ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

Posted by Vidyamaana on 2023-07-10 16:41:37 |

Share: | | | | |


ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

ಚಿಕ್ಕಮಗಳೂರು: ಜಿನುಗು ಮಳೆಯ ನಡುವೆಯೇ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರತಿನಿತ್ಯವೂ ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರವಾಸಿಗರು ರಸ್ತೆಗಳ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ.

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ-ಕೇಳೋರಿಲ್ಲ ಎಂಬಂತಾಗಿದ್ದು, ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಪ್ರವಾಸಿಗರು ಮುಂದಾಗಿದ್ದಾರೆ. ಈ ಭಾಗದಲ್ಲಿ ಮೊದಲೇ ಕಿರಿದಾದ ರಸ್ತೆಗಳು ಇದ್ದು, ವಾಹನ ಸವಾರರಿಗೆ ಇಕ್ಕಟ್ಟು ಆದಂತಾಗಿದೆ. ಇಂತಹದ್ದರಲ್ಲೂ ಕೆಲವರು ರಸ್ತೆ ಮಧ್ಯೆಯೆ ಕಾರ್ಗಳನ್ನು ನಿಲ್ಲಿಸಿ ಪುಂಡಾಟ ಮೆರೆಯುವ ಮೂಲಕ ಇನ್ನುಳಿದ ವಾಹನ ಸವಾರರಿಗೂ ಕಿರಿಕಿರಿ ಆಗುವಂತೆ ಮಾಡುತ್ತಿದ್ದಾರೆ. ದಟ್ಟ ಮಂಜು ಕವಿದ ದಾರಿಯಲ್ಲಿ ವಾಹನ ಪಾರ್ಕಿಂಗ್ ಮಾಡಿ ಡ್ಯಾನ್ಸ್ ಮಾಡುವ ಭರದಲ್ಲಿ ಇನ್ನುಳಿದ ವಾಹನಗಳಿಗೂ ಅಡ್ಡಲಾಗಿ ನಿಲ್ಲುತ್ತಿದ್ದಾರೆ.

ಇದರಿಂದ ಅಪಾಘಾತ, ಟ್ರಾಫಿಕ್ ಜಾಮ್ಗೂ ಆಹ್ವಾನ ನೀಡಿದಂತಾಗಿದೆ. ಅಷ್ಟೇ ಅಲ್ಲದೆ ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಕೂಡ ಕೆಲವು ಪ್ರವಾಸಿಗರು ಮುಂದಾಗುತ್ತಿದ್ದಾರೆ. ಈ ಹುಚ್ಚಾಟದಿಂದ ಬೇಸತ್ತ ಸ್ಥಳೀಯರು ಜಲಪಾತಗಳ ಬಳಿ ಪೊಲೀಸರು ಬೀಟ್ ಹಾಕುವಂತೆ ಮನವಿ ಮಾಡಿದ್ದಾರೆ.

ಪೊದೆಯಿಂದ ತುಂಬಿದ ರಸ್ತೆ : ಮಹಿಳೆಯಿಂದ ಶಾಸಕರಿಗೆ ದೂರು

Posted by Vidyamaana on 2023-12-14 17:39:51 |

Share: | | | | |


ಪೊದೆಯಿಂದ ತುಂಬಿದ ರಸ್ತೆ : ಮಹಿಳೆಯಿಂದ ಶಾಸಕರಿಗೆ ದೂರು

ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಸಿಂಹವನ- ಆನಂದಾಶ್ರಮ ರಸ್ತೆಯಲ್ಲಿ ಹುಲ್ಲು ಮತ್ತು ಪೊದೆಗಳು ತುಂಬಿ ನಡೆದಾಡಲೂ ಸಾಧ್ಯವಗುತ್ತಿಲ್ಲ ಎಂದು ಸ್ಥಳೀಯ ಮಹಿಳೆಯೋರ್ವರು ಶಾಸಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ್ದು, ಶಾಸಕರು ತಕ್ಷಣವೇ ನಗರಸಭಾ ಆಧಿಕಾರಿಗೆ ಪೊದೆ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದು ಅದರಂತೆ ಪೊದೆ ತೆರವು ಕಾರ್ಯ ನಡೆದಿದೆ.


ಈ ರಸ್ತೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಪೊದೆಗಳು ತುಂಬಿಕೊಂಡಿದ್ದವು. ವಾಹನದಲ್ಲಿ ತೆರಳುವಾಗ ಮತ್ತು ಪಾದಚಾರಿಗಳಿಗೂ ಈ ರಸ್ತೆಯಲ್ಲಿ ನಡೆದಾಡಲು ಕಷ್ಟವಾಗಿತ್ತು. ಈ ಬಗ್ಗೆ ಸ್ಥಳೀಯರು ಅನೇಕ ಬಾರಿ ಸಂಬಂಧಿಸಿದಂದವರಿಗೆ ಮಾಹಿತಿ ನೀಡಿದ್ದರೂ ತೆರವು ಕಾರ್ಯ ನಡೆದಿರಲಿಲ್ಲ. ಇದರಿಂದ ನೊಂದ ಮಹಿಳೆ ಶಸಕರಿಗೆ ಮೊಬೈಲ್ ಕರೆ ಮಡಿ ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ತಕ್ಷಣ ನಗರಸಭೆಗೆ ಶಾಸಕರಾದ ಅಶೋಕ್ ರೈಯವರು ಸೂಚನೆ ನೀಡಿ ಸಿಂಹವನ ಸೇರಿದಂತೆ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿ ಪೊದೆ, ಹುಲ್ಲುಗಳು ತುಂಬಿದ್ದರೆ ಪರಿಶೀಲನೆ ಮಾಡಿ ಅದನ್ನು ತಕ್ಷಣ ತೆರವು ಮಾಡಬೇಕು. ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು, ಶಾಲಾ ಮಕ್ಕಳು ನಡೆದುಕೊಂಡು ಹೋಗುವ ವೇಳೆ ಪೊದೆಗಳಿಂದ ಹಾವುಗಳು ಬರುವ ಸಾಧ್ಯತೆ ಇದ್ದು ತಕ್ಷಣ ಕಾರ್ಯಪೃವೃತ್ತರಾಗಬೇಕೆಂದು ಸೂಚನೆಯನ್ನು ನೀಡಿದ್ದರು.

ಮಳೆಗಾಲದಲ್ಲಿ ರಸ್ತೆ ಬದಿ, ಕೆಲವು ಕಡೆಗಳಲ್ಲಿ ರಸ್ತೆ ಮಧ್ಯೆತನಕವೂ ಹುಲ್ಲು, ಪೊದೆಗಳು ಬೆಳೆಯುತ್ತದೆ, ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ. ರಸ್ತೆ ಬದಿಯಲ್ಲಿರುವ ಪೊದೆಗಳನ್ನು ತೆರವು ಮಾಡುವಂತೆ ನಗರಸಭೆಗೆ ಸೂಚನೆ ನೀಡಿದ್ದೇನೆ, ನಗರಸಭಾ ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲೂ ತೆರವು ಕಾರ್ಯಾಚರಣೆ ನಡೆಯಲಿದೆ.

ಅಶೋಕ್‌ರೈ ಶಾಸಕರು ಪುತ್ತೂರು

ಖರ್ಗೆ ಭೇಟಿಯಾದ ಪುತ್ತೂರು ಶಾಸಕ ಅಶೋಕ್ ರೈ

Posted by Vidyamaana on 2023-05-19 15:46:03 |

Share: | | | | |


ಖರ್ಗೆ ಭೇಟಿಯಾದ ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನು ದೆಹಲಿಯಲ್ಲಿ ಭೇಟಿಯಾದ ಪುತ್ತೂರು ಶಾಸಕ ಅಶೋಕ್ ರೈಯವರು ಖರ್ಗೆ ಜೊತೆ ಮಾತುಕತೆ ನಡೆಸಿದರು. ಪುತ್ತೂರು ಶಾಸಕರಾದ ಬಳಿಕ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ ಅವರು ಖರ್ಗೆ ಸೇರಿದಂತೆ ಹಲವು ಕಾಂಗ್ರೆಸ್ ಪ್ರಮುಖರನ್ನು ಭೇಟಿಯಾದರು.

ಮಂಗಳೂರಿನಲ್ಲಿ ಶಿಲ್ಪಾಸ್ ಹೆಲ್ತ್ ಕೇರ್ ಶುಭಾರಂಭ

Posted by Vidyamaana on 2023-02-22 17:21:42 |

Share: | | | | |


ಮಂಗಳೂರಿನಲ್ಲಿ ಶಿಲ್ಪಾಸ್ ಹೆಲ್ತ್ ಕೇರ್  ಶುಭಾರಂಭ

ಮಂಗಳೂರು, ಫೆ.22; ನಗರದ ರಥಬೀದಿಯ ಹೂವಿನ ಮಾರುಕಟ್ಟೆಯ ಎದುರಿನ ಅನಂತೇಶ್ ಕಟ್ಟಡದ ಒಂದನೇ ಮಹಡಿಯಲ್ಲಿ  ಶಿಲ್ಪಾಸ್ ಹೆಲ್ತ್ ಕೇರ್ ಉದ್ಘಾಟನಾ ಸಮಾರಂಭ ಬುಧವಾರ  ನೆರವೇರಿತು . ಮಾಸ್ಟರ್ ಸಮನ್ವಯ್ ಉರುಬೈಲು ರಿಬ್ಬನ್ ಕತ್ತರಿಸುವ  ಮೂಲಕ   ಉದ್ಘಾಟಿಸಿದರು.   ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಪಿ. ಯಸ್ ದೀಪ ಬೆಳಗಿಸಿ ಶುಭ ಕೋರಿದರು.

ಮಂಗಳೂರು ಮಹಾ ನಗರ ಪಾಲಿಕೆ ಯ ಉಪ ಮೇಯರ್ ಪೂರ್ಣಿಮಾ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,  C. A . ಜಗನ್ನಾಥ್ ಕಾಮತ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಶುಭ ಕೋರಿದರು.

ಸಮಾರಂಭದಲ್ಲಿ  ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕರಾದ ಡಾ ಯು. ಪಿ. ಶಿವಾನಂದ, ಶೋಭಾ ಶಿವಾನಂದ, ಕಮಲ ಮುಡೂರು, ಸುಬ್ರಾಯ ಶೆಣೈ, ಶಾಂತಿ ಶೆಣೈ, ವಿಶ್ವೇಶ್ವರಯ್ಯ ಟೆಕ್ನಿಕಲ್ ಯುನಿವರ್ಸಿಟಿಯ  ಗವರ್ನಿಂಗ್ ಕೌನ್ಸಿಲ್ ಸದಸ್ಯ  ಡಾ. ಉಜ್ವಲ್ ಉರುಬೈಲು, ಸುಜಿತ್ ರೈ ಪಾಲ್ತಾಡು, ಶಿಲ್ಪಾಸ್ ಹೆಲ್ತ್ ಕೇರ್ ನಲ್ಲಿ ಮುಂದಿನ ದಿನಗಳಲ್ಲಿ ಲಭ್ಯರಿರುವ  ಎ. ಜೆ.ಆಸ್ಪತ್ರೆಯ ನ್ಯೂರೋಲೋಜಿಸ್ಟ್  ಡಾ. ಪ್ರದ್ಯುಮ್ನ ಭಂಡಾರಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ದ ಕಾರ್ಯಕಾರಿ ಸಮಿತಿ ಸದಸ್ಯ  ಪಿ. ಬಿ. ಹರೀಶ್ ರೈ,  ದ.ಕ .ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್ ಮೊದಲಾದವರು ಉಪಸ್ಥಿತರಿದ್ದರು. ಶಿಲ್ಪಾಸ್ ಹೆಲ್ತ್ ಕೇರ್ ನ ಡಾ. ಶಿಲ್ಪಾ ಶೆಣೈ ಸ್ವಾಗತಿಸಿ ವಂದಿಸಿದರು, ಶ್ರೇಯಸ್ ಊರುಬೈಲು ಸಹಕರಿಸಿದರು, ಭಾಸ್ಕರ್ ರೈ ಕಟ್ಟ ನಿರೂಪಿಸಿದರು.

ಹತ್ಯೆಗೀಡಾದ ದೀಪಕ್- ಫಾಝಿಲ್ ಸೇರಿ 6 ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ:ಸಿಎಂ

Posted by Vidyamaana on 2023-06-19 08:46:24 |

Share: | | | | |


ಹತ್ಯೆಗೀಡಾದ ದೀಪಕ್- ಫಾಝಿಲ್ ಸೇರಿ 6 ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ:ಸಿಎಂ

ಬೆಂಗಳೂರು, ಜೂನ್ 19: ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.


ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಹತ್ಯೆಗೀಡಾದ ಮಸೂದ್, ಮಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ ಹಾಗೂ ದೀಪಕ್ ರಾವ್, ಮಂಡ್ಯದ ಇದ್ರೀಸ್ ಪಾಶಾ, ನರಗುಂದದ ಶಮೀರ್ ಕುಟುಂಬದವರಿಗೆ 25 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.


ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್  ಕುಮಾರ್ ರೈ ಸಚಿವರಾದ ಚೆಲುವರಾಯಸ್ವಾಮಿ, ಝಮೀರ್ ಅಹಮದ್ ಖಾನ್, ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

BREAKING : ಇನ್ಮುಂದೆ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ

Posted by Vidyamaana on 2024-02-21 16:50:51 |

Share: | | | | |


BREAKING : ಇನ್ಮುಂದೆ ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ

ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.

ಏನಿದೆ ತಿದ್ದುಪಡಿ ಆದೇಶದಲ್ಲಿ..?

ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ.ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ.


ಮುಂದುವರೆದು ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂಬುದರ ಬದಲಾಗಿ “(ಇ) ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು” ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಆದೇಶಿಸಿದೆ.ಸ್ಪಷ್ಟನೆ ನೀಡಿದ ಸಚಿವರು


ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಈ ಮೊದಲು ಆದೇಶ ಹೊರಡಿಸಿತ್ತು, ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ ನೀಡಿದ್ದರು.

ಇದು ಪ್ರಿಂಟ್ ಮಿಸ್ಟೇಕ್ ಆಗಿದೆ. ಇದನ್ನು ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಎಂದು ಬದಲಾವಣೆ ಮಾಡಿ ಸರ್ಕಾರ ಮರು ಆದೇಶ ಹೊರಡಿಸಲಿದೆ. ಸಣ್ಣ ತಪ್ಪಿನಿಂದ ಗೊಂದಲ ಆಗಿದೆ.ಎಲ್ಲವನ್ನು ಸರಿ ಮಾಡಿ ಆದೇಶ ಹೊರಡಿಸುತ್ತೇವೆ ಎಂದಿದ್ದರು.



Leave a Comment: