Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2024-05-27 16:35:55 |
ಬೆಂಗಳೂರು : ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದೆಲ್ಲೆಡೆ ಕಿಡಿ ಹೊತ್ತಿದ ನಂತರ ಒಂದು ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ಈ ಕುರಿತು ವಿಡಿಯೋ ರಿಲೀಸ್ ಮಾಡಿರುವ ಪ್ರಜ್ವಲ್, ಮೇ 31ಕ್ಕೆ ಎಸ್ಐಟಿ ತನಿಖೆಗೆ ಬರುವುದಾಗಿ ಖುದ್ದು ಹೇಳಿದ್ದಾರೆ.ಇನ್ನು ಪ್ರಕರಣ ಸಂಬಂಧ ಮಾತನಾಡುತ್ತಾ ರಾಜ್ಯದ ಹಾಗೂ ಜೆಡಿಎಸ್ ಕಾರ್ಯಕರ್ತರ ಕ್ಷೆಮೆಯಾಚಿಸಿದ್ದಾರೆ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೇ ಕೆಲ ಶಕ್ತಿಗಳು ನನ್ನ ವಿರುದ್ಧ ಈ ರೀತಿ ಪಿತೂರಿ ಮಾಡಿದ್ದಾರೆ. ಹೀಗಾಗಿ ಎಲ್ಲರ ಕ್ಷಮೆ ಕೇಳುವೆ ಎಂದಿದ್ದಾರೆ.
Posted by Vidyamaana on 2023-05-15 02:54:52 |
ಪುತ್ತೂರು : ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು., ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ., ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.ಅಷ್ಟೇ ಅಲ್ಲದೇ ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದೆ.
ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ.
Posted by Vidyamaana on 2023-11-05 16:41:27 |
ನವದೆಹಲಿ: ಸ್ವಂತ ಮನೆ ಕಟ್ಟುವುದು ಎಲ್ಲರ ಕನಸು. ಆದರೆ ಹಲವರಿಗೆ ಕನಸಾಗಿಯೇ ಉಳಿದಿದೆ. ಯಾಕೆಂದರೆ.. ಜಾಗ ದುಬಾರಿ, ಇಂತಹ ಪರಿಸ್ಥಿತಿಯಲ್ಲಿ ಕೆಲವರು ಚಿಕ್ಕ ಜಾಗದಲ್ಲಿಯೂ ಅದ್ಭುತವಾದ ಮನೆ ಕಟ್ಟುತ್ತಾರೆ. ಇಷ್ಟು ಚಿಕ್ಕ ಪ್ರದೇಶದಲ್ಲಿ ಮನೆ ನಿರ್ಮಾಣ ಎಷ್ಟು ಚೆನ್ನಾಗಿ ನಡೆದಿದೆ ಎಂದು ಯೋಚಿಸಿದರೆ ನೋಡುಗರಿಗೂ ಆಶ್ಚರ್ಯವಾಗುತ್ತದೆಯೇ?ಇಂತಹ ಎರಡು ಮನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ.
VIDEO 4 ಅಡಿ ಜಾಗದಲ್ಲಿ ಮೂರು ಅಂತಸ್ತಿನ ಕಟ್ಟಡ; ಇಂಜಿನಿಯರ್ ಎಲ್ಲಿದ್ದೀಯಪ್ಪಾ ಎಂದ ನೆಟ್ಟಿಗರು
ಮೊದಲ ಮನೆ ನಿರ್ಮಾಣವಾಗಿದ್ದು, ಕೇವಲ 4 ಅಡಿ ಜಾಗದಲ್ಲಿ ಮೂರು ಅಂತಸ್ತಿನ ಕಟ್ಟಡ. ಎರಡನೇ ಮನೆ ಎರಡು ಅಂತಸ್ತಿನದ್ದಾಗಿದ್ದು, ಎರಡು ಅಡಿ ಜಾಗದಲ್ಲಿ. ಈ ಕಟ್ಟಡದಲ್ಲಿ ಅಂಗಡಿಗಳನ್ನು ನಿರ್ಮಿಸಲಾಗಿದೆ. ಈ ಕಟ್ಟಡಗಳ ವಿಡಿಯೋ ವೈರಲ್ ಆಗಿದೆ. ಆದರೆ ಈ ಕಟ್ಟಡ ಎಲ್ಲವೆ ಎನ್ನುವ ಮಾಹಿತಿ ಮಾತ್ರ ಖಚಿತವಾದ ಮಾಹಿತಿಲ್ಲ.ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಈ ವಿಶಿಷ್ಟ ಮನೆಯನ್ನು ತೋರಿಸಿ ಹೇಳುತ್ತಾನೆ. ನಾಲ್ಕು ಅಡಿ ಜಾಗದಲ್ಲಿ ಮೂರಂತಸ್ತಿನ ಮನೆ ಕಟ್ಟಿದ್ದಾರೆ. ಇಷ್ಟು ಚಿಕ್ಕ ಜಾಗದಲ್ಲಿ ನಿರ್ಮಿಸಿರುವ ಮನೆಯ ಮೇಲಕ್ಕೆ ಹೋಗಲು ಮೆಟ್ಟಿಲುಗಳೂ ಇವೆ. ಹೊರಗಿನಿಂದ ಬಾಗಿಲೂ ಇದೆ. ಇದೇ ರೀತಿಯ ಇನ್ನೊಂದು ಮನೆಯೂ ಈ ವಿಡಿಯೋದಲ್ಲಿ ಕಾಣಿಸುತ್ತಿದೆ. ಇದು ಅನೇಕ ಜನರನ್ನು ಆಶ್ಚರ್ಯಗೊಳಿಸುತ್ತದೆ. 2 ಅಡಿ ಅಗಲದ ಕಟ್ಟಡದಲ್ಲಿ ಹಲವು ಅಂಗಡಿಗಳೂ ಇವೆ. ಅದರ ಮೇಲೆ ಎರಡು ಅಂತಸ್ತಿನ ಮನೆಯನ್ನೂ ನಿರ್ಮಿಸಲಾಗಿದೆ.
ಈ ಎರಡು ಮನೆಗಳನ್ನು ನೋಡಿ ನೆಟ್ಟಿಗರು ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ. ಅಂತಹ ಕಟ್ಟಡವನ್ನು ನಿರ್ಮಿಸಿದವರು ಯಾರು? ಇಂಜಿನಿಯರ್ ಎಲ್ಲಿದ್ಯಪ್ಪಾ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
Posted by Vidyamaana on 2023-12-29 12:46:12 |
ಮಂಗಳೂರು : ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ದ.ಕ.ಸಂಸದ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು ಸೆಕ್ಷನ್ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ.
ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ -ಮೈಸೂರು ರಸ್ತೆ ಚತುಷ್ಪಥ ಕಾಮಗಾರಿ (ಒಟ್ಟು 71.60 ಕಿ.ಮೀ)ಯ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ 1000 ಕೋಟಿ ರೂ. ಅಧಿಕ ವೆಚ್ಚ ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ತಿಳಿಯಬಹುದೆಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Posted by Vidyamaana on 2023-07-20 02:00:53 |
ಬೆಳ್ತಂಗಡಿ: ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಮರು ತನಿಖೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆದಿರುವುದು, ಧರ್ಮಸ್ಥಳದ ಹೆಸರನ್ನು ಎಳೆದು ತಂದು ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ವೀರೇಂದ್ರ ಹೆಗ್ಗಡೆಯವರು ತಮ್ಮ ವ್ಯಾಪ್ತಿಯ ವಿವಿಧ ಸಂಸ್ಥೆಗಳ ಮುಖ್ಯಸ್ಥರನ್ನು ಕರೆದು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪ್ರಸ್ತುತ ವಿದ್ಯಮಾನಗಳು, ಸೌಜನ್ಯಾ ಕೊಲೆ ಪ್ರಕರಣದ ಹೆಸರಲ್ಲಿ ಕ್ಷೇತ್ರದ ಹೆಸರು ಕೆಡಿಸುತ್ತಿರುವ ವಿಚಾರದ ಬಗ್ಗೆ ಹೆಗ್ಗಡೆ ಮಾತನ್ನಾಡಿದ್ದಾರೆ.
ಕ್ಷೇತ್ರದಲ್ಲಿ 60 ವರ್ಷಗಳಲ್ಲಿ ಬಹಳ ಬದಲಾವಣೆಗಳಾಗಿವೆ. ಹಲವು ಸೇವೆಗಳನ್ನು ಮಾಡಿಕೊಂಡು ಬಂದಿದ್ದೇವೆ. ಒಳ್ಳೆಯ ಕೆಲಸ ಅನ್ನೋದು ಎರಡು ರೀತಿಯ ಕತ್ತಿ ಇದ್ದ ಹಾಗೆ. ಅದು ಎರಡೂ ಕಡೆಯಿಂದ ಕೊಯ್ತದೆ, ಪ್ರಚಾರದ ದೃಷ್ಟಿಯಲ್ಲಿ ಒಳ್ಳೆಯದು ಹಾಗೂ ದ್ವೇಷ ಕೂಡ ಉಂಟು ಮಾಡ್ತದೆ. ನಮಗೆ ಕೋಟ್ಯಾಂತರ ಅಭಿಮಾನಿಗಳ ಬಳಗ ಇದೆ, ಇದರಲ್ಲಿ ಕೆಲವರಿಗೆ ದ್ವೇಷ ಆಗಿದೆ.
ಇದಕ್ಕೆ ದ್ವೇಷ, ಅಸೂಯೆ ಕಾರಣ, ಧರ್ಮಸ್ಥಳದ ಹೆಸರಲ್ಲಿ ಒಳ್ಳೆಯ ಕೆಲಸ ಆಗ್ತಿದೆ ಅಂತ ದ್ವೇಷ ಬೆಳೆಸಿಕೊಂಡಿದ್ದಾರೆ. ಕ್ಷೇತ್ರದ ಸಂಪತ್ತನ್ನ ಹೇಗೆ ಬಳಸ್ತೀವಿ ಅನ್ನೋದ್ರ ಮೇಲೆ ಅದರ ಪರಿಣಾಮ ಇದೆ. ಈಗ ಅವರು ಮಾತನಾಡುವ ವಿಷಯಗಳು ನಮಗೆ ಸಂಬಂಧವೇ ಇಲ್ಲ. ಆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ಮಾಡಲು ಮೊದಲು ಸರ್ಕಾರಕ್ಕೆ ಮೊದಲು ಪತ್ರ ಬರೆದಿದ್ದೇ ನಾನು. ಸಿಬಿಐಗೆ ಒಪ್ಪಿಸಿ ಅಂತ ಮುಖ್ಯಮಂತ್ರಿಗಳಿಗೆ ಹೇಳಿದ್ದು ನಾನೇ. ಈಗ ಬೇಕಿದ್ದರೆ ಮತ್ತಷ್ಟು ತನಿಖೆ, ಸಂಶೋಧನೆ ಮಾಡಲಿ, ಅದರಿಂದ ನಮಗೆ ತೊಂದರೆ ಇಲ್ಲ. ಆದರೆ ಕ್ಷೇತ್ರದ ವಿಷಯ ಯಾಕೆ ಎಳೀತಾರೆ ಅಂತ ಗೊತ್ತಾಗ್ತಿಲ್ಲ.
ಇದರ ಹಿಂದೆ ಅಮಾಯಕ ಹುಡುಗಿಯ ಸಾವಿನ ವಿಚಾರ ಇಲ್ಲ, ಕ್ಷೇತ್ರದ ವಿಚಾರ ಇದೆ. ನನಗೆ ಯಾವುದೇ ಭಯ, ಸಂಕೋಚ ಹಾಗೂ ಸಂದೇಹ ಇಲ್ಲ. ಶತ್ರುತ್ವಕ್ಕೆ ಕಾರಣ ಏನು ಅನ್ನೋದೇ ನಮಗೆ ಇರೋ ಸಮಸ್ಯೆ. ನಮ್ಮ ಸಿಬ್ಬಂದಿಗಳಿಗೆ ಇದರ ಹಿಂದಿನ ಸತ್ಯ ಗೊತ್ತಿರಬಹುದು, ಆದರೂ ನಾವು ಯಾಕೆ ಸುಮ್ಮನಿದ್ದೇವೆ ಅಂತ ಅನಿಸಬಾರದು. ನಾವು ಸುಮ್ಮನಿರೋದು ಈ ಕುರಿತು ಪರ- ವಿರೋಧ ಸಂಭಾಷಣೆ ಆರಂಭವಾಗಬಾರದು ಅಂತಷ್ಟೇ. ಅನೇಕರು ಬಂದು ಕಣ್ಣೀರು ಹಾಕ್ತಾ ಇದಾರೆ, ನಿಮಗೆ ಹೀಗಾದರೆ ಹೇಗೆ ತಡೆಯೋದು ಅಂತ. ಈಗ ಪ್ರೀತಿ ಮತ್ತು ದ್ವೇಷ ಯಾರಿಗಿದೆ ಅಂತ ಜನರಿಗೆ ಗೊತ್ತಾಗ್ತಿದೆ.
ನಮ್ಮ ಆತ್ಮ ಮತ್ತು ವ್ಯವಹಾರ ಎಲ್ಲವೂ ಸ್ವಚ್ಛವಾಗಿದೆ. ಗುಬ್ಬಿಗೆ ಬ್ರಹ್ಮಾಸ್ತ್ರ ಬಿಡುವ ಅಗತ್ಯವೇ ಇಲ್ಲ. ನೀವೆಲ್ಲಾ ನಿಮ್ಮ ಸಿಬ್ಬಂದಿ ಕರೆದು ಈ ಬಗ್ಗೆ ಗಟ್ಟಿಯಾಗಿ ಹೇಳಬೇಕಾಗಿದೆ. ಧರ್ಮಸ್ಥಳದ ಸಿಬ್ಬಂದಿಯ ಕಾರಣಕ್ಕೆ ಇಲ್ಲಿ ಎಲ್ಲವೂ ಚೆನ್ನಾಗಿದೆ. ಸುಸ್ಥಿತಿಯಲ್ಲಿದೆ. ನಮ್ಮ ಒಳ್ಳೆಯ ಕಾರ್ಯಗಳು ಯಾವತ್ತೂ ನಡೆದುಕೊಂಡು ಹೋಗುತ್ತೆ, ಇದು ಮಧ್ಯದಲ್ಲಿ ಬಂದ ಮೋಡವಷ್ಟೇ. ಈ ಪರದೆ ತೆಗೀಬೇಕು, ಅದನ್ನ ದೇವರು ತೆಗೀತಾನೆ. ನಿಮ್ಮ ಶಿಸ್ತು ಮತ್ತು ನಿಯಮ ಬಿಡಬೇಡಿ, ನನಗೆ ಯಾವ ಭಯವೂ ಇಲ್ಲ. ನಾವು ಯಾರಿಗೂ ಯಾವ ಅನ್ಯಾಯಕ್ಕೂ ಸಹಕಾರ ಕೊಡಲ್ಲ.
ವೈಯಕ್ತಿಕ ಅವಮಾನ ಮತ್ತು ವೈಯಕ್ತಿಕ ಆರೋಪ ಸರಿಯಲ್ಲ, ಅದನ್ನು ನಿಲ್ಲಿಸಬೇಕು. ನಮ್ಮ ಅಭಿಮಾನಿಗಳು ರೆಡಿ ಇದ್ದಾರೆ, ಏನಾದ್ರೂ ಮಾಡಲಿಕ್ಕೆ. ಆದರೆ ನಾನು ಏನೂ ಮಾಡಬೇಡಿ ಅಂದಿದ್ದೇನೆ, ನೈತಿಕ ಶಕ್ತಿ ದೊಡ್ಡದು ಅಂದಿದ್ದೇನೆ ಎಂದು ವಿವರವಾಗಿ ಮಾತನಾಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಧರ್ಮಸ್ಥಳದ ಹೆಸರೆತ್ತಿ ಆರೋಪ ಮಾಡಿರುವುದು ತೀವ್ರ ಸಂಚಲನ ಮೂಡಿಸಿದೆ. ಈಗ ಧರ್ಮಾಧಿಕಾರಿ ಹೆಗ್ಗಡೆಯವರೇ ಸ್ಪಷ್ಟನೆಯ ಮೂಲಕ ಸಿಬಂದಿಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ.
Posted by Vidyamaana on 2023-09-05 08:36:08 |
ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಗುರುವಂದನೆ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್ ಒದಗಿಸಿದೆ.
ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.
ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್ಲೈನ್ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.