Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34
ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.
*💥Whats App Group ಗೆ ಸೇರಲು ಕ್ಲಿಕ್ ಮಾಡಿ
*ಹಣ ತೆಗೆದುಕೊಂಡು ಹೋದ ವಿಚಾರ*: ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.
ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.
ಮೂವರು ಕೂಡ ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
Posted by Vidyamaana on 2024-02-17 21:17:57 |
ಕ್ಯಾಲಿಫೋರ್ನಿಯಾ: ಕೇರಳ ಮೂಲದ ಕುಟುಂಬವೊಂದರ ಸದಸ್ಯರು ಅಮೆರಿಕದ ಕ್ಯಾಲಿಫೋರ್ನಿಯಾದ ಮನೆಯಲ್ಲಿ ಶವಗಳಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಅಲೈಸ್ ಪ್ರಿಯಾಂಕಾ (40) ಹಾಗೂ 4 ವರ್ಷದ ಅವಳಿ ಮಕ್ಕಳಾದ ನೋಹ್ ಮತ್ತು ನೀತನ್ ಎಂದು ಗುರುತಿಸಲಾಗಿದೆ. ಇದು ಕೊಲೆ- ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ.
ಮನೆಯಲ್ಲಿ ಯಾರೂ ಫೋನ್ ಕರೆಗಳಿಗೆ ಸ್ಪಂದಿಸದ ಕಾರಣ ಅನುಮಾನಗೊಂಡ ಕುಟುಂಬದ ಸಂಬಂಧಿಕರು, ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಅದಕ್ಕೆ ಸ್ಪಂದಿಸಿದ ಪೊಲೀಸರು ಸ್ಥಳಕ್ಕೆ ತೆರಳಿದಾಗ ಮೃತದೇಹಗಳು ಪತ್ತೆಯಾಗಿವೆ.
ಇಂಡಿಯನ್- ಅಮೆರಿಕನ್ ದಂಪತಿ ಆನಂದ್ ಮತ್ತು ಅಲೈಸ್ ಅವರು ತಮ್ಮ ಸ್ನಾನದ ಕೋಣೆಯಲ್ಲಿ ಗುಂಡೇಟಿನ ಗಾಯದಿಂದ ಮೃತಪಟ್ಟಿದ್ದಾರೆ. ಅವರ ಇಬ್ಬರು ಮಕ್ಕಳ ಶವಗಳು ಬೆಡ್ ರೂಂನಲ್ಲಿ ಪತ್ತೆಯಾಗಿವೆ. ಅವರ ಸಾವಿನ ಕುರಿತಾದ ತನಿಖೆ ಇನ್ನೂ ನಡೆಯುತ್ತಿದೆ.
"ಮನೆಗೆ ಆಗಮಿಸಿದ ಪೊಲೀಸರಿಗೆ ಒಳಗಿನಿಂದ ಯಾವುದೇ ಸ್ಪಂದನೆ ಬಂದಿರಲಿಲ್ಲ. ಅವರು ಮನೆಯ ಹೊರಗಿನ ಭಾಗಗಳನ್ನು ತಪಾಸಣೆ ನಡೆಸಿದರು. ಯಾರೂ ಬಲವಂತವಾಗಿ ಪ್ರವೇಶಿಸಿದ ಸುಳಿವು ಇರಲಿಲ್ಲ. ಚಿಲಕ ಹಾಕದ ಕಿಟಕಿಯನ್ನು ಕಂಡ ಪೊಲೀಸರು, ಮನೆ ಒಳಗೆ ಪ್ರವೇಶಿಸಿದರು. ಅಲ್ಲಿ ಒಳಗೆ ನಾಲ್ವರ ಶವಗಳು ಕಂಡುಬಂದಿವೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
9 ಎಂಎಂ ಪಿಸ್ತೂಲು ಮತ್ತು ಲೋಡೆಡ್ ಮ್ಯಾಗಜಿನ್ ಬಾತ್ರೂಂನಲ್ಲಿ ದೊರಕಿವೆ. 2020ರಲ್ಲಿ 2.1 ಮಿಲಿಯನ್ ಡಾಲರ್ಗೆ ಈ ಮನೆಯನ್ನು ದಂಪತಿ ಖರೀದಿಸಿದ್ದರು.
ಇದು ಕೊಲೆ- ಆತ್ಮಹತ್ಯೆ ಪ್ರಕರಣದಂತೆ ಕಂಡುಬರುತ್ತಿದೆ. ಆದರೆ ಯಾವುದೇ ಇತರೆ ಸಾಧ್ಯತೆಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುಟುಂಬ ಕೇರಳ ಮೂಲದ್ದಾಗಿದ್ದು, ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಿತ್ತು. ಆನಂದ್ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ಅವರ ಪತ್ನಿ ಅಲೈಸ್ ಸೀನಿಯರ್ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳ ಹಿಂದೆ ಅವರು ನ್ಯೂಜೆರ್ಸಿಯಿಂದ ಸ್ಯಾನ್ ಮಾಟೆಯೊ ಕೌಂಟಿಗೆ ಸ್ಥಳಾಂತರವಾಗಿದ್ದರು.
ಕೋರ್ಟ್ ದಾಖಲೆಗಳ ಪ್ರಕಾರ, ಪತ್ನಿಯಿಂದ ವಿಚ್ಛೇದನ ಪಡೆಯಲು ಆನಂದ್ 2016ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಬೇರ್ಪಡುವಿಕೆಯನ್ನು ಕೋರ್ಟ್ ಮಾನ್ಯ ಮಾಡಿರಲಿಲ್ಲ. ಇದರ ಬಳಿಕ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು.
ಮೆಟಾದಲ್ಲಿ ಕೆಲಸ ಮಾಡುತ್ತಿದ್ದ ಆನಂದ್, ಕಳೆದ ವರ್ಷದ ಜೂನ್ನಲ್ಲಿ ಅದರಿಂದ ಹೊರಬಂದು, ಲಾಜಿಟ್ಸ್ ಎನ್ನುವ ಸ್ವಂತ ಕೃತಕ ಬುದ್ಧಿಮತ್ತೆಯ ಕಂಪೆನಿಯನ್ನು ಹುಟ್ಟುಹಾಕಿದ್ದರು.
Posted by Vidyamaana on 2023-04-23 09:29:21 |
ಬೆಳ್ತಂಗಡಿ: ನವ ವಿವಾಹಿತೆ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ,
ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿಸದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2024-05-30 21:54:10 |
ಮೈಸೂರು: ಲಂಚ ಸ್ವೀಕರಿಸುತ್ತಿದ್ದ ಸಬ್ ಇನ್ಸ್ ಪೆಕ್ಟರ್ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮೈಸೂರಿನ ಕುವೆಂಪು ನಗರ ಠಾಣೆ ಸಬ್ ಇನ್ಸ್ ಪೆಕ್ಟರ್ ರಾಧಾ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಕ್ರಿಮಿನಲ್ ಕೇಸ್ ಒಂದರ ಸಂಬಂಧ ಕುವೆಂಪುನಗರದ ವ್ಯಕ್ತಿಯಿಂದ 25000 ರೂ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರಾಧಾ ಅವರನ್ನು ಬಂಧಿಸಿದ್ದಾರೆ.
Posted by Vidyamaana on 2023-05-05 08:31:45 |
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು.
ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ನವಾಝ್ ಉಳ್ಳಾಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು ಹಾಗೂ ಇತರ ನಾಯಕರು ಉಪಸ್ಥಿತರಿದ್ದರು
ಇಂದು ಮತ್ತು ನಾಳೆ ಉಳ್ವಾಲ, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ನಡೆಯುವ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಎಂ.ಕೆ ಫೈಝಿಯವರು ಭಾಗವಹಿಸಲಿದ್ದಾರೆ.
Posted by Vidyamaana on 2023-07-01 11:34:46 |
ಪುತ್ತೂರು: ವಿದ್ಯಾರ್ಥಿಗಳ ಜೀವನದಲ್ಲಿ ನಿಶ್ಚಿತವಾದ ಗುರಿಯಿದ್ದರೆ ಮಾತ್ರ ಯಶಸ್ಸು ಸಾಧ್ಯ. ಗುರಿಯನ್ನು ಸಾಧಿಸುವ ಛಲ ಪ್ರತಿಯೊಬ್ಬರಲ್ಲೂ ಇರಬೇಕು. ನಿರಂತರ ಪ್ರಯತ್ನದಿಂದ ಗೆಲುವು ಸಾಧ್ಯ ಎಂದು ಮಂಗಳೂರಿನ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಎಂ ಜಗನ್ನಾಥ ಕಾಮತ್ ಅಂಡ್ ಕೋ ಇದರ ಮ್ಯಾನೇಜಿಂಗ್ ಪಾರ್ಟ್ನರ್ ಆಗಿರುವ ಸಿಎ ಎಂ ಜಗನ್ನಾಥ ಕಾಮತ್ ಹೇಳಿದರು ಅವರು ಜುಲೈ ೧ರಂದು ಸಂತ ಫಿಲೋಮಿನ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘದ ಆಶ್ರಯದಲ್ಲಿ ನಡೆದ ವಾಣಿಜ್ಯ ಸಂಘದ ಉದ್ಘಾಟನೆ ಮತ್ತು ರಾಷ್ಟ್ರೀಯ ಸಿಎ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಸಿಎ ಮಾಡಲು ವಿದ್ಯಾರ್ಥಿಗಳಿಗೆ ಲೆಕ್ಕಪತ್ರ ನಿರ್ವಹಣೆ, ಹಣಕಾಸು, ಸಾಮಾನ್ಯ ಗಣಿತ ಇನ್ನಿತರ ಕ್ಷೇತ್ರದಲ್ಲಿ ಪದವಿ ಅಗತ್ಯವಿರುತ್ತದೆ. ಸಿಎ ಮಾಡಲು ಬೇಕಾದ ಅರ್ಹತೆ ಪರಿಶ್ರಮದ ಬಗ್ಗೆ ತಿಳಿಸಿದರು.
ಮುಖ್ಯ ಅತಿಥಿಗಳಾದ ಫೈನಾನ್ಸಿಯಲ್ ಎನಾಲಿಸ್ಟ್ ಅಟ್ ಅಮೆಜಾನ್ ನ ಸಿಎ ಕೆ ಮಹಮ್ಮದ್ ಫೈರೋಜ್ ಮಾತನಾಡಿ “ವೈಫಲ್ಯವು ಯಶಸ್ಸಿನ ಮೆಟ್ಟಿಲು ಕಷ್ಟಪಟ್ಟು”. ಓದಿ ವಿಷಯವನ್ನು ಸರಿಯಾಗಿ ಗ್ರಹಿಸಿಕೊಂಡಾಗ ವಿದ್ಯಾರ್ಥಿಗಳು ಸಿಎ ಆಗಲು ಸಾಧ್ಯವಾಗುತ್ತದೆ. ನಿರಂತರ ಪರಿಶ್ರಮ ಅತ್ಯಗತ್ಯ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ ವಾಣಿಜ್ಯಶಾಸ್ತವನ್ನು ಅಧ್ಯಯನ ಮಾಡುವುದರಿಂದ ಹಲವಾರು ಅವಕಾಶಗಳು ಸಿಗುತ್ತದೆ. ಬ್ಯಾಂಕಿAಗ್ ಕ್ಷೇತ್ರ, ಚಾರ್ಟೆಡ್ ಅಕೌಂಟೆAಟ್ ನಂತಹ ಬೇರೆ ಬೇರೆ ಕ್ಷೇತ್ರಗಳು ವಿದ್ಯಾರ್ಥಿಗಳ ಮುಂದೆ ತೆರೆದಿದ್ದು ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರು ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ ವಿದ್ಯಾರ್ಥಿಗಳಾದ ನಿಧಾ ಅತಿಥಿಗಳನ್ನು ಸ್ವಾಗತಿಸಿ ಪ್ರತೀಕ್ಷಾ ಅತಿಥಿಗಳನ್ನು ಪರಿಚಯಿಸಿದರು. ಆಸ್ತಿಕ ವಂದಿಸಿ ನಿಶ್ಚಿತ ಕಾರ್ಯಕ್ರಮ ನಿರೂಪಿಸಿದರು
Posted by Vidyamaana on 2024-02-28 21:56:14 |
ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂದರೆ ಫೆಬ್ರವರಿ 28 ರಂದು ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 16ನೇ ಕಂತನ್ನ ಬಿಡುಗಡೆ ಮಾಡಿದ್ದಾರೆ. 16ನೇ ಕಂತಿನಡಿ 21 ಸಾವಿರ ಕೋಟಿಗೂ ಹೆಚ್ಚು ಸಮ್ಮಾನ್ ಮೊತ್ತವನ್ನ 9 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ.ಮೊತ್ತವನ್ನ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನ ಪ್ರತಿ 4 ತಿಂಗಳ ಅಂತರದಲ್ಲಿ ತಲಾ 2,000 ರೂ.ಗಳಂತೆ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಕಳುಹಿಸಲಾಗುತ್ತದೆ.ಅಂತಹ ರೈತರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ.!
ಕುಟುಂಬದಲ್ಲಿ ಯಾರಾದರೂ ತೆರಿಗೆ ಪಾವತಿಸಿದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ. ಅಂದರೆ ಕಳೆದ ವರ್ಷ ಗಂಡ ಅಥವಾ ಹೆಂಡತಿ ಆದಾಯ ತೆರಿಗೆ ಪಾವತಿಸಿದ್ದರೆ ಅವರಿಗೆ ಸಿಗುವುದಿಲ್ಲ. ಈ ಯೋಜನೆಯ ಲಾಭ, ಕೃಷಿ ಭೂಮಿಯನ್ನ ಕೃಷಿ ಕೆಲಸಗಳ ಬದಲಿಗೆ ಇತರ ಉದ್ದೇಶಗಳಿಗೆ ಬಳಸುತ್ತಿರುವವರು ಅಥವಾ ಇತರರ ಹೊಲಗಳಲ್ಲಿ ಕೃಷಿ ಕೆಲಸ ಮಾಡುವಂತಹ ರೈತರು ಸಹ ಈ ಯೋಜನೆಯ ಲಾಭವನ್ನ ಪಡೆಯಲು ಸಾಧ್ಯವಿಲ್ಲ.
ಒಬ್ಬ ರೈತ ವ್ಯವಸಾಯ ಮಾಡುತ್ತಿದ್ದು, ಅವನ ಹೆಸರಿನಲ್ಲಿ ಜಮೀನು ಇಲ್ಲದಿದ್ದಲ್ಲಿ ಆತನಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ. ಜಮೀನು ತನ್ನ ತಂದೆ ಅಥವಾ ತಾತನ ಹೆಸರಲ್ಲಿದ್ದರೂ ಸಹ ಈ ಯೋಜನೆಯ ಲಾಭವನ್ನ ಪಡೆಯಲು ಸಾಧ್ಯವಿಲ್ಲ. ಯಾರಾದರೂ ಕೃಷಿ ಜಮೀನು ಹೊಂದಿರುವವರು ಸರ್ಕಾರಿ ನೌಕರನಾಗಿದ್ದರೆ ಅಥವಾ ನಿವೃತ್ತಿ ಹೊಂದಿದವರಾಗಿದ್ದರೆ ಅವರೂ ಈ ಯೋಜನೆಯಿಂದ ವಂಚಿತರಾಗುತ್ತಾರೆ.ಇದೇ ಸಮಯದಲ್ಲಿ ಹಾಲಿ ಅಥವಾ ಮಾಜಿ ಸಂಸದರು, ಶಾಸಕರು, ಸಚಿವರು ಕೂಡ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಪ್ರಯೋಜನ ಪಡೆಯುವುದಿಲ್ಲ.ಅನರ್ಹ ವೃತ್ತಿಪರ ನೋಂದಾಯಿತ ವೈದ್ಯರು, ಇಂಜಿನಿಯರ್ಗಳು, ವಕೀಲರು, ಚಾರ್ಟರ್ಡ್ ಅಕೌಂಟೆಂಟ್ಗಳು ಅಥವಾ ಅವರ ಕುಟುಂಬದ ಸದಸ್ಯರು ಕೂಡ ಪಟ್ಟಿಯಲ್ಲಿ ಬರುತ್ತಾರೆ. ರೈತರಾಗಿದ್ದರೂ, ಯಾರಾದರೂ ತಿಂಗಳಿಗೆ 10,000 ರೂ.ಗಿಂತ ಹೆಚ್ಚು ಪಿಂಚಣಿ ಪಡೆದರೆ, ಅವರು ಈ ಯೋಜನೆಯ ಫಲಾನುಭವಿಯಾಗಲು ಸಾಧ್ಯವಿಲ್ಲ.
ರೈತರು ಇಲ್ಲಿ ಸಂಪರ್ಕಿಸಬೇಕು : ಎಲ್ಲವೂ ಸರಿಯಾಗಿದ್ದ ನಂತರವೂ ಪಿಎಂ ಕಿಸಾನ್ ಯೋಜನೆಯ ಮೊತ್ತವು ನಿಮ್ಮ ಖಾತೆಗೆ ತಲುಪಿಲ್ಲವಾದರೆ, ಮೊದಲು ನೀವು ಅಧಿಕೃತ ಇಮೇಲ್ ಐಡಿ pmkisan-ict@gov.in ನಲ್ಲಿ ಸಂಪರ್ಕಿಸಬಹುದು. ನೀವು ಪಿಎಂ ಕಿಸಾನ್ ಯೋಜನೆಯ ಸಹಾಯವಾಣಿ ಸಂಖ್ಯೆ - 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಂಪರ್ಕಿಸಬಹುದು. ಇಲ್ಲಿಯೂ ನಿಮ್ಮ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ.