ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸುದ್ದಿಗಳು News

Posted by vidyamaana on 2024-07-05 17:03:24 |

Share: | | | | |


ಎಫ್‌ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ಇಂದು ವಜಾಗೊಳಿಸಿದೆ.

ಎರಡು ಪ್ರಕರಣವನ್ನು ರದ್ದು ಕೋರಿ ಹಾಕಿದ ಅರ್ಜಿಯ ಬಗ್ಗೆ ಜೂ. 5 ರಂದು(ಇಂದು) ಬೆಂಗಳೂರಿನ ಹೈಕೋರ್ಟ್ ನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ ಹಾಗೂ ಈ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಪ್ರದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

 Share: | | | | |


ಹಾವು ಕಡಿದಾಗ ಬಾಯಲ್ಲಿ ಕಚ್ಚಿ ವಿಷ ಹೀರದಿರಿ | ಎಚ್ಚರೆಚ್ಚರ, ಕೆಯ್ಯೂರು ಘಟನೆಯ ಅನುಕರಣೆ ಬೇಡ | ವೈದ್ಯರ ಎಚ್ಚರಿಕೆ ಮಾತು ಇಲ್ಲಿದೆ ಓದಿ

Posted by Vidyamaana on 2023-03-22 17:49:05 |

Share: | | | | |


ಹಾವು ಕಡಿದಾಗ ಬಾಯಲ್ಲಿ ಕಚ್ಚಿ ವಿಷ ಹೀರದಿರಿ | ಎಚ್ಚರೆಚ್ಚರ, ಕೆಯ್ಯೂರು ಘಟನೆಯ ಅನುಕರಣೆ ಬೇಡ | ವೈದ್ಯರ ಎಚ್ಚರಿಕೆ ಮಾತು ಇಲ್ಲಿದೆ ಓದಿ

ಪುತ್ತೂರು: ಹಾವು ಕಡಿದಾಕ್ಷಣ ಏನು ಮಾಡಬೇಕು? ಹೆಚ್ಚಾಗಿ ಯಾರಿಗೂ ತಿಳಿದಿಲ್ಲ. ಆದ್ದರಿಂದ ನೇರವಾಗಿ ಆಸ್ಪತ್ರೆಗೋ, ಉರಗ ತಜ್ಞರಲ್ಲಿಗೋ ಕರೆದೊಯ್ಯುತ್ತಾರೆ. ಇವೆರಡನ್ನು ಬಿಟ್ಟು, ಸ್ವತಃ ಪ್ರಥಮ ಚಿಕಿತ್ಸೆ ನೀಡುವ ಸಾಹಸಕ್ಕೂ ಕೆಲವರು ಮುಂದಾಗುತ್ತಾರೆ.

ದಯವಿಟ್ಟು ಗಮನಿಸಿ! ಇಂತಹ ತಪ್ಪೊಂದನ್ನು ಅಪ್ಪಿತಪ್ಪಿಯೂ ಮಾಡಬೇಡಿ.

ಹಿಂದಿನ ಕಾಲದಲ್ಲಿ ನಾಟಿ ವೈದ್ಯರು ಹಾವು ಕಡಿತಕ್ಕೆ ಚಿಕಿತ್ಸೆ ನೀಡುತ್ತಿದ್ದರು. ತೀರಾ ವಿಕೋಪಕ್ಕೆ ಹೋದ ಸಂದರ್ಭಗಳಲ್ಲೂ, ರೋಗಿಗಳು ಹುಷಾರಾಗಿದ್ದ ನಿದರ್ಶನಗಳನ್ನು ನಾವು ಕೇಳಿದ್ದೇವೆ. ಆದರೆ, ಅವರು ಯಾವ ರೀತಿ ಚಿಕಿತ್ಸೆ ನೀಡುತ್ತಿದ್ದರು ಎನ್ನುವುದು ನಮಗೆ ತಿಳಿದಿದೆಯೇ? ಖಂಡಿತಾ ಇಲ್ಲ.

ಉರಗ ತಜ್ಞರು ಅಥವಾ ನಾಟಿ ವೈದ್ಯರು, ಹಾವು ಕಡಿತಕ್ಕೆ ಚಿಕಿತ್ಸೆ ನೀಡುವಾಗ ಸಾಕಷ್ಟು ಮುಂಜಾಗ್ರತೆ ಕೈಗೊಳ್ಳುತ್ತಿದ್ದರು. ಇಂದು ವೈದ್ಯರ ಬಳಿಗೆ ಹೋದರೂ, ಅವರು ಮುಂಜಾಗ್ರತಾ ಕ್ರಮ ಕೈಗೊಂಡೇ ಚಿಕಿತ್ಸೆ ನೀಡುತ್ತಾರೆ. ರೋಗಿಯನ್ನು ದಾಖಲು ಮಾಡಿಸಿಕೊಂಡು, ಸಂಬಂಧಿಸಿದ ಇಂಜೆಕ್ಷನ್ ನೀಡುತ್ತಾರೆ. ಸೂಕ್ತ ಚಿಕಿತ್ಸೆ ನೀಡಿ, ರೋಗಿಯನ್ನು ವಿಷದಿಂದ ಮುಕ್ತರನ್ನಾಗಿ ಮಾಡುತ್ತಾರೆ.

ಬಾಯಲ್ಲಿ ವಿಷ ಹೀರಿದರೆ ಏನಾಗುತ್ತೆ?

  ಕೆಯ್ಯೂರು ಘಟನೆಯ ಅನುಕರಣೆ ಬೇಡ,ಹಾವಿನ ವಿಷ ನಮ್ಮ ರಕ್ತಕ್ಕೆ ಸೇರಿದರೆ ಸಾವು ಗ್ಯಾರೆಂಟಿ. ಹಾವು ಕಚ್ಚಿದಾಗ, ಬಾಯಲ್ಲಿ ಕಚ್ಚಿ ಆ ಭಾಗದಿಂದ ರಕ್ತ ಹೀರಿ ತೆಗೆಯಲೇಬಾರದು. ಒಂದು ವೇಳೆ ತೆಗೆದರೆ, ಬಾಯಲ್ಲಿ ಹುಣ್ಣು ಅಥವಾ ಸಣ್ಣ ಗಾಯ ಅಥವಾ ಹಲ್ಲಿನ ವಸಡಿನಲ್ಲಿ ಗಾಯಗಳಿದ್ದರೆ, ವಿಷ ನೇರವಾಗಿ ರಕ್ತಕ್ಕೆ ಸೇರಿಕೊಳ್ಳುತ್ತದೆ. ಅದರಲ್ಲೂ ತಲೆಗೇರುವುದೇ ಹೆಚ್ಚು. ಇದರಿಂದ ಹಾವು ಕಚ್ಚಿದ ವ್ಯಕ್ತಿಗಿಂತಲೂ, ವಿಷವನ್ನು ಹೀರಿದ ವ್ಯಕ್ತಿಯೇ ಬೇಗ ಮೃತಪಡುವ ಸಾಧ್ಯತೆ ಅಧಿಕ ಎನ್ನುತ್ತಾರೆ ಪುತ್ತೂರು ಡಾಕ್ಟರ್ಸ್ ಫಾರಂ  ಅಧ್ಯಕ್ಷ ಡಾ. ಸುರೇಶ್ ಪುತ್ತೂರಾಯ ಅವರು.

ಬಾಲಕಿಗೆ ಪ್ರಶಂಸೆ:

ತಾಯ ಪ್ರಾಣ ಉಳಿಸಲು ಕೆಯ್ಯೂರಿನ ವಿದ್ಯಾರ್ಥಿನಿಗೆ ಅನ್ಯ ದಾರಿ ಕಾಣಲಿಲ್ಲ.  ನಾನು ಕೆಲವು ಸಿನಿಮಾಗಳಲ್ಲಿ ಈ ರೀತಿಯ ಚಿತ್ರಣ ನೋಡಿದ್ದೆ ಅದರಂತೆ ಹಾವು ಕಚ್ಚಿದ ಜಾಗಕ್ಕೆ ಬಾಯಿ ಇಟ್ಟು ರಕ್ತವನ್ನು ಹೀರಿ  ತೆಗೆದಿದ್ದೇನೆ. ಆಕೆಯ ಧೈರ್ಯಕ್ಕೆ ಶಹಬ್ಬಾಶ್ ಹೇಳಲೇಬೇಕು. ಹಾಗೆಂದು, ಇದನ್ನೇ ಇತರರು ಅನುಕರಿಸುವುದು ತಪ್ಪು.

ಕೆಯ್ಯೂರಿನ ಶ್ರಮ್ಯ ಅವರು ಅಪಾಯದಿಂದ ಪಾರಾಗಿದ್ದಾರೆ. ಇದಕ್ಕೆ ಕಾರಣಗಳು ಏನೇ ಇರಬಹುದು. ಆದರೆ, ಇದನ್ನು ಇತರರು ಅನುಸರಿಸಿದರೆ, ಅಪಾಯ ಕಟ್ಟಿಟ್ಟ ಬುತ್ತಿ ಎನ್ನುವುದನ್ನು ಮರೆಯದಿರಿ.

ಮಂಗಳೂರು ಪೊಲೀಸರ ಕಾರ್ಯಾಚರಣೆ

Posted by Vidyamaana on 2023-09-26 20:55:03 |

Share: | | | | |


ಮಂಗಳೂರು ಪೊಲೀಸರ ಕಾರ್ಯಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ನಗರದ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕ್ಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂ‌ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.


ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡ್ರಗ್ಸ್ ದಂಧೆ ವಿರುದ್ಧ ಪೊಲೀಸರಿಂದ ಜಾಗೃತಿ

ನಗರದಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು, ಡ್ರಗ್ಸ್ ಮುಕ್ತ ಮಂಗಳೂರನ್ನಾಗಿಸಲು ಅಖಾಡಕ್ಕಿಳಿದಿದ್ದಾರೆ. ವಿದ್ಯಾರ್ಥಿಗಳು ಕೂಡ ಮಾದಕ ಲೋಕದಲ್ಲಿ ತೇಲಾಡುತ್ತಿರುವುದರಿಂದ ಶಾಲಾ ಕಾಲೇಜುಗಳಲ್ಲಿ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

Posted by Vidyamaana on 2024-06-20 22:16:01 |

Share: | | | | |


ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಜೈಲುಪಾಲಾಗಿರುವಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೋಸ್ ಅವನೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್ ನೀಡಿದೆ.

ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದಂತ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು.

ಹುಬ್ಬಳ್ಳಿ ಠಾಣಾಧಿಕಾರಿ ಮಹಮದ್ ರಫೀಕ್ ರವರಿಗೆ ಕಡ್ಡಾಯ ರಜೆ - ಬಿಎ ಜಾಧವ್ ಪ್ರಭಾರ ಇನ್ಸ್‌ಪೆಕ್ಟರ್‌

Posted by Vidyamaana on 2024-01-04 15:49:45 |

Share: | | | | |


ಹುಬ್ಬಳ್ಳಿ ಠಾಣಾಧಿಕಾರಿ ಮಹಮದ್ ರಫೀಕ್ ರವರಿಗೆ ಕಡ್ಡಾಯ ರಜೆ - ಬಿಎ ಜಾಧವ್ ಪ್ರಭಾರ ಇನ್ಸ್‌ಪೆಕ್ಟರ್‌

ಹುಬ್ಬಳ್ಳಿ: ಅಯೋಧ್ಯೆ ಕರಸೇವಕರ ಬಂಧನ ವಿಚಾರದಲ್ಲಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ, ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ. 


ಇನ್ಸ್ ಪೆಕ್ಟರ್ ಮಹಮದ್ ರಫೀಕ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಲ್ಲದೆ, ಅವರ ಜಾಗಕ್ಕೆ ಪ್ರಭಾರ ಜವಾಬ್ದಾರಿಯಾಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ. ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್‌ಗೆ ಪ್ರಭಾರ ಠಾಣಾಧಿಕಾರಿಯಾಗಿ ಹೆಚ್ಚುವರಿ ಅಧಿಕಾರ ನೀಡಿದ್ದಾರೆ. 


ಡಿ.29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 31 ವರ್ಷಗಳ ಹಳೆಯ ಪ್ರಕರಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬರುತ್ತಿದ್ದಂತೆ ಠಾಣೆಯ ಇನ್ ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸಿದ್ದರು. 


ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ  ಯಾವುದೇ ರಾಜಕೀಯ ಇಲ್ಲ ಎಂದು ಸಮರ್ಥಿಸಿಕೊಂಡಿದ್ದ ರಾಜ್ಯ ಸರ್ಕಾರ, ಇದೀಗ ಠಾಣೆಯ ಇನ್ಸ್‌ಪೆಕ್ಟರ್‌ ರಫೀಕ್‌ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಈ ರೀತಿ ಮಾಡಿದೆಯಾ ಅಥವಾ ಆಕ್ರೋಶ ತಣ್ಣಗಾಗಿಸಲು ಈ ಕ್ರಮ ಕೈಗೊಂಡಿದೆಯಾ ಎನ್ನುವ ಪ್ರಶ್ನೆ ಎದುರಾಗಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಆರೋಪದ ಪ್ರಕರಣ : ಆರೋಪಿ ಖುಲಾಸೆ

Posted by Vidyamaana on 2023-09-24 09:31:09 |

Share: | | | | |


ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ   ಆರೋಪದ ಪ್ರಕರಣ : ಆರೋಪಿ ಖುಲಾಸೆ

ಪುತ್ತೂರು : ಆರು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ  ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ  ಸುಳ್ಯ ತಾಲೂಕು ಬಾಳುಗೋಡು  ಗ್ರಾಮದ ಕೋತ್ನಡ್ಕ ನಿವಾಸಿ ಕಿಶೋರ್. ಕೆ.ರವರನ್ನು ಪುತ್ತೂರಿನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ   ಕಾಂತರಾಜು ಎಸ್ ವಿ ರವರು ನಿರಪರಾಧಿ ಎಂದು ಬಿಡುಗಡೆ ಗೊಳಿಸಲು ಆದೇಶಿಸಿರುತ್ತಾರೆ.


  02/08/2017 ರಂದು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ದಂಡಕಜೆ ಎಂಬಲ್ಲಿ

 ಸಿಲ್ವೆಸ್ಟರ್ ಡಿಸೋಜರವರ ಹಳೆಯ ಮನೆಯಲ್ಲಿ, ರಾತ್ರಿ ವೇಳೆಯಲ್ಲಿ ಆರೋಪಿಯನ್ನಲಾಗಿದ್ದ ಕಿಶೋರ್. ಕೆ ರವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು  ನೊಂದ ಬಾಲಕಿ ಸುಳ್ಯ  ಪೊಲೀಸ್ ಠಾಣೆಗೆ ವಿಳಂಬವಾಗಿ  ದೂರನ್ನು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ  ಕಾಯ್ದೆಯ ಕಲಂ.5 ಮತ್ತು 6 ರ ಅನ್ವಯದಂತೆ ಪ್ರಕರಣ ದಾಖಲಿಸಿದ್ದರು. ತದನಂತರ ತನಿಖೆ ಮುಂದುವರಿಸಿ ಆರೋಪಿ ಎನ್ನಲಾಗಿದ್ದ ಕಿಶೋರ್. ಕೆ.ರವರನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದ್ದರು. ನಂತರ ಪೊಲೀಸರು ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಮಾನ್ಯ ಉಚ್ಚ ನ್ಯಾಯಾಲಯದ  ಆದೇಶದಂತೆ, ಮಂಗಳೂರಿನ ಎರಡನೇ  ಜಿಲ್ಲಾ  ನ್ಯಾಯಾಲಯದಲ್ಲಿದ್ದ ಪ್ರಕರಣವು  ಈ ಪುತ್ತೂರಿನ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿರುತ್ತದೆ.

 ಹೀಗಿರುವಲ್ಲಿ,ನ್ಯಾಯಾಲಯವು ಈ ಪ್ರಕರಣವನ್ನು ತನಿಖೆಗೆ   ಕೈಗೆತ್ತಿಕೊಂಡು ಪ್ರಾಸಿಕೂಷನ್ ತನ್ನ ಪರವಾಗಿ ಸುಮಾರು 26 ಸಾಕ್ಷಿಗಳ ಪೈಕಿ  12 ಸಾಕ್ಷಿಗಳನ್ನು ತನಿಖೆ ನಡೆಸಿತ್ತು. ತನಿಖೆ ನಂತರ ಮಾನ್ಯ ನ್ಯಾಯಾಲಯ ಪಕ್ಷಗಾರರ ವಾದ ವಿವಾದವನ್ನು ಆಲಿಸಿತ್ತು. ಈ ಹಂತದಲ್ಲಿ ಆರೋಪಿ ಪರ ವಕೀಲರಾದ  ಮಹೇಶ್ ಕಜೆಯವರು ದೂರು  ಸಲ್ಲಿಸುವಿಕೆಯಲ್ಲಿನ ವಿಳಂಬ,ಆಕೆಯ ವಯಸ್ಸನ್ನು ಸಂಶಯಾ ತೀತವಾಗಿ ಸಾಬೀತುಪಡಿಸುವಲ್ಲಿ ವಿಫಲತೆ ,ಆರೋಪಿ ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ  ಹೋಗಬಹುದಾದ ಸಾಧ್ಯತೆ, ಸಂತ್ರಸ್ಥೆ ಘಟನೆ ನಡೆದಿದೆ ಎನ್ನಲಾದ ಎರಡು ದಿನದ ಮೊದಲು ನಾಪತ್ತೆಯಾಗಿದ್ದು, ಆ ಎರಡು ದಿವಸ ಆಕೆ ಎಲ್ಲಿದ್ದಳು, ಯಾರ ಜೊತೆ ಇದ್ದಳು ಇತ್ಯಾದಿ ವಿಚಾರಗಳ ಕುರಿತು ತನಿಖೆ ನಡೆಸಿದೆ ಇರುವುದು,ಆರೋಪಿತ  ಘಟನೆ ನಡೆದಿದೆ ಎನ್ನಲಾದ ಸಮಯದಲ್ಲಿ ಆರೋಪಿಯು ಘಟನಾ  ಸ್ಥಳದಲ್ಲಿದ್ದ ಬಗ್ಗೆ

 ದಾಖಲೆಗಳಿಲ್ಲದಿರುವುದು ,  ಸೂಕ್ತ ವೈಜ್ಞಾನಿಕ ಸಾಕ್ಷ್ಯಧಾರ ಮತ್ತು ದಾಖಲೆಗಳ ಕೊರತೆ, ಸಾಕ್ಷಿದಾರರ ವ್ಯತಿರಿಕ್ತ ಹೇಳಿಕೆಗಳು ,ಇತ್ಯಾದಿಗಳ ಹಿನ್ನೆಲೆಯಲ್ಲಿ  ಆರೋಪಿಯು ಈ ಕೃತ್ಯ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ ಮತ್ತು ತನಿಖೆಯಲ್ಲಿನ ವಿರೋಧಾಬಾಸಗಳ ಕಾರಣ, ಪ್ರಾಸಿಕ್ಯೂಷನ್ ಈ ಪ್ರಕರಣವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ವಿಫಲಗೊಂಡಿದೆ ಎಂದು ವಾದಿಸಿದ್ದರು. ಅಂತಿಮವಾಗಿ, ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು  ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತರಾಜು ಎಸ್. ವಿ ರವರು ಪ್ರಾಸಿಕ್ಯೂಷನ್ ತನ್ನ ಕೇಸನ್ನು ಸಂಶಯಾತೀತವಾಗಿ ನಿರೂಪಿಸುವಲ್ಲಿ ವಿಫಲವಾಗಿದ್ದು ಆ ಕಾರಣ  ಆರೋಪಿಯನ್ನು ನಿರ್ದೋಷಿ ಎಂಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದ ಪ್ರಕರಣ : ಆರೋಪಿ ಖುಲಾಸೆ


 ಪುತ್ತೂರು : ಆರು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ  ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ  ಸುಳ್ಯ ತಾಲೂಕು ಬಾಳುಗೋಡು  ಗ್ರಾಮದ ಕೋತ್ನಡ್ಕ ನಿವಾಸಿ ಕಿಶೋರ್. ಕೆ.ರವರನ್ನು ಪುತ್ತೂರಿನ ಐದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ   ಕಾಂತರಾಜು ಎಸ್ ವಿ ರವರು ನಿರಪರಾಧಿ ಎಂದು ಬಿಡುಗಡೆ ಗೊಳಿಸಲು ಆದೇಶಿಸಿರುತ್ತಾರೆ.


  02/08/2017 ರಂದು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ದಂಡಕಜೆ ಎಂಬಲ್ಲಿ

 ಸಿಲ್ವೆಸ್ಟರ್ ಡಿಸೋಜರವರ ಹಳೆಯ ಮನೆಯಲ್ಲಿ, ರಾತ್ರಿ ವೇಳೆಯಲ್ಲಿ ಆರೋಪಿಯನ್ನಲಾಗಿದ್ದ ಕಿಶೋರ್. ಕೆ ರವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು  ನೊಂದ ಬಾಲಕಿ ಸುಳ್ಯ  ಪೊಲೀಸ್ ಠಾಣೆಗೆ ವಿಳಂಬವಾಗಿ  ದೂರನ್ನು ನೀಡಿದ್ದರು. ಈ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ  ಕಾಯ್ದೆಯ ಕಲಂ.5 ಮತ್ತು 6 ರ ಅನ್ವಯದಂತೆ ಪ್ರಕರಣ ದಾಖಲಿಸಿದ್ದರು. ತದನಂತರ ತನಿಖೆ ಮುಂದುವರಿಸಿ ಆರೋಪಿ ಎನ್ನಲಾಗಿದ್ದ ಕಿಶೋರ್. ಕೆ.ರವರನ್ನು ದಸ್ತಗಿರಿ ಮಾಡಿ ತನಿಖೆ ನಡೆಸಿದ್ದರು. ನಂತರ ಪೊಲೀಸರು ಆರೋಪಿಯ ವಿರುದ್ಧ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ವೇಳೆ ಮಾನ್ಯ ಉಚ್ಚ ನ್ಯಾಯಾಲಯದ  ಆದೇಶದಂತೆ, ಮಂಗಳೂರಿನ ಎರಡನೇ  ಜಿಲ್ಲಾ  ನ್ಯಾಯಾಲಯದಲ್ಲಿದ್ದ ಪ್ರಕರಣವು  ಈ ಪುತ್ತೂರಿನ ಐದನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಯಾಗಿರುತ್ತದೆ.

 ಹೀಗಿರುವಲ್ಲಿ,ನ್ಯಾಯಾಲಯವು ಈ ಪ್ರಕರಣವನ್ನು ತನಿಖೆಗೆ   ಕೈಗೆತ್ತಿಕೊಂಡು ಪ್ರಾಸಿಕೂಷನ್ ತನ್ನ ಪರವಾಗಿ ಸುಮಾರು 26 ಸಾಕ್ಷಿಗಳ ಪೈಕಿ  12 ಸಾಕ್ಷಿಗಳನ್ನು ತನಿಖೆ ನಡೆಸಿತ್ತು. ತನಿಖೆ ನಂತರ ಮಾನ್ಯ ನ್ಯಾಯಾಲಯ ಪಕ್ಷಗಾರರ ವಾದ ವಿವಾದವನ್ನು ಆಲಿಸಿತ್ತು. ಈ ಹಂತದಲ್ಲಿ ಆರೋಪಿ ಪರ ವಕೀಲರಾದ  ಮಹೇಶ್ ಕಜೆಯವರು ದೂರು  ಸಲ್ಲಿಸುವಿಕೆಯಲ್ಲಿನ ವಿಳಂಬ,ಆಕೆಯ ವಯಸ್ಸನ್ನು ಸಂಶಯಾ ತೀತವಾಗಿ ಸಾಬೀತುಪಡಿಸುವಲ್ಲಿ ವಿಫಲತೆ ,ಆರೋಪಿ ಘಟನೆ ನಡೆದಿದೆ ಎನ್ನಲಾದ ಸ್ಥಳಕ್ಕೆ  ಹೋಗಬಹುದಾದ ಸಾಧ್ಯತೆ, ಸಂತ್ರಸ್ಥೆ ಘಟನೆ ನಡೆದಿದೆ ಎನ್ನಲಾದ ಎರಡು ದಿನದ ಮೊದಲು ನಾಪತ್ತೆಯಾಗಿದ್ದು, ಆ ಎರಡು ದಿವಸ ಆಕೆ ಎಲ್ಲಿದ್ದಳು, ಯಾರ ಜೊತೆ ಇದ್ದಳು ಇತ್ಯಾದಿ ವಿಚಾರಗಳ ಕುರಿತು ತನಿಖೆ ನಡೆಸಿದೆ ಇರುವುದು,ಆರೋಪಿತ  ಘಟನೆ ನಡೆದಿದೆ ಎನ್ನಲಾದ ಸಮಯದಲ್ಲಿ ಆರೋಪಿಯು ಘಟನಾ  ಸ್ಥಳದಲ್ಲಿದ್ದ ಬಗ್ಗೆ

 ದಾಖಲೆಗಳಿಲ್ಲದಿರುವುದು ,  ಸೂಕ್ತ ವೈಜ್ಞಾನಿಕ ಸಾಕ್ಷ್ಯಧಾರ ಮತ್ತು ದಾಖಲೆಗಳ ಕೊರತೆ, ಸಾಕ್ಷಿದಾರರ ವ್ಯತಿರಿಕ್ತ ಹೇಳಿಕೆಗಳು ,ಇತ್ಯಾದಿಗಳ ಹಿನ್ನೆಲೆಯಲ್ಲಿ  ಆರೋಪಿಯು ಈ ಕೃತ್ಯ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿರುವುದಿಲ್ಲ ಮತ್ತು ತನಿಖೆಯಲ್ಲಿನ ವಿರೋಧಾಬಾಸಗಳ ಕಾರಣ, ಪ್ರಾಸಿಕ್ಯೂಷನ್ ಈ ಪ್ರಕರಣವನ್ನು ಸಂಶಯಾತೀತವಾಗಿ ಸಾಬೀತುಪಡಿಸಲು ವಿಫಲಗೊಂಡಿದೆ ಎಂದು ವಾದಿಸಿದ್ದರು. ಅಂತಿಮವಾಗಿ, ಪುತ್ತೂರಿನ ಮಾನ್ಯ ಜಿಲ್ಲಾ ಮತ್ತು  ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶರಾದ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತರಾಜು ಎಸ್. ವಿ ರವರು ಪ್ರಾಸಿಕ್ಯೂಷನ್ ತನ್ನ ಕೇಸನ್ನು ಸಂಶಯಾತೀತವಾಗಿ ನಿರೂಪಿಸುವಲ್ಲಿ ವಿಫಲವಾಗಿದ್ದು ಆ ಕಾರಣ  ಆರೋಪಿಯನ್ನು ನಿರ್ದೋಷಿ ಎಂದು ಆದೇಶಿಸಿರುತ್ತಾರೆ. ಆರೋಪಿ ಪರ ವಕೀಲರಾದ ಪುತ್ತೂರಿನ ಕಜೆ ಲಾ ಚೇಂಬರ್ಸ್ ಮಹೇಶ್ ಕಜೆ ಮತ್ತು ಮಂಗಳೂರಿನ  ರಾಜೇಶ್ ರೈಯವರು ವಾದಿಸಿದ್ದರು.ದು ಆದೇಶಿಸಿರುತ್ತಾರೆ. ಆರೋಪಿ ಪರ ವಕೀಲರಾದ ಪುತ್ತೂರಿನ ಕಜೆ ಲಾ ಚೇಂಬರ್ಸ್ ಮಹೇಶ್ ಕಜೆ ಮತ್ತು ಮಂಗಳೂರಿನ  ರಾಜೇಶ್ ರೈಯವರು ವಾದಿಸಿದ್ದರು.

ಫೇಸ್‌ಬುಕ್‌ ಹೆಣ್ಣಿನ ಆಸೆಗೆ ಬಿದ್ದ ಉದ್ಯಮಿ ಕಳೆದುಕೊಂಡಿದ್ದು ಬರೋಬ್ಬರಿ 95 ಲಕ್ಷ

Posted by Vidyamaana on 2024-03-16 14:34:47 |

Share: | | | | |


ಫೇಸ್‌ಬುಕ್‌ ಹೆಣ್ಣಿನ ಆಸೆಗೆ ಬಿದ್ದ ಉದ್ಯಮಿ  ಕಳೆದುಕೊಂಡಿದ್ದು ಬರೋಬ್ಬರಿ 95 ಲಕ್ಷ

ಬೆಂಗಳೂರು : ಪತ್ನಿಯನ್ನು ತನ್ನೊಂದಿಗೆ ಒಂದು ರಾತ್ರಿ ಕಳುಹಿಸಿಕೊಂಡು ಎಂದ ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಕಾರಿನಲ್ಲಿ 14 ಬಾರಿ ಇರಿದು ಕೊಲೆಗೈದಿದ್ದ ಬಟ್ಟೆ ವ್ಯಾಪಾರಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.ದಾಸರಹಳ್ಳಿ ಮರಿಯಣ್ಣಪಾಳ್ಯ ನಿವಾಸಿ ಸಂತೋಷ್‌ ಕುಮಾರ್‌(39) ಬಂಧಿತ ಆರೋಪಿ.ಮಾ .12ರಂದು ಈತ ಮಾರುತಿನಗರ ನಿವಾಸಿ ಕೃಷ್ಣಯಾದವ್‌(55) ಎಂಬಾತನನ್ನು ಕೊಲೆಗೈದು, ಮೃತದೇಹವನ್ನು ಕಾರಿನಲ್ಲಿ ಇರಿಸಿ ಪರಾರಿಯಾಗಿದ್ದ. ಬಟ್ಟೆ ಅಂಗಡಿಗೆ ಲಕ್ಷಾಂತರ ರೂ. ಹೂಡಿಕೆ ಮಾಡಲು ಪತ್ನಿಯನ್ನು ಒಂದು ರಾತ್ರಿ ತನ್ನೊಂದಿಗೆ ಕಳುಹಿಸುವಂತೆ ಕೇಳಿದಕ್ಕೆ ಆರೋಪಿ ಉದ್ಯಮಿಯನ್ನು ಕೊಲೆಗೈದಿದ್ದಾನೆ ಎಂದು ಪೊಲೀಸರು ಹೇಳಿದರು.


ಆಂಧ್ರಪ್ರದೇಶ ಮೂಲದ ಕೃಷ್ಣಯಾದವ್‌ ನಗರದಲ್ಲಿ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡಿಕೊಂಡಿದ್ದ. ಈತನ ಸ್ನೇಹಿತ ತಮಿಳುನಾಡು ಮೂಲದ ಸಂತೋಷ್‌ ಮೊಬೈಲ್‌ ಅಂಗಡಿ ಮುಂಭಾಗದ ಫ‌ುಟ್‌ಪಾತ್‌ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ. ಒಂದೆರಡು ಬಾರಿ ಆರೋಪಿಯ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ್ದ ಕೃಷ್ಣಯಾದವ್‌, “ಉತ್ತಮ ಗುಣಮಟ್ಟದ ಬಟ್ಟೆ ಮಾರಾಟ ಮಾಡುತ್ತಿಯಾ, ಹೊಸ ಬಟ್ಟೆ ಅಂಗಡಿಗೆ ನಾನು ಹಣ ಹೂಡಿಕೆ ಮಾಡುತ್ತೇನೆ” ಎಂದು ಭರವಸೆ ನೀಡಿದ್ದ. ಆದರೆ, ನಾಲ್ಕೈದು ತಿಂಗಳಾದರೂ ಹಣ ಹೂಡಿಕೆ ಮಾಡಿರಲಿಲ್ಲ.

14 ಬಾರಿ ಇರಿತಕ್ಕೊಳಗಾದ ಉದ್ಯಮಿ: ಈ ಮಧ್ಯೆ ಉದ್ಯಮಿ ಕೃಷ್ಣಯಾದವ್‌ಗೆ ಹೆಣ್ಣಿನ ಮೇಲೆ ಹೆಚ್ಚಿನ ವ್ಯಾಮೋಹ ಇತ್ತು ಎಂದು ಹೇಳಲಾಗಿದೆ. ಮಾ.11ರಂದು ಆರೋಪಿ ಸಂತೋಷ್‌ ಜತೆ ಕಾರಿನಲ್ಲಿ ಯಲಹಂಕದ ಬಾರ್‌ನಲ್ಲಿ ಮದ್ಯ ಸೇವಿಸಿ ವಿವಿಧೆಡೆ ಸುತ್ತಾಡಿದ್ದ ಕೃಷ್ಣಯಾದವ್‌ಗೆ ಆರೋಪಿ ಸಂತೋಷ್‌ ಕುಮಾರ್‌, ತನ್ನ ಮೊಬೈಲ್‌ನಲ್ಲಿದ್ದ 2ನೇ ಪತ್ನಿಯ ಫೋಟೋವನ್ನು ತೋರಿಸಿದ್ದಾನೆ. ಅದರಿಂದ ವ್ಯಾಮೋಹಕ್ಕೊಳಗಾದ ಕೃಷ್ಣಯಾದವ್‌, “ಬಟ್ಟೆ ಅಂಗಡಿಗೆ ಒಂದೆರಡು ದಿನದಲ್ಲೇ ಲಕ್ಷಾಂತರ ರೂ. ಹೂಡಿಕೆ ಮಾಡುತ್ತೇನೆ. ಇಂದು ರಾತ್ರಿ ನಿನ್ನ ಪತ್ನಿಯನ್ನು ನನ್ನೊಂದಿಗೆ ಕಳುಹಿಸು’ ಎಂದು ಕೇಳಿದ್ದಾನೆ. ಅದರಿಂದ ಕೋಪಗೊಂಡು ಆರೋಪಿ, ಉದ್ಯಮಿ ಕೃಷ್ಣಯಾದವ್‌ ಜತೆ ಜಗಳ ಆರಂಭಿಸಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಆರೋಪಿ ಕಾರಿನಲ್ಲಿದ್ದ ಚಾಕುವಿನಿಂದ ಕೃಷ್ಣಯಾದವ್‌ನ ದೇಹದ ವಿವಿಧೆಡೆ 14 ಬಾರಿ ಇರಿದು ಪರಾರಿಯಾಗಿದ್ದ. ಇತ್ತ ಕೃಷ್ಣಯಾದವ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದ.ಬಳಿಕ ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


ಏನಿದು ಪ್ರಕರಣ? : 


ಆರೋಪಿ ಸಂತೋಷ್‌ ಜತೆ ಉದ್ಯಮಿ ಕೃಷ್ಣಯಾದವ್‌ ಸೋಮವಾರ ಸಂಜೆ ತನ್ನ ಸ್ವಿಫ್ಟ್‌ ಕಾರಿನಲ್ಲಿ ಹೊರಗಡೆ ಹೋಗಿದ್ದಾನೆ. ರಾತ್ರಿಯಾದರೂ ಮನೆಗೆ ವಾಪಸ್‌ ಬಂದಿರಲಿಲ್ಲ. ಈ ಸಂಬಂಧ ಕುಟುಂಬ ಸದಸ್ಯರು ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಬೆಳಗ್ಗೆ ಬಾಗಲೂರು ಕ್ರಾಸ್‌ನ ಪಾದಚಾರಿ ಮಾರ್ಗದಲ್ಲಿ ಅನುಮಾನ ಸ್ಪದ ರೀತಿ ಯಲ್ಲಿ ಕಾರಿನಲ್ಲಿ ಕೃಷ್ಣ ಯಾದವ್‌ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Recent News


Leave a Comment: