ್ಲಿ ಕೆಲವು ವಿಭಾಗ-ಮೊದಲ ಫೀಚರ್ಸ್ ಗಳಲ್ಲಿ, ಅಂತರ್ನಿರ್ಮಿತ ಡ್ಯಾಶ್‌ಕ್ಯಾಮ್, ಶಾರ್ಕ್ ಫಿನ್ ಆಂಟೆನಾ, ಫುಟ್‌ವೆಲ್ ಲೈಟಿಂಗ್, ಪ್ಯಾಡಲ್ ಶಿಫ್ಟರ್‌ಗಳು, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ಆನ್‌ಬೋರ್ಡ್ ನ್ಯಾವಿಗೇಷನ್ ಮತ್ತು ಹೆಚ್ಚಿನವು ಸೇರಿವೆ. ಇತರ ಗಮನಾರ್ಹ ವೈಶಿಷ್ಟ್ಯಗಳೆಂದರೆ 4.2-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, Apple CarPlay ಮತ್ತು Android Auto ಜೊತೆಗಿನ 8-ಇಂಚಿನ ಇನ್ಫೋಟೈನ್‌ಮೆಂಟ್ ಯೂನಿಟ್ ಅನ್ನು ಹೊಂದಿದೆ.


ಇದರೊಂದಿಗೆ ಪುಶ್-ಬಟನ್ ಸ್ಟಾರ್ಟ್, ಕೂಲ್ಡ್ ಗ್ಲೋವ್‌ಬಾಕ್ಸ್, ಹಿಂಭಾಗದ AC ವೆಂಟ್‌ಗಳು ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಅನ್ನು ಹೊಂದಿದೆ. ಈ ಮಾದರಿಯು ಡ್ರೈವರ್, ಪ್ಯಾಸೆಂಜರ್, ಕರ್ಟನ್ ಮತ್ತು ಸೈಡ್ ಏರ್‌ಬ್ಯಾಗ್‌ಗಳು ಸೇರಿದಂತೆ ಆರು ಏರ್‌ಬ್ಯಾಗ್‌ಗಳನ್ನು ಹೊಂದಿರುವ ದೇಶದ ಮೊದಲ ಸಬ್-ಫೋರ್-ಮೀಟರ್ ಎಸ್‌ಯುವಿ ಆಗಲಿದೆ. ಒಟ್ಟಾರೆಯಾಗಿ, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), VSM ಮತ್ತು HAC (ಹಿಲ್ ಅಸಿಸ್ಟ್ ಕಂಟ್ರೋಲ್) ಸೇರಿದಂತೆ 26 ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ.

ಹೆಚ್ಚಿನ ವಿವರ /ಮಾಹಿತಿಗಾಗಿ ಸಂಪರ್ಕಿಸಿ.....

RANJITH

Branch Manager

+91 97408 73450

Afwan

Sales Consultant M +91 9480389310

Kanchana Automobiles Private Limited. Opp St. Philomena School, Darbe, Puttur-574201 www.kanchana.hyundaimotor.in Hyundai Helpline :1800-1024645, 1800-114645



Leave a Comment: