Posted by vidyamaana on 2024-07-05 12:22:17 |
ಪುತ್ತೂರು : ವಿವಾಹಿತ ಯುವಕನೊಬ್ಬ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಗುರುವಾರ ನಡೆದಿದೆ.
ಮೂಲತಃ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿಯಾಗಿದ್ದು, ಪ್ರಸ್ತುತ ಆರ್ಯಾಪು ಗ್ರಾಮದ ವಳತ್ತಡ್ಕ ಸಮೀಪದ ಕೊಪ್ಪಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯವಿದ್ದ ಸಿದ್ದೀಕ್ ಅನ್ಸರ್(32) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಕೊಪ್ಪಳದಲ್ಲಿರುವ ತನ್ನ ಮಾವನ ಅಡಕೆ ತೋಟದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಡಕೆ ಗಾರ್ಬಲ್ನಲ್ಲಿ ದುಡಿಯುತ್ತಿದ್ದ ಸಿದ್ದೀಕ್ ಅನ್ಸರ್ ಸರ್ವೆ ಗ್ರಾಮದ ಕಲ್ಪನೆಯಲ್ಲಿ 10 ಸೆಂಟ್ಸ್ ಜಾಗ ಖರೀದಿಸಿ ಮನೆ ನಿರ್ಮಿಸಲು ಅಡಿಪಾಯ ಹಾಕಿದ್ದರು. ಆರ್ಯಾಪು ಗ್ರಾಮದ ಕೊಪ್ಪಳದಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ತಂದೆ, ತಾಯಿ ಹಾಗೂ ಪತ್ನಿ ಮಕ್ಕಳ ಜತೆ ವಾಸ್ತವ್ಯವಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ವಿಪರೀತ ಹೊಟ್ಟೆನೋವು ಮತ್ತು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಪುತ್ತೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗದ ಅವರು ಗಾರ್ಬಲ್ ಕೆಲಸಕ್ಕೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದರು. ಮನೆ ನಿರ್ಮಿಸುವ ಉದ್ದೇಶದಿಂದ ಸಾಲ ಪಡೆದಿದ್ದ ಅವರು ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
Posted by Vidyamaana on 2023-10-03 20:05:50 |
ಮಂಗಳೂರು, ಅ.3: ನಗರದ ಕದ್ರಿ ಕಂಬ್ಳದ ಬಳಿಯ ಚಂದ್ರಿಕಾ ಬಡಾವಣೆಯಲ್ಲಿ ಒಂದೇ ಮನೆಯಲ್ಲಿ ವಾಸವಿದ್ದ ವೃದ್ಧ ಅಕ್ಕ, ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಇವರಿಗೆ ಮಕ್ಕಳಿರಲಿಲ್ಲ ಎನ್ನಲಾಗುತ್ತಿದ್ದು, ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಕದ್ರಿ ಪೊಲೀಸರು ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿದ್ದಾರೆ.
Posted by Vidyamaana on 2024-01-02 18:29:32 |
ನಟಿ ಶಕೀಲಾ ಬಗ್ಗೆ ಹೆಚ್ಚು ಪರಿಚಯಿಸುವ ಅಗತ್ಯವಿಲ್ಲ. 1990ರ ದಶಕದ ಬಹುತೇಕರಿಗೆ ಶಕೀಲಾ ಪರಿಚಯ ಇದ್ದೇ ಇರುತ್ತದೆ. ಒಂದು ಕಾಲದಲ್ಲಿ ತಮಿಳು ಮತ್ತು ಮಲಯಾಳಂನ ಸಾಫ್ಟ್ಕೋರ್ ನೀಲಿ ಚಿತ್ರಗಳಲ್ಲಿ ನಟಿಸುವ ಮೂಲಕ ಶಕೀಲಾ ಅವರು ದೊಡ್ಡ ದೊಡ್ಡ ನಟರಿಗೆ ಪೈಪೋಟಿ ನೀಡಿದ್ದರು.ಶಕೀಲಾ ಅವರ ಚಿತ್ರ ಬಿಡುಗಡೆಯಾಗುವಾಗ ಸ್ಟಾರ್ ನಟರ ಚಿತ್ರಗಳೇ ಬದಿಗೆ ಸರಿಯುತ್ತಿದ್ದವು. ಆದರೆ ದಿನ ಕಳೆದಂತೆ ಶಕೀಲಾ ಅವರ ಖ್ಯಾತಿ ಕೂಡ ಕ್ಷೀಣಿಸುತ್ತಾ ಬಂದಿತು. ಅಲ್ಲದೆ, ಶಕೀಲಾ ನಿರಂತರವಾಗಿ ಸಾಫ್ಟ್ಕೋರ್ ನೀಲಿ ಚಿತ್ರಗಳಲ್ಲಿ ನಟಿಸಿದ್ದರಿಂದ ಕೇರಳ ಸಿನಿಮಾ ಕ್ಷೇತ್ರದಿಂದಲೇ ಅವರನ್ನು ಬ್ಯಾನ್ ಮಾಡಲಾಯಿತು. ಬಳಿಕ ಮಲಯಾಳಂ ಸಿನಿಮಾ ಇಂಡಸ್ಟ್ರಿ ಬಿಟ್ಟು ತಮಿಳುನಾಡಿಗೆ ಬಂದು ನೆಲೆಸಿದರು.
ತಮಿಳುನಾಡಿಗೆ ಬಂದು ನೆಲೆಸಿದ ಬಳಿಕ ನೀಲಿ ಸಿನಿಮಾಗಳ ನಟನೆಯಿಂದ ದೂರ ಉಳಿದ ಶಕೀಲಾ ತಮಗೆ ಸಿಕ್ಕ ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳನ್ನು ಮಾಡುತ್ತಾ ಬಂದರು. ಜಯಂ, ಅಳಗಿಯ ತಮಿಳ್ ಮಗನ್ ಸೇರಿದಂತೆ ಕೆಲವು ತಮಿಳು ಸಿನಿಮಾಗಳಲ್ಲಿಯೂ ಶಕೀಲಾ ನಟಿಸಿದ್ದಾರೆ. ಅಲ್ಲದೆ, ಟಿವಿ ರಿಯಾಲಿಟಿ ಶೋಗಳಲ್ಲಿಯೂ ಭಾಗಿಯಾಗಿದ್ದಾರೆ. ಕನ್ನಡದ ಬಿಗ್ಬಾಸ್ ಶೋನಲ್ಲೂ ಭಾಗಿಯಾಗಿದ್ದರು.ಸಾಕಷ್ಟು ಸಿನಿಮಾ ಅವಕಾಶಗಳು ಕೂಡ ಶಕೀಲಾರನ್ನು ಅರಸಿ ಬರುತ್ತಿವೆ.
ತಾಜಾ ಸಂಗತಿ ಏನೆಂದರೆ, ಶಕೀಲಾ ಅವರು ತಮ್ಮ ಲವ್ಸ್ಟೋರಿಯನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಬಹುಕಾಲದ ಬಾಯ್ಫ್ರೆಂಡ್ ಬೇರೊಬ್ಬಳನ್ನು ಮದುವೆಯಾಗಿರುವ ಬಗ್ಗೆ ತಮಿಳಿನ ಆನ್ಲೈನ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ನಾನೊಬ್ಬಳು ಮುಸ್ಲಿಂ ಮತ್ತು ನನ್ನ ಬಾಯ್ಫ್ರೆಂಡ್ ಹಿಂದು. ನಮ್ಮಿಬ್ಬರ ಪ್ರೀತಿಯ ವಿಚಾರವಾಗಿ ಕುಟುಂಬಗಳ ನಡುವೆ ತುಂಬಾ ಸಮಸ್ಯೆಗಳಿದ್ದವು. ನಮ್ಮ ಮದುವೆ ನಡೆದರೆ ಖಂಡಿತವಾಗಿ ಅಹಿತಕರ ಘಟನೆ ನಡೆಯುತ್ತದೆ ಎಂಬುದು ಮೊದಲೇ ತಿಳಿದಿತ್ತು. ಇದೇ ಸಂದರ್ಭದಲ್ಲಿ ಬೇರೊಬ್ಬಳನ್ನು ವರಿಸುವಂತೆ ನನ್ನ ಬಾಯ್ಫ್ರೆಂಡ್ಗೆ ಕುಟುಂಬದಿಂದ ತುಂಬಾ ಒತ್ತಾಯವಿತ್ತು. ಈ ವಿಚಾರವನ್ನು ಆತ ನನಗೆ ತಿಳಿಸಿದಾಗ, ಬೇಡ ಅನ್ನಲು ಮನಸ್ಸು ಒಪ್ಪಲಿಲ್ಲ.ಹೀಗಾಗಿ ನಾನು ಬೇರೆ ಮದುವೆ ಮಾಡಿಕೊಳ್ಳುವಂತೆ ಸಮ್ಮತಿಸಿದೆ. ಏಕೆಂದರೆ, ನಾವು ಇಷ್ಟಪಡುವವರ ಮನಸ್ಸನ್ನು ನೋಯಿಸಲು ನನಗೆ ಇಷ್ಟವಿರಲಿಲ್ಲ. ಪ್ರತಿ ಸಮಯದಲ್ಲೂ ಆತ ಖುಷಿಯಾಗಿರಬೇಕೆಂದು ನಾನು ಬಯಸಿದೆ. ನಾನು ಆತನ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಬಹಿರಂಗಪಡಿಸಿದರೆ ತುಂಬಾ ತೊಂದರೆಗಳಾಗುತ್ತವೆ ಮತ್ತು ಆತನ ವೈವಾಹಿಕ ಜೀವನಕ್ಕೆ ಸಮಸ್ಯೆಯಾಗುತ್ತದೆ ಎಂದು ಶಕೀಲಾ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಶಕೀಲಾ ಅವರು ತನ್ನ ಮೊದಲ ಸಂಬಂಧದ ಬಗ್ಗೆಯೂ ಮಾತನಾಡಿದರು. 11ನೇ ವಯಸ್ಸಿನಲ್ಲಿ ಸಂಭವಿಸಿದ ಸಂಗತಿ ಇದು. ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ನನ್ನ ನೆರೆಹೊರೆಯವನಾಗಿದ್ದನು. ಅವನ ಹೆಸರು ಸುರೇಶ್ ರೆಡ್ಡಿ. ಇದು ಪ್ರೀತಿಯೋ? ಅಥವಾ ಇಲ್ಲವೋ? ನನಗೆ ಗೊತ್ತಿಲ್ಲ, ಆದರೆ ಅದು ಸಂಭವಿಸಿತು ಎಂದಿದ್ದಾರೆ.
Posted by Vidyamaana on 2023-10-18 17:05:29 |
ಪುತ್ತೂರು: ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ೨ ರಿಂದ ೩ ಸಾವಿರ ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಿದ್ದು ಇದಕ್ಕಾಗಿ ಹಲವು ಯೋಜನೆಗಳನ್ನು ಇಲ್ಲಿ ಜ್ಯಾರಿ ಮಾಡುವ ಆಲೋಚನೆಯಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಪಾಟ್ರಕೋಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನಯಡಿ ಕೆದಿಲ ಗ್ರಾಮದಲ್ಲಿ ೩ ಕೋಟಿ ಲೀಟರ್ ಸಾಮರ್ಥ್ಯದ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣವಾಗಲಿದೆ. ಈ ಯೋಜನೆಯಡಿ ಸುಮಾರು ೫೦೦ ಮಿಕ್ಕಿ ಮಂದಿ ಸ್ಥಳೀಯರಿಗೆ ಉದ್ಯೋಗ ಲಭಿಸಲಿದೆ,ಕೊಯಿಲ ಜಾನುವಾರು ಕೇಂದ್ರಕ್ಕೆ ಪುನಶ್ಚೇತನ ದೊರೆಯಲಿದ್ದು ಅಲ್ಲಿ ಸುಮಾರು ೭೦೦ ಮಂದಿಗೆ ಉದ್ಯೋಗ ಮತ್ತು ಕೆಎಂಎಫ್ ನ್ನು ಪುತ್ತೂರಿಗೆ ಸ್ಥಳಾಂತರ ಮಾಡುವುದರಿಂದ ಸುಮಾರು ೧೦೦೦ ಮಂದಿಗೆ ಉದ್ಯೋಗ ಲಭಿಸಲಿದೆ. ಸ್ಥಳೀಯರನ್ನೇ ಉದ್ಯೋಗಕ್ಕೆ ಸೇರಿಸಿಕೊಳ್ಳುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಶಾಸಕರು ಹೇಳಿದರು.
ಪುತ್ತೂರಿಗೆ ಹಣ ಬಂದು ಬೀಳಬೇಕು
ಪುತ್ತೂರು ಅಭಿವೃದ್ದಿಯಾಗಬೇಕಾದರೆ ಒಂದಷ್ಟು ಹಣ ಇಲ್ಲಿ ಬೀಳಬೇಕು, ಉದ್ಯಮಗಳು ಆರಂಭವಾದರೆ ಮಾತ್ರ ಇಲ್ಲಿ ಎಲ್ಲರಿಗೂ ವ್ಯಾಪಾರ , ವ್ಯವಹಾರವಾಗುತ್ತದೆ ಇಲ್ಲದೇ ಹೋದರೆ ಕೇವಲ ಅಡಿಕೆ ಮಾರಿದ ಹಣ ಮಾತ್ರ ಇಲ್ಲಿ ಚಲಾವಣೆಯಲ್ಲಿರುತ್ತದೆ ಎಂದು ಹೇಳಿದ ಶಾಸಕರು ಪುತ್ತೂರಿನ ಯುವಕ, ಯುವತಿಯರಿಗೆ ಉದ್ಯೋಗ ಲಭಿಸಿದರೆ ಅವರ ಕುಟುಂಬಕ್ಕೂ ಆಧಾರವಾಗುತ್ತದೆ ಈ ನಿಟ್ಟಿನಲ್ಲಿ ಪುತ್ತೂರಿನಲ್ಲಿ ಯಾವುದೇ ಉದ್ಯಮ ಆರಂಭವಾಗುವುದಾದರೂ ಅದಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂದು ಹೇಳಿದರು.ಪುತ್ತೂರಿನ ಜನತೆ ನೆಮ್ಮದಿಯಿಂದ ಇರಬೇಕೆಂಬುದೇ ನನ್ನ ಆಶಯವಾಗಿದೆ ಎಂದು ಶಾಸಕರು ಹೇಳಿದರು.
ಶಾಸಕರಿಗೆ ಇಷ್ಟು ಗಟ್ಸ್ ಇದೆ ಎಂದು ಗೊತ್ತೇ ಇರಲಿಲ್ಲ: ಹೇಮನಾಥ ಶೆಟ್ಟಿ
ಚುನಾವಣೆ ಸಂದರ್ಬದಲ್ಲಿ ಅಶೋಕ್ ರೈ ಬಗ್ಗೆ ಕೆಲವರು ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದರು, ಶ್ರೀಮಂತ ವ್ಯಕ್ತಿ ಅದು ಹೇಗೆ ಬಡವರ ಕೆಲಸ ಮಾಡುತ್ತಾರೆ, ಬಡವರು ಇವರ ಬಳಿ ಹೇಗೆ ಹೋಗಬಹುದು ಅವರ ಸ್ಟೈಲೇ ಬೇರೆ ಇರಬಹುದು ಎಂದೆಲ್ಲಾ ಹೇಳಿದ್ದರು. ಆದರೆ ಶಾಸಕರಾದ ಬಳಿಕ ಕಟ್ಟಕಡೇಯ ಬಡ ವ್ಯಕ್ತಿ ಕೂಡಾ ಅವರ ಛೇಂಬರಿನಲ್ಲಿ ಕುಳಿತು ಸಮಸ್ಯೆ ಹೇಳುತ್ತಿದ್ದು, ಬಡವರ ಕೆಲಸ ಮಾಡುತ್ತಿದ್ದು ಅಶೋಕ್ ರೈಯವರಿಗೆ ಇಷ್ಟೊಂದು ಗಟ್ಸ್ ಇದೆ ಎಂದು ಶಾಸಕರಾದ ಬಳಿಕವೇ ಗೊತ್ತಾಗಿದ್ದು ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಹೇಳಿದರು. ಕುಡಿಯುವ ನೀರಿನ ಸಂಪರ್ಕಕ್ಕೆ ದಾಖಲೆ ಕೊಡಿ ಎಂದು ಕೇಳುವ ಪಂಚಾಯತ್ ಅಧಿಕಾರಿಗಳ ಬೆಂಡೆತ್ತಿದ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಕೆದಿಲ ಕಾಂಗ್ರೆಸ್ ಭದ್ರಕೋಟೆ: ಡಾ. ರಾಜಾರಾಂ
ಕೆದಿಲ ಗ್ರಾಮದ ಕಾಂಗ್ರೆಸ್ಸಿನ ಭದ್ರಕೋಟೆಯಾಗಿದೆ, ಕಳೇದ ಚುನಾವಣೆಯಲ್ಲಿ ೧೦೦೦ ಮತಗಳ ಲೀಡನ್ನು ತಂದುಕೊಟ್ಟಿದೆ, ಜಾತ್ಯಾತೀತ ಮನೋಭಾವದ ಕೆದಿಲ ಗ್ರಾಮಸ್ಥರನ್ನು ಅಭಿನಂದಿಸುವುದಾಗಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ ಹೇಳಿದರು. ಕೆದಿಲ ಗ್ರಾಮಕ್ಕೆ ಅನುದಾನದಲ್ಲಿ ಹೆಚ್ಚಿನ ಒತ್ತು ನೀಡುವುದಾಗಿ ಶಾಸಕರು ಹೇಳಿದ್ದಾರೆ. ಈಗಾಗಲೇ ಹಲವು ಕಾಮಗಾರಿಗಗಳ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ, ಹಿಂದೆಂದೂ ಕಣದ ರೀತಿಯಲ್ಲಿ ಈ ಗ್ರಾಮ ಅಭಿವೃದ್ದಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ಕೆದಿಲ ಗ್ರಾಮಕ್ಕೆ ಶಾಸಕರು ವಿಶೇಷ ಒತ್ತುಕೊಡಬೇಕು: ಫಾರೂಕ್ ಬಾಯಬ್ಬೆ
ಕೆದಿಲದಲ್ಲಿ ಜಾತ್ಯಾತೀತ ಮನಸ್ಸುಗಳು ಒಂದಾಗಿದೆ, ಈ ಕಾರಣಕ್ಕೆ ಕಾಂಗ್ರೆಸ್ಗೆ ಪೂರ್ಣ ಪ್ರಮಾಣದ ಬೆಂಬಲ ದೊರಕಿದೆ. ನೂತನ ಶಾಸಕರು ಕೆದಿಲ ಗ್ರಾಮಕ್ಕೆ ವಿಶೇಷ ಒತ್ತು ನೀಡಿ ಅಭಿವೃದ್ದಿಗೆ ಹೆಚ್ಚಿನ ಅನುದಾನವನ್ನು ನೀಡಬೇಕೆಂದು ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷರಾದ ಫಾರೂಕ್ ಬಾಯಬ್ಬೆ ಆಗ್ರಹಿಸಿದರು. ಕಾಂಗ್ರೆಸ್ ಸರಕಾರ ಮತ್ತು ಕಾಂಗ್ರೆಸ್ ಶಾಸಕರ ಬಗ್ಗೆ ನಮಗೆ ಪೂರ್ಣ ವಿಶ್ವಾಸವಿದ್ದು ಈಗಾಗಲೇ ಹಲವು ಕಾಮಗಾರಿಗಳ ಬಗ್ಗೆ ಶಾಸಕರಲ್ಲಿ ಮಾತನಾಡಿದ್ದೇವೆ ಶಾಸಕರು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ ಎಂಬುದು ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಕೆದಿಲ ಗ್ರಾಮ ಅಭಿವೃದ್ದಿಯಾಗಲಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಕೆದಿಲ ವಲಯ ತಾಪಂ ಮಾಜಿ ಸದಸ್ಯ ಆದಂಕುಂಞಿ ಹಾಜಿ, ಬ್ಲಾಕ್ ಉಪಾಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ವಲಯ ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿ, ಕೆದಿಲ ಗ್ರಾಪಂ ಅಧ್ಯಕ್ಷ ಹರೀಶ್ ಗ್ರಾಪಂ ಸದಸ್ಯರುಗಳಾದ ಬೀಪಾತುಮ್ಮ, ಸುಲೈಮಾನ್, ಹಬೀಬ್ ಮುಹ್ಸಿನ್, ಉನೈಸ್ ಗಡಿಯಾರ್, ಅಝೀಝ್ ಸತ್ತಿಕ್ಕಲ್, ಕೆದಿಲ ಸೊಸೈಟಿ ನಿರ್ದೆಶಕ ಜಿ ಮಹಮ್ಮದ್, ಪಾಟ್ರಕೋಡಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಅಶ್ರಫ್ ಉಪಸ್ಥಿತರಿದ್ದರು.
ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷರಾದ ಫಾರೂಕ್ ಬಾಯಬ್ಬೆ ಸ್ವಾಗತಿಸಿದರು. ಬೂತ್ ಅಧ್ಯಕ್ಷ ರಝಾಕ್ ವಂದಿಸಿದರು. ಶರೀಫ್ ಕೆ ಎಸ್ ಕೋಲ್ಪೆ ಕಾರ್ಯಕ್ರಮ ನಿರೂಪಿಸಿದರು.
Posted by Vidyamaana on 2023-12-23 04:37:41 |
ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸವಲ್ಲಿ ಯಶಸ್ಸಿಯಾಗಿದೆ.
ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಅಗ್ನಿ ಶಾಮಕ ದಳದ ನೆರವಿನಿಂದ ಬೆಂಕಿ ನಂದಿಸುವ ಕೆಲಸ ವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಆಶಾ ಪುತ್ತೂರಾಯ ಅವರು, " ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ, ಹವಾನಿಯಂತ್ರಿತ ಯಂತ್ರ ಸಹಿತ ಅದರ ಬಳಿ ಇದ್ದ ಕೆಲವು ಉಪಕರಣಕ್ಕೆ ಹಾನಿಯಾಗಿದೆ. ತಿವ್ರ ನಿಗಾ ಘಟಕದಲ್ಲಿ ಇಬ್ಬರು ರೋಗಿಗಳಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ಮಾಹಿತಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ರೈಯವರು ಧಾವಿಸಿದ್ದಾರೆ. ಪುತ್ತೂರಿನ ವಿಹಿಂಪ ಕಛೇರಿಯಲ್ಲಿ ತಂಗಿದ್ದ ದತ್ತ ಮಾಲಾಧಾರಿಗಳು, ಹಾಗೂ ಸ್ಥಳೀಯ ಯುವಕರು ಬೆಂಕಿ ನಂದಿಸಲು ಅಗ್ನಿ ಶಾಮಕ ದಳಕ್ಕೆ ನೆರವಾಗಿದ್ದಾರೆ ಎಂದು ತಿಳಿದು ಬಂದಿದೆ.ತಡ ರಾತ್ರಿ 12:30 ರಿಂದ 1 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ತಕ್ಷಣವೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ದೋಡ್ಡ ಅನಾಹುತ ತಪ್ಪಿತು. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಸ್ಪತ್ರೆ ಅಡಳಿತ ಅಧಿಕಾರಿ ಡಾ.ಅಶಾ ಪುತ್ತೂರಾಯ ಮತ್ತು ಅಸ್ಪತ್ರೆ ಸಿಬಂದಿಗಳು ರೋಗಿಗಳನ್ನು ಬೆಂಕಿ ತಗುಲಿದ ಕೋಠಡಿಯಿಂದ ತೆರವುವಗೊಳಿಸಿದ್ದರು .
ವಿಷಯ ತಿಳಿದ ತಕ್ಷಣವೇ ಪುತ್ತೂರು ವಿಶ್ವಹಿಂದೂ ಪರಿಷದ್ ಕಾರ್ಯಲಾಯದಲ್ಲಿ ಇದ್ದ ಬಜರಂಗದಳದ ದತ್ತ ಮಾಲಾದರಿಗಳು ಸ್ಥಳಕ್ಕೆ ಅಗಮಿಸಿ ಇಡಿ ಅಸ್ಪತ್ರೆಯಲ್ಲಿ ಬೂದಿಗಳಿಂದ ಕೂಡಿದ ಕೊಠಡಿಗಳನ್ನು ನೀರಿನಿಂದ ಸ್ವಚ್ಚಗೊಳಿಸಿದ್ದಾರೆ.ಮಂಗಳೂರಿನಲ್ಲಿದ್ದ ಪುತ್ತೂರಿನ ಶಾಸಕರಿಗೆ ವಿಷಯ ತಿಳಿದ ತಕ್ಷಣವೇ ಮಂಗಳೂರಿನಿಂದ ಪುತ್ತೂರು ಸರಕಾರಿ ಅಸ್ಪತ್ರೆಗೆ ಅಶೋಕ್ ರೈ ದೌಡಯಿಸಿದ್ದಾರೆ
Posted by Vidyamaana on 2024-03-20 15:37:58 |
ಸುಳ್ಯ: ಮಾಜಿ ಸಚಿವ ಎಸ್ ಅಂಗಾರ ಅವರ ನಿವಾಸಕ್ಕೆ ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಆಶೀರ್ವಾದ ಪಡೆದರು.
ಎಸ್.ಅಂಗಾರರವರ ದೊಡ್ಡತೋಟ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ,ಮುಖಂಡರಾದ ಹರೀಶ್ ಕಂಜಿಪಿಲಿ, ಎ.ವಿ. ತೀರ್ಥರಾಮ ಮತ್ತಿತರರು ಉಪಸ್ಥಿತರಿದ್ದರು.