ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಸುದ್ದಿಗಳು News

Posted by vidyamaana on 2024-03-23 10:38:46 |

Share: | | | | |


ನಕಲಿ ಚಿನ್ನ ದ ಆಸೆಗೆ ತುಮಕೂರಿನಲ್ಲಿ ಬಲಿಯಾದರೇ ಬೆಳ್ತಂಗಡಿಯ ಮೂವರು?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣದ‌ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಐದು ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಗುರುತಿಸಿದ್ದಾರೆ.

ಇನ್ನು ಮೂರು ಜನ ಮೃತರೆಲ್ಲಾ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ ಪ್ಲ್ಯಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು ಇತರ ಐದು ಜನ ಸೇರಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. 


ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು. ಇನ್ನು ಮೂವರ ಶವ ಸಂಪೂರ್ಣವಾಗಿ ಸುಟ್ಟಿರುವ ಕಾರಣ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ಬಳಿಕ ಮನೆಮಂದಿಗೆ ಶವ ಬಿಟ್ಟು ಕೊಡಲಿದ್ದಾರೆ. ಡಿಎನ್ಎ ವರದಿ ಬರಲು ಸುಮಾರು ಒಂದು ವಾರ ಬೇಕಾಗುತ್ತದೆ ಎಂದು ಪೊಲೀಸರು ಮನೆಯವರಿಗೆ ತಿಳಸಿದ್ದಾರೆ.

 Share: | | | | |


ಉಪ್ಪಿನಂಗಡಿ : ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ಟೈಲರಿಂಗ್ ತರಗತಿ ಉದ್ಘಾಟನೆ

Posted by Vidyamaana on 2023-07-19 16:03:08 |

Share: | | | | |


ಉಪ್ಪಿನಂಗಡಿ : ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ಟೈಲರಿಂಗ್ ತರಗತಿ ಉದ್ಘಾಟನೆ

ಉಪ್ಪಿನಂಗಡಿ : ವಿದ್ಯೆ ಯಾವುದೇ ಇರಲಿ ಕಲಿತ ವಿದ್ಯೆಯನ್ನು ಬದುಕಿನಲ್ಲಿ ಉಪಯೋಗಕ್ಕೆ ತಂದರೆ ಮಾತ್ರ ಕಲಿಕೆಗೆ ಮಹತ್ವ ಬರುವುದು. ಕಲಿತಂತೆ  ಸರಳತೆಯಿಂದ ಬದುಕಿದರೆ ನೆಮ್ಮದಿಯ ಬದುಕು ಸಿಗುವುದು,ಕೆಲ ಮಹಿಳೆಯರು ಇಂದು ಆಡಂಬರದ ಬದುಕಿಗೆ ಜೋತು ಬಿದ್ದು ಕಡೆಗೆ ಕುಟುಂಬ ಕಲಹಕ್ಕೂ ಕಾರಣವಾಗುತ್ತಿರುವುದು ಕಾಣುತ್ತಿದ್ದೇವೆ. ಆದ್ದರಿಂದ ಶಿಸ್ತು ಹಾಗೂ ಸರಳತೆಯಿಂದ ಬದುಕುವ ಕಲೆಯನ್ನು ಪ್ರತಿಯೊಬ್ಬರೂ ಕಲಿತು ಕೊಳ್ಳಬೇಕು ಎಂದು ಕೆಮ್ಮಾರ ಶಂಸುಲ್ ಉಲಮಾ ವುಮೆನ್ಸ್ ಕಾಲೇಜ್ ಅಧ್ಯಕ್ಷ ಎಸ್.ಬಿ.ಮುಹಮ್ಮದ್ ದಾರಿಮಿ ಅವರು ಹೇಳಿದರು.

     ಅವರು ಕೆಮ್ಮಾರ ಶಕ್ತಿನಗರ ಶಂಸುಲ್ ಉಲಮಾ ವುಮೆನ್ಸ್ ಶರೀಅತ್ ಕಾಲೇಜ್ ನಲ್ಲಿ ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿಯನ್ನು ಉದ್ಗಾಟಿಸಿ ಮಾತನಾಡುತ್ತಿದ್ದರು.

      ಮಹಿಳೆಯರು ವಿದ್ಯಾರ್ಥಿ ಜೀವನದಲ್ಲೇ ಟೈಲರಿಂಗ್ ನಂತಹ ಕೌಶಲ್ಯ ಆಧಾರಿತ ಶಿಕ್ಷಣವನ್ನು ಕಲಿತು ಕೊಂಡರೆ ಮುಂದೆ ಮನೆಯಲ್ಲಿದ್ದು ಕೊಂಡೇ ಕೈ ತುಂಬಾ ಸಂಪಾದಿಸಲು ಸಾಧ್ಯವಾಗುವುದು. ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. 

    ಸಂಸ್ಥೆಯ ಉಸ್ತಾದರಾದ ಹನೀಫ್ ದಾರಿಮಿ ಪಡೀಲ್ ಮತ್ತು ಶೌಕತ್ತ್ ಫೈಝಿ ಗಂಡಿಬಾಗಿಲು ಸಮಾರಂಭದಲ್ಲಿ ಮಾತನಾಡಿದರು.ಶಿಕ್ಷಕಿಯರಾದ ಶಾಹಿರಾ ಮಾಹಿರ ಮತ್ತು ಸುಹೈಲಾ ಫಾಳಿಲಾ ಅವರು ವಿದ್ಯಾರ್ಥಿನಿಯರಿಗೆ ಟೈಲರಿಂಗ್ ತರಬೇತಿ ಯ ಬಗ್ಗೆ ಮಾಹಿತಿ ನೀಡಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

Posted by Vidyamaana on 2023-04-15 23:28:53 |

Share: | | | | |


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ : ಏ.16, 17 ರಂದು ವಾಹನ ಸಂಚಾರದಲ್ಲಿ ಬದಲಾವಣೆ | ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ


ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಏ.16 ಹಾಗೂ 17 ರಂದು ವಾಹನದಟ್ಟಣಿ ಜಾಸ್ತಿಯಾಗುವ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಹಾಗೂ ವಾಹನ ಪಾರ್ಕಿಂಗ್‍ ಗೆ ಸ್ಥಳ ಗುರುತಿಸಲಾಗಿದೆ ಎಂದು ಪುತ್ತೂರು ಸಂಚಾರ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

ಏ.16 ಭಾನುವಾರ ಬಲ್ನಾಡಿನಿಂಡ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಿಂದ ಕಿರುವಾಳು ಆಗಮನ ಹಾಗೂ ಏ.17 ರ ಬ್ರಹ್ಮರಥೋತ್ಸವ ಇರುವುದರಿಂದ ಜನದಟ್ಟಣಿ ಜತೆಗೆ ವಾಹನದಟ್ಟಣಿ ಜಾಸ್ತಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಅಲ್ಲದೆ ನಿಗದಿಪಡಿಸಿದ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕಿಂಗ್‍ ಮಾಡಬೇಕಾದ್ದು ಕಡ್ಡಾಯವಾಗಿದೆ.

ಏ.16 ರಂದು ಕಿರುವಾಳು ಆಗಮನ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಸಂದರ್ಭದಲ್ಲಿ ಸಂಪ್ಯ ಕಡೆಯಿಂದ ಕಬಕ, ಮಂಗಳೂರು ಕಡೆಗೆ ಹೋಗುವ ವಾಹನಗಳು ದರ್ಬೆ ಅಶ್ವಿನಿ ವೃತ್ತ, ಬೆದ್ರಾಳ, ಸಾಲ್ಮರ, ಪಡೀಲ್ ಮೂಲಕ ಸಂಚರಿಸುವುದು. ಮಂಗಳೂರು, ವಿಟ್ಲ ಕಬಕ ಕಡೆಗಳಿಂದ ಬರುವ ವಾಹನಗಳು ಲಿನೆಟ್ ವೃತ್ತ, ಬೊಳುವಾರು ವೃತ್ತ, ಪಡೀಲ್, ಕೊಟೇಚಾ ಹಾಲ್ ಕ್ರಾಸ್, ಸಾಲ್ಮರ, ಎಪಿಎಂಸಿ ರಸ್ತೆಯಾಗಿ ದರ್ಬೆ‍ ಅಶ್ವಿನಿ ವೃತ್ತವಾಗಿ ಸಂಚರಿಸುವುದು.

ಏ.16 ಹಾಗೂ 17 ರಂದು ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಂಜೆ 4 ರ ನಂತರ ಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‍ ಗಳು ಎಂಟಿ ರಸ್ತೆ ಮೂಲಕ ತೆರಳಿ, ಎಡಕ್ಕೆ ತಿರುಗಿ ಪರ್ಲಡ್ಕ ಬೈಪಾಸ್ ಮೂಲಕ ತೆರಳಬೇಕು. ಮಂಗಳೂರು ಕಡೆಯಿಂದ ಬರುವ ಎಲ್ಲಾ ಬಸ್‍ ಗಳು ಬೊಳುವಾರು-ಪಡೀಲ್-ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸುವುದು. ಉಪ್ಪಿನಂಗಡಿ ಕಡೆಯಿಂದ ಬರುವ ಬಸ್‍ ಗಳು ಪಡೀಲ್-ಕೊಟೇಚಾ ಹಾಲ್-ಸಾಲ್ಮರ ಕ್ರಾಸ್, ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಬರುವುದು. ಸುಳ್ಯ, ಮಡಿಕೇರಿ ಕಡೆಯಿಂದ ಬರುವ ಬಸ್ ಗಳು ಮುಖ್ಯರಸ್ತೆಯಿಂದ ಸಾಗಿ ಅರುಣಾ ಚಿತ್ರ ಮಂದಿರದ ಮೂಲಕ ಸಾಗಿ ಬಸ್ ನಿಲ್ದಾಣಕ್ಕೆ ಸಂಚರಿಸುವುದು.

ನೆಹರೂನಗರ, ಬೊಳುವಾರು ಕಡೆಗಳಿಂದ ಬರುವ ಆಟೋ ರಿಕ್ಷಾಗಳು ಮಯೂರ ಇನ್‍ ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಉರ್ಲಾಂಡಿ ಕ್ರಾಸ್ ಮೂಲಕ ವಾಪಾಸು ಸಂಚರಿಸುವುದು. ದರ್ಬೆ ಕಡೆಯಿಂದ ಬರುವ ಆಟೋ ರಿ್ಕ್ಷಾಗಳು ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಇಳಿಸಿ ವಾಪಾಸ್ ಸಂಚರಿಸುವುದು. ಪರ್ಲಡ್ಕ ಕಡೆಯಿಂದ ಬರುವ ರಿ್ಕ್ಷಾಗಳು ಕಿಲ್ಲೆ ಮೈದಾನದ ಬಳಿ ಪ್ರಯಾಣಿಕರನ್ನು ಇಳಿಸಿ ಸಂಚರಿಸುವುದು.

ವಾಹನ ಪಾರ್ಕಿಂಗ್ :

ಉಪ್ಪಿನಂಗಡಿ, ಬನ್ನೂರು ಕಡೆಯಿಂದ ಬರುವ ಭಕ್ತರ ವಾಹನಗಳಿಗೆ ಎಪಿಎಂಸಿ ಆವರಣ, ಕೊಂಬೆಟ್ಟು ಸರಕಾರಿ ಪ್ರೌಢಶಾಲಾ ಮೈದಾನ, ಕೊಂಬೆಟ್ಟು ಬಂಟರಭವನ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಾರ್ಕ್‍ ಮಾಡುವುದು, ಸಂಪ್ಯ, ಸುಳ್ಯ, ಬೆಟ್ಟಂಪಾಡಿ, ಪಾಣಾಜೆ, ಪರ್ಲಡ್ಕ ಪುರುಷರಕಟ್ಟೆಯಿಂದ ಬರುವ ವಾಹನಗಳಿಗೆ ತೆಂಕಿಲ ಗೌಡ ಸಮುದಾಯ ಭವನ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಕಿಲ್ಲೆ ಮೈದಾನದಲ್ಲಿ ಪಾರ್ಕ್ ಮಾಡುವುದು. ವಿಟ್ಲ, ಕಬಕ, ನೆಹರುನಗರದಿಂದ ಬರುವ ವಾಹನಗಳು ಜೈನಭವನದ ಬಳಿ, ದರ್ಶನ್ ಹಾಲ್ ಪಕ್ಕದ ಖಾಲಿ ಜಾಗದಲ್ಲಿ ಪಾರ್ಕ್‍ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಉಳಾಯಿಬೆಟ್ಟು ದರೋಡೆ ಪ್ರಕರಣ ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ, ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

Posted by Vidyamaana on 2024-07-05 07:31:37 |

Share: | | | | |


ಉಳಾಯಿಬೆಟ್ಟು ದರೋಡೆ ಪ್ರಕರಣ  ; ಕೋಟ್ಯಾನ್ ಲಾರಿ ಚಾಲಕ ವಸಂತ ಸೂತ್ರಧಾರ,  ಕೇರಳದ ತಂಡ ಸೇರಿ ಹತ್ತು ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಹೊರವಲಯದ ಪೆರ್ಮಂಕಿ ಪರಿಸರದಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಮುಖಂಡ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ನಡೆಸಿದ ಆರೋಪದಲ್ಲಿ ಮಂಗಳೂರು ಪೊಲೀಸರು 10 ಮಂದಿಯನ್ನು ಸೆರೆಹಿಡಿದಿದ್ದಾರೆ. ಇವರಲ್ಲಿ ಉದ್ಯಮಿಯ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ನೀರಮಾರ್ಗ ಗ್ರಾಮ ನಿವಾಸಿ ವಸಂತಕುಮಾರ್ (42) ಒಳಗೊಂಡಿದ್ದಾನೆ.

ಮಾಧ್ಯಮಗಳೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಬಂಧಿತರನ್ನು ನೀರಮಾರ್ಗದ ವಸಂತಕುಮಾರ್ (42), ನೀರಮಾರ್ಗದ ರಮೇಶ್ (42), ಬಂಟ್ವಾಳದ ಬಾಲಕೃಷ್ಣ ರೇಮಂಡ್ ಡಿಸೋಜಾ (47) ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ (48), ತ್ರಿಶೂರಿನ ಜಾಕೀರ್ ಹುಸೇನ್ (56), ತ್ರಿಶೂರ್‌ನಿಂದ ವಿನೋಜ್ (38), ತ್ರಿಶೂರ್‌ನಿಂದ ಸಜೀಶ್ ಎಂಎಂ (32), ತಿರುವನಂತಪುರದಿಂದ ಬಿಜು ಜಿ (41), ತ್ರಿಶೂರ್‌ನಿಂದ ಸತೀಶ್ ಬಾಬು (44), ಮತ್ತು ಶಿಜೋ ದೇವಸಿ (38) ಇದರಲ್ಲಿ 7 ಮಂದಿ ಕೇರಳ ಮೂಲದವರಾಗಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

Posted by Vidyamaana on 2024-02-07 14:56:48 |

Share: | | | | |


ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.


ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದರು. ‘ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಿದು. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಚಂದ್ರಯಾನ 3: ಮೊಬೈಲ್​​ನಲ್ಲೇ ಚಂದ್ರಯಾನ 3 ವೀಕ್ಷಿಸಲು ಇಲ್ಲಿದೆ ನೇರ ಲಿಂಕ್​

Posted by Vidyamaana on 2023-07-14 09:08:26 |

Share: | | | | |


ಚಂದ್ರಯಾನ 3: ಮೊಬೈಲ್​​ನಲ್ಲೇ ಚಂದ್ರಯಾನ 3 ವೀಕ್ಷಿಸಲು ಇಲ್ಲಿದೆ ನೇರ ಲಿಂಕ್​

Chandrayaan 3: ದೇಶದ ಜನತೆ ಕಾತುರದಿಂದ ಕಾಯುವ ಕ್ಷಣ ಇನ್ನಷ್ಟು ಸಮೀಪಿಸುತ್ತಿದೆ. ಚಂದ್ರನ ಅಂಗಳಲದಲ್ಲಿ ಅಧ್ಯಯನ ನಡೆಸುವ ಸಲುವಾಗಿ ಭಾರತವು ಮೂರನೇ ಬಾರಿಗೆ ಉಪಗ್ರಹಗಳನ್ನು ಕಳುಹಿಸಿಕೊಡ್ತಿದೆ. ಹೀಗಾಗಿ ಇಡೀ ವಿಶ್ವದ ಚಿತ್ತ ಆಂಧ್ರದ ಶ್ರೀಹರಿಕೋಟದ ಮೇಲೆ ನೆಟ್ಟಿದೆ.ಚಂದ್ರನ ಅಂಗಳಕ್ಕೆ ರಾಕೆಟ್​ ಉಡಾವಣೆ ಮಾಡುವ ಇಸ್ರೋದ ಪ್ರಯತ್ನ ವಿಫಲವಾಗಿತ್ತು. ಅಂದು ಇಸ್ರೋ ಮುಖ್ಯಸ್ಥ ಶಿವನ್​ ಜೊತೆಯಲ್ಲಿ ಇಡಿ ದೇಶವೇ ಭಾವುಕವಾಗಿತ್ತು. ಆದರೆ ಇಂದು ಚಂದ್ರಯಾನ 3 ಖಂಡಿತವಾಗಿಯೂ ಯಶಸ್ವಿಯಾಗುತ್ತೆ ಎಂಬ ನಂಬಿಕೆಯಲ್ಲಿ ಇಸ್ರೋ ಇದೆ.



ಇನ್ನು ಚಂದ್ರಯಾನ 3ರ ಉಡಾವಣೆಯನ್ನು ನೀವು ಮೊಬೈಲ್​ನಲ್ಲಿಯೇ ವೀಕ್ಷಿಸಬಹುದಾಗಿದೆ. The launch can be http://isro.gov.in ಹಾಗೂ https://facebook.com/ISRO ಮತ್ತು https://youtube.com/watch?v=q2ueCg9bvvQ ನಲ್ಲಿ ನೇರವಾಗಿ ಚಂದ್ರಯಾನವನ್ನು ವೀಕ್ಷಣೆ ಮಾಡಬಹುದಾಗಿದೆ .ಸರಿಯಾಗಿ 2:35ಕ್ಕೆ ಶ್ರೀಹರಿಕೋಟದಿಂದ ರಾಕೆಟ್ ಉಡಾವಣೆಯಾಗಲಿದೆ.

ಅಜಾಗರೂಕತೆಯಿಂದ ಬಂದ ಮೀನಿನ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ

Posted by Vidyamaana on 2024-01-07 18:35:01 |

Share: | | | | |


ಅಜಾಗರೂಕತೆಯಿಂದ ಬಂದ ಮೀನಿನ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ

ಪುತ್ತೂರು: ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ನಿಯಮ ಪಾಲಿಸದೆ ಚಲಾಯಿಸಿಕೊಂಡು ಬಂದ ಲಾರಿಯೊಂದು ದ್ವಿಚಕ್ರವಾಹನಕ್ಕೆ ತೆಂಕಿಲ ಬಳಿ ಡಿಕ್ಕಿಯಾಗಿದೆ.


ಸುಳ್ಯ ಕಡೆಗೆ ಮೀನು ಸಾಗಾಟ ಮಾಡುತ್ತಿದ್ದ ಲಾರಿಯೊಂದು ರಸ್ತೆ ಇನ್ನೊಂದು ಭಾಗದಲ್ಲಿ ಚಲಾಯಿಸಿ ಮುಂಭಾಗದಿಂದ ಬಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊದ ಪರಿಣಾಮ ವಾಹನ ಸವಾರೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿರ ಕವಚ ಇದ್ದ ಕಾರಣದಿಂದ ಸವಾರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ದ್ವಿಚಕ್ರ ವಾಹನದ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಲಾರಿಯೂ ರಸ್ತೆಯಲ್ಲಿ ಮಗುಚಿ ಬಿದ್ದಿದೆ.



Leave a Comment: