ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ಸಂಪ್ಯ: ಕಾಂಗ್ರೆಸ್ ಚುನಾವಣಾ ಪ್ರಚಾರಸಭೆ

Posted by Vidyamaana on 2023-04-28 13:57:41 |

Share: | | | | |


ಸಂಪ್ಯ: ಕಾಂಗ್ರೆಸ್ ಚುನಾವಣಾ ಪ್ರಚಾರಸಭೆ

ಪುತ್ತೂರು; ಮಕ್ಕಳೇ ನಮ್ಮ ಸಂಪತ್ತು, ಮಕ್ಕಳಿಗಾಗಿ ನಾವು ಎಲ್ಲವನ್ನೂ ಸಹಿಸುತ್ತೇವೆ, ತ್ಯಾಗಗಳನ್ನು ಮಾಡುತ್ತೇವೆ ಆದರೆ ಅದೇ ಮಕ್ಕಳು ನಾಳೆ ದಾರಿ ತಪ್ಪಿದಾಗ ಅಥವಾ ಕಲಿತು ಉದ್ಯೋಗ ಇಲ್ಲವಾದಾಗ ನಾವೇ ಅದರ ನೋವನ್ನು ಅನುಭವಿಸಬೇಕಾಗುತ್ತದೆ , ಮಕ್ಕಳು ದಾರಿತಪ್ಪದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಪೋಷಕರದ್ದು , ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರೆಯುವಂತಾಗಲು ರಾಜ್ಯದಲ್ಲಿ , ದೇಶದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವದಲ್ಲಿರುವಂತೆ ನೋಡಿಕೊಳ್ಳಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ನಮಗೆ ಧರ್ಮಗಳ ನಡುವಿನ ಜಗಳ, ದ್ವೇಷ ಬೇಡ. ನಮ್ಮ ಮಕ್ಕಳೂ ಅದಕ್ಕೆ ಬಲಿಯಾಗುವುದು ಬೇಡ. ಧರ್ಮ ಧರ್ಮಗಳ ನಡುವೆ ದ್ವೇಷದಿಂದ ಸಮಾಜಕ್ಕ ಗಳಿಸಿಕೊಳ್ಲುವಂತದ್ದು ಏನೂ ಇಲ್ಲ. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಪರಸ್ಪರ ಒಂದಾಗಿ ಬಾಳಬೇಕು. ದೇಶದಲ್ಲಿ ಹಲವು ಧರ್ಮಳು, ಜಾತಿಯವರನ್ನೊಳಗೊಂಡ ಸುಂದರ ಹೂದೋಟ, ಈ ಹೂದೋಠ ಹಾಗೇಯೇ ಉಳಿಯಲಿ. ದೇಶದಲ್ಲಿ ಜಾತ್ಯಾತೀತ ಕಲ್ಪನೆ ಉಳಿದುಕೊಳ್ಳಬೇಕಾದರೆ ಹಿಂದೂ ಮುಸ್ಲಿಂ ಪರಸ್ಪರ ಒಟ್ಟಾಗಿರಬೇಕು. ಧರ್ಮಗಳ ನಡುವೆ ವಿಷ ಬೀಜ ಬಿತ್ತುವವರ ಜೊತೆ ನಮ್ಮ ಮಕ್ಕಳು ಸೇರದಂತೆ ನಾವು ಜಾಗೃತರಾಗಬೇಕಿದೆ ಎಂದು ಹೇಳಿದರು.

ಪುತ್ತೂರು ನಗರವನ್ನು ಅಭಿವೃದ್ದಿ ಮಾಡುತ್ತೇವೆ ಎಂದು ಶಾಸಕರು ಪ್ರಾರಂಭದಲ್ಲಿ ಹೇಳಿದ್ದರು ಆದರೆ ಅಭಿವೃದ್ದಿ ಮಾಡಿಲ್ಲ, ಕೇವಲ ಫ್ಲೆಕ್ಸ್ ಹಾಕಿದ್ದು ಮಾತ್ರ, ಬ್ರಹ್ಮ ನಗರದಲ್ಲಿ ೧೦೦ ಮನೆಗಳ ಫ್ಲ್ಯಾಟ್ ನಿರ್ಮಾಣ ಮಾಡುತ್ತೇವೆ ಎಂದವರಿಗೆ ಅಲ್ಲಿಗೆ ಸರಿಯಾದ ಮೂಲಭೂತ ಸೌಕರ್ಯವನ್ನು ಮಾಡಲು ಸಾಧ್ಯವಾಗಲಿಲ್ಲ. ಶಂಕುಸ್ಥಾಪನೆ ಮಾಡಿದ್ದು, ಫ್ಲೆಕ್ಸ್ ಹಾಕಿದ್ದು, ೪೦ ಪರ್ಸೆಂಟ್ ಕಮಿಷನ್ ತಗೊಂಡು ಜಾಲಿ ಮಾಡಿದ್ದು ಬಿಟ್ರೆ ಏನೇನೂ ಅಭಿವೃದ್ದಿ ಕೆಲಸ ಮಾಡಿಲ್ಲ. ಪುತ್ತೂರು ನಗರದಲ್ಲಿ ಇನ್ನೂ ಒಳಚರಂಡಿ ವ್ಯವಸ್ಥೆ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ ಎಂದು ದೂರಿದರು. ಕಾಂಗ್ರೆಸ್ ಬೆಂಬಲಿಸಿ ನಾವು ಅಭಿವೃದ್ದಿ ಮಡಿ ತೋರಿಸುತ್ತೇವೆ ಎಂದು ರೈಗಳು ಸಭೆಗೆ ತಿಳಿಸಿದರು. ಈ ಬಾರಿ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹವಾ ಇದೆ. ಖಂಡಿತವಾಗಿಯೂ ನಿಮ್ಮೆಲ್ಲರ ಸಹಕಾರದಿಂದ ಪುತ್ತೂರಿನಲ್ಲಿ ಕಾಂಗ್ರೆಸ್ ಮತ್ತೆ ಇತಿಹಾಸವನ್ನು ನಿರ್ಮಾಣ ಮಾಡಲಿದೆ ಎಂದು ಭವಿಷ್ಯ ನುಡಿದರು

ದೇಶಕಟ್ಟಿದ್ದು ಕಾಂಗ್ರೆಸ್ ಮಾರಿದ್ದು ಬಿಜೆಪಿ; ಮಹಮ್ಮದ್ ಬಡಗನ್ನೂರು

 ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟದ್ದು ಕಾಂಗ್ರೆಸ್ ಎಂದು ಕಾಂಗ್ರೆಸ್ಸನ್ನು ದೂರುವವನಿಗೂ ಗೊತ್ತಿದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಬಡವರಿಗೆ ಬದುಕಲು ಸಾಧ್ಯ ಎಂದು ಇಂದಿರಾಗಾಂಧಿಯನ್ನು, ನೆಹರೂ ಅವರನ್ನು ಹಿಯ್ಯಾಳಿಸುವವನಿಗೆ ಗೊತ್ತಿದೆ ಎಲ್ಲವೂ ಗೊತ್ತಿದ್ದು ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುತ್ತಿರುವವರು ದೆಶದ ಇತಿಹಾಸವನ್ನು ಮತ್ತೊಮ್ಮೆ ನೆನಪಿಸಿಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಮಹಮ್ಮದ್ ಬಡಗನ್ನೂರು ಹೇಳಿದರು.

ಹುಟ್ಟುವಾಗಲೇ ಚಿನ್ನದ ಚಮಚ ಬಾಯಿಗೆ ಇಟ್ಟುಕೊಂಡುಕೊಂಡು ಬಂದ ದೇಶದ ಜನರಿಗೋಸ್ಕರ ಅನೇಕ ವರ್ಷ ಜೈಲು ವಾಸ ಅನುಭವಿಸಿದರು. ಉಳುವವನಿಗೇ ಭೂಮಿಯನ್ನು ಕೊಟ್ಟ ಇಂದಿರಾಗಾಂಧಿಯನ್ನು ಗುಂಡಿಟ್ಟು ಕೊಂದರು, ಭಾರತವನ್ನು ವಿಶ್ವಗುರು ಮಾಡಲು ಹೊರ ರಾಜೀವ ಗಾಂಧಿ ದೇಶಕ್ಕಾಗಿ ರಕ್ತ ಸಾಕ್ಷಿಯಾದರು ಇವರೆಲ್ಲರ ತ್ಯಾಗದ ಫಲವಾಗಿ ಇಂದು ಭಾರತ ಕಂಗೊಳಿಸುತ್ತದೆ ವಿನಾ ಸಾರ್ವರ್ಕರ್ ಸಂತತಿಗಳಿಂದ ದೇಶ ಉದ್ದಾರ ಆಗಿಲ್ಲ. ಕಾಂಗ್ರೆಸ್ ಕಟ್ಟಿದ ಭವ್ಯ ಭಾರತವನ್ನು ಇಂದು ಅಧಿಕಾರದಲ್ಲಿರುವ ಬಿಜೆಪಿ ಒಂದೊಂದಾಗಿ ಮಾರಾಟ ಮಾಡುತ್ತಿದೆ. ದೇಶ ಉಳಿಯಬೇಕಾದರೆ ಬಿಜೆಪಿ ತೊಳಗಬೆಕು. ಬಿಜೆಪಿ ಮುಕ್ತ ಕರ್ನಾಟಕ, ಬಿಜೆಪಿ ಮುಕ್ತ ಭಾರತವಾಗುವಲ್ಲಿ ಪ್ರತೀಯೊಬ್ಬ ಪ್ರಜೆಯೂ ಚಿಂತಿಸಬೇಕಿದೆ. ಕಾಂಗ್ರೆಸ್ ಬೆಂಬಲಿಸುವ ಮೂಲಕ ನಾವು ಹಿರಿಯರ ತ್ಯಾಗಕ್ಕೆ ಗೌರವ ಕೊಡುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ಶಾಸಕರಾದವರಿಗೆ ನೈತಿಕತೆ ಬೇಕು

ಚುನಾವಣೆಗೆ ಎಲ್ಲರಿಗೂ ಸ್ಪರ್ದಿಸಬಹುದು ಆದರೆ ಆತನಿಗೆ ಕನಿಷ್ಟ ನೈತಿಕತೆಯಾದರೂ ಬೇಕಾಗುತ್ತದೆ. ನೈತಿಕತೆಯಲ್ಲಿ ಬಲಹೀನನಾದವನಿಗೆ ಜನರ ಸೇವೆಯನ್ನು ಹೇಗೆ ಮಾಡಲು ಸಾಧ್ಯವಾಗುತ್ತದೆ. ಪುತ್ತೂರಿನಲ್ಲಿ ಇದೇ ಕಾರಣಕ್ಕೆ ಟಿಕೆಟ್ ಕೊಡಲಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಜನಪ್ರತಿನಿಧಿಯಾದವರು ಚುನಾವಣೆ ಸಂದರ್ಬದಲ್ಲಿ ತಮ್ಮ ಬಂಡವಾಳ ಬಯಲು ಆಗದಂತೆ ನ್ಯಾಯಾಲಯದಿಂದ ಸ್ಟೇ ಆರ್ಡರ್ ತರುತ್ತಿರುವುದು ನೈತಿಕತೆ ಕುಸಿದಿರುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ಗೆ ಸೇರ್ಪಡೆ

ಇದೇ ಸಂಧರ್ಭದಲ್ಲಿ ಬಿಜೆಪಿ ಮುಖಂಡ, ಆರ್ಯಾಪು ಗ್ರಾಪಂ ಮಾಜಿ ಸದಸ್ಯ ಜಬ್ಬಾರ್ ಸಂಪ್ಯ ತಮ್ಮ ಅಭಿಮಾನಿಗಳ ಜೊತೆಗೆ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರಾದ ಹೇಮನಾಥ ಶೆಟ್ಟಿ ಕಾವು, ಎಂ ಎಸ್ ಮಹಮ್ಮದ್, ನಗರ ಪ್ರಚಾರ ಸಮಿತಿ ಅಧ್ಯಕ್ಷ ಪ್ರಸನ್ನ ಶೆಟ್ಟಿ ಸಿಝ್ಲರ್, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದಾಲಿ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಕೋಡಿಂಬಾಡಿ ಗ್ರಾ.ಪಂ.ಮಾಜಿ ಸದಸ್ಯ ರಾಜೇಂದ್ರ ಆರಿಗ ನಿಧನ

Posted by Vidyamaana on 2024-05-17 08:31:28 |

Share: | | | | |


ಕೋಡಿಂಬಾಡಿ ಗ್ರಾ.ಪಂ.ಮಾಜಿ ಸದಸ್ಯ ರಾಜೇಂದ್ರ ಆರಿಗ ನಿಧನ

ಪುತ್ತೂರು :ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕೆ.ರಾಜೇಂದ್ರ ಆರಿಗ(61ವ.)ರವರು ಮೇ 16ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕೊಳವೆ ಅಳವಡಿಕೆ:ಜೂನ್‌ 2ರಿಂದ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

Posted by Vidyamaana on 2023-05-30 13:00:44 |

Share: | | | | |


ಕೊಳವೆ ಅಳವಡಿಕೆ:ಜೂನ್‌ 2ರಿಂದ ಎರಡು ದಿನ  ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಮಂಗಳೂರು: ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ – ಬೆಂದೂರ್‌ವೆಲ್‌ ಪಣಂಬೂರು 1000 ಎಂಎಂ ವ್ಯಾಸ ಕೊಳವೆಯನ್ನು ಅಡ್ಯಾರ್‌ ಕಟ್ಟೆಯ ಬಳಿ ಬಲಪಡಿಸುವ ಕಾಮಗಾರಿ ಹಾಗೂ ಕೊಟ್ಟಾರಚೌಕಿ ಬಳಿ ಕೆಯುಐಡಿಎಫ್‌ಸಿ ವತಿಯಿಂದ 900 ಎಂಎಂ ವ್ಯಾಸ ಕೊಳವೆ ಮರುಜೋಡಣೆ ಕಾಮಗಾರಿ ಇರುವುದರಿಂದ ಜೂನ್‌ 2ರ ಬೆಳಗ್ಗೆ 6 ಗಂಟೆಯಿಂದ ಜೂನ್‌ 4ರ ಬೆಳಗ್ಗೆ 6 ಗಂಟೆಯವರೆಗೆ ನಗರದ ಕೆಲವು ಕಡೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.ನಗರದ ಬೆಂದೂರ್‌ವೆಲ್‌ ಲೋ ಲೆವೆಲ್‌ ಪ್ರದೇಶಗಳಾದ ಪಿವಿಎಸ್‌, ಲೇಡಿಹಿಲ್‌, ಬಂದರು, ಬಿಜೈ, ಸೂಟರ್‌ಪೇಟೆ, ಮೇರಿಹಿಲ್‌, ಪಚ್ಚನಾಡಿ, ಅಶೋಕನಗರ, ದೇರೆಬೈಲ್‌, ಕೊಡಿಯಾಲಬೈಲು, ಕದ್ರಿ, ನಾಗುರಿ, ಸುರತ್ಕಲ್‌, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್‌ ಭಾಗಶಃ, ಕಾನ, ಬಾಳಾ, ಕುಳಾಯಿ, ಮುಕ್ಕ, ಪಂಬೂರು ಮುಂತಾದ ಪ್ರದೇಶಗಳಲ್ಲಿ ಸಂಪೂರ್ಣವಾಗಿ ನೀರು ಸರಬರಾಜು ನಿಲ್ಲಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಎಂ.ಸಂಜೀವ ಶೆಟ್ಟಿ ಸಿಲ್ಟ್, ರೆಡಿಮೇಡ್ಸ್ ನೂತನ ಶಾಖೆ MSS ALL EXCLUSIVE ಮಾ.24ರಂದು ಶುಭಾರಂಭ

Posted by Vidyamaana on 2023-03-23 16:02:19 |

Share: | | | | |


ಎಂ.ಸಂಜೀವ ಶೆಟ್ಟಿ ಸಿಲ್ಟ್, ರೆಡಿಮೇಡ್ಸ್ ನೂತನ ಶಾಖೆ MSS ALL EXCLUSIVE ಮಾ.24ರಂದು ಶುಭಾರಂಭ

ಪತ್ತೂರು: ಸುಮಾರು 79 ವರ್ಷಗಳ ವಸ್ತ್ರ ಪರಂಪರೆಯನ್ನು ಹೊಂದಿರುವ, ಎಲ್ಲಾ ಪೀಳಿಗೆಯ ಗ್ರಾಹಕರ ಮನಗೆದ್ದ, ಮದುವೆ ಜವಳಿಗೆಂದೇ ಪ್ರಸಿದ್ದಿ ಪಡೆದ ಎಂ.ಸಂಜೀವ ಶೆಟ್ಟಿ ಮಳಿಗೆಯ ನೂತನ ಶಾಖೆ MSS ALL EXCLUSIVE ಮಾ.24ರಂದು ಬೆಳಿಗ್ಗೆ ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಎಂ. ಸಂಜೀವ ಶೆಟ್ಟಿ ಹಳೆಯ ಜವಳಿ ಮಳಿಗೆಯ ಎದುರುಗಡೆ ಶುಭಾರಂಭಗೊಳ್ಳಲಿದೆ.

1944ರಲ್ಲಿ ಪುತ್ತೂರಿನಲ್ಲಿ ಬಟ್ಟೆ ವ್ಯಾಪಾರದಲ್ಲಿ ತೊಡಗಿಸಿಕೊಂಡಿರುವ ಎಂ.ಸಂಜೀವ ಶೆಟ್ಟಿ ವಸ್ತ್ರವ್ಯಾಪಾರ ಮಳಿಗೆ ಪ್ರಾರಂಭಿಸಿದೆ.

2017ರಲ್ಲಿ ಜಿಲ್ಲೆಯಲ್ಲೇ ಬಹುದೊಡ್ಡ 3 ಅಂತಸ್ತಿನವಸ್ತ್ರವ್ಯಾಪಾರ ಮಳಿಗೆ ಪ್ರಾರಂಭಿಸಿದೆ.ಹತ್ತು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಎಂ.ಸಂಜೀವ ಶೆಟ್ಟಿ ಶಾಖಾ ಶೋ ರೂಮ್ ಹೊಂದಿದೆ. ಗ್ರಾಹಕರ ಇನ್ನೂ ಹೆಚ್ಚಿನ ವೈವಿಧ್ಯಮಯ ಆಯ್ಕೆಗಾಗಿ ಇದೀಗ ವಿನೂತನ ವ್ಯವಹಾರಕ್ಕೆ ಕೈ ಹಾಕಿರುವ ಎಂ.ಸಂಜೀವ ಶೆಟ್ಟಿ ಸಂಸ್ಥೆಯವರು, ತಮ್ಮ ಮೊದಲಿನ ಶೋರೂಂ ನಲ್ಲಿ MSS ALL EXCLUSIVE ನ್ನು ಪ್ರಾರಂಭಿಸಿದ್ದಾರೆ.

ಗ್ರಾಹಕರಿಗೆ ಎಲ್ಲಾ ಬ್ರಾಂಡೆಡ್ ವಸ್ತುಗಳು ಒಂದೇ ಸೂರಿನಡಿ ಸಿಗಬೇಕೆನ್ನುವ ನಿಲುವಿನಿಂದ ಹಳೆಯ ಶೋರೂಂನ್ನೇ ಈ ಶೋರೂಂ ಆಗಿ ಬದಲಿಸಲಾಗಿದೆ.

ವೈಶಿಷ್ಟ್ಯತೆಗಳು: ಸಂಸ್ಥೆಯ ನೆಲಅಂತಸ್ತಿನಲ್ಲಿ ಕಾಸ್ಟೆಟಿಕ್ಸ್, ಪ್ಯಾಡ್ ಬ್ಯಾಗ್, ನ್ಯೂಬಾರ್ನ್ ಡೈಸನ್ಸ್, ಹಾಗೂ ಟಾಯ್ಸ್ ಲಭ್ಯವಿದೆ. ಪ್ರಥಮ ಮಹಡಿಯಲ್ಲಿ ಲೇಡಿಸ್ ಎಕ್ನಿಕ್ ವೇರ್, ಮನ್ಸ್ ಫಾರ್ಮಲ್, ಕ್ಯಾಸುವಲ್ ವೇರ್, ಎರಡನೇ ಮಹಡಿಯಲ್ಲಿ ಮನ ಎಕ್ನಿಕ್ ವೇರ್, ಟ್ರಾವಲ್ ಬ್ಯಾಗ್ ಮತ್ತು ಗೃಹಾಲಂಕಾರಿಕಾ ವಸ್ತುಗಳು ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ 5ನೇ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ

Posted by Vidyamaana on 2023-04-27 14:40:44 |

Share: | | | | |


ಮಂಗಳೂರಿನಲ್ಲಿ 5ನೇ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ

ಮಂಗಳೂರು: ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮುಂದುವರಿದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ನ ಐದನೇ ಗ್ಯಾರಂಟಿಯನ್ನು ಎ.27ರಂದು ಘೋಷಣೆ ಮಾಡಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ಮಹಿಳೆಯರಿಗೆ ಸರಕಾರಿ ಬಸ್ಸಲ್ಲಿ ಉಚಿತ ಪ್ರಯಾಣದ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.ಮಂಗಳೂರು ನಗರದ ಹೊರವಲಯದ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಚುನಾವಣ ಪ್ರಚಾರದ ಬಹಿರಂಗ ಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಕಂಬಳ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

Posted by Vidyamaana on 2023-11-04 16:44:06 |

Share: | | | | |


ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಕಂಬಳ ಆಮಂತ್ರಣ ನೀಡಿದ ಶಾಸಕ ಅಶೋಕ್ ರೈ

ಬೆಂಗಳೂರು:ಪುತ್ತೂರು ಶಾಸಕರು ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು ಅಶೋಕ್ ಕುಮಾರ್  ರೈವರು ಇಂದು  ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನೀರ್ದೆಶಕರು ಶೇಖರ್ ರಾವ್ ರವರನ್ನು ಭೇಟಿಯಾಗಿ ಬೆಂಗಳೂರು ಕಂಬಳ ನಮ್ಮ ಕಂಬಳ ಕ್ಕೆ ಆಮಂತ್ರಣ  ಪತ್ರ ಕೊಟ್ಟು ಆಹ್ವಾನಿಸಲಾಯಿತು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು  ಮುಳಿಯ ಜ್ಯುವೆಲ್ಸ್ ನ ಮುಖ್ಯ ಆಡಳಿತ ನಿರ್ದೇಶಕ  ಮುಳಿಯ ಕೇಶವ ಪ್ರಸಾದ್ ಮತ್ತು ಸಚಿನ್ ಶೆಟ್ಟಿ  ಉಪಸ್ಥಿತರಿದ್ದರು



Leave a Comment: