ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಸುದ್ದಿಗಳು News

Posted by vidyamaana on 2024-07-03 19:23:39 |

Share: | | | | |


ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಶಾಸಕರಿಂದ ರೂ.೫೦ ಸಾವಿರ ಸಹಾಯಧನ

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. ೫೦ ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

 Share: | | | | |


ಪುತ್ತೂರಿಗೆ ಭರ್ತಿದ್ದಾರೆ ಫೈರ ಬ್ರ್ಯಾಂಡ್ ಲೀಡರ್ ಯತ್ನಾಳ್

Posted by Vidyamaana on 2023-05-19 02:44:27 |

Share: | | | | |


ಪುತ್ತೂರಿಗೆ ಭರ್ತಿದ್ದಾರೆ ಫೈರ ಬ್ರ್ಯಾಂಡ್ ಲೀಡರ್ ಯತ್ನಾಳ್

ಪುತ್ತೂರು:ಬ್ಯಾನರ್ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಲು ಮತ್ತು ಪ್ರಕರಣದ ಕುರಿತು ಮಾಹಿತಿ ಪಡೆಯಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೇ 19ರಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಎಂದು ಅರುಣ್‌ ಕುಮಾರ್‌ ಪುತ್ತಿಲ ತಿಳಿಸಿದ್ದಾರೆ.ಯತ್ನಾಳ್ ಅವರು ನನಗೆ ದೂರವಾಣಿ ಕರೆ ಮಾಡಿ, ಪುತ್ತೂರಿನಲ್ಲಿ ಪೊಲೀಸರಿಂದ

ಹಲ್ಲೆಗೊಳಗಾದ ಹಿಂದು ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿದರಲ್ಲದೆ ನಾಳೆ ನಾನು

ಪುತ್ತೂರುಗೆ ಬರುತ್ತೇನೆಂದು ತಿಳಿಸಿರುವುದಾಗಿ ಅರುಣ್ ಕುಮಾರ್ ಪುತ್ತಿಲ ಅವರು ಮಾಹಿತಿ ನೀಡಿದರು.

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯವನ್ನು ಖಂಡಿಸುತ್ತೇನೆ.ನಾಳೆ ಬೆಳಿಗ್ಗೆ ಪುತ್ತೂರಿಗೆ ಭೇಟಿ ಕೊಟ್ಟು ನಮ್ಮ ಕಾರ್ಯಕರ್ತರ ಆರೋಗ್ಯ ವಿಚಾರಿಸಲಿದ್ದೇನೆ.ಹಿಂದೂ ಕಾರ್ಯಕರ್ತರೊಂದಿಗೆ ಸದಾ ನಿಲ್ಲಲಿದ್ದೇನೆ.ಧರ್ಮಕ್ಕಾಗಿ ಹೋರಾಟ ಮಾಡುವ ಕಾರ್ಯಕರ್ತರು ಯಾವುದೇ ಕ್ಷಣದಲ್ಲೂ ಎದೆಗುಂದಬೇಡಿ ನಿಮ್ಮೊಡನೆ ನಾವಿದ್ದೇವೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸೋಷಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

Posted by Vidyamaana on 2023-11-19 20:09:24 |

Share: | | | | |


ವಿಶ್ವಕಪ್ ಫೈನಲ್:ಸ್ಮಿತ್ ಎಲ್ಬಿಡಬ್ಲ್ಯೂ ಔಟ್ ಆಗಿ ಮರಳಿದ್ದು ಚರ್ಚೆಗೆ ಗುರಿ

ಅಹಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರೋಚಕವಾಗಿ ಸಾಗುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ 241 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ಆರಂಭದಲ್ಲಿ ಅಬ್ಬರಿಸಿದರೂ 3 ವಿಕೆಟ್ ಕಳೆದುಕೊಂಡಿದೆ.7 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಶಮಿ ಎಸೆದ ಚೆಂಡನ್ನು ಕೊಹ್ಲಿ ಕೈಗಿತ್ತು ನಿರ್ಗಮಿಸಿದರು. 15 ರನ್ ಗಳಿಸಿದ್ದ ಮಿಚೆಲ್ ಮಾರ್ಷ್ ಬುಮ್ರಾ ಎಸೆದ ಚೆಂಡನ್ನು ರಾಹುಲ್ ಕೈಗಿತ್ತು ನಿರ್ಗಮಿಸಿದರು. ಬಳಿಕ ಸ್ಮಿತ್‌ ಎಲ್ಬಿಡಬ್ಲ್ಯೂ ಮೂಲಕ ಔಟಾಗಿದ್ದು ವಿಶ್ವಕಪ್ ಫೈನಲ್ ನಂತಹ ಮಹತ್ವದ ಪಂದ್ಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.


ಬುಮ್ರಾ ಎಸೆದ  ಆಫ್-ಕಟ್ಟಿಂಗ್ ನಿಧಾನಗತಿಯ ಚೆಂಡು  ಲೆಗ್ ಸೈಡ್ ಆಡಲು ಬಯಸದ ಸ್ಮಿತ್ ಅವರ ಪ್ಯಾಡ್ ಗೆ ತಾಗಿತು. ಅಂಪಾಯರ್ ಔಟ್ ನೀಡಿದರು. ಆಸಕ್ತಿದಾಯಕರಾಗಿ ಸ್ಮಿತ್ ಅದನ್ನು ಪರಿಶೀಲಿಸಲಿಲ್ಲ. ಇನ್ನೊಂದು ಬದಿಯಲ್ಲಿದ್ದ ಹೆಡ್ ಜತೆ ಮಾತನಾಡಿ ಹೊರನಡೆದರು. ಬಾಲ್ ಎತ್ತರವು ನಿಜವಾಗಿಯೂ ಒಂದು ಪ್ರಶ್ನೆಯಾಗಿತ್ತು. ಆದರೆ ರಿಪ್ಲೇ ಇಂಪ್ಯಾಕ್ಟ್ ನಲ್ಲಿ ಔಟ್ ಆಫ್ ಸ್ಟಂಪ್ ಎಂದು ಕಂಡು ಬಂದಿತು.ಅನುಭವಿ ಆಟಗಾರ ಸ್ಮಿತ್ ಅದನ್ನು ಏಕೆ ಸರಿಯಾಗಿ ಏಕೆ ಪರಿಶೀಲಿಸಲಿಲ್ಲ? ಎಂದು ಹಲವರು ಪ್ರಶ್ನಿಸಿದ್ದಾರೆ.ಆಸ್ಟ್ರೇಲಿಯ 22 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.

ನವೆಂಬರ್ 25– 26ರಂದು ಬೆಂಗಳೂರು ಕಂಬಳ: 125ಕ್ಕೂ ಅಧಿಕ ಜೋಡಿ ಕೋಣಗಳು ಭಾಗಿ:ಅಶೋಕ್ ಕುಮಾರ್ ರೈ

Posted by Vidyamaana on 2023-10-01 07:48:11 |

Share: | | | | |


ನವೆಂಬರ್ 25– 26ರಂದು ಬೆಂಗಳೂರು ಕಂಬಳ: 125ಕ್ಕೂ ಅಧಿಕ ಜೋಡಿ ಕೋಣಗಳು ಭಾಗಿ:ಅಶೋಕ್ ಕುಮಾರ್ ರೈ

ಮಂಗಳೂರು: ‘ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂಬರುವ ನ.25 ಮತ್ತು 26ರಂದು ನಡೆಯಲಿರುವ ಕಂಬಳದಲ್ಲಿ 125 ಜೋಡಿಯಿಂದ 130 ಜೋಡಿ ಕೋಣಗಳು ಭಾಗವಹಿಸಲಿವೆ. ಈ ಕೋಣಗಳನ್ನು ನ. 23ರಂದು ಇಲ್ಲಿಂದ ಬೆಂಗಳೂರಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತದೆ’ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಅಶೋಕ ಕುಮಾರ್‌ ರೈ ತಿಳಿಸಿದರು.


ಬೆಂಗಳೂರು ಕಂಬಳಕ್ಕೆ ಕೋಣಗಳನ್ನು ಕೊಂಡೊಯ್ಯುವ ಕುರಿತು ಅವುಗಳನ್ನು ಸಾಕುವ ಯಜಮಾನರ ಜೊತೆ ಇಲ್ಲಿ ಶನಿವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.ಕಂಬಳ ಕೋಣಗಳನ್ನು ಸಾಕುವ 130 ಯಜಮಾನರು ಬೆಂಗಳೂರು ಕಂಬಳದಲ್ಲಿ ಭಾಗವಹಿಸಲು ಸಮ್ಮತಿಸಿದ್ದಾರೆ. ಕೋಣಗಳನ್ನು ಲಾರಿಗಳಲ್ಲಿ ಕೊಂಡೊಯ್ಯಲಾಗುತ್ತದೆ. ಪಶು ಆಂಬುಲೆನ್ಸ್‌ಗಳು ಹಾಗೂ ಪಶುವೈದ್ಯರು ಜೊತೆಯಲ್ಲೇ ಇರುತ್ತಾರೆ. ಬೆಂಗಾವಲು ವಾಹನಗಳನ್ನೂ ಒದಗಿಸಲಿದ್ದೇವೆ. ಮೆರವಣಿಗೆ ಮೂಲಕ ಸಾಗುವ ಈ ಕೋಣಗಳಿಗೆ ಹಾಸನದಲ್ಲಿ ಎರಡು ಗಂಟೆ ವಿಶ್ರಾಂತಿ ಒದಗಿಸಲಾಗುತ್ತದೆ. ಅಲ್ಲಿ ತುಳುಕೂಟದವರು ಈ ಕೋಣಗಳನ್ನು ಬರಮಾಡಿಕೊಳ್ಳಲಿದ್ದಾರೆ’ ಎಂದರು.


‘ಕೋಣಗಳಿಗೆ ಕಂಬಳಕ್ಕೆ ಮುನ್ನ ಒಂದು ದಿನದ ವಿಶ್ರಾಂತಿ ಸಿಗಲಿದೆ. ಕೋಣಗಳು ಹಾಗೂ ಅವುಗಳ ಯಜಮಾನರು ಉಳಿದುಕೊಳ್ಳುವುದಕ್ಕೆ ಬೆಂಗಳೂರಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಕೋಣಗಳಿಗೆ ಕುಡಿಯುವ ನೀರು ಹಾಗೂ ಮೇವುಗಳನ್ನೂ ಇಲ್ಲಿಂದಲೇ ಕೊಂಡೊಯ್ಯಲಾಗುತ್ತದೆ. ಕಂಬಳಕ್ಕೂ ನಾಲ್ಕೈದು ದಿನ ಮುನ್ನವೇ ತಜ್ಞರು ಕರೆ ಯೋಗ್ಯವಾಗಿದೆಯೇ ಎಂಬುದನ್ನು ಪರಿಕ್ಷಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.


ತಾರಾ ಮೆರುಗು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬಳವನ್ನು ಉದ್ಘಾಟಿಸಲು ಒಪ್ಪಿದ್ದಾರೆ. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹಿತ ಅನೇಕ ಸಚಿವರು, ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ಕಂಬಳದಲ್ಲಿ ತಾರಾ ಮೆರುಗು ಇರಲಿದೆ. ನಟಿ ಐಶ್ವರ್ಯ ರೈ ಹಾಗೂ ನಟ ರಜನಿಕಾಂತ್‌ ಅವರನ್ನು ಸಂಪರ್ಕಿಸಲಾಗಿದ್ದು, ಅವರೂ ಭಾಗವಹಿಸುವ ನಿರೀಕ್ಷೆ ಇದೆ.ಬಾಲಿವುಡ್‌ ಹಾಗೂ ಸ್ಯಾಂಡರ್‌ವುಡ್‌ನ ಖ್ಯಾತ ತಾರೆಯರು ಭಾಗವಹಿಸಲಿದ್ದಾರೆ. ನಟ ರಿಷಬ್‌ ಶೆಟ್ಟಿ, ಅನುಷ್ಕಾ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್‌ ಭಾಗವಹಿಸಲು ಒಪ್ಪಿದ್ದಾರೆ. ಈ ಕಂಬಳದ ನೇರ ಪ್ರಸಾರಕ್ಕೆ ಸ್ಪೋರ್ಟ್ಸ್ ಚಾನೆಲ್‌ಗಳು ಸಂಪರ್ಕಿಸಿವೆ’ ಎಂದರು.


‘ತಮ್ಮ ಹೆಸರಿನಲ್ಲಿ ಕಂಬಳ ಕೋಣ ಓಡಿಸುವಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌, ಸಚಿವ ಡಾ.ಎಂ.ಸಿ.ಸುಧಾಕರ್‌ ಕೋರಿದ್ದರೆ. ಸಾಮಾನ್ಯವಾಗಿ ಕಂಬಳ ಕೋಣಗಳ ಮಾಲೀಕರು ತಮ್ಮ ಕೋಣಗಳನ್ನು ಬೇರೆಯವರ ಹೆಸರಿನಲ್ಲಿ ಒಡಿಸುವುದನ್ನು ಇಷ್ಟಪಡುವುದಿಲ್ಲ. ಅವರು ಒಪ್ಪಿದರೆ ಅವಕಾಶ ಕಲ್ಪಿಸುತ್ತೇವೆ’ ಎಂದು ತಿಳಿಸಿದರು.


‘ಕಂಬಳವನ್ನು 7 ಲಕ್ಷದಿಂದ 9 ಲಕ್ಷ ಮಂದಿ ವೀಕ್ಷಿಸುವ ನಿರೀಕ್ಷೆ ಇದೆ. ಅದಕ್ಕೆ ಪೂರಕ ಸೌಕರ್ಯಗಳನ್ನು ಕಲ್ಪಿಸುತ್ತಿದ್ದೇವೆ. 2 ಸಾವಿರ ಅತಿಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. 145 ಮೀ ಉದ್ದದ ಕಂಬಳದ ಕರೆ ನಿರ್ಮಿಸಲಾಗುತ್ತದೆ. ಸುಮಾರು 15 ಸಾವಿರ ಆಸನಗಳ ಗ್ಯಾಲರಿನಿರ್ಮಾಣವಾಗಲಿದೆ. 6 ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಕರಾವಳಿಯ ಸೊಗಡನ್ನು ಬಿಂಬಿಸುವ 150ಕ್ಕೂ ಹೆಚ್ಚು ಪ್ರದರ್ಶನ ಮಳಿಗೆಗಳನ್ನು ಸ್ಥಾಪಿಸಲಾಗುತ್ತದೆ. ಅವುಗಳಲ್ಲಿ ಕರಾವಳಿ ಶೈಲಿಯ ಆಹಾರಗಳು, ಇಲ್ಲಿನ ಕರಕುಶಲ ಪರಿಕರಗಳು, ಇಲ್ಲಿನ ಆಹಾರ ಸಿದ್ಧ ತಿನಿಸುಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ’ ಎಂದರು.


‘ಕಾನೂನು ಚೌಕಟ್ಟಿನಡಿಯಲ್ಲೇ ಕಂಬಳ ನಡೆಯಲಿದ್ದು, ಈ ಕುರಿತ ಸುಪ್ರೀಂ ಕೋರ್ಟ್ ಆದೇಶ ಪಾಲನೆಗೂ ಆದ್ಯತೆ ನೀಡಲಿದ್ದೇವೆ. ಈ ಕಂಬಳಕ್ಕೆ ₹ 6 ಕೋಟಿ ವೆಚ್ಚವಾಗುವ ನಿರೀಕ್ಷೆ ಇದೆ. ಸರ್ಕಾರದಿಂದಲೂ ನೆರವು ಕೋರುತ್ತೇವೆ. ಕರಾವಳಿಯ ಈ ಕ್ರೀಡೆಗೆ ಜಗದ್ವಿಖ್ಯಾತವಾಗದಬೇಕು ಎಂಬ ಆಶಯ ನಮ್ಮದು. ಬೆಂಗಳೂರಿನಲ್ಲಿ 1 ಎಕರೆ ವಿಶಾಲ ಪ್ರದೇಶದಲ್ಲಿ ತುಳುಭವನ, ಪಿಲಿಕುಳದಲ್ಲಿ ಕಂಬಳ ಭವನ ನಿರ್ಮಿಸುವ ಉದ್ದೇಶವಿದ್ದು, ಈ ಕುರಿತು ಸರ್ಕಾರಕ್ಕೆ ಬೇಡಿಕೆ ಸಲ್ಲಿಸುತ್ತೇವೆ’ ಎಂದರು.


ತುಳು ಮತ್ತು ಕನ್ನಡ ಭಾಷೆಗಳೆರಡರಲ್ಲೂ ಕಂಬಳದ ಧಾಟಿಯಲ್ಲೇ ವೀಕ್ಷಕ ವಿವರಣೆ ನೀಡಲಾಗುತ್ತದೆ. ಭಾಗವಹಿಸುವ ಎಲ್ಲ ಕೋಣಗಳಿಗೂ ಮೆಡಲ್, ಅವುಗಳನ್ನು ಓಡಿಸಿದವರಿಗೆ ಪ್ರಮಾಣಪತ್ರ ನೀಡಲಿದ್ದೇವೆ. ಮೊದಲ ಬಹುಮಾನ ಗೆದ್ದ ಕೋಣಗಳಿಗೆ ಎರಡು ಪವನ್‌ (16 ಗ್ರಾಂ) ಚಿನ್ನ, ದ್ವಿತೀಯ ಸ್ಥಾನ ಪಡೆದ ಕೋಣಗಳಿಗೆ ಒಂದು ಪವನ್ (8 ಗ್ರಾಂ) ಚಿನ್ನ ನೀಡಲಿದ್ದೇವೆ’ ಎಂದು ಮಾಹಿತಿ ನೀಡಿದರು.


ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ‘ಯಜಮಾನರು ಕೋಣಗಳನ್ನು ಬಹಳ ಜತನವಾಗಿ ಸಾಕಿರುತ್ತಾರೆ. ಹಾಗಾಗಿ ಬೆಂಗಳೂರಿಗೆ ಅವುಗಳನ್ನು ಕೊಂಡೊಯ್ಯುವಾಗ ಸಮಸ್ಯೆ ಆಗದಂತೆ ನೋಡಿಕೊಳ್ಳುವಂತೆ ಕೋರಿದ್ದಾರೆ. ಸಮಿತಿ ವ್ಯವಸ್ಥೆ ಕಲ್ಪಿಸಲಿದೆ’ ಎಂದರು.


ದ.ಕ. ಜಿಲ್ಲಾ ಕಂಬಳ ಸಮಿತಿಯ ಗೌರವಾಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಪದಾಧಿಕಾರಿಗಳಾದ ಚಂದ್ರಹಾಸಸಾಧು ಸನಿಲ್, ವಿಜಯ ಕುಮಾರ್ ಜೈನ್‌, ಮುರಳೀಧರ ರೈ, ರೋಹಿತ್‌ ಹೆಗ್ಡೆ, ಲೋಕೇಶ್‌ ಶೆಟ್ಟಿ ಮುಚ್ಚೂರು ಮತ್ತಿತರರು ಇದ್ದರು.

ಮತ ಚಲಾಯಿಸಲು ಮರೆಯದಿರಿ. ಇದು ನಿಮ್ಮ ಹಕ್ಕು!

Posted by Vidyamaana on 2023-05-09 15:03:41 |

Share: | | | | |


ಮತ ಚಲಾಯಿಸಲು ಮರೆಯದಿರಿ. ಇದು ನಿಮ್ಮ ಹಕ್ಕು!

ಪುತ್ತೂರು: ಚುನಾವಣೆಯ ಹೊಸ್ತಿಲಲ್ಲಿ ನಿಂತು, ಸ್ವಾತಂತ್ರ್ಯ ಪೂರ್ವದ ಭಾರತವನ್ನೊಮ್ಮೆ ಮನಸ್ಸಿನಲ್ಲಿ ಕಲ್ಪಿಸಿಕೊಳ್ಳಿ. ನಿಮ್ಮ ಮನಸ್ಸಿನಲ್ಲಿ ಆಗಿನ ಚಿತ್ರಣ ಮೂಡಿದ್ದೇ ಆದರೆ, ಚುನಾವಣೆಯಲ್ಲಿ ಮತ ಚಲಾಯಿಸದಿರಲು ಸಾಧ್ಯವೇ ಇಲ್ಲ.

ಹೌದು, ಚುನಾವಣೆಯ ಮಹತ್ವವೇ ಅಂತದ್ದು. ಪ್ರತಿಯೋರ್ವನ ಅಭಿಪ್ರಾಯವನ್ನು ಸಂಗ್ರಹಿಸಿ, ನಮ್ಮ ನಾಯಕನ ಆಯ್ಕೆ ನಡೆಯುತ್ತದೆ. ಮುಂದಿನ 5 ವರ್ಷ ಆತನೇ ನಮ್ಮ ನೇತಾರ. ಹಾಗಿರುವಾಗ, ನಮ್ಮ ನಾಯಕನ ಬಗ್ಗೆ ನಮಗಿರುವ ಅಭಿಪ್ರಾಯವನ್ನು ನಾವು ಚಲಾಯಿಸಲೇ ಬೇಕು ತಾನೇ? 

     ಹೌದಾದರೆ, ಮರೆಯದಿರಿ ಮೇ 10ರಂದು ಬೆಳಿಗ್ಗೆಯಿಂದ ಸಂಜೆವರೆಗೆ ಮತಗಟ್ಟೆ ನಿಮಗಾಗಿ ಕಾಯುತ್ತಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಮತದಾರ ಪ್ರಭುವಿನ ಆಗಮನಕ್ಕಾಗಿಯೇ ತವಕಿಸುತ್ತಿರುತ್ತಾರೆ. ಮತದಾರ ಪ್ರಭು ತಾನು ರಾಜ ಎನ್ನುವುದನ್ನು ಸಾಬೀತು ಪಡಿಸಬೇಕು. ಯಾವುದೇ ಆಮಿಷ, ಒತ್ತಡಕ್ಕೆ ಒಳಗಾಗದೇ ತನ್ನ ಅಭಿಪ್ರಾಯವನ್ನು ನಿರ್ಭೀತಿಯಿಂದ ಚಲಾಯಿಸಬೇಕು. ಇದು ಸಂವಿಧಾನ ನಮಗೆ ನೀಡಿರುವ ಹಕ್ಕು ಎನ್ನುವುದನ್ನು ಮರೆಯದಿರಿ.

ಮತ ಚಲಾಯಿಸಲು ಮರೆತಿರೋ, ಸಂವಿಧಾನಕ್ಕೆ ಎಸಗಿದ ಅಪಚಾರ ಎನ್ನುವುದನ್ನು ಭಾರತದ ನಾಗರಿಕರು ತಿಳಿದುಕೊಳ್ಳಬೇಕು.

ಮಂಗಳೂರು ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ

Posted by Vidyamaana on 2023-07-26 11:13:11 |

Share: | | | | |


ಮಂಗಳೂರು  ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ

ಮಂಗಳೂರು: ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಗರ್ಭಿಣಿ ಮೃತಪಟ್ಟಿರುವುದಾಗಿ ಆರೋಪಿಸಿ ಮಹಿಳೆಯ ಕುಟುಂಬ ಸದಸ್ಯರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಮಂಗಳೂರಿನಲ್ಲಿ ನಡೆದಿದೆ.


ಆಂಬುಲೆನ್ಸ್ ನಲ್ಲಿ ಶವ ಮುಂದಿಟ್ಟು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಆಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ ಹೆರಿಗೆ ನೋವಿನ ಹಿನ್ನೆಲೆ ಜುಲೈ 2ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ಪರೀಕ್ಷಿಸಿದ ಡ್ಯೂಟಿ ಡಾಕ್ಟರ್ ಸಿಜೆರಿಯನ್ ಮಾಡಿ ಡೆಲೆವರಿ ಮಾಡಬೇಕೆಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯ ಮನೆಯವರು ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು.



ಶಿಲ್ಪಾರ ಕುಟುಂಬದ ಮೂಲದ ಪ್ರಕಾರ, ಅದೇ ದಿನ ಡಾ. ವೀಣಾ ಅನುಪಸ್ಥಿತಿಯಲ್ಲಿ ಬೇರೆ ವೈದ್ಯರು ಶಿಲ್ಪಾರಿಗೆ ಸಿಜೆರಿಯನ್ ಮಾಡಿ ಡೆಲೆವರಿ ಮಾಡಿದ್ದಾರೆ. ಆ ಬಳಿಕ ಹೆಣ್ಣು ಮಗು ಆಗಿದೆ, ಆದರೇ ಗರ್ಭಕೋಶವನ್ನು ತೆಗೆಯಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದರು. ಎರಡು ದಿನಗಳ ನಂತರ ಶಿಲ್ಪಾಗೆ ಜ್ವರ ಬಂದಿದೆ ಎಂದು ಚಿಕಿತ್ಸೆ ನೀಡಿದ್ದಾರೆ. 5 ದಿನಗಳ ನಂತರ ಬ್ರೆನ್ ಮೇಜರ್ ಡ್ಯಾಮೇಜ್ ಆಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಮೃತರ ಪತಿ ಪ್ರದೀಪ್ ಆಚಾರ್ಯ ಮಾಹಿತಿ ನೀಡಿದ್ದಾರೆ. ಆದರೆ ಜುಲೈ 25 ರಂದು ಬಾಣಂತಿ ಶಿಲ್ಪಾ ಆಚಾರ್ಯ ಮೃತಪಟ್ಟಿದ್ದು ವೈದ್ಯರ ನಿರ್ಲಕ್ಷಕ್ಕೆ ಆಕೆಯ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಆಕೆಯ ಪತಿ ಠಾಣೆಗೆ ದೂರು ನೀಡಿದ್ದಾರೆ. ಇಂದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೆನ್ ಲಾಕ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲು ಪೊಲೀಸರು ಬಂದಿದ್ದು, ಈ ವೇಳೆ ಖಾಸಗಿ ಆಸ್ಪತ್ರೆ ಬಳಿ ಮೃತದೇಹ ತಡೆದು ಸಂಬಂಧಿಕರು, ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ರಸ್ತೆ ತಡೆ ಬಂದ್ ಗೆ ಬೆಂಬಲ ಇಲ್ಲ

Posted by Vidyamaana on 2023-08-13 15:47:37 |

Share: | | | | |


ರಸ್ತೆ ತಡೆ ಬಂದ್ ಗೆ ಬೆಂಬಲ ಇಲ್ಲ

ಪುತ್ತೂರು: ಬಂದ್ ಹಾಗೂ ರಸ್ತೆ ತಡೆಗೆ ಬೆಂಬಲ ನೀಡುವುದಿಲ್ಲ ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ತಿಳಿಸಿದೆ.

ಬಂದ್ ರಸ್ತೆ ತಡೆಗಳಿಂದ ವ್ಯಾಪಾರ ವ್ಯವಹಾರಗಳಿಗೆ ತೊಂದರೆ ಆಗುವುದಲ್ಲದೇ, ನಾಗರಿಕರಿಗೆ ಹಲವಾರು ರೀತಿಯ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಬಂದ್ ಹಾಗೂ ರಸ್ತೆ ತಡೆಗೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದೆ.

ಯಾವುದೇ ಧರ್ಮದ ಯುವತಿ ಹಾಗೂ ಯುವಕರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆ ಮುಂದೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು. ಈಗಾಗಲೇ ನಡೆದ ಘಟನೆಗಳಿಗೆ ಖಂಡನೆ ಇದೆ. ಆದ್ದರಿಂದ ವರ್ತಕರ ಪರವಾಗಿ ಸರಕಾರಕ್ಕೆ ಅಸಿಸ್ಟೆಂಟ್ ಕಮಿಷನರ್ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Leave a Comment: