Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10
ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.
Posted by Vidyamaana on 2024-03-13 10:09:57 |
ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧಾನರಾದರು.
1986ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ಆರಂಭಗೊಂಡಿದ್ದು, 1987ರಲ್ಲಿ ಅದರ ಪ್ರಾಂಶುಪಾಲರಾಗಿ ಗೋಪಿನಾಥ್ ಶೆಟ್ಟಿಯವರು ನೇಮಕಗೊಂಡಿದ್ದರು . ಅದಾದ ಬಳಿಕ ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಈ ಮೂಲಕ ವಿವೇಕಾನಂದ ಪಾಲಿಟೆಕ್ನಿಕ್ ನ ಆಧಾರ ಸ್ಥಂಭವಾಗಿದ್ದರುರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಪ್ರಸ್ತುತ ಪುತ್ತೂರು ನಗರ ಸಹ ಸಂಘ ಚಾಲಕ್ ಆಗಿ ಜವಬ್ದಾರಿ ನಿರ್ವಹಿಸುತ್ತಿದ್ದರು. ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಪುತ್ತೂರು ಭಾಗದ ಮೇಲುಸ್ತುವಾರಿಯಾಗಿದ್ದ ಅವರು ಈ ಭಾಗದಲ್ಲಿ ಹತ್ತು ಹಲವು ಜನೌಷಧಿ ಕೇಂದ್ರಗಳ ಆರಂಭಕ್ಕೆ ಕಾರಣಿಭೂತರಾಗಿದ್ದರು.
ಮೂಲತ: ವಿಟ್ಲದ ಪೆರುವಾಯಿಯವರಾದ ಗೋಪಿನಾಥ ಶೆಟ್ಟಿಯವರು, ಪ್ರಸ್ತುತ ನೆಹರೂ ನಗರದ ಬಲಮುರಿ ಗಣಪತಿ ದೇವಸ್ಥಾನದ ಬಳಿ ನಂದಿಲದಲ್ಲಿ ವಾಸಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಅಪಾರ ಶಿಷ್ಯವರ್ಗ, ಬಂಧು ಮಿತ್ರರನ್ನು ಅಗಲಿದ್ದಾರೆ.
Posted by Vidyamaana on 2024-05-26 14:28:46 |
ತರೀಕೆರೆ : ವಿಧಾನ ಪರಿಷತ್ ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ತರೀಕೆರೆ ಮಂಡಲದ ವತಿಯಿಂದ ಇಲ್ಲಿನ ಅರಮನೆ ಹೋಟೆಲ್ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಮತ್ತು ಚುನಾವಣಾ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ತರೀಕೆರೆ ಮಂಡಲದ ಬಿಜೆಪಿ ವಾರ್ಡ್ ಅಧ್ಯಕ್ಷರು , ಬೂತ್ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಪ್ರಮುಖರಿಗೆ ಚುನಾವಣೆಯ ರೂಪುರೇಷೆಗಳನ್ನು ತಿಳಿಸಿ ತಮ್ಮ ವ್ಯಾಪ್ತಿಯ ಮಹಾಶಕ್ತಿ ಕೇಂದ್ರಗಳಲ್ಲಿ ಪದವೀಧರ ಮತದಾರರನ್ನು ತಲುಪಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡರ ಪರವಾಗಿ ಮತಯಾಚಿಸಿ, ಗೆಲ್ಲಿಸುವಂತೆ ಮನವಿ ಮಾಡಲಾಯಿತು.
Posted by Vidyamaana on 2024-06-06 16:46:38 |
ಬೆಂಗಳೂರು : ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಪ್ರಕಟವಾದಂತ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Posted by Vidyamaana on 2024-05-30 14:35:04 |
ಬಂಟ್ವಾಳ : ಲಾರಿಯೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿಯಾದ ಪರಿಣಾಮ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿ ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ.ಬಸ್ ಚಾಲಕ ಉಮೇಶ್, ಪ್ರಯಾಣಿಕರಾದ ನಳಿನಿ ಬೆಳ್ತಂಗಡಿ, ವಿದ್ಯಾರ್ಥಿನಿ ಮಧುರಾ ಇರ್ವತ್ತೂರು, ರಕ್ಷಣ್ ವೇಣು ಗೋಪಾಲ ಕಾವಳಪಡೂರು, ತಾರಾನಾಥ ಗರ್ಡಾಡಿ, ರೋಹಿಣಿ ಮದ್ದಡ್ಕ, ಲಾರಿ ಚಾಲಕ ಚಿತ್ರದುರ್ಗ ಸಮೀಪದ ಹಿರಿಯೂರಿನ ಮಹೇಶ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
Posted by Vidyamaana on 2023-08-12 17:55:28 |
ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ಅಡ್ಡ ಹಾಕಿ ದರೋಡೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾದ ವಿಚಾರ ಶುದ್ಧ ಸುಳ್ಳು ಇಲ್ಲಿ ಯಾವುದೇ ದರೋಡೆ ಪ್ರಕರಣ ನಡೆದಿಲ್ಲ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆಈ ಕುರಿತು ಸ್ಪಷ್ಟನೆ ನೀಡಿದ ಅವರು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ರಾತ್ರಿ ಹೊತ್ತು ವಾಹನಗಳನ್ನು ತಡೆದು ದರೋಡೆ ನಡೆಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್ಪ್ರೆಸ್ ವೇ ದರೋಡೆಕೋರರ ಹಾವಳಿ ಎಂದು ಪೋಸ್ಟ್ ಮಾಡಲಾಗಿತ್ತು ಇದು ಸತ್ಯಕ್ಕೆ ದೂರವಾದ ವಿಚಾರ ಇಲ್ಲಿ ಒಂದು ಘಟನೆ ನಡೆದಿದ್ದು ಬಿಟ್ಟರೆ ಬೇರೆ ಯಾವುದೇ ಪ್ರಕರಣ ನಡೆದಿಲ್ಲ ಹಾಗಾಗಿ ಯಾರು ಸುಳ್ಳು ಸುದ್ದಿಯನ್ನು ನಂಬಬೇಡಿ ಎಂದು ಹೇಳಿದ್ದಾರೆ.ಜಾಲತಾಣದಲ್ಲಿ ಹಾಕಿರುವ ಸುಳ್ಳು ಸುದ್ದಿ ಅಲ್ಲದೆ ಈ ಪೋಟೋದಲ್ಲಿರುವ ರಸ್ತೆ ಭಾರತಕ್ಕೆ ಸಂಬಂಧಿಸಿದ್ದಲ್ಲ ಇದು ಹೊರ ದೇಶಕ್ಕೆ ಸಂಬಂಧಿಸಿದ ಪೋಸ್ಟ್ ಆಗಿದೆ. ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ಯಾವುದೇ ದರೋಡೆಗಳು ಆಗುತ್ತಿಲ್ಲ. ಅಲ್ಲದೆ ಹೈವೇ ಪ್ಯಾಟ್ರೋಲ್ ಇಪ್ಪತ್ತನಾಲ್ಕು ಗಂಟೆ ಕೆಲಸ ಮಾಡುತ್ತಿದೆ. ಈ ಹಿಂದೆ ಆಗಿದ್ದ ದರೋಡೆಗಳ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನ ಈಗಾಗಲೇ ಬಂಧಿಸಿದ್ದೇವೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವುದು ಸುಳ್ಳು ಸುದ್ದಿ ಇದಕ್ಕೆ ಯಾರು ಕಿವಿಗೊಡಬೇಡಿ ಎಂದು ಹೇಳಿದ್ದಾರೆ
Posted by Vidyamaana on 2023-05-18 05:08:42 |
ಪುತ್ತೂರು: ಕಟೀಲ್ ಹಾಗೂ ಡಿವಿ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿರುವವರ ಮೇಲೆ ಪುತ್ತೂರು ಪೊಲೀಸ್ ಇಲಾಖೆ ನಡೆಸಿದ ಥರ್ಡ್ ಡಿಗ್ರಿ ಟ್ರಿಟ್ ಮೆಂಟ್ ಗೆ ರಾಜ್ಯವೇ ಬೆಚ್ಚಿ ಬಿದ್ದಿದೆ.
ಮಾಜಿ ಶಾಸಕಿ ಶಕುಂತಲ ಶೆಟ್ಟಿ ಪುತ್ತೂರು ಡಿವೈಎಸ್ಪಿ ಗೆ ಕರೆ ಮಾಡಿ ತೀವ್ರ ತರಾಟೆಗೆ ತೆಗೆದುಕೊಂಡ ಬಗ್ಗೆ ವರದಿಯಾಗಿದೆ. ಇದೊಂದು ರಾಜ್ಯವೇ ತಲೆತಗ್ಗಿಸುವ ವಿಷಯವಾಗಿದೆ ಎಂದರು.
ದೇಶ ಹಾಗೂ ವಿದೇಶದಿಂದ ಹಲವು ಕರೆಗಳು ನನಗೆ ಬರುತ್ತಿದ್ದು ಈ ಕೃತ್ಯಕ್ಕೆ ಜನತೆ ಭಯಭೀತರಾಗಿದ್ದಾರೆ ಎಂದು ಅಧಿಕಾರಿಯಲ್ಲಿ ಹೇಳಿದರು.
ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿದ ಕೂಡಲೇ ಅವರೇನು ತಳಮಟ್ಟಕ್ಕೆ ಹೋಗೋದಿಲ್ಲ, ಹೂವಿನ ಹಾರ ಹಾಕಿದ ಕೂಡಲೇ ಮೇಲ್ಮಟ್ಟಕ್ಕೂ ಹೋಗೊದಿಲ್ಲ. ಪೊಲೀಸರಿಗೆ ಅಷ್ಟು ಕೈ ತುರಿಸುವುದಿದ್ದರೆ ಎರಡು ಪೆಟ್ಟು ಕೊಟ್ಟು ಕೇಸ್ ದಾಖಲಿಸಬಹುದಿತ್ತು. ಒತ್ತಡಕ್ಕೆ ಮಣಿದು ಈ ರೀತಿ ವರ್ತಿಸುವುದು ಇಲಾಖೆಗೆ ಶೋಭೆಯಲ್ಲ ಎಂದರು.
ಅತ್ಯಾಚಾರಿಯೋರ್ವನನ್ನು ಇದಕ್ಕಿಂತ ಕಡೆ ಹಿಂಸಿಸಿದ್ದರೂ ಯಾರೂ ಕೇಳುತ್ತಿರಲಿಲ್ಲ. ಕೇವಲ ಬ್ಯಾನರ್ ಕಟ್ಟಿದ ಸಣ್ಣ ವಿಷಯಕ್ಕೆ ಈ ರೀತಿ ಹಿಂಸಿಸಿದ್ದು ಪೊಲೀಸ್ ಇಲಾಖೆಯ ಘನತೆಗೆ ತಕ್ಕುದಾದ ಕ್ರಿಯವಲ್ಲ ಎಂದು ಪುತ್ತೂರು ಡಿವೈಎಸ್ಪಿಯನ್ನು ಶಕುಂತಲ ಶೆಟ್ಟಿ ತರಾಟೆಗೆ ತೆಗೆದುಕೊಂಡರು.