ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಸುದ್ದಿಗಳು News

Posted by vidyamaana on 2024-07-03 19:44:44 |

Share: | | | | |


ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾದ ಶಾಸಕ ಆಶೋಕ್ ರೈ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂ‌ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆ‌ಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.

   ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.

ಕಾಲೇಜು‌ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.

ಹೆಚ್ಚು‌ಅನುದಾನ ಕೊಡಿ

ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ಮನವಿ ಸಲ್ಲಿಸಿದರು.

 Share: | | | | |


ಏತ್ ಇತ್ತಂಡ ದಾನೆ..! : ಬಹುಕೋಟಿ ಉದ್ಯಮಿ ಬೀದಿ ನಾಯಿಗಳ ದಾಳಿಗೆ ಬಲಿ!

Posted by Vidyamaana on 2023-10-23 21:09:08 |

Share: | | | | |


ಏತ್ ಇತ್ತಂಡ ದಾನೆ..! : ಬಹುಕೋಟಿ ಉದ್ಯಮಿ ಬೀದಿ ನಾಯಿಗಳ ದಾಳಿಗೆ ಬಲಿ!

ಅಹಮದಾಬಾದ್, ಅ 23: ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅಕ್ಟೋಬರ್ 22ರಂದು ಅಹ್ಮದಾಬಾದ್​ನಲ್ಲಿ ಮೃತಪಟ್ಟಿದ್ದಾರೆ.


ವಾಘ್ ಬಕ್ರೀ ಟೀ ಗ್ರೂಪ್‌ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅವರು ಸಾವನ್ನಪ್ಪಿದ್ದಾರೆ. ತಮ್ಮ ಮನೆ ಬಳಿ ನಿಂತಿದ್ದಾಗ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದರು. ಬೀದಿ ನಾಯಿಗಳು ದಾಳಿ ಮಾಡಿದಾಗ ಪರಾಗ್‌ ದೇಸಾಯಿ ಅವರು ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಬ್ರೈನ್ ಹೆಮರೇಜ್‌ನಿಂದ 49 ವರ್ಷದ ಪರಾಗ್ ದೇಸಾಯಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.


ಪರಾಗ್ ದೇಸಾಯಿ ಅವರು ಕಳೆದ ಅಕ್ಟೋಬರ್ 15ರಂದು ಮನೆ ಬಳಿ ನಿಂತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದ್ದವು. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಈ ದಾಳಿಯನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪರಾಗ್ ದೇಸಾಯಿ ಅವರನ್ನು ಸ್ಥಳೀಯ ಶೆಲ್ಬಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.


ಬೀದಿ ನಾಯಿಯ ದಾಳಿಯಲ್ಲೂ ಹಲವು ಗಂಭೀರ ಗಾಯಗಳಾಗಿದ್ದು, ಬ್ರೇನ್ ಹೆಮರೇಜ್‌ಗೆ ತುತ್ತಾಗಿದ್ದರು. ಶೆಲ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ದೇಸಾಯಿ ಅವರನ್ನು ಝೈಡಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬ್ರೇನ್ ಹೆಮರೇಜ್‌ನಿಂದ ಉದ್ಯಮಿ ಪರಾಗ್ ದೇಸಾಯಿ ಅವರು ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.


ಪರಾಗ್ ದೇಸಾಯಿ ಅವರು 2 ಸಾವಿರ ಕೋಟಿ ರೂಪಾಯಿ ವಹಿವಾಟಿನ ವಾಘ್ ಬಕ್ರೀ ಟೀ ಗ್ರೂಪ್‌ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರು. ಗುಜರಾತ್‌ನಲ್ಲಿ ವಾಘ್ ಬಕ್ರೀ ಟೀ ಗ್ರೂಪ್‌ ಅನ್ನೋ ಬ್ರಾಂಡ್ ಹಾಗೂ ಕಂಪನಿಯನ್ನು ಕಟ್ಟಿ ಬೆಳೆಸಿದವರಲ್ಲಿ ಪರಾಗ್ ಅವರು ಪ್ರಮುಖರು. ಪರಾಗ್ ದೇಸಾಯಿ ಅವರ ಸಾವು ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.

ಕರ್ನಾಟಕ ವಿಧಾನಪರಿಷತ್ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

Posted by Vidyamaana on 2023-12-25 15:13:31 |

Share: | | | | |


ಕರ್ನಾಟಕ ವಿಧಾನಪರಿಷತ್ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಇದೀಗ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಲಾಗಿದೆ. ಅಲ್ಲದೇ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರನ್ನಾಗಿ ಅರವಿಂದ್ ಬೆಲ್ಲದ್ ನೇಮಕ ಮಾಡಲಾಗಿದೆ.ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ.ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.


ಇನ್ನೂ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಕಂಬಳ ಪರ ಸುಪ್ರಿಂ ತೀರ್ಪು: ಪೇಟಾಗೆ ಭಾರೀ ಹಿನ್ನೆಡೆ

Posted by Vidyamaana on 2023-05-18 08:51:49 |

Share: | | | | |


ಕಂಬಳ ಪರ ಸುಪ್ರಿಂ ತೀರ್ಪು: ಪೇಟಾಗೆ ಭಾರೀ ಹಿನ್ನೆಡೆ

ಪುತ್ತೂರು:ಕಂಬಳ ಪರ ಸುಪ್ರಿಂಕೋರ್ಟು ತೀರ್ಪು ನೀಡಿದ್ದು ಉಪ್ಪಿನಂಗಡಿ ವಿಜಯವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾದ ಪ್ರಸ್ತುತ ಶಾಸಕರಾಗಿರುವ ಅಶೋಕ್ ಕುಮಾರ್ ರೈಯವರ ಸುದೀರ್ಘ ೧೨ ವರ್ಷಗಳ ಹೋರಾಟಕ್ಕೆ ಕೊನೆಗೂ ಜಯಸಿಕ್ಕಂತಾಗಿದೆ.

ಕಂಬಳ ತುಳುನಾಡಿನ ಜಾನಪದ ಕ್ರೀಡೆಯಾಗಿದ್ದು , ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಈ ಕ್ರೀಡೆನಡೆಯುತ್ತಿದ್ದು ಕರಾವಳಿಯ ರೈತಾಪಿ ಜನರು ಭತ್ತದ ಕೊಯ್ಲಿನ ಜನರು ತಮ್ಮ ಮನರಂಜನೆಗೋಸ್ಕರ ಏರ್ಪಡಿಸುತ್ತಿದ್ದ ಈ ಕಂಬಳ ಕ್ರೀಡೆಯು ಕ್ರಮೇಣಸಾಂಪ್ರದಾಯಿಕ ಕ್ರೀಡೆಯಾಗಿ ಬೆಳೆದು ಬಂತು.

ಕಂಬಳಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹಿಂದಿನ ಕಾಲದಲ್ಲಿ ರಾಜರುಗಳ ಬೆಂಬಲ ಮತ್ತು ಪ್ರೋತ್ಸಾಹದಿಂದ ಈ ಕ್ರೀಡೆ ನಡೆಯುತ್ತಿತ್ತು. ಹೆಚ್ಚಾಗಿ ನವೆಂಬರ್ ಬಳಿಕ ಮಾರ್ಚ್ ತನಕ ಕರಾವಳಿ ಜಿಲ್ಲೆಗಳಲ್ಲಿ ಈ ಕ್ರೀಡೆ ನಡೆಯುತ್ತದೆ. ಕಂಬಳದಲ್ಲಿ ಎರಡು ಬಲಿಷ್ಟ ಕೋಣಗಳ ಕುತ್ತಿಗೆಗೆ ನೊಗ ಕಟ್ಟಿ ಅವುಗಳನ್ನು ಓಡಿಸಲಾಗುತ್ತದೆ. ಈ ಸಮಯದಲ್ಲಿ ಕೋಣಗಳು ಅತೀ ವೇಗವಾಗಿ ಓಡಲಿಕ್ಕಾಗಿ ಓಡಿಸುವ ವ್ಯಕ್ತಿ ಕೋಣಗಳಿಗೆ ಹಿಂಸಾತ್ಮ ರೀತಿಯಲ್ಲಿ ಪೆಟ್ಟು ಕೊಡುತ್ತಾನೆ ಎಂಂದು ಪ್ರಾಣಿದಯಾಸಂಘ (ಪೇಟಾ) ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿ ಕಂಬಳವನ್ನು ನಿಷೇಧಿಸುವಂತೆ ಆಗ್ರಹಿಸಿತ್ತು. ಪೇಟಾ ನ್ಯಾಯಾಲಯದಲ್ಲಿ ಮಾಡಿರುವ ಆರೋಪಗಳಲ್ಲಿ ಕೋಣಗಳನ್ನು ಹಿಂಸಾತ್ಮಕ ರೀತಿಯಲ್ಲಿ ಎಳೆಯುವಿಕೆ, ಕುಣಿಯುವಿಕೆ ಮತ್ತು ಮೂಗಿನ ಹಗ್ಗಗಳ ಒರಟು ನಿರ್ವಹಣೆ ಮೂಲಕ ಪ್ರಾಣಿಗಳಿಗೆ ಹಿಂಸಾತ್ಮಕ ರೀತಿಯಲ್ಲಿ ಕೌರ್ಯವನ್ನು ಮೆರೆಯಲಾಗಿತ್ತು ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ದಾವೆಯಲ್ಲಿ ತಿಳಿಸಿತ್ತು. ಕಂಬಳದ ಜೊತೆ ತಮಿಳುನಾಡಿನಲ್ಲಿ ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ಗೂಳಿಯನ್ನು ಪಳಗಿಸುವ ಜಲ್ಲಿಕಟ್ಟು ವಿರುದ್ದವೂ ಪೇಟಾ ದಾವೆಯನ್ನು ಹೋಡಿತ್ತು. ಎರಡೂ ಪ್ರಕರಣಗಳು ಸುಪ್ರಿಂ ಅಗಳದಲ್ಲಿತ್ತು.

೧೨ ವರ್ಷಗಳ ಬಳಿಕ ನ್ಯಾಯ

ಪೇಟಾ ಹೂಡಿರುವ ದಾವೆಯ ವಿರುದ್ದ ಕಂಬಳದ ಪರವಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಲ ಸಮಿತಿ ಅಧ್ಯಕ್ಷರಾದ , ಪ್ರಸ್ತುತ ಪುತ್ತೂರು ಶಾಸಕರಾಗಿರುವ ಅಶೋಕ್‌ಕುಮಾರ್ ರೈಯವರು ಪೇಟಾ ವಿರುದ್ದ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿ ಕಂಬಳ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಇದರಲ್ಲಿ ಯಾವುದೇ ರೀತಿಯ ಪ್ರಾಣಿ ಹಿಂಸೆಯಾಗುತ್ತಿಲ್ಲ. ಕಂಬಳದ ಬಗ್ಗೆ ಪೇಟಾ ಮಾಡಿರುವ ಆರೋಪಗಳು ನ್ಯಾಯಬದ್ದತೆಯಿಂದ ಕೂಡಿಲ್ಲ ಎಂದು ಕಂಬಳ ಪರ ವಕೀಲರು ನ್ಯಾಯಾಲಯದಲ್ಲಿ ವಾದಮಂಡಿಸುವ ಮೂಲಕ ಕಂಬಳದಲ್ಲಿ ಪ್ರಾಣಿ ಹಿಂಸೆಯಿಲ್ಲ ಎಂಬುದನ್ನು ಸಾಭೀತುಪಡಿಸುವಲ್ಲಿ ಯಸಶ್ವಿಯಾಗಿದ್ದರು. ಇದೀಗ ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ರೈಯವರ ಏಕಾಂಗಿ ಹೋರಾಟಕ್ಕೆ ಜಯ ದೊರಕಿದ್ದು ಕಂಬಳ ಪರವಾಗಿ ದೇಶದ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಮುಂದಿನ ದಿನಗಳಲ್ಲಿ ಕಂಬಳ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಡೆಸಬಹುದಾಗಿದೆ.

ಹೋರಾಟಕ್ಕೆ ಸಂದ ಜಯ: ಅಶೋಕ್ ರೈ

ಕಂಬಳದ ವಿರುದ್ದ ಪೇಟಾ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿದಾಗ ಅದರ ವಿರುದ್ದ ನಾನು ಸುಪ್ರಿಂ ಕೋರ್ಟಿನಲ್ಲಿ ಕಾನೂನು ಹೋರಾಟವನ್ನು ನಡೆಸಿದ್ದೆ. ಕಂಬಳ ಸಮಿತಿಗಳ ಪರವಾಗಿ ತಾನು ಸುಪ್ರಿಂ ಕೋರ್ಟಿಗೆ ಸುಪ್ರಿಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸವಿದೆ. ಧಾರ್ಮಿಕ ಪರಂಪರೆ ಇದೆ, ಕಂಬಳದಲ್ಲಿ ಕೋಣಗಳಿಗೆ ಹಿಂಸೆಯಾಗುವುದಿಲ್ಲ, ಮಕ್ಕಳಂತೆ ಕೋಣಗಳನ್ನು ಸಾಕಿ ಸಲಹಲಾಗುತ್ತಿದೆ ಆದ್ದರಿಂದ ಕಂಬಳ ಕೂಟಕ್ಕೆ ನಿಷೇಧ ಹೇರಬಾರದು ಎಂದಿನಂತೆ ಕಂಬಳ ಕೂಟ ಆಯೋಜನೆಗೆ ಅವಕಾಶ ಮಾಡಿಕೊಡಬೇಕು ಎಂದು ನ್ಯಾಯಾಲಯದ ಮೂಲಕ ಮನವಿಯನ್ನು ಮಾಡಿದ್ದೆ. ನನ್ನ ಸತತ ೧೨ ವರ್ಷಗಳ ಹೋರಾಟಕ್ಕೆ ಜಯಗಳಿಸಿದ್ದು ತೀರ್ಪು ನಮ್ಮ ಪರ ಬಂದಿದೆ. ಇದು ತನಗೆ ಅತೀವ ಸಂತಸವನ್ನು ತಂದಿದೆ ಎಂದು  ಉಪ್ಪಿನಂಗಡಿ ವಿಜಯವಿಕ್ರಮ ಕಂಬಳ ಸಮಿತಿ ಅಧ್ಯಕ್ಷರೂ , ಶಾಸಕರೂ ಆಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದ್ದಾರೆ.

ಎಂಟು ದಿನ ಕಾಡಿನಲ್ಲಿ ಅಲೆದಾಟ – ಮಾನಸಿಕ ಅಸ್ವಸ್ಥ ಯುವಕನಿಗೆ ಊರಿನ ದಾರಿ ತೋರಿದ ಶ್ವಾನ

Posted by Vidyamaana on 2023-09-27 14:54:27 |

Share: | | | | |


ಎಂಟು ದಿನ ಕಾಡಿನಲ್ಲಿ ಅಲೆದಾಟ – ಮಾನಸಿಕ ಅಸ್ವಸ್ಥ ಯುವಕನಿಗೆ ಊರಿನ ದಾರಿ ತೋರಿದ ಶ್ವಾನ

ಕುಂದಾಪುರ: ಮನೆಯಿಂದ ಹೊರಹೋಗಿ ಕಾಡಿನಲ್ಲಿ ನಾಪತ್ತೆಯಾಗಿದ್ದ ಯುವಕನೊಬ್ಬ ಕಾಡಿನ ದಾರಿಯಲ್ಲಿ ಹಾದಿ ತಪ್ಪಿ ಎಂಟು ದಿನಗಳ ನಿರಂತರ ಅಲೆದಾಟದ ಬಳಿಕ ಮನೆ ಸೇರಿರುವ ವಿಸ್ಮಯಕಾರಿ ಘಟನೆ ಮತ್ತು ಈ ಮಾನಸಿಕ ಅಸ್ವಸ್ಥ ಯುವಕನನ್ನು ಕಾಡಿನಿಂದ ಮರಳಿ ಮನೆ ಸೇರಿಸಿದ ಸಾಕು ನಾಯಿಯ ಸಾಹಸವೊಂದು ಇದೀಗ ಉಡುಪಿ ಜಿಲ್ಲೆಯಾದ್ಯಂತ ‘ಟಾಕ್ ಆಫ್ ದಿ ಟೌನ್ ಆಗಿದೆ.

ಮುಳ್ಳುಗುಡ್ಡೆ ಕೊರಗಜ್ಜನಿಗೆ ಹೇಳಿಕೊಂಡ ಹರಕೆ ಮತ್ತು ಆ ಯುವಕನ ಜೊತೆ ಕಾಡಿಗೆ ತೆರಳಿದ್ದ ನಾಯಿಯ ಸಾಹಸದಿಂದ ಯುವಕ ಎಂಟು ದಿನಗಳ ಕಾನನ ಅಲೆದಾಟದ ಬಳಿಕವೂ ಸುರಕ್ಷಿತವಾಗಿ ನಿತ್ರಾಣಗೊಂಡ ಸ್ಥಿತಿಯಲ್ಲಿ ಮನೆ ತಲುಪುವಂತಾಗಿದೆ.

ಉಡುಪಿ ಜಿಲ್ಲೆಯ ಅಮಾವಾಸ್ಯೆ ಬೈಲಿನಲ್ಲಿ ಈ ಅಚ್ಚರಿಯ ಘಟನೆ ನಡೆದಿದ್ದು, ಮಟ್ಟಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ನಿವಾಸಿ ಶೀನ ನಾಯ್ಕ ಅವರ ಮಗ ವಿವೇಕಾನಂದ (28) ಎಂಬಾತ ಸೆ.16ರಂದು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. 

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಈ ಯುವಕ ತನ್ನ ಮನೆಯಿಂದ ಹೊರಡುವ ಸಂದರ್ಭದಲ್ಲಿ ಮನೆಯ ನಾಯಿ ಕೂಡು ಆತನ ಜೊತೆ ತೆರಳಿತ್ತು. ಇತ್ತ ಕಾಡಿನಲ್ಲಿ ದಾರಿ ತಪ್ಪಿ ವಾರಗಳ ಅಲೆದಾಡಿದ್ದ ವಿವೇಕಾನಂದ ಸರಿಯಾದ ಆಹಾರವಿಲ್ಲದೆ ಬರೀ ನೀರು ಕುಡಿದು ಜೀವ ಉಳಿಸಿಕೊಂಡಿದ್ದ.

ಊರಿಗೆ ಮರಳುವ ದಾರಿ ಕಾಣದೇ ಕಾಡಿನಲ್ಲೇ ಸತ್ತಾಡುತ್ತಾ ನಿತ್ರಾಣಗೊಂಡಿದ್ದ ವಿವೇಕಾನಂದ ಆಶ್ಚರ್ಯಕರ ರೀತಿಯಲ್ಲಿ ಎಂಟು ದಿನಗಳ ಬಳಿಕ ಕಬ್ಬಿನಾಲೆ ಸಮೀಪದ ಮನೆ ಒಂದರ ಬಳಿ ನಿತ್ರಾಣಗೊಂಡ ಸ್ಥಿತಿಯಲ್ಲಿ ಪತ್ತೆಯಾಗುತ್ತಾನೆ.

ಅಷ್ಟೂ ದಿನಗಳ ಕಾಲ ಯುವಕನ ಜೊತೆಯಲ್ಲೇ ಕಾಡಿನಲ್ಲಿ ಸುತ್ತಾಡುತ್ತಿದ್ದ ಅವರ ಮನೆ ನಾಯಿಯೇ ಯುವಕನಿಗೆ ಕೊನೆಗೂ ಕಾಡಿನಿಂದ ನಾಡಿನ ದಾರಿ ತೋರಿಸುವಲ್ಲಿ ಸಹಾಯ ಮಾಡಿದೆ ಎಂಬುದಾಗಿ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದು, ಈ ನಾಯಿಯ ಸಾಹಸಕ್ಕೆ ಗ್ರಾಮಸ್ಥರಿಂದ ಬಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಎಂಟು ದಿನಗಳ ಅಲೆದಾಟದ ಬಳಿಕ ಕಾಡಿನಿಂದ ಸುರಕ್ಷಿತವಾಗಿ ನಾಡಿಗೆ ವಾಪಾಸಾದ ಯುವಕ ಮತ್ತು ಆತನಿಗೆ ಊರಿನ ದಾರಿ ತೋರಿಸಿದೆ ಎನ್ನಲಾದ ಸಾಕು ನಾಯಿಯನ್ನು ಊರವರು ಮೆರವಣಿಗೆ ಮಾಡಿದ್ದಾರೆ ಮತ್ತು ತಮ್ಮ ಮನೆ ಮಗ ಜೀವಂತವಾಗಿ ವಾಪಾಸು ಬಂದ ಖುಷಿಗೆ ಶೀನ ನಾಯ್ಕರ ಕುಟುಂಬ ಸಿಹಿಯೂಟವನ್ನೂ ಹಾಕಿಸಿದ್ದು ಒಟ್ಟಿನಲ್ಲಿ ಈ ಘಟನೆ ಮಚ್ಚೆಟ್ಟು ಭಾಗದಲ್ಲಿ ಸಂಭ್ರಮದ ವಾತಾವರಣಕ್ಕೆ ಕಾರಣವಾಗಿತ್ತು.

ಲಡಾಖ್ ಗೆ ಬೈಕ್ ಸವಾರಿ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Posted by Vidyamaana on 2023-08-19 12:39:01 |

Share: | | | | |


ಲಡಾಖ್ ಗೆ ಬೈಕ್ ಸವಾರಿ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ನವದೆಹಲಿ: ಆಗಸ್ಟ್ 20 ರಂದು ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ಆಚರಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಲಡಾಖ್ ನ ಪ್ಯಾಂಗಾಂಗ್ ಸರೋವರಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ.

ರಾಹುಲ್ ಗಾಂಧಿಯವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್ ಮೂಲಕ ಫೋಟೋಗಳನ್ನು ಹಂಚಿಕೊಂಡಿದ್ದು, ಜಗತ್ತಿನ ಅತ್ಯಂತ ಸುಂದರ ಸ್ಥಳಗಳಲ್ಲೊಂದು ಎಂದು ನನ್ನ ತಂದೆ ಹೇಳುತ್ತಿದ್ದ ಪಂಗೊಂಗ್‌ ಲೇಕ್‌ನತ್ತ ನಾವು ಸಾಗುತ್ತಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.


ರಾಹುಲ್ ಗಾಂಧಿಯವರು KTM 390 ಅಡ್ವೆಂಚರ್ ನಲ್ಲಿ ಸವಾರಿ ಮಾಡುತ್ತಿದ್ದು, ಇತರ ಸವಾರರು ಅವರನ್ನು ಅನುಸರಿಸುತ್ತಿದ್ದಾರೆ. ಸಂಪೂರ್ಣ ಬೈಕಿಂಗ್ ಗೇರ್ ನಲ್ಲಿ ಹೆಲ್ಮೆಟ್, ಕೈಗವಸುಗಳು, ಸವಾರಿ ಬೂಟುಗಳು ಮತ್ತು ಜಾಕೆಟ್ ನೊಂದಿಗೆ ಲಡಾಖ್ ನ ಸುಂದರವಾದ ಪರ್ವತಗಳ ಮೂಲಕ ತಮ್ಮ ಸವಾರಿಯನ್ನು ಆನಂದಿಸುತ್ತಾರೆ.

ರಾಹುಲ್ ಗಾಂಧಿ ಪ್ರಸ್ತುತ ಲಡಾಖ್ ಪ್ರವಾಸದಲ್ಲಿದ್ದು, ಇದು ಆಗಸ್ಟ್ 25 ರವರೆಗೆ ಅಲ್ಲಿ ಸಮಯ ಕಳೆಯಲಿದ್ದಾರೆ ಎಂದು ತಿಳಿದು ಬಂದಿದೆ

ಅರುಣ್ ಕುಮಾರ್ ಪುತ್ತಿಲ : ಪಕ್ಷೇತರ ಅಭ್ಯರ್ಥಿಯ ಅಧಿಕೃತ ಚಿಹ್ನೆ ಪ್ರಕಟ

Posted by Vidyamaana on 2023-04-24 11:35:31 |

Share: | | | | |


ಅರುಣ್ ಕುಮಾರ್ ಪುತ್ತಿಲ : ಪಕ್ಷೇತರ ಅಭ್ಯರ್ಥಿಯ ಅಧಿಕೃತ ಚಿಹ್ನೆ ಪ್ರಕಟ

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ತಮ್ಮ ಚುನಾವಣಾ ಚಿಹ್ನೆಯನ್ನು ಪ್ರಕಟಗೊಳಿಸಿದ್ದಾರೆ.

ಪುತ್ತಿಲ ರವರು ಚುನಾವಣಾ ಚಿಹ್ನೆಯಾಗಿ ಕ್ರಿಕೆಟ್ ‘ಬ್ಯಾಟ್’ ಅನ್ನು ಆಯ್ದುಕೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪುತ್ತಿಲ ರವರು ತಮ್ಮ ಚಿಹ್ನೆಯಾಗಿ ಯಾವುದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಬಗ್ಗೆ ಭಾರೀ ಕುತೂಹಲವಿತ್ತು.



Leave a Comment: